Homeಕರ್ನಾಟಕವಿಶ್ವಾಸಮತ ಯಾಚನೆ ಇಂದೂ ನಡೆಯುವುದು ಅನುಮಾನ ಎಂಬ ವಾತಾವರಣ ಏಕೆ ನಿರ್ಮಾಣವಾಗಿದೆ?

ವಿಶ್ವಾಸಮತ ಯಾಚನೆ ಇಂದೂ ನಡೆಯುವುದು ಅನುಮಾನ ಎಂಬ ವಾತಾವರಣ ಏಕೆ ನಿರ್ಮಾಣವಾಗಿದೆ?

ಅನರ್ಹರಾಗಲಿ, ಸರ್ಕಾರ ಉಳಿಯೋದು ಬೇಡ ಎಂಬುದು ಸ್ಪೀಕರ್ ಅಪೇಕ್ಷೆಯಾಗಿತ್ತು

- Advertisement -
- Advertisement -

ಶಾಸಕರ ಅನರ್ಹತೆ ಕುರಿತ ಅಂತಿಮ ತೀರ್ಮಾನ ತೆಗೆದುಕೊಂಡಿದ್ದ ಸ್ಪೀಕರ್ ಮೇಲೆ ಬಂದ ಒತ್ತಡವು ವಿಶ್ವಾಸಮತ ಯಾಚನೆಯನ್ನು ಮಂಗಳವಾರಕ್ಕೆ ಮುಂದೂಡುವಂತೆ ಮಾಡುವ ಸಾಧ್ಯತೆ ಇದೆ. ಸೋಮವಾರ ಬೆಳಿಗ್ಗೆಯವರೆಗೆ ಕಾಂಗ್ರೆಸ್-ಜೆಡಿಎಸ್ ಪಕ್ಷಗಳ ಮುಖಂಡರ ಒತ್ತಡಕ್ಕೆ ಸ್ಪೀಕರ್ ಒಂದಿಂಚೂ ಬಗ್ಗಿರಲಿಲ್ಲ. ‘ನಿಮಗೆ ಇಷ್ಟು ಸಮಯ ಸಿಕ್ಕಿದ್ದರೂ ಒಬ್ಬರೂ ಬಂದಿಲ್ಲ. ಸದನದಲ್ಲಿ ನಡೆದ ಚರ್ಚೆಯು ಈಗಾಗಲೇ ಬಿಜೆಪಿಯವರು ಮಾಡಿದ್ದು ತಪ್ಪು ಎಂಬ ಭಾವನೆಯು ಬರುವಂತೆ ಆಗಿದೆ. ಆದರೆ, ಇದನ್ನು ಮತ್ತಷ್ಟು ಎಳೆಯುವುದು ಒಳ್ಳೆಯದಲ್ಲ. ನಾನೂ ಸಹಾ ಶುಕ್ರವಾರ ಸದನದಲ್ಲಿ ಸೋಮವಾರ ಮುಗಿಸುವ ವಿಚಾರ ಹೇಳಿದ್ದೇನೆ. ಒಂದು ವೇಳೆ ನೀವು ನನ್ನ ಮೇಲೆ ಒತ್ತಡ ತರುವುದಾದಲ್ಲಿ ನಾನು ರಾಜೀನಾಮೆ ಕೊಡುತ್ತೇನೆ’ ಎಂದು ಸ್ಪೀಕರ್ ಹೇಳಿದರೆಂದು ಅವರ ಸಮೀಪವರ್ತಿಗಳು ಹೇಳುತ್ತಾರೆ.

ಇಡೀ ಪ್ರಕರಣದ ಕೇಂದ್ರಬಿಂದುವಾಗಿರುವ ಸ್ಪೀಕರ್ ರಮೇಶ್ ಕುಮಾರ್ ಅವರ ನಿರ್ಧಾರದ ಮೇಲೆ ವಿಶ್ವಾಸಮತ ಯಾಚನೆ ಯಾವಾಗ ಆಗುತ್ತದೆಂಬುದು ತೀರ್ಮಾನವಾಗಲಿದೆ. ಇಂದು ಸಂಜೆಯವರೆಗೂ ಅವರ ಕಟು ನಿರ್ಧಾರ ‘ಆಪರೇಷನ್ ಕಮಲದ ಆಮಿಷಕ್ಕೆ ಪಕ್ಷಾಂತರ ಮಾಡಿರುವ ಶಾಸಕರನ್ನು ಅನರ್ಹಗೊಳಿಸಲೇಬೇಕು. ಅವರಿಗಾಗಿ ಕಾಯುತ್ತಾ ವಿಶ್ವಾಸಮತವನ್ನು ಎಳೆಯುವ ಸಮ್ಮಿಶ್ರ ಪಕ್ಷಗಳ ಉದ್ದೇಶವನ್ನು ತಾನು ಒಪ್ಪುವುದಿಲ್ಲ’ ಎಂದೇ ಆಗಿತ್ತು. ಆದರೆ, ‘ಗುರುವಾರದವರೆಗೆ ಕಾದರೆ ಗ್ರಹಗತಿಗಳು ಸರಿ ಹೋಗುತ್ತವೆ, ಸರ್ಕಾರ ಉಳಿಯುತ್ತದೆ’ ಎಂಬ ಮೌಢ್ಯಕ್ಕೆ ಬಲಿ ಬಿದ್ದಿರುವ ಗೌಡರ ಕುಟುಂಬವು ಅವರನ್ನು ಒಲಿಸುವ ಪ್ರಯತ್ನಕ್ಕೆ ಕೈ ಹಾಕಿ ಸಫಲವಾಗಿರಲಿಲ್ಲ. ಕನಿಷ್ಠ ಪಕ್ಷ ನಾಳೆ ಒಂದು ದಿನದ ಮಟ್ಟಿಗಾದರೂ ಮುಂದೂಡಿ ಎಂಬುದು ಅವರ ಆಗ್ರಹವಾಗಿತ್ತು. ಮೊದಮೊದಲು ಅವರ ದನಿಗೆ ಹ್ಞೂಂಗುಡದಿದ್ದ ಸಿದ್ದರಾಮಯ್ಯನವರೂ ನಂತರ ಸ್ಪೀಕರ್ ಅವರಿಗೆ ‘ಒಂದು ದಿನ ನೋಡೋಣ’ ಎಂಬ ಸಂದೇಶ ಕಳಿಸಿದ್ದಾರೆ.

ಅಂತಿಮವಾಗಿ ಕೆ.ಸಿ.ವೇಣುಗೋಪಾಲ್ ಅವರ ಮೂಲಕ ಫೋನ್ ಮಾಡಿಸಿ, ಸ್ಪೀಕರ್ ಮೇಲೆ ಇನ್ನಿಲ್ಲದ ಒತ್ತಡ ತಂದರೆಂದು ಹೇಳಲಾಗುತ್ತಿದೆ. ಈ ಮಧ್ಯೆ ಡಿ.ಕೆ.ಶಿವಕುಮಾರ್ ಮಾಧ್ಯಮಗಳ ಜೊತೆ ಮಾತನಾಡಿ ‘ರೆಬೆಲ್ ಶಾಸಕರು ಬೇಗ ತೀರ್ಮಾನ ತೆಗೆದುಕೊಂಡು ಬೆಳಿಗ್ಗೆ 11 ಗಂಟೆ ಒಳಗೆ ವಾಪಸ್ ಬರಲಿ. ಇಲ್ಲವಾದರೆ ಅನರ್ಹತೆ ಖಚಿತ. ಬಿಜೆಪಿಯವರು ನಿಮ್ಮ ತಲೆಗೆ ಮಂಗನ ಟೋಪಿ ತೊಡಿಸುತ್ತಾರೆ ಅಷ್ಟೇ’ ಎಂದು ಹೇಳಿದರು.

ಇವೆಲ್ಲದರ ಕಾರಣದಿಂದ ಒತ್ತಡಕ್ಕೆ ಒಳಗಾದ ಸ್ಪೀಕರ್ ಯಾವ ತೀರ್ಮಾನ ತೆಗೆದುಕೊಳ್ಳುವುದು ಎಂಬ ತೂಗುಯ್ಯಾಲೆಯಲ್ಲಿ ಬಿದ್ದಿರುವುದರಿಂದಲೇ ಯಾವ ನಿರ್ಧಾರವನ್ನೂ ಘೋಷಿಸದೇ ಮ್ಲಾನವದನರಾಗಿ ಕುಳಿತಿದ್ದಾರೆ. ಯಾರಿಗೂ ಚೈತನ್ಯದಿಂದ ಮಾತನಾಡುವ ಉಮೇದೂ ಇಲ್ಲದೇ, ಎಳೆಯುವ ಉದ್ದೇಶದಿಂದ ಮಾತ್ರ ಮಾತನಾಡುತ್ತಿರುವಾಗ ಅನಗತ್ಯವಾಗಿ ಮುಂದೂಡುವ ಮೂಲಕ ಮೈತ್ರಿ ಪಕ್ಷಗಳ ಒತ್ತಡಕ್ಕೆ ಗುರಿಯಾಗುತ್ತಾರಾ, ಇಲ್ಲವೇ ಅವರ ಮೂಲ ನಿಲುವಿಗೆ ಬದ್ಧರಾಗಿ ವಿಶ್ವಾಸಮತಯಾಚನೆಗೆ ಹಾಕುತ್ತಾರಾ ಕಾದು ನೋಡಬೇಕು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...