Homeಕರ್ನಾಟಕವಿಶ್ವಾಸಮತ ಯಾಚನೆ ಇಂದೂ ನಡೆಯುವುದು ಅನುಮಾನ ಎಂಬ ವಾತಾವರಣ ಏಕೆ ನಿರ್ಮಾಣವಾಗಿದೆ?

ವಿಶ್ವಾಸಮತ ಯಾಚನೆ ಇಂದೂ ನಡೆಯುವುದು ಅನುಮಾನ ಎಂಬ ವಾತಾವರಣ ಏಕೆ ನಿರ್ಮಾಣವಾಗಿದೆ?

ಅನರ್ಹರಾಗಲಿ, ಸರ್ಕಾರ ಉಳಿಯೋದು ಬೇಡ ಎಂಬುದು ಸ್ಪೀಕರ್ ಅಪೇಕ್ಷೆಯಾಗಿತ್ತು

- Advertisement -
- Advertisement -

ಶಾಸಕರ ಅನರ್ಹತೆ ಕುರಿತ ಅಂತಿಮ ತೀರ್ಮಾನ ತೆಗೆದುಕೊಂಡಿದ್ದ ಸ್ಪೀಕರ್ ಮೇಲೆ ಬಂದ ಒತ್ತಡವು ವಿಶ್ವಾಸಮತ ಯಾಚನೆಯನ್ನು ಮಂಗಳವಾರಕ್ಕೆ ಮುಂದೂಡುವಂತೆ ಮಾಡುವ ಸಾಧ್ಯತೆ ಇದೆ. ಸೋಮವಾರ ಬೆಳಿಗ್ಗೆಯವರೆಗೆ ಕಾಂಗ್ರೆಸ್-ಜೆಡಿಎಸ್ ಪಕ್ಷಗಳ ಮುಖಂಡರ ಒತ್ತಡಕ್ಕೆ ಸ್ಪೀಕರ್ ಒಂದಿಂಚೂ ಬಗ್ಗಿರಲಿಲ್ಲ. ‘ನಿಮಗೆ ಇಷ್ಟು ಸಮಯ ಸಿಕ್ಕಿದ್ದರೂ ಒಬ್ಬರೂ ಬಂದಿಲ್ಲ. ಸದನದಲ್ಲಿ ನಡೆದ ಚರ್ಚೆಯು ಈಗಾಗಲೇ ಬಿಜೆಪಿಯವರು ಮಾಡಿದ್ದು ತಪ್ಪು ಎಂಬ ಭಾವನೆಯು ಬರುವಂತೆ ಆಗಿದೆ. ಆದರೆ, ಇದನ್ನು ಮತ್ತಷ್ಟು ಎಳೆಯುವುದು ಒಳ್ಳೆಯದಲ್ಲ. ನಾನೂ ಸಹಾ ಶುಕ್ರವಾರ ಸದನದಲ್ಲಿ ಸೋಮವಾರ ಮುಗಿಸುವ ವಿಚಾರ ಹೇಳಿದ್ದೇನೆ. ಒಂದು ವೇಳೆ ನೀವು ನನ್ನ ಮೇಲೆ ಒತ್ತಡ ತರುವುದಾದಲ್ಲಿ ನಾನು ರಾಜೀನಾಮೆ ಕೊಡುತ್ತೇನೆ’ ಎಂದು ಸ್ಪೀಕರ್ ಹೇಳಿದರೆಂದು ಅವರ ಸಮೀಪವರ್ತಿಗಳು ಹೇಳುತ್ತಾರೆ.

ಇಡೀ ಪ್ರಕರಣದ ಕೇಂದ್ರಬಿಂದುವಾಗಿರುವ ಸ್ಪೀಕರ್ ರಮೇಶ್ ಕುಮಾರ್ ಅವರ ನಿರ್ಧಾರದ ಮೇಲೆ ವಿಶ್ವಾಸಮತ ಯಾಚನೆ ಯಾವಾಗ ಆಗುತ್ತದೆಂಬುದು ತೀರ್ಮಾನವಾಗಲಿದೆ. ಇಂದು ಸಂಜೆಯವರೆಗೂ ಅವರ ಕಟು ನಿರ್ಧಾರ ‘ಆಪರೇಷನ್ ಕಮಲದ ಆಮಿಷಕ್ಕೆ ಪಕ್ಷಾಂತರ ಮಾಡಿರುವ ಶಾಸಕರನ್ನು ಅನರ್ಹಗೊಳಿಸಲೇಬೇಕು. ಅವರಿಗಾಗಿ ಕಾಯುತ್ತಾ ವಿಶ್ವಾಸಮತವನ್ನು ಎಳೆಯುವ ಸಮ್ಮಿಶ್ರ ಪಕ್ಷಗಳ ಉದ್ದೇಶವನ್ನು ತಾನು ಒಪ್ಪುವುದಿಲ್ಲ’ ಎಂದೇ ಆಗಿತ್ತು. ಆದರೆ, ‘ಗುರುವಾರದವರೆಗೆ ಕಾದರೆ ಗ್ರಹಗತಿಗಳು ಸರಿ ಹೋಗುತ್ತವೆ, ಸರ್ಕಾರ ಉಳಿಯುತ್ತದೆ’ ಎಂಬ ಮೌಢ್ಯಕ್ಕೆ ಬಲಿ ಬಿದ್ದಿರುವ ಗೌಡರ ಕುಟುಂಬವು ಅವರನ್ನು ಒಲಿಸುವ ಪ್ರಯತ್ನಕ್ಕೆ ಕೈ ಹಾಕಿ ಸಫಲವಾಗಿರಲಿಲ್ಲ. ಕನಿಷ್ಠ ಪಕ್ಷ ನಾಳೆ ಒಂದು ದಿನದ ಮಟ್ಟಿಗಾದರೂ ಮುಂದೂಡಿ ಎಂಬುದು ಅವರ ಆಗ್ರಹವಾಗಿತ್ತು. ಮೊದಮೊದಲು ಅವರ ದನಿಗೆ ಹ್ಞೂಂಗುಡದಿದ್ದ ಸಿದ್ದರಾಮಯ್ಯನವರೂ ನಂತರ ಸ್ಪೀಕರ್ ಅವರಿಗೆ ‘ಒಂದು ದಿನ ನೋಡೋಣ’ ಎಂಬ ಸಂದೇಶ ಕಳಿಸಿದ್ದಾರೆ.

ಅಂತಿಮವಾಗಿ ಕೆ.ಸಿ.ವೇಣುಗೋಪಾಲ್ ಅವರ ಮೂಲಕ ಫೋನ್ ಮಾಡಿಸಿ, ಸ್ಪೀಕರ್ ಮೇಲೆ ಇನ್ನಿಲ್ಲದ ಒತ್ತಡ ತಂದರೆಂದು ಹೇಳಲಾಗುತ್ತಿದೆ. ಈ ಮಧ್ಯೆ ಡಿ.ಕೆ.ಶಿವಕುಮಾರ್ ಮಾಧ್ಯಮಗಳ ಜೊತೆ ಮಾತನಾಡಿ ‘ರೆಬೆಲ್ ಶಾಸಕರು ಬೇಗ ತೀರ್ಮಾನ ತೆಗೆದುಕೊಂಡು ಬೆಳಿಗ್ಗೆ 11 ಗಂಟೆ ಒಳಗೆ ವಾಪಸ್ ಬರಲಿ. ಇಲ್ಲವಾದರೆ ಅನರ್ಹತೆ ಖಚಿತ. ಬಿಜೆಪಿಯವರು ನಿಮ್ಮ ತಲೆಗೆ ಮಂಗನ ಟೋಪಿ ತೊಡಿಸುತ್ತಾರೆ ಅಷ್ಟೇ’ ಎಂದು ಹೇಳಿದರು.

ಇವೆಲ್ಲದರ ಕಾರಣದಿಂದ ಒತ್ತಡಕ್ಕೆ ಒಳಗಾದ ಸ್ಪೀಕರ್ ಯಾವ ತೀರ್ಮಾನ ತೆಗೆದುಕೊಳ್ಳುವುದು ಎಂಬ ತೂಗುಯ್ಯಾಲೆಯಲ್ಲಿ ಬಿದ್ದಿರುವುದರಿಂದಲೇ ಯಾವ ನಿರ್ಧಾರವನ್ನೂ ಘೋಷಿಸದೇ ಮ್ಲಾನವದನರಾಗಿ ಕುಳಿತಿದ್ದಾರೆ. ಯಾರಿಗೂ ಚೈತನ್ಯದಿಂದ ಮಾತನಾಡುವ ಉಮೇದೂ ಇಲ್ಲದೇ, ಎಳೆಯುವ ಉದ್ದೇಶದಿಂದ ಮಾತ್ರ ಮಾತನಾಡುತ್ತಿರುವಾಗ ಅನಗತ್ಯವಾಗಿ ಮುಂದೂಡುವ ಮೂಲಕ ಮೈತ್ರಿ ಪಕ್ಷಗಳ ಒತ್ತಡಕ್ಕೆ ಗುರಿಯಾಗುತ್ತಾರಾ, ಇಲ್ಲವೇ ಅವರ ಮೂಲ ನಿಲುವಿಗೆ ಬದ್ಧರಾಗಿ ವಿಶ್ವಾಸಮತಯಾಚನೆಗೆ ಹಾಕುತ್ತಾರಾ ಕಾದು ನೋಡಬೇಕು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೊಸ ಕಾರ್ಮಿಕ ಕಾನೂನು ಶ್ರಮಿಕರ ಮೂಲಭೂತ ಹಕ್ಕುಗಳಿಗೆ ಕತ್ತರಿ!

"8 ಗಂಟೆ ಕೆಲಸ, 8 ಗಂಟೆ ಮನರಂಜನೆ, 8 ಗಂಟೆ ವಿಶ್ರಾಂತಿ" ಎಂಬ ತತ್ವವು ಸುಲಭವಾಗಿ ದೊರೆತದ್ದಲ್ಲ, ಇದು ದೀರ್ಘಕಾಲದ ಹೋರಾಟ, ತ್ಯಾಗ ಮತ್ತು ಏಕತೆಯ ಫಲವಾಗಿದೆ. ಕೆಲಸದ ಹೊರೆ ಅತಿಯಾಗಿ ಇದ್ದ...

ಮನರೇಗಾ ಯಶೋಗಾಥೆ: ಭಾಗ-1 ದಲಿತರು-ಮಹಿಳೆಯರಿಗೆ ಆರ್ಥಿಕ ಭದ್ರತೆ; ಗ್ರಾಮ ಸಬಲೀಕರಣಕ್ಕೆ ಮನರೇಗಾ ಕೊಟ್ಟ ಕೊಡುಗೆ ಅಪಾರ

2001-2004 ರವರೆಗಿನ ನಿರಂತರ ಬರ ಕರ್ನಾಟಕದ ಬಹುತೇಕ ಹಳ್ಳಿಗಳನ್ನು ಕಂಗಾಲಾಗಿಸಿದ್ದಂತೂ ನಿಜ. ಎಲ್ಲ ಕೆರೆಗಳು ಬತ್ತಿಹೋಗಿದ್ದರಿಂದ ದನಕರುಗಳಿಗೆ ನೀರು ಕುಡಿಸಲೂ ಜನ ಅಲೆದಾಡುತ್ತಿದ್ದರು. ಜನರಿಗೆ ಕುಡಿಯುವ ನೀರು ಪೂರೈಕೆ ಸಹ ಆ ಸಂದರ್ಭದಲ್ಲಿ...

ಮಣಿಪುರ: ಬುಡಕಟ್ಟು ಚರ್ಚ್ ನಾಯಕರ ಮೇಲೆ ಉಗ್ರ ದಾಳಿ:  ಹಲವೆಡೆ ಮೇಣದ ಬತ್ತಿಯ ಜೊತೆಗೆ ಶೋಕ ವ್ಯಕ್ತ ಪಡಿಸಿದ ಕುಕಿ ಸಮುದಾಯ 

ಇಂಫಾಲ್: ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಮೂವರು ಪ್ರಮುಖ ಕುಕಿ ಚರ್ಚ್ ನಾಯಕರನ್ನು ಹೊಂಚು ಹಾಕಿ ದಾಳಿ ನಡೆಸಿ ಕೊಲ್ಲಲಾಗಿದೆ. ಈ ಘಟನೆಯು ರಾಜ್ಯದಲ್ಲಿ ಜನಾಂಗೀಯ ಉದ್ವಿಗ್ನತೆಯನ್ನು ಮತ್ತಷ್ಟು ತೀವ್ರಗೊಳಿಸಿದೆ.  ಮೇ 13ರಂದು ಬೆಳಿಗ್ಗೆ ಚುರಾಚಂದ್‌ಪುರನಲ್ಲಿ...

ಗುಜರಾತ್| ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಹಲ್ಲೆ

ಗುಜರಾತ್‌ನ ಮೆಹ್ಸಾನಾ ಜಿಲ್ಲೆಯ ಮಡಿ ಗ್ರಾಮದಲ್ಲಿ ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡುತ್ತಿದ್ದ ದಲಿತ ವರನ ಮೇಲೆ ಮೇಲ್ಜಾತಿಯ ಪುರುಷರ ಗುಂಪೊಂದು ಜಾತಿ ನಿಂದನೆ ಮಾಡಿ ನಿಂದಿಸಿದ್ದಾರೆ ಎಂದು ಆರೋಪಿಸಲಾಗಿದೆ. ಮೇ 10 ರಂದು...

ಆತಂಕಕಾರಿಯಾದ ಆನೆ ದಾಳಿ

ಆನೆ ದಾಳಿ ಹಿಂದೆಂದಿಗಿಂತಲೂ ದುಪ್ಪಟ್ಟಾಗಿದೆ. ಅರಣ್ಯಮಂತ್ರಿ ಈಶ್ವರ್ ಖಂಡ್ರೆಯವರ ಪ್ರಕಾರ ಆನೆಗಳ ಸಂಖ್ಯೆ ದುಪ್ಪಟ್ಟಾಗಿದೆ. ಕಾಡಿನ ಪ್ರಮಾಣ ಅಷ್ಟೆ ಇದೆ. ಅಂದರೆ ಕಾಡಿನ ಪ್ರಮಾಣ ಹೆಚ್ಚು ಮಾಡಬೇಕೆಂದರೆ ಮನುಷ್ಯರ ಆವಾಸ ಇಲ್ಲದೆ ಆನೆಗಳಿಗಾಗಿ...

ವೈದ್ಯಕೀಯ ಸೀಟುಗಳ ಹಂಚಿಕೆ ಕೇಂದ್ರೀಕರಣಕ್ಕೆ ದಕ್ಷಿಣದ ವಿರೋಧ; ನೀಟ್ ಪರೀಕ್ಷೆಯನ್ನೇ ರದ್ದುಗೊಳಿಸಲು ಇದು ಸಕಾಲ

ರಾಜ್ಯಪಟ್ಟಿಯಲ್ಲಿದ್ದ ಶಿಕ್ಷಣದ ಹಕ್ಕನ್ನು ನೀಟ್‌ ಹೆಸರಿನಲ್ಲಿ ಕೇಂದ್ರದ ಜಂಟಿ ಪಟ್ಟಿಗೆ ಸೇರಿಸುವ ಒಕ್ಕೂಟ ಸರ್ಕಾರದ ನಿರ್ಧಾರದಿಂದ ದಕ್ಷಿಣದ ರಾಜ್ಯಗಳು ಭಾರಿ ನಷ್ಟ ಅನುಭವಿಸುತ್ತಿವೆ. ಜೊತೆಗೆ, ನೀಟ್ ಪಾಸ್‌ ಮಾಡುವ ಒತ್ತಡ ತಾಳಲಾರದೆ ದೇಶದಾದ್ಯಂತ...

‘ಮತ’ ವ್ಯರ್ಥ ಮಾಡದ ಮತದಾರ: 2026ರಲ್ಲಿ ಕುಸಿಯಿತು ‘ನೋಟಾ’ ಅಬ್ಬರ

2026ರ ವಿಧಾನಸಭಾ ಚುನಾವಣೆಯಲ್ಲಿ ಅಸ್ಸಾಂ, ಕೇರಳ, ಪುದುಚೇರಿ, ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಾದ್ಯಂತ ಸುಮಾರು 10.9 ಲಕ್ಷ ಮತಗಳು 'ನೋಟಾ' (ಯಾರಿಗೂ ಮತವಿಲ್ಲ) ಪಾಲಾಗಿವೆ. ಆದರೆ, 2016 ಮತ್ತು 2021ರ ಚುನಾವಣೆಗಳಿಗೆ ಹೋಲಿಸಿದರೆ...

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...

ದಲಿತರ ನ್ಯಾಯಕ್ಕೆ ಹೊಸ ಅಡ್ಡಿಯಾಗಲಿದೆಯೇ ‘ಸಾರ್ವಜನಿಕ ವೀಕ್ಷಣೆ’ ನಿಯಮ? ಪರಿಶಿಷ್ಟರನ್ನು ಆತಂಕಕ್ಕೆ ತಳ್ಳಿದ ಸುಪ್ರೀಂ ತೀರ್ಪು

ಸಾರ್ವಜನಿಕರು ನೋಡದ ಜಾಗದಲ್ಲಿ, ಅಂದರೆ ಯಾರೂ ನೋಡದ ಜಾಗದಲ್ಲಿ ಜಾತಿ ನಿಂದನೆ ಅಥವಾ ಅವಮಾನ ನಡೆದರೆ, ಅದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ 1989ರ ಅಡಿಯಲ್ಲಿ ಅಪರಾಧ...

ಪಶ್ಚಿಮ ಬಂಗಾಳ: “ಇದು ಬುಲ್ಡೋಜರ್ ರಾಜ್ಯವಲ್ಲ”: ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಗುರುವಾರ ವಕೀಲರ ನಿಲುವಂಗಿಯನ್ನು ಧರಿಸಿ ಕಲ್ಕತ್ತಾ ಹೈಕೋರ್ಟ್‌ಗೆ ಬಂದ ಅವರು ವಿಧಾನಸಭಾ...