Homeಕರ್ನಾಟಕವಿಶ್ವಾಸಮತ ಯಾಚನೆ ಇಂದೂ ನಡೆಯುವುದು ಅನುಮಾನ ಎಂಬ ವಾತಾವರಣ ಏಕೆ ನಿರ್ಮಾಣವಾಗಿದೆ?

ವಿಶ್ವಾಸಮತ ಯಾಚನೆ ಇಂದೂ ನಡೆಯುವುದು ಅನುಮಾನ ಎಂಬ ವಾತಾವರಣ ಏಕೆ ನಿರ್ಮಾಣವಾಗಿದೆ?

ಅನರ್ಹರಾಗಲಿ, ಸರ್ಕಾರ ಉಳಿಯೋದು ಬೇಡ ಎಂಬುದು ಸ್ಪೀಕರ್ ಅಪೇಕ್ಷೆಯಾಗಿತ್ತು

- Advertisement -
- Advertisement -

ಶಾಸಕರ ಅನರ್ಹತೆ ಕುರಿತ ಅಂತಿಮ ತೀರ್ಮಾನ ತೆಗೆದುಕೊಂಡಿದ್ದ ಸ್ಪೀಕರ್ ಮೇಲೆ ಬಂದ ಒತ್ತಡವು ವಿಶ್ವಾಸಮತ ಯಾಚನೆಯನ್ನು ಮಂಗಳವಾರಕ್ಕೆ ಮುಂದೂಡುವಂತೆ ಮಾಡುವ ಸಾಧ್ಯತೆ ಇದೆ. ಸೋಮವಾರ ಬೆಳಿಗ್ಗೆಯವರೆಗೆ ಕಾಂಗ್ರೆಸ್-ಜೆಡಿಎಸ್ ಪಕ್ಷಗಳ ಮುಖಂಡರ ಒತ್ತಡಕ್ಕೆ ಸ್ಪೀಕರ್ ಒಂದಿಂಚೂ ಬಗ್ಗಿರಲಿಲ್ಲ. ‘ನಿಮಗೆ ಇಷ್ಟು ಸಮಯ ಸಿಕ್ಕಿದ್ದರೂ ಒಬ್ಬರೂ ಬಂದಿಲ್ಲ. ಸದನದಲ್ಲಿ ನಡೆದ ಚರ್ಚೆಯು ಈಗಾಗಲೇ ಬಿಜೆಪಿಯವರು ಮಾಡಿದ್ದು ತಪ್ಪು ಎಂಬ ಭಾವನೆಯು ಬರುವಂತೆ ಆಗಿದೆ. ಆದರೆ, ಇದನ್ನು ಮತ್ತಷ್ಟು ಎಳೆಯುವುದು ಒಳ್ಳೆಯದಲ್ಲ. ನಾನೂ ಸಹಾ ಶುಕ್ರವಾರ ಸದನದಲ್ಲಿ ಸೋಮವಾರ ಮುಗಿಸುವ ವಿಚಾರ ಹೇಳಿದ್ದೇನೆ. ಒಂದು ವೇಳೆ ನೀವು ನನ್ನ ಮೇಲೆ ಒತ್ತಡ ತರುವುದಾದಲ್ಲಿ ನಾನು ರಾಜೀನಾಮೆ ಕೊಡುತ್ತೇನೆ’ ಎಂದು ಸ್ಪೀಕರ್ ಹೇಳಿದರೆಂದು ಅವರ ಸಮೀಪವರ್ತಿಗಳು ಹೇಳುತ್ತಾರೆ.

ಇಡೀ ಪ್ರಕರಣದ ಕೇಂದ್ರಬಿಂದುವಾಗಿರುವ ಸ್ಪೀಕರ್ ರಮೇಶ್ ಕುಮಾರ್ ಅವರ ನಿರ್ಧಾರದ ಮೇಲೆ ವಿಶ್ವಾಸಮತ ಯಾಚನೆ ಯಾವಾಗ ಆಗುತ್ತದೆಂಬುದು ತೀರ್ಮಾನವಾಗಲಿದೆ. ಇಂದು ಸಂಜೆಯವರೆಗೂ ಅವರ ಕಟು ನಿರ್ಧಾರ ‘ಆಪರೇಷನ್ ಕಮಲದ ಆಮಿಷಕ್ಕೆ ಪಕ್ಷಾಂತರ ಮಾಡಿರುವ ಶಾಸಕರನ್ನು ಅನರ್ಹಗೊಳಿಸಲೇಬೇಕು. ಅವರಿಗಾಗಿ ಕಾಯುತ್ತಾ ವಿಶ್ವಾಸಮತವನ್ನು ಎಳೆಯುವ ಸಮ್ಮಿಶ್ರ ಪಕ್ಷಗಳ ಉದ್ದೇಶವನ್ನು ತಾನು ಒಪ್ಪುವುದಿಲ್ಲ’ ಎಂದೇ ಆಗಿತ್ತು. ಆದರೆ, ‘ಗುರುವಾರದವರೆಗೆ ಕಾದರೆ ಗ್ರಹಗತಿಗಳು ಸರಿ ಹೋಗುತ್ತವೆ, ಸರ್ಕಾರ ಉಳಿಯುತ್ತದೆ’ ಎಂಬ ಮೌಢ್ಯಕ್ಕೆ ಬಲಿ ಬಿದ್ದಿರುವ ಗೌಡರ ಕುಟುಂಬವು ಅವರನ್ನು ಒಲಿಸುವ ಪ್ರಯತ್ನಕ್ಕೆ ಕೈ ಹಾಕಿ ಸಫಲವಾಗಿರಲಿಲ್ಲ. ಕನಿಷ್ಠ ಪಕ್ಷ ನಾಳೆ ಒಂದು ದಿನದ ಮಟ್ಟಿಗಾದರೂ ಮುಂದೂಡಿ ಎಂಬುದು ಅವರ ಆಗ್ರಹವಾಗಿತ್ತು. ಮೊದಮೊದಲು ಅವರ ದನಿಗೆ ಹ್ಞೂಂಗುಡದಿದ್ದ ಸಿದ್ದರಾಮಯ್ಯನವರೂ ನಂತರ ಸ್ಪೀಕರ್ ಅವರಿಗೆ ‘ಒಂದು ದಿನ ನೋಡೋಣ’ ಎಂಬ ಸಂದೇಶ ಕಳಿಸಿದ್ದಾರೆ.

ಅಂತಿಮವಾಗಿ ಕೆ.ಸಿ.ವೇಣುಗೋಪಾಲ್ ಅವರ ಮೂಲಕ ಫೋನ್ ಮಾಡಿಸಿ, ಸ್ಪೀಕರ್ ಮೇಲೆ ಇನ್ನಿಲ್ಲದ ಒತ್ತಡ ತಂದರೆಂದು ಹೇಳಲಾಗುತ್ತಿದೆ. ಈ ಮಧ್ಯೆ ಡಿ.ಕೆ.ಶಿವಕುಮಾರ್ ಮಾಧ್ಯಮಗಳ ಜೊತೆ ಮಾತನಾಡಿ ‘ರೆಬೆಲ್ ಶಾಸಕರು ಬೇಗ ತೀರ್ಮಾನ ತೆಗೆದುಕೊಂಡು ಬೆಳಿಗ್ಗೆ 11 ಗಂಟೆ ಒಳಗೆ ವಾಪಸ್ ಬರಲಿ. ಇಲ್ಲವಾದರೆ ಅನರ್ಹತೆ ಖಚಿತ. ಬಿಜೆಪಿಯವರು ನಿಮ್ಮ ತಲೆಗೆ ಮಂಗನ ಟೋಪಿ ತೊಡಿಸುತ್ತಾರೆ ಅಷ್ಟೇ’ ಎಂದು ಹೇಳಿದರು.

ಇವೆಲ್ಲದರ ಕಾರಣದಿಂದ ಒತ್ತಡಕ್ಕೆ ಒಳಗಾದ ಸ್ಪೀಕರ್ ಯಾವ ತೀರ್ಮಾನ ತೆಗೆದುಕೊಳ್ಳುವುದು ಎಂಬ ತೂಗುಯ್ಯಾಲೆಯಲ್ಲಿ ಬಿದ್ದಿರುವುದರಿಂದಲೇ ಯಾವ ನಿರ್ಧಾರವನ್ನೂ ಘೋಷಿಸದೇ ಮ್ಲಾನವದನರಾಗಿ ಕುಳಿತಿದ್ದಾರೆ. ಯಾರಿಗೂ ಚೈತನ್ಯದಿಂದ ಮಾತನಾಡುವ ಉಮೇದೂ ಇಲ್ಲದೇ, ಎಳೆಯುವ ಉದ್ದೇಶದಿಂದ ಮಾತ್ರ ಮಾತನಾಡುತ್ತಿರುವಾಗ ಅನಗತ್ಯವಾಗಿ ಮುಂದೂಡುವ ಮೂಲಕ ಮೈತ್ರಿ ಪಕ್ಷಗಳ ಒತ್ತಡಕ್ಕೆ ಗುರಿಯಾಗುತ್ತಾರಾ, ಇಲ್ಲವೇ ಅವರ ಮೂಲ ನಿಲುವಿಗೆ ಬದ್ಧರಾಗಿ ವಿಶ್ವಾಸಮತಯಾಚನೆಗೆ ಹಾಕುತ್ತಾರಾ ಕಾದು ನೋಡಬೇಕು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ ಮತದಾರರ ಪಟ್ಟಿಗೆ ರಾಘವ್ ಚಡ್ಡಾ ಹೆಸರು ಸೇರ್ಪಡೆ; ಸೂಕ್ತ ಪ್ರಕ್ರಿಯೆ ಅನುಸರಿಸಿಲ್ಲ ಎಂದು ಎಎಪಿ ಆರೋಪ

ರಾಷ್ಟ್ರ ರಾಜಧಾನಿಯ ಮತದಾರರ ಪಟ್ಟಿಯ ಪ್ರಸ್ತುತ ನಡೆಯುತ್ತಿರುವ ವಿಶೇಷ ಪರಿಷ್ಕರಣೆ (ಎಸ್‌ಐಆರ್) ಅಡಿಯಲ್ಲಿ, ಪಂಜಾಬ್‌ನ ಬಿಜೆಪಿ ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರನ್ನು ದೆಹಲಿಯ ಮತದಾರರ ಪಟ್ಟಿಗೆ ಸೇರಿಸಲಾಗಿದೆ ಎಂದು ಚುನಾವಣಾ...

ಮಲ್ಲಿಕಾರ್ಜುನ ಖರ್ಗೆ ಭಾಷಣ ಮಾಡಿದ ವೇದಿಕೆ ‘ಶುದ್ಧೀಕರಣ’ : 29 ದಿನಗಳ ನಂತರ ಎಫ್‌ಐಆರ್ ದಾಖಲು

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ್ದ ಉತ್ತರಾಖಂಡದ ಹಲ್ದ್ವಾನಿಯ ವೇದಿಕೆಯೊಂದರಲ್ಲಿ 'ಶುದ್ಧೀಕರಣ' ನಡೆದ ಇಪ್ಪತ್ತೊಂಬತ್ತು ದಿನಗಳ ನಂತರ, ಪೊಲೀಸರು ಮಂಗಳವಾರ (ಸೆಪ್ಟೆಂಬರ್ 8) ಎಸ್‌ಸಿ/ಎಸ್‌ಟಿ ಕಾಯ್ದೆಯ ನಿಬಂಧನೆಗಳ ಅಡಿಯಲ್ಲಿ...

‘ಪ್ರೊ. ಸಿಎನ್ಆರ್ ರಾವ್‌ ಅವರಿಗೆ ನೋಟಿಸ್ ಕೊಟ್ಟಿಲ್ಲ..’; ಚುನಾವಣಾ ಆಯೋಗದ ಸ್ಪಷ್ಟನೆ

ಕರ್ನಾಟಕದ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ (ಎಸ್‌ಐಆರ್) ವೇಳೆ ಹೆಸರಿನ ಕಾಗುಣಿತದಲ್ಲಿನ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ, ದೇಶದ ಪ್ರಸಿದ್ಧ ವಿಜ್ಞಾನಿಗಳಲ್ಲಿ ಒಬ್ಬರಾದ ಭಾರತರತ್ನ ಪ್ರೊ. ಸಿ.ಎನ್.ಆರ್. ರಾವ್ ಅವರಿಗೆ ತಮ್ಮ ಗುರುತನ್ನು ಸಾಬೀತುಪಡಿಸಲು...

‘ಬಂಗಾಳಿಗಳು ಮೀನು ಇಲ್ಲದೆ ಬದುಕಲು ಸಾಧ್ಯವಿಲ್ಲ’; ಆಹಾರ ಪದ್ಧತಿ ನಿರ್ಧಾರ ಬಿಜೆಪಿ ಕೆಲಸವಲ್ಲ: ಬಿಜೆಪಿ ಮುಖ್ಯಸ್ಥ ಸಮಿಕ್ ಭಟ್ಟಾಚಾರ್ಯ 

ಕೊಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಕೆಲವೇ ತಿಂಗಳುಗಳಲ್ಲಿ ದುರ್ಗಾ ಪೂಜೆ ಮತ್ತು ನವರಾತ್ರಿ ಆಚರಣೆಗಳ ಸಂದರ್ಭದಲ್ಲಿ ಆಹಾರ ಪದ್ಧತಿಯ ಕುರಿತು ಕೆಲವು ಧಾರ್ಮಿಕ ನಾಯಕರು ಹಾಗೂ ವಿಶ್ವ ಹಿಂದೂ...

ಮತದಾರ ಇರುವುದು ವಿದೇಶದಲ್ಲಿ, ಆದರೆ ವಿಚಾರಣೆ ನಡೆಯುತ್ತಿರುವುದು ಇಲ್ಲಿ: ಕರ್ನಾಟಕ SIR ತಂದಿಟ್ಟ ಧರ್ಮಸಂಕಟ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ, ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿದ್ದ ಅನೇಕ ಅನಿವಾಸಿ ಕನ್ನಡಿಗರಿಗೆ ಬಿಸಿ ತುಪ್ಪವಾಗಿ ಪರಿಣಮಿಸಿದೆ. ಹೆಸರಿನಲ್ಲಿನ ವ್ಯತ್ಯಾಸ, ವಯಸ್ಸಿನ ವ್ಯತ್ಯಾಸ...

SIR ತಂದಿಟ್ಟ ಸಂಕಷ್ಟ : ದಾಖಲೆ ಹೊಂದಿಸಲು ಅಲೆಮಾರಿಗಳ ಅಲೆದಾಟ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಭಾಗವಾಗಿ ಅನ್‌ಮ್ಯಾಪ್ಡ್ ಮತ್ತು ಅನಾಮಲಿಸ್ ಮತದಾರರಿಗೆ ನೋಟಿಸ್ ನೀಡಿ, ದಾಖಲೆಗಳ ಪರಿಶೀಲನೆ ಮಾಡುವ ಪ್ರಕ್ರಿಯೆ ನಡೆಯುತ್ತಿದೆ. ಈಗಾಗಲೇ 23,45,428 ಅನ್‌ ಮ್ಯಾಪ್ಡ್ (ಪ್ರೊಜೆನಿ ಮ್ಯಾಪಿಂಗ್...

ಸಚಿವ ಸತೀಶ್ ಜಾರಕಿಹೊಳಿ, ಪುತ್ರಿ ಪ್ರಿಯಾಂಕಾ ನಿವಾಸಗಳ ಮೇಲೆ ಇಡಿ ದಾಳಿ: 18ಕ್ಕೂ ಹೆಚ್ಚು ಸ್ಥಳಗಳಲ್ಲಿ ಶೋಧ

ಕರ್ನಾಟಕದ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹಾಗೂ ಅವರ ಪುತ್ರಿ, ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಅವರಿಗೆ ಸೇರಿದ ನಿವಾಸಗಳು ಮತ್ತು ಆಸ್ತಿಪಾಸ್ತಿಗಳ ಮೇಲೆ ಜಾರಿ ನಿರ್ದೇಶನಾಲಯ (ಇಡಿ)...

ಮೊಬೈಲ್ ಪತ್ತೆ ಪ್ರಕರಣ: ಪ್ರಜ್ವಲ್ ರೇವಣ್ಣ 2 ದಿನ ಪೊಲೀಸ್ ಕಸ್ಟಡಿಗೆ

ಅತ್ಯಾಚಾರ ಪ್ರಕರಣದಲ್ಲಿ ಶಿಕ್ಷೆಗೆ ಗುರಿಯಾಗಿ ಸಜಾ ಕೈದಿಯಾಗಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಮತ್ತೊಂದು ಕಾನೂನು ಸಂಕಷ್ಟ ಎದುರಾಗಿದೆ. ಜೈಲಿನ ಅವರ ಕೊಠಡಿಯಲ್ಲಿ ಅಕ್ರಮವಾಗಿ ಮೊಬೈಲ್...

ರಾಜ್ಯದಲ್ಲಿ ಅವಧಿ ಮೀರಿದ ಆಹಾರ ಪೂರೈಕೆಯ ಬೃಹತ್ ದಂಧೆ: ₹1.43 ಕೋಟಿಯ ಉತ್ಪನ್ನಗಳು ಜಪ್ತಿ

ಆನ್‌ಲೈನ್ ಮತ್ತು ಇ-ಕಾಮರ್ಸ್ ವೇದಿಕೆಗಳ ಮೂಲಕ ಸಾರ್ವಜನಿಕರಿಗೆ ಅವಧಿ ಮೀರಿದ ಹಾಗೂ ಕಳಪೆ ಗುಣಮಟ್ಟದ ಆಹಾರ ಉತ್ಪನ್ನಗಳನ್ನು ಸರಬರಾಜು ಮಾಡುತ್ತಿದ್ದ ಬೃಹತ್ ದಂಧೆಯನ್ನು ಕರ್ನಾಟಕ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆ...

ಭಾರತೀಯ ಮಹಿಳೆಯನ್ನು ಬಾಂಗ್ಲಾ ಗಡಿಯಾಚೆಗೆ ತಳ್ಳಿದ ಪ್ರಕರಣ : 2 ಲಕ್ಷ ರೂ. ಪರಿಹಾರ ಪಾವತಿಸಲು ಅಸ್ಸಾಂ ಸರ್ಕಾರಕ್ಕೆ ಗುವಾಹಟಿ ಹೈಕೋರ್ಟ್ ಆದೇಶ

ಪಶ್ಚಿಮ ಬಂಗಾಳ ಮೂಲದ ಮುಸ್ಲಿಂ ಮಹಿಳೆಯೊಬ್ಬರಿಗೆ ವಿದೇಶಿಯರ ನ್ಯಾಯಾಧಿಕರಣದ (ಫಾರಿನರ್ಸ್ ಟ್ರಿಬ್ಯೂನಲ್) ಆದೇಶವನ್ನು ಪ್ರಶ್ನಿಸಲು ಯಾವುದೇ ಅವಕಾಶ ನೀಡದೆ, ಅವರನ್ನು ಬಾಂಗ್ಲಾ ಗಡಿಯಾಚೆಗೆ ತಳ್ಳಿದ್ದಕ್ಕಾಗಿ ಮಧ್ಯಂತರ ಪರಿಹಾರವಾಗಿ ಆಕೆಯ ಪತಿಗೆ 2 ಲಕ್ಷ...