Homeಅಂಕಣಗಳುವಿಶ್ವಾಸಾರ್ಹತೆ ಕಳೆದುಕೊಂಡ ತನಿಖಾ ಸಂಸ್ಥೆಗಳು, ಬಿಜೆಪಿ ಸೇರಿದವರಿಗೆ ಸಿಬಿಐ ಸ್ಮೂತ್!

ವಿಶ್ವಾಸಾರ್ಹತೆ ಕಳೆದುಕೊಂಡ ತನಿಖಾ ಸಂಸ್ಥೆಗಳು, ಬಿಜೆಪಿ ಸೇರಿದವರಿಗೆ ಸಿಬಿಐ ಸ್ಮೂತ್!

- Advertisement -
- Advertisement -

ಕೊಲ್ಕೊತ್ತಾದ ಪೊಲೀಸ್ ಕಮೀಷನರ್ ರಾಜೀವ ಕುಮಾರ್ ಅವರ ಕಚೇರಿಯ ಮೇಲೆ ದಾಳಿ ಮಾಡಲು ಹೋದ ಸಿಬಿಐಗೆ ಮುಖಭಂಗವಾಗಿದೆ. ಈಗ ಸುಪ್ರಿಂಕೋರ್ಟ್ ರಾಜೀವ ಕುಮಾರ್ ಅವರನ್ನು ಬಂಧಿಸದೇ ವಿಚಾರಣೆ ನಡೆಸಲು ಸೂಚಿಸಿದೆ.
ಸಿಬಿಐ ಅನ್ನು ಕೇಂದ್ರ ಹೇಗೆ ದುರ್ಬಳಕೆ ಮಾಡಿಕೊಳ್ಳುತ್ತಿದೆ ಎನ್ನುವುದಕ್ಕೆ ಈ ಶಾರದಾ ಚಿಟ್‌ಫಂಡ್ ಹಗರಣದ ತನಿಖೆಯೇ ಸಾಕ್ಷಿಯಾಗಿದೆ. ಈ ಹಗರಣದಲ್ಲಿ ಆರೋಪಿಗಳೆಂದು ಪರಿಗಣಿತರಾದವರು ಬಿಜೆಪಿ ಸೇರಿದ ಮೇಲೆ ಅವರ ಮೇಲಿನ ತನಿಖೆಯನ್ನು ಮೃದುಗೊಳಿಸಲಾಗಿದೆ ಅಥವಾ ನಿಲ್ಲಿಸಿಯೇ ಬಿಡಲಾಗಿದೆ.

2015ರಲ್ಲಿ ಮಾಜಿ ರೈಲ್ವೆ ಸಚಿವ, ಅಂದಿನ ಟಿಎಂಸಿ ನಾಯಕ ಮುಕುಲ್ ರಾಯ್ ವಿರುದ್ಧ ಸಿಬಿಐ ತನಿಖೆ ಶುರು ಮಾಡಿತು. ಆದರೆ ಮುಕುಲ್‌ರಾಯ್ ಬಿಜೆಪಿ ಸೇರಿದ ನಂತರ ತನಿಖೆಗೆ ಮಂಕು ಬಡಿದಿದೆ. ಹಾಗೆಯೇ ಅಸ್ಸಾಂನ ಸಚಿವ ಹಿಮಂತ ಬಿಸ್ವಾಸ್ ಶರ್ಮಾ ಮನೆ ಮೇಲೂ ಸಿಬಿಐ ದಾಳಿ ಮಾಡಿತ್ತು. ಶರ್ಮಾ ಬಿಜೆಪಿ ಸೇರಿದ ನಂತರ ಯಾವ ಚಾರ್ಜ್ಶೀಟಿನಲ್ಲೂ ಅವರ ಹೆಸರನ್ನು ಸೇರಿಸಲೇ ಇಲ್ಲ.
ಸುಪ್ರಿಂಕೋಟ್ ಆದೇಶದಂತೆ ಸಿಬಿಐ ಶಾರದಾ ಹಗರಣದ ತನಿಖೆಯನ್ನು 2014ರಲ್ಲಿ ಆರಂಭಿಸಿತು. 2015ರ ಜನೆವರಿ 30ರಂದು ಸಿಬಿಐ ಮುಕುಲ್ ರಾಯ್ ಅವರ ವಿಚಾರಣೆ ನಡೆಸಿತ್ತು. ಶಾರದಾ ಸಂಸ್ಥೆಯ ನ್ಯೂಸ್ ಆಪರೇಷನ್ಸ್ ಮತ್ತು ಸಂಸ್ಥೆಯ ಮುಖ್ಯಸ್ಥ ಸುದೀಪ್ತ್ ಸೇನ್ ಜೊತೆಗಿನ ಆತ್ಮೀಯ ಸಂಬಂಧಗಳ ಕುರಿತಂತೆ ರಾಯ್ ಅವರ ವಿರುದ್ಧ ತನಿಖೆ ಆರಂಭಿಸಲಾಗಿತ್ತು. ಸುದೀಪ್ತ್ ಸೇನ್ ಅವರ ಕಾರು ಚಾಲಕನ ಹೇಳಿಕೆಯಲ್ಲಿ ಮುಕುಲ್ ರಾಯ್ ಹೆಸರು ಪ್ರಸ್ತಾಪವಾಗಿತ್ತು. ಬಂಧನ ಭೀತಿಯಲ್ಲಿದ್ದ ಸುದೀಪ್ತ್ ಸೇನ್ ಅವರನ್ನು ಕೊಲ್ಕೊತ್ತಾದಿಂದ ಹೊರಗೆ ಪಾರಾಗಿ ಹೋಗಲು ರಾಯ್ ಹೇಗೆ ನೆರವು ನೀಡಿದ್ದರು ಎಂಬುದನ್ನು ಚಾಲಕ ವಿವರಿಸಿದ್ದ.

ಟಿಎಂಸಿ ಸಂಸದ ಕುನಾಲ್ ಘೋಷ್ ಶಾರದಾ ಹಗರಣ ಕುರಿತಂತೆ ರಾಯ್ ವಿರುದ್ಧ ಅಪಾದನೆ ಮಾಡಿದ ನಂತರ ರಾಯ್‌ಗೆ ಸಿಬಿಐ ಸಮನ್ಸ್ ನೀಡಿತ್ತು. ಶಾರದಾ ಹಗರಣಕ್ಕೆ ಸಂಬಂಧಿಸಿ 2013ರಲ್ಲೇ ಮೋಸ, ಕ್ರಿಮಿನಲ್ ಸಂಚು ಆರೋಪದ ಮೇಲೆ ಘೋಷ್ ಅವರನ್ನು ಬಂಧಿಸಲಾಗಿತ್ತು. ಬಂಧನವಾದ ಒಂದು ತಾಸಿನಲ್ಲೇ ಘೋಷ್ 12 ಜನರ ಹೆಸರನ್ನು ಹೇಳಿದ್ದು, ಅದರಲ್ಲಿ ಮುಕುಲ್ ರಾಯ್ ಹೆಸರು ಕೂಡ ಸೇರಿತ್ತು.

2015ರಲ್ಲೇ ಮುಕುಲ್ ರಾಯ್ ಬಿಜೆಪಿಗೆ ಹತ್ತಿರವಾಗತೊಡಗಿದರು. 2017ರ ನವೆಂಬರ್ 3ರಂದು ರಾಯ್ ಬಿಜೆಪಿ ಸೇರಿದರು. ಬಿಜೆಪಿಗೆ ಹತ್ತಿರವಾದ ನಂತರ ರಾಯ್ ಪರ ಮೃದು ಧೋರಣೆ ತಳೆದಿದ್ದ ಸಿಬಿಐ ಬಿಜೆಪಿ ಸೇರಿದ ನಂತರ ಅವರನ್ನು ವಿಚಾರಣೆಗೆ ಕರೆಯುತ್ತಲೇ ಇಲ್ಲ.
ಅಸ್ಸಾಂನ ಹಿಮಂತ ಶರ್ಮಾರನ್ನು ನವೆಂಬರ್ 26, 2014ರಂದು ವಿಚಾರಣೆ ಮಾಡಲಾಗಿತ್ತು. ಅದಕ್ಕೂ ಎರಡು ತಿಂಗಳು ಮೊದಲು ಶರ್ಮಾ ಮನೆ ಮತ್ತು ಆತನ ಪತ್ನಿಯ ಟಿವಿ ಚಾನೆಲ್ ಕಚೇರಿ ಮೇಲೆ ಸಿಬಿಐ ದಾಳಿ ನಡೆಸಿತ್ತು. ಅಸ್ಸಾಂನಲ್ಲಿ ತಮ್ಮ ಸಂಸ್ಥೆಯ ಕಾರ್ಯಾಚರಣೆ ಸುಗಮವಾಗಿ ನಡೆಯಲು ಪ್ರತಿ ತಿಂಗಳು ತಮ್ಮಿಂದ 20 ಲಕ್ಷ ರೂ.ಗಳನ್ನು ಶರ್ಮಾ ಪಡೆಯುತ್ತಿದ್ದರು ಎಂದು ಶಾರದಾ ಸಂಸ್ಥೆಯ ಮುಖ್ಯಸ್ಥ ಸುದೀಪ್ತ್ ಸೇನ್ ಆರೋಪಿಸಿದ್ದರು.

2015ರ ಅಗಸ್ಟ್ನಲ್ಲಿ ಶರ್ಮಾ ಬಿಜೆಪಿ ಸೇರಿದರು. ಆ ನಂತರ ಅವರನ್ನು ವಿಚಾರಣೆಗೆ ಕರೆಯಲೇ ಇಲ್ಲ. ಯಾವ ಚಾರ್ಜ್ಶೀಟಿನಲ್ಲೂ ಅವರ ಹೆಸರನ್ನು ಉಲ್ಲೇಖಿಸಲಿಲ್ಲ.
ಅಂದರೆ, ಬಿಜೆಪಿ ಸಿಬಿಐ ಅನ್ನು ತನ್ನ ಅನುಕೂಲಕ್ಕೆ ದುರುಪಯೋಗ ಮಾಡಿಕೊಳ್ಳುತ್ತಿದೆ ಎಂಬುದು ಪಕ್ಕಾ ಆಗಿತಲ್ಲವೇ?

(ಕೃಪೆ: ನ್ಯೂ ಇಂಡಿಯನ್ ಎಕ್ಸ್ಪ್ರೆಸ್)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...