Homeಅಂಕಣಗಳುವಿಶ್ವಾಸಾರ್ಹತೆ ಕಳೆದುಕೊಂಡ ತನಿಖಾ ಸಂಸ್ಥೆಗಳು, ಬಿಜೆಪಿ ಸೇರಿದವರಿಗೆ ಸಿಬಿಐ ಸ್ಮೂತ್!

ವಿಶ್ವಾಸಾರ್ಹತೆ ಕಳೆದುಕೊಂಡ ತನಿಖಾ ಸಂಸ್ಥೆಗಳು, ಬಿಜೆಪಿ ಸೇರಿದವರಿಗೆ ಸಿಬಿಐ ಸ್ಮೂತ್!

- Advertisement -
- Advertisement -

ಕೊಲ್ಕೊತ್ತಾದ ಪೊಲೀಸ್ ಕಮೀಷನರ್ ರಾಜೀವ ಕುಮಾರ್ ಅವರ ಕಚೇರಿಯ ಮೇಲೆ ದಾಳಿ ಮಾಡಲು ಹೋದ ಸಿಬಿಐಗೆ ಮುಖಭಂಗವಾಗಿದೆ. ಈಗ ಸುಪ್ರಿಂಕೋರ್ಟ್ ರಾಜೀವ ಕುಮಾರ್ ಅವರನ್ನು ಬಂಧಿಸದೇ ವಿಚಾರಣೆ ನಡೆಸಲು ಸೂಚಿಸಿದೆ.
ಸಿಬಿಐ ಅನ್ನು ಕೇಂದ್ರ ಹೇಗೆ ದುರ್ಬಳಕೆ ಮಾಡಿಕೊಳ್ಳುತ್ತಿದೆ ಎನ್ನುವುದಕ್ಕೆ ಈ ಶಾರದಾ ಚಿಟ್‌ಫಂಡ್ ಹಗರಣದ ತನಿಖೆಯೇ ಸಾಕ್ಷಿಯಾಗಿದೆ. ಈ ಹಗರಣದಲ್ಲಿ ಆರೋಪಿಗಳೆಂದು ಪರಿಗಣಿತರಾದವರು ಬಿಜೆಪಿ ಸೇರಿದ ಮೇಲೆ ಅವರ ಮೇಲಿನ ತನಿಖೆಯನ್ನು ಮೃದುಗೊಳಿಸಲಾಗಿದೆ ಅಥವಾ ನಿಲ್ಲಿಸಿಯೇ ಬಿಡಲಾಗಿದೆ.

2015ರಲ್ಲಿ ಮಾಜಿ ರೈಲ್ವೆ ಸಚಿವ, ಅಂದಿನ ಟಿಎಂಸಿ ನಾಯಕ ಮುಕುಲ್ ರಾಯ್ ವಿರುದ್ಧ ಸಿಬಿಐ ತನಿಖೆ ಶುರು ಮಾಡಿತು. ಆದರೆ ಮುಕುಲ್‌ರಾಯ್ ಬಿಜೆಪಿ ಸೇರಿದ ನಂತರ ತನಿಖೆಗೆ ಮಂಕು ಬಡಿದಿದೆ. ಹಾಗೆಯೇ ಅಸ್ಸಾಂನ ಸಚಿವ ಹಿಮಂತ ಬಿಸ್ವಾಸ್ ಶರ್ಮಾ ಮನೆ ಮೇಲೂ ಸಿಬಿಐ ದಾಳಿ ಮಾಡಿತ್ತು. ಶರ್ಮಾ ಬಿಜೆಪಿ ಸೇರಿದ ನಂತರ ಯಾವ ಚಾರ್ಜ್ಶೀಟಿನಲ್ಲೂ ಅವರ ಹೆಸರನ್ನು ಸೇರಿಸಲೇ ಇಲ್ಲ.
ಸುಪ್ರಿಂಕೋಟ್ ಆದೇಶದಂತೆ ಸಿಬಿಐ ಶಾರದಾ ಹಗರಣದ ತನಿಖೆಯನ್ನು 2014ರಲ್ಲಿ ಆರಂಭಿಸಿತು. 2015ರ ಜನೆವರಿ 30ರಂದು ಸಿಬಿಐ ಮುಕುಲ್ ರಾಯ್ ಅವರ ವಿಚಾರಣೆ ನಡೆಸಿತ್ತು. ಶಾರದಾ ಸಂಸ್ಥೆಯ ನ್ಯೂಸ್ ಆಪರೇಷನ್ಸ್ ಮತ್ತು ಸಂಸ್ಥೆಯ ಮುಖ್ಯಸ್ಥ ಸುದೀಪ್ತ್ ಸೇನ್ ಜೊತೆಗಿನ ಆತ್ಮೀಯ ಸಂಬಂಧಗಳ ಕುರಿತಂತೆ ರಾಯ್ ಅವರ ವಿರುದ್ಧ ತನಿಖೆ ಆರಂಭಿಸಲಾಗಿತ್ತು. ಸುದೀಪ್ತ್ ಸೇನ್ ಅವರ ಕಾರು ಚಾಲಕನ ಹೇಳಿಕೆಯಲ್ಲಿ ಮುಕುಲ್ ರಾಯ್ ಹೆಸರು ಪ್ರಸ್ತಾಪವಾಗಿತ್ತು. ಬಂಧನ ಭೀತಿಯಲ್ಲಿದ್ದ ಸುದೀಪ್ತ್ ಸೇನ್ ಅವರನ್ನು ಕೊಲ್ಕೊತ್ತಾದಿಂದ ಹೊರಗೆ ಪಾರಾಗಿ ಹೋಗಲು ರಾಯ್ ಹೇಗೆ ನೆರವು ನೀಡಿದ್ದರು ಎಂಬುದನ್ನು ಚಾಲಕ ವಿವರಿಸಿದ್ದ.

ಟಿಎಂಸಿ ಸಂಸದ ಕುನಾಲ್ ಘೋಷ್ ಶಾರದಾ ಹಗರಣ ಕುರಿತಂತೆ ರಾಯ್ ವಿರುದ್ಧ ಅಪಾದನೆ ಮಾಡಿದ ನಂತರ ರಾಯ್‌ಗೆ ಸಿಬಿಐ ಸಮನ್ಸ್ ನೀಡಿತ್ತು. ಶಾರದಾ ಹಗರಣಕ್ಕೆ ಸಂಬಂಧಿಸಿ 2013ರಲ್ಲೇ ಮೋಸ, ಕ್ರಿಮಿನಲ್ ಸಂಚು ಆರೋಪದ ಮೇಲೆ ಘೋಷ್ ಅವರನ್ನು ಬಂಧಿಸಲಾಗಿತ್ತು. ಬಂಧನವಾದ ಒಂದು ತಾಸಿನಲ್ಲೇ ಘೋಷ್ 12 ಜನರ ಹೆಸರನ್ನು ಹೇಳಿದ್ದು, ಅದರಲ್ಲಿ ಮುಕುಲ್ ರಾಯ್ ಹೆಸರು ಕೂಡ ಸೇರಿತ್ತು.

2015ರಲ್ಲೇ ಮುಕುಲ್ ರಾಯ್ ಬಿಜೆಪಿಗೆ ಹತ್ತಿರವಾಗತೊಡಗಿದರು. 2017ರ ನವೆಂಬರ್ 3ರಂದು ರಾಯ್ ಬಿಜೆಪಿ ಸೇರಿದರು. ಬಿಜೆಪಿಗೆ ಹತ್ತಿರವಾದ ನಂತರ ರಾಯ್ ಪರ ಮೃದು ಧೋರಣೆ ತಳೆದಿದ್ದ ಸಿಬಿಐ ಬಿಜೆಪಿ ಸೇರಿದ ನಂತರ ಅವರನ್ನು ವಿಚಾರಣೆಗೆ ಕರೆಯುತ್ತಲೇ ಇಲ್ಲ.
ಅಸ್ಸಾಂನ ಹಿಮಂತ ಶರ್ಮಾರನ್ನು ನವೆಂಬರ್ 26, 2014ರಂದು ವಿಚಾರಣೆ ಮಾಡಲಾಗಿತ್ತು. ಅದಕ್ಕೂ ಎರಡು ತಿಂಗಳು ಮೊದಲು ಶರ್ಮಾ ಮನೆ ಮತ್ತು ಆತನ ಪತ್ನಿಯ ಟಿವಿ ಚಾನೆಲ್ ಕಚೇರಿ ಮೇಲೆ ಸಿಬಿಐ ದಾಳಿ ನಡೆಸಿತ್ತು. ಅಸ್ಸಾಂನಲ್ಲಿ ತಮ್ಮ ಸಂಸ್ಥೆಯ ಕಾರ್ಯಾಚರಣೆ ಸುಗಮವಾಗಿ ನಡೆಯಲು ಪ್ರತಿ ತಿಂಗಳು ತಮ್ಮಿಂದ 20 ಲಕ್ಷ ರೂ.ಗಳನ್ನು ಶರ್ಮಾ ಪಡೆಯುತ್ತಿದ್ದರು ಎಂದು ಶಾರದಾ ಸಂಸ್ಥೆಯ ಮುಖ್ಯಸ್ಥ ಸುದೀಪ್ತ್ ಸೇನ್ ಆರೋಪಿಸಿದ್ದರು.

2015ರ ಅಗಸ್ಟ್ನಲ್ಲಿ ಶರ್ಮಾ ಬಿಜೆಪಿ ಸೇರಿದರು. ಆ ನಂತರ ಅವರನ್ನು ವಿಚಾರಣೆಗೆ ಕರೆಯಲೇ ಇಲ್ಲ. ಯಾವ ಚಾರ್ಜ್ಶೀಟಿನಲ್ಲೂ ಅವರ ಹೆಸರನ್ನು ಉಲ್ಲೇಖಿಸಲಿಲ್ಲ.
ಅಂದರೆ, ಬಿಜೆಪಿ ಸಿಬಿಐ ಅನ್ನು ತನ್ನ ಅನುಕೂಲಕ್ಕೆ ದುರುಪಯೋಗ ಮಾಡಿಕೊಳ್ಳುತ್ತಿದೆ ಎಂಬುದು ಪಕ್ಕಾ ಆಗಿತಲ್ಲವೇ?

(ಕೃಪೆ: ನ್ಯೂ ಇಂಡಿಯನ್ ಎಕ್ಸ್ಪ್ರೆಸ್)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...