Homeಅಂಕಣಗಳುವಿಶ್ವಾಸಾರ್ಹತೆ ಕಳೆದುಕೊಂಡ ತನಿಖಾ ಸಂಸ್ಥೆಗಳು, ಬಿಜೆಪಿ ಸೇರಿದವರಿಗೆ ಸಿಬಿಐ ಸ್ಮೂತ್!

ವಿಶ್ವಾಸಾರ್ಹತೆ ಕಳೆದುಕೊಂಡ ತನಿಖಾ ಸಂಸ್ಥೆಗಳು, ಬಿಜೆಪಿ ಸೇರಿದವರಿಗೆ ಸಿಬಿಐ ಸ್ಮೂತ್!

- Advertisement -
- Advertisement -

ಕೊಲ್ಕೊತ್ತಾದ ಪೊಲೀಸ್ ಕಮೀಷನರ್ ರಾಜೀವ ಕುಮಾರ್ ಅವರ ಕಚೇರಿಯ ಮೇಲೆ ದಾಳಿ ಮಾಡಲು ಹೋದ ಸಿಬಿಐಗೆ ಮುಖಭಂಗವಾಗಿದೆ. ಈಗ ಸುಪ್ರಿಂಕೋರ್ಟ್ ರಾಜೀವ ಕುಮಾರ್ ಅವರನ್ನು ಬಂಧಿಸದೇ ವಿಚಾರಣೆ ನಡೆಸಲು ಸೂಚಿಸಿದೆ.
ಸಿಬಿಐ ಅನ್ನು ಕೇಂದ್ರ ಹೇಗೆ ದುರ್ಬಳಕೆ ಮಾಡಿಕೊಳ್ಳುತ್ತಿದೆ ಎನ್ನುವುದಕ್ಕೆ ಈ ಶಾರದಾ ಚಿಟ್‌ಫಂಡ್ ಹಗರಣದ ತನಿಖೆಯೇ ಸಾಕ್ಷಿಯಾಗಿದೆ. ಈ ಹಗರಣದಲ್ಲಿ ಆರೋಪಿಗಳೆಂದು ಪರಿಗಣಿತರಾದವರು ಬಿಜೆಪಿ ಸೇರಿದ ಮೇಲೆ ಅವರ ಮೇಲಿನ ತನಿಖೆಯನ್ನು ಮೃದುಗೊಳಿಸಲಾಗಿದೆ ಅಥವಾ ನಿಲ್ಲಿಸಿಯೇ ಬಿಡಲಾಗಿದೆ.

2015ರಲ್ಲಿ ಮಾಜಿ ರೈಲ್ವೆ ಸಚಿವ, ಅಂದಿನ ಟಿಎಂಸಿ ನಾಯಕ ಮುಕುಲ್ ರಾಯ್ ವಿರುದ್ಧ ಸಿಬಿಐ ತನಿಖೆ ಶುರು ಮಾಡಿತು. ಆದರೆ ಮುಕುಲ್‌ರಾಯ್ ಬಿಜೆಪಿ ಸೇರಿದ ನಂತರ ತನಿಖೆಗೆ ಮಂಕು ಬಡಿದಿದೆ. ಹಾಗೆಯೇ ಅಸ್ಸಾಂನ ಸಚಿವ ಹಿಮಂತ ಬಿಸ್ವಾಸ್ ಶರ್ಮಾ ಮನೆ ಮೇಲೂ ಸಿಬಿಐ ದಾಳಿ ಮಾಡಿತ್ತು. ಶರ್ಮಾ ಬಿಜೆಪಿ ಸೇರಿದ ನಂತರ ಯಾವ ಚಾರ್ಜ್ಶೀಟಿನಲ್ಲೂ ಅವರ ಹೆಸರನ್ನು ಸೇರಿಸಲೇ ಇಲ್ಲ.
ಸುಪ್ರಿಂಕೋಟ್ ಆದೇಶದಂತೆ ಸಿಬಿಐ ಶಾರದಾ ಹಗರಣದ ತನಿಖೆಯನ್ನು 2014ರಲ್ಲಿ ಆರಂಭಿಸಿತು. 2015ರ ಜನೆವರಿ 30ರಂದು ಸಿಬಿಐ ಮುಕುಲ್ ರಾಯ್ ಅವರ ವಿಚಾರಣೆ ನಡೆಸಿತ್ತು. ಶಾರದಾ ಸಂಸ್ಥೆಯ ನ್ಯೂಸ್ ಆಪರೇಷನ್ಸ್ ಮತ್ತು ಸಂಸ್ಥೆಯ ಮುಖ್ಯಸ್ಥ ಸುದೀಪ್ತ್ ಸೇನ್ ಜೊತೆಗಿನ ಆತ್ಮೀಯ ಸಂಬಂಧಗಳ ಕುರಿತಂತೆ ರಾಯ್ ಅವರ ವಿರುದ್ಧ ತನಿಖೆ ಆರಂಭಿಸಲಾಗಿತ್ತು. ಸುದೀಪ್ತ್ ಸೇನ್ ಅವರ ಕಾರು ಚಾಲಕನ ಹೇಳಿಕೆಯಲ್ಲಿ ಮುಕುಲ್ ರಾಯ್ ಹೆಸರು ಪ್ರಸ್ತಾಪವಾಗಿತ್ತು. ಬಂಧನ ಭೀತಿಯಲ್ಲಿದ್ದ ಸುದೀಪ್ತ್ ಸೇನ್ ಅವರನ್ನು ಕೊಲ್ಕೊತ್ತಾದಿಂದ ಹೊರಗೆ ಪಾರಾಗಿ ಹೋಗಲು ರಾಯ್ ಹೇಗೆ ನೆರವು ನೀಡಿದ್ದರು ಎಂಬುದನ್ನು ಚಾಲಕ ವಿವರಿಸಿದ್ದ.

ಟಿಎಂಸಿ ಸಂಸದ ಕುನಾಲ್ ಘೋಷ್ ಶಾರದಾ ಹಗರಣ ಕುರಿತಂತೆ ರಾಯ್ ವಿರುದ್ಧ ಅಪಾದನೆ ಮಾಡಿದ ನಂತರ ರಾಯ್‌ಗೆ ಸಿಬಿಐ ಸಮನ್ಸ್ ನೀಡಿತ್ತು. ಶಾರದಾ ಹಗರಣಕ್ಕೆ ಸಂಬಂಧಿಸಿ 2013ರಲ್ಲೇ ಮೋಸ, ಕ್ರಿಮಿನಲ್ ಸಂಚು ಆರೋಪದ ಮೇಲೆ ಘೋಷ್ ಅವರನ್ನು ಬಂಧಿಸಲಾಗಿತ್ತು. ಬಂಧನವಾದ ಒಂದು ತಾಸಿನಲ್ಲೇ ಘೋಷ್ 12 ಜನರ ಹೆಸರನ್ನು ಹೇಳಿದ್ದು, ಅದರಲ್ಲಿ ಮುಕುಲ್ ರಾಯ್ ಹೆಸರು ಕೂಡ ಸೇರಿತ್ತು.

2015ರಲ್ಲೇ ಮುಕುಲ್ ರಾಯ್ ಬಿಜೆಪಿಗೆ ಹತ್ತಿರವಾಗತೊಡಗಿದರು. 2017ರ ನವೆಂಬರ್ 3ರಂದು ರಾಯ್ ಬಿಜೆಪಿ ಸೇರಿದರು. ಬಿಜೆಪಿಗೆ ಹತ್ತಿರವಾದ ನಂತರ ರಾಯ್ ಪರ ಮೃದು ಧೋರಣೆ ತಳೆದಿದ್ದ ಸಿಬಿಐ ಬಿಜೆಪಿ ಸೇರಿದ ನಂತರ ಅವರನ್ನು ವಿಚಾರಣೆಗೆ ಕರೆಯುತ್ತಲೇ ಇಲ್ಲ.
ಅಸ್ಸಾಂನ ಹಿಮಂತ ಶರ್ಮಾರನ್ನು ನವೆಂಬರ್ 26, 2014ರಂದು ವಿಚಾರಣೆ ಮಾಡಲಾಗಿತ್ತು. ಅದಕ್ಕೂ ಎರಡು ತಿಂಗಳು ಮೊದಲು ಶರ್ಮಾ ಮನೆ ಮತ್ತು ಆತನ ಪತ್ನಿಯ ಟಿವಿ ಚಾನೆಲ್ ಕಚೇರಿ ಮೇಲೆ ಸಿಬಿಐ ದಾಳಿ ನಡೆಸಿತ್ತು. ಅಸ್ಸಾಂನಲ್ಲಿ ತಮ್ಮ ಸಂಸ್ಥೆಯ ಕಾರ್ಯಾಚರಣೆ ಸುಗಮವಾಗಿ ನಡೆಯಲು ಪ್ರತಿ ತಿಂಗಳು ತಮ್ಮಿಂದ 20 ಲಕ್ಷ ರೂ.ಗಳನ್ನು ಶರ್ಮಾ ಪಡೆಯುತ್ತಿದ್ದರು ಎಂದು ಶಾರದಾ ಸಂಸ್ಥೆಯ ಮುಖ್ಯಸ್ಥ ಸುದೀಪ್ತ್ ಸೇನ್ ಆರೋಪಿಸಿದ್ದರು.

2015ರ ಅಗಸ್ಟ್ನಲ್ಲಿ ಶರ್ಮಾ ಬಿಜೆಪಿ ಸೇರಿದರು. ಆ ನಂತರ ಅವರನ್ನು ವಿಚಾರಣೆಗೆ ಕರೆಯಲೇ ಇಲ್ಲ. ಯಾವ ಚಾರ್ಜ್ಶೀಟಿನಲ್ಲೂ ಅವರ ಹೆಸರನ್ನು ಉಲ್ಲೇಖಿಸಲಿಲ್ಲ.
ಅಂದರೆ, ಬಿಜೆಪಿ ಸಿಬಿಐ ಅನ್ನು ತನ್ನ ಅನುಕೂಲಕ್ಕೆ ದುರುಪಯೋಗ ಮಾಡಿಕೊಳ್ಳುತ್ತಿದೆ ಎಂಬುದು ಪಕ್ಕಾ ಆಗಿತಲ್ಲವೇ?

(ಕೃಪೆ: ನ್ಯೂ ಇಂಡಿಯನ್ ಎಕ್ಸ್ಪ್ರೆಸ್)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...

ನೀಟ್‌ ಪ್ರತಿಭಟನೆಯಲ್ಲಿ ಉಮರ್ ಖಾಲಿದ್‌ಗೆ ಬೆಂಬಲ; ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ ಗೋವಾ ಪೊಲೀಸರು

ಗೋವಾದ ಪಣಜಿಯಲ್ಲಿ ನಡೆದ ನೀಟ್-ಯುಜಿ ಪ್ರತಿಭಟನೆಯಲ್ಲಿ ಉಮರ್ ಖಾಲಿದ್ ಪರ ಘೋಷಣೆಗಳನ್ನು ಕೂಗಿದ ಕೆಲವು ವಿದ್ಯಾರ್ಥಿಗಳ ಪ್ರತಿಭಟನೆ ಹಿಂದಿನ ಹಣಕಾಸು ಮತ್ತು ಉದ್ದೇಶದ ಬಗ್ಗೆ ಗೋವಾ ಪೊಲೀಸರು ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು...