Homeಅಂಕಣಗಳುವಿಶ್ವಾಸಾರ್ಹತೆ ಕಳೆದುಕೊಂಡ ತನಿಖಾ ಸಂಸ್ಥೆಗಳು, ಬಿಜೆಪಿ ಸೇರಿದವರಿಗೆ ಸಿಬಿಐ ಸ್ಮೂತ್!

ವಿಶ್ವಾಸಾರ್ಹತೆ ಕಳೆದುಕೊಂಡ ತನಿಖಾ ಸಂಸ್ಥೆಗಳು, ಬಿಜೆಪಿ ಸೇರಿದವರಿಗೆ ಸಿಬಿಐ ಸ್ಮೂತ್!

- Advertisement -
- Advertisement -

ಕೊಲ್ಕೊತ್ತಾದ ಪೊಲೀಸ್ ಕಮೀಷನರ್ ರಾಜೀವ ಕುಮಾರ್ ಅವರ ಕಚೇರಿಯ ಮೇಲೆ ದಾಳಿ ಮಾಡಲು ಹೋದ ಸಿಬಿಐಗೆ ಮುಖಭಂಗವಾಗಿದೆ. ಈಗ ಸುಪ್ರಿಂಕೋರ್ಟ್ ರಾಜೀವ ಕುಮಾರ್ ಅವರನ್ನು ಬಂಧಿಸದೇ ವಿಚಾರಣೆ ನಡೆಸಲು ಸೂಚಿಸಿದೆ.
ಸಿಬಿಐ ಅನ್ನು ಕೇಂದ್ರ ಹೇಗೆ ದುರ್ಬಳಕೆ ಮಾಡಿಕೊಳ್ಳುತ್ತಿದೆ ಎನ್ನುವುದಕ್ಕೆ ಈ ಶಾರದಾ ಚಿಟ್‌ಫಂಡ್ ಹಗರಣದ ತನಿಖೆಯೇ ಸಾಕ್ಷಿಯಾಗಿದೆ. ಈ ಹಗರಣದಲ್ಲಿ ಆರೋಪಿಗಳೆಂದು ಪರಿಗಣಿತರಾದವರು ಬಿಜೆಪಿ ಸೇರಿದ ಮೇಲೆ ಅವರ ಮೇಲಿನ ತನಿಖೆಯನ್ನು ಮೃದುಗೊಳಿಸಲಾಗಿದೆ ಅಥವಾ ನಿಲ್ಲಿಸಿಯೇ ಬಿಡಲಾಗಿದೆ.

2015ರಲ್ಲಿ ಮಾಜಿ ರೈಲ್ವೆ ಸಚಿವ, ಅಂದಿನ ಟಿಎಂಸಿ ನಾಯಕ ಮುಕುಲ್ ರಾಯ್ ವಿರುದ್ಧ ಸಿಬಿಐ ತನಿಖೆ ಶುರು ಮಾಡಿತು. ಆದರೆ ಮುಕುಲ್‌ರಾಯ್ ಬಿಜೆಪಿ ಸೇರಿದ ನಂತರ ತನಿಖೆಗೆ ಮಂಕು ಬಡಿದಿದೆ. ಹಾಗೆಯೇ ಅಸ್ಸಾಂನ ಸಚಿವ ಹಿಮಂತ ಬಿಸ್ವಾಸ್ ಶರ್ಮಾ ಮನೆ ಮೇಲೂ ಸಿಬಿಐ ದಾಳಿ ಮಾಡಿತ್ತು. ಶರ್ಮಾ ಬಿಜೆಪಿ ಸೇರಿದ ನಂತರ ಯಾವ ಚಾರ್ಜ್ಶೀಟಿನಲ್ಲೂ ಅವರ ಹೆಸರನ್ನು ಸೇರಿಸಲೇ ಇಲ್ಲ.
ಸುಪ್ರಿಂಕೋಟ್ ಆದೇಶದಂತೆ ಸಿಬಿಐ ಶಾರದಾ ಹಗರಣದ ತನಿಖೆಯನ್ನು 2014ರಲ್ಲಿ ಆರಂಭಿಸಿತು. 2015ರ ಜನೆವರಿ 30ರಂದು ಸಿಬಿಐ ಮುಕುಲ್ ರಾಯ್ ಅವರ ವಿಚಾರಣೆ ನಡೆಸಿತ್ತು. ಶಾರದಾ ಸಂಸ್ಥೆಯ ನ್ಯೂಸ್ ಆಪರೇಷನ್ಸ್ ಮತ್ತು ಸಂಸ್ಥೆಯ ಮುಖ್ಯಸ್ಥ ಸುದೀಪ್ತ್ ಸೇನ್ ಜೊತೆಗಿನ ಆತ್ಮೀಯ ಸಂಬಂಧಗಳ ಕುರಿತಂತೆ ರಾಯ್ ಅವರ ವಿರುದ್ಧ ತನಿಖೆ ಆರಂಭಿಸಲಾಗಿತ್ತು. ಸುದೀಪ್ತ್ ಸೇನ್ ಅವರ ಕಾರು ಚಾಲಕನ ಹೇಳಿಕೆಯಲ್ಲಿ ಮುಕುಲ್ ರಾಯ್ ಹೆಸರು ಪ್ರಸ್ತಾಪವಾಗಿತ್ತು. ಬಂಧನ ಭೀತಿಯಲ್ಲಿದ್ದ ಸುದೀಪ್ತ್ ಸೇನ್ ಅವರನ್ನು ಕೊಲ್ಕೊತ್ತಾದಿಂದ ಹೊರಗೆ ಪಾರಾಗಿ ಹೋಗಲು ರಾಯ್ ಹೇಗೆ ನೆರವು ನೀಡಿದ್ದರು ಎಂಬುದನ್ನು ಚಾಲಕ ವಿವರಿಸಿದ್ದ.

ಟಿಎಂಸಿ ಸಂಸದ ಕುನಾಲ್ ಘೋಷ್ ಶಾರದಾ ಹಗರಣ ಕುರಿತಂತೆ ರಾಯ್ ವಿರುದ್ಧ ಅಪಾದನೆ ಮಾಡಿದ ನಂತರ ರಾಯ್‌ಗೆ ಸಿಬಿಐ ಸಮನ್ಸ್ ನೀಡಿತ್ತು. ಶಾರದಾ ಹಗರಣಕ್ಕೆ ಸಂಬಂಧಿಸಿ 2013ರಲ್ಲೇ ಮೋಸ, ಕ್ರಿಮಿನಲ್ ಸಂಚು ಆರೋಪದ ಮೇಲೆ ಘೋಷ್ ಅವರನ್ನು ಬಂಧಿಸಲಾಗಿತ್ತು. ಬಂಧನವಾದ ಒಂದು ತಾಸಿನಲ್ಲೇ ಘೋಷ್ 12 ಜನರ ಹೆಸರನ್ನು ಹೇಳಿದ್ದು, ಅದರಲ್ಲಿ ಮುಕುಲ್ ರಾಯ್ ಹೆಸರು ಕೂಡ ಸೇರಿತ್ತು.

2015ರಲ್ಲೇ ಮುಕುಲ್ ರಾಯ್ ಬಿಜೆಪಿಗೆ ಹತ್ತಿರವಾಗತೊಡಗಿದರು. 2017ರ ನವೆಂಬರ್ 3ರಂದು ರಾಯ್ ಬಿಜೆಪಿ ಸೇರಿದರು. ಬಿಜೆಪಿಗೆ ಹತ್ತಿರವಾದ ನಂತರ ರಾಯ್ ಪರ ಮೃದು ಧೋರಣೆ ತಳೆದಿದ್ದ ಸಿಬಿಐ ಬಿಜೆಪಿ ಸೇರಿದ ನಂತರ ಅವರನ್ನು ವಿಚಾರಣೆಗೆ ಕರೆಯುತ್ತಲೇ ಇಲ್ಲ.
ಅಸ್ಸಾಂನ ಹಿಮಂತ ಶರ್ಮಾರನ್ನು ನವೆಂಬರ್ 26, 2014ರಂದು ವಿಚಾರಣೆ ಮಾಡಲಾಗಿತ್ತು. ಅದಕ್ಕೂ ಎರಡು ತಿಂಗಳು ಮೊದಲು ಶರ್ಮಾ ಮನೆ ಮತ್ತು ಆತನ ಪತ್ನಿಯ ಟಿವಿ ಚಾನೆಲ್ ಕಚೇರಿ ಮೇಲೆ ಸಿಬಿಐ ದಾಳಿ ನಡೆಸಿತ್ತು. ಅಸ್ಸಾಂನಲ್ಲಿ ತಮ್ಮ ಸಂಸ್ಥೆಯ ಕಾರ್ಯಾಚರಣೆ ಸುಗಮವಾಗಿ ನಡೆಯಲು ಪ್ರತಿ ತಿಂಗಳು ತಮ್ಮಿಂದ 20 ಲಕ್ಷ ರೂ.ಗಳನ್ನು ಶರ್ಮಾ ಪಡೆಯುತ್ತಿದ್ದರು ಎಂದು ಶಾರದಾ ಸಂಸ್ಥೆಯ ಮುಖ್ಯಸ್ಥ ಸುದೀಪ್ತ್ ಸೇನ್ ಆರೋಪಿಸಿದ್ದರು.

2015ರ ಅಗಸ್ಟ್ನಲ್ಲಿ ಶರ್ಮಾ ಬಿಜೆಪಿ ಸೇರಿದರು. ಆ ನಂತರ ಅವರನ್ನು ವಿಚಾರಣೆಗೆ ಕರೆಯಲೇ ಇಲ್ಲ. ಯಾವ ಚಾರ್ಜ್ಶೀಟಿನಲ್ಲೂ ಅವರ ಹೆಸರನ್ನು ಉಲ್ಲೇಖಿಸಲಿಲ್ಲ.
ಅಂದರೆ, ಬಿಜೆಪಿ ಸಿಬಿಐ ಅನ್ನು ತನ್ನ ಅನುಕೂಲಕ್ಕೆ ದುರುಪಯೋಗ ಮಾಡಿಕೊಳ್ಳುತ್ತಿದೆ ಎಂಬುದು ಪಕ್ಕಾ ಆಗಿತಲ್ಲವೇ?

(ಕೃಪೆ: ನ್ಯೂ ಇಂಡಿಯನ್ ಎಕ್ಸ್ಪ್ರೆಸ್)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...

TMC ತೊರೆದು BJP ಸೇರಿದ ಮಾಜಿ ಸಂಸದರಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ರಾಜ್ಯಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಕೆಲವೇ ವಾರಗಳಲ್ಲಿ, ಆ ಮೂವರು ಮಾಜಿ ಸಂಸದರು ಈಗ ಬೇರೆ ಬಣ್ಣದ (BJP) ಶಾಲು ಧರಿಸಿ ಮತ್ತೆ...

ಪಶ್ಚಿಮ ಬಂಗಾಳ: ಟಿಎಂಸಿ ಖಾತೆ ಫ್ರೀಜ್ ಮಾಡಿದ್ದ ಪೊಲೀಸರಿಗೆ ಕಲ್ಕತ್ತಾ ಹೈಕೋರ್ಟ್ ತರಾಟೆ!

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಹಲವು ಬ್ಯಾಂಕ್ ಖಾತೆಗಳನ್ನು ಜಾರಿ ನಿರ್ದೇಶನಾಲಯ (ಇಡಿ) ಮುಟ್ಟುಗೋಲು ಹಾಕಿಕೊಂಡ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು ಮುಟ್ಟುಗೋಲು ಹಾಕಿಕೊಂಡಿದ್ದ ಪಕ್ಷದ ಮೂರು ಬ್ಯಾಂಕ್...

ಬಂಗಾಳದ ಬಿಸಿಯೂಟ ಇಸ್ಕಾನ್‌ಗೆ ಹಸ್ತಾಂತರವಿಲ್ಲ: ಸರ್ಕಾರದ ಸ್ಪಷ್ಟನೆ, ಕಲ್ಕತ್ತಾ ಹೈಕೋರ್ಟ್‌ನಿಂದ ಅಫಿಡವಿಟ್‌ಗೆ ನಿರ್ದೇಶನ 

ಕೋಲ್ಕತ್ತಾ: ರಾಜ್ಯದ ಶಾಲೆಗಳಲ್ಲಿ ಜಾರಿಯಲ್ಲಿರುವ ಪಿಎಂ-ಪೋಷಣ್ (ಮಧ್ಯಾಹ್ನದ ಬಿಸಿಯೂಟ) ಯೋಜನೆಯ ನಿರ್ವಹಣೆಯನ್ನು ಇಸ್ಕಾನ್ ಸಂಸ್ಥೆಗೆ ಹಸ್ತಾಂತರಿಸುವ ಯಾವುದೇ ಅನುಮೋದಿತ ಪ್ರಸ್ತಾಪ ಸರ್ಕಾರಕ್ಕಿಲ್ಲ ಎಂದು ಪಶ್ಚಿಮ ಬಂಗಾಳ ಸರ್ಕಾರ ಸ್ಪಷ್ಟಪಡಿಸಿದೆ. ಈ ಕುರಿತು ಅಫಿಡವಿಟ್...