Homeಕರ್ನಾಟಕಮೈಸೂರಲ್ಲೂ ಸಾಹಸಸಿಂಹನ ಬೆಂಬಿಡದ ಪಜೀತಿ

ಮೈಸೂರಲ್ಲೂ ಸಾಹಸಸಿಂಹನ ಬೆಂಬಿಡದ ಪಜೀತಿ

- Advertisement -
- Advertisement -

| ಅನಿಲ್.ಎಸ್ ಚಲ್ಯ |

ಆತ ಒಬ್ಬ ನಟ ಅಥವಾ ಬೇರೆ ಯಾರೇ ಆಗಿರಲಿ ಸರ್ಕಾರ ತಾನೇ ಸ್ಮಾರಕ ನಿರ್ಮಾಣ ಮಾಡುವುದಾಗಿಯೋ ಅಥವಾ ಬೇರೇನೋ ಒಂದು ನಿರ್ಧಾರವನ್ನು ಘೋಷಿಸಿದ ಮೇಲೆ ಅದಕ್ಕೆ ಬದ್ಧವಾಗಿ ಕಾರ್ಯನಿರ್ವಹಿಸಬೇಕು. ಹೀಗೆ ಹತ್ತಾರು ವರ್ಷಗಳ ಕಾಲ ಒಂದು ವಿಷಯವನ್ನು ಚರ್ಚಾ ಸಾಮಗ್ರಿಯನ್ನಾಗಿಸುವುದು ಶೋಭೆಯಲ್ಲ. ವಿಷ್ಣು ಸ್ಮಾರಕ ನಿರ್ಮಾಣದ ವಿಚಾರದಲ್ಲಾಗುತ್ತಿರುವ ಚರ್ಚೆ ವಿಳಂಬಗಳು ಅಭಿಮಾನಿಗಳಿಗಷ್ಟೇ ಅಲ್ಲ ಸಾಮಾನ್ಯವಾಗಿ ನೋಡುವವರಿಗೂ ಅಸಹನೆಯನ್ನು ಮೂಡಿಸುತ್ತದೆ

ತುತ್ತು ಅನ್ನ ತಿನ್ನೋಕೆ, ಬೊಗಸೆ ನೀರು ಕುಡಿಯೋಕೆ, ತುಂಡುಬಟ್ಟೆ ಸಾಕು ನನ್ನ ಮಾನ ಮುಚ್ಚೋಕೆ, ಅಂಗೈ ಅಗಲ ಜಾಗ ಸಾಕು ಹಾಯಾಗಿರೋಕೆ ಎಂದು ಹಾಡಿ ಜೀವನದ ಸೂಕ್ಷ್ಮತೆಯನ್ನು ಸಾರಿದ್ದ ಕನ್ನಡ ಚಿತ್ರರಂಗದ ಮೇರು ನಟ ವಿಷ್ಣುವರ್ಧನ್ ಅಭಿಮಾನಿಗಳನ್ನಗಲಿ ಹತ್ತು ವರ್ಷಗಳೇ ಕಳೆದಿವೆ. ವಿಷ್ಣುವಿನ ಸ್ಮಾರಕಕ್ಕೆ ಅಂಗೈ ಅಗಲ ಜಾಗವೂ ಸಿಗದಂತಹ ಪರಿಸ್ಥಿತಿ ನಿರ್ಮಾಣವಾಗಿರುವುದು ಶೋಚÀನೀಯ. ಸರ್ಕಾರ, ಅಭಿಮಾನಿಗಳು ಮತ್ತು ಕುಟುಂಬದವರ ಅಸಮಾಧಾನ ಅಸಹಕಾರಗಳಿಂದ ಒಬ್ಬ ಧೀಮಂತ ನಟ ದಿನನಿತ್ಯದ ಚರ್ಚೆಯ ವಿಷಯವಾಗಿದ್ದಾರೆ. ವಿಷ್ಣು ಕುಚುಕು ಗೆಳೆಯ ಅಂಬರೀಶ್ ಕೆಲವು ತಿಂಗಳುಗಳ ಹಿಂದೆ ಇಹಲೋಕ ತ್ಯಜಿಸಿದಾಗ ಅಂಬರೀಶ್ ಸ್ಮಾರಕ ನಿರ್ಮಾಣದ ವಿಷಯ ಪ್ರಸ್ತಾಪವಾಗಿತ್ತು. ಆಗಲೂ ಸಹ ವಿಷ್ಣು ಸ್ಮಾರಕ ನಿರ್ಮಾಣದ ಚರ್ಚೆ ಮುನ್ನೆಲೆಗೆ ಬಂದಿತ್ತು..

ಅಂಬರೀಶ್ ಸ್ಮಾರಕದ ಜೊತೆಗೆ ಕಂಠೀರವ ಸ್ಟುಡಿಯೋದಲ್ಲೇ ವಿಷ್ಣು ಸ್ಮಾರಕವನ್ನು ನಿರ್ಮಿಸುವ ನಿರ್ಧಾರವನ್ನು ಸರ್ಕಾರ ವ್ಯಕ್ತಪಡಿಸಿತ್ತು. ಇದಕ್ಕೆ ಅಭಿಮಾನಿಗಳು ಮತ್ತು ವಿಷ್ಣು ಕುಟುಂಬದಿಂದ ತೀವ್ರ ವಿರೋಧ ವ್ಯಕ್ತವಾದ ಮೇಲೆ ಸರ್ಕಾರ ಆ ವಿಚಾರದಲ್ಲಿ ತುಟಿ ಬಿಚ್ಚಲಿಲ್ಲ. ಸ್ಮಾರಕ ನಿರ್ಮಾಣಕ್ಕೆ ಸರ್ಕಾರ ಹಿಂದೇಟು ಹಾಕುತ್ತಿರುವುದನ್ನು ನೋಡಿ ಬೇಸರಗೊಂಡ ಅಭಿಮಾನಿಯೊಬ್ಬ ತಾನೆ ಸ್ಮಾರಕಕ್ಕೆ ಜಾಗ ಕೊಡುವುದಾಗಿ ಹೇಳಿ ಸರ್ಕಾರದ ಮೇಲಿನ ಆಕ್ರೋಶ ವ್ಯಕ್ತಪಡಿಸಿದ್ದ. ಈ ಮಧ್ಯೆ ವಿಷ್ಣು ಅಳಿಯ ಅನಿರುದ್ ಮೈಸೂರಿನಲ್ಲಿ ದಿಢೀರನೆ ಭೂಮಿ ಪೂಜೆಗೆ ಮುಂದಾಗಿರುವುದರಿಂದ ಸ್ಮಾರಕದ ವಿಚಾರ ಮತ್ತೆ ವಿವಾದದ ರೂಪ ಪಡೆದಿದೆ..

ಬೆಂಗಳೂರಿನ ಅಭಿಮಾನ್ ಸ್ಟೂಡಿಯೋದಲ್ಲಿ 2009ರಲ್ಲಿ ವಿಷ್ಣು ಅಂತಿಮ ಸಂಸ್ಕಾರವನ್ನು ಮಾಡಲಾಗಿತ್ತು. ಅಭಿಮಾನ್ ಸ್ಟುಡಿಯೋ ನಿರ್ಮಾಣಕ್ಕಾಗಿ 20 ಎಕರೆ ಜಾಗವನ್ನು ಸರ್ಕಾರವೇ ಬಾಲಕೃಷ್ಣವರಿಗೆ ಮಂಜೂರು ಮಾಡಿತ್ತು. ಅದರಲ್ಲಿ 10 ಎಕರೆ ಜಾಗವನ್ನು ಬಾಲಕೃಷ್ಣರ ಮಗ ಮಾರಾಟ ಮಾಡಲು ಮುಂದಾಗಿದ್ದರು. ಹಾಗಾಗಿ ಅಭಿಮಾನ್ ಸ್ಟುಡಿಯೋ ಬಾಲಣ್ಣನ ಕುಟುಂಬದ ವ್ಯಾಜ್ಯವಾಗಿ ಹೈ ಕೋರ್ಟ್ ಮೆಟ್ಟಿಲೇರಿತ್ತು. ಆದರೂ ಅಭಿಮಾನ್ ಸ್ಟುಡಿಯೋದಲ್ಲೇ ಸಂಸ್ಕಾರ ಮಾಡಿದ್ದರಿಂದ ವಿಷ್ಣು ಸ್ಮಾರಕವನ್ನು ಅಲ್ಲಯೇ ಕಟ್ಟಲು ಸರ್ಕಾರ ಮುಂದಾಗಿತ್ತು. ವ್ಯಾಜ್ಯವಿದ್ದರಿಂದ ಹೈ ಕೋರ್ಟ್ ಸ್ಮಾರಕ ನಿರ್ಮಾಣಕ್ಕೆ ತಡೆ ನೀಡಿತ್ತು. ಹೀಗಾಗಿ ವಿಷ್ಣು ಕುಟುಂಬ ಮೈಸೂರಿನಲ್ಲಿ ಸ್ಮಾರಕ ನಿರ್ಮಾಣ ಮಾಡುವಂತೆ ಕೋರಿಕೆ ಸಲ್ಲಿಸಿತ್ತು. ಅದರಂತೆ 2016 ಮೈಸೂರಿನಲ್ಲಿ 5 ಎಕರೆ ಜಾಗವನ್ನು ಸರ್ಕಾರ ಮಂಜೂರು ಮಾಡಿತ್ತು. ಹೀಗೆ ಅವರ್ ಬಿಟ್ ಇವರ್ ಬಿಟ್ ಇನ್ಯಾರು ಎಂಬಂತೆ ಅಲ್ಲಿಂದ ಇಲ್ಲಿಗೆ, ಇಲ್ಲಿಂದ ಅಲ್ಲಿಗೆ ಓಡಾಡಿಸುತ್ತಾ ಸರ್ಕಾರ ಕಣ್ಣಾಮುಚ್ಚಾಲೆಯ ಆಟವಾಡುತ್ತಿದರೆ, ಇತ್ತ ಮೈಸೂರಿನಲ್ಲಿ ರೈತರು ತಮ್ಮ ಜಾಗವನ್ನು ಬಿಟ್ಟುಕೊಡಲು ನಿರಾಕರಿಸಿ, ಕೋರ್ಟ್ ಮೆಟ್ಟಿಲೇರಿದ್ದರು.

ಯಾವುದೇ ಅಭಿವೃದ್ಧಿ ಯೋಜನೆಗಳಿಗೆ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳಬೇಕಾದರೆ ರೈತರ ಅನುಮತಿಯೊಂದಿಗೆ, ಆ ಜಾಗದ ಮಾರುಕಟ್ಟೆ ಬೆಲೆಗಿಂತ ನಾಲ್ಕು ಪಟ್ಟು ಹೆಚ್ಚು ಬೆಲೆಕೊಟ್ಟು, ಅದು ಕೃಷಿ ಭೂಮಿಯಾಗಿದ್ದಲ್ಲಿ ಬೇರೆಡೆ ಭೂಮಿಯನ್ನೂ ಕೊಟ್ಟು ಸ್ವಾಧೀನ ಪಡಿಸಿಕೊಳ್ಳಬೇಕು ಎಂದು ಕಾನೂನು ಹೇಳುತ್ತದೆ. ಆದರೆ ಆ ಜಾಗಕ್ಕೆ ಇದಾವುದೂ ಅಪ್ಲೈ ಆಗಿಲ್ಲ. ಕಡಿಮೆ ಬೆಲೆ ಕೊಟ್ಟು ಭೂಮಿಯನ್ನು ಸ್ವಾಧೀನಪಡಿಸಿಕೊಂಡಿದ್ದಾರೆ. ಹೆಚ್ಚಿನ ಕಾಂಪೆನ್ಸೇಷನ್ ಕೊಡಬೇಕು ಎಂದು ಆ ಭೂಮಿಯ ಮಾಲೀಕರಾದ ರೈತರು ಕೋರ್ಟ್‍ನಲ್ಲಿ ಅಫಿಡವಿಟ್ ಸಲ್ಲಿಸಿದ್ದಾರೆ.

ಸದ್ಯಕ್ಕೆ ಆ ವಿಚಾರ ಹೈಕೋರ್ಟ್‍ನಲ್ಲಿ ವಿಚಾರಣೆ ನಡೆಯುತ್ತಿದೆ. ಇದೆಲ್ಲದರ ನಡುವೆ ವಿಷ್ಣು ಅಳಿಯ ಅನಿರುದ್ ಮೈಸೂರಿನಲ್ಲಿ ಭೂಮಿ ಪೂಜೆ ಮಾಡಲು ಹೋಗಿದ್ದರಿಂದ ಸ್ಥಳೀಯರ ಆಕ್ರೋಶಕ್ಕೆ ಕಾರಣವಾಗಿದೆ. ಇನ್ನೂ ಕೋರ್ಟ್‍ನಲ್ಲಿ ಕೇಸು ನಡೆಯುತ್ತಿರುವಾಗಲೇ ಭೂಮಿ ಪೂಜೆ ಮಾಡಲು ಹೇಗೆ ಸಾಧ್ಯ ಎಂದು ರೈತರು ತಡೆಯೊಡ್ಡಿದ್ದಾರೆ. ಇಲ್ಲ ಕೋರ್ಟ್ ಸ್ಮಾರಕ ನಿರ್ಮಾಣಕ್ಕೆ ಅನುಮತಿ ನೀಡಿದೆ ಎಂದು ಅನಿರುದ್ ಇಂಗ್ಲಿಷ್‍ನಲ್ಲಿದ್ದ ಒಂದು ಲೆಟರ್ ತೋರಿಸಿದ್ದಾರೆ. ಅದು ಕೋರ್ಟ್ ಆದೇಶ ಅಲ್ಲ, ಆಗಿದ್ದರೂ ನಮಗೆ ಇಂಗ್ಲಿಷ್ ಅರ್ಥವಾಗುವುದಿಲ್ಲ ಕನ್ನಡದಲ್ಲಿ ಲೆಟರ್ ತೆಗೆದುಕೊಂಡು ಬನ್ನಿ ಎಂದು ರೈತರು ವಾಪಸ್ ಕಳಿಸಿದ್ದಾರೆ.

ಕೋರ್ಟ್ ಆದೇಶ ಬರದೆ, ತಮಗೆ ಕಾಂಪೆನ್ಸೇಷನ್ ಸಿಗದೆ ಭೂಮಿ ಪೂಜೆ ಮಾಡಿ ಸ್ಮಾರಕ ಕಟ್ಟಿದರೆ ತಮಗೆ ನ್ಯಾಯ ಸಿಗುವುದಿಲ್ಲ, ಪರಿಹಾರವೂ ಬರುವುದಿಲ್ಲ, ಆ ವಿಚಾರ ಹಾಗೇ ಮುಚ್ಚಿಹೋಗುತ್ತದೆ ಎಂಬುದು ರೈತರ ಆತಂಕ. ಅದಷ್ಟೇ ಅಲ್ಲದೆ ಕೋರ್ಟ್ ಆದೇಶ ನೀಡಿದ್ದೇ ಆದಲ್ಲಿ ಪ್ರತಿವಾದಿಗೂ ಆದೇಶದ ಕಾಪಿ ನೀಡಲಾಗುತ್ತದೆ. ಆದರೆ ರೈತರಿಗೆ ಕೋರ್ಟ್‍ನಿಂದಾಗಲಿ ಅಥವಾ ತಮ್ಮ ಲಾಯರ್‍ನಿಂದಗಲೀ ಯಾವುದೇ ಆದೇಶದ ಪ್ರತಿ ದೊರೆತಿಲ್ಲ. ಇದು ಅನಿರುದ್ ಯಾವುದೋ ಅರ್ಥವಾಗದ ಲೆಟರ್ ತಂದು ನಮ್ಮನ್ನು ಯಾಮಾರಿಸುತ್ತಿದ್ದಾರೆ ಎಂದು ರೈತರು ಆರೋಪಿಸಿದ್ದಾರೆ.

ಬಹುಶಃ ರೈತರ ಆತಂಕ ಸತ್ಯವೂ ಆಗಿರಬಹುದು. ಹಾಗೊಂದು ವೇಳೆ ಅನಿರುದ್ ರೈತರಿಗೆ ಯಾವುದೋ ಪತ್ರವನ್ನು ತೋರಿಸಿದ್ದೇ ಆಗಿದ್ದಲ್ಲಿ ಅದು ರೈತರಿಗಷ್ಟೇ ಅಲ್ಲ ವಿಷ್ಣು ಜೀವಿಸಿದ್ದ ಆದರ್ಶದ ಬದುಕಿಗೆ ಮಾಡುವ ಮೋಸವೂ, ಅವಮಾನವೂ ಆಗಿರುತ್ತದೆ. ಈಗಾಗಲೇ 10 ವರ್ಷ ಕಳೆದಿದ್ದು ಇನ್ನೂ ಸ್ಮಾರಕ ನಿರ್ಮಾಣವಾಗದೇ ಇರುವುದು ವಿಷ್ಣು ಕುಟುಂಬ ಮತ್ತು ಅಭಿಮಾನಿಗಳಿಗೆ ಬೇಸರದ ವಿಚಾರವೇ ಆಗಿದ್ದರೂ, ಆ ಕಾರಣಕ್ಕೆ ಮೋಸ ಮಾಡಿ ಸ್ಮಾರಕ ಕಟ್ಟುವುದರಿಂದ ಯಾವ ಪ್ರಯೋಜನವೂ ಆಗುವುದಿಲ್ಲ.

ರೈತರೂ ಭೂಮಿಯನ್ನು ಕೊಡುವುದೇ ಇಲ್ಲ ಎಂದೇನು ಹೇಳುತ್ತಿಲ್ಲ, ಇನ್ನೂ ಹೆಚ್ಚಿನ ಪರಿಹಾರವನ್ನಷ್ಟೇ ಕೇಳುತ್ತಿದ್ದಾರೆ. ಹಾಗಾಗಿ ಕೋರ್ಟ್‍ನಲ್ಲಿ ಆ ವಿಚಾರ ತೀರ್ಮಾನವಾಗಬೇಕಿದೆ. ಹೀಗಿರುವಾಗ ದುಡುಕಿನ ತೀರ್ಮಾನದಲ್ಲಿ ಕೋರ್ಟ್ ವಿಚಾರಣೆಯಲ್ಲಿರುವಾಗಲೇ ಭೂಮಿ ಪೂಜೆಗೆ ಮುಂದಾಗಿರುವುದು ಕಾನೂನು ಉಲ್ಲಂಘನೆಯೂ ಆಗುತ್ತದೆ. ಹಾಗಾಗಿ ಕಾನೂನು ಉಲ್ಲಂಘಿಸುವುದು, ರೈತರಿಗೆ ಮೋಸ ಮಾಡುವುದು ವಿಷ್ಣು ಬದುಕಿನ ಘನತೆಗೆ ಕಪ್ಪು ಚುಕ್ಕೆಯನ್ನು ತಂದೊಡ್ಡುತ್ತದೆ. ಕೋರ್ಟ್ ವ್ಯಾಜ್ಯ ಮುಗಿಯುವವರೆಗೆ ವಿಷ್ಣು ಕುಟುಂಬ ಕಾಯಬೇಕು.

ಆತ ಒಬ್ಬ ನಟ ಅಥವಾ ಬೇರೆ ಯಾರೇ ಆಗಿರಲಿ ಸರ್ಕಾರ ತಾನೇ ಸ್ಮಾರಕ ನಿರ್ಮಾಣ ಮಾಡುವುದಾಗಿಯೋ ಅಥವಾ ಬೇರೇನೋ ಒಂದು ನಿರ್ಧಾರವನ್ನು ಘೋಷಿಸಿದ ಮೇಲೆ ಅದಕ್ಕೆ ಬದ್ಧವಾಗಿ ಕಾರ್ಯನಿರ್ವಹಿಸಬೇಕು. ಹೀಗೆ ಹತ್ತಾರು ವರ್ಷಗಳ ಕಾಲ ಒಂದು ವಿಷಯವನ್ನು ಚರ್ಚಾ ಸಾಮಗ್ರಿಯನ್ನಾಗಿಸುವುದು ಶೋಭೆಯಲ್ಲ. ವಿಷ್ಣು ಸ್ಮಾರಕ ನಿರ್ಮಾಣದ ವಿಚಾರದಲ್ಲಾಗುತ್ತಿರುವ ಚರ್ಚೆ ವಿಳಂಬಗಳು ಅಭಿಮಾನಿಗಳಿಗಷ್ಟೇ ಅಲ್ಲ ಸಾಮಾನ್ಯವಾಗಿ ನೋಡುವವರಿಗೂ ಅಸಹನೆಯನ್ನು ಮೂಡಿಸುತ್ತದೆ.

ವಿಷ್ಣು ನಿಧನದ ಸಮಯದಲ್ಲಿ ನಮ್ಮ ಗೌರಿ ಮೇಡಂ ‘ವಿಷ್ಣು ಬಗ್ಗೆ ಜಗತ್ತು ಇನ್ನಷ್ಟು ಔದಾರ್ಯ ತೋರಬೇಕಿತ್ತು’ ಎಂದು ಬರೆದಿದ್ದರು. ಅಂತೆಯೇ ಸರ್ಕಾರ ವಿಷ್ಣು ಸ್ಮಾರಕಕ್ಕೂ ಔದಾರ್ಯ ತೋರಬೇಕಾಗಿದೆ ಎಂದೆನಿಸುತ್ತದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...