Homeಸಿನಿಮಾಸಿನಿ ಸುದ್ದಿವಿಷ್ಣು ಸ್ಮಾರಕಕ್ಕೆ ಮೀನಾಮೇಷ ಏಕೆ?

ವಿಷ್ಣು ಸ್ಮಾರಕಕ್ಕೆ ಮೀನಾಮೇಷ ಏಕೆ?

- Advertisement -
- Advertisement -

ಸೋಮಶೇಖರ್ ಚಲ್ಯ |

ಕರ್ನಾಟಕ ಕಂಡ ಸ್ಟಾರ್ ನಟ ಅಂಬರೀಶ್, ಸಾವನ್ನಪ್ಪಿ ವಾರವೇ ಕಳೆದು ಹೋಗಿದೆ. ಇನ್ನು ಅಭಿಮಾನಿಗಳ ಮನದಲ್ಲಿ ಅಂಬರೀಶ್ ನಿಧನ ಕಹಿ ಘಟನೆ ಹಸಿರಾಗಿರುವಾಗಲೇ, ಮತ್ತೊಂದು ವಿವಾದ ಸ್ಯಾಂಡಲ್‌ವುಡ್‌ನಲ್ಲಿ ಸೌಂಡ್ ಮಾಡ್ತಾ ಇದೆ. ಅದುವೇ ವಿಷ್ಣು ಸ್ಮಾರಕ ವಿವಾದ..

ಕುಚುಕು ಗೆಳೆಯರಂತಿದ್ದ ಅಂಬರೀಶ್ ಹಾಗೂ ವಿಷ್ಣುವರ್ಧನ್, ಇಬ್ಬರೂ ಈಗ ನೆನಪು ಮಾತ್ರ. ಅಂಬರೀಶ್ ಅವರಿಗೆ ಕಂಠೀರವ ಸ್ಟುಡಿಯೋದಲ್ಲಿ ಅಂತ್ಯ ಸಂಸ್ಕಾರ ಮಾಡಲಾಯಿತು. ಅಲ್ಲದೆ ೧.೫ ಎಕರೆ ಪ್ರದೇಶದಲ್ಲಿ ಸ್ಮಾರಕ ನಿರ್ಮಾಣಕ್ಕೆ ಸರ್ಕಾರ ಹಸಿರು ನಿಶಾನೆ ನೀಡಿದೆ. ಈ ಬೆನ್ನಲ್ಲೆ ವಿಷ್ಣು ಅಭಿಮಾನಿಗಳು ಹಾಗೂ ವಿಷ್ಣು ಕುಟುಂಬಸ್ಥರು ಸ್ಮಾರಕ ನಿರ್ಮಾಣದ ಧ್ವನಿ ಎತ್ತಿದ್ದಾರೆ.

ಸುಮಾರು ವರ್ಷದಿಂದ ನಟ ಡಾ. ವಿಷ್ಣುವರ್ಧನ್ ಸ್ಮಾರಕ ನಿರ್ಮಾಣ ವಿಚಾರಕ್ಕೆ ಹೋರಾಟ ನಡೆಸಲಾಗುತ್ತಿದೆ. ಆದ್ರೆ ಇನ್ನು ವಿಷ್ಣು ಸ್ಮಾರಕ ವಿಚಾರ ಕಗ್ಗಂಟಾಗಿಯೇ ಉಳಿದಿದೆ. ಇನ್ನು ಡಾ.ರಾಜಕುಮಾರ್ ಹೆಸರಲ್ಲಿ ಫಿಲ್ಮ್ ಯುನಿವರ್ಟಿಸಿ, ಅಂಬಿ ಹೆಸರಲ್ಲಿ ಫಿಲ್ಮ್ ಸಿಟಿ ನಿರ್ಮಾಣ ಮಾಡಲು ಸರ್ಕಾರ ಚಿಂತನೆ ನಡೆಸಿದೆ. ಈ ಬಗ್ಗೆ ವಿಷ್ಣು ಅಳಿಯ ಅನಿರುದ್ಧ ಸರ್ಕಾರದ ವಿರುದ್ಧ ಕಿಡಿ ಕಾರಿದ್ದಾರೆ.

ವಿಷ್ಣು ನಿಧನರಾಗಿ 9 ವರ್ಷ ಕಳೆಯುತ್ತಾ ಬಂದಿದೆ. ಎಲ್ಲಾ ಸರ್ಕಾರಗಳಿಗೂ ಮನವಿ ಸಲ್ಲಿಸಿದ್ದೇವೆ. ಅದ್ರೆ, ವಿಷ್ಣು ಸ್ಮಾರಕ ವಿಚಾರವನ್ನು ಯಾರು ಗಂಭೀರವಾಗಿ ಪರಿಗಣಿಸುತ್ತಿಲ್ಲ ಅನ್ನೋದು ವಿಷ್ಣು ಅಳಿಯ ಅನಿರುದ್ಧ ಅವರ ಆರೋಪ.

ವಿಷ್ಣು ಅಭಿಮಾನಿಗಳನ್ನು ಅಗಲಿದ ಮೇಲೆ ಇದುವರೆಗೂ ಐದು ಜನ ಮುಖ್ಯಮಂತ್ರಿಗಳು ರಾಜ್ಯವನ್ನಾಳಿದ್ದಾರೆ. ಆದರೆ ಯಾರಿಂದಲೂ ವಿಷ್ಣುಗೆ ಸ್ಮಾರಕ ನಿರ್ಮಾಣ ಮಾಡಲು ಸಾಧ್ಯವಾಗಿಲ್ಲ. ಇದು ವಿಷ್ಣು ಅಭಿಮಾನಿಗಳು ಮತ್ತು ಕುಟುಂಬಕ್ಕೆ ಭಾವನಾತ್ಮಕ ವಿಚಾರವಾಗುತ್ತಾ ಬೇರೂರುತ್ತಿದೆ. 2009ರಲ್ಲಿ ವಿಷ್ಣುರ ಅಂತ್ಯಸಂಸ್ಕಾರವನ್ನು ಅಭಿಮಾನ್ ಸ್ಟುಡಿಯೋದಲ್ಲಿ ನಡೆಸಲಾಗಿತ್ತು. ಹಿರಿಯ ನಟ ಬಾಲಕೃಷ್ಣ ಅವರಿಗೆ ಸರ್ಕಾರವೇ ಅಭಿಮಾನ್ ಸ್ಟುಡಿಯೋ ನಿರ್ಮಾಣ ಮಾಡಲು ಈ ಜಾಗ ನೀಡಿತ್ತು. ಆದರೆ ಬಾಲಕೃಷ್ಣ ನಿಧನದ ನಂತರ ಅವರ ಮಗ 10 ಎಕರೆ ಜಾಗವನ್ನು ಮಾರಾಟ ಮಾಡಲು ಮುಂದಾಗಿದ್ದರು. ಹಾಗಾಗಿ ಅದು ಕುಟುಂಬ ವ್ಯಾಜ್ಯವಾಗಿ ಮಾರ್ಪಟ್ಟಿತ್ತು. ವಿವಾದ ಇತ್ಯರ್ಥವಾಗುವ ಮುನ್ನವೇ ಅಭಿಮಾನ್ ಸ್ಟುಡಿಯೋದಲ್ಲಿ ವಿಷ್ಣು ಸ್ಮಾರಕ ಕಟ್ಟಲು ಮುಂದಾದ ಸರ್ಕಾರಕ್ಕೆ ಹೈಕೋರ್ಟ್ ತಡೆನೀಡಿದ್ದರಿಂದ ಸ್ಮಾರಕ ನಿರ್ಮಾಣ ಕಗ್ಗಂಟಾಗಿ ಉಳಿಯಿತು.

ತದನಂತರ 2012ರ ಮುಖ್ಯಮಂತ್ರಿ ಸದಾನಂದಗೌಡರು ಅಭಿಮಾನ್ ಸ್ಟುಡಿಯೊದಲ್ಲಿ ಸ್ಮಾರಕ ನಿರ್ಮಾಣ ಸಾಧ್ಯವಿಲ್ಲ ಬೇರೆಡೆ ಜಾಗ ಕೊಡುತ್ತೇವೆ ಎಂದಿದ್ದರು. ಆಗಲೇ ವಿಷ್ಣು ಕುಟುಂಬ ಮೈಸೂರಿನಲ್ಲಿ ಸ್ಮಾರಕ ನಿರ್ಮಿಸುವ ಇಂಗಿತ ಹೊರಹಾಕಿದ್ದು. ಇದು ಅಭಿಮಾನಿ ಸಂಘದ ಲೀಡರುಗಳಿಗೆ ಇಷ್ಟವಾಗಲಿಲ್ಲ. ಈ ನಡುವೆ ಸಿಎಂ ಗಾದಿಯೇರಿದ ಸಿದ್ದರಾಮಯ್ಯನವರು ಮೈಸೂರಿನಲ್ಲೇ ಸ್ಮಾರಕ ನಿರ್ಮಾಣಕ್ಕೆ ಐದು ಎಕರೆ ಜಾಗ ಮಂಜೂರು ಮಾಡಿ 2016ರಲ್ಲಿ ಭೂಮಿ ಪೂಜೆಗೂ ಮುಂದಾಗಿದ್ದರು. ಆದರೆ ಕೃಷಿ ಭೂಮಿ ನೀಡಲು ನಿರಾಕರಿಸಿದ ರೈತರು ಪ್ರತಿಭಟನೆಯಿಂದಾಗಿ ಅದೂ ಈಡೇರಲಿಲ್ಲ.

ಈ ಕಾರಣಗಳಿಂದಾಗಿ ನೆನೆಗುದಿಗೆ ಬಿದ್ದಿದ್ದ ವಿಷ್ಣು ಸ್ಮಾರಕ ವಿವಾದಕ್ಕೆ ಕುಮಾರಸ್ವಾಮಿಯವರ ಅವಧಿಯಲ್ಲಿ ಹೊಸ ಟ್ವಿಸ್ಟ್ ಸಿಕ್ಕಿದೆ. ರಾಜ್, ಅಂಬಿ ಸ್ಮಾರಕಗಳ ಜೊತೆ ವಿಷ್ಣು ಸ್ಮಾರಕವನ್ನೂ ಕಂಠೀರವದಲ್ಲೇ ನಿರ್ಮಾಣ ಮಾಡ್ತೀವಿ ಅಂದಿದ್ದು ವಿಷ್ಣು ಕುಟುಂಬ ಮತ್ತು ಅಭಿಮಾನಿಗಳನ್ನು ಸಹಜವಾಗಿಯೇ ಅಸಮಾಧಾನ ಮೂಡಿಸಿದೆ. ಕುಟುಂಬದ ಜೊತೆ ಒಂದು ಸಣ್ಣ ಚರ್ಚೆಯನ್ನೂ ಮಾಡದೆ, ಅಭಿಪ್ರಾಯ ಸಂಗ್ರಹಿಸದೆ ಏಕಾಏಕಿ ನಿರ್ಧಾರ ಪ್ರಕಟಿಸಿರೋದು ಎಷ್ಟು ಸರಿ ಅನ್ನೋದು ಕುಟುಂಬ ಮತ್ತು ಅಭಿಮಾನಿಗಳ ವಾದ.

ವಿಷ್ಣು ನಿಧನರಾದಾಗ ನಮ್ಮ ಕ್ಯಾಪ್ಟನ್ ಗೌರಿ ಲಂಕೇಶ್‌ರವರು ತಮ್ಮ ಸಂಪಾದಕೀಯದಲ್ಲಿ ‘ವಿಷ್ಣು ಬಗ್ಗೆ ಜಗತ್ತು ಇನ್ನಷ್ಟು ಔದಾರ್ಯ ತೋರಬೇಕಿತ್ತು’ ಎಂಬ ಮಾತು ಬರೆದಿದ್ದರು. ಅದ್ಯಾಕೊ ಆ ಮಾತು ಅವರ ಸ್ಮಾರಕಕ್ಕೂ ಅನ್ವಯಿಸುತ್ತಿರುವಂತೆ ಕಾಣುತ್ತೆ.

ಇಲ್ಲಿ ಇಡೀ ಸಮಸ್ಯೆಯನ್ನು ಏಕಾಏಕಿ ಯಾರೋ ಒಬ್ಬರ ಮೇಲೆ ಎತ್ತಿ ಬಿಸಾಡಲಾಗುವುದಿಲ್ಲ. ಯಾವಾಗ ಒಂದು ಕಾರ್ಯಕ್ಕೆ ಒಮ್ಮತ ಮತ್ತು ತಾಳ್ಮೆ ಇಲ್ಲವಾಗುತ್ತೊ ಆಗ ಸಹಜವಾಗಿಯೇ ಗೊಂದಲಕ್ಕೆ ತುತ್ತಾಗುತ್ತಾ ಸಾಗುತ್ತೆ. ಸರ್ಕಾರ ಸ್ಮಾರಕ ವಿಚಾರದಲ್ಲಿ ನಿರ್ಲಕ್ಷ್ಯ ವಹಿಸುತ್ತಿರುವಂತೆ ಕಂಡುಬಂದರು ಅದು ವಿಷ್ಣು ಸ್ಮಾರಕಕ್ಕೆ ಮಾತ್ರ ಸೀಮಿತವಾದುದಲ್ಲ, ರಾಜ್ ಸ್ಮಾರಕಕ್ಕೂ ಸರ್ಕಾರಗಳು ಇಂಥದ್ದೇ ಮೀನಾಮೇಷ ಎಣಿಸುತ್ತಾ ಬಂದಿದ್ದವು. ರಾಜ್ ನಮ್ಮನ್ನಗಲಿದ್ದು 2006ರಲ್ಲಾದರು ಎಂಟು ವರ್ಷಗಳ ನಂತರವೇ ೨೦೧೪ರಲ್ಲಿ ಸ್ಮಾರಕಕ್ಕೆ ಮುಕ್ತಿ ಸಿಕ್ಕಿದ್ದು. ಯಾವ ವಿವಾದವೂ ಇರದಿದ್ದ ಸರ್ಕಾರದ ಜಾಗದಲ್ಲೇ ಸ್ಮಾರಕ ನಿರ್ಮಾಣ ವಿಳಂಬವಾಗುತ್ತಿರುವುದರ ಬಗ್ಗೆ ರಾಜ್ ಕುಟುಂಬ ಹಲವು ಸಂದರ್ಭಗಳಲ್ಲಿ ಬೇಸರ ಹೊರಹಾಕಿದ್ದಿದೆ. ನಮ್ಮ ಸರ್ಕಾರಗಳ ಕಾರ್ಯವೈಖರಿಯೇ ಹಾಗಿರುತ್ತೆ.

ಅಂತದ್ದರಲ್ಲಿ ಲಿಟಿಗೇಷನ್ ಇರೋ ಜಾಗ ಹಾಗೂ ಸ್ಮಾರಕ ನಿರ್ಮಾಣ ಕುರಿತು ಕುಟುಂಬ, ಅಭಿಮಾನಿ ಬ್ಯಾನರ್ ಸಂಘಗಳ ನಡುವೆಯೇ ಬಿರುಕು ಇರುವಾಗ ಸರ್ಕಾರ ಮುತುವರ್ಜಿ ವಹಿಸೀತೆ? ಈ ಸತ್ಯವನ್ನು ಮೊದಲು ವಿಷ್ಣು ಕುಟುಂಬಸ್ಥರು ಹಾಗೂ ಅಭಿಮಾನಿ ಬ್ಯಾನರ್ ಸಂಘದವರು ಅರ್ಥ ಮಾಡಿಕೊಳ್ಳಬೇಕಿದೆ.

ವಿಷ್ಣುವನ್ನು ಕಳೆದುಕೊಂಡದ್ದು ಅವರ ಕುಟುಂಬಕ್ಕೆ ಹಾಗೂ ಯಾವ ಸಂಘದ ಬ್ಯಾನರೂ ಇಲ್ಲದೆ ಅವರನ್ನು ಆರಾಧಿಸುತ್ತಿದ್ದ ನಿಜ ಅಭಿಮಾನಿಗಳಿಗೆ ಮತ್ತು ಅಭಿಮಾನಿ ಬ್ಯಾನರ್ ಸಂಘಗಳಿಗೆ ಬಹುದೊಡ್ಡ ಎಮೋಷನಲ್ ಸಂಗತಿಯೇ ಆದರು, ಸ್ಮಾರಕ ವಿವಾದವನ್ನೂ ಅದೇ ಎಮೋಷನಲ್ ಆವೇಗದಲ್ಲಿ ಸರಿಪಡಿಸಲು ಮುಂದಾದರೆ ವಿಷಯ ಮತ್ತಷ್ಟು ಕಗ್ಗಂಟಾಗುವುದರಲ್ಲಿ ಅನುಮಾನವೇ ಇಲ್ಲ. ಅನಿರುದ್ಧ್ ಆಕ್ರೋಶದ ಮಾತುಗಳಿಗೆ ಸಿಎಂ ಕುಮಾರಸ್ವಾಮಿ ಗರಮ್ಮಾಗಿ ಉತ್ತರ ಕೊಟ್ಟದ್ದು ಇದೇ ಕಗ್ಗಂಟಿನ ಸೂಚನೆ ನೀಡುತ್ತಿವೆ.

ಜನರ ಆಕ್ರೋಶ, ಆವೇಶಗಳಿಗೆ ಸ್ಪಂದಿಸುವ ಸಂವೇದನೆಯನ್ನು ನಮ್ಮ ಸರ್ಕಾರಗಳು ಕಳೆದುಕೊಂಡು ಅದ್ಯಾವ ಕಾಲವೇ ಆಗಿಹೋಗಿದೆ. ಬಹುದೊಡ್ಡ ಸಮೂಹಗಳಾದ ರೈತರು, ಕಾರ್ಮಿಕರು ಬೀದಿಗಿಳಿದ ಪ್ರತಿಭಟಿಸಿದರೂ ಕ್ಯಾರೇ ಅನ್ನದ ಮನಸ್ಥಿತಿಗೆ ಸರ್ಕಾರದ ನರತಂತುಗಳು ಬಂದು ತಲುಪಿರುವ ಸಾಮಾಜಿಕ ವಾಸ್ತವವನ್ನು ವಿಷ್ಣು ಕುಟುಂಬ ಮತ್ತು ಅಭಿಮಾನಿ ಬ್ಯಾನರ್ ಸಂಘಗಳು ಅರ್ಥ ಮಾಡಿಕೊಳ್ಳಬೇಕಿದೆ. ಸ್ಮಾರಕದ ಆಗ್ರಹಕ್ಕೆ ಒಂದು ಕಾರ್ಯಯೋಜನೆಯನ್ನು ಸಿದ್ಧ ಮಾಡಿಕೊಳ್ಳದಿದ್ದರೆ ಹತಾಶೆಯ ನಡುವೆಯೇ ಸ್ಮಾರಕದ ಆಸೆಯನ್ನು ಕೈಚೆಲ್ಲುವ ಕಾಲಬಂದರೂ ಅಚ್ಚರಿಯಿಲ್ಲ. ಈಗಾಗಲೇ ಭಾರತಿಯವರು ‘ಅಭಿಮಾನಿಗಳು ತಮ್ಮ ಹೃದಯದಲ್ಲೇ ವಿಷ್ಣುಗೆ ಕೋಟೆ ಕಟ್ಟಿ ಸ್ಮಾರಕ ನಿರ್ಮಿಸಿದ್ದಾರೆ. ಇನ್ನು ಇಟ್ಟಿಗೆಗಳ ಸ್ಮಾರಕವನ್ನು ಸರ್ಕಾರ ಕಟ್ಟದಿದ್ದರೆ ಏನಂತೆ ಬಿಡಿ’ ಎಂದು ಹತಾಶೆಯಿಂದ ಹೇಳಿದ ಮಾತುಗಳೇ ಅಭಿಮಾನಿಗಳ ಪಾಲಿಗೆ ನಿಜವಾಗಿಬಿಡಲಿವೆ.

ಸರ್ಕಾರದ ಮೇಲೆ ಒತ್ತಡ ಹಾಕುವ ಮುನ್ನ ತಮ್ಮ ನಡುವೆ (ಕುಟುಂಬ ಮತ್ತು ಅಭಿಮಾನಿ ಬ್ಯಾನರ್ ಸಂಘಗಳು) ಬಂದಿರುವ ಭಿನ್ನಾಭಿಪ್ರಾಯವನ್ನು ಬಗೆಹರಿಸಿಕೊಳ್ಳದೆ ಹೋದರೆ ಸರ್ಕಾರಗಳು ಎಷ್ಟೇ ಬದಲಾದರು ಅದೊಂದು ನೆಪದ ಮೇಲೆ ದಿನದೂಡಿಬಿಡುತ್ತವೆ.

ಹಾಗೆ ನೋಡಿದರೆ ಕನ್ನಡ ಇಂಡಸ್ಟ್ರಿಗೆ ಹೊಸ ಮೆರಗು ಕೊಟ್ಟ ಶಂಕರ್‌ನಾಗ್‌ರವರಿಗೆ ಸ್ಮಾರಕ ಕಟ್ಟಬೇಕೆಂಬ ಮಾತು ಯಾವ ಸರ್ಕಾರದಿಂದಲೂ ಬಂದಿಲ್ಲ. ಆದರೆ ವಿಷ್ಣು ಬಗ್ಗೆ ಸರ್ಕಾರದಿಂದಲೇ ಅಂತಹ ಪ್ರಯತ್ನಕ್ಕೆ ಚಾಲನೆ ಸಿಕ್ಕಿರೋದ್ರಿಂದ ಬಲು ನಾಜೂಕಾಗಿ, ಅಷ್ಟೇ ವ್ಯವಸ್ಥಿತವಾಗಿ ಸರ್ಕಾರದಿಂದ ಕೆಲಸ ಮಾಡಿಸಬೇಕಿದೆ. ಆದಷ್ಟೂ ಬೇಗ ಆ ಕೆಲಸವಾಗಲಿ ಅನ್ನೋದು ಪತ್ರಿಕೆಯ ಆಶಯ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...