Homeಮುಖಪುಟವ್ಯಂಗ್ಯದಿಂದ ಸಮಸ್ಯೆಗೆ ಸಿಲುಕಿಕೊಂಡ ನಿಜ ಗಾಂಧಿ ಪ್ರೇಮಿ ಐಎಎಸ್ ಅಧಿಕಾರಿ ನಿಧಿ ಚೌಧುರಿ

ವ್ಯಂಗ್ಯದಿಂದ ಸಮಸ್ಯೆಗೆ ಸಿಲುಕಿಕೊಂಡ ನಿಜ ಗಾಂಧಿ ಪ್ರೇಮಿ ಐಎಎಸ್ ಅಧಿಕಾರಿ ನಿಧಿ ಚೌಧುರಿ

ನಿಜ ಗಾಂಧಿ ಪ್ರೇಮಿ ನಿಧಿ ಚೌಧರಿಯವರು ಮಾಡಿದ್ದ ಟ್ವೀಟ್‍ನಿಂದ ಅವರು ಸಮಸ್ಯೆಗೆ ಗುರಿಯಾಗುತ್ತಿದ್ದಾರೆ. ಅದೇ ಸಂದರ್ಭದಲ್ಲಿ ಗಾಂಧೀಜಿಯವರ ಕುರಿತು ದ್ವೇಷ ಭಾವ ಮೂಡಿಸುತ್ತಾ, ಗೋಡ್ಸೆಗೆ ಮಂದಿರ ಕಟ್ಟಿ ಬಹಿರಂಗವಾಗಿ ಜೈಕಾರ ಹಾಕುತ್ತಿರುವವರು ದೇಶಭಕ್ತರೆಂದು ಕರೆಸಿಕೊಳ್ಳುತ್ತಿರುವುದು ದುರಂತ

- Advertisement -
- Advertisement -

| ನಾನುಗೌರಿ |

ಪ್ರಪಂಚಾದ್ಯಂತ ಗಾಂಧಿ ಪ್ರತಿಮೆಗಳನ್ನು ನಿರ್ನಾಮ ಮಾಡಲು ಇದು ಸಕಾಲ, ಹಾಗೆಯೇ ಭಾರತದ ಕರೆನ್ಸಿ ನೋಟುಗಳಿಂದಲೂ ಸಹ ಗಾಂಧಿ ಭಾವಚಿತ್ರ ತೆಗೆದುಬಿಡಿ’ ಎಂದು ವ್ಯಂಗ್ಯದಿಂದ ಅಣಕ ಮಾಡಿ ಮೇ 17ರಂದು ಟ್ವೀಟ್ ಮಾಡಿದ್ದ ಮಹಾರಾಷ್ಟ್ರದ ಐಎಎಸ್ ಅಧಿಕಾರಿ ನಿಧಿ ಚೌಧರಿಯವರ ಹುದ್ದೆಗೆ ಸಂಚಕಾರ ಬಂದಿದೆ. ಈ ಕುರಿತು ತ್ವರಿತ ಕ್ರಮಕ್ಕೆ ಮಹಾರಾಷ್ಟ್ರ ಸರ್ಕಾರ ಸೂಚಿಸಲಾಗಿದೆ ಎನ್ನಲಾಗಿದೆ.

ಈ ಕುರಿತು ಸ್ಪಷ್ಟೀಕರಣ ನೀಡಿರುವ ನಿಧಿ ಚೌಧರಿಯವರು ಸರಣಿ ಟ್ವೀಟ್‍ಗಳನ್ನು ಮಾಡಿ ತನ್ನ ಗಾಂಧಿ ಪ್ರೇಮವನ್ನು ತೋರಿಸಬೇಕಾಗಿ ಬಂದಿದೆ. ಗಾಂಧಿಯವರ ಹೇಳಿಕೆಗಳನ್ನು ಉಲ್ಲೇಖಿಸಿ ಮಾಡಿರುವ ಹಳೆಯ ಟ್ವೀಟ್‍ಗಳನ್ನು ಮತ್ತೆ ಷೇರ್ ಮಾಡಿರುವ ಅವರು ‘ನಾನೆಂದೂ ಗಾಂಧೀಜಿಯವರನ್ನು ಅವಮಾನಿಸುವುದಿಲ್ಲ, ಅವರ ನನ್ನ ಸತ್ಯಾನ್ವೇಷಣೆ ಪುಸ್ತಕ ನನ್ನ ಎಲ್ಲಾ ಕಾಲದ ನೆಚ್ಚಿನ ಪುಸ್ತಕ’ ಎಂತಲೂ ಟ್ವೀಟ್ ಮಾಡಿದ್ದಾರೆ.

ಆದರೆ ಮೇ 17ರಂದು ನಿಧಿ ಚೌದರಿಯವರು ಟ್ವೀಟ್ ಮಾಡಿದ್ದನ್ನು ಸುದ್ದಿ ಮಾಡುವ ಭರದಲ್ಲಿ ಕೆಲ ಮಾಧ್ಯಮಗಳು ಅದರೊಳಗಿನ ವ್ಯಂಗ್ಯ, ಅಣಕವನ್ನು ಗುರುತಿಸಿರಲಿಲ್ಲ. ಇನ್ನು ಕೆಲವು ಮಾಧ್ಯಮಗಳಿಗೆ ಗೊತ್ತಿದ್ದರೂ ಸಹ ಆಕೆಯನ್ನು ದೇಶದ್ರೋಹಿ ರೀತಿಯಲ್ಲಿ ಚಿತ್ರಿಸಲಾಯಿತು. ಈಗ ಸರ್ಕಾರ ಅವರ ಮೇಲೆ ಕ್ರಮ ತೆಗೆದುಕೊಳ್ಳಲು ಸೂಚಿಸುವಷ್ಟರ ಮಟ್ಟಿಗೆ ಪ್ರಕರಣ ಬಂದು ನಿಂತಿದೆ.

ಇದೇ ಸಂದರ್ಭದಲ್ಲಿ ಚುನಾವಣಾ ಸಮಯದಲ್ಲಿ ಪ್ರಗ್ಯಾ ಸಿಂಗ್ ಗಾಂಧಿ ಹಂತಕ ನಾಥೂರಾಮ್ ಗೋಡ್ಸೆಯನ್ನು ಹೊಗಳಿದ್ದರು. ಅದನ್ನೇ ದಕ್ಷಿಣ ಕನ್ನಡದ ಸಂಸದ ನಳೀನ್ ಕುಮಾರ್ ಕಟೀಲ್ ಮತ್ತು ಉತ್ತರ ಕನ್ನಡದ ಅನಂತ್ ಕುಮಾರ್ ಹೆಗ್ಡೆ ಪುನಾರಾವರ್ತಿಸಿದ್ದರು. ಆ ಮೂವರು ಈಗ ಲಕ್ಷ ಲಕ್ಷ ಮತಗಳ ಅಂತರದಿಂದ ಗೆದ್ದು ಸಂಸತ್ ಪ್ರವೇಶಿಸಿರುವುದನ್ನು ನಾವು ನೆನಪಿಸಿಕೊಳ್ಳಬೇಕಿದೆ.

ಈ ಕುರಿತು ನಾನುಗೌರಿ.ಕಾಂ ಜೊತೆ ಮಾತನಾಡಿದ ಪತ್ರಕರ್ತ ಗಿರೀಶ್ ತಾಳಿಕಟ್ಟೆ ಅವರು ಹೀಗೆಂದರು. ‘ಇಂದಿನ ಕಾಲ ಎತ್ತ ಸಾಗುತ್ತಿದೆ ಎಂಬುದಕ್ಕೆ ಈ ಘಟನೆ ನಿದರ್ಶನ. ನಿಜ ಗಾಂಧಿ ಪ್ರೇಮಿ ನಿಧಿ ಚೌಧರಿಯವರು ಮಾಡಿದ್ದ ಟ್ವೀಟ್‍ನಿಂದ ಅವರು ಸಮಸ್ಯೆಗೆ ಗುರಿಯಾಗುತ್ತಿದ್ದಾರೆ. ಅದೇ ಸಂದರ್ಭದಲ್ಲಿ ಗಾಂಧೀಜಿಯವರ ಕುರಿತು ದ್ವೇಷ ಭಾವ ಮೂಡಿಸುತ್ತಾ, ಗೋಡ್ಸೆಗೆ ಮಂದಿರ ಕಟ್ಟಿ ಬಹಿರಂಗವಾಗಿ ಜೈಕಾರ ಹಾಕುತ್ತಿರುವವರು ದೇಶಭಕ್ತರೆಂದು ಕರೆಸಿಕೊಳ್ಳುತ್ತಿರುವುದು ದುರಂತ’.

ಈ ಕುರಿತು ಮೊದಲು ಡೆಕ್ಕನ್ ಹೆರಾಲ್ಡ್ ಪತ್ರಿಕೆ ವರದಿ ಮಾಡಿತ್ತು. ನಂತರ ಅವರ ಸ್ಪಷ್ಟೀಕರಣವನ್ನು ಸೇರಿಸಿ ವರದಿ ಪ್ರಕಟಿಸಿದೆ. ಈ ಕುರಿತು ಕನ್ನಡದ ಪ್ರಮುಖ ಬರಹಗಾರರಾದ ಕೆ.ಪಿ ನಟರಾಜ್‍ರವರು ಮೊದಲು ಆ ಐಎಎಸ್ ಅಧಿಕಾರಿಯ ವಿರುದ್ಧ ಷೇರ್ ಮಾಡಿದ್ದ ಲೇಖನವನ್ನು ಅಳಿಸಿ ಪೂರ್ತಿ ಗಮನಿಸದೇ ಷೇರ್ ಮಾಡಿದ್ದಕ್ಕೆ ಕ್ಷಮೆ ಕೇಳುವ ಮೂಲಕ ಮಾದರಿಯಾಗಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...