Homeಮುಖಪುಟವ್ಯಂಗ್ಯದಿಂದ ಸಮಸ್ಯೆಗೆ ಸಿಲುಕಿಕೊಂಡ ನಿಜ ಗಾಂಧಿ ಪ್ರೇಮಿ ಐಎಎಸ್ ಅಧಿಕಾರಿ ನಿಧಿ ಚೌಧುರಿ

ವ್ಯಂಗ್ಯದಿಂದ ಸಮಸ್ಯೆಗೆ ಸಿಲುಕಿಕೊಂಡ ನಿಜ ಗಾಂಧಿ ಪ್ರೇಮಿ ಐಎಎಸ್ ಅಧಿಕಾರಿ ನಿಧಿ ಚೌಧುರಿ

ನಿಜ ಗಾಂಧಿ ಪ್ರೇಮಿ ನಿಧಿ ಚೌಧರಿಯವರು ಮಾಡಿದ್ದ ಟ್ವೀಟ್‍ನಿಂದ ಅವರು ಸಮಸ್ಯೆಗೆ ಗುರಿಯಾಗುತ್ತಿದ್ದಾರೆ. ಅದೇ ಸಂದರ್ಭದಲ್ಲಿ ಗಾಂಧೀಜಿಯವರ ಕುರಿತು ದ್ವೇಷ ಭಾವ ಮೂಡಿಸುತ್ತಾ, ಗೋಡ್ಸೆಗೆ ಮಂದಿರ ಕಟ್ಟಿ ಬಹಿರಂಗವಾಗಿ ಜೈಕಾರ ಹಾಕುತ್ತಿರುವವರು ದೇಶಭಕ್ತರೆಂದು ಕರೆಸಿಕೊಳ್ಳುತ್ತಿರುವುದು ದುರಂತ

- Advertisement -
- Advertisement -

| ನಾನುಗೌರಿ |

ಪ್ರಪಂಚಾದ್ಯಂತ ಗಾಂಧಿ ಪ್ರತಿಮೆಗಳನ್ನು ನಿರ್ನಾಮ ಮಾಡಲು ಇದು ಸಕಾಲ, ಹಾಗೆಯೇ ಭಾರತದ ಕರೆನ್ಸಿ ನೋಟುಗಳಿಂದಲೂ ಸಹ ಗಾಂಧಿ ಭಾವಚಿತ್ರ ತೆಗೆದುಬಿಡಿ’ ಎಂದು ವ್ಯಂಗ್ಯದಿಂದ ಅಣಕ ಮಾಡಿ ಮೇ 17ರಂದು ಟ್ವೀಟ್ ಮಾಡಿದ್ದ ಮಹಾರಾಷ್ಟ್ರದ ಐಎಎಸ್ ಅಧಿಕಾರಿ ನಿಧಿ ಚೌಧರಿಯವರ ಹುದ್ದೆಗೆ ಸಂಚಕಾರ ಬಂದಿದೆ. ಈ ಕುರಿತು ತ್ವರಿತ ಕ್ರಮಕ್ಕೆ ಮಹಾರಾಷ್ಟ್ರ ಸರ್ಕಾರ ಸೂಚಿಸಲಾಗಿದೆ ಎನ್ನಲಾಗಿದೆ.

ಈ ಕುರಿತು ಸ್ಪಷ್ಟೀಕರಣ ನೀಡಿರುವ ನಿಧಿ ಚೌಧರಿಯವರು ಸರಣಿ ಟ್ವೀಟ್‍ಗಳನ್ನು ಮಾಡಿ ತನ್ನ ಗಾಂಧಿ ಪ್ರೇಮವನ್ನು ತೋರಿಸಬೇಕಾಗಿ ಬಂದಿದೆ. ಗಾಂಧಿಯವರ ಹೇಳಿಕೆಗಳನ್ನು ಉಲ್ಲೇಖಿಸಿ ಮಾಡಿರುವ ಹಳೆಯ ಟ್ವೀಟ್‍ಗಳನ್ನು ಮತ್ತೆ ಷೇರ್ ಮಾಡಿರುವ ಅವರು ‘ನಾನೆಂದೂ ಗಾಂಧೀಜಿಯವರನ್ನು ಅವಮಾನಿಸುವುದಿಲ್ಲ, ಅವರ ನನ್ನ ಸತ್ಯಾನ್ವೇಷಣೆ ಪುಸ್ತಕ ನನ್ನ ಎಲ್ಲಾ ಕಾಲದ ನೆಚ್ಚಿನ ಪುಸ್ತಕ’ ಎಂತಲೂ ಟ್ವೀಟ್ ಮಾಡಿದ್ದಾರೆ.

ಆದರೆ ಮೇ 17ರಂದು ನಿಧಿ ಚೌದರಿಯವರು ಟ್ವೀಟ್ ಮಾಡಿದ್ದನ್ನು ಸುದ್ದಿ ಮಾಡುವ ಭರದಲ್ಲಿ ಕೆಲ ಮಾಧ್ಯಮಗಳು ಅದರೊಳಗಿನ ವ್ಯಂಗ್ಯ, ಅಣಕವನ್ನು ಗುರುತಿಸಿರಲಿಲ್ಲ. ಇನ್ನು ಕೆಲವು ಮಾಧ್ಯಮಗಳಿಗೆ ಗೊತ್ತಿದ್ದರೂ ಸಹ ಆಕೆಯನ್ನು ದೇಶದ್ರೋಹಿ ರೀತಿಯಲ್ಲಿ ಚಿತ್ರಿಸಲಾಯಿತು. ಈಗ ಸರ್ಕಾರ ಅವರ ಮೇಲೆ ಕ್ರಮ ತೆಗೆದುಕೊಳ್ಳಲು ಸೂಚಿಸುವಷ್ಟರ ಮಟ್ಟಿಗೆ ಪ್ರಕರಣ ಬಂದು ನಿಂತಿದೆ.

ಇದೇ ಸಂದರ್ಭದಲ್ಲಿ ಚುನಾವಣಾ ಸಮಯದಲ್ಲಿ ಪ್ರಗ್ಯಾ ಸಿಂಗ್ ಗಾಂಧಿ ಹಂತಕ ನಾಥೂರಾಮ್ ಗೋಡ್ಸೆಯನ್ನು ಹೊಗಳಿದ್ದರು. ಅದನ್ನೇ ದಕ್ಷಿಣ ಕನ್ನಡದ ಸಂಸದ ನಳೀನ್ ಕುಮಾರ್ ಕಟೀಲ್ ಮತ್ತು ಉತ್ತರ ಕನ್ನಡದ ಅನಂತ್ ಕುಮಾರ್ ಹೆಗ್ಡೆ ಪುನಾರಾವರ್ತಿಸಿದ್ದರು. ಆ ಮೂವರು ಈಗ ಲಕ್ಷ ಲಕ್ಷ ಮತಗಳ ಅಂತರದಿಂದ ಗೆದ್ದು ಸಂಸತ್ ಪ್ರವೇಶಿಸಿರುವುದನ್ನು ನಾವು ನೆನಪಿಸಿಕೊಳ್ಳಬೇಕಿದೆ.

ಈ ಕುರಿತು ನಾನುಗೌರಿ.ಕಾಂ ಜೊತೆ ಮಾತನಾಡಿದ ಪತ್ರಕರ್ತ ಗಿರೀಶ್ ತಾಳಿಕಟ್ಟೆ ಅವರು ಹೀಗೆಂದರು. ‘ಇಂದಿನ ಕಾಲ ಎತ್ತ ಸಾಗುತ್ತಿದೆ ಎಂಬುದಕ್ಕೆ ಈ ಘಟನೆ ನಿದರ್ಶನ. ನಿಜ ಗಾಂಧಿ ಪ್ರೇಮಿ ನಿಧಿ ಚೌಧರಿಯವರು ಮಾಡಿದ್ದ ಟ್ವೀಟ್‍ನಿಂದ ಅವರು ಸಮಸ್ಯೆಗೆ ಗುರಿಯಾಗುತ್ತಿದ್ದಾರೆ. ಅದೇ ಸಂದರ್ಭದಲ್ಲಿ ಗಾಂಧೀಜಿಯವರ ಕುರಿತು ದ್ವೇಷ ಭಾವ ಮೂಡಿಸುತ್ತಾ, ಗೋಡ್ಸೆಗೆ ಮಂದಿರ ಕಟ್ಟಿ ಬಹಿರಂಗವಾಗಿ ಜೈಕಾರ ಹಾಕುತ್ತಿರುವವರು ದೇಶಭಕ್ತರೆಂದು ಕರೆಸಿಕೊಳ್ಳುತ್ತಿರುವುದು ದುರಂತ’.

ಈ ಕುರಿತು ಮೊದಲು ಡೆಕ್ಕನ್ ಹೆರಾಲ್ಡ್ ಪತ್ರಿಕೆ ವರದಿ ಮಾಡಿತ್ತು. ನಂತರ ಅವರ ಸ್ಪಷ್ಟೀಕರಣವನ್ನು ಸೇರಿಸಿ ವರದಿ ಪ್ರಕಟಿಸಿದೆ. ಈ ಕುರಿತು ಕನ್ನಡದ ಪ್ರಮುಖ ಬರಹಗಾರರಾದ ಕೆ.ಪಿ ನಟರಾಜ್‍ರವರು ಮೊದಲು ಆ ಐಎಎಸ್ ಅಧಿಕಾರಿಯ ವಿರುದ್ಧ ಷೇರ್ ಮಾಡಿದ್ದ ಲೇಖನವನ್ನು ಅಳಿಸಿ ಪೂರ್ತಿ ಗಮನಿಸದೇ ಷೇರ್ ಮಾಡಿದ್ದಕ್ಕೆ ಕ್ಷಮೆ ಕೇಳುವ ಮೂಲಕ ಮಾದರಿಯಾಗಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಾಗಲಕೋಟೆಯ ವಿವಿಧ ಪ್ರದೇಶಗಳಲ್ಲಿ ಎಸ್‌ಐಆರ್‌ ವಿರುದ್ಧ ಜನಜಾಗೃತಿ ಜಾಥಾ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ಬಾಗಲಕೋಟೆ ನಗರದ ವಿವಿಧ ಭಾಗಗಳಲ್ಲಿ ಭಾನುವಾರ (ಜೂ.14) ಜಾಗೃತಿ ಜಾಥಾ ನಡೆಯಿತು. ನವನಗರದ ವಿದ್ಯಾಗಿರಿ ಬಸವೇಶ್ವರ ಇಂಜಿನಿಯರಿಂಗ್ ಕಾಲೇಜು ಸರ್ಕಲ್‌ನಿಂದ ಪ್ರಾರಂಭವಾದ ಜಾಥಾ...

SIR ವಿರೋಧಿ ಜನಜಾಗೃತಿ ಜಾಥಾ: ಕಾಫಿ ನಾಡು ಚಿಕ್ಕಮಗಳೂರಲ್ಲಿ ಅದ್ದೂರಿ ಸ್ವಾಗತ

ಚಿಕ್ಕಮಗಳೂರು: ರಾಜ್ಯಾದ್ಯಂತ ಐದು ವಿಭಾಗಗಳಲ್ಲಿ ಸಂಚರಿಸುತ್ತಿರುವ 'SIR ವಿರೋಧಿ ಜನಜಾಗೃತಿ ಜಾಥಾ'ದ 3ನೇ ಮಾರ್ಗದ ತಂಡಕ್ಕೆ ಕಾಫಿ ನಾಡು ಚಿಕ್ಕಮಗಳೂರಿನಲ್ಲಿ ಅದ್ದೂರಿ ಸ್ವಾಗತ ದೊರೆಯಿತು. ಭಾನುವಾರ ಬೆಳಗ್ಗೆ ಜಿಲ್ಲೆಯ ಕೊಪ್ಪ ತಾಲ್ಲೂಕಿಗೆ ಆಗಮಿಸಿದ ಜಾಥಾ...

ಚಿಕ್ಕಮಗಳೂರಿನಲ್ಲಿ ಎಸ್‌ಐಆರ್ (SIR) ವಿರೋಧಿ ಜಾಥಾ: ಮತದಾರರ ಹಕ್ಕು ಕಸಿಯುವ ಹುನ್ನಾರದ ವಿರುದ್ಧ ಆಕ್ರೋಶ

ಭಾರತ ಚುನಾವಣಾ ಆಯೋಗವು ಜಾರಿಗೆ ತಂದಿರುವ ವಿಶೇಷ ತೀವ್ರ ಪರಿಷ್ಕರಣೆ (SIR - Special Intensive Revision) ಪ್ರಕ್ರಿಯೆಯಲ್ಲಿ ಯಾವುದೇ ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಜಾಗ್ರತೆ ವಹಿಸಬೇಕಾದ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ....

ಮಂಗಳೂರು: ಚುನಾವಣಾ ಆಯೋಗ ಕೇಂದ್ರ ಸರ್ಕಾರದ ಮುಖವಾಣಿಯಾಗಿ ಕಾರ್ಯನಿರ್ವಹಿಸುತ್ತಿದೆ: ವಿ.ಎಸ್. ಶ್ರೀಧರ್ 

ರಾಜ್ಯದ ಆರು ಜಿಲ್ಲೆಗಳಲ್ಲಿ ಪ್ರಗತಿಪರ ಸಂಘಟನೆಗಳು, ಎದ್ದೇಳು ಕರ್ನಾಟಕ ಹಾಗೂ ಜಾತ್ಯತೀತ ಪಕ್ಷಗಳ ಒಕ್ಕೂಟವಾದ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿರುವ ಎಸ್‌ಐಆರ್ ಜನಜಾಗೃತಿ ಜಾಥಾದ ಭಾಗವಾಗಿ ಇಂದು (ಜೂನ್-14) ಮಂಗಳೂರಿನಲ್ಲಿ ಸಭೆ...

ಬಿಸಿಲ ನಾಡು ಕಲಬುರಗಿಯಲ್ಲಿ ಮೊಳಗಿದ SIR ವಿರೋಧಿ ಘೋಷಣೆ.

ಕೇಂದ್ರ ಚುನಾವಣಾ ಆಯೋಗ ಜಾರಿಗೆ ತಂದಿರುವ ವಿಶೇಷ ತೀವ್ರ ಮತ ಪರಿಷ್ಕರಣೆ SIR ಅನ್ನು ಕರ್ನಾಟಕದಲ್ಲಿ ಜಾರಿ ಮಾಡಬಾರದು ಎಂದು ಆಗ್ರಹಿಸಿ ಕರ್ನಾಟಕದಾದ್ಯಂತ ಎದ್ದೇಳು ಕರ್ನಾಟಕ ಹಾಗಾ SIR ವಿರೋಧಿ ಕರ್ನಾಟಕ ವೇದಿಕೆಯು...

ವಿಜಯಪುರ : ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾಗೆ ಚಾಲನೆ

ರಾಜ್ಯದ ಆರು ಜಿಲ್ಲೆಗಳಲ್ಲಿ ನಡೆಯಲಿರುವ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾಗೆ ವಿಜಯಪುರದ ಅಂಬೇಡ್ಕರ್ ವೃತ್ತದಲ್ಲಿ ಶನಿವಾರ (ಜೂ.13) ಸಂಜೆ ಚಾಲನೆ ದೊರೆಯಿತು. ಜಾಥಾವನ್ನು ಉದ್ಘಾಟಿಸಿ ಮಾತನಾಡಿದ ಅಹಿಂದ ಮುಖಂಡ ಎಸ್ ಎಂ ಪಾಟೀಲ...

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...