Homeಮುಖಪುಟವ್ಯಂಗ್ಯದಿಂದ ಸಮಸ್ಯೆಗೆ ಸಿಲುಕಿಕೊಂಡ ನಿಜ ಗಾಂಧಿ ಪ್ರೇಮಿ ಐಎಎಸ್ ಅಧಿಕಾರಿ ನಿಧಿ ಚೌಧುರಿ

ವ್ಯಂಗ್ಯದಿಂದ ಸಮಸ್ಯೆಗೆ ಸಿಲುಕಿಕೊಂಡ ನಿಜ ಗಾಂಧಿ ಪ್ರೇಮಿ ಐಎಎಸ್ ಅಧಿಕಾರಿ ನಿಧಿ ಚೌಧುರಿ

ನಿಜ ಗಾಂಧಿ ಪ್ರೇಮಿ ನಿಧಿ ಚೌಧರಿಯವರು ಮಾಡಿದ್ದ ಟ್ವೀಟ್‍ನಿಂದ ಅವರು ಸಮಸ್ಯೆಗೆ ಗುರಿಯಾಗುತ್ತಿದ್ದಾರೆ. ಅದೇ ಸಂದರ್ಭದಲ್ಲಿ ಗಾಂಧೀಜಿಯವರ ಕುರಿತು ದ್ವೇಷ ಭಾವ ಮೂಡಿಸುತ್ತಾ, ಗೋಡ್ಸೆಗೆ ಮಂದಿರ ಕಟ್ಟಿ ಬಹಿರಂಗವಾಗಿ ಜೈಕಾರ ಹಾಕುತ್ತಿರುವವರು ದೇಶಭಕ್ತರೆಂದು ಕರೆಸಿಕೊಳ್ಳುತ್ತಿರುವುದು ದುರಂತ

- Advertisement -
- Advertisement -

| ನಾನುಗೌರಿ |

ಪ್ರಪಂಚಾದ್ಯಂತ ಗಾಂಧಿ ಪ್ರತಿಮೆಗಳನ್ನು ನಿರ್ನಾಮ ಮಾಡಲು ಇದು ಸಕಾಲ, ಹಾಗೆಯೇ ಭಾರತದ ಕರೆನ್ಸಿ ನೋಟುಗಳಿಂದಲೂ ಸಹ ಗಾಂಧಿ ಭಾವಚಿತ್ರ ತೆಗೆದುಬಿಡಿ’ ಎಂದು ವ್ಯಂಗ್ಯದಿಂದ ಅಣಕ ಮಾಡಿ ಮೇ 17ರಂದು ಟ್ವೀಟ್ ಮಾಡಿದ್ದ ಮಹಾರಾಷ್ಟ್ರದ ಐಎಎಸ್ ಅಧಿಕಾರಿ ನಿಧಿ ಚೌಧರಿಯವರ ಹುದ್ದೆಗೆ ಸಂಚಕಾರ ಬಂದಿದೆ. ಈ ಕುರಿತು ತ್ವರಿತ ಕ್ರಮಕ್ಕೆ ಮಹಾರಾಷ್ಟ್ರ ಸರ್ಕಾರ ಸೂಚಿಸಲಾಗಿದೆ ಎನ್ನಲಾಗಿದೆ.

ಈ ಕುರಿತು ಸ್ಪಷ್ಟೀಕರಣ ನೀಡಿರುವ ನಿಧಿ ಚೌಧರಿಯವರು ಸರಣಿ ಟ್ವೀಟ್‍ಗಳನ್ನು ಮಾಡಿ ತನ್ನ ಗಾಂಧಿ ಪ್ರೇಮವನ್ನು ತೋರಿಸಬೇಕಾಗಿ ಬಂದಿದೆ. ಗಾಂಧಿಯವರ ಹೇಳಿಕೆಗಳನ್ನು ಉಲ್ಲೇಖಿಸಿ ಮಾಡಿರುವ ಹಳೆಯ ಟ್ವೀಟ್‍ಗಳನ್ನು ಮತ್ತೆ ಷೇರ್ ಮಾಡಿರುವ ಅವರು ‘ನಾನೆಂದೂ ಗಾಂಧೀಜಿಯವರನ್ನು ಅವಮಾನಿಸುವುದಿಲ್ಲ, ಅವರ ನನ್ನ ಸತ್ಯಾನ್ವೇಷಣೆ ಪುಸ್ತಕ ನನ್ನ ಎಲ್ಲಾ ಕಾಲದ ನೆಚ್ಚಿನ ಪುಸ್ತಕ’ ಎಂತಲೂ ಟ್ವೀಟ್ ಮಾಡಿದ್ದಾರೆ.

ಆದರೆ ಮೇ 17ರಂದು ನಿಧಿ ಚೌದರಿಯವರು ಟ್ವೀಟ್ ಮಾಡಿದ್ದನ್ನು ಸುದ್ದಿ ಮಾಡುವ ಭರದಲ್ಲಿ ಕೆಲ ಮಾಧ್ಯಮಗಳು ಅದರೊಳಗಿನ ವ್ಯಂಗ್ಯ, ಅಣಕವನ್ನು ಗುರುತಿಸಿರಲಿಲ್ಲ. ಇನ್ನು ಕೆಲವು ಮಾಧ್ಯಮಗಳಿಗೆ ಗೊತ್ತಿದ್ದರೂ ಸಹ ಆಕೆಯನ್ನು ದೇಶದ್ರೋಹಿ ರೀತಿಯಲ್ಲಿ ಚಿತ್ರಿಸಲಾಯಿತು. ಈಗ ಸರ್ಕಾರ ಅವರ ಮೇಲೆ ಕ್ರಮ ತೆಗೆದುಕೊಳ್ಳಲು ಸೂಚಿಸುವಷ್ಟರ ಮಟ್ಟಿಗೆ ಪ್ರಕರಣ ಬಂದು ನಿಂತಿದೆ.

ಇದೇ ಸಂದರ್ಭದಲ್ಲಿ ಚುನಾವಣಾ ಸಮಯದಲ್ಲಿ ಪ್ರಗ್ಯಾ ಸಿಂಗ್ ಗಾಂಧಿ ಹಂತಕ ನಾಥೂರಾಮ್ ಗೋಡ್ಸೆಯನ್ನು ಹೊಗಳಿದ್ದರು. ಅದನ್ನೇ ದಕ್ಷಿಣ ಕನ್ನಡದ ಸಂಸದ ನಳೀನ್ ಕುಮಾರ್ ಕಟೀಲ್ ಮತ್ತು ಉತ್ತರ ಕನ್ನಡದ ಅನಂತ್ ಕುಮಾರ್ ಹೆಗ್ಡೆ ಪುನಾರಾವರ್ತಿಸಿದ್ದರು. ಆ ಮೂವರು ಈಗ ಲಕ್ಷ ಲಕ್ಷ ಮತಗಳ ಅಂತರದಿಂದ ಗೆದ್ದು ಸಂಸತ್ ಪ್ರವೇಶಿಸಿರುವುದನ್ನು ನಾವು ನೆನಪಿಸಿಕೊಳ್ಳಬೇಕಿದೆ.

ಈ ಕುರಿತು ನಾನುಗೌರಿ.ಕಾಂ ಜೊತೆ ಮಾತನಾಡಿದ ಪತ್ರಕರ್ತ ಗಿರೀಶ್ ತಾಳಿಕಟ್ಟೆ ಅವರು ಹೀಗೆಂದರು. ‘ಇಂದಿನ ಕಾಲ ಎತ್ತ ಸಾಗುತ್ತಿದೆ ಎಂಬುದಕ್ಕೆ ಈ ಘಟನೆ ನಿದರ್ಶನ. ನಿಜ ಗಾಂಧಿ ಪ್ರೇಮಿ ನಿಧಿ ಚೌಧರಿಯವರು ಮಾಡಿದ್ದ ಟ್ವೀಟ್‍ನಿಂದ ಅವರು ಸಮಸ್ಯೆಗೆ ಗುರಿಯಾಗುತ್ತಿದ್ದಾರೆ. ಅದೇ ಸಂದರ್ಭದಲ್ಲಿ ಗಾಂಧೀಜಿಯವರ ಕುರಿತು ದ್ವೇಷ ಭಾವ ಮೂಡಿಸುತ್ತಾ, ಗೋಡ್ಸೆಗೆ ಮಂದಿರ ಕಟ್ಟಿ ಬಹಿರಂಗವಾಗಿ ಜೈಕಾರ ಹಾಕುತ್ತಿರುವವರು ದೇಶಭಕ್ತರೆಂದು ಕರೆಸಿಕೊಳ್ಳುತ್ತಿರುವುದು ದುರಂತ’.

ಈ ಕುರಿತು ಮೊದಲು ಡೆಕ್ಕನ್ ಹೆರಾಲ್ಡ್ ಪತ್ರಿಕೆ ವರದಿ ಮಾಡಿತ್ತು. ನಂತರ ಅವರ ಸ್ಪಷ್ಟೀಕರಣವನ್ನು ಸೇರಿಸಿ ವರದಿ ಪ್ರಕಟಿಸಿದೆ. ಈ ಕುರಿತು ಕನ್ನಡದ ಪ್ರಮುಖ ಬರಹಗಾರರಾದ ಕೆ.ಪಿ ನಟರಾಜ್‍ರವರು ಮೊದಲು ಆ ಐಎಎಸ್ ಅಧಿಕಾರಿಯ ವಿರುದ್ಧ ಷೇರ್ ಮಾಡಿದ್ದ ಲೇಖನವನ್ನು ಅಳಿಸಿ ಪೂರ್ತಿ ಗಮನಿಸದೇ ಷೇರ್ ಮಾಡಿದ್ದಕ್ಕೆ ಕ್ಷಮೆ ಕೇಳುವ ಮೂಲಕ ಮಾದರಿಯಾಗಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...

ಕೇರಳ: ತಪ್ಪು ಪ್ರಕರಣದಲ್ಲಿ ಪೊಲೀಸರಿಂದ ಚಿತ್ರಹಿಂಸೆ: 29 ವರ್ಷದ ಮುಸ್ಲಿಂ ಯುವಕ ಸಾವು: ಕುಟುಂಬಕ್ಕಿದ್ದ ಒಂದೇ ಆಧಾರ ಕಳೆದುಕೊಂಡ ಪೋಷಕರು

ತಪ್ಪು ಗ್ರಹಿಕೆಯಿಂದ ಪೊಲೀಸ್ ಕಸ್ಟಡಿಗೆ ಪಡೆದ 29 ವರ್ಷದ ಮುಸ್ಲಿಂ ಯುವಕನೋರ್ವ, ಪೊಲೀಸರ ಕಠೋರ ಕಸ್ಟಡಿ ಚಿತ್ರಹಿಂಸೆಯಿಂದಾಗಿ ಪಕ್ಕೆಲುಬು ಮುರಿತಕ್ಕೊಳಗಾಗಿ, ಶ್ವಾಸಕೋಶದ ಸೋಂಕು ತೀವ್ರಗೊಂಡು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಅಮಾನವೀಯ ಹಾಗೂ ಆಘಾತಕಾರಿ...

ಮಾಧ್ಯಮ ತನಿಖಾ ವರದಿಗೆ ಹೆದರಿ ₹ 99 ಲಕ್ಷ ಸಬ್ಸಿಡಿ ವಾಪಸ್ ಮಾಡಿದ ಕೇಂದ್ರ BJP ಸಚಿವ

ತಮ್ಮದೇ ಸಚಿವಾಲಯದ ಯೋಜನೆಯಡಿ ಬರೋಬ್ಬರಿ 99 ಲಕ್ಷ ರೂಪಾಯಿ ಸರ್ಕಾರಿ ಸಬ್ಸಿಡಿ ಪಡೆದು ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದ್ದ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವ ಭಾಗೀರಥ್ ಚೌಧರಿ, ಕೊನೆಗೂ ಆ...

ಕಾಮನ್‌ವೆಲ್ತ್ ಕ್ರೀಡಾಕೂಟ: ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಶರ್ಮಿಳಾ ಧನ್ಖರ್

ಎರಡು ವರ್ಷವಿದ್ದಾಗ ಪೋಲಿಯೊದಿಂದ ಅಂಗವಿಕಲಳಾಗಿ, ಬಾಲ್ಯದಲ್ಲಿ ದೌರ್ಜನ್ಯಕ್ಕೊಳಗಾದ, ವಿವಾಹದ ಆಘಾತದಿಂದ ಬದುಕುಳಿದ ಮಹಿಳೆ ಶರ್ಮಿಳಾ ಧನ್ಖರ್, ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಗ್ಲ್ಯಾಸ್ಗೋದಲ್ಲಿ...

ಬಿಹಾರ: ವಿದ್ಯಾರ್ಥಿಗಳ ವಿರುದ್ಧ ಎಕೆ-47 ರೈಫಲ್ ಬಳಕೆ: ಗುಂಡು ಹಾರಿಸಲು ಆದೇಶಿಸಿದವರ ವಿರುದ್ಧ ತನಿಖೆಗೆ ಮನೋಜ್ ಝಾ ಆಗ್ರಹ; ಸುಪ್ರೀಂ ಮೆಟ್ಟಿಲೇರಿದ ಪ್ರಕರಣ

ನೀಟ್ (NEET) ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪವನ್ನು ಖಂಡಿಸಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ, ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಎಕೆ-47 ರೈಫಲ್‌ನಿಂದ ಗಾಳಿಯಲ್ಲಿ ಗುಂಡು ಹಾರಿಸುತ್ತಿದ್ದ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್...

ಧರ್ಮೇಂದ್ರ ಪ್ರಧಾನ್ ಖಾತೆ ಬದಲಾವಣೆ ಪ್ರಸ್ತಾವನೆ ತಿರಸ್ಕರಿಸಿದ್ದ ಸಿಜೆಪಿ: ವರದಿ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಜುಲೈ 25 ರಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ. ಆದರೆ, ಅದಕ್ಕೂ ಮೊದಲು ಕೇಂದ್ರ ಸರ್ಕಾರವು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ)...

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...