Homeಸಾಮಾಜಿಕಶತಾಯುಷಿಯಿಂದ ಮಠಾಧೀಶರಿಗೆ ಒಂದು ಪತ್ರ

ಶತಾಯುಷಿಯಿಂದ ಮಠಾಧೀಶರಿಗೆ ಒಂದು ಪತ್ರ

- Advertisement -
- Advertisement -

ಗೌರವಾನ್ವಿತ ಸ್ವಾಮೀಜಿಗಳೆ,

ಬಸವ ತತ್ವ ಅಸ್ತಿತ್ವಕ್ಕೆ ಬಂದ ಮೇಲೆ ಬಸವ ಅನುಯಾಯಿಗಳು ಜಾತಿ, ಮತ, ಪಂಥಗಳನ್ನು ತೊರೆದು ನಿಜ ಮಾನವರಾಗಿ ಬಾಳಬೇಕೆಂದು ತೀರ್ಮಾನಿಸಿದರೆಂಬುದು ತಿಳಿದ ಸಂಗತಿ. ಆದರೆ ಬಸವ ತತ್ವದ ಅಸ್ತಿತ್ವಕ್ಕೆ ಮುಂಚೆಯೇ ನಮ್ಮದು ಲಿಂಗಾಯತ ಮತ ಇತ್ತೆಂಬ ವಾದವನ್ನು ಪಂಚಾಚಾರ್ಯರು ಮುಂದಿಟ್ಟಿದ್ದಾರೆ. ಈಗ ಬಸವ ತತ್ವದವರಿಗೂ ತಮ್ಮ ರಂಭಾಪುರಿ ಮಠದವರಿಗೂ ನಡುವೆ ಹೋರಾಟ ಶುರುವಾಗಿದೆ. ಈ ಭಿನ್ನಾಭಿಪ್ರಾಯದ ವಿಚಾರವನ್ನು ಉಭಯತ್ರರೂ ಕೂತು, ಗೌರವಯುತವಾಗಿ ಚರ್ಚಿಸಿ ಒಂದು ತೀರ್ಮಾನಕ್ಕೆ ಬರಬಹುದಿತ್ತು. ಬದಲಿಗೆ ನಿಮ್ಮ ಜಗಳ ಈಗ ಬೀದಿಗೆ ಬಂದಿದೆ.

ತಾವುಗಳು ಶಿವನ ಭಕ್ತರಿಗೂ ಹಾಗೂ ಬಸವನ ಅನುಯಾಯಿಗಳಿಗೂ ನಡುವೆ ಸಾಮರಸ್ಯ ಮೂಡಿಸುವ ಬದಲಿಗೆ ವೈಮನಸ್ಯ ಹೆಚ್ಚಾಗಲು ಕಾರಣರಾಗಿದ್ದೀರಿ ಎಂಬುದನ್ನು ಅತ್ಯಂತ ನೋವಿನಿಂದ ಹೇಳಲೇಬೇಕಿದೆ. ಮಠಾಧಿಪತಿಗಳು ಸಮಾಜದಲ್ಲಿ ಶಾಂತಿ, ನೆಮ್ಮದಿ, ಸೌಹಾರ್ದತೆ ಬಿತ್ತಬೇಕು. ಅದು ಬಿಟ್ಟು ನಿಮ್ಮ ಪರಸ್ಪರರ ಭಿನ್ನಾಭಿಪ್ರಾಯಗಳನ್ನು ಮುಂದಿಟ್ಟುಕೊಂಡು ನೀವೇ ಬೀದಿ ಹೋರಾಟಕ್ಕಿಳಿದರೆ ತಾವು ಭಕ್ತರಿಗೆ ಏನು ಸಂದೇಶ ಕೊಟ್ಟಂತಾಗುತ್ತದೆ?

ತಮ್ಮ ಅನುಯಾಯಿಗಳ ನಡುವೆಯೇ ತಾವು ಸಾಮರಸ್ಯ ಸಾಧಿಸಲಾಗದಿದ್ದ ಮೇಲೆ ಮತ್ತೇನನ್ನು ಸಾಧಿಸುತ್ತೀರಿ? ಹೋಗಲಿ, ಇಂಥ ಮಠಗಳಿದ್ದು ಸಮಾಜಕ್ಕೆ ಪ್ರಯೋಜನವಾದರೂ ಏನು?

ಭಿನ್ನಮತಗಳ ಕಾರಣಕ್ಕೆ ಮಠಾಧೀಶರಾದ ತಾವುಗಳೇ ಬೀದಿಗಿಳಿದಿರುವ ಸನ್ನಿವೇಶದಲ್ಲಿ ಜನಸಾಮಾನ್ಯರು ಮಾರ್ಗದರ್ಶನಕ್ಕಾಗಿ ಯಾರ ಬಳಿಗೆ ಹೋಗಬೇಕು?

ಇದು ನಿಮಗೆ ಸಲ್ಲದು. ಇದು ಮಠಾಧೀಶರಿಗೆ ತಕ್ಕುನಾದ ನಡೆಯಲ್ಲ. ನಿಮ್ಮ ಮಾತುಗಳು ಹಾಗೂ ನಡವಳಿಕೆ ಜನರಿಗೆ ಅಸಹ್ಯ ಉಂಟುಮಾಡುತ್ತಿವೆ. ಹೆಂಡ, ಹಣ ಹಂಚಿ ಓಟು ಗಳಿಸುವ ರಾಜಕಾರಣಿಗಳ ಮಟ್ಟಕ್ಕೆ ಕೆಲವು ಮಠಾಧೀಶರು ಇಳಿದಿರುವುದು ಜನರಲ್ಲಿ ಜಿಗುಪ್ಸೆ ಮೂಡಿಸಿದೆ.

ನಿಮಗೆ ರಾಜ್ಯಾಂಗದ ಪರಿಕಲ್ಪನೆಯೇ ಇಲ್ಲವೇ? ಸ್ವಾತಂತ್ರ್ಯ, ಸಮಾನತೆ, ಸಹೋದರತ್ವ ಸಾರುವ ರಾಜ್ಯಾಂಗದ ಮಹತ್ವದ ಬಗ್ಗೆ ಅರಿವಿದೆಯೆ? ಎಂಬ ಪ್ರಶ್ನೆಗಳು ಸಹಜವಾಗಿ ಮೂಡುತ್ತವೆ. ಮಠಾಧೀಶರೆನಿಸಿಕೊಂಡ ತಾವು ಸಮಾಜದಲ್ಲಿ ಉನ್ನತ ಮೌಲ್ಯಗಳನ್ನು, ಆದರ್ಶಗಳನ್ನು ಬೋಧಿಸಬೇಕೆಂಬುದು ಶ್ರೀಸಾಮಾನ್ಯರ ಅಪೇಕ್ಷೆ.

ಈ ಹಿಂದೆ ಸಿರಿಗೆರೆ ಮಠದವರು ಜಗಳೂರು ಕ್ಷೇತ್ರದಲ್ಲಿ ಭ್ರಷ್ಟಾಚಾರರಹಿತವಾಗಿ, ಸೌಹಾರ್ದಯುತವಾಗಿ ಚುನಾವಣೆ ನಡೆಸುವ ಪ್ರಯೋಗ ಮಾಡಿದ್ದಾರೆ. ಜನರ ನಡುವೆ ಸಾಮರಸ್ಯ ಮೂಡಿಸಲು ಪ್ರಯತ್ನಿಸಿದ್ದಾರೆ. ಇದು ಸಂತರು, ಸನ್ಯಾಸಿಗಳು ಮಾಡಬೇಕಾದ ಮಾದರಿ ಕೆಲಸ. ಆದರೆ ತಾವು ಇಂಥಾ ಸನ್ಮಾರ್ಗವನ್ನು ಬಿಟ್ಟು ದುರ್ಮಾರ್ಗವನ್ನು ತುಳಿದಿದ್ದೀರಿ. ತಮ್ಮ ಮೇಲೆ ವಿಶ್ವಾಸವಿರಿಸಿರುವ ಭಕ್ತರನ್ನು ದಿಕ್ಕುತಪ್ಪಿಸುವ ಕೃತ್ಯದಲ್ಲಿ ತೊಡಗಿದ್ದೀರಿ.

ಸ್ವಾಮಿಗಳೇ,
ಇಂದಿನ ರಾಜಕೀಯ ಯಾವ ಹಂತಕ್ಕೆ ತಲುಪಿದೆಯೆಂಬುದು ಪಾಮರರಿಗೂ ತಿಳಿದಿರುವ ವಿಚಾರ. ಹೀಗಿರುವಾಗ ನಿತ್ಯವೂ ಜನರಿಗೆ ಉಪದೇಶ ಮಾಡುವ ತಮಗೆ ಈ ವಿಷಯ ತಿಳಿಯದೇ ಹೋಗಿರುವುದು ವಿಷಾದಕರ. ಅಧೋಗತಿಗಿಳಿದಿರುವ ರಾಜಕೀಯದ ಜೊತೆಗೆ ಧರ್ಮವನ್ನು ಬೆರೆಸುವ ನಿಮ್ಮ ಕೃತ್ಯದಿಂದ ಸಮಾಜವನ್ನು ಮತ್ತಷ್ಟು ವಿಪ್ಪತ್ತಿಗೆ ದೂಡಿದಂತಾಗುತ್ತದೆ.

ಮಠಾಧೀಶರೆನಿಸಿಕೊಂಡವರು ಜನರಿಗೆ ಸಾತ್ವಿಕ ಮಾರ್ಗ ಸೂಚಿಸುವ ಮಹತ್ಕಾರ್ಯ ಮಾಡಬೇಕಿತ್ತು. ಆದರೆ ಅದು ಬಿಟ್ಟು ರಾಜಕೀಯ ಪಕ್ಷಗಳಿಗೆ ಓಟು ಹಾಕಿಸುವ ಏಜೆಂಟರಂತೆ ವರ್ತಿಸುತ್ತಿರುವ ನಿಮ್ಮ ನಡೆ ಖಂಡನಾರ್ಹವಾದುದು. ಇದು `ಮಠಾಧೀಶ’ರ ಸ್ಥಾನಮಾನಕ್ಕೆ ಎಸಗುವ ಮಹಾಪರಾಧವಾಗುತ್ತದೆ. ಪೀಠಕ್ಕೆ ಮಾಡುವ ದ್ರೋಹವಾಗುತ್ತದೆ.

ಆದ್ದರಿಂದ ತಮ್ಮಲ್ಲಿ ನನ್ನ ಕಳಕಳಿಯ ಮನವಿ ಇಷ್ಟೆ. ಜನರ ಭಾವನೆಗಳಿಗೆ ಬೆಲೆ ಕೊಟ್ಟು ದಯಮಾಡಿ ತಮ್ಮ ಬೀದಿ ಕಚ್ಚಾಟವನ್ನು ಕೂಡಲೇ ನಿಲ್ಲಿಸಿ, ತಮ್ಮ ತಾತ್ವಿಕ ಭಿನ್ನಮತವನ್ನು ಸೌಹಾರ್ದಯುತ ಚರ್ಚೆಯ ಮೂಲಕ ಪರಿಹರಿಸಿಕೊಳ್ಳಿ. ಹಾಗೆಯೆ ತಮ್ಮ ರಾಜಕೀಯ ಪ್ರೇರಿತ ನಡವಳಿಕೆಗಳನ್ನು ಬದಲಿಸಿಕೊಂಡು ಪೀಠದ ಗೌರವವನ್ನು ಹಾಗೂ ತಮ್ಮ ಸ್ಥಾನಮಾನದ ಘನತೆಯನ್ನು ಕಾಪಾಡುತ್ತೀರೆಂದು ಆಶಿಸುತ್ತೇನೆ.

ವಂದನೆಗಳೊಂದಿಗೆ,
ಎಚ್.ಎಸ್.ದೊರೆಸ್ವಾಮಿ
ಬೆಂಗಳೂರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...