Homeಸಾಮಾಜಿಕಶತಾಯುಷಿಯಿಂದ ಮಠಾಧೀಶರಿಗೆ ಒಂದು ಪತ್ರ

ಶತಾಯುಷಿಯಿಂದ ಮಠಾಧೀಶರಿಗೆ ಒಂದು ಪತ್ರ

- Advertisement -
- Advertisement -

ಗೌರವಾನ್ವಿತ ಸ್ವಾಮೀಜಿಗಳೆ,

ಬಸವ ತತ್ವ ಅಸ್ತಿತ್ವಕ್ಕೆ ಬಂದ ಮೇಲೆ ಬಸವ ಅನುಯಾಯಿಗಳು ಜಾತಿ, ಮತ, ಪಂಥಗಳನ್ನು ತೊರೆದು ನಿಜ ಮಾನವರಾಗಿ ಬಾಳಬೇಕೆಂದು ತೀರ್ಮಾನಿಸಿದರೆಂಬುದು ತಿಳಿದ ಸಂಗತಿ. ಆದರೆ ಬಸವ ತತ್ವದ ಅಸ್ತಿತ್ವಕ್ಕೆ ಮುಂಚೆಯೇ ನಮ್ಮದು ಲಿಂಗಾಯತ ಮತ ಇತ್ತೆಂಬ ವಾದವನ್ನು ಪಂಚಾಚಾರ್ಯರು ಮುಂದಿಟ್ಟಿದ್ದಾರೆ. ಈಗ ಬಸವ ತತ್ವದವರಿಗೂ ತಮ್ಮ ರಂಭಾಪುರಿ ಮಠದವರಿಗೂ ನಡುವೆ ಹೋರಾಟ ಶುರುವಾಗಿದೆ. ಈ ಭಿನ್ನಾಭಿಪ್ರಾಯದ ವಿಚಾರವನ್ನು ಉಭಯತ್ರರೂ ಕೂತು, ಗೌರವಯುತವಾಗಿ ಚರ್ಚಿಸಿ ಒಂದು ತೀರ್ಮಾನಕ್ಕೆ ಬರಬಹುದಿತ್ತು. ಬದಲಿಗೆ ನಿಮ್ಮ ಜಗಳ ಈಗ ಬೀದಿಗೆ ಬಂದಿದೆ.

ತಾವುಗಳು ಶಿವನ ಭಕ್ತರಿಗೂ ಹಾಗೂ ಬಸವನ ಅನುಯಾಯಿಗಳಿಗೂ ನಡುವೆ ಸಾಮರಸ್ಯ ಮೂಡಿಸುವ ಬದಲಿಗೆ ವೈಮನಸ್ಯ ಹೆಚ್ಚಾಗಲು ಕಾರಣರಾಗಿದ್ದೀರಿ ಎಂಬುದನ್ನು ಅತ್ಯಂತ ನೋವಿನಿಂದ ಹೇಳಲೇಬೇಕಿದೆ. ಮಠಾಧಿಪತಿಗಳು ಸಮಾಜದಲ್ಲಿ ಶಾಂತಿ, ನೆಮ್ಮದಿ, ಸೌಹಾರ್ದತೆ ಬಿತ್ತಬೇಕು. ಅದು ಬಿಟ್ಟು ನಿಮ್ಮ ಪರಸ್ಪರರ ಭಿನ್ನಾಭಿಪ್ರಾಯಗಳನ್ನು ಮುಂದಿಟ್ಟುಕೊಂಡು ನೀವೇ ಬೀದಿ ಹೋರಾಟಕ್ಕಿಳಿದರೆ ತಾವು ಭಕ್ತರಿಗೆ ಏನು ಸಂದೇಶ ಕೊಟ್ಟಂತಾಗುತ್ತದೆ?

ತಮ್ಮ ಅನುಯಾಯಿಗಳ ನಡುವೆಯೇ ತಾವು ಸಾಮರಸ್ಯ ಸಾಧಿಸಲಾಗದಿದ್ದ ಮೇಲೆ ಮತ್ತೇನನ್ನು ಸಾಧಿಸುತ್ತೀರಿ? ಹೋಗಲಿ, ಇಂಥ ಮಠಗಳಿದ್ದು ಸಮಾಜಕ್ಕೆ ಪ್ರಯೋಜನವಾದರೂ ಏನು?

ಭಿನ್ನಮತಗಳ ಕಾರಣಕ್ಕೆ ಮಠಾಧೀಶರಾದ ತಾವುಗಳೇ ಬೀದಿಗಿಳಿದಿರುವ ಸನ್ನಿವೇಶದಲ್ಲಿ ಜನಸಾಮಾನ್ಯರು ಮಾರ್ಗದರ್ಶನಕ್ಕಾಗಿ ಯಾರ ಬಳಿಗೆ ಹೋಗಬೇಕು?

ಇದು ನಿಮಗೆ ಸಲ್ಲದು. ಇದು ಮಠಾಧೀಶರಿಗೆ ತಕ್ಕುನಾದ ನಡೆಯಲ್ಲ. ನಿಮ್ಮ ಮಾತುಗಳು ಹಾಗೂ ನಡವಳಿಕೆ ಜನರಿಗೆ ಅಸಹ್ಯ ಉಂಟುಮಾಡುತ್ತಿವೆ. ಹೆಂಡ, ಹಣ ಹಂಚಿ ಓಟು ಗಳಿಸುವ ರಾಜಕಾರಣಿಗಳ ಮಟ್ಟಕ್ಕೆ ಕೆಲವು ಮಠಾಧೀಶರು ಇಳಿದಿರುವುದು ಜನರಲ್ಲಿ ಜಿಗುಪ್ಸೆ ಮೂಡಿಸಿದೆ.

ನಿಮಗೆ ರಾಜ್ಯಾಂಗದ ಪರಿಕಲ್ಪನೆಯೇ ಇಲ್ಲವೇ? ಸ್ವಾತಂತ್ರ್ಯ, ಸಮಾನತೆ, ಸಹೋದರತ್ವ ಸಾರುವ ರಾಜ್ಯಾಂಗದ ಮಹತ್ವದ ಬಗ್ಗೆ ಅರಿವಿದೆಯೆ? ಎಂಬ ಪ್ರಶ್ನೆಗಳು ಸಹಜವಾಗಿ ಮೂಡುತ್ತವೆ. ಮಠಾಧೀಶರೆನಿಸಿಕೊಂಡ ತಾವು ಸಮಾಜದಲ್ಲಿ ಉನ್ನತ ಮೌಲ್ಯಗಳನ್ನು, ಆದರ್ಶಗಳನ್ನು ಬೋಧಿಸಬೇಕೆಂಬುದು ಶ್ರೀಸಾಮಾನ್ಯರ ಅಪೇಕ್ಷೆ.

ಈ ಹಿಂದೆ ಸಿರಿಗೆರೆ ಮಠದವರು ಜಗಳೂರು ಕ್ಷೇತ್ರದಲ್ಲಿ ಭ್ರಷ್ಟಾಚಾರರಹಿತವಾಗಿ, ಸೌಹಾರ್ದಯುತವಾಗಿ ಚುನಾವಣೆ ನಡೆಸುವ ಪ್ರಯೋಗ ಮಾಡಿದ್ದಾರೆ. ಜನರ ನಡುವೆ ಸಾಮರಸ್ಯ ಮೂಡಿಸಲು ಪ್ರಯತ್ನಿಸಿದ್ದಾರೆ. ಇದು ಸಂತರು, ಸನ್ಯಾಸಿಗಳು ಮಾಡಬೇಕಾದ ಮಾದರಿ ಕೆಲಸ. ಆದರೆ ತಾವು ಇಂಥಾ ಸನ್ಮಾರ್ಗವನ್ನು ಬಿಟ್ಟು ದುರ್ಮಾರ್ಗವನ್ನು ತುಳಿದಿದ್ದೀರಿ. ತಮ್ಮ ಮೇಲೆ ವಿಶ್ವಾಸವಿರಿಸಿರುವ ಭಕ್ತರನ್ನು ದಿಕ್ಕುತಪ್ಪಿಸುವ ಕೃತ್ಯದಲ್ಲಿ ತೊಡಗಿದ್ದೀರಿ.

ಸ್ವಾಮಿಗಳೇ,
ಇಂದಿನ ರಾಜಕೀಯ ಯಾವ ಹಂತಕ್ಕೆ ತಲುಪಿದೆಯೆಂಬುದು ಪಾಮರರಿಗೂ ತಿಳಿದಿರುವ ವಿಚಾರ. ಹೀಗಿರುವಾಗ ನಿತ್ಯವೂ ಜನರಿಗೆ ಉಪದೇಶ ಮಾಡುವ ತಮಗೆ ಈ ವಿಷಯ ತಿಳಿಯದೇ ಹೋಗಿರುವುದು ವಿಷಾದಕರ. ಅಧೋಗತಿಗಿಳಿದಿರುವ ರಾಜಕೀಯದ ಜೊತೆಗೆ ಧರ್ಮವನ್ನು ಬೆರೆಸುವ ನಿಮ್ಮ ಕೃತ್ಯದಿಂದ ಸಮಾಜವನ್ನು ಮತ್ತಷ್ಟು ವಿಪ್ಪತ್ತಿಗೆ ದೂಡಿದಂತಾಗುತ್ತದೆ.

ಮಠಾಧೀಶರೆನಿಸಿಕೊಂಡವರು ಜನರಿಗೆ ಸಾತ್ವಿಕ ಮಾರ್ಗ ಸೂಚಿಸುವ ಮಹತ್ಕಾರ್ಯ ಮಾಡಬೇಕಿತ್ತು. ಆದರೆ ಅದು ಬಿಟ್ಟು ರಾಜಕೀಯ ಪಕ್ಷಗಳಿಗೆ ಓಟು ಹಾಕಿಸುವ ಏಜೆಂಟರಂತೆ ವರ್ತಿಸುತ್ತಿರುವ ನಿಮ್ಮ ನಡೆ ಖಂಡನಾರ್ಹವಾದುದು. ಇದು `ಮಠಾಧೀಶ’ರ ಸ್ಥಾನಮಾನಕ್ಕೆ ಎಸಗುವ ಮಹಾಪರಾಧವಾಗುತ್ತದೆ. ಪೀಠಕ್ಕೆ ಮಾಡುವ ದ್ರೋಹವಾಗುತ್ತದೆ.

ಆದ್ದರಿಂದ ತಮ್ಮಲ್ಲಿ ನನ್ನ ಕಳಕಳಿಯ ಮನವಿ ಇಷ್ಟೆ. ಜನರ ಭಾವನೆಗಳಿಗೆ ಬೆಲೆ ಕೊಟ್ಟು ದಯಮಾಡಿ ತಮ್ಮ ಬೀದಿ ಕಚ್ಚಾಟವನ್ನು ಕೂಡಲೇ ನಿಲ್ಲಿಸಿ, ತಮ್ಮ ತಾತ್ವಿಕ ಭಿನ್ನಮತವನ್ನು ಸೌಹಾರ್ದಯುತ ಚರ್ಚೆಯ ಮೂಲಕ ಪರಿಹರಿಸಿಕೊಳ್ಳಿ. ಹಾಗೆಯೆ ತಮ್ಮ ರಾಜಕೀಯ ಪ್ರೇರಿತ ನಡವಳಿಕೆಗಳನ್ನು ಬದಲಿಸಿಕೊಂಡು ಪೀಠದ ಗೌರವವನ್ನು ಹಾಗೂ ತಮ್ಮ ಸ್ಥಾನಮಾನದ ಘನತೆಯನ್ನು ಕಾಪಾಡುತ್ತೀರೆಂದು ಆಶಿಸುತ್ತೇನೆ.

ವಂದನೆಗಳೊಂದಿಗೆ,
ಎಚ್.ಎಸ್.ದೊರೆಸ್ವಾಮಿ
ಬೆಂಗಳೂರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...