Homeಸಾಮಾಜಿಕಶತಾಯುಷಿಯಿಂದ ಮಠಾಧೀಶರಿಗೆ ಒಂದು ಪತ್ರ

ಶತಾಯುಷಿಯಿಂದ ಮಠಾಧೀಶರಿಗೆ ಒಂದು ಪತ್ರ

- Advertisement -
- Advertisement -

ಗೌರವಾನ್ವಿತ ಸ್ವಾಮೀಜಿಗಳೆ,

ಬಸವ ತತ್ವ ಅಸ್ತಿತ್ವಕ್ಕೆ ಬಂದ ಮೇಲೆ ಬಸವ ಅನುಯಾಯಿಗಳು ಜಾತಿ, ಮತ, ಪಂಥಗಳನ್ನು ತೊರೆದು ನಿಜ ಮಾನವರಾಗಿ ಬಾಳಬೇಕೆಂದು ತೀರ್ಮಾನಿಸಿದರೆಂಬುದು ತಿಳಿದ ಸಂಗತಿ. ಆದರೆ ಬಸವ ತತ್ವದ ಅಸ್ತಿತ್ವಕ್ಕೆ ಮುಂಚೆಯೇ ನಮ್ಮದು ಲಿಂಗಾಯತ ಮತ ಇತ್ತೆಂಬ ವಾದವನ್ನು ಪಂಚಾಚಾರ್ಯರು ಮುಂದಿಟ್ಟಿದ್ದಾರೆ. ಈಗ ಬಸವ ತತ್ವದವರಿಗೂ ತಮ್ಮ ರಂಭಾಪುರಿ ಮಠದವರಿಗೂ ನಡುವೆ ಹೋರಾಟ ಶುರುವಾಗಿದೆ. ಈ ಭಿನ್ನಾಭಿಪ್ರಾಯದ ವಿಚಾರವನ್ನು ಉಭಯತ್ರರೂ ಕೂತು, ಗೌರವಯುತವಾಗಿ ಚರ್ಚಿಸಿ ಒಂದು ತೀರ್ಮಾನಕ್ಕೆ ಬರಬಹುದಿತ್ತು. ಬದಲಿಗೆ ನಿಮ್ಮ ಜಗಳ ಈಗ ಬೀದಿಗೆ ಬಂದಿದೆ.

ತಾವುಗಳು ಶಿವನ ಭಕ್ತರಿಗೂ ಹಾಗೂ ಬಸವನ ಅನುಯಾಯಿಗಳಿಗೂ ನಡುವೆ ಸಾಮರಸ್ಯ ಮೂಡಿಸುವ ಬದಲಿಗೆ ವೈಮನಸ್ಯ ಹೆಚ್ಚಾಗಲು ಕಾರಣರಾಗಿದ್ದೀರಿ ಎಂಬುದನ್ನು ಅತ್ಯಂತ ನೋವಿನಿಂದ ಹೇಳಲೇಬೇಕಿದೆ. ಮಠಾಧಿಪತಿಗಳು ಸಮಾಜದಲ್ಲಿ ಶಾಂತಿ, ನೆಮ್ಮದಿ, ಸೌಹಾರ್ದತೆ ಬಿತ್ತಬೇಕು. ಅದು ಬಿಟ್ಟು ನಿಮ್ಮ ಪರಸ್ಪರರ ಭಿನ್ನಾಭಿಪ್ರಾಯಗಳನ್ನು ಮುಂದಿಟ್ಟುಕೊಂಡು ನೀವೇ ಬೀದಿ ಹೋರಾಟಕ್ಕಿಳಿದರೆ ತಾವು ಭಕ್ತರಿಗೆ ಏನು ಸಂದೇಶ ಕೊಟ್ಟಂತಾಗುತ್ತದೆ?

ತಮ್ಮ ಅನುಯಾಯಿಗಳ ನಡುವೆಯೇ ತಾವು ಸಾಮರಸ್ಯ ಸಾಧಿಸಲಾಗದಿದ್ದ ಮೇಲೆ ಮತ್ತೇನನ್ನು ಸಾಧಿಸುತ್ತೀರಿ? ಹೋಗಲಿ, ಇಂಥ ಮಠಗಳಿದ್ದು ಸಮಾಜಕ್ಕೆ ಪ್ರಯೋಜನವಾದರೂ ಏನು?

ಭಿನ್ನಮತಗಳ ಕಾರಣಕ್ಕೆ ಮಠಾಧೀಶರಾದ ತಾವುಗಳೇ ಬೀದಿಗಿಳಿದಿರುವ ಸನ್ನಿವೇಶದಲ್ಲಿ ಜನಸಾಮಾನ್ಯರು ಮಾರ್ಗದರ್ಶನಕ್ಕಾಗಿ ಯಾರ ಬಳಿಗೆ ಹೋಗಬೇಕು?

ಇದು ನಿಮಗೆ ಸಲ್ಲದು. ಇದು ಮಠಾಧೀಶರಿಗೆ ತಕ್ಕುನಾದ ನಡೆಯಲ್ಲ. ನಿಮ್ಮ ಮಾತುಗಳು ಹಾಗೂ ನಡವಳಿಕೆ ಜನರಿಗೆ ಅಸಹ್ಯ ಉಂಟುಮಾಡುತ್ತಿವೆ. ಹೆಂಡ, ಹಣ ಹಂಚಿ ಓಟು ಗಳಿಸುವ ರಾಜಕಾರಣಿಗಳ ಮಟ್ಟಕ್ಕೆ ಕೆಲವು ಮಠಾಧೀಶರು ಇಳಿದಿರುವುದು ಜನರಲ್ಲಿ ಜಿಗುಪ್ಸೆ ಮೂಡಿಸಿದೆ.

ನಿಮಗೆ ರಾಜ್ಯಾಂಗದ ಪರಿಕಲ್ಪನೆಯೇ ಇಲ್ಲವೇ? ಸ್ವಾತಂತ್ರ್ಯ, ಸಮಾನತೆ, ಸಹೋದರತ್ವ ಸಾರುವ ರಾಜ್ಯಾಂಗದ ಮಹತ್ವದ ಬಗ್ಗೆ ಅರಿವಿದೆಯೆ? ಎಂಬ ಪ್ರಶ್ನೆಗಳು ಸಹಜವಾಗಿ ಮೂಡುತ್ತವೆ. ಮಠಾಧೀಶರೆನಿಸಿಕೊಂಡ ತಾವು ಸಮಾಜದಲ್ಲಿ ಉನ್ನತ ಮೌಲ್ಯಗಳನ್ನು, ಆದರ್ಶಗಳನ್ನು ಬೋಧಿಸಬೇಕೆಂಬುದು ಶ್ರೀಸಾಮಾನ್ಯರ ಅಪೇಕ್ಷೆ.

ಈ ಹಿಂದೆ ಸಿರಿಗೆರೆ ಮಠದವರು ಜಗಳೂರು ಕ್ಷೇತ್ರದಲ್ಲಿ ಭ್ರಷ್ಟಾಚಾರರಹಿತವಾಗಿ, ಸೌಹಾರ್ದಯುತವಾಗಿ ಚುನಾವಣೆ ನಡೆಸುವ ಪ್ರಯೋಗ ಮಾಡಿದ್ದಾರೆ. ಜನರ ನಡುವೆ ಸಾಮರಸ್ಯ ಮೂಡಿಸಲು ಪ್ರಯತ್ನಿಸಿದ್ದಾರೆ. ಇದು ಸಂತರು, ಸನ್ಯಾಸಿಗಳು ಮಾಡಬೇಕಾದ ಮಾದರಿ ಕೆಲಸ. ಆದರೆ ತಾವು ಇಂಥಾ ಸನ್ಮಾರ್ಗವನ್ನು ಬಿಟ್ಟು ದುರ್ಮಾರ್ಗವನ್ನು ತುಳಿದಿದ್ದೀರಿ. ತಮ್ಮ ಮೇಲೆ ವಿಶ್ವಾಸವಿರಿಸಿರುವ ಭಕ್ತರನ್ನು ದಿಕ್ಕುತಪ್ಪಿಸುವ ಕೃತ್ಯದಲ್ಲಿ ತೊಡಗಿದ್ದೀರಿ.

ಸ್ವಾಮಿಗಳೇ,
ಇಂದಿನ ರಾಜಕೀಯ ಯಾವ ಹಂತಕ್ಕೆ ತಲುಪಿದೆಯೆಂಬುದು ಪಾಮರರಿಗೂ ತಿಳಿದಿರುವ ವಿಚಾರ. ಹೀಗಿರುವಾಗ ನಿತ್ಯವೂ ಜನರಿಗೆ ಉಪದೇಶ ಮಾಡುವ ತಮಗೆ ಈ ವಿಷಯ ತಿಳಿಯದೇ ಹೋಗಿರುವುದು ವಿಷಾದಕರ. ಅಧೋಗತಿಗಿಳಿದಿರುವ ರಾಜಕೀಯದ ಜೊತೆಗೆ ಧರ್ಮವನ್ನು ಬೆರೆಸುವ ನಿಮ್ಮ ಕೃತ್ಯದಿಂದ ಸಮಾಜವನ್ನು ಮತ್ತಷ್ಟು ವಿಪ್ಪತ್ತಿಗೆ ದೂಡಿದಂತಾಗುತ್ತದೆ.

ಮಠಾಧೀಶರೆನಿಸಿಕೊಂಡವರು ಜನರಿಗೆ ಸಾತ್ವಿಕ ಮಾರ್ಗ ಸೂಚಿಸುವ ಮಹತ್ಕಾರ್ಯ ಮಾಡಬೇಕಿತ್ತು. ಆದರೆ ಅದು ಬಿಟ್ಟು ರಾಜಕೀಯ ಪಕ್ಷಗಳಿಗೆ ಓಟು ಹಾಕಿಸುವ ಏಜೆಂಟರಂತೆ ವರ್ತಿಸುತ್ತಿರುವ ನಿಮ್ಮ ನಡೆ ಖಂಡನಾರ್ಹವಾದುದು. ಇದು `ಮಠಾಧೀಶ’ರ ಸ್ಥಾನಮಾನಕ್ಕೆ ಎಸಗುವ ಮಹಾಪರಾಧವಾಗುತ್ತದೆ. ಪೀಠಕ್ಕೆ ಮಾಡುವ ದ್ರೋಹವಾಗುತ್ತದೆ.

ಆದ್ದರಿಂದ ತಮ್ಮಲ್ಲಿ ನನ್ನ ಕಳಕಳಿಯ ಮನವಿ ಇಷ್ಟೆ. ಜನರ ಭಾವನೆಗಳಿಗೆ ಬೆಲೆ ಕೊಟ್ಟು ದಯಮಾಡಿ ತಮ್ಮ ಬೀದಿ ಕಚ್ಚಾಟವನ್ನು ಕೂಡಲೇ ನಿಲ್ಲಿಸಿ, ತಮ್ಮ ತಾತ್ವಿಕ ಭಿನ್ನಮತವನ್ನು ಸೌಹಾರ್ದಯುತ ಚರ್ಚೆಯ ಮೂಲಕ ಪರಿಹರಿಸಿಕೊಳ್ಳಿ. ಹಾಗೆಯೆ ತಮ್ಮ ರಾಜಕೀಯ ಪ್ರೇರಿತ ನಡವಳಿಕೆಗಳನ್ನು ಬದಲಿಸಿಕೊಂಡು ಪೀಠದ ಗೌರವವನ್ನು ಹಾಗೂ ತಮ್ಮ ಸ್ಥಾನಮಾನದ ಘನತೆಯನ್ನು ಕಾಪಾಡುತ್ತೀರೆಂದು ಆಶಿಸುತ್ತೇನೆ.

ವಂದನೆಗಳೊಂದಿಗೆ,
ಎಚ್.ಎಸ್.ದೊರೆಸ್ವಾಮಿ
ಬೆಂಗಳೂರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....