Homeಸಾಮಾಜಿಕಶತಾಯುಷಿಯಿಂದ ಮಠಾಧೀಶರಿಗೆ ಒಂದು ಪತ್ರ

ಶತಾಯುಷಿಯಿಂದ ಮಠಾಧೀಶರಿಗೆ ಒಂದು ಪತ್ರ

- Advertisement -
- Advertisement -

ಗೌರವಾನ್ವಿತ ಸ್ವಾಮೀಜಿಗಳೆ,

ಬಸವ ತತ್ವ ಅಸ್ತಿತ್ವಕ್ಕೆ ಬಂದ ಮೇಲೆ ಬಸವ ಅನುಯಾಯಿಗಳು ಜಾತಿ, ಮತ, ಪಂಥಗಳನ್ನು ತೊರೆದು ನಿಜ ಮಾನವರಾಗಿ ಬಾಳಬೇಕೆಂದು ತೀರ್ಮಾನಿಸಿದರೆಂಬುದು ತಿಳಿದ ಸಂಗತಿ. ಆದರೆ ಬಸವ ತತ್ವದ ಅಸ್ತಿತ್ವಕ್ಕೆ ಮುಂಚೆಯೇ ನಮ್ಮದು ಲಿಂಗಾಯತ ಮತ ಇತ್ತೆಂಬ ವಾದವನ್ನು ಪಂಚಾಚಾರ್ಯರು ಮುಂದಿಟ್ಟಿದ್ದಾರೆ. ಈಗ ಬಸವ ತತ್ವದವರಿಗೂ ತಮ್ಮ ರಂಭಾಪುರಿ ಮಠದವರಿಗೂ ನಡುವೆ ಹೋರಾಟ ಶುರುವಾಗಿದೆ. ಈ ಭಿನ್ನಾಭಿಪ್ರಾಯದ ವಿಚಾರವನ್ನು ಉಭಯತ್ರರೂ ಕೂತು, ಗೌರವಯುತವಾಗಿ ಚರ್ಚಿಸಿ ಒಂದು ತೀರ್ಮಾನಕ್ಕೆ ಬರಬಹುದಿತ್ತು. ಬದಲಿಗೆ ನಿಮ್ಮ ಜಗಳ ಈಗ ಬೀದಿಗೆ ಬಂದಿದೆ.

ತಾವುಗಳು ಶಿವನ ಭಕ್ತರಿಗೂ ಹಾಗೂ ಬಸವನ ಅನುಯಾಯಿಗಳಿಗೂ ನಡುವೆ ಸಾಮರಸ್ಯ ಮೂಡಿಸುವ ಬದಲಿಗೆ ವೈಮನಸ್ಯ ಹೆಚ್ಚಾಗಲು ಕಾರಣರಾಗಿದ್ದೀರಿ ಎಂಬುದನ್ನು ಅತ್ಯಂತ ನೋವಿನಿಂದ ಹೇಳಲೇಬೇಕಿದೆ. ಮಠಾಧಿಪತಿಗಳು ಸಮಾಜದಲ್ಲಿ ಶಾಂತಿ, ನೆಮ್ಮದಿ, ಸೌಹಾರ್ದತೆ ಬಿತ್ತಬೇಕು. ಅದು ಬಿಟ್ಟು ನಿಮ್ಮ ಪರಸ್ಪರರ ಭಿನ್ನಾಭಿಪ್ರಾಯಗಳನ್ನು ಮುಂದಿಟ್ಟುಕೊಂಡು ನೀವೇ ಬೀದಿ ಹೋರಾಟಕ್ಕಿಳಿದರೆ ತಾವು ಭಕ್ತರಿಗೆ ಏನು ಸಂದೇಶ ಕೊಟ್ಟಂತಾಗುತ್ತದೆ?

ತಮ್ಮ ಅನುಯಾಯಿಗಳ ನಡುವೆಯೇ ತಾವು ಸಾಮರಸ್ಯ ಸಾಧಿಸಲಾಗದಿದ್ದ ಮೇಲೆ ಮತ್ತೇನನ್ನು ಸಾಧಿಸುತ್ತೀರಿ? ಹೋಗಲಿ, ಇಂಥ ಮಠಗಳಿದ್ದು ಸಮಾಜಕ್ಕೆ ಪ್ರಯೋಜನವಾದರೂ ಏನು?

ಭಿನ್ನಮತಗಳ ಕಾರಣಕ್ಕೆ ಮಠಾಧೀಶರಾದ ತಾವುಗಳೇ ಬೀದಿಗಿಳಿದಿರುವ ಸನ್ನಿವೇಶದಲ್ಲಿ ಜನಸಾಮಾನ್ಯರು ಮಾರ್ಗದರ್ಶನಕ್ಕಾಗಿ ಯಾರ ಬಳಿಗೆ ಹೋಗಬೇಕು?

ಇದು ನಿಮಗೆ ಸಲ್ಲದು. ಇದು ಮಠಾಧೀಶರಿಗೆ ತಕ್ಕುನಾದ ನಡೆಯಲ್ಲ. ನಿಮ್ಮ ಮಾತುಗಳು ಹಾಗೂ ನಡವಳಿಕೆ ಜನರಿಗೆ ಅಸಹ್ಯ ಉಂಟುಮಾಡುತ್ತಿವೆ. ಹೆಂಡ, ಹಣ ಹಂಚಿ ಓಟು ಗಳಿಸುವ ರಾಜಕಾರಣಿಗಳ ಮಟ್ಟಕ್ಕೆ ಕೆಲವು ಮಠಾಧೀಶರು ಇಳಿದಿರುವುದು ಜನರಲ್ಲಿ ಜಿಗುಪ್ಸೆ ಮೂಡಿಸಿದೆ.

ನಿಮಗೆ ರಾಜ್ಯಾಂಗದ ಪರಿಕಲ್ಪನೆಯೇ ಇಲ್ಲವೇ? ಸ್ವಾತಂತ್ರ್ಯ, ಸಮಾನತೆ, ಸಹೋದರತ್ವ ಸಾರುವ ರಾಜ್ಯಾಂಗದ ಮಹತ್ವದ ಬಗ್ಗೆ ಅರಿವಿದೆಯೆ? ಎಂಬ ಪ್ರಶ್ನೆಗಳು ಸಹಜವಾಗಿ ಮೂಡುತ್ತವೆ. ಮಠಾಧೀಶರೆನಿಸಿಕೊಂಡ ತಾವು ಸಮಾಜದಲ್ಲಿ ಉನ್ನತ ಮೌಲ್ಯಗಳನ್ನು, ಆದರ್ಶಗಳನ್ನು ಬೋಧಿಸಬೇಕೆಂಬುದು ಶ್ರೀಸಾಮಾನ್ಯರ ಅಪೇಕ್ಷೆ.

ಈ ಹಿಂದೆ ಸಿರಿಗೆರೆ ಮಠದವರು ಜಗಳೂರು ಕ್ಷೇತ್ರದಲ್ಲಿ ಭ್ರಷ್ಟಾಚಾರರಹಿತವಾಗಿ, ಸೌಹಾರ್ದಯುತವಾಗಿ ಚುನಾವಣೆ ನಡೆಸುವ ಪ್ರಯೋಗ ಮಾಡಿದ್ದಾರೆ. ಜನರ ನಡುವೆ ಸಾಮರಸ್ಯ ಮೂಡಿಸಲು ಪ್ರಯತ್ನಿಸಿದ್ದಾರೆ. ಇದು ಸಂತರು, ಸನ್ಯಾಸಿಗಳು ಮಾಡಬೇಕಾದ ಮಾದರಿ ಕೆಲಸ. ಆದರೆ ತಾವು ಇಂಥಾ ಸನ್ಮಾರ್ಗವನ್ನು ಬಿಟ್ಟು ದುರ್ಮಾರ್ಗವನ್ನು ತುಳಿದಿದ್ದೀರಿ. ತಮ್ಮ ಮೇಲೆ ವಿಶ್ವಾಸವಿರಿಸಿರುವ ಭಕ್ತರನ್ನು ದಿಕ್ಕುತಪ್ಪಿಸುವ ಕೃತ್ಯದಲ್ಲಿ ತೊಡಗಿದ್ದೀರಿ.

ಸ್ವಾಮಿಗಳೇ,
ಇಂದಿನ ರಾಜಕೀಯ ಯಾವ ಹಂತಕ್ಕೆ ತಲುಪಿದೆಯೆಂಬುದು ಪಾಮರರಿಗೂ ತಿಳಿದಿರುವ ವಿಚಾರ. ಹೀಗಿರುವಾಗ ನಿತ್ಯವೂ ಜನರಿಗೆ ಉಪದೇಶ ಮಾಡುವ ತಮಗೆ ಈ ವಿಷಯ ತಿಳಿಯದೇ ಹೋಗಿರುವುದು ವಿಷಾದಕರ. ಅಧೋಗತಿಗಿಳಿದಿರುವ ರಾಜಕೀಯದ ಜೊತೆಗೆ ಧರ್ಮವನ್ನು ಬೆರೆಸುವ ನಿಮ್ಮ ಕೃತ್ಯದಿಂದ ಸಮಾಜವನ್ನು ಮತ್ತಷ್ಟು ವಿಪ್ಪತ್ತಿಗೆ ದೂಡಿದಂತಾಗುತ್ತದೆ.

ಮಠಾಧೀಶರೆನಿಸಿಕೊಂಡವರು ಜನರಿಗೆ ಸಾತ್ವಿಕ ಮಾರ್ಗ ಸೂಚಿಸುವ ಮಹತ್ಕಾರ್ಯ ಮಾಡಬೇಕಿತ್ತು. ಆದರೆ ಅದು ಬಿಟ್ಟು ರಾಜಕೀಯ ಪಕ್ಷಗಳಿಗೆ ಓಟು ಹಾಕಿಸುವ ಏಜೆಂಟರಂತೆ ವರ್ತಿಸುತ್ತಿರುವ ನಿಮ್ಮ ನಡೆ ಖಂಡನಾರ್ಹವಾದುದು. ಇದು `ಮಠಾಧೀಶ’ರ ಸ್ಥಾನಮಾನಕ್ಕೆ ಎಸಗುವ ಮಹಾಪರಾಧವಾಗುತ್ತದೆ. ಪೀಠಕ್ಕೆ ಮಾಡುವ ದ್ರೋಹವಾಗುತ್ತದೆ.

ಆದ್ದರಿಂದ ತಮ್ಮಲ್ಲಿ ನನ್ನ ಕಳಕಳಿಯ ಮನವಿ ಇಷ್ಟೆ. ಜನರ ಭಾವನೆಗಳಿಗೆ ಬೆಲೆ ಕೊಟ್ಟು ದಯಮಾಡಿ ತಮ್ಮ ಬೀದಿ ಕಚ್ಚಾಟವನ್ನು ಕೂಡಲೇ ನಿಲ್ಲಿಸಿ, ತಮ್ಮ ತಾತ್ವಿಕ ಭಿನ್ನಮತವನ್ನು ಸೌಹಾರ್ದಯುತ ಚರ್ಚೆಯ ಮೂಲಕ ಪರಿಹರಿಸಿಕೊಳ್ಳಿ. ಹಾಗೆಯೆ ತಮ್ಮ ರಾಜಕೀಯ ಪ್ರೇರಿತ ನಡವಳಿಕೆಗಳನ್ನು ಬದಲಿಸಿಕೊಂಡು ಪೀಠದ ಗೌರವವನ್ನು ಹಾಗೂ ತಮ್ಮ ಸ್ಥಾನಮಾನದ ಘನತೆಯನ್ನು ಕಾಪಾಡುತ್ತೀರೆಂದು ಆಶಿಸುತ್ತೇನೆ.

ವಂದನೆಗಳೊಂದಿಗೆ,
ಎಚ್.ಎಸ್.ದೊರೆಸ್ವಾಮಿ
ಬೆಂಗಳೂರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....