Homeಕರ್ನಾಟಕಶರಾವತಿ ನೀರು ಬೆಂಗಳೂರಿಗೆ ತರಲು ಸಾಧ್ಯವಾ?

ಶರಾವತಿ ನೀರು ಬೆಂಗಳೂರಿಗೆ ತರಲು ಸಾಧ್ಯವಾ?

- Advertisement -
- Advertisement -

| ಶುದ್ದೋದನ |

ಲಿಂಗನಮಕ್ಕಿ, ಕಾರ್ಗಲ್, ಚಕ್ರಾ, ವಾರಾಹಿ, ಸಾವೆಂಹಕ್ಕಲು, ಗಾಜನೂರು, ಗೇರುಸೊಪ್ಪ, ಭದ್ರಾ, ಮಾಣಿ, ನಾಗಝರಿ ಯೋಜನೆಗಳಿಂದ ಕಷ್ಟ-ನಷ್ಟ ಅನುಭವಿಸಿದ ಜನರ ಕಲ್ಯಾಣಕ್ಕಾಗಿ ಒಂದೇ ಒಂದು ಯೋಜನೆ ರೂಪಿಸದ ಸರ್ಕಾರಿ ಮಂದಿ ಬೆಂಗಳೂರಿನ ಉದ್ಧಾರಕ್ಕಾಗಿ ಮತ್ತದೇ ಜನ ಸಮೂಹವನ್ನು ಬಲಿಗೊಡಲು ರೆಡಿಯಾಗಿದ್ದಾರೆಂಬುದೇ ವಿಪರ್ಯಾಸ! ಈ ನೀರು ಯೋಜನೆಯಿಂದ ಮರ-ಗಿಡ ನಾಶವಾಗುತ್ತದೆ.

ಇದೊಂಥರಾ ತಮಾಷೆ! ಶರಾವತಿ ನದಿ ದಡದಲ್ಲೇ ಕುಡಿವ ನೀರಿಗಾಗಿ ಹಾಹಾಕಾರ ಎದ್ದಿರುವಾಗ ಲಿಂಗನಮಕ್ಕಿ ಜಲಾಶಯದ ನೀರಿನಿಂದ ಬೃಹತ್ ಬೆಂಗಳೂರಿನ ದಾಹ ತೀರಿಸುವ “ವ್ಯರ್ಥ ಯೋಜನೆ”ಗೆ ಅಧಿಕಾರಸ್ಥ ಪ್ರಭೃತಿಗಳು ಸ್ಕೆಚ್ ಹಾಕುತ್ತಿದ್ದಾರೆ! ಬೆಂಗಳೂರು ಅಭಿವೃದ್ಧಿ ಮಂತ್ರಿ ಪರಮ್ ಸಾಹೇಬರ ಮೇಧಾವಿ ಮೆದುಳಿಗೆ ಈ ಯೋಚನೆ ಅದ್ಹೇಗೆ ಹೊಳೆಯಿತೋ ಏನೋ? ಲಿಂಗನಮಕ್ಕಿಯಲ್ಲಿ ವಿದ್ಯುತ್ ಉತ್ಪಾದಿಸಿದ ನಂತರ ಸಮುದ್ರದತ್ತ ಸಾಗಿ ಪೋಲಾಗುವ ನೀರನ್ನು ಹಿಡಿದು ಬೆಂಗಳೂರಿನತ್ತ ಹೊರಳಿಸುವ ಬಗ್ಗೆ ಪರಮ್ ಹೇಳಿಕೆ ಕೊಟ್ಟಿದ್ದೇ ಕೊಟ್ಟಿದ್ದು ಮಲೆನಾಡಲ್ಲಿ ಸಿಡಿಲು ಬಡಿದಂತಾಗಿದೆ.

ಇದೊಂದು ಅಪ್ಪಟ ಅವೈಜ್ಞಾನಿಕ ಯೋಜನೆ; ತಾಂತ್ರಿಕವಾಗೂ ಕಾರ್ಯಸಾಧುವಲ್ಲ. ಆಡಳಿತಗಾರರ ಕಿಸೆ ತುಂಬುವ ಕಿಕ್‍ಬ್ಯಾಕ್ ಕರಾಮತ್ತು. ಈ ಯೋಜನೆಯಿಂದ ಹಲವು ಹೊಡೆತ ತಿಂದಿರುವ ಶರಾವತಿ ಕೊಳ್ಳದ ಪರಿಸರದ ಮೇಲೆ ಮತ್ತೊಂದು ಭೀಕರ ದಾಳಿಯಾಗುತ್ತದೆ. ಲಿಂಗನಮಕ್ಕಿ ವಿದ್ಯುತ್ ಯೋಜನೆಯಿಂದ ಮುಳುಗಡೆಯಾದ ಏರಿಯಾದ ಜನರಿಗೆ ಇವತ್ತಿಗೂ ನ್ಯಾಯ ಒದಗಿಸಲಾಗಿಲ್ಲ. ಪುನರ್ವಸತಿ ಕೇಂದ್ರಗಳಲ್ಲಿ ಬದುಕು ರೂಪಿಸಿಕೊಳ್ಳಲಾಗದೇ ಹಳ್ಳಿ-ಹಳ್ಳಿಗಳು ಬೀದಿ ಪಾಲಾಗಿವೆ. ನಿರಾಶ್ರಿತರ ಏರಿಯಾದಲ್ಲಿ ಕನಿಷ್ಟ ಗುಟುಕು ಕುಡಿವ ನೀರಿನ ವ್ಯವಸ್ಥೆಯೂ ಆಳುವ ಹೇತ್ಲಾಂಡಿಗಳಿಂದ ಮಾಡಲಾಗಿಲ್ಲ. ಈಗ ಮತ್ತೊಂದು ಜೀವಜಗತ್ತನೇ ಜರ್ಜರಿತಗೊಳಿಸುವ ಯೋಜನೆ ಸಿದ್ಧಪಡಿಸಲಾಗುತ್ತಿದೆ. ಈ ಹುನ್ನಾರದ ಕತೆ ಕೇಳಿ ಸ್ಥಳೀಯರು ಬೆಚ್ಚಿಬಿದ್ದಿದ್ದಾರೆ. ಜನಜೀವನ ನರಕವಾಗಿಸುವ ಈ ಪ್ರಳಯಾಂತಕ ಪ್ಲಾನ್ ವಿರುದ್ಧ ಶಿವಮೊಗ್ಗ, ಸಾಗರ, ಹೊನ್ನಾವರ ಸೀಮೆ ಮಂದಿ ಸಂಘಟಿತರಾಗುತ್ತಿದ್ದಾರೆ.

ಈ ಬಾರಿ ಮಲೆನಾಡಿನ ಜನರು ಕುಡಿಯುವ ನೀರಿಗಾಗಿ ಗೋಳಾಡಿದ್ದು ಹೇಳತೀರದು. ಜೂನ್ ಅರ್ಧ ಕಳೆದರೂ ಮಳೆಯೇ ಬರದೆ ತುಂಗಾ, ಭದ್ರಾ ಮತ್ತು ಶರಾವತಿ ನದಿ ಇಕ್ಕೆಲದ ಹಳ್ಳಿಗರು ನೀರಿಗಾಗಿ ಕಣ್ಣೀರು ಸುರಿಸಿದ್ದರು. ಅದೇ ಹೊತ್ತಿಗೆ ಬೆಂಗಳೂರು ಅಭಿವೃದ್ಧಿ ಸಚಿವ ಪರಮ್ ಲಿಂಗನಮಕ್ಕಿಯಿಂದ ಬೆಂಗಳೂರಿಗೆ ದೊಡ್ಡ, ದೊಡ್ಡ ಪೈಪ್‍ಗಳ ಮೂಲಕ ನೀರು ಸಾಗಿಸುವ ಯೋಜನೆಯ ವಿಸ್ತøತ ವರದಿ (ಡಿಪಿಆರ್) ತಯಾರಿಸಲು ಅಧಿಕಾರಿಗಳಿಗೆ ಅಪ್ಪಣೆ ಮಾಡಿದ್ದರು. ಕ್ಯಾಬಿನೆಟ್ ತೀರ್ಮಾನವಿಲ್ಲದೆ ಏಕಪಕ್ಷೀಯವಾಗಿ ಪರಮ್ ಹಾರಾಡುತ್ತಿರುವುದು ಕಿಕ್‍ಬ್ಯಾಕ್‍ನ ದೂ(ದು)ರಾಲೋಚನೆಯ ಅನೇಕ-ಅನುಮಾನ ಶರಾವತಿ ಕಣಿವೆಯ ಜನ ಮನದಲ್ಲಿ ಮೂಡಿಸಿದೆ! ದುಬಾರಿಯಾದ ಮತ್ತು ಫಲಪ್ರದವಾಗುವ ಗ್ಯಾರಂಟಿಯಿಲ್ಲದ ಈ ಪ್ರಾಜೆಕ್ಟ್ ಬಗ್ಗೆ ಪರಮ್ ತುಂಬ ಮುತುವರ್ಜಿ ವಹಿಸಿದ್ದು ಯಾಕಿರಬಹುದು?

ವಿದ್ಯುತ್ ಉತ್ಪಾದನೆ ಬಳಿಕ ಲಿಂಗನಮಕ್ಕಿ ಜಲಾಶಯದಿಂದ ಹೊರಹೋಗುವ ನೀರು ವ್ಯರ್ಥವಾಗುತ್ತದೆ ಎಂಬ ವಾದ ಆಡಳಿತಗಾರ ಪಂಡಿತರದು. ಸರಿ, ನೀರು ಪೋಲಾಗುತ್ತದೆಂದು ಬರೋಬ್ಬರಿ 400 ಕಿ.ಮೀ ದೂರ ಕೊಳವೆಗಳ ಮೂಲಕ ನೀರನ್ನು ತಳ್ಳುವ ಸಾವಿರಾರು ಕೋಟಿ ರೂಪಾಯಿ ಯೋಜನೆ ಬೇಕಾ? ಶರಾವತಿ ತೀರದ ಹಲವು ಹಳ್ಳಿಗಳು ಬೊಗಸೆ ನೀರಿಗಾಗಿ ಪರಿತಪಿಸುತ್ತಿವೆ. ನಾಡಿಗೆ ಬೆಳಕು ನೀಡಲು ಸರ್ವಸ್ವ ತ್ಯಾಗ ಮಾಡಿದ ಶರಾವತಿ ನಿರಾಶ್ರಿತರ ಕೇರಿಗಳಿಗೇ ನೀರಿನ ಬರ ಬಡಿದಿದೆ. ಲಿಂಗನಮಕ್ಕಿ ಡ್ಯಾಮ್‍ನ ಆಚೀಚೆಯ ಈ ಜಲ ಬರದ ಪ್ರದೇಶಕ್ಕೆ ಪೋಲಾಗುವ ನೀರನ್ನು ಹರಿಸಿದ್ದರೆ ಪರಮ್‍ಗೆ ಪುಣ್ಯ ಬರುತ್ತಿತ್ತು. ದುಂದುವೆಚ್ಚವೂ ತಪ್ಪುತ್ತಿತ್ತು. ಬೆಂಗಳೂರಿಗೆ ಮಳೆಕೊಯ್ಲಿನ ಮೂಲಕ ಕುಡಿವ ನೀರಿನ ಯೋಜನೆ ರೂಪಿಸಲಾಗದೇ?

ಅಷ್ಟು ಸುಲಭ- ಸರಳವಾಗಿ ನೀರನ್ನು ಕಾರ್ಗಲ್‍ನಿಂದ ಬೆಂಗಳೂರಿಗೆ ಒಯ್ಯಲಾಗದು. ಶರಾವತಿಯಿಂದ ಹೆಚ್ಚು ಕಡಿಮೆ 1500 ಅಡಿ ಎತ್ತರಕ್ಕೆ ನೀರನ್ನು ಎತ್ತಬೇಕಾಗುತ್ತದೆ. ಅಷ್ಟೇ ಅಲ್ಲ 400 ಕಿ.ಮೀ ದೂರಕ್ಕೆ ನೀರನ್ನು ಪಂಪ್ ಮಾಡಬೇಕಾಗುತ್ತದೆ. ಸಮುದ್ರ ಮಟ್ಟದಿಂದ ಲಿಂಗನಮಕ್ಕಿ ಎತ್ತರ ಪೂರ್ಣ ತುಂಬಿದಾಗ 1819 ಅಡಿ. ಹಾಗಾಗಿ ಲಿಂಗನಮಕ್ಕಿ ಡ್ಯಾಮ್‍ನಿಂದ ಬೆಂಗಳೂರಿಗೆ ನೀರನ್ನು ಒಯ್ಯುವುದಾದರೆ ಕನಿಷ್ಟ 1650 ಅಡಿ ಮಟ್ಟದಿಂದ ಪೈಪ್ ಲೈನ್ ಅಳವಡಿಸಬೇಕು. ಸಮುದ್ರಮಟ್ಟದಿಂದ ಬೆಂಗಳೂರಿನ ಸರಾಸರಿ ಎತ್ತರ 300 ಅಡಿ. ಬೆಂಗಳೂರಿನ ತೀರ ಎತ್ತರದ ದೊಡ್ಡ ಬೆಟ್ಟಹಳ್ಳಿ ಇರುವುದು 3150 ಅಡಿ ಎತ್ತರದಲ್ಲಿ. ಈ ಲೆಕ್ಕಾಚಾರದಂತೆ ಕಾರ್ಗಲ್‍ನಿಂದ ಬೆಂಗಳೂರಿಗೆ ನೀರು ತರಲು 1500 ಅಡಿ ಎತ್ತರಕ್ಕೆ ನೀರು ಲಿಫ್ಟ್ ಮಾಡಬೇಕು.

ಎಷ್ಟೇ ಉತ್ತಮ ಗುಣಮಟ್ಟದ ಪಂಪ್ ಆದರೂ ನೂರಕ್ಕೆ ನೂರು ಕಾರ್ಯಕ್ಷಮತೆ ಹೊಂದಿರಲು ಸಾಧ್ಯವಿಲ್ಲ. ಹಾಗಾಗಿ ವಿದ್ಯುತ್ ವ್ಯರ್ಥ ಆಗೇ ಆಗುತ್ತದೆ. ಶರಾವತಿ ಟರ್ಬೈನ್‍ಗಳ ಎತ್ತರ ಅಂತರ (ಗ್ರಾಸ್ ಹೆಡ್) ಸುಮಾರು 1525 ಅಡಿ. ಈ ಹೆಡ್ ಬಳಸಿ ಒಂದು ಮೆಗಾವ್ಯಾಟ್ ವಿದ್ಯುತ್ ಉತ್ಪಾದಿಸಲು ಹೆಚ್ಚು ಕಡಿಮೆ 10 ಕ್ಯೂಸೆಕ್ಸ್ ನೀರು ಬೇಕಾಗುತ್ತದೆ. ಬೆಂಗಳೂರಿಗೆ ಒಯ್ಯುವ ನೀರನ್ನು ಲಿಂಗನಮಕ್ಕಿಯಿಂದ ಬೆಂಗಳೂರಿನ ಎತ್ತರ ಏರಿಸಲು ಶರಾವತಿ ವಿದ್ಯುತ್‍ಗಾರದಲ್ಲಿ ತಯಾರಾಗುವ ಎಲ್ಲ ವಿದ್ಯುತ್ ಅವಶ್ಯ! ಇನ್ನು 400 ಕಿ.ಮೀ ದೂರಕ್ಕೆ ನೀರು ತಳ್ಳಲು ಬೇರೆಡೆಯಿಂದ ವಿದ್ಯುತ್ ಶಕ್ತಿ ತರಬೇಕೆಂದಾಯ್ತು. ಅಂದರೆ ಬೆಂಗಳೂರಿಗೆ ಪ್ರತಿ ಕ್ಯೂಸೆಕ್ಸ್ ನೀರು ತರಲು ಅದೇ ನೀರಿಂದ ಶರಾವತಿಯಲ್ಲಿ ಉತ್ಪಾದನೆಯಾಗುವ ಕರೆಂಟ್‍ನಿಂದ ಒಂದೂವರೆ ಪಟ್ಟು ವಿದ್ಯುತ್ ಬೇಕಾಗುತ್ತದೆ. ಇದಕ್ಕೆ ನೀರು ಮತ್ತು ವಿದ್ಯುತ್ ಸೋರಿಕೆ ಪ್ರಮಾಣ ಸೇರಿಸಿದರೇ ಹಾನಿ ಹೆಚ್ಚಾಗುತ್ತದೆ. ಒಟ್ಟಿನಲ್ಲಿ ಇದೊಂದು ಎಡವಟ್ಟು ಪ್ರಾಜೆಕ್ಟ್!

ಲಿಂಗನಮಕ್ಕಿ, ಕಾರ್ಗಲ್, ಚಕ್ರಾ, ವಾರಾಹಿ, ಸಾವೆಂಹಕ್ಕಲು, ಗಾಜನೂರು, ಗೇರುಸೊಪ್ಪ, ಭದ್ರಾ, ಮಾಣಿ, ನಾಗಝರಿ ಯೋಜನೆಗಳಿಂದ ಕಷ್ಟ-ನಷ್ಟ ಅನುಭವಿಸಿದ ಜನರ ಕಲ್ಯಾಣಕ್ಕಾಗಿ ಒಂದೇ ಒಂದು ಯೋಜನೆ ರೂಪಿಸದ ಸರ್ಕಾರಿ ಮಂದಿ ಬೆಂಗಳೂರಿನ ಉದ್ಧಾರಕ್ಕಾಗಿ ಮತ್ತದೇ ಜನ ಸಮೂಹವನ್ನು ಬಲಿಗೊಡಲು ರೆಡಿಯಾಗಿದ್ದಾರೆಂಬುದೇ ವಿಪರ್ಯಾಸ! ಈ ನೀರು ಯೋಜನೆಯಿಂದ ಮರ-ಗಿಡ ನಾಶವಾಗುತ್ತದೆ. ಅಪರೂಪದ ಜೀವಸಂಕುಲದ ಅಳಿದುಳಿದ ಶರಾವತಿ ಕಣಿವೆಗೆ ದೊಡ್ಡ ಆಘಾತವಾಗಲಿದೆ. ಪೈಪ್‍ಲೈನ್ ಹಾದುಹೋಗುವ ಊರುಗಳ ಜನರು ಬೀದಿಗೆ ಬೀಳುತ್ತಾರೆ.

ಇಷ್ಟೆಲ್ಲ ಅವಾಂತರ, ಅನಾಹುತದ ನಂತರವಾದರೂ ಯೋಜನೆಯ ಮೂಲ ಉದ್ದೇಶ ಈಡೇರಬಹುದಾ? ಶರಾವತಿ ನೀರು ಬೆಂಗಳೂರು ತಲುಪುವುದು ಅನುಮಾನ! ಯೋಜನೆ ಸರ್ಕಾರಿ ಫೈಲುಗಳಲ್ಲಿ ಕಾರ್ಯಗತವಾಗಿ ರಾಜಕಾರಣಿ-ಅಧಿಕಾರಿ-ಕಂಟ್ರಾಕ್ಟರ್ ಲಾಬಿಯ ದೆಸೆ ಬದಲಿಸಬಹುದಷ್ಟೇ! ಇಂಥ ಹುಚ್ಚು ಯೋಜನೆಗಳನ್ನು ಮಾಡುವುದು ಬಿಟ್ಟು ಬೆಂಗಳೂರಿನ ಅನಿಯಂತ್ರಿತ ಯದ್ವಾತದ್ವಾ ಬೆಳವಣಿಗೆಗೆ ಕಡಿವಾಣ ಹಾಕಿದರೆ ನೀರಡಿಕೆ ಸಮಸ್ಯೆಯೊಂದೇ ಅಲ್ಲ ಟ್ರಾಫಿಕ್ ಜಾಮ್, ಕಸದ ಸಮಸ್ಯೆ, ಪರಿಸರ ಮಾಲಿನ್ಯದಂಥ ಗಂಡಾಂತರದಿಂದಲೂ ಬಚಾವಾಗಬಹುದು. ಎಲ್ಲಾ ಮೂಲ ಸೌಕರ್ಯಗಳನ್ನು ತಾನೊಂದೇ ನುಂಗುವ ಬೆಂಗಳೂರಿನ ಕೈಗಾರಿಕೆಗಳನ್ನು ವಿಕೇಂದ್ರೀಕರಣಕ್ಕೆ ಒಳಪಡಿಸಿದರೆ ಕನಿಷ್ಟವೆಂದರೂ ಸಾಗರ, ಶಿರಸಿ, ಶಿವಮೊಗ್ಗ, ಚಿಕ್ಕಮಗಳೂರು, ಕಾರವಾರ ವ್ಯವಸ್ಥಿತವಾಗಿ ಉದ್ಧಾರವೂ ಆಗುತ್ತದೆ.

ತಮಿಳು-ತೆಲುಗರಿಗೆ ಹತ್ತಿರವಾದ ಬೆಂಗಳೂರನ್ನು ಕುರುಡಾಗಿ ಬೆಳೆಸುವ ಬದಲು ಕನ್ನಡ ನಾಡಿನ ಒಡಲೊಳಗೆ ಇರುವ ಸಾಗರ, ಶಿರಸಿ, ಶಿವಮೊಗ್ಗವನ್ನೇಕೆ ಅಭಿವೃದ್ಧಿಪಡಿಸಬಾರದೆಂಬ ಕೂಗು ಈಗ ಮಲೆನಾಡಲ್ಲಿ ಶುರುವಾಗುವ ಲಕ್ಷಣಗಳು ಗೋಚರಿಸುತ್ತಿವೆ. ಶಿವಮೊಗ್ಗ, ಕಾರವಾರದಲ್ಲಿ ವಿಮಾನ ನಿಲ್ದಾಣ ಸ್ಥಾಪಿಸಿ ಬೆಂಗಳೂರಿನ ಐಟಿ-ಬಿಟಿ ಇಂಡಸ್ಟ್ರಿಗಳನ್ನು ಸಾಗರ-ಶಿರಸಿಯತ್ತ ಏಕೆ ತರಬಾರದೆಂಬ ವಾದ ಬಲಗೊಳ್ಳುತ್ತಿದೆ. ಇದರಿಂದ ಒಂದೇ ಕಾಲದಲ್ಲಿ ಬೆಂಗಳೂರು ಮತ್ತು ಹಿಂದುಳಿದ ಮಲೆನಾಡಿನ ಹಲವು ಸಮಸ್ಯೆ-ಸಂಕಷ್ಟ ಪರಿಹಾರವಾಗುತ್ತದೆ. ಬರಡಾದ ಹಳ್ಳಿಗಳಲ್ಲಿ ಶಕ್ತಿ, ಮಾನವ ಸಂಪನ್ಮೂಲ ಉಳಿಯುತ್ತದೆ; ಪರಿಸರ ಪಸಂದಾಗಿರುತ್ತದೆ. ಬೆಂಗಳೂರಲ್ಲಿ ನೌಕರಿ ಮಾಡುತ್ತಿರುವ ಮಕ್ಕಳ ನೆನಪಲ್ಲಿ ಚಡಪಡಿಸುತ್ತಿರುವ ಅಮಾಯಕ ತಾಯ್ತಂದೆಯರ ಬದುಕು ಬಚಾವಾಗುತ್ತದೆ.

ಇಂಥ ಸುಸ್ಥಿರ ಅಭಿವೃದ್ಧಿ ಬೇಕಾ? ಬರಡು ಯೋಜನೆ ಕಡತದಲ್ಲಿ ಶುರುವಾಗೋದು ಬೇಕಾ? ಪರಮ್ ಸಾಹೇಬರಿಗೆ ಅರ್ಥ ಮಾಡಿಸೋರ್ಯಾರು?!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...