Homeಕರ್ನಾಟಕಶರಾವತಿ ನೀರು ಬೆಂಗಳೂರಿಗೆ ತರಲು ಸಾಧ್ಯವಾ?

ಶರಾವತಿ ನೀರು ಬೆಂಗಳೂರಿಗೆ ತರಲು ಸಾಧ್ಯವಾ?

- Advertisement -
- Advertisement -

| ಶುದ್ದೋದನ |

ಲಿಂಗನಮಕ್ಕಿ, ಕಾರ್ಗಲ್, ಚಕ್ರಾ, ವಾರಾಹಿ, ಸಾವೆಂಹಕ್ಕಲು, ಗಾಜನೂರು, ಗೇರುಸೊಪ್ಪ, ಭದ್ರಾ, ಮಾಣಿ, ನಾಗಝರಿ ಯೋಜನೆಗಳಿಂದ ಕಷ್ಟ-ನಷ್ಟ ಅನುಭವಿಸಿದ ಜನರ ಕಲ್ಯಾಣಕ್ಕಾಗಿ ಒಂದೇ ಒಂದು ಯೋಜನೆ ರೂಪಿಸದ ಸರ್ಕಾರಿ ಮಂದಿ ಬೆಂಗಳೂರಿನ ಉದ್ಧಾರಕ್ಕಾಗಿ ಮತ್ತದೇ ಜನ ಸಮೂಹವನ್ನು ಬಲಿಗೊಡಲು ರೆಡಿಯಾಗಿದ್ದಾರೆಂಬುದೇ ವಿಪರ್ಯಾಸ! ಈ ನೀರು ಯೋಜನೆಯಿಂದ ಮರ-ಗಿಡ ನಾಶವಾಗುತ್ತದೆ.

ಇದೊಂಥರಾ ತಮಾಷೆ! ಶರಾವತಿ ನದಿ ದಡದಲ್ಲೇ ಕುಡಿವ ನೀರಿಗಾಗಿ ಹಾಹಾಕಾರ ಎದ್ದಿರುವಾಗ ಲಿಂಗನಮಕ್ಕಿ ಜಲಾಶಯದ ನೀರಿನಿಂದ ಬೃಹತ್ ಬೆಂಗಳೂರಿನ ದಾಹ ತೀರಿಸುವ “ವ್ಯರ್ಥ ಯೋಜನೆ”ಗೆ ಅಧಿಕಾರಸ್ಥ ಪ್ರಭೃತಿಗಳು ಸ್ಕೆಚ್ ಹಾಕುತ್ತಿದ್ದಾರೆ! ಬೆಂಗಳೂರು ಅಭಿವೃದ್ಧಿ ಮಂತ್ರಿ ಪರಮ್ ಸಾಹೇಬರ ಮೇಧಾವಿ ಮೆದುಳಿಗೆ ಈ ಯೋಚನೆ ಅದ್ಹೇಗೆ ಹೊಳೆಯಿತೋ ಏನೋ? ಲಿಂಗನಮಕ್ಕಿಯಲ್ಲಿ ವಿದ್ಯುತ್ ಉತ್ಪಾದಿಸಿದ ನಂತರ ಸಮುದ್ರದತ್ತ ಸಾಗಿ ಪೋಲಾಗುವ ನೀರನ್ನು ಹಿಡಿದು ಬೆಂಗಳೂರಿನತ್ತ ಹೊರಳಿಸುವ ಬಗ್ಗೆ ಪರಮ್ ಹೇಳಿಕೆ ಕೊಟ್ಟಿದ್ದೇ ಕೊಟ್ಟಿದ್ದು ಮಲೆನಾಡಲ್ಲಿ ಸಿಡಿಲು ಬಡಿದಂತಾಗಿದೆ.

ಇದೊಂದು ಅಪ್ಪಟ ಅವೈಜ್ಞಾನಿಕ ಯೋಜನೆ; ತಾಂತ್ರಿಕವಾಗೂ ಕಾರ್ಯಸಾಧುವಲ್ಲ. ಆಡಳಿತಗಾರರ ಕಿಸೆ ತುಂಬುವ ಕಿಕ್‍ಬ್ಯಾಕ್ ಕರಾಮತ್ತು. ಈ ಯೋಜನೆಯಿಂದ ಹಲವು ಹೊಡೆತ ತಿಂದಿರುವ ಶರಾವತಿ ಕೊಳ್ಳದ ಪರಿಸರದ ಮೇಲೆ ಮತ್ತೊಂದು ಭೀಕರ ದಾಳಿಯಾಗುತ್ತದೆ. ಲಿಂಗನಮಕ್ಕಿ ವಿದ್ಯುತ್ ಯೋಜನೆಯಿಂದ ಮುಳುಗಡೆಯಾದ ಏರಿಯಾದ ಜನರಿಗೆ ಇವತ್ತಿಗೂ ನ್ಯಾಯ ಒದಗಿಸಲಾಗಿಲ್ಲ. ಪುನರ್ವಸತಿ ಕೇಂದ್ರಗಳಲ್ಲಿ ಬದುಕು ರೂಪಿಸಿಕೊಳ್ಳಲಾಗದೇ ಹಳ್ಳಿ-ಹಳ್ಳಿಗಳು ಬೀದಿ ಪಾಲಾಗಿವೆ. ನಿರಾಶ್ರಿತರ ಏರಿಯಾದಲ್ಲಿ ಕನಿಷ್ಟ ಗುಟುಕು ಕುಡಿವ ನೀರಿನ ವ್ಯವಸ್ಥೆಯೂ ಆಳುವ ಹೇತ್ಲಾಂಡಿಗಳಿಂದ ಮಾಡಲಾಗಿಲ್ಲ. ಈಗ ಮತ್ತೊಂದು ಜೀವಜಗತ್ತನೇ ಜರ್ಜರಿತಗೊಳಿಸುವ ಯೋಜನೆ ಸಿದ್ಧಪಡಿಸಲಾಗುತ್ತಿದೆ. ಈ ಹುನ್ನಾರದ ಕತೆ ಕೇಳಿ ಸ್ಥಳೀಯರು ಬೆಚ್ಚಿಬಿದ್ದಿದ್ದಾರೆ. ಜನಜೀವನ ನರಕವಾಗಿಸುವ ಈ ಪ್ರಳಯಾಂತಕ ಪ್ಲಾನ್ ವಿರುದ್ಧ ಶಿವಮೊಗ್ಗ, ಸಾಗರ, ಹೊನ್ನಾವರ ಸೀಮೆ ಮಂದಿ ಸಂಘಟಿತರಾಗುತ್ತಿದ್ದಾರೆ.

ಈ ಬಾರಿ ಮಲೆನಾಡಿನ ಜನರು ಕುಡಿಯುವ ನೀರಿಗಾಗಿ ಗೋಳಾಡಿದ್ದು ಹೇಳತೀರದು. ಜೂನ್ ಅರ್ಧ ಕಳೆದರೂ ಮಳೆಯೇ ಬರದೆ ತುಂಗಾ, ಭದ್ರಾ ಮತ್ತು ಶರಾವತಿ ನದಿ ಇಕ್ಕೆಲದ ಹಳ್ಳಿಗರು ನೀರಿಗಾಗಿ ಕಣ್ಣೀರು ಸುರಿಸಿದ್ದರು. ಅದೇ ಹೊತ್ತಿಗೆ ಬೆಂಗಳೂರು ಅಭಿವೃದ್ಧಿ ಸಚಿವ ಪರಮ್ ಲಿಂಗನಮಕ್ಕಿಯಿಂದ ಬೆಂಗಳೂರಿಗೆ ದೊಡ್ಡ, ದೊಡ್ಡ ಪೈಪ್‍ಗಳ ಮೂಲಕ ನೀರು ಸಾಗಿಸುವ ಯೋಜನೆಯ ವಿಸ್ತøತ ವರದಿ (ಡಿಪಿಆರ್) ತಯಾರಿಸಲು ಅಧಿಕಾರಿಗಳಿಗೆ ಅಪ್ಪಣೆ ಮಾಡಿದ್ದರು. ಕ್ಯಾಬಿನೆಟ್ ತೀರ್ಮಾನವಿಲ್ಲದೆ ಏಕಪಕ್ಷೀಯವಾಗಿ ಪರಮ್ ಹಾರಾಡುತ್ತಿರುವುದು ಕಿಕ್‍ಬ್ಯಾಕ್‍ನ ದೂ(ದು)ರಾಲೋಚನೆಯ ಅನೇಕ-ಅನುಮಾನ ಶರಾವತಿ ಕಣಿವೆಯ ಜನ ಮನದಲ್ಲಿ ಮೂಡಿಸಿದೆ! ದುಬಾರಿಯಾದ ಮತ್ತು ಫಲಪ್ರದವಾಗುವ ಗ್ಯಾರಂಟಿಯಿಲ್ಲದ ಈ ಪ್ರಾಜೆಕ್ಟ್ ಬಗ್ಗೆ ಪರಮ್ ತುಂಬ ಮುತುವರ್ಜಿ ವಹಿಸಿದ್ದು ಯಾಕಿರಬಹುದು?

ವಿದ್ಯುತ್ ಉತ್ಪಾದನೆ ಬಳಿಕ ಲಿಂಗನಮಕ್ಕಿ ಜಲಾಶಯದಿಂದ ಹೊರಹೋಗುವ ನೀರು ವ್ಯರ್ಥವಾಗುತ್ತದೆ ಎಂಬ ವಾದ ಆಡಳಿತಗಾರ ಪಂಡಿತರದು. ಸರಿ, ನೀರು ಪೋಲಾಗುತ್ತದೆಂದು ಬರೋಬ್ಬರಿ 400 ಕಿ.ಮೀ ದೂರ ಕೊಳವೆಗಳ ಮೂಲಕ ನೀರನ್ನು ತಳ್ಳುವ ಸಾವಿರಾರು ಕೋಟಿ ರೂಪಾಯಿ ಯೋಜನೆ ಬೇಕಾ? ಶರಾವತಿ ತೀರದ ಹಲವು ಹಳ್ಳಿಗಳು ಬೊಗಸೆ ನೀರಿಗಾಗಿ ಪರಿತಪಿಸುತ್ತಿವೆ. ನಾಡಿಗೆ ಬೆಳಕು ನೀಡಲು ಸರ್ವಸ್ವ ತ್ಯಾಗ ಮಾಡಿದ ಶರಾವತಿ ನಿರಾಶ್ರಿತರ ಕೇರಿಗಳಿಗೇ ನೀರಿನ ಬರ ಬಡಿದಿದೆ. ಲಿಂಗನಮಕ್ಕಿ ಡ್ಯಾಮ್‍ನ ಆಚೀಚೆಯ ಈ ಜಲ ಬರದ ಪ್ರದೇಶಕ್ಕೆ ಪೋಲಾಗುವ ನೀರನ್ನು ಹರಿಸಿದ್ದರೆ ಪರಮ್‍ಗೆ ಪುಣ್ಯ ಬರುತ್ತಿತ್ತು. ದುಂದುವೆಚ್ಚವೂ ತಪ್ಪುತ್ತಿತ್ತು. ಬೆಂಗಳೂರಿಗೆ ಮಳೆಕೊಯ್ಲಿನ ಮೂಲಕ ಕುಡಿವ ನೀರಿನ ಯೋಜನೆ ರೂಪಿಸಲಾಗದೇ?

ಅಷ್ಟು ಸುಲಭ- ಸರಳವಾಗಿ ನೀರನ್ನು ಕಾರ್ಗಲ್‍ನಿಂದ ಬೆಂಗಳೂರಿಗೆ ಒಯ್ಯಲಾಗದು. ಶರಾವತಿಯಿಂದ ಹೆಚ್ಚು ಕಡಿಮೆ 1500 ಅಡಿ ಎತ್ತರಕ್ಕೆ ನೀರನ್ನು ಎತ್ತಬೇಕಾಗುತ್ತದೆ. ಅಷ್ಟೇ ಅಲ್ಲ 400 ಕಿ.ಮೀ ದೂರಕ್ಕೆ ನೀರನ್ನು ಪಂಪ್ ಮಾಡಬೇಕಾಗುತ್ತದೆ. ಸಮುದ್ರ ಮಟ್ಟದಿಂದ ಲಿಂಗನಮಕ್ಕಿ ಎತ್ತರ ಪೂರ್ಣ ತುಂಬಿದಾಗ 1819 ಅಡಿ. ಹಾಗಾಗಿ ಲಿಂಗನಮಕ್ಕಿ ಡ್ಯಾಮ್‍ನಿಂದ ಬೆಂಗಳೂರಿಗೆ ನೀರನ್ನು ಒಯ್ಯುವುದಾದರೆ ಕನಿಷ್ಟ 1650 ಅಡಿ ಮಟ್ಟದಿಂದ ಪೈಪ್ ಲೈನ್ ಅಳವಡಿಸಬೇಕು. ಸಮುದ್ರಮಟ್ಟದಿಂದ ಬೆಂಗಳೂರಿನ ಸರಾಸರಿ ಎತ್ತರ 300 ಅಡಿ. ಬೆಂಗಳೂರಿನ ತೀರ ಎತ್ತರದ ದೊಡ್ಡ ಬೆಟ್ಟಹಳ್ಳಿ ಇರುವುದು 3150 ಅಡಿ ಎತ್ತರದಲ್ಲಿ. ಈ ಲೆಕ್ಕಾಚಾರದಂತೆ ಕಾರ್ಗಲ್‍ನಿಂದ ಬೆಂಗಳೂರಿಗೆ ನೀರು ತರಲು 1500 ಅಡಿ ಎತ್ತರಕ್ಕೆ ನೀರು ಲಿಫ್ಟ್ ಮಾಡಬೇಕು.

ಎಷ್ಟೇ ಉತ್ತಮ ಗುಣಮಟ್ಟದ ಪಂಪ್ ಆದರೂ ನೂರಕ್ಕೆ ನೂರು ಕಾರ್ಯಕ್ಷಮತೆ ಹೊಂದಿರಲು ಸಾಧ್ಯವಿಲ್ಲ. ಹಾಗಾಗಿ ವಿದ್ಯುತ್ ವ್ಯರ್ಥ ಆಗೇ ಆಗುತ್ತದೆ. ಶರಾವತಿ ಟರ್ಬೈನ್‍ಗಳ ಎತ್ತರ ಅಂತರ (ಗ್ರಾಸ್ ಹೆಡ್) ಸುಮಾರು 1525 ಅಡಿ. ಈ ಹೆಡ್ ಬಳಸಿ ಒಂದು ಮೆಗಾವ್ಯಾಟ್ ವಿದ್ಯುತ್ ಉತ್ಪಾದಿಸಲು ಹೆಚ್ಚು ಕಡಿಮೆ 10 ಕ್ಯೂಸೆಕ್ಸ್ ನೀರು ಬೇಕಾಗುತ್ತದೆ. ಬೆಂಗಳೂರಿಗೆ ಒಯ್ಯುವ ನೀರನ್ನು ಲಿಂಗನಮಕ್ಕಿಯಿಂದ ಬೆಂಗಳೂರಿನ ಎತ್ತರ ಏರಿಸಲು ಶರಾವತಿ ವಿದ್ಯುತ್‍ಗಾರದಲ್ಲಿ ತಯಾರಾಗುವ ಎಲ್ಲ ವಿದ್ಯುತ್ ಅವಶ್ಯ! ಇನ್ನು 400 ಕಿ.ಮೀ ದೂರಕ್ಕೆ ನೀರು ತಳ್ಳಲು ಬೇರೆಡೆಯಿಂದ ವಿದ್ಯುತ್ ಶಕ್ತಿ ತರಬೇಕೆಂದಾಯ್ತು. ಅಂದರೆ ಬೆಂಗಳೂರಿಗೆ ಪ್ರತಿ ಕ್ಯೂಸೆಕ್ಸ್ ನೀರು ತರಲು ಅದೇ ನೀರಿಂದ ಶರಾವತಿಯಲ್ಲಿ ಉತ್ಪಾದನೆಯಾಗುವ ಕರೆಂಟ್‍ನಿಂದ ಒಂದೂವರೆ ಪಟ್ಟು ವಿದ್ಯುತ್ ಬೇಕಾಗುತ್ತದೆ. ಇದಕ್ಕೆ ನೀರು ಮತ್ತು ವಿದ್ಯುತ್ ಸೋರಿಕೆ ಪ್ರಮಾಣ ಸೇರಿಸಿದರೇ ಹಾನಿ ಹೆಚ್ಚಾಗುತ್ತದೆ. ಒಟ್ಟಿನಲ್ಲಿ ಇದೊಂದು ಎಡವಟ್ಟು ಪ್ರಾಜೆಕ್ಟ್!

ಲಿಂಗನಮಕ್ಕಿ, ಕಾರ್ಗಲ್, ಚಕ್ರಾ, ವಾರಾಹಿ, ಸಾವೆಂಹಕ್ಕಲು, ಗಾಜನೂರು, ಗೇರುಸೊಪ್ಪ, ಭದ್ರಾ, ಮಾಣಿ, ನಾಗಝರಿ ಯೋಜನೆಗಳಿಂದ ಕಷ್ಟ-ನಷ್ಟ ಅನುಭವಿಸಿದ ಜನರ ಕಲ್ಯಾಣಕ್ಕಾಗಿ ಒಂದೇ ಒಂದು ಯೋಜನೆ ರೂಪಿಸದ ಸರ್ಕಾರಿ ಮಂದಿ ಬೆಂಗಳೂರಿನ ಉದ್ಧಾರಕ್ಕಾಗಿ ಮತ್ತದೇ ಜನ ಸಮೂಹವನ್ನು ಬಲಿಗೊಡಲು ರೆಡಿಯಾಗಿದ್ದಾರೆಂಬುದೇ ವಿಪರ್ಯಾಸ! ಈ ನೀರು ಯೋಜನೆಯಿಂದ ಮರ-ಗಿಡ ನಾಶವಾಗುತ್ತದೆ. ಅಪರೂಪದ ಜೀವಸಂಕುಲದ ಅಳಿದುಳಿದ ಶರಾವತಿ ಕಣಿವೆಗೆ ದೊಡ್ಡ ಆಘಾತವಾಗಲಿದೆ. ಪೈಪ್‍ಲೈನ್ ಹಾದುಹೋಗುವ ಊರುಗಳ ಜನರು ಬೀದಿಗೆ ಬೀಳುತ್ತಾರೆ.

ಇಷ್ಟೆಲ್ಲ ಅವಾಂತರ, ಅನಾಹುತದ ನಂತರವಾದರೂ ಯೋಜನೆಯ ಮೂಲ ಉದ್ದೇಶ ಈಡೇರಬಹುದಾ? ಶರಾವತಿ ನೀರು ಬೆಂಗಳೂರು ತಲುಪುವುದು ಅನುಮಾನ! ಯೋಜನೆ ಸರ್ಕಾರಿ ಫೈಲುಗಳಲ್ಲಿ ಕಾರ್ಯಗತವಾಗಿ ರಾಜಕಾರಣಿ-ಅಧಿಕಾರಿ-ಕಂಟ್ರಾಕ್ಟರ್ ಲಾಬಿಯ ದೆಸೆ ಬದಲಿಸಬಹುದಷ್ಟೇ! ಇಂಥ ಹುಚ್ಚು ಯೋಜನೆಗಳನ್ನು ಮಾಡುವುದು ಬಿಟ್ಟು ಬೆಂಗಳೂರಿನ ಅನಿಯಂತ್ರಿತ ಯದ್ವಾತದ್ವಾ ಬೆಳವಣಿಗೆಗೆ ಕಡಿವಾಣ ಹಾಕಿದರೆ ನೀರಡಿಕೆ ಸಮಸ್ಯೆಯೊಂದೇ ಅಲ್ಲ ಟ್ರಾಫಿಕ್ ಜಾಮ್, ಕಸದ ಸಮಸ್ಯೆ, ಪರಿಸರ ಮಾಲಿನ್ಯದಂಥ ಗಂಡಾಂತರದಿಂದಲೂ ಬಚಾವಾಗಬಹುದು. ಎಲ್ಲಾ ಮೂಲ ಸೌಕರ್ಯಗಳನ್ನು ತಾನೊಂದೇ ನುಂಗುವ ಬೆಂಗಳೂರಿನ ಕೈಗಾರಿಕೆಗಳನ್ನು ವಿಕೇಂದ್ರೀಕರಣಕ್ಕೆ ಒಳಪಡಿಸಿದರೆ ಕನಿಷ್ಟವೆಂದರೂ ಸಾಗರ, ಶಿರಸಿ, ಶಿವಮೊಗ್ಗ, ಚಿಕ್ಕಮಗಳೂರು, ಕಾರವಾರ ವ್ಯವಸ್ಥಿತವಾಗಿ ಉದ್ಧಾರವೂ ಆಗುತ್ತದೆ.

ತಮಿಳು-ತೆಲುಗರಿಗೆ ಹತ್ತಿರವಾದ ಬೆಂಗಳೂರನ್ನು ಕುರುಡಾಗಿ ಬೆಳೆಸುವ ಬದಲು ಕನ್ನಡ ನಾಡಿನ ಒಡಲೊಳಗೆ ಇರುವ ಸಾಗರ, ಶಿರಸಿ, ಶಿವಮೊಗ್ಗವನ್ನೇಕೆ ಅಭಿವೃದ್ಧಿಪಡಿಸಬಾರದೆಂಬ ಕೂಗು ಈಗ ಮಲೆನಾಡಲ್ಲಿ ಶುರುವಾಗುವ ಲಕ್ಷಣಗಳು ಗೋಚರಿಸುತ್ತಿವೆ. ಶಿವಮೊಗ್ಗ, ಕಾರವಾರದಲ್ಲಿ ವಿಮಾನ ನಿಲ್ದಾಣ ಸ್ಥಾಪಿಸಿ ಬೆಂಗಳೂರಿನ ಐಟಿ-ಬಿಟಿ ಇಂಡಸ್ಟ್ರಿಗಳನ್ನು ಸಾಗರ-ಶಿರಸಿಯತ್ತ ಏಕೆ ತರಬಾರದೆಂಬ ವಾದ ಬಲಗೊಳ್ಳುತ್ತಿದೆ. ಇದರಿಂದ ಒಂದೇ ಕಾಲದಲ್ಲಿ ಬೆಂಗಳೂರು ಮತ್ತು ಹಿಂದುಳಿದ ಮಲೆನಾಡಿನ ಹಲವು ಸಮಸ್ಯೆ-ಸಂಕಷ್ಟ ಪರಿಹಾರವಾಗುತ್ತದೆ. ಬರಡಾದ ಹಳ್ಳಿಗಳಲ್ಲಿ ಶಕ್ತಿ, ಮಾನವ ಸಂಪನ್ಮೂಲ ಉಳಿಯುತ್ತದೆ; ಪರಿಸರ ಪಸಂದಾಗಿರುತ್ತದೆ. ಬೆಂಗಳೂರಲ್ಲಿ ನೌಕರಿ ಮಾಡುತ್ತಿರುವ ಮಕ್ಕಳ ನೆನಪಲ್ಲಿ ಚಡಪಡಿಸುತ್ತಿರುವ ಅಮಾಯಕ ತಾಯ್ತಂದೆಯರ ಬದುಕು ಬಚಾವಾಗುತ್ತದೆ.

ಇಂಥ ಸುಸ್ಥಿರ ಅಭಿವೃದ್ಧಿ ಬೇಕಾ? ಬರಡು ಯೋಜನೆ ಕಡತದಲ್ಲಿ ಶುರುವಾಗೋದು ಬೇಕಾ? ಪರಮ್ ಸಾಹೇಬರಿಗೆ ಅರ್ಥ ಮಾಡಿಸೋರ್ಯಾರು?!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...