Homeಕರ್ನಾಟಕಶರಾವತಿ ನೀರು ಬೆಂಗಳೂರಿಗೆ ತರಲು ಸಾಧ್ಯವಾ?

ಶರಾವತಿ ನೀರು ಬೆಂಗಳೂರಿಗೆ ತರಲು ಸಾಧ್ಯವಾ?

- Advertisement -
- Advertisement -

| ಶುದ್ದೋದನ |

ಲಿಂಗನಮಕ್ಕಿ, ಕಾರ್ಗಲ್, ಚಕ್ರಾ, ವಾರಾಹಿ, ಸಾವೆಂಹಕ್ಕಲು, ಗಾಜನೂರು, ಗೇರುಸೊಪ್ಪ, ಭದ್ರಾ, ಮಾಣಿ, ನಾಗಝರಿ ಯೋಜನೆಗಳಿಂದ ಕಷ್ಟ-ನಷ್ಟ ಅನುಭವಿಸಿದ ಜನರ ಕಲ್ಯಾಣಕ್ಕಾಗಿ ಒಂದೇ ಒಂದು ಯೋಜನೆ ರೂಪಿಸದ ಸರ್ಕಾರಿ ಮಂದಿ ಬೆಂಗಳೂರಿನ ಉದ್ಧಾರಕ್ಕಾಗಿ ಮತ್ತದೇ ಜನ ಸಮೂಹವನ್ನು ಬಲಿಗೊಡಲು ರೆಡಿಯಾಗಿದ್ದಾರೆಂಬುದೇ ವಿಪರ್ಯಾಸ! ಈ ನೀರು ಯೋಜನೆಯಿಂದ ಮರ-ಗಿಡ ನಾಶವಾಗುತ್ತದೆ.

ಇದೊಂಥರಾ ತಮಾಷೆ! ಶರಾವತಿ ನದಿ ದಡದಲ್ಲೇ ಕುಡಿವ ನೀರಿಗಾಗಿ ಹಾಹಾಕಾರ ಎದ್ದಿರುವಾಗ ಲಿಂಗನಮಕ್ಕಿ ಜಲಾಶಯದ ನೀರಿನಿಂದ ಬೃಹತ್ ಬೆಂಗಳೂರಿನ ದಾಹ ತೀರಿಸುವ “ವ್ಯರ್ಥ ಯೋಜನೆ”ಗೆ ಅಧಿಕಾರಸ್ಥ ಪ್ರಭೃತಿಗಳು ಸ್ಕೆಚ್ ಹಾಕುತ್ತಿದ್ದಾರೆ! ಬೆಂಗಳೂರು ಅಭಿವೃದ್ಧಿ ಮಂತ್ರಿ ಪರಮ್ ಸಾಹೇಬರ ಮೇಧಾವಿ ಮೆದುಳಿಗೆ ಈ ಯೋಚನೆ ಅದ್ಹೇಗೆ ಹೊಳೆಯಿತೋ ಏನೋ? ಲಿಂಗನಮಕ್ಕಿಯಲ್ಲಿ ವಿದ್ಯುತ್ ಉತ್ಪಾದಿಸಿದ ನಂತರ ಸಮುದ್ರದತ್ತ ಸಾಗಿ ಪೋಲಾಗುವ ನೀರನ್ನು ಹಿಡಿದು ಬೆಂಗಳೂರಿನತ್ತ ಹೊರಳಿಸುವ ಬಗ್ಗೆ ಪರಮ್ ಹೇಳಿಕೆ ಕೊಟ್ಟಿದ್ದೇ ಕೊಟ್ಟಿದ್ದು ಮಲೆನಾಡಲ್ಲಿ ಸಿಡಿಲು ಬಡಿದಂತಾಗಿದೆ.

ಇದೊಂದು ಅಪ್ಪಟ ಅವೈಜ್ಞಾನಿಕ ಯೋಜನೆ; ತಾಂತ್ರಿಕವಾಗೂ ಕಾರ್ಯಸಾಧುವಲ್ಲ. ಆಡಳಿತಗಾರರ ಕಿಸೆ ತುಂಬುವ ಕಿಕ್‍ಬ್ಯಾಕ್ ಕರಾಮತ್ತು. ಈ ಯೋಜನೆಯಿಂದ ಹಲವು ಹೊಡೆತ ತಿಂದಿರುವ ಶರಾವತಿ ಕೊಳ್ಳದ ಪರಿಸರದ ಮೇಲೆ ಮತ್ತೊಂದು ಭೀಕರ ದಾಳಿಯಾಗುತ್ತದೆ. ಲಿಂಗನಮಕ್ಕಿ ವಿದ್ಯುತ್ ಯೋಜನೆಯಿಂದ ಮುಳುಗಡೆಯಾದ ಏರಿಯಾದ ಜನರಿಗೆ ಇವತ್ತಿಗೂ ನ್ಯಾಯ ಒದಗಿಸಲಾಗಿಲ್ಲ. ಪುನರ್ವಸತಿ ಕೇಂದ್ರಗಳಲ್ಲಿ ಬದುಕು ರೂಪಿಸಿಕೊಳ್ಳಲಾಗದೇ ಹಳ್ಳಿ-ಹಳ್ಳಿಗಳು ಬೀದಿ ಪಾಲಾಗಿವೆ. ನಿರಾಶ್ರಿತರ ಏರಿಯಾದಲ್ಲಿ ಕನಿಷ್ಟ ಗುಟುಕು ಕುಡಿವ ನೀರಿನ ವ್ಯವಸ್ಥೆಯೂ ಆಳುವ ಹೇತ್ಲಾಂಡಿಗಳಿಂದ ಮಾಡಲಾಗಿಲ್ಲ. ಈಗ ಮತ್ತೊಂದು ಜೀವಜಗತ್ತನೇ ಜರ್ಜರಿತಗೊಳಿಸುವ ಯೋಜನೆ ಸಿದ್ಧಪಡಿಸಲಾಗುತ್ತಿದೆ. ಈ ಹುನ್ನಾರದ ಕತೆ ಕೇಳಿ ಸ್ಥಳೀಯರು ಬೆಚ್ಚಿಬಿದ್ದಿದ್ದಾರೆ. ಜನಜೀವನ ನರಕವಾಗಿಸುವ ಈ ಪ್ರಳಯಾಂತಕ ಪ್ಲಾನ್ ವಿರುದ್ಧ ಶಿವಮೊಗ್ಗ, ಸಾಗರ, ಹೊನ್ನಾವರ ಸೀಮೆ ಮಂದಿ ಸಂಘಟಿತರಾಗುತ್ತಿದ್ದಾರೆ.

ಈ ಬಾರಿ ಮಲೆನಾಡಿನ ಜನರು ಕುಡಿಯುವ ನೀರಿಗಾಗಿ ಗೋಳಾಡಿದ್ದು ಹೇಳತೀರದು. ಜೂನ್ ಅರ್ಧ ಕಳೆದರೂ ಮಳೆಯೇ ಬರದೆ ತುಂಗಾ, ಭದ್ರಾ ಮತ್ತು ಶರಾವತಿ ನದಿ ಇಕ್ಕೆಲದ ಹಳ್ಳಿಗರು ನೀರಿಗಾಗಿ ಕಣ್ಣೀರು ಸುರಿಸಿದ್ದರು. ಅದೇ ಹೊತ್ತಿಗೆ ಬೆಂಗಳೂರು ಅಭಿವೃದ್ಧಿ ಸಚಿವ ಪರಮ್ ಲಿಂಗನಮಕ್ಕಿಯಿಂದ ಬೆಂಗಳೂರಿಗೆ ದೊಡ್ಡ, ದೊಡ್ಡ ಪೈಪ್‍ಗಳ ಮೂಲಕ ನೀರು ಸಾಗಿಸುವ ಯೋಜನೆಯ ವಿಸ್ತøತ ವರದಿ (ಡಿಪಿಆರ್) ತಯಾರಿಸಲು ಅಧಿಕಾರಿಗಳಿಗೆ ಅಪ್ಪಣೆ ಮಾಡಿದ್ದರು. ಕ್ಯಾಬಿನೆಟ್ ತೀರ್ಮಾನವಿಲ್ಲದೆ ಏಕಪಕ್ಷೀಯವಾಗಿ ಪರಮ್ ಹಾರಾಡುತ್ತಿರುವುದು ಕಿಕ್‍ಬ್ಯಾಕ್‍ನ ದೂ(ದು)ರಾಲೋಚನೆಯ ಅನೇಕ-ಅನುಮಾನ ಶರಾವತಿ ಕಣಿವೆಯ ಜನ ಮನದಲ್ಲಿ ಮೂಡಿಸಿದೆ! ದುಬಾರಿಯಾದ ಮತ್ತು ಫಲಪ್ರದವಾಗುವ ಗ್ಯಾರಂಟಿಯಿಲ್ಲದ ಈ ಪ್ರಾಜೆಕ್ಟ್ ಬಗ್ಗೆ ಪರಮ್ ತುಂಬ ಮುತುವರ್ಜಿ ವಹಿಸಿದ್ದು ಯಾಕಿರಬಹುದು?

ವಿದ್ಯುತ್ ಉತ್ಪಾದನೆ ಬಳಿಕ ಲಿಂಗನಮಕ್ಕಿ ಜಲಾಶಯದಿಂದ ಹೊರಹೋಗುವ ನೀರು ವ್ಯರ್ಥವಾಗುತ್ತದೆ ಎಂಬ ವಾದ ಆಡಳಿತಗಾರ ಪಂಡಿತರದು. ಸರಿ, ನೀರು ಪೋಲಾಗುತ್ತದೆಂದು ಬರೋಬ್ಬರಿ 400 ಕಿ.ಮೀ ದೂರ ಕೊಳವೆಗಳ ಮೂಲಕ ನೀರನ್ನು ತಳ್ಳುವ ಸಾವಿರಾರು ಕೋಟಿ ರೂಪಾಯಿ ಯೋಜನೆ ಬೇಕಾ? ಶರಾವತಿ ತೀರದ ಹಲವು ಹಳ್ಳಿಗಳು ಬೊಗಸೆ ನೀರಿಗಾಗಿ ಪರಿತಪಿಸುತ್ತಿವೆ. ನಾಡಿಗೆ ಬೆಳಕು ನೀಡಲು ಸರ್ವಸ್ವ ತ್ಯಾಗ ಮಾಡಿದ ಶರಾವತಿ ನಿರಾಶ್ರಿತರ ಕೇರಿಗಳಿಗೇ ನೀರಿನ ಬರ ಬಡಿದಿದೆ. ಲಿಂಗನಮಕ್ಕಿ ಡ್ಯಾಮ್‍ನ ಆಚೀಚೆಯ ಈ ಜಲ ಬರದ ಪ್ರದೇಶಕ್ಕೆ ಪೋಲಾಗುವ ನೀರನ್ನು ಹರಿಸಿದ್ದರೆ ಪರಮ್‍ಗೆ ಪುಣ್ಯ ಬರುತ್ತಿತ್ತು. ದುಂದುವೆಚ್ಚವೂ ತಪ್ಪುತ್ತಿತ್ತು. ಬೆಂಗಳೂರಿಗೆ ಮಳೆಕೊಯ್ಲಿನ ಮೂಲಕ ಕುಡಿವ ನೀರಿನ ಯೋಜನೆ ರೂಪಿಸಲಾಗದೇ?

ಅಷ್ಟು ಸುಲಭ- ಸರಳವಾಗಿ ನೀರನ್ನು ಕಾರ್ಗಲ್‍ನಿಂದ ಬೆಂಗಳೂರಿಗೆ ಒಯ್ಯಲಾಗದು. ಶರಾವತಿಯಿಂದ ಹೆಚ್ಚು ಕಡಿಮೆ 1500 ಅಡಿ ಎತ್ತರಕ್ಕೆ ನೀರನ್ನು ಎತ್ತಬೇಕಾಗುತ್ತದೆ. ಅಷ್ಟೇ ಅಲ್ಲ 400 ಕಿ.ಮೀ ದೂರಕ್ಕೆ ನೀರನ್ನು ಪಂಪ್ ಮಾಡಬೇಕಾಗುತ್ತದೆ. ಸಮುದ್ರ ಮಟ್ಟದಿಂದ ಲಿಂಗನಮಕ್ಕಿ ಎತ್ತರ ಪೂರ್ಣ ತುಂಬಿದಾಗ 1819 ಅಡಿ. ಹಾಗಾಗಿ ಲಿಂಗನಮಕ್ಕಿ ಡ್ಯಾಮ್‍ನಿಂದ ಬೆಂಗಳೂರಿಗೆ ನೀರನ್ನು ಒಯ್ಯುವುದಾದರೆ ಕನಿಷ್ಟ 1650 ಅಡಿ ಮಟ್ಟದಿಂದ ಪೈಪ್ ಲೈನ್ ಅಳವಡಿಸಬೇಕು. ಸಮುದ್ರಮಟ್ಟದಿಂದ ಬೆಂಗಳೂರಿನ ಸರಾಸರಿ ಎತ್ತರ 300 ಅಡಿ. ಬೆಂಗಳೂರಿನ ತೀರ ಎತ್ತರದ ದೊಡ್ಡ ಬೆಟ್ಟಹಳ್ಳಿ ಇರುವುದು 3150 ಅಡಿ ಎತ್ತರದಲ್ಲಿ. ಈ ಲೆಕ್ಕಾಚಾರದಂತೆ ಕಾರ್ಗಲ್‍ನಿಂದ ಬೆಂಗಳೂರಿಗೆ ನೀರು ತರಲು 1500 ಅಡಿ ಎತ್ತರಕ್ಕೆ ನೀರು ಲಿಫ್ಟ್ ಮಾಡಬೇಕು.

ಎಷ್ಟೇ ಉತ್ತಮ ಗುಣಮಟ್ಟದ ಪಂಪ್ ಆದರೂ ನೂರಕ್ಕೆ ನೂರು ಕಾರ್ಯಕ್ಷಮತೆ ಹೊಂದಿರಲು ಸಾಧ್ಯವಿಲ್ಲ. ಹಾಗಾಗಿ ವಿದ್ಯುತ್ ವ್ಯರ್ಥ ಆಗೇ ಆಗುತ್ತದೆ. ಶರಾವತಿ ಟರ್ಬೈನ್‍ಗಳ ಎತ್ತರ ಅಂತರ (ಗ್ರಾಸ್ ಹೆಡ್) ಸುಮಾರು 1525 ಅಡಿ. ಈ ಹೆಡ್ ಬಳಸಿ ಒಂದು ಮೆಗಾವ್ಯಾಟ್ ವಿದ್ಯುತ್ ಉತ್ಪಾದಿಸಲು ಹೆಚ್ಚು ಕಡಿಮೆ 10 ಕ್ಯೂಸೆಕ್ಸ್ ನೀರು ಬೇಕಾಗುತ್ತದೆ. ಬೆಂಗಳೂರಿಗೆ ಒಯ್ಯುವ ನೀರನ್ನು ಲಿಂಗನಮಕ್ಕಿಯಿಂದ ಬೆಂಗಳೂರಿನ ಎತ್ತರ ಏರಿಸಲು ಶರಾವತಿ ವಿದ್ಯುತ್‍ಗಾರದಲ್ಲಿ ತಯಾರಾಗುವ ಎಲ್ಲ ವಿದ್ಯುತ್ ಅವಶ್ಯ! ಇನ್ನು 400 ಕಿ.ಮೀ ದೂರಕ್ಕೆ ನೀರು ತಳ್ಳಲು ಬೇರೆಡೆಯಿಂದ ವಿದ್ಯುತ್ ಶಕ್ತಿ ತರಬೇಕೆಂದಾಯ್ತು. ಅಂದರೆ ಬೆಂಗಳೂರಿಗೆ ಪ್ರತಿ ಕ್ಯೂಸೆಕ್ಸ್ ನೀರು ತರಲು ಅದೇ ನೀರಿಂದ ಶರಾವತಿಯಲ್ಲಿ ಉತ್ಪಾದನೆಯಾಗುವ ಕರೆಂಟ್‍ನಿಂದ ಒಂದೂವರೆ ಪಟ್ಟು ವಿದ್ಯುತ್ ಬೇಕಾಗುತ್ತದೆ. ಇದಕ್ಕೆ ನೀರು ಮತ್ತು ವಿದ್ಯುತ್ ಸೋರಿಕೆ ಪ್ರಮಾಣ ಸೇರಿಸಿದರೇ ಹಾನಿ ಹೆಚ್ಚಾಗುತ್ತದೆ. ಒಟ್ಟಿನಲ್ಲಿ ಇದೊಂದು ಎಡವಟ್ಟು ಪ್ರಾಜೆಕ್ಟ್!

ಲಿಂಗನಮಕ್ಕಿ, ಕಾರ್ಗಲ್, ಚಕ್ರಾ, ವಾರಾಹಿ, ಸಾವೆಂಹಕ್ಕಲು, ಗಾಜನೂರು, ಗೇರುಸೊಪ್ಪ, ಭದ್ರಾ, ಮಾಣಿ, ನಾಗಝರಿ ಯೋಜನೆಗಳಿಂದ ಕಷ್ಟ-ನಷ್ಟ ಅನುಭವಿಸಿದ ಜನರ ಕಲ್ಯಾಣಕ್ಕಾಗಿ ಒಂದೇ ಒಂದು ಯೋಜನೆ ರೂಪಿಸದ ಸರ್ಕಾರಿ ಮಂದಿ ಬೆಂಗಳೂರಿನ ಉದ್ಧಾರಕ್ಕಾಗಿ ಮತ್ತದೇ ಜನ ಸಮೂಹವನ್ನು ಬಲಿಗೊಡಲು ರೆಡಿಯಾಗಿದ್ದಾರೆಂಬುದೇ ವಿಪರ್ಯಾಸ! ಈ ನೀರು ಯೋಜನೆಯಿಂದ ಮರ-ಗಿಡ ನಾಶವಾಗುತ್ತದೆ. ಅಪರೂಪದ ಜೀವಸಂಕುಲದ ಅಳಿದುಳಿದ ಶರಾವತಿ ಕಣಿವೆಗೆ ದೊಡ್ಡ ಆಘಾತವಾಗಲಿದೆ. ಪೈಪ್‍ಲೈನ್ ಹಾದುಹೋಗುವ ಊರುಗಳ ಜನರು ಬೀದಿಗೆ ಬೀಳುತ್ತಾರೆ.

ಇಷ್ಟೆಲ್ಲ ಅವಾಂತರ, ಅನಾಹುತದ ನಂತರವಾದರೂ ಯೋಜನೆಯ ಮೂಲ ಉದ್ದೇಶ ಈಡೇರಬಹುದಾ? ಶರಾವತಿ ನೀರು ಬೆಂಗಳೂರು ತಲುಪುವುದು ಅನುಮಾನ! ಯೋಜನೆ ಸರ್ಕಾರಿ ಫೈಲುಗಳಲ್ಲಿ ಕಾರ್ಯಗತವಾಗಿ ರಾಜಕಾರಣಿ-ಅಧಿಕಾರಿ-ಕಂಟ್ರಾಕ್ಟರ್ ಲಾಬಿಯ ದೆಸೆ ಬದಲಿಸಬಹುದಷ್ಟೇ! ಇಂಥ ಹುಚ್ಚು ಯೋಜನೆಗಳನ್ನು ಮಾಡುವುದು ಬಿಟ್ಟು ಬೆಂಗಳೂರಿನ ಅನಿಯಂತ್ರಿತ ಯದ್ವಾತದ್ವಾ ಬೆಳವಣಿಗೆಗೆ ಕಡಿವಾಣ ಹಾಕಿದರೆ ನೀರಡಿಕೆ ಸಮಸ್ಯೆಯೊಂದೇ ಅಲ್ಲ ಟ್ರಾಫಿಕ್ ಜಾಮ್, ಕಸದ ಸಮಸ್ಯೆ, ಪರಿಸರ ಮಾಲಿನ್ಯದಂಥ ಗಂಡಾಂತರದಿಂದಲೂ ಬಚಾವಾಗಬಹುದು. ಎಲ್ಲಾ ಮೂಲ ಸೌಕರ್ಯಗಳನ್ನು ತಾನೊಂದೇ ನುಂಗುವ ಬೆಂಗಳೂರಿನ ಕೈಗಾರಿಕೆಗಳನ್ನು ವಿಕೇಂದ್ರೀಕರಣಕ್ಕೆ ಒಳಪಡಿಸಿದರೆ ಕನಿಷ್ಟವೆಂದರೂ ಸಾಗರ, ಶಿರಸಿ, ಶಿವಮೊಗ್ಗ, ಚಿಕ್ಕಮಗಳೂರು, ಕಾರವಾರ ವ್ಯವಸ್ಥಿತವಾಗಿ ಉದ್ಧಾರವೂ ಆಗುತ್ತದೆ.

ತಮಿಳು-ತೆಲುಗರಿಗೆ ಹತ್ತಿರವಾದ ಬೆಂಗಳೂರನ್ನು ಕುರುಡಾಗಿ ಬೆಳೆಸುವ ಬದಲು ಕನ್ನಡ ನಾಡಿನ ಒಡಲೊಳಗೆ ಇರುವ ಸಾಗರ, ಶಿರಸಿ, ಶಿವಮೊಗ್ಗವನ್ನೇಕೆ ಅಭಿವೃದ್ಧಿಪಡಿಸಬಾರದೆಂಬ ಕೂಗು ಈಗ ಮಲೆನಾಡಲ್ಲಿ ಶುರುವಾಗುವ ಲಕ್ಷಣಗಳು ಗೋಚರಿಸುತ್ತಿವೆ. ಶಿವಮೊಗ್ಗ, ಕಾರವಾರದಲ್ಲಿ ವಿಮಾನ ನಿಲ್ದಾಣ ಸ್ಥಾಪಿಸಿ ಬೆಂಗಳೂರಿನ ಐಟಿ-ಬಿಟಿ ಇಂಡಸ್ಟ್ರಿಗಳನ್ನು ಸಾಗರ-ಶಿರಸಿಯತ್ತ ಏಕೆ ತರಬಾರದೆಂಬ ವಾದ ಬಲಗೊಳ್ಳುತ್ತಿದೆ. ಇದರಿಂದ ಒಂದೇ ಕಾಲದಲ್ಲಿ ಬೆಂಗಳೂರು ಮತ್ತು ಹಿಂದುಳಿದ ಮಲೆನಾಡಿನ ಹಲವು ಸಮಸ್ಯೆ-ಸಂಕಷ್ಟ ಪರಿಹಾರವಾಗುತ್ತದೆ. ಬರಡಾದ ಹಳ್ಳಿಗಳಲ್ಲಿ ಶಕ್ತಿ, ಮಾನವ ಸಂಪನ್ಮೂಲ ಉಳಿಯುತ್ತದೆ; ಪರಿಸರ ಪಸಂದಾಗಿರುತ್ತದೆ. ಬೆಂಗಳೂರಲ್ಲಿ ನೌಕರಿ ಮಾಡುತ್ತಿರುವ ಮಕ್ಕಳ ನೆನಪಲ್ಲಿ ಚಡಪಡಿಸುತ್ತಿರುವ ಅಮಾಯಕ ತಾಯ್ತಂದೆಯರ ಬದುಕು ಬಚಾವಾಗುತ್ತದೆ.

ಇಂಥ ಸುಸ್ಥಿರ ಅಭಿವೃದ್ಧಿ ಬೇಕಾ? ಬರಡು ಯೋಜನೆ ಕಡತದಲ್ಲಿ ಶುರುವಾಗೋದು ಬೇಕಾ? ಪರಮ್ ಸಾಹೇಬರಿಗೆ ಅರ್ಥ ಮಾಡಿಸೋರ್ಯಾರು?!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...