Homeಮುಖಪುಟಶಾಮಣ್ಣ ಮತ್ತು ಇಬ್ರಾಹಿಂ ಸಾಹೇಬರು

ಶಾಮಣ್ಣ ಮತ್ತು ಇಬ್ರಾಹಿಂ ಸಾಹೇಬರು

- Advertisement -
- Advertisement -

| ಬಿ. ಚಂದ್ರೇಗೌಡ |

ಮರಿ ಹಾಕಿದ್ದ ಬೆಕ್ಕಿನಂತೆ ಓಡಾಡುತ್ತಿದ್ದ ಶಾಮಣ್ಣನವರಲ್ಲಿ ಲವಲವಿಕೆ ಸ್ವಲ್ಪ ತಗ್ಗಿದೆ. ಆದ್ದರಿಂದ ಶ್ರೀದೇವಕ್ಕನವರು ಶಾಮಣ್ಣನವರ ಬಗ್ಗೆ ಹಿಂದಿಗಿಂತ ಹೆಚ್ಚು ಕಾಳಜಿವಹಿಸಿ ಯಾವುದೇ ಸಭೆ ಸಮಾರಂಭಕ್ಕೆ ಜೊತೆಯಲ್ಲೇ ಬಂದು ಜೋಪಾನವಾಗಿ ಕರೆದುಕೊಂಡು ಹೋಗುತ್ತಿದ್ದಾರೆ. ಹಾಗಾಗಿ ದಿನಾಂಕ 14ರಂದು ನಡೆದ ಶಿವಮೊಗ್ಗದ ಕೊಡುಗೈದಾನಿ ಇಬ್ರಾಹಿಂ ಸಾಹೇಬರ ದತ್ತಿನಿಧಿ ಉಪನ್ಯಾಸ ಕಾರ್ಯಕ್ರಮಕ್ಕೆ ಶಾಮಣ್ಣ ಶ್ರೀದೇವಕ್ಕ ಜೊತೆಯಾಗೆ ಬಂದಿದ್ದರು. ಇಬ್ರಾಹಿಂ ಸಾಹೇಬರು ಕನ್ನಡದ ಸಾಂಸ್ಕøತಿಕ ಲೋಕದಲ್ಲಿ ಅಚ್ಚಳಿಯದ ನೆನಪನ್ನ ಬಿಟ್ಟು ಹೋಗಿದ್ದಾರೆ. 1992ರಲ್ಲಿ ಬೆಂಗಳೂರಲ್ಲಿ ನಡೆದ ಲಂಕೇಶ್-ಕಂಬಾರ, ಗಿರೀಶ್ ಕಾರ್ನಾಡರ ನಾಟಕೋತ್ಸವಕ್ಕೆ ಧನಸಹಾಯ ಮಾಡಿದವರು ಇಬ್ರಾಹಿಂ ಸಾಹೇಬರು. ಅಷ್ಟೇ ಅಲ್ಲ ಶಿವಮೊಗ್ಗದ ಅವರ ಮನೆ ಆವರಣ ಯಾಚಕರಿಂದ ತುಂಬಿರುತ್ತಿತ್ತು.

ಮದುವೆ, ಮುಂಜಿ, ದೇವಸ್ಥಾನಕ್ಕೆ ಬಣ್ಣ, ಗಣಪತಿ ಹಬ್ಬದ ಖರ್ಚು ಇದಲ್ಲದೆ ಪುಸ್ತಕ ಪ್ರಕಟಿಸುವ ಸಾಹಿತಿಗಳು, ರಾಜಕಾರಣಿ ನಾನಾ ತರದ ಸಂಸ್ಕøತಿಯವರು ಇಬ್ರಾಹಿಂ ಸಾಹೇಬರನ್ನು ಹೀರಿ ಬಿಸಾಡಿದರು. ಇವರ ಹೊಡೆತ ತಾಳಲಾರದೆ ತೀರ್ಥಹಳ್ಳಿಗೆ ಹೋಗಿ ನೆಲೆಸಿದರು. ಯಾಚಕರು ಅಲ್ಲಿಗೂ ದಾಳಿಯಿಟ್ಟರು. ಅಲ್ಲಿಂದ ಅವರು ತಮ್ಮ ಹುಟ್ಟೂರಾದ ಬಳ್ಳಾರಿ ಜಿಲ್ಲೆಯ ಹಿರೇಹಾಳಕ್ಕೆ ಹೋಗಿ ನೆಲೆಸಿದರು. ಅಲ್ಲಿ ಈ ಕೊಡುಗೈ ಕರ್ಣ ದಾನಮಾಡದ ಸ್ಥಿತಿಗೆ ಬಂದಿದ್ದರು. ಆದರೇನು ಇಬ್ರಾಹಿಂ ಸಾಹೇಬರ ಮನೆಗೆ ಹೋದವರು ಬರಿಗೈಲಿ ಹೋಗುವುದು ಅವರಿಗೇ ಅವಮಾನವೆಂದು ಭಾವಿಸಿ ಸಾಲಮಾಡಿ ದಾನ ಮಾಡತೊಡಗಿದರು. ಇಂತಹ ದಾನಶೂರ ಕರ್ಣನ ನೆನಪಿನ ಸಭೆಗೆ ಮೂವತ್ತು ಜನ ಬಂದರು. ಮನುಷ್ಯರು ಉಪಕಾರ ಸ್ಮರಣೆಯಿಲ್ಲದ ನೀಚರೆಂದು ಲಂಕೇಶ್ ಹೇಳಿದ್ದರು. ಆದರೆ ಇಬ್ರಾಹಿಂ ಸಾಹೇಬರು ಅದರ ಅರಿವಿದ್ದೂ ನಗುತ್ತಲೇ ಸಹಾಯ ಮಾಡಿದರು, ಮಾಡುತ್ತಲೇ ಹೊರಟುಹೋದರು.

ಈ ಸಮಯದಲ್ಲಿ ಕಡಿದಾಳು ಶಾಮಣ್ಣನವರು ಕುತೂಹಲ ಸಂಗತಿಯೊಂದನ್ನ ಹೇಳಿದರು. ಜೆ.ಹೆಚ್.ಪಟೇಲರು ಹಂಪಿ ಯೂನಿವರ್ಸಿಟಿಗೆ ಇಬ್ರಾಹಿಂ ಸಾಹೇಬರು ಮತ್ತು ಕಡಿದಾಳು ಶಾಮಣ್ಣನವರನ್ನ ಸಿಂಡಿಕೇಟ್ ಸದಸ್ಯರನ್ನಾಗಿ ನೇಮಿಸಿದರು. ಸತತ ನಾಲ್ಕು ವರ್ಷಗಳ ಕಾಲ ಒಂದು ಸಭೆಗೂ ತಪ್ಪಿಸದಂತೆ ಇಬ್ರಾಹಿಂ ಸಾಹೇಬರು ಶಾಮಣ್ಣನವರನ್ನ ತಮ್ಮ ಕಾರಿನಲ್ಲಿ ಕರೆದೊಯ್ಯುತ್ತಿದ್ದರು. ಶಾಮಣ್ಣ ಸಂಗೀತ ಪ್ರೇಮಿಯೆಂದು ಗೊತ್ತಿದ್ದ ಇಬ್ರಾಹಿಂ ಸಾಹೇಬರು ತಮ್ಮ ಕಾರಿನಲ್ಲಿ ಸಂಗೀತದ ಸೀಡಿಗಳನ್ನು ತುಂಬಿಕೊಂಡು. ಅಲ್ಲದೆ ರಾಗಗಳ ಪರಿಚಯವನ್ನ ಮಾಡಿಸಿದರಂತೆ. ನಾಲ್ಕು ವರ್ಷದ ಹಂಪಿ ಪ್ರಯಾಣ ಅದೊಂದು ಸಂಗೀತದ ರಸದೌತಣದ ಪ್ರಯಾಣವಾಗಿತ್ತಂತೆ. ಮರುದಿನ ಶಾಮಣ್ಣನವರ ಸಹೋದರ ಗೋಪಾಲ್ ಮನೆಯಲ್ಲಿ ಸಿಕ್ಕ ಶಾಮಣ್ಣ ಹಿಂದಿನ ದಿನವನ್ನು ಮುಂದುವರಿಸಿದರು.

ಹಾಗೆ ನೋಡಿದರೆ ಶಾಮಣ್ಣನವರ ಬದುಕಿನಲ್ಲಿ ಸಂಗೀತ ಅಧಿಕೃತವಾಗಿ ಪ್ರವೇಶ ಪಡೆದದ್ದು ಮೈಸೂರಲ್ಲಿ ನಡೆದ ರವಿಶಂಕರ್ ಸಿತಾರ್ ಮತ್ತು ಅಲಿ ಅಕ್ಬರ್ ಖಾನ್‍ರವರ ಜುಗಲ್‍ಬಂದಿ ಕಾರ್ಯಕ್ರಮ ಕೇಳಿದ ನಂತರ. ಅದೇ ದಿನ ರಾಜೀವ ತಾರಾನಾಥ್ ಕೂಡ ಆ ಕಛೇರಿ ಕೇಳಿ ಸಂಗೀತದ ಭಾವಸಮಾದಿಗೆ ಒಳಗಾಗಿ ಜೊತೆಯಲ್ಲಿ ಬಂದವರನ್ನ ಮರೆತದ್ದು ಮತ್ತು ನಂತರ ಸರೋದ್ ಮಾಂತ್ರಿಕನಾದ ಆಲಿ ಅಕ್ಬರ್ ಖಾನ್ ಹುಡುಕುತ್ತ ಬಾಂಬೆಗೆ ಹೋದದ್ದು. ಆಶ್ಚರ್ಯವೆಂದರೆ ಶಾಮಣ್ಣನವರೂ ಹೋಗಿಬಿಟ್ಟರು. ಅದಾಗಲೇ ಸರೋದ್ ಮತ್ತು ಸಿತಾರ್‍ನ ನಾದಮೋಹದೊಳಗೆ ಸಿಲುಕಿದ ತೇಜಸ್ವಿಯವರು ನಾನು ಸಿತಾರ್ ಕಲಿಯುತ್ತೇನೆ, ನೀವು ಸರೋದ್ ಕಲಿಯಿರೆಂದು ಶಾಮಣ್ಣನವರಿಗೆ ಹೇಳಿದ್ದು ಕಾರಣವಾಗಿ ಶಾಮಣ್ಣ ಬಾಂಬೆಗೆ ಹೋದರು. ಅಲ್ಲಿಗೋಗಿ ನೋಡಿದರೆ ಚಿಕ್ಕಮನೆಯೊಂದರಲ್ಲಿ ಮಧ್ಯೆ ಒಂದು ಗೋಡೆ. ಆ ಕಡೆ ಅಡಿಗೆ ಮನೆ ಈ ಕಡೆ ಪುಟ್ಟ ಹಾಲು. ಅದಕ್ಕೆ ಅಟ್ಯಾಚ್ ಆದಂತೆ ಟಾಯ್ಲೆಟ್. ಆ ಮನೆಯಲ್ಲಿ ಆಲಿ ಅಕ್ಬರ್ ಖಾನ್‍ರವರಿಂದ ಸಂಗೀತ ಹೇಳಿಸಿಕೊಳ್ಳಲು ಹುಡುಗರು ಬರುತ್ತಿದ್ದರು. ಅವರೆಲ್ಲಾ ಹೊರಟುಹೋದರೆ ಶಾಮಣ್ಣ ಅಲ್ಲೇ ಉಳಿಯುತ್ತಿದ್ದರು. ತಮ್ಮ ಜಾತಿಯವನಲ್ಲ, ಕಳ್ಳುಬಳ್ಳಿಯವನೂ ಅಲ್ಲದ ಹುಡುಗ ಸಂಗೀತದ ಬೆನ್ನು ಹತ್ತಿ ಬಂದಿದ್ದಾನೆ, ಸರಿಯಾಗಿ ಭಾಷೆಯೂ ಬರುತ್ತಿಲ್ಲ. ಅಂತಹ ಶಾಮಣ್ಣನನ್ನ ತಮಗೇ ಮಲಗಲು ಜಾಗವಿಲ್ಲದ ಮನೆಯಲ್ಲಿ ಆಶ್ರಯ ಕೊಟ್ಟು ಸರೋದ್ ಹೇಳಿಕೊಟ್ಟ ಆಲಿ ಅಕ್ಬರ್‍ಖಾನ್ ಮತ್ತು ಅವರ ಶ್ರೀಮತಿಯವರ ಉದಾತ್ತ ನಡವಳಿಕೆ ನೆನಸಿಕೊಂಡರೆ ಈ ಭರತ ಖಂಡದಲ್ಲಿ ಎಂತೆಂತಹ ಮೇಧಾವಿಗಳು ಆಗಿಹೋದರು ಅನ್ನಿಸುತ್ತದೆ. ಸುದೈವಕ್ಕೆ ಆಲಿ ಅಕ್ಬರ್‍ಖಾನ್‍ರಿಗೆ ಎರಡು ಗಂಡುಮಕ್ಕಳಿದ್ದು, ಅವು ಶಾಮಣ್ಣನವರಿಗೆ ಅಂಟಿಕೊಂಡವು. ಶಾಮಣ್ಣನವರಿಗೆ ಡ್ರೈವಿಂಗ್ ಬರುತ್ತಿದ್ದುದು ಅನುಕೂಲವಾಗಿತ್ತು. ಆಗಾಗ್ಗೆ ರವಿಶಂಕರ್ ಮತ್ತು ಅವರ ಶ್ರೀಮತಿ ಅನ್ನಪೂರ್ಣದೇವಿಯವರನ್ನ ಅವರ ಮನೆಗೆ ತಲುಪಿಸಲು, ಕರೆದುಕೊಂಡು ಬರಲು ಶಾಮಣ್ಣ ಬೇಕಾಗಿತ್ತು. ಅಲ್ಲಾವುದ್ದೀನ್ ಖಾನ್, ಅಲಿ ಅಕ್ಬರ್ ಖಾನರ ತಂದೆ. ತಮ್ಮ ಮಗಳಿಗೆ ಅನ್ನಪೂರ್ಣ ಎಂದು ಹೆಸರಿಟ್ಟು ರವಿಶಂಕರ್‍ಗೆ ಮದುವೆ ಮಾಡಿಕೊಟ್ಟಿದ್ದರು. ಹಾಗೇ ತಮ್ಮ ಮಗ ಅಲಿ ಅಕ್ಬರ್ ಖಾನ್ ಹಿಂದೂ ಹುಡುಗಿಯನ್ನ ಮದುವೆಯಾಗಿದ್ದರು. ಇವರನ್ನೆಲ್ಲಾ ಬಂಧಿಸಿದ್ದು ಸಂಗೀತ. ಹಾಗೆನೋಡಿದರೆ ಈ ಸಂಗೀತ ಲೋಕದಲ್ಲಿ ಮುಳುಗಿದವರಿಗೆ ದೇಶ, ಅದರ ಆಡಳಿತ, ಪ್ರಧಾನಮಂತ್ರಿ, ದೇಶದ ಆಗುಹೋಗು ಇದಾವುದು ಅರಿವಿಗೇ ಬರುವುದಿಲ್ಲ.

ಅಲಿ ಅಕ್ಬರ್ ಖಾನ್ ಸಂಗೀತ ಕಛೇರಿಗೆ ಬಂದರೆ ತಮ್ಮ ಸರೋದ್ ಬಿಟ್ಟು ಇನ್ನೇನೂ ನೋಡುತ್ತಿರಲಿಲ್ಲ. ಬೇರೆ ಮಾತೇ ಆಡದ ಅವರು ಅಗತ್ಯವಿದ್ದಷ್ಟು ಮಾತನಾಡಿ ಒಂದಿಷ್ಟು ಸರೋದ್ ಕಲಿಸಿದರಂತೆ. ಆ ನಂತರ ಅಮೆರಿಕದ ಯೂನಿವರ್ಸಿಟಿಯೊಂದಕ್ಕೆ ಇಂಡಿಯನ್ ಮ್ಯೂಜಿಕ್ ಶಾಖೆಯ ನಿರ್ದೇಶಕರಾಗಿ ಹೊರಟು ಹೋದರು. ಇತ್ತ ಅವರ ಶ್ರೀಮತಿಯವರು ಶಾಮಣ್ಣನವರಿಗೆ ಗುರುಪತ್ನಿಯ ಕಾಣಿಕೆಯಾಗಿ ಎರಡು ಜೊತೆ ಜುಬ್ಬ ಪೈಜಾಮ್ ಹೊಲಿಸಿಕೊಟ್ಟು ನಮ್ಮ ನೆನಪಾಗಿ ಇರಲಿ ಎಂದು ಹೇಳಿ ಊರು ತಲುಪುವಷ್ಟು ಗಾಡಿ ಚಾರ್ಜು ಕೊಟ್ಟು ಕಳಿಸಿದ್ದರು. ಅವರು ಕೊಟ್ಟ ಜುಬ್ಬ ಇನ್ನೂ ಇದೆ ಎಂದು ತಣ್ಣಗೆ ಹೇಳಿದ ಶಾಮಣ್ಣನವರ ಕಣ್ಣು ತೇವವಾದಂತೆ ಕಾಣಿಸಿದವು. ಇಂತಹ ಅನುಭವದ ಮತ್ತು ಶ್ರೀಮಂತಿಕೆಯ ನೆನಪುಗಳನ್ನು ಹೊಂದಿರುವ ಶಾಮಣ್ಣನವರ ಮೇಲೆ ಮೂರು ಪುಸ್ತಕ, ಒಂದು ನಾಟಕ ಬಂದಿದ್ದರೂ ಅವರ ಪಕ್ಕ ಕುಳಿತು ಆಲಿಸಿದರೆ ಇನ್ನಷ್ಟು ಅಪೂರ್ಣ ನೆನಪುಗಳು ಅನಾವರಣಗೊಳ್ಳಬಹುದು. ನ್ಯಾಯಪಥ ಪತ್ರಿಕೆಗೆ ಎರಡು ವರ್ಷದ ಚಂದಾ ಹಣದ ಚೆಕ್ಕನ್ನು ಶ್ರೀದೇವಕ್ಕ ಕೈಗಿತ್ತಾಗ ಶಾಮಣ್ಣ ಮತ್ತು ನಾನು ವಾಸ್ತವಕ್ಕಿಳಿದೆವು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...