Homeಮುಖಪುಟಶಾಮಣ್ಣ ಮತ್ತು ಇಬ್ರಾಹಿಂ ಸಾಹೇಬರು

ಶಾಮಣ್ಣ ಮತ್ತು ಇಬ್ರಾಹಿಂ ಸಾಹೇಬರು

- Advertisement -
- Advertisement -

| ಬಿ. ಚಂದ್ರೇಗೌಡ |

ಮರಿ ಹಾಕಿದ್ದ ಬೆಕ್ಕಿನಂತೆ ಓಡಾಡುತ್ತಿದ್ದ ಶಾಮಣ್ಣನವರಲ್ಲಿ ಲವಲವಿಕೆ ಸ್ವಲ್ಪ ತಗ್ಗಿದೆ. ಆದ್ದರಿಂದ ಶ್ರೀದೇವಕ್ಕನವರು ಶಾಮಣ್ಣನವರ ಬಗ್ಗೆ ಹಿಂದಿಗಿಂತ ಹೆಚ್ಚು ಕಾಳಜಿವಹಿಸಿ ಯಾವುದೇ ಸಭೆ ಸಮಾರಂಭಕ್ಕೆ ಜೊತೆಯಲ್ಲೇ ಬಂದು ಜೋಪಾನವಾಗಿ ಕರೆದುಕೊಂಡು ಹೋಗುತ್ತಿದ್ದಾರೆ. ಹಾಗಾಗಿ ದಿನಾಂಕ 14ರಂದು ನಡೆದ ಶಿವಮೊಗ್ಗದ ಕೊಡುಗೈದಾನಿ ಇಬ್ರಾಹಿಂ ಸಾಹೇಬರ ದತ್ತಿನಿಧಿ ಉಪನ್ಯಾಸ ಕಾರ್ಯಕ್ರಮಕ್ಕೆ ಶಾಮಣ್ಣ ಶ್ರೀದೇವಕ್ಕ ಜೊತೆಯಾಗೆ ಬಂದಿದ್ದರು. ಇಬ್ರಾಹಿಂ ಸಾಹೇಬರು ಕನ್ನಡದ ಸಾಂಸ್ಕøತಿಕ ಲೋಕದಲ್ಲಿ ಅಚ್ಚಳಿಯದ ನೆನಪನ್ನ ಬಿಟ್ಟು ಹೋಗಿದ್ದಾರೆ. 1992ರಲ್ಲಿ ಬೆಂಗಳೂರಲ್ಲಿ ನಡೆದ ಲಂಕೇಶ್-ಕಂಬಾರ, ಗಿರೀಶ್ ಕಾರ್ನಾಡರ ನಾಟಕೋತ್ಸವಕ್ಕೆ ಧನಸಹಾಯ ಮಾಡಿದವರು ಇಬ್ರಾಹಿಂ ಸಾಹೇಬರು. ಅಷ್ಟೇ ಅಲ್ಲ ಶಿವಮೊಗ್ಗದ ಅವರ ಮನೆ ಆವರಣ ಯಾಚಕರಿಂದ ತುಂಬಿರುತ್ತಿತ್ತು.

ಮದುವೆ, ಮುಂಜಿ, ದೇವಸ್ಥಾನಕ್ಕೆ ಬಣ್ಣ, ಗಣಪತಿ ಹಬ್ಬದ ಖರ್ಚು ಇದಲ್ಲದೆ ಪುಸ್ತಕ ಪ್ರಕಟಿಸುವ ಸಾಹಿತಿಗಳು, ರಾಜಕಾರಣಿ ನಾನಾ ತರದ ಸಂಸ್ಕøತಿಯವರು ಇಬ್ರಾಹಿಂ ಸಾಹೇಬರನ್ನು ಹೀರಿ ಬಿಸಾಡಿದರು. ಇವರ ಹೊಡೆತ ತಾಳಲಾರದೆ ತೀರ್ಥಹಳ್ಳಿಗೆ ಹೋಗಿ ನೆಲೆಸಿದರು. ಯಾಚಕರು ಅಲ್ಲಿಗೂ ದಾಳಿಯಿಟ್ಟರು. ಅಲ್ಲಿಂದ ಅವರು ತಮ್ಮ ಹುಟ್ಟೂರಾದ ಬಳ್ಳಾರಿ ಜಿಲ್ಲೆಯ ಹಿರೇಹಾಳಕ್ಕೆ ಹೋಗಿ ನೆಲೆಸಿದರು. ಅಲ್ಲಿ ಈ ಕೊಡುಗೈ ಕರ್ಣ ದಾನಮಾಡದ ಸ್ಥಿತಿಗೆ ಬಂದಿದ್ದರು. ಆದರೇನು ಇಬ್ರಾಹಿಂ ಸಾಹೇಬರ ಮನೆಗೆ ಹೋದವರು ಬರಿಗೈಲಿ ಹೋಗುವುದು ಅವರಿಗೇ ಅವಮಾನವೆಂದು ಭಾವಿಸಿ ಸಾಲಮಾಡಿ ದಾನ ಮಾಡತೊಡಗಿದರು. ಇಂತಹ ದಾನಶೂರ ಕರ್ಣನ ನೆನಪಿನ ಸಭೆಗೆ ಮೂವತ್ತು ಜನ ಬಂದರು. ಮನುಷ್ಯರು ಉಪಕಾರ ಸ್ಮರಣೆಯಿಲ್ಲದ ನೀಚರೆಂದು ಲಂಕೇಶ್ ಹೇಳಿದ್ದರು. ಆದರೆ ಇಬ್ರಾಹಿಂ ಸಾಹೇಬರು ಅದರ ಅರಿವಿದ್ದೂ ನಗುತ್ತಲೇ ಸಹಾಯ ಮಾಡಿದರು, ಮಾಡುತ್ತಲೇ ಹೊರಟುಹೋದರು.

ಈ ಸಮಯದಲ್ಲಿ ಕಡಿದಾಳು ಶಾಮಣ್ಣನವರು ಕುತೂಹಲ ಸಂಗತಿಯೊಂದನ್ನ ಹೇಳಿದರು. ಜೆ.ಹೆಚ್.ಪಟೇಲರು ಹಂಪಿ ಯೂನಿವರ್ಸಿಟಿಗೆ ಇಬ್ರಾಹಿಂ ಸಾಹೇಬರು ಮತ್ತು ಕಡಿದಾಳು ಶಾಮಣ್ಣನವರನ್ನ ಸಿಂಡಿಕೇಟ್ ಸದಸ್ಯರನ್ನಾಗಿ ನೇಮಿಸಿದರು. ಸತತ ನಾಲ್ಕು ವರ್ಷಗಳ ಕಾಲ ಒಂದು ಸಭೆಗೂ ತಪ್ಪಿಸದಂತೆ ಇಬ್ರಾಹಿಂ ಸಾಹೇಬರು ಶಾಮಣ್ಣನವರನ್ನ ತಮ್ಮ ಕಾರಿನಲ್ಲಿ ಕರೆದೊಯ್ಯುತ್ತಿದ್ದರು. ಶಾಮಣ್ಣ ಸಂಗೀತ ಪ್ರೇಮಿಯೆಂದು ಗೊತ್ತಿದ್ದ ಇಬ್ರಾಹಿಂ ಸಾಹೇಬರು ತಮ್ಮ ಕಾರಿನಲ್ಲಿ ಸಂಗೀತದ ಸೀಡಿಗಳನ್ನು ತುಂಬಿಕೊಂಡು. ಅಲ್ಲದೆ ರಾಗಗಳ ಪರಿಚಯವನ್ನ ಮಾಡಿಸಿದರಂತೆ. ನಾಲ್ಕು ವರ್ಷದ ಹಂಪಿ ಪ್ರಯಾಣ ಅದೊಂದು ಸಂಗೀತದ ರಸದೌತಣದ ಪ್ರಯಾಣವಾಗಿತ್ತಂತೆ. ಮರುದಿನ ಶಾಮಣ್ಣನವರ ಸಹೋದರ ಗೋಪಾಲ್ ಮನೆಯಲ್ಲಿ ಸಿಕ್ಕ ಶಾಮಣ್ಣ ಹಿಂದಿನ ದಿನವನ್ನು ಮುಂದುವರಿಸಿದರು.

ಹಾಗೆ ನೋಡಿದರೆ ಶಾಮಣ್ಣನವರ ಬದುಕಿನಲ್ಲಿ ಸಂಗೀತ ಅಧಿಕೃತವಾಗಿ ಪ್ರವೇಶ ಪಡೆದದ್ದು ಮೈಸೂರಲ್ಲಿ ನಡೆದ ರವಿಶಂಕರ್ ಸಿತಾರ್ ಮತ್ತು ಅಲಿ ಅಕ್ಬರ್ ಖಾನ್‍ರವರ ಜುಗಲ್‍ಬಂದಿ ಕಾರ್ಯಕ್ರಮ ಕೇಳಿದ ನಂತರ. ಅದೇ ದಿನ ರಾಜೀವ ತಾರಾನಾಥ್ ಕೂಡ ಆ ಕಛೇರಿ ಕೇಳಿ ಸಂಗೀತದ ಭಾವಸಮಾದಿಗೆ ಒಳಗಾಗಿ ಜೊತೆಯಲ್ಲಿ ಬಂದವರನ್ನ ಮರೆತದ್ದು ಮತ್ತು ನಂತರ ಸರೋದ್ ಮಾಂತ್ರಿಕನಾದ ಆಲಿ ಅಕ್ಬರ್ ಖಾನ್ ಹುಡುಕುತ್ತ ಬಾಂಬೆಗೆ ಹೋದದ್ದು. ಆಶ್ಚರ್ಯವೆಂದರೆ ಶಾಮಣ್ಣನವರೂ ಹೋಗಿಬಿಟ್ಟರು. ಅದಾಗಲೇ ಸರೋದ್ ಮತ್ತು ಸಿತಾರ್‍ನ ನಾದಮೋಹದೊಳಗೆ ಸಿಲುಕಿದ ತೇಜಸ್ವಿಯವರು ನಾನು ಸಿತಾರ್ ಕಲಿಯುತ್ತೇನೆ, ನೀವು ಸರೋದ್ ಕಲಿಯಿರೆಂದು ಶಾಮಣ್ಣನವರಿಗೆ ಹೇಳಿದ್ದು ಕಾರಣವಾಗಿ ಶಾಮಣ್ಣ ಬಾಂಬೆಗೆ ಹೋದರು. ಅಲ್ಲಿಗೋಗಿ ನೋಡಿದರೆ ಚಿಕ್ಕಮನೆಯೊಂದರಲ್ಲಿ ಮಧ್ಯೆ ಒಂದು ಗೋಡೆ. ಆ ಕಡೆ ಅಡಿಗೆ ಮನೆ ಈ ಕಡೆ ಪುಟ್ಟ ಹಾಲು. ಅದಕ್ಕೆ ಅಟ್ಯಾಚ್ ಆದಂತೆ ಟಾಯ್ಲೆಟ್. ಆ ಮನೆಯಲ್ಲಿ ಆಲಿ ಅಕ್ಬರ್ ಖಾನ್‍ರವರಿಂದ ಸಂಗೀತ ಹೇಳಿಸಿಕೊಳ್ಳಲು ಹುಡುಗರು ಬರುತ್ತಿದ್ದರು. ಅವರೆಲ್ಲಾ ಹೊರಟುಹೋದರೆ ಶಾಮಣ್ಣ ಅಲ್ಲೇ ಉಳಿಯುತ್ತಿದ್ದರು. ತಮ್ಮ ಜಾತಿಯವನಲ್ಲ, ಕಳ್ಳುಬಳ್ಳಿಯವನೂ ಅಲ್ಲದ ಹುಡುಗ ಸಂಗೀತದ ಬೆನ್ನು ಹತ್ತಿ ಬಂದಿದ್ದಾನೆ, ಸರಿಯಾಗಿ ಭಾಷೆಯೂ ಬರುತ್ತಿಲ್ಲ. ಅಂತಹ ಶಾಮಣ್ಣನನ್ನ ತಮಗೇ ಮಲಗಲು ಜಾಗವಿಲ್ಲದ ಮನೆಯಲ್ಲಿ ಆಶ್ರಯ ಕೊಟ್ಟು ಸರೋದ್ ಹೇಳಿಕೊಟ್ಟ ಆಲಿ ಅಕ್ಬರ್‍ಖಾನ್ ಮತ್ತು ಅವರ ಶ್ರೀಮತಿಯವರ ಉದಾತ್ತ ನಡವಳಿಕೆ ನೆನಸಿಕೊಂಡರೆ ಈ ಭರತ ಖಂಡದಲ್ಲಿ ಎಂತೆಂತಹ ಮೇಧಾವಿಗಳು ಆಗಿಹೋದರು ಅನ್ನಿಸುತ್ತದೆ. ಸುದೈವಕ್ಕೆ ಆಲಿ ಅಕ್ಬರ್‍ಖಾನ್‍ರಿಗೆ ಎರಡು ಗಂಡುಮಕ್ಕಳಿದ್ದು, ಅವು ಶಾಮಣ್ಣನವರಿಗೆ ಅಂಟಿಕೊಂಡವು. ಶಾಮಣ್ಣನವರಿಗೆ ಡ್ರೈವಿಂಗ್ ಬರುತ್ತಿದ್ದುದು ಅನುಕೂಲವಾಗಿತ್ತು. ಆಗಾಗ್ಗೆ ರವಿಶಂಕರ್ ಮತ್ತು ಅವರ ಶ್ರೀಮತಿ ಅನ್ನಪೂರ್ಣದೇವಿಯವರನ್ನ ಅವರ ಮನೆಗೆ ತಲುಪಿಸಲು, ಕರೆದುಕೊಂಡು ಬರಲು ಶಾಮಣ್ಣ ಬೇಕಾಗಿತ್ತು. ಅಲ್ಲಾವುದ್ದೀನ್ ಖಾನ್, ಅಲಿ ಅಕ್ಬರ್ ಖಾನರ ತಂದೆ. ತಮ್ಮ ಮಗಳಿಗೆ ಅನ್ನಪೂರ್ಣ ಎಂದು ಹೆಸರಿಟ್ಟು ರವಿಶಂಕರ್‍ಗೆ ಮದುವೆ ಮಾಡಿಕೊಟ್ಟಿದ್ದರು. ಹಾಗೇ ತಮ್ಮ ಮಗ ಅಲಿ ಅಕ್ಬರ್ ಖಾನ್ ಹಿಂದೂ ಹುಡುಗಿಯನ್ನ ಮದುವೆಯಾಗಿದ್ದರು. ಇವರನ್ನೆಲ್ಲಾ ಬಂಧಿಸಿದ್ದು ಸಂಗೀತ. ಹಾಗೆನೋಡಿದರೆ ಈ ಸಂಗೀತ ಲೋಕದಲ್ಲಿ ಮುಳುಗಿದವರಿಗೆ ದೇಶ, ಅದರ ಆಡಳಿತ, ಪ್ರಧಾನಮಂತ್ರಿ, ದೇಶದ ಆಗುಹೋಗು ಇದಾವುದು ಅರಿವಿಗೇ ಬರುವುದಿಲ್ಲ.

ಅಲಿ ಅಕ್ಬರ್ ಖಾನ್ ಸಂಗೀತ ಕಛೇರಿಗೆ ಬಂದರೆ ತಮ್ಮ ಸರೋದ್ ಬಿಟ್ಟು ಇನ್ನೇನೂ ನೋಡುತ್ತಿರಲಿಲ್ಲ. ಬೇರೆ ಮಾತೇ ಆಡದ ಅವರು ಅಗತ್ಯವಿದ್ದಷ್ಟು ಮಾತನಾಡಿ ಒಂದಿಷ್ಟು ಸರೋದ್ ಕಲಿಸಿದರಂತೆ. ಆ ನಂತರ ಅಮೆರಿಕದ ಯೂನಿವರ್ಸಿಟಿಯೊಂದಕ್ಕೆ ಇಂಡಿಯನ್ ಮ್ಯೂಜಿಕ್ ಶಾಖೆಯ ನಿರ್ದೇಶಕರಾಗಿ ಹೊರಟು ಹೋದರು. ಇತ್ತ ಅವರ ಶ್ರೀಮತಿಯವರು ಶಾಮಣ್ಣನವರಿಗೆ ಗುರುಪತ್ನಿಯ ಕಾಣಿಕೆಯಾಗಿ ಎರಡು ಜೊತೆ ಜುಬ್ಬ ಪೈಜಾಮ್ ಹೊಲಿಸಿಕೊಟ್ಟು ನಮ್ಮ ನೆನಪಾಗಿ ಇರಲಿ ಎಂದು ಹೇಳಿ ಊರು ತಲುಪುವಷ್ಟು ಗಾಡಿ ಚಾರ್ಜು ಕೊಟ್ಟು ಕಳಿಸಿದ್ದರು. ಅವರು ಕೊಟ್ಟ ಜುಬ್ಬ ಇನ್ನೂ ಇದೆ ಎಂದು ತಣ್ಣಗೆ ಹೇಳಿದ ಶಾಮಣ್ಣನವರ ಕಣ್ಣು ತೇವವಾದಂತೆ ಕಾಣಿಸಿದವು. ಇಂತಹ ಅನುಭವದ ಮತ್ತು ಶ್ರೀಮಂತಿಕೆಯ ನೆನಪುಗಳನ್ನು ಹೊಂದಿರುವ ಶಾಮಣ್ಣನವರ ಮೇಲೆ ಮೂರು ಪುಸ್ತಕ, ಒಂದು ನಾಟಕ ಬಂದಿದ್ದರೂ ಅವರ ಪಕ್ಕ ಕುಳಿತು ಆಲಿಸಿದರೆ ಇನ್ನಷ್ಟು ಅಪೂರ್ಣ ನೆನಪುಗಳು ಅನಾವರಣಗೊಳ್ಳಬಹುದು. ನ್ಯಾಯಪಥ ಪತ್ರಿಕೆಗೆ ಎರಡು ವರ್ಷದ ಚಂದಾ ಹಣದ ಚೆಕ್ಕನ್ನು ಶ್ರೀದೇವಕ್ಕ ಕೈಗಿತ್ತಾಗ ಶಾಮಣ್ಣ ಮತ್ತು ನಾನು ವಾಸ್ತವಕ್ಕಿಳಿದೆವು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧರ್ಮದ ಕಾರಣಕ್ಕೆ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಗೆ ಹಲವು ಬಾರಿ ಇರಿತ: ಅಮೆರಿಕದ ಮಾಲ್‌ನಲ್ಲಿ ಕೃತ್ಯ

ಅಮೆರಿಕದ ಉತಾಹ್‌ನಲ್ಲಿರುವ ಶಾಪಿಂಗ್ ಮಾಲ್‌ನಲ್ಲಿ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಯೊಬ್ಬನಿಗೆ ಹಲವು ಬಾರಿ ಇರಿತದ ಆರೋಪ ಹೊರಿಸಲಾಗಿದೆ. ಹೈದರಾಬಾದ್‌ ನಗರದ ಟೋಲಿಚೌಕಿಯ ನಿವಾಸಿ ಸೈಯದ್ ಸೊಹೈಲ್ ಉದ್ದೀನ್, ಉತಾಹ್‌ನ ಸಾಲ್ಟ್ ಲೇಕ್ ಕೌಂಟಿಯ...

47 ವರ್ಷಗಳ ನಂತರ ಸಾಮೂಹಿಕ ಅತ್ಯಾಚಾರ ಪ್ರಕರಣದ ಶಿಕ್ಷೆ ಎತ್ತಿಹಿಡಿದ ಅಲಹಾಬಾದ್ ಹೈಕೋರ್ಟ್

1979 ರಲ್ಲಿ ನಡೆದಿದ್ದ ಅಪ್ರಾಪ್ತೆ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ 71 ವರ್ಷದ ವ್ಯಕ್ತಿಯ ಶಿಕ್ಷೆಯನ್ನು ಅಲಹಾಬಾದ್ ಹೈಕೋರ್ಟ್ ಎತ್ತಿಹಿಡಿದಿದೆ. ಆದರೆ, ಕ್ರಿಮಿನಲ್ ಮೇಲ್ಮನವಿಯ 43 ವರ್ಷಗಳ ಸುದೀರ್ಘ ವಿಚಾರಣೆ ಮತ್ತು ಆತನ...

ಪಶ್ಚಿಮ ಬಂಗಾಳ: ಮುರ್ಷಿದಾಬಾದ್‌ನಲ್ಲಿ ಶಾಲಾ ವ್ಯಾನ್‌ಗೆ ರೈಲು ಡಿಕ್ಕಿ: ಇಬ್ಬರು ವಿದ್ಯಾರ್ಥಿಗಳು ಸೇರಿ 3 ಮಂದಿ ಸಾವು

ಮುರ್ಷಿದಾಬಾದ್: ದೇಶದಲ್ಲಿ ರೈಲ್ವೆ ಸುರಕ್ಷತೆಯ ಕುರಿತು ಸರ್ಕಾರಗಳು ದೊಡ್ಡ ದೊಡ್ಡ ಭರವಸೆ ಹಾಗೂ ಯೋಜನೆಗಳನ್ನು ಮಂಡಿಸುತ್ತಿದ್ದರೂ, ತಳಮಟ್ಟದ ವಾಸ್ತವ ಮಾತ್ರ ಇಂದಿಗೂ ಅತ್ಯಂತ ಭೀಕರವಾಗಿದೆ ಎಂಬುದಕ್ಕೆ ಪಶ್ಚಿಮ ಬಂಗಾಳದಲ್ಲಿ ನಡೆದ ಈ ಘೋರ...

ವಿಜಯ್ ನೇತೃತ್ವದ ಟಿವಿಕೆ ಸರ್ಕಾರವನ್ನು ಅಸ್ಥಿರಗೊಳಿಸಲು ‘ಪ್ರಾಜೆಕ್ಟ್ ಮೇಘಾಲಯ’ ಸಂಚು ಆರೋಪ : ಪತ್ರಕರ್ತನ ವಿಚಾರಣೆ

ತಮಿಳುನಾಡಿನ ಆಡಳಿತಾರೂಢ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಶಾಸಕ ಎನ್. ಇಲೈಯರಾಜ ಅವರಿಗೆ ಹಣದ ಆಮಿಷವೊಡ್ಡಲು ಯತ್ನಿಸಿದ ಆರೋಪ ಪ್ರಕರಣ ಸಂಬಂಧ ಚೆನ್ನೈ ಪೊಲೀಸರು 'ಪುದಿಯಾ ತಲೈಮುರೈ' ವಾಹಿನಿಯ ಪತ್ರಕರ್ತ ವಿಜಯನ್...

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...

E20 ಪೆಟ್ರೋಲ್ ಪ್ರಕರಣ : ‘ಗ್ರ್ಯಾಂಡ್ ವಿಟಾರಾ’ ಕಾರು ಬದಲಾಯಿಸಿ ಕೊಡಲು ಮಾರುತಿ ಸುಝುಕಿಗೆ ಗ್ರಾಹಕ ನ್ಯಾಯಾಲಯ ಆದೇಶ

ಛತ್ತೀಸ್‌ಗಢದ ರಾಯ್‌ಪುರದ ಜಿಲ್ಲಾ ಗ್ರಾಹಕ ವಿವಾದಗಳ ಪರಿಹಾರ ಆಯೋಗವು (ಡಿಸಿಡಿಆರ್‌ಸಿ), E20 ಇಂಧನ (ಪೆಟ್ರೋಲ್) ಬಳಕೆಯಿಂದಾಗಿ ಕಾರು ಕೆಟ್ಟುಹೋಗಿದೆ ಎಂದು ಆರೋಪಿಸಿದ ವ್ಯಕ್ತಿಗೆ ಹೊಸ 'ಗ್ರಾಂಡ್ ವಿಟಾರಾ' ಕಾರನ್ನು ನೀಡುವಂತೆ ಕಾರು ತಯಾರಿಕಾ...

ಸಿಜೆಪಿ ಶಾಂತಿಯುತ ಪ್ರತಿಭಟನೆಗೆ ನಿರಂತರ ಪೊಲೀಸ್ ಕಣ್ಗಾವಲು ಪ್ರಶ್ನಿಸಿ ದೆಹಲಿ ಹೈಕೋರ್ಟ್‌ಗೆ ಅರ್ಜಿ

ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್‌ನಲ್ಲಿ ಜಿರಳೆ ಜನತಾ ಪಕ್ಷ (ಸಿಜೆಪಿ) ಆಯೋಜಿಸಿರುವ ಶಾಂತಿಯುತ ಧರಣಿ ಮತ್ತು ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸುವ ನಾಗರಿಕರ ಮೇಲೆ ದೆಹಲಿ ಪೊಲೀಸರು ನಿರಂತರ ಮತ್ತು ವ್ಯಾಪಕ ಕಣ್ಗಾವಲು...

IAS ಆಗುವ ಮುನ್ನ ‘ಪರಿಪೂರ್ಣ ತಾಯಿ’ಯಾಗಿ ಎಂದ ರಾಜ್ಯಪಾಲರ ಸಲಹೆ ಪುರುಷ ಪ್ರಾಧ್ಯಾನ್ಯತೆಯ ಮುಂದುವರೆದ ಆಚರಣೆ ಅಲ್ಲವೆ?

ಇತ್ತೀಚೆಗೆ ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಅವರು, "ಮಹಿಳೆಯರು IAS ಅಧಿಕಾರಿ ಅಥವಾ ಶಿಕ್ಷಕಿಯಾಗುವ ಕನಸು ಕಾಣುವ ಮೊದಲು 'ಪರಿಣಿತ ತಾಯಿ' ಆಗುವುದನ್ನು ಕಲಿಯಬೇಕು ಎಂದು ಸಲಹೆ ನೀಡಿದ್ದರು. ಕಾನ್ಪುರದ ಛತ್ರಪತಿ...

ಹಿಂದಿನ ಮದುವೆ, ಮಗು ವಿಚಾರ ಮುಚ್ಚಿಟ್ಟಿದ್ದಕ್ಕೆ ಸಹೋದರನೊಂದಿಗಿನ ಸಂಬಂಧ ಮುರಿದುಕೊಂಡಿದ್ದ ಕಾನೂನು ವಿದ್ಯಾರ್ಥಿನಿಯನ್ನು ಇರಿದು ಕೊಂದ ತಮ್ಮ

ಬೆಂಗಳೂರು: ಮೊದಲ ಮದುವೆ ಹಾಗೂ ಮಗುವಿದ್ದ ವಿಷಯವನ್ನು ಮುಚ್ಚಿಟ್ಟು ವಂಚಿಸಿದ್ದ ಪ್ರಿಯಕರನೊಂದಿಗಿನ ಸಂಬಂಧವನ್ನು ಮುರಿದುಕೊಂಡ ಕಾರಣಕ್ಕೆ, ಆತನ ಸಹೋದರನಿಂದಲೇ ಚಾಕು ಇರಿತಕ್ಕೊಳಗಾಗಿದ್ದ ಕಾನೂನು ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ...

ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ಅಮೆರಿಕ ದಾಳಿಗೆ ಇರಾನ್‌ನಿಂದ ಪ್ರತೀಕಾರ

ಕಳೆದ ಗುರುವಾರ (ಜು.16) ಖುಜೆಸ್ತಾನ್ ಪ್ರಾಂತ್ಯದಲ್ಲಿರುವ ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ನಡೆದ ದಾಳಿಗೆ ಪ್ರತೀಕಾರವಾಗಿ, ಕುವೈತ್ ಮತ್ತು ಬಹ್ರೇನ್ ಸೇರಿದಂತೆ ಗಲ್ಫ್ ರಾಷ್ಟ್ರಗಳಲ್ಲಿರುವ ಅಮೆರಿಕದ ವಾಯು ನೆಲೆಗಳ ಮೇಲೆ ಇರಾನ್ ಪ್ರತಿದಾಳಿ...