Homeರಾಜಕೀಯಶಿರಸಿ-ಕುಮಟಾ ಹೆದ್ದಾರಿಗೆ ಗಂಟು ಬಿದ್ದಿರುವ  ಪರಿಸರವ್ಯಾಧಿಗಳು!!

ಶಿರಸಿ-ಕುಮಟಾ ಹೆದ್ದಾರಿಗೆ ಗಂಟು ಬಿದ್ದಿರುವ  ಪರಿಸರವ್ಯಾಧಿಗಳು!!

- Advertisement -
ಢೋಂಗಿ ಪರಿಸರ ಪರಾಕ್ರಮಿಗಳ ದಗಲುಬಾಜಿ ಆಟದಿಂದ ಉತ್ತರ ಕನ್ನಡಿಗರೀಗ ಬೇಸತ್ತು ಹೋಗಿದ್ದಾರೆ. ಮೂಲತಃ ತಮ್ಮ ಅಡಿಕೆ ತೋಟಗಳ ಸಾಮ್ರಾಜ್ಯವನ್ನು ಕಾಪಾಡಿಕೊಳ್ಳುವ ಹವ್ಯಕ ಬ್ರಾಹ್ಮಣರ ಮುಖವಾಡವಾಗಿಯಷ್ಟೆÃ ಚಲಾವಣೆಗೆ ಬರುವ ಈ ಢೋಂಗಿ ಪರಿಸರವಾದ ಅಬ್ರಾಹ್ಮಣ ಸಮುದಾಯಗಳಿಗೆ ದಕ್ಕೆಯಾಗುವ ಯಾವ ಯೋಜನೆಗಳಿಗೂ ಚಕಾರವೆತ್ತುವುದಿಲ್ಲ. ಸ್ವರ್ಣವಲ್ಲಿ ಮಠದ ಗಂಗಾಧರೇಂದ್ರ ಸ್ವಾಮಿಯಿಂದ ಅನಂತ್ ಹೆಗಡೆ ಆಶೀಸರನಂಥ ಬ್ರಾಹ್ಮಣ ಜಾತ್ಯಸ್ಥರೆಲ್ಲ ಪರಿಸರವಾದವನ್ನು ತಮ್ಮಿಷ್ಟದಂತೆ ಕನವರಿಸೋದು ತಮ್ಮ ಜಾತಿಯ ಹಿತ ಕಾಪಾಡುವುದಕ್ಕಷ್ಟೆÃ!
ಜಿಲ್ಲೆಯ ಅಭಿವೃದ್ಧಿಗೆ ಅನಿವಾರ್ಯ ಅಗತ್ಯವಾದ ಹುಬ್ಬಳ್ಳಿ-ಅಂಕೋಲಾ ರೈಲು ಮಾರ್ಗಕ್ಕೆ ಅಡ್ಡಗಾಲು ಹಾಕುವ ಈ ಪ್ರಚಂಡರು, ತಮ್ಮ ಶಿರಸಿ-ಯಲ್ಲಾಪುರ ಹೈಗರ ಸೀಮೆಗೆ ಅನುಕೂಲವಾಗುವ ತಾಳಗುಪ್ಪಾ-ಸಿದ್ಧಾಪುರ-ಶಿರಸಿ-ಹಾವೇರಿ ರೈಲು ಮಾರ್ಗಕ್ಕೆ ಒತ್ತಾಯಿಸುತ್ತಾರೆ. ಆಗ ಆಗುವ ಪರಿಸರ-ಅರಣ್ಯ ನಾಶ ಇವರಿಗೆ ಕಾಣಿಸುವುದಿಲ್ಲ. ಈ ದ್ವಿಮುಖ ನಾಟಕದ ಪರಿಸರವಾದಿ ತಂಡದಲ್ಲಿ ಆರಂಭದಲ್ಲಿ ಕೇಂದ್ರ ಮಂತ್ರಿ ಅನಂತ್ಮಾಣಿಯೂ ಇದ್ದ. ಯಾವಾಗ ಅನಂತ್ ಹೆಗಡೆ ಆಶೀಸರ ಎಂಬ ಮತ್ತೊÃರ್ವ ಬ್ರಾಹ್ಮಣ ಪಟು ಪರಿಸರ ಹೋರಾಟವನ್ನೆÃ ತನ್ನ ಚೆಡ್ಡಿ ರಾಜಕಾರಣಕ್ಕೆ ಚಿಮ್ಮುಹಲಗೆ ಮಾಡಿಕೊಳ್ಳಲು ಹವಣಿಸಿದನೋ ಆಗ ಅನಂತ್ಮಾಣಿ ತಿರುಗಿಬಿದ್ದ. ಒಂದು ಹಂತದಲ್ಲಿ ಈ ಪರಿಸರವ್ಯಾಧಿ ಅಶೀಸರ ಆರೆಸ್ಸೆಸ್ ಸಂಪರ್ಕ ಸಾಧಿಸಿ, ಮಾಣಿಗೆ ಕೊಕ್ ಕೊಟ್ಟು  ಬಿಜೆಪಿ ಸಂಸದಗಿರಿ ಟಿಕೆಟ್ ತರಲು ಹವಣಿಸಿದ್ದೂ ಇದೆ. ಅದೇ ಕಾರಣಕ್ಕೆ ಅನಂತ್ಮಾಣಿ ಈಗ ಈ ಪರಿಸರ ಗ್ಯಾಂಗನ್ನು ಅಭಿವೃದ್ಧಿ ವಿರೋಧಿ ಅಡ್ನಾಡಿಗಳು ಎಂಬಂತೆ ಮೂದಲಿಸುತ್ತಿದ್ದಾನೆ.
ಢೋಂಗಿ ಪರಿಸರವಾದಿ ತಂಡದ ಕೆಟ್ಟ ಕಣ್ಣಿÃಗ ಕುಮಟಾ-ಶಿರಸಿ ರಸ್ತೆ ಅಗಲೀಕರಣ ಯೋಜನೆ ಮೇಲೆ ಬಿದ್ದಿದೆ. ರಾಜ್ಯ ಹೆದ್ದಾರಿಯಾಗಿದ್ದ ಸದ್ರಿ ರಸ್ತೆಯನ್ನು ಹಾವೇರಿಯಿಂದ ಕುಮಟಾವರೆಗೆ ರಾಷ್ಟಿçಯ ಹೆದ್ದಾರಿ 766ಇ ಎಂದು ಘೋಷಿಸಲಾಗಿದೆ. ಸಾಗರಮಾಲಾ ಯೋಜನೆಯಲ್ಲಿ ಮಂಜೂರಾಗಿರುವ ಈ 60 ಕಿ.ಮೀ ಉದ್ದದ ರಸ್ತೆ ಯೋಜನಾ ವೆಚ್ಚ ಬರೋಬ್ಬರಿ 360.60 ಕೋಟಿ ರೂಪಾಯಿಗಳು. ಈ ಕಾಮಗಾರಿ ಗುತ್ತಿಗೆ ಆರ್‌ಎನ್‌ಎಸ್ ಇನ್‌ಫ್ರಾಸ್ಟçಕ್ಚರ್ ಲಿಮಿಟೆಡ್ ಮತ್ತು ಗಾಯತ್ರಿ ಪ್ರಾಜೆಕ್ಟ್ ಲಿಮಿಟೆಡ್ ಕಂಪನಿ ಸಹಭಾಗಿತ್ವದಲ್ಲಿ ಪಡೆದುಕೊಂಡಿವೆ. ಯೋಜನೆಯ ವಿಸ್ತೃತ ವರದಿ(ಡಿಪಿಆರ್)ನಂತೆ ಈಗಿರುವ ರಸ್ತೆಯನ್ನು 11 ಮೀಟರ್‌ನಿಂದ 18 ಮೀಟರ್ ಅಗಲ ಮಾಡಲಾಗುತ್ತದೆ. ಈಗಿರುವ 11 ಸೇತುವೆಗಳನ್ನು ಪುನರ್ ನಿರ್ಮಿಸಲಾಗುತ್ತದೆ.
ಹಾಗೆ ನೊಡಿದರೆ ಈ ಅಗಲೀಕರಣ ಬಹುದಿನದ ಅಗತ್ಯವಾಗಿತ್ತು. ಆದರೆ ಇಲ್ಲಿಯ ಹೊಣೆಗೇಡಿ ಎಂಪಿ, ಎಮ್ಮೆಲ್ಲೆ, ಮಿನಿಸ್ಟರ್‌ಗಳು ಎಷ್ಟೆÃ ಸಾವು-ನೋವಾದರೂ, ಸರಕು ಸಾಗಾಣಿಕೆಗೆ ತೊಂದರೆಯಾದರೂ, ಅಭಿವೃದ್ಧಿ ವೇಗಕ್ಕೆ ಬ್ರೆÃಕ್ ಬಿದ್ದಿದ್ದರೂ ತಲೆಯೇ ಕೆಡಿಸಿಕೊಂಡಿರಲಿಲ್ಲ. ಆದರೆ ಸದ್ರಿ ಯೋಜನೆಯ ಪ್ರಸ್ತಾಪ ಹೊರೆ ಬೀಳುತ್ತಿದ್ದಂತೆಯೇ ಘಟ್ಟದ ಮೇಲಿನ ಪರಿಸರ ವ್ಯಾಧಿ ತಂಡ ಹುಸಿ ಹಸಿರು ಕಳಕಳಿ ಪ್ರದರ್ಶಿಸತೊಡಗಿದೆ. ಅನಂತ ಹೆಗಡೆ ಆಶೀಸರನ ಗ್ಯಾಂಗ್ ಪಶ್ಚಿಮ ಘಟ್ಟ ನಾಶವಾಗುತ್ತದೆ, ವನ್ಯ ಪ್ರಾಣಿಗಳಿಗೆ ಗಂಡಾಂತರ ಬರುತ್ತದೆ; ಗಿಡಮೂಲಿಕೆ ಸಂರಕ್ಷಿತ ದೇವಿಮನೆ ಘಟ್ಟ ಪ್ರದೇಶ ಧ್ವಂಸವಾಗಲಿದೆ ಎಂದೆಲ್ಲಾ ಬೊಬ್ಬೆ ಹೊಡೆಯುತ್ತಿದೆ. ಕಂಡ-ಕಂಡ ಅಧಿಕಾರಿಗಳಿಗೆಲ್ಲಾ ಮನವಿ ಕೊಟ್ಟು ಉದ್ದುದ್ದ ಬೋಗಸ್ ಭಾಷಣ ಬಿಗಿಯುತ್ತಿದ್ದಾರೆ.
ಆದರೆ ವಾಸ್ತವ ಇವರೇಳುವಷ್ಟು ಭೀಭತ್ಸವಾಗೇನೂ ಇಲ್ಲ. ದೇವಿಮನೆಯ ಔಷಧಿ ಮೂಲಿಕೆಗಳ ಸಂರಕ್ಷಿತ ಪ್ರದೇಶ ರಸ್ತೆಯಿಂದ ತುಂಬ ದೂರದಲ್ಲಿದೆ. ಇಲ್ಲಿಯ ಔಷಧಿ ಮೂಲಿಕೆಗಳ ವಾಸ್ತವ ಸ್ಥಿತಿ ಅರಣ್ಯ ಇಲಾಖೆಗೂ ಗೊತ್ತಿಲ್ಲ. ಪರಿಸರ ವ್ಯಾಧಿಗಳು ಮಾತ್ರ ಅಮೂಲ್ಯ ಗಿಡಮೂಲಿಕೆಯಿದೆ ಎಂದು ಬೊಂಬಡಾ ಬಜಾಯಿಸುತ್ತಿದ್ದಾರೆ. ಸ್ವಾತಂತ್ರö್ಯ ನಂತರ ಶಿರಸಿ-ಕುಮಟಾ ರಸ್ತೆ ನಿರ್ಮಾಣವಾಗಿದೆ. ಆಗಾಗ ರಸ್ತೆ ಅಗಲೀಕರಣವೂ ಆಗಿದೆ. ಇದರಿಂದ ಗುಡ್ಡಗಳ ಕುಸಿತವಾಗಲಿ, ಹತ್ತಿರದ ಗ್ರಾಮಗಳಿಗೆ ಅನಾಹುತವಾಗಲಿ ಆಗಿದ್ದಿಲ್ಲ; ರಸ್ತೆ ಅಗಲೀಕರಣದಿಂದ ವನ್ಯಜೀವಿಗಳ ಓಡಾಟಕ್ಕೆ ಕಷ್ಟವಾಗಲಿದೆ ಎಂಬುದೇ ಹಾಸ್ಯಾಸ್ಪದ. ಈಗಾಗಲೇ ಇಲ್ಲಿ ರಸ್ತೆಯಿದೆ. ಹಗಲೂ-ಇರುಳು ವಾಹನ ಓಡಾಟವಿದೆ. ಪ್ರಾಣಿಗಳಿಗೆ ತೊಂದರೆಯೇನಾಗಿಲ್ಲ. ದೇವಿಮನೆ ಘಟ್ಟ-ಕಣಿವೆಯಲ್ಲಿ ವಿದ್ಯುತ್ ಮಾರ್ಗದ ಕಾರಿಡಾರ್ ಕೂಡ ಇದೆ. ಇದರಿಂದ ಪರಿಸರಕ್ಕೆ ಹಾನಿಯೇನಾಗಿಲ್ಲ. ಅಷ್ಟಕ್ಕೂ ಕಡಿಯುವುದು ರಸ್ತೆ ಅಂಚಿನ ಸ್ವಲ್ಪ ಕಾಡಷ್ಟೆÃ! ಹೆದ್ದಾರಿ ನಿರ್ಮಾಣದ ನಂತರ ಅಕ್ಕ-ಪಕ್ಕದಲ್ಲಿ ಮರ ಬೆಳೆಸಲು ಅವಕಾಶ ಇದ್ದೆÃಯಿದೆ.
ಮೂರು ದಶಕದಿಂದ ಹಾವೇರಿ-ಕುಮಟಾ-ತಡಸ-ಕುಮಟಾ ರಸ್ತೆ ಮೇಲ್ದರ್ಜೆಗೇರಿಸುವ ಬೇಡಿಕೆ ವಾಣಿಜ್ಯೊÃದ್ಯಮಿಗಳು, ಜನಸಾಮಾನ್ಯರು ಮಂಡಿಸುತ್ತಾ ಬಂದಿದ್ದರು. ಈ ರಸ್ತೆ ಅಗಲೀಕರಣ ಜಿಲ್ಲೆಯ ಅಭಿವೃದ್ಧಿಗೆ ಹೆಬ್ಬಾಗಿಲು. ಜಿಲ್ಲೆಯ ಬಂದರುಗಳ ಅಭಿವೃದ್ಧಿ ಇದರಿಂದಾಗುತ್ತದೆ. ಹುಬ್ಬಳ್ಳಿ-ಹಾವೇರಿ-ದಾವಣಗೆರೆ ಮುಂತಾದೆಡೆಯಿಂದ ಕರಾವಳಿಗೆ ಉತ್ಪಾದಿತ ವಸ್ತುಗಳ ರಫ್ತಿಗೆ ಉತ್ತೆÃಜನ ಸಿಗುತ್ತದೆ. ಜಿಲ್ಲೆಯ ಪ್ರವಾಸೋದ್ಯಮ, ಸ್ಕೊಬಾ ಡ್ರೆöÊವಿಂಗ್‌ಗೆ ಈ ಹೆದ್ದಾರಿ ಪೂರಕÀವಾಗುತ್ತದೆ. ಕಡಿಮೆ ಅವಧಿಯಲ್ಲಿ ಸುರಕ್ಷಿತ ಪ್ರಯಾಣ ಮಾಡಬಹುದು. ಈಗಿನದು ಯಮಯಾತನೆಯ ಪ್ರವಾಸ!! ರಸ್ತೆ ಅಗಲಿಕರಣ ಉದ್ಯಮಿಗಳಗಷ್ಟೆÃ ಅಲ್ಲ. ಶಿಕ್ಷಣ, ಆರೋಗ್ಯ, ಮತ್ತಿತರ ಕಾರಣಕ್ಕೆ ಕರಾವಳಿಯತ್ತ ಹೋಗುವವರಿಗೆ ಮತ್ತು ಕರಾವಳಿಯಿಂದ ಬಯಲು ಸೀಮೆಗೆ ಹೋಗುವವರಿಗೂ ವರದಾನವೇ ಸರಿ.
ರಸ್ತೆಗಳನ್ನು ಮೇಲ್ದರ್ಜೆಗೆ ಏರಿಸಲು ತುಲನಾತ್ಮಕವಾಗಿ ಕಡಿಮೆ ಬಂಡವಾಳ ಸಾಕು. ಯಲ್ಲಾಪುರ-ಶಿರಸಿ-ಸಿದ್ಧಾಪುರ-ಮುಂಡಗೋಡ ತಾಲ್ಲೂಕುಗಳು ರೈಲು ಮಾರ್ಗ ಕಾಣುವುದು ಅನುಮಾನ ಎಂದು ಹೊಣೆಗೇಡಿ ಸಂಸದ ಕಮ್ ಕೇಂದ್ರ ಮಂತ್ರಿ ಅನಂತ್ಮಾಣಿಯೇ ಬಡಬಡಿಸುತ್ತಿದ್ದಾನೆ. ಹೀಗಿರುವಾಗ ರಾಷ್ಟಿçÃಯ ಹೆದ್ದಾರಿಯಾಗಿ ರಸ್ತೆ ಅಗಲೀಕರಣವೂ ಬೇಡವೆಂದರೆ ಹೇಗೆ? ಸ್ವಾರ್ಥಕ್ಕಾಗಿ ಪರಿಸರ ಸಂರಕ್ಷಣೆ ಪ್ರಹಸನ ಮಾಡುತ್ತಿರುವ ಹುಸಿ ಪರಿಸರವಾದಿಗಳಿಗೆ ಜನರೀಗ ಉಗಿಯುತ್ತಿದ್ದಾರೆ. ಉತ್ತರ ಕನ್ನಡಿಗರು ಈ ಛಲವನ್ನು ದಶಕದ ಹಿಂದೆಯೇ ತೋರಿಸಬೇಕಿತ್ತು. ಸೋಗಲಾಡಿ ಪರಿಸರ ಪರಾಕ್ರಮಿಗಳ ಬಂಡಲ್ ಭಾಷಣ, ಅಂಕಣ, ಮಾನವ ಸರಪಳಿಗಳಿಗೆ ಜಿಲ್ಲೆಯ ಮುಗ್ಧ ಜನ ಸಿಲುಕಿದ್ದರಿಂದಲೇ ಅಭಿವೃದ್ಧಿ ಕಾಣದಂತಾಯ್ತು. ಪರಿಸರವಾದಿಗಳ ಕಿರಿಕಿರಿಯೊಂದಿಲ್ಲದಿದ್ದರೆ ಎಂದೋ ಜಿಲ್ಲೆಗೆ ರೈಲು-ಸುಸಜ್ಜಿತ ರಸ್ತೆ, ಬಂದರು, ಬೃಹತ್ ಉದ್ಯಮ ಬರುತ್ತಿತ್ತು. ವಿದ್ಯೆ, ಉದ್ಯೊಗ, ವ್ಯವಹಾರಕ್ಕೆ ಗುಳೇ ಹೋಗುವುದು ತಪ್ಪುತ್ತಿತ್ತು. ಉತ್ತರ ಕನ್ನಡ ಪಕ್ಕದ ಬೆಳಗಾವಿ, ಉಡುಪಿ, ದಕ್ಷಿಣ ಕನ್ನಡದಂತೆ ಪ್ರಗತಿ ಕಾಣುತ್ತಿತ್ತು.
ಈಗ ಜನರಿಗೆ ಪರಿಸರ ವ್ಯಾಧಿಗಳ ಬಣ್ಣ ಗೊತ್ತಾಗಿದೆ. ತದಡಿ ಬಂದರು ಬೇಕೆಂದು ಪರಿಸರವಾದಿಗಳಿಗೆ ತಿರುಗಿ ಬಿದ್ದಿದ್ದ ಜನರೀಗ ಕುಮಟಾ-ಹಾವೇರಿ ರಸ್ತೆ ಅಗಲೀಕರಣದ ಪರವಿದ್ದಾರೆ. ಇನ್ನಾದರೂ ಪರಿಸರವಾದಿಗಳು ದ್ರೊÃಹದ ಆಟ ನಿಲ್ಲಿಸುವರಾ?
– ಶುದ್ಧೊಧನ
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...