Homeರಾಜಕೀಯಶಿವಮೊಗ್ಗದಲ್ಲಿ ಬಿಜೆಪಿಗೆ ಸಿಗುತ್ತಿದೆ ಬ್ರೀತಿಂಗ್ ಸ್ಪೇಸ್

ಶಿವಮೊಗ್ಗದಲ್ಲಿ ಬಿಜೆಪಿಗೆ ಸಿಗುತ್ತಿದೆ ಬ್ರೀತಿಂಗ್ ಸ್ಪೇಸ್

- Advertisement -
- Advertisement -
  • ಈಶ್ವರ್ |

ಶಿವಮೊಗ್ಗ ಜಿಲ್ಲೆಯಲ್ಲಿ ಚುನಾವಣೆ ಸಮೀಪಿಸುತ್ತಿದ್ದಂತೆ ಬಿಜೆಪಿಗೆ ಮತದಾರ ಕೊಂಚ ಉಸಿರಾಡುವಷ್ಟು ಅವಕಾಶ ನೀಡುವ ಸಾಧ್ಯತೆ ಕಾಣಿಸುತ್ತಿದೆ. ಯಡ್ಡಿ-ಈಶು ಗ್ಯಾಂಗಿನ ಪರಸ್ಪರ ಜಗಳದ ನಡುವೆ ಬಿಜೆಪಿಯನ್ನು ಬಚಾವು ಮಾಡಲು ಆರೆಸ್ಸೆಸ್ ಧಾವಿಸಿದೆ. ಬಡಾಯಿ ಭಾಷಣದ ನರೇಂದ್ರ ಮೋದಿ ಬಂದು ಹೋದಮೇಲೆ ಶಿವಮೊಗ್ಗ ಬಿಜೆಪಿಯಲ್ಲಿ ಸಂಚಲನ ಕಂಡುಬರುತ್ತಿದೆ.
ಮುಖ್ಯವಾಗಿ ಸಾಗರ, ಶಿವಮೊಗ್ಗ ಗ್ರಾಮಾಂತರ ಹಾಗು ಸೊರಬ ಕ್ಷೇತ್ರಗಳಲ್ಲಿ ಬಿಜೆಪಿ ಹೀನಾಯವಾಗಿ ಸೋಲಲಿದೆ ಎಂಬ ವಾತಾವರಣ ಬದಲಾಗಿದೆ.

ಸಾಗರದಲ್ಲಿ ಬೇಳೂರು ಗೋಪಾಲಕೃಷ್ಣ ಕಾಂಗ್ರೆಸ್ ಸೇರಿದ ಮೇಲೆ ಕಾಗೋಡು ತಿಮ್ಮಪ್ಪರ ಗೆಲುವು ನಿಚ್ಚಳವಾಯಿತು ಎಂಬ ವಾತಾವರಣವಿತ್ತು. ಆದರೆ ಚುನಾವಣೆ 4 ದಿನವಿರುವಾಗ ಗುಪ್ತಚರ ಇಲಾಖೆ ನೀಡುತ್ತಿರುವ ವರದಿ ಹೇಳುವಂತೆ ಹಾಲಪ್ಪಗಿಂತ ಕಾಗೋಡು ಕೇವಲ 5 ಸಾವಿರ ಮತಗಳಷ್ಟು ಮುನ್ನಡೆಯಲ್ಲಿದ್ದಾರೆ. ಇದು ಮತದಾನದ ಹೊತ್ತಿಗೆ ಬದಲಾಗಬಹುದು. 40 ಸಾವಿರ ಮತಗಳ ಅಂತರದಿಂದ ಗೆದ್ದಿದ್ದ ಕಾಗೋಡು ಬೆಂಬಲಕ್ಕೆ 23 ಸಾವಿರ ಮತ ಪಡೆದು ಸೋತಿದ್ದ ಬೇಳೂರು ಇರುವಾಗಲೂ ಸಾಗರದಲ್ಲಿ ಹರತಾಳ ಹಾಲಪ್ಪ ಎಲ್ಲರ ನಿರೀಕ್ಷೆ ಮೀರಿ ಮತ ಪಡೆಯುವತ್ತ ಮುಂದೆ ಸಾಗಿದ್ದಾರೆ. ಸ್ವರಾಜ್ ಇಂಡಿಯಾದ ಅಭ್ಯರ್ಥಿ ದೂಗೂರು ಪರಮೇಶ್ವರ್ ಕೂಡ ಕಾಂಗ್ರೆಸ್ ಮತಗಳಿಗೆ ಲಗ್ಗೆ ಹಾಕುತ್ತಿರೋದು ಕೈಗೆ ನುಂಗಲಾರದ ತುತ್ತು.

ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದ ಅಭ್ಯರ್ಥಿ ಅಶೋಕ ನಾಯ್ಕ ವಿರುದ್ಧ ಬಿಜೆಪಿಯಲ್ಲೇ ಭಾರೀ ವಿರೋಧವಿತ್ತು. ಲಿಂಗಾಯತರು ಸಿಟ್ಟು ಮಾಡಿಕೊಂಡಿದ್ದರು. ಯಡಿಯೂರಪ್ಪ ಸುತ್ತಾಟ ಆರಂಭಿಸಿದ ನಂತರ ಅಶೋಕನಾಯ್ಕನ ಕುದುರೆ ಕುಂಟುವುದನ್ನು ಬಿಟ್ಟು ಓಡ ತೊಡಗಿತು. ಗೆಲ್ಲಬೇಕಾದ ಜೆಡಿಎಸ್‍ನ ಶಾರದ ಪೂರ್ಯನಾಯ್ಕ ಏದುಸಿರು ಬಿಡತೊಡಗಿದ್ದಾರೆ. ಕಾಂಗ್ರೆಸ್‍ನ ಡಾ.ಶ್ರೀನಿವಾಸ್ ಡಮ್ಮಿಯಾಗುವ ಸಾಧ್ಯತೆಯೇ ಹೆಚ್ಚು.

ಸೊರಬದಲ್ಲೂ ಇದೇ ಕತೆ. ಜೆಡಿಎಸ್‍ನ ಮಧು ಬಂಗಾರಪ್ಪರೆದುರು ಅವರ ಸೋದರ ಬಿಜೆಪಿಯ ಕುಮಾರ ಬಂಗಾರಪ್ಪ ಡಮ್ಮಿಯಾಗಿ ಹೋಗುವ ವಾತಾವರಣವಿತ್ತು. ಆದರಿಲ್ಲಿ ಯಡ್ಡಿ ಮ್ಯಾಜಿಕ್ ನಡೆಯತೊಡಗಿದೆ. ಸೋದರರ ನಡುವೆ ನೇರ ಹಣಾಹಣಿ ಇದೆ. ಕುಮಾರ ಬಂಗಾರಪ್ಪ ನಿರೀಕ್ಷೆಗಿಂತ ಹೆಚ್ಚು ಮತ ಪಡೆವ ಸಾಧ್ಯತೆ ನಿಚ್ಚಳವಾಗತೊಡಗಿದೆ. ಅಂದರೆ ಗೆಲುವಿನ ಸಾಧಯತೆಯೇ ಇಲ್ಲವೆಂದು ಭಾವಿಸಲಾಗಿದ್ದ ಸೊರಬ, ಸಾಗರ ಮತ್ತು ಶಿವಮೊಗ್ಗ ಗ್ರಾಮಾಂತರ ಕ್ಷೇತ್ರಗಳಲ್ಲಿ ಯಡ್ಡಿಯ ಛಾಯೆ ಸ್ಪಷ್ಟವಾಗಿ ಗೋಚರವಾಗ ತೊಡಗಿದ್ದು ಬಿಜೆಪಿ ಗೆಲುವಿನ ಆಶಾವಾದ ಮೂಡತೊಡಗಿದೆ.
ಶಿಕಾರಿಪುರದಲ್ಲಿ ಯಡಿಯೂರಪ್ಪರ ಲೀಡ್ ಕಡಿಮೆಯಾಗಲಿದೆ. ಭದ್ರಾವತಿಯಲ್ಲಿ ಕಾಂಗ್ರೆಸ್‍ನ ಸಂಗಮೇಶ್ ಗೆಲ್ಲುವ ಸಾಧ್ಯತೆ ನಿಚ್ಚಳವಾಗಿದೆ. ತೀರ್ಥಹಳ್ಳಿಯಲ್ಲಿ ಬಿಜೆಪಿಯ ಆರಗ ಜ್ಞಾನೇಂದ್ರ ಈ ಬಾರಿಯೂ 3ನೇ ಸ್ಥಾನ ಪಡೆಯುವ ಸಾಧ್ಯತೆ ಇದ್ದು ಕಾಂಗ್ರೆಸ್‍ನ ಕಿಮ್ಮನೆ ರತ್ನಾಕರ್, ಜೆಡಿಎಸ್‍ನ ಆರ್.ಎಂ. ಮಂಜುನಾಥ್ ಗೌಡರ ನಡುವೆ ನೇರ ಹಣಾಹಣಿ ಇದೆ.

ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದಲ್ಲಿ ಈಶ್ವರಪ್ಪ ದುಡ್ಡಿನ ಹೊಳೆ ಹರಿಸುತ್ತಿದ್ದಾರಾದರೂ ಅವರ ಸೋಲು ಕಟ್ಟಿಟ್ಟ ಬುತ್ತಿ. ಚುನಾವಣಾ ತಂತ್ರ ಗೊತ್ತಿಲ್ಲದ ಜೆಡಿಎಸ್‍ನ ನಿರಂಜನ್ ಡಮ್ಮಿಯಾಗುತ್ತಾರೆ ಅಂತ ಭಾವಿಸಿದವರು ಅಚ್ಚರಿ ಪಡುವಷ್ಟು ಸ್ಪರ್ಧೆ ಗಟ್ಟಿಗೊಳ್ಳತೊಡಗಿದೆ. ಕಾಂಗ್ರೆಸ್‍ನ ಪ್ರಸನ್ನಕುಮಾರ್ ಗೆಲುವು ನಿಶ್ಚಿತವಾಗಿದೆ.

ಹೀಗೆ ಭದ್ರಾವತಿ, ತೀರ್ಥಹಳ್ಳಿ, ಶಿವಮೊಗ್ಗದಲ್ಲಿ ಕಾಂಗ್ರೆಸ್ ಗೆಲ್ಲುವ ಎಲ್ಲಾ ಸಾಧ್ಯತೆ ಇದ್ದು, ಶಿಕಾರಿಪುರದಲ್ಲಿ ಯಡಿಯೂರಪ್ಪ ಗೆಲ್ಲಲಿದ್ದಾರೆ. ಉಳಿದಂತೆ ಸೊರಬ, ಸಾಗರ, ಶಿವಮೊಗ್ಗ ಗ್ರಾಮಾಂತರದಲ್ಲಿ ಬಿಜೆಪಿ ಪ್ರಬಲ ಸ್ಪರ್ಧೆ ಒಡ್ಡಲಿದೆ. ಮಧು, ಕಾಗೋಡು ಹಾಗು ಶಾರದ ಪೂರ್ಯ ನಾಯ್ಕರ ಭವಿಷ್ಯ ಡೋಲಾಯಮಾನವಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...