Homeರಾಜಕೀಯಶಿವಮೊಗ್ಗದಲ್ಲಿ ಬಿಜೆಪಿಗೆ ಸಿಗುತ್ತಿದೆ ಬ್ರೀತಿಂಗ್ ಸ್ಪೇಸ್

ಶಿವಮೊಗ್ಗದಲ್ಲಿ ಬಿಜೆಪಿಗೆ ಸಿಗುತ್ತಿದೆ ಬ್ರೀತಿಂಗ್ ಸ್ಪೇಸ್

- Advertisement -
- Advertisement -
  • ಈಶ್ವರ್ |

ಶಿವಮೊಗ್ಗ ಜಿಲ್ಲೆಯಲ್ಲಿ ಚುನಾವಣೆ ಸಮೀಪಿಸುತ್ತಿದ್ದಂತೆ ಬಿಜೆಪಿಗೆ ಮತದಾರ ಕೊಂಚ ಉಸಿರಾಡುವಷ್ಟು ಅವಕಾಶ ನೀಡುವ ಸಾಧ್ಯತೆ ಕಾಣಿಸುತ್ತಿದೆ. ಯಡ್ಡಿ-ಈಶು ಗ್ಯಾಂಗಿನ ಪರಸ್ಪರ ಜಗಳದ ನಡುವೆ ಬಿಜೆಪಿಯನ್ನು ಬಚಾವು ಮಾಡಲು ಆರೆಸ್ಸೆಸ್ ಧಾವಿಸಿದೆ. ಬಡಾಯಿ ಭಾಷಣದ ನರೇಂದ್ರ ಮೋದಿ ಬಂದು ಹೋದಮೇಲೆ ಶಿವಮೊಗ್ಗ ಬಿಜೆಪಿಯಲ್ಲಿ ಸಂಚಲನ ಕಂಡುಬರುತ್ತಿದೆ.
ಮುಖ್ಯವಾಗಿ ಸಾಗರ, ಶಿವಮೊಗ್ಗ ಗ್ರಾಮಾಂತರ ಹಾಗು ಸೊರಬ ಕ್ಷೇತ್ರಗಳಲ್ಲಿ ಬಿಜೆಪಿ ಹೀನಾಯವಾಗಿ ಸೋಲಲಿದೆ ಎಂಬ ವಾತಾವರಣ ಬದಲಾಗಿದೆ.

ಸಾಗರದಲ್ಲಿ ಬೇಳೂರು ಗೋಪಾಲಕೃಷ್ಣ ಕಾಂಗ್ರೆಸ್ ಸೇರಿದ ಮೇಲೆ ಕಾಗೋಡು ತಿಮ್ಮಪ್ಪರ ಗೆಲುವು ನಿಚ್ಚಳವಾಯಿತು ಎಂಬ ವಾತಾವರಣವಿತ್ತು. ಆದರೆ ಚುನಾವಣೆ 4 ದಿನವಿರುವಾಗ ಗುಪ್ತಚರ ಇಲಾಖೆ ನೀಡುತ್ತಿರುವ ವರದಿ ಹೇಳುವಂತೆ ಹಾಲಪ್ಪಗಿಂತ ಕಾಗೋಡು ಕೇವಲ 5 ಸಾವಿರ ಮತಗಳಷ್ಟು ಮುನ್ನಡೆಯಲ್ಲಿದ್ದಾರೆ. ಇದು ಮತದಾನದ ಹೊತ್ತಿಗೆ ಬದಲಾಗಬಹುದು. 40 ಸಾವಿರ ಮತಗಳ ಅಂತರದಿಂದ ಗೆದ್ದಿದ್ದ ಕಾಗೋಡು ಬೆಂಬಲಕ್ಕೆ 23 ಸಾವಿರ ಮತ ಪಡೆದು ಸೋತಿದ್ದ ಬೇಳೂರು ಇರುವಾಗಲೂ ಸಾಗರದಲ್ಲಿ ಹರತಾಳ ಹಾಲಪ್ಪ ಎಲ್ಲರ ನಿರೀಕ್ಷೆ ಮೀರಿ ಮತ ಪಡೆಯುವತ್ತ ಮುಂದೆ ಸಾಗಿದ್ದಾರೆ. ಸ್ವರಾಜ್ ಇಂಡಿಯಾದ ಅಭ್ಯರ್ಥಿ ದೂಗೂರು ಪರಮೇಶ್ವರ್ ಕೂಡ ಕಾಂಗ್ರೆಸ್ ಮತಗಳಿಗೆ ಲಗ್ಗೆ ಹಾಕುತ್ತಿರೋದು ಕೈಗೆ ನುಂಗಲಾರದ ತುತ್ತು.

ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದ ಅಭ್ಯರ್ಥಿ ಅಶೋಕ ನಾಯ್ಕ ವಿರುದ್ಧ ಬಿಜೆಪಿಯಲ್ಲೇ ಭಾರೀ ವಿರೋಧವಿತ್ತು. ಲಿಂಗಾಯತರು ಸಿಟ್ಟು ಮಾಡಿಕೊಂಡಿದ್ದರು. ಯಡಿಯೂರಪ್ಪ ಸುತ್ತಾಟ ಆರಂಭಿಸಿದ ನಂತರ ಅಶೋಕನಾಯ್ಕನ ಕುದುರೆ ಕುಂಟುವುದನ್ನು ಬಿಟ್ಟು ಓಡ ತೊಡಗಿತು. ಗೆಲ್ಲಬೇಕಾದ ಜೆಡಿಎಸ್‍ನ ಶಾರದ ಪೂರ್ಯನಾಯ್ಕ ಏದುಸಿರು ಬಿಡತೊಡಗಿದ್ದಾರೆ. ಕಾಂಗ್ರೆಸ್‍ನ ಡಾ.ಶ್ರೀನಿವಾಸ್ ಡಮ್ಮಿಯಾಗುವ ಸಾಧ್ಯತೆಯೇ ಹೆಚ್ಚು.

ಸೊರಬದಲ್ಲೂ ಇದೇ ಕತೆ. ಜೆಡಿಎಸ್‍ನ ಮಧು ಬಂಗಾರಪ್ಪರೆದುರು ಅವರ ಸೋದರ ಬಿಜೆಪಿಯ ಕುಮಾರ ಬಂಗಾರಪ್ಪ ಡಮ್ಮಿಯಾಗಿ ಹೋಗುವ ವಾತಾವರಣವಿತ್ತು. ಆದರಿಲ್ಲಿ ಯಡ್ಡಿ ಮ್ಯಾಜಿಕ್ ನಡೆಯತೊಡಗಿದೆ. ಸೋದರರ ನಡುವೆ ನೇರ ಹಣಾಹಣಿ ಇದೆ. ಕುಮಾರ ಬಂಗಾರಪ್ಪ ನಿರೀಕ್ಷೆಗಿಂತ ಹೆಚ್ಚು ಮತ ಪಡೆವ ಸಾಧ್ಯತೆ ನಿಚ್ಚಳವಾಗತೊಡಗಿದೆ. ಅಂದರೆ ಗೆಲುವಿನ ಸಾಧಯತೆಯೇ ಇಲ್ಲವೆಂದು ಭಾವಿಸಲಾಗಿದ್ದ ಸೊರಬ, ಸಾಗರ ಮತ್ತು ಶಿವಮೊಗ್ಗ ಗ್ರಾಮಾಂತರ ಕ್ಷೇತ್ರಗಳಲ್ಲಿ ಯಡ್ಡಿಯ ಛಾಯೆ ಸ್ಪಷ್ಟವಾಗಿ ಗೋಚರವಾಗ ತೊಡಗಿದ್ದು ಬಿಜೆಪಿ ಗೆಲುವಿನ ಆಶಾವಾದ ಮೂಡತೊಡಗಿದೆ.
ಶಿಕಾರಿಪುರದಲ್ಲಿ ಯಡಿಯೂರಪ್ಪರ ಲೀಡ್ ಕಡಿಮೆಯಾಗಲಿದೆ. ಭದ್ರಾವತಿಯಲ್ಲಿ ಕಾಂಗ್ರೆಸ್‍ನ ಸಂಗಮೇಶ್ ಗೆಲ್ಲುವ ಸಾಧ್ಯತೆ ನಿಚ್ಚಳವಾಗಿದೆ. ತೀರ್ಥಹಳ್ಳಿಯಲ್ಲಿ ಬಿಜೆಪಿಯ ಆರಗ ಜ್ಞಾನೇಂದ್ರ ಈ ಬಾರಿಯೂ 3ನೇ ಸ್ಥಾನ ಪಡೆಯುವ ಸಾಧ್ಯತೆ ಇದ್ದು ಕಾಂಗ್ರೆಸ್‍ನ ಕಿಮ್ಮನೆ ರತ್ನಾಕರ್, ಜೆಡಿಎಸ್‍ನ ಆರ್.ಎಂ. ಮಂಜುನಾಥ್ ಗೌಡರ ನಡುವೆ ನೇರ ಹಣಾಹಣಿ ಇದೆ.

ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದಲ್ಲಿ ಈಶ್ವರಪ್ಪ ದುಡ್ಡಿನ ಹೊಳೆ ಹರಿಸುತ್ತಿದ್ದಾರಾದರೂ ಅವರ ಸೋಲು ಕಟ್ಟಿಟ್ಟ ಬುತ್ತಿ. ಚುನಾವಣಾ ತಂತ್ರ ಗೊತ್ತಿಲ್ಲದ ಜೆಡಿಎಸ್‍ನ ನಿರಂಜನ್ ಡಮ್ಮಿಯಾಗುತ್ತಾರೆ ಅಂತ ಭಾವಿಸಿದವರು ಅಚ್ಚರಿ ಪಡುವಷ್ಟು ಸ್ಪರ್ಧೆ ಗಟ್ಟಿಗೊಳ್ಳತೊಡಗಿದೆ. ಕಾಂಗ್ರೆಸ್‍ನ ಪ್ರಸನ್ನಕುಮಾರ್ ಗೆಲುವು ನಿಶ್ಚಿತವಾಗಿದೆ.

ಹೀಗೆ ಭದ್ರಾವತಿ, ತೀರ್ಥಹಳ್ಳಿ, ಶಿವಮೊಗ್ಗದಲ್ಲಿ ಕಾಂಗ್ರೆಸ್ ಗೆಲ್ಲುವ ಎಲ್ಲಾ ಸಾಧ್ಯತೆ ಇದ್ದು, ಶಿಕಾರಿಪುರದಲ್ಲಿ ಯಡಿಯೂರಪ್ಪ ಗೆಲ್ಲಲಿದ್ದಾರೆ. ಉಳಿದಂತೆ ಸೊರಬ, ಸಾಗರ, ಶಿವಮೊಗ್ಗ ಗ್ರಾಮಾಂತರದಲ್ಲಿ ಬಿಜೆಪಿ ಪ್ರಬಲ ಸ್ಪರ್ಧೆ ಒಡ್ಡಲಿದೆ. ಮಧು, ಕಾಗೋಡು ಹಾಗು ಶಾರದ ಪೂರ್ಯ ನಾಯ್ಕರ ಭವಿಷ್ಯ ಡೋಲಾಯಮಾನವಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...