Homeರಾಜಕೀಯಶಿವಮೊಗ್ಗದಲ್ಲಿ ಬಿಜೆಪಿಗೆ ಸಿಗುತ್ತಿದೆ ಬ್ರೀತಿಂಗ್ ಸ್ಪೇಸ್

ಶಿವಮೊಗ್ಗದಲ್ಲಿ ಬಿಜೆಪಿಗೆ ಸಿಗುತ್ತಿದೆ ಬ್ರೀತಿಂಗ್ ಸ್ಪೇಸ್

- Advertisement -
- Advertisement -
  • ಈಶ್ವರ್ |

ಶಿವಮೊಗ್ಗ ಜಿಲ್ಲೆಯಲ್ಲಿ ಚುನಾವಣೆ ಸಮೀಪಿಸುತ್ತಿದ್ದಂತೆ ಬಿಜೆಪಿಗೆ ಮತದಾರ ಕೊಂಚ ಉಸಿರಾಡುವಷ್ಟು ಅವಕಾಶ ನೀಡುವ ಸಾಧ್ಯತೆ ಕಾಣಿಸುತ್ತಿದೆ. ಯಡ್ಡಿ-ಈಶು ಗ್ಯಾಂಗಿನ ಪರಸ್ಪರ ಜಗಳದ ನಡುವೆ ಬಿಜೆಪಿಯನ್ನು ಬಚಾವು ಮಾಡಲು ಆರೆಸ್ಸೆಸ್ ಧಾವಿಸಿದೆ. ಬಡಾಯಿ ಭಾಷಣದ ನರೇಂದ್ರ ಮೋದಿ ಬಂದು ಹೋದಮೇಲೆ ಶಿವಮೊಗ್ಗ ಬಿಜೆಪಿಯಲ್ಲಿ ಸಂಚಲನ ಕಂಡುಬರುತ್ತಿದೆ.
ಮುಖ್ಯವಾಗಿ ಸಾಗರ, ಶಿವಮೊಗ್ಗ ಗ್ರಾಮಾಂತರ ಹಾಗು ಸೊರಬ ಕ್ಷೇತ್ರಗಳಲ್ಲಿ ಬಿಜೆಪಿ ಹೀನಾಯವಾಗಿ ಸೋಲಲಿದೆ ಎಂಬ ವಾತಾವರಣ ಬದಲಾಗಿದೆ.

ಸಾಗರದಲ್ಲಿ ಬೇಳೂರು ಗೋಪಾಲಕೃಷ್ಣ ಕಾಂಗ್ರೆಸ್ ಸೇರಿದ ಮೇಲೆ ಕಾಗೋಡು ತಿಮ್ಮಪ್ಪರ ಗೆಲುವು ನಿಚ್ಚಳವಾಯಿತು ಎಂಬ ವಾತಾವರಣವಿತ್ತು. ಆದರೆ ಚುನಾವಣೆ 4 ದಿನವಿರುವಾಗ ಗುಪ್ತಚರ ಇಲಾಖೆ ನೀಡುತ್ತಿರುವ ವರದಿ ಹೇಳುವಂತೆ ಹಾಲಪ್ಪಗಿಂತ ಕಾಗೋಡು ಕೇವಲ 5 ಸಾವಿರ ಮತಗಳಷ್ಟು ಮುನ್ನಡೆಯಲ್ಲಿದ್ದಾರೆ. ಇದು ಮತದಾನದ ಹೊತ್ತಿಗೆ ಬದಲಾಗಬಹುದು. 40 ಸಾವಿರ ಮತಗಳ ಅಂತರದಿಂದ ಗೆದ್ದಿದ್ದ ಕಾಗೋಡು ಬೆಂಬಲಕ್ಕೆ 23 ಸಾವಿರ ಮತ ಪಡೆದು ಸೋತಿದ್ದ ಬೇಳೂರು ಇರುವಾಗಲೂ ಸಾಗರದಲ್ಲಿ ಹರತಾಳ ಹಾಲಪ್ಪ ಎಲ್ಲರ ನಿರೀಕ್ಷೆ ಮೀರಿ ಮತ ಪಡೆಯುವತ್ತ ಮುಂದೆ ಸಾಗಿದ್ದಾರೆ. ಸ್ವರಾಜ್ ಇಂಡಿಯಾದ ಅಭ್ಯರ್ಥಿ ದೂಗೂರು ಪರಮೇಶ್ವರ್ ಕೂಡ ಕಾಂಗ್ರೆಸ್ ಮತಗಳಿಗೆ ಲಗ್ಗೆ ಹಾಕುತ್ತಿರೋದು ಕೈಗೆ ನುಂಗಲಾರದ ತುತ್ತು.

ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದ ಅಭ್ಯರ್ಥಿ ಅಶೋಕ ನಾಯ್ಕ ವಿರುದ್ಧ ಬಿಜೆಪಿಯಲ್ಲೇ ಭಾರೀ ವಿರೋಧವಿತ್ತು. ಲಿಂಗಾಯತರು ಸಿಟ್ಟು ಮಾಡಿಕೊಂಡಿದ್ದರು. ಯಡಿಯೂರಪ್ಪ ಸುತ್ತಾಟ ಆರಂಭಿಸಿದ ನಂತರ ಅಶೋಕನಾಯ್ಕನ ಕುದುರೆ ಕುಂಟುವುದನ್ನು ಬಿಟ್ಟು ಓಡ ತೊಡಗಿತು. ಗೆಲ್ಲಬೇಕಾದ ಜೆಡಿಎಸ್‍ನ ಶಾರದ ಪೂರ್ಯನಾಯ್ಕ ಏದುಸಿರು ಬಿಡತೊಡಗಿದ್ದಾರೆ. ಕಾಂಗ್ರೆಸ್‍ನ ಡಾ.ಶ್ರೀನಿವಾಸ್ ಡಮ್ಮಿಯಾಗುವ ಸಾಧ್ಯತೆಯೇ ಹೆಚ್ಚು.

ಸೊರಬದಲ್ಲೂ ಇದೇ ಕತೆ. ಜೆಡಿಎಸ್‍ನ ಮಧು ಬಂಗಾರಪ್ಪರೆದುರು ಅವರ ಸೋದರ ಬಿಜೆಪಿಯ ಕುಮಾರ ಬಂಗಾರಪ್ಪ ಡಮ್ಮಿಯಾಗಿ ಹೋಗುವ ವಾತಾವರಣವಿತ್ತು. ಆದರಿಲ್ಲಿ ಯಡ್ಡಿ ಮ್ಯಾಜಿಕ್ ನಡೆಯತೊಡಗಿದೆ. ಸೋದರರ ನಡುವೆ ನೇರ ಹಣಾಹಣಿ ಇದೆ. ಕುಮಾರ ಬಂಗಾರಪ್ಪ ನಿರೀಕ್ಷೆಗಿಂತ ಹೆಚ್ಚು ಮತ ಪಡೆವ ಸಾಧ್ಯತೆ ನಿಚ್ಚಳವಾಗತೊಡಗಿದೆ. ಅಂದರೆ ಗೆಲುವಿನ ಸಾಧಯತೆಯೇ ಇಲ್ಲವೆಂದು ಭಾವಿಸಲಾಗಿದ್ದ ಸೊರಬ, ಸಾಗರ ಮತ್ತು ಶಿವಮೊಗ್ಗ ಗ್ರಾಮಾಂತರ ಕ್ಷೇತ್ರಗಳಲ್ಲಿ ಯಡ್ಡಿಯ ಛಾಯೆ ಸ್ಪಷ್ಟವಾಗಿ ಗೋಚರವಾಗ ತೊಡಗಿದ್ದು ಬಿಜೆಪಿ ಗೆಲುವಿನ ಆಶಾವಾದ ಮೂಡತೊಡಗಿದೆ.
ಶಿಕಾರಿಪುರದಲ್ಲಿ ಯಡಿಯೂರಪ್ಪರ ಲೀಡ್ ಕಡಿಮೆಯಾಗಲಿದೆ. ಭದ್ರಾವತಿಯಲ್ಲಿ ಕಾಂಗ್ರೆಸ್‍ನ ಸಂಗಮೇಶ್ ಗೆಲ್ಲುವ ಸಾಧ್ಯತೆ ನಿಚ್ಚಳವಾಗಿದೆ. ತೀರ್ಥಹಳ್ಳಿಯಲ್ಲಿ ಬಿಜೆಪಿಯ ಆರಗ ಜ್ಞಾನೇಂದ್ರ ಈ ಬಾರಿಯೂ 3ನೇ ಸ್ಥಾನ ಪಡೆಯುವ ಸಾಧ್ಯತೆ ಇದ್ದು ಕಾಂಗ್ರೆಸ್‍ನ ಕಿಮ್ಮನೆ ರತ್ನಾಕರ್, ಜೆಡಿಎಸ್‍ನ ಆರ್.ಎಂ. ಮಂಜುನಾಥ್ ಗೌಡರ ನಡುವೆ ನೇರ ಹಣಾಹಣಿ ಇದೆ.

ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದಲ್ಲಿ ಈಶ್ವರಪ್ಪ ದುಡ್ಡಿನ ಹೊಳೆ ಹರಿಸುತ್ತಿದ್ದಾರಾದರೂ ಅವರ ಸೋಲು ಕಟ್ಟಿಟ್ಟ ಬುತ್ತಿ. ಚುನಾವಣಾ ತಂತ್ರ ಗೊತ್ತಿಲ್ಲದ ಜೆಡಿಎಸ್‍ನ ನಿರಂಜನ್ ಡಮ್ಮಿಯಾಗುತ್ತಾರೆ ಅಂತ ಭಾವಿಸಿದವರು ಅಚ್ಚರಿ ಪಡುವಷ್ಟು ಸ್ಪರ್ಧೆ ಗಟ್ಟಿಗೊಳ್ಳತೊಡಗಿದೆ. ಕಾಂಗ್ರೆಸ್‍ನ ಪ್ರಸನ್ನಕುಮಾರ್ ಗೆಲುವು ನಿಶ್ಚಿತವಾಗಿದೆ.

ಹೀಗೆ ಭದ್ರಾವತಿ, ತೀರ್ಥಹಳ್ಳಿ, ಶಿವಮೊಗ್ಗದಲ್ಲಿ ಕಾಂಗ್ರೆಸ್ ಗೆಲ್ಲುವ ಎಲ್ಲಾ ಸಾಧ್ಯತೆ ಇದ್ದು, ಶಿಕಾರಿಪುರದಲ್ಲಿ ಯಡಿಯೂರಪ್ಪ ಗೆಲ್ಲಲಿದ್ದಾರೆ. ಉಳಿದಂತೆ ಸೊರಬ, ಸಾಗರ, ಶಿವಮೊಗ್ಗ ಗ್ರಾಮಾಂತರದಲ್ಲಿ ಬಿಜೆಪಿ ಪ್ರಬಲ ಸ್ಪರ್ಧೆ ಒಡ್ಡಲಿದೆ. ಮಧು, ಕಾಗೋಡು ಹಾಗು ಶಾರದ ಪೂರ್ಯ ನಾಯ್ಕರ ಭವಿಷ್ಯ ಡೋಲಾಯಮಾನವಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...