Homeರಾಜಕೀಯಶಿವಮೊಗ್ಗದಲ್ಲಿ ಬಿಜೆಪಿಗೆ ಸಿಗುತ್ತಿದೆ ಬ್ರೀತಿಂಗ್ ಸ್ಪೇಸ್

ಶಿವಮೊಗ್ಗದಲ್ಲಿ ಬಿಜೆಪಿಗೆ ಸಿಗುತ್ತಿದೆ ಬ್ರೀತಿಂಗ್ ಸ್ಪೇಸ್

- Advertisement -
- Advertisement -
  • ಈಶ್ವರ್ |

ಶಿವಮೊಗ್ಗ ಜಿಲ್ಲೆಯಲ್ಲಿ ಚುನಾವಣೆ ಸಮೀಪಿಸುತ್ತಿದ್ದಂತೆ ಬಿಜೆಪಿಗೆ ಮತದಾರ ಕೊಂಚ ಉಸಿರಾಡುವಷ್ಟು ಅವಕಾಶ ನೀಡುವ ಸಾಧ್ಯತೆ ಕಾಣಿಸುತ್ತಿದೆ. ಯಡ್ಡಿ-ಈಶು ಗ್ಯಾಂಗಿನ ಪರಸ್ಪರ ಜಗಳದ ನಡುವೆ ಬಿಜೆಪಿಯನ್ನು ಬಚಾವು ಮಾಡಲು ಆರೆಸ್ಸೆಸ್ ಧಾವಿಸಿದೆ. ಬಡಾಯಿ ಭಾಷಣದ ನರೇಂದ್ರ ಮೋದಿ ಬಂದು ಹೋದಮೇಲೆ ಶಿವಮೊಗ್ಗ ಬಿಜೆಪಿಯಲ್ಲಿ ಸಂಚಲನ ಕಂಡುಬರುತ್ತಿದೆ.
ಮುಖ್ಯವಾಗಿ ಸಾಗರ, ಶಿವಮೊಗ್ಗ ಗ್ರಾಮಾಂತರ ಹಾಗು ಸೊರಬ ಕ್ಷೇತ್ರಗಳಲ್ಲಿ ಬಿಜೆಪಿ ಹೀನಾಯವಾಗಿ ಸೋಲಲಿದೆ ಎಂಬ ವಾತಾವರಣ ಬದಲಾಗಿದೆ.

ಸಾಗರದಲ್ಲಿ ಬೇಳೂರು ಗೋಪಾಲಕೃಷ್ಣ ಕಾಂಗ್ರೆಸ್ ಸೇರಿದ ಮೇಲೆ ಕಾಗೋಡು ತಿಮ್ಮಪ್ಪರ ಗೆಲುವು ನಿಚ್ಚಳವಾಯಿತು ಎಂಬ ವಾತಾವರಣವಿತ್ತು. ಆದರೆ ಚುನಾವಣೆ 4 ದಿನವಿರುವಾಗ ಗುಪ್ತಚರ ಇಲಾಖೆ ನೀಡುತ್ತಿರುವ ವರದಿ ಹೇಳುವಂತೆ ಹಾಲಪ್ಪಗಿಂತ ಕಾಗೋಡು ಕೇವಲ 5 ಸಾವಿರ ಮತಗಳಷ್ಟು ಮುನ್ನಡೆಯಲ್ಲಿದ್ದಾರೆ. ಇದು ಮತದಾನದ ಹೊತ್ತಿಗೆ ಬದಲಾಗಬಹುದು. 40 ಸಾವಿರ ಮತಗಳ ಅಂತರದಿಂದ ಗೆದ್ದಿದ್ದ ಕಾಗೋಡು ಬೆಂಬಲಕ್ಕೆ 23 ಸಾವಿರ ಮತ ಪಡೆದು ಸೋತಿದ್ದ ಬೇಳೂರು ಇರುವಾಗಲೂ ಸಾಗರದಲ್ಲಿ ಹರತಾಳ ಹಾಲಪ್ಪ ಎಲ್ಲರ ನಿರೀಕ್ಷೆ ಮೀರಿ ಮತ ಪಡೆಯುವತ್ತ ಮುಂದೆ ಸಾಗಿದ್ದಾರೆ. ಸ್ವರಾಜ್ ಇಂಡಿಯಾದ ಅಭ್ಯರ್ಥಿ ದೂಗೂರು ಪರಮೇಶ್ವರ್ ಕೂಡ ಕಾಂಗ್ರೆಸ್ ಮತಗಳಿಗೆ ಲಗ್ಗೆ ಹಾಕುತ್ತಿರೋದು ಕೈಗೆ ನುಂಗಲಾರದ ತುತ್ತು.

ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದ ಅಭ್ಯರ್ಥಿ ಅಶೋಕ ನಾಯ್ಕ ವಿರುದ್ಧ ಬಿಜೆಪಿಯಲ್ಲೇ ಭಾರೀ ವಿರೋಧವಿತ್ತು. ಲಿಂಗಾಯತರು ಸಿಟ್ಟು ಮಾಡಿಕೊಂಡಿದ್ದರು. ಯಡಿಯೂರಪ್ಪ ಸುತ್ತಾಟ ಆರಂಭಿಸಿದ ನಂತರ ಅಶೋಕನಾಯ್ಕನ ಕುದುರೆ ಕುಂಟುವುದನ್ನು ಬಿಟ್ಟು ಓಡ ತೊಡಗಿತು. ಗೆಲ್ಲಬೇಕಾದ ಜೆಡಿಎಸ್‍ನ ಶಾರದ ಪೂರ್ಯನಾಯ್ಕ ಏದುಸಿರು ಬಿಡತೊಡಗಿದ್ದಾರೆ. ಕಾಂಗ್ರೆಸ್‍ನ ಡಾ.ಶ್ರೀನಿವಾಸ್ ಡಮ್ಮಿಯಾಗುವ ಸಾಧ್ಯತೆಯೇ ಹೆಚ್ಚು.

ಸೊರಬದಲ್ಲೂ ಇದೇ ಕತೆ. ಜೆಡಿಎಸ್‍ನ ಮಧು ಬಂಗಾರಪ್ಪರೆದುರು ಅವರ ಸೋದರ ಬಿಜೆಪಿಯ ಕುಮಾರ ಬಂಗಾರಪ್ಪ ಡಮ್ಮಿಯಾಗಿ ಹೋಗುವ ವಾತಾವರಣವಿತ್ತು. ಆದರಿಲ್ಲಿ ಯಡ್ಡಿ ಮ್ಯಾಜಿಕ್ ನಡೆಯತೊಡಗಿದೆ. ಸೋದರರ ನಡುವೆ ನೇರ ಹಣಾಹಣಿ ಇದೆ. ಕುಮಾರ ಬಂಗಾರಪ್ಪ ನಿರೀಕ್ಷೆಗಿಂತ ಹೆಚ್ಚು ಮತ ಪಡೆವ ಸಾಧ್ಯತೆ ನಿಚ್ಚಳವಾಗತೊಡಗಿದೆ. ಅಂದರೆ ಗೆಲುವಿನ ಸಾಧಯತೆಯೇ ಇಲ್ಲವೆಂದು ಭಾವಿಸಲಾಗಿದ್ದ ಸೊರಬ, ಸಾಗರ ಮತ್ತು ಶಿವಮೊಗ್ಗ ಗ್ರಾಮಾಂತರ ಕ್ಷೇತ್ರಗಳಲ್ಲಿ ಯಡ್ಡಿಯ ಛಾಯೆ ಸ್ಪಷ್ಟವಾಗಿ ಗೋಚರವಾಗ ತೊಡಗಿದ್ದು ಬಿಜೆಪಿ ಗೆಲುವಿನ ಆಶಾವಾದ ಮೂಡತೊಡಗಿದೆ.
ಶಿಕಾರಿಪುರದಲ್ಲಿ ಯಡಿಯೂರಪ್ಪರ ಲೀಡ್ ಕಡಿಮೆಯಾಗಲಿದೆ. ಭದ್ರಾವತಿಯಲ್ಲಿ ಕಾಂಗ್ರೆಸ್‍ನ ಸಂಗಮೇಶ್ ಗೆಲ್ಲುವ ಸಾಧ್ಯತೆ ನಿಚ್ಚಳವಾಗಿದೆ. ತೀರ್ಥಹಳ್ಳಿಯಲ್ಲಿ ಬಿಜೆಪಿಯ ಆರಗ ಜ್ಞಾನೇಂದ್ರ ಈ ಬಾರಿಯೂ 3ನೇ ಸ್ಥಾನ ಪಡೆಯುವ ಸಾಧ್ಯತೆ ಇದ್ದು ಕಾಂಗ್ರೆಸ್‍ನ ಕಿಮ್ಮನೆ ರತ್ನಾಕರ್, ಜೆಡಿಎಸ್‍ನ ಆರ್.ಎಂ. ಮಂಜುನಾಥ್ ಗೌಡರ ನಡುವೆ ನೇರ ಹಣಾಹಣಿ ಇದೆ.

ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದಲ್ಲಿ ಈಶ್ವರಪ್ಪ ದುಡ್ಡಿನ ಹೊಳೆ ಹರಿಸುತ್ತಿದ್ದಾರಾದರೂ ಅವರ ಸೋಲು ಕಟ್ಟಿಟ್ಟ ಬುತ್ತಿ. ಚುನಾವಣಾ ತಂತ್ರ ಗೊತ್ತಿಲ್ಲದ ಜೆಡಿಎಸ್‍ನ ನಿರಂಜನ್ ಡಮ್ಮಿಯಾಗುತ್ತಾರೆ ಅಂತ ಭಾವಿಸಿದವರು ಅಚ್ಚರಿ ಪಡುವಷ್ಟು ಸ್ಪರ್ಧೆ ಗಟ್ಟಿಗೊಳ್ಳತೊಡಗಿದೆ. ಕಾಂಗ್ರೆಸ್‍ನ ಪ್ರಸನ್ನಕುಮಾರ್ ಗೆಲುವು ನಿಶ್ಚಿತವಾಗಿದೆ.

ಹೀಗೆ ಭದ್ರಾವತಿ, ತೀರ್ಥಹಳ್ಳಿ, ಶಿವಮೊಗ್ಗದಲ್ಲಿ ಕಾಂಗ್ರೆಸ್ ಗೆಲ್ಲುವ ಎಲ್ಲಾ ಸಾಧ್ಯತೆ ಇದ್ದು, ಶಿಕಾರಿಪುರದಲ್ಲಿ ಯಡಿಯೂರಪ್ಪ ಗೆಲ್ಲಲಿದ್ದಾರೆ. ಉಳಿದಂತೆ ಸೊರಬ, ಸಾಗರ, ಶಿವಮೊಗ್ಗ ಗ್ರಾಮಾಂತರದಲ್ಲಿ ಬಿಜೆಪಿ ಪ್ರಬಲ ಸ್ಪರ್ಧೆ ಒಡ್ಡಲಿದೆ. ಮಧು, ಕಾಗೋಡು ಹಾಗು ಶಾರದ ಪೂರ್ಯ ನಾಯ್ಕರ ಭವಿಷ್ಯ ಡೋಲಾಯಮಾನವಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳದ ಬಿಸಿಯೂಟ ಇಸ್ಕಾನ್‌ಗೆ ಹಸ್ತಾಂತರವಿಲ್ಲ: ಸರ್ಕಾರದ ಸ್ಪಷ್ಟನೆ, ಕಲ್ಕತ್ತಾ ಹೈಕೋರ್ಟ್‌ನಿಂದ ಅಫಿಡವಿಟ್‌ಗೆ ನಿರ್ದೇಶನ 

ಕೋಲ್ಕತ್ತಾ: ರಾಜ್ಯದ ಶಾಲೆಗಳಲ್ಲಿ ಜಾರಿಯಲ್ಲಿರುವ ಪಿಎಂ-ಪೋಷಣ್ (ಮಧ್ಯಾಹ್ನದ ಬಿಸಿಯೂಟ) ಯೋಜನೆಯ ನಿರ್ವಹಣೆಯನ್ನು ಇಸ್ಕಾನ್ ಸಂಸ್ಥೆಗೆ ಹಸ್ತಾಂತರಿಸುವ ಯಾವುದೇ ಅನುಮೋದಿತ ಪ್ರಸ್ತಾಪ ಸರ್ಕಾರಕ್ಕಿಲ್ಲ ಎಂದು ಪಶ್ಚಿಮ ಬಂಗಾಳ ಸರ್ಕಾರ ಸ್ಪಷ್ಟಪಡಿಸಿದೆ. ಈ ಕುರಿತು ಅಫಿಡವಿಟ್...

ಗಾಜಿಯಾಬಾದ್‌| ಗೋಮಾಂಸ ಸಾಗಾಣಿಕೆ ಆರೋಪ; ವ್ಯಕ್ತಿ ಮೇಲೆ ಗುಂಪಿನಿಂದ ಹಲ್ಲೆ

ಉತ್ತರ ಪ್ರದೇಶದ ಗಾಜಿಯಾಬಾದ್‌ ನಗರದ ಶಾಸ್ತ್ರಿ ನಗರದಲ್ಲಿ ಗೋಮಾಂಸ ಸಾಗಿಸುತ್ತಿದ್ದಾರೆ ಎಂಬ ಅನುಮಾನದ ಮೇಲೆ ಸಲೀಂ ಎಂದು ಗುರುತಿಸಲಾದ ವ್ಯಕ್ತಿಯ ಮೇಲೆ ನಕಲಿ ಗೋರಕ್ಷಕರ ಗುಂಪೊಂದು ಹಲ್ಲೆ ನಡೆಸಿದೆ. ಸಾಮಾಜಿಕ ಮಾಧ್ಯಮದಲ್ಲಿ ವೀಡಿಯೊ...

ಬಾಂಗ್ಲಾ ಗಡಿಯಾಚೆಗೆ ತಳ್ಳಿದ್ದ ನಾಲ್ವರು ಭಾರತೀಯರನ್ನು ವಾಪಸ್ ಕರೆತಂದ ಕೇಂದ್ರ ಸರ್ಕಾರ

ವರ್ಷದ ಹಿಂದೆ, ಅಂದರೆ 2025ರ ಜೂನ್ ತಿಂಗಳಲ್ಲಿ ಬಾಂಗ್ಲಾದೇಶದ ಗಡಿಯಾಚೆಗೆ ತಳ್ಳಿದ್ದ ನಾಲ್ವರು ಭಾರತೀಯರು ಬುಧವಾರ (ಜು.8) ಪಶ್ಚಿಮ ಬಂಗಾಳದ ಬೀರ್‌ಭೂಮ್ ಜಿಲ್ಲೆಯ ತಮ್ಮ ಗ್ರಾಮಕ್ಕೆ ಹಿಂದಿರುಗಿದ್ದಾರೆ ಎಂದು ವರದಿಯಾಗಿದೆ. ಸುನಾಲಿ...

ಬೆಂಗಳೂರಿನ ಜ್ವಲಂತ ನಾಗರಿಕ ಸಮಸ್ಯೆಗಳ ವಿರುದ್ಧ ಜುಲೈ 12ಕ್ಕೆ ಬೃಹತ್ ‘ಜನಾಕ್ರೋಶ ಸಮಾವೇಶ

ಸಿಲಿಕಾನ್ ಸಿಟಿ ಬೆಂಗಳೂರಿನ ನಾಗರಿಕರು ಪ್ರತಿನಿತ್ಯ ಎದುರಿಸುತ್ತಿರುವ ನರಕಸದೃಶ ಸಮಸ್ಯೆಗಳ ವಿರುದ್ಧ ಮತ್ತು ಆಡಳಿತ ವ್ಯವಸ್ಥೆಯ ಭ್ರಷ್ಟಾಚಾರವನ್ನು ಖಂಡಿಸಿ ಭಾರತ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ) ಬೃಹತ್ ‘ಜನಾಕ್ರೋಶ ಸಮಾವೇಶ’ವನ್ನು ಹಮ್ಮಿಕೊಂಡಿದೆ. ಈ ‘ಜನಾಕ್ರೋಶ...

ಭೀಕರ ಪ್ರವಾಹಕ್ಕೆ ಕೊಚ್ಚಿಹೋದ 3 ಸಾವಿರ LPG ಸಿಲಿಂಡರ್

ಮಹಾರಾಷ್ಟ್ರದಲ್ಲಿ ವಾರದಿಂದ ಸುರಿಯುತ್ತಿರುವ ಮಳೆ ಇಡೀ ಜನಜೀವನವನ್ನು ಅಸ್ತವ್ಯಸ್ತಗೊಳಿಸಿದ್ದು, ಪ್ರಕೃತಿಯ ವಿಕೋಪದ ನಡುವೆ ರಾಯಗಢ ಜಿಲ್ಲೆಯಿಂದ ಅತ್ಯಂತ ಆಘಾತಕಾರಿ ವಿಡಿಯೋವೊಂದು ವೈರಲ್ ಆಗಿದೆ. ಇಲ್ಲಿನ ಎಚ್‌ಪಿಸಿಎಲ್ (HPCL) ಪಾತಾಳಗಂಗಾ ಎಲ್‌ಪಿಜಿ ಬಾಟ್ಲಿಂಗ್...

ಹೈದರಾಬಾದ್‌| ಪವನ್‌ ಕಲ್ಯಾಣ್‌ ಟೀಕಿಸಿದ ಯೂಟ್ಯೂಬರ್ ರಾವಣ್ ಮೇಲೆ ಯುಎಪಿಎ ಕೇಸ್; ನಿವಾಸದಲ್ಲಿ ಪೊಲೀಸರ ಶೋಧ

ತೆಲುಗು ಯೂಟ್ಯೂಬರ್, ಸಾಮಾಜಿಕ ಕಾರ್ಯಕರ್ತ ರಾವಣ್‌ (ಬಚಲಕೂರಿ ಜೋಸೆಫ್) ಅವರನ್ನು ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆ (ಯುಎಪಿಎ) ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಪೊಲೀಸರು ಬಂಧಿಸಿದ್ದು, ಆಂಧ್ರಪ್ರದೇಶ ಪೊಲೀಸರು ಹೈದರಾಬಾದ್‌ನಲ್ಲಿರುವ ಯೂಟ್ಯೂಬರ್ ರಾವಣ್ ನಿವಾಸದಲ್ಲಿ...

ಬೀದಿಬದಿ ವ್ಯಾಪಾರಿಗಳ ಒಕ್ಕಲೆಬ್ಬಿಸುವಿಕೆ ಖಂಡಿಸಿ ಸರ್ಕಾರದ ವಿರುದ್ದ ಬೃಹತ್ ಪ್ರತಿಭಟನೆ

ಬೆಂಗಳೂರು ನಗರದಲ್ಲಿ ಫುಟ್‌ಪಾತ್ ಒತ್ತುವರಿ ತೆರವಿನ ಹೆಸರಿನಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ನಡೆಸುತ್ತಿರುವ ಏಕಪಕ್ಷೀಯ ಕಾರ್ಯಾಚರಣೆ ಬಡ ಬೀದಿಬದಿ ವ್ಯಾಪಾರಿಗಳ ಬದುಕನ್ನು ಬೀದಿಗೆ ತಳ್ಳಿದೆ. ಪ್ರಾಧಿಕಾರದ ಈ ಜನವಿರೋಧಿ ‘ಆಪರೇಷನ್’ ಖಂಡಿಸಿ,...

ಬಿಹಾರ| ಹಿಜಾಬ್ ತೆಗೆದು ಹಣೆಗೆ ಸಿಂಧೂರ ಇಟ್ಟುಕೊಳ್ಳುವಂತೆ ಮುಸ್ಲಿಂ ಮಹಿಳೆಗೆ ಒತ್ತಾಯಿಸಿದ ಗುಂಪು

ಪುರುಷರ ಗುಂಪೊಂದು ದಾರಿಯಲ್ಲಿ ಹೋಗುತ್ತಿದ್ದ ಮುಸ್ಲಿಂ ಮಹಿಳೆಯನ್ನು ತಡೆದು ದೌರ್ಜನ್ಯ ಎಸಗಿದ್ದು, ಆಕೆ ಧರಿಸಿದ್ದ ಹಿಜಾಬ್ ತಗೆದು ಹಣೆಗೆ ಸಿಂಧೂರ ಇಟ್ಟುಕೊಳ್ಳುವಂತೆ ಹಿಂದುತ್ವ ಕಿಡಿಗೇಡಿಗಳು ಒತ್ತಾಯಿಸಿರುವ ವಿಡಿಯೊ ವೈರಲ್ ಆಗಿದೆ. ಜುಲೈ 8 ರ...

ಕೃಷಿ ಭೂಮಿ ಉಳಿಸಲು ರೈತ ಸಂಘಟನೆಗಳಿಂದ ಜುಲೈ 11ಕ್ಕೆ ‘ಬಿಡದಿ ಚಲೋ’

ಬಿಡದಿ ಉಪನಗರ (ಟೌನ್‌ಶಿಪ್) ಯೋಜನೆಗಾಗಿ ರೈತರ ಫಲವತ್ತಾದ ಕೃಷಿ ಭೂಮಿಯನ್ನು ವಶಪಡಿಸಿಕೊಳ್ಳಲು ಮುಂದಾಗಿರುವ ರಾಜ್ಯ ಸರ್ಕಾರದ ಜನವಿರೋಧಿ ಧೋರಣೆಯನ್ನು ಖಂಡಿಸಿ, ಜುಲೈ 11 ರಂದು ಬೃಹತ್ ‘ಬಿಡದಿ ಚಲೋ’ ಹಸಿರು ಹೆದ್ದಾರಿ ಪ್ರತಿಭಟನೆಯನ್ನು...

ಅಮೆರಿಕ-ಇರಾನ್ ನಡುವೆ ಮತ್ತೆ ಕಾಳಗ : ಕದನ ವಿರಾಮ ಮುಕ್ತಾಯಗೊಂಡಿದೆ ಎಂದ ಟ್ರಂಪ್

ಮಂಗಳವಾರ ರಾತ್ರಿಯಿಂದ (ಭಾರತೀಯ ಕಾಲಮಾನ) ಅಮೆರಿಕ-ಇರಾನ್ ನಡುವೆ ಮತ್ತೆ ಕಾಳಗ ಶುರುವಾಗಿದ್ದು, ಕದನ ವಿರಾಮ ಮುಕ್ತಾಯಗೊಂಡಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಟರ್ಕಿಯಲ್ಲಿ ನಡೆದ ನ್ಯಾಟೋ ಶೃಂಗಸಭೆಯಲ್ಲಿ ಮಾತನಾಡಿದ ಟ್ರಂಪ್...