Homeರಾಜಕೀಯಶಿವಮೊಗ್ಗದಲ್ಲಿ ಬಿಜೆಪಿಗೆ ಸಿಗುತ್ತಿದೆ ಬ್ರೀತಿಂಗ್ ಸ್ಪೇಸ್

ಶಿವಮೊಗ್ಗದಲ್ಲಿ ಬಿಜೆಪಿಗೆ ಸಿಗುತ್ತಿದೆ ಬ್ರೀತಿಂಗ್ ಸ್ಪೇಸ್

- Advertisement -
- Advertisement -
  • ಈಶ್ವರ್ |

ಶಿವಮೊಗ್ಗ ಜಿಲ್ಲೆಯಲ್ಲಿ ಚುನಾವಣೆ ಸಮೀಪಿಸುತ್ತಿದ್ದಂತೆ ಬಿಜೆಪಿಗೆ ಮತದಾರ ಕೊಂಚ ಉಸಿರಾಡುವಷ್ಟು ಅವಕಾಶ ನೀಡುವ ಸಾಧ್ಯತೆ ಕಾಣಿಸುತ್ತಿದೆ. ಯಡ್ಡಿ-ಈಶು ಗ್ಯಾಂಗಿನ ಪರಸ್ಪರ ಜಗಳದ ನಡುವೆ ಬಿಜೆಪಿಯನ್ನು ಬಚಾವು ಮಾಡಲು ಆರೆಸ್ಸೆಸ್ ಧಾವಿಸಿದೆ. ಬಡಾಯಿ ಭಾಷಣದ ನರೇಂದ್ರ ಮೋದಿ ಬಂದು ಹೋದಮೇಲೆ ಶಿವಮೊಗ್ಗ ಬಿಜೆಪಿಯಲ್ಲಿ ಸಂಚಲನ ಕಂಡುಬರುತ್ತಿದೆ.
ಮುಖ್ಯವಾಗಿ ಸಾಗರ, ಶಿವಮೊಗ್ಗ ಗ್ರಾಮಾಂತರ ಹಾಗು ಸೊರಬ ಕ್ಷೇತ್ರಗಳಲ್ಲಿ ಬಿಜೆಪಿ ಹೀನಾಯವಾಗಿ ಸೋಲಲಿದೆ ಎಂಬ ವಾತಾವರಣ ಬದಲಾಗಿದೆ.

ಸಾಗರದಲ್ಲಿ ಬೇಳೂರು ಗೋಪಾಲಕೃಷ್ಣ ಕಾಂಗ್ರೆಸ್ ಸೇರಿದ ಮೇಲೆ ಕಾಗೋಡು ತಿಮ್ಮಪ್ಪರ ಗೆಲುವು ನಿಚ್ಚಳವಾಯಿತು ಎಂಬ ವಾತಾವರಣವಿತ್ತು. ಆದರೆ ಚುನಾವಣೆ 4 ದಿನವಿರುವಾಗ ಗುಪ್ತಚರ ಇಲಾಖೆ ನೀಡುತ್ತಿರುವ ವರದಿ ಹೇಳುವಂತೆ ಹಾಲಪ್ಪಗಿಂತ ಕಾಗೋಡು ಕೇವಲ 5 ಸಾವಿರ ಮತಗಳಷ್ಟು ಮುನ್ನಡೆಯಲ್ಲಿದ್ದಾರೆ. ಇದು ಮತದಾನದ ಹೊತ್ತಿಗೆ ಬದಲಾಗಬಹುದು. 40 ಸಾವಿರ ಮತಗಳ ಅಂತರದಿಂದ ಗೆದ್ದಿದ್ದ ಕಾಗೋಡು ಬೆಂಬಲಕ್ಕೆ 23 ಸಾವಿರ ಮತ ಪಡೆದು ಸೋತಿದ್ದ ಬೇಳೂರು ಇರುವಾಗಲೂ ಸಾಗರದಲ್ಲಿ ಹರತಾಳ ಹಾಲಪ್ಪ ಎಲ್ಲರ ನಿರೀಕ್ಷೆ ಮೀರಿ ಮತ ಪಡೆಯುವತ್ತ ಮುಂದೆ ಸಾಗಿದ್ದಾರೆ. ಸ್ವರಾಜ್ ಇಂಡಿಯಾದ ಅಭ್ಯರ್ಥಿ ದೂಗೂರು ಪರಮೇಶ್ವರ್ ಕೂಡ ಕಾಂಗ್ರೆಸ್ ಮತಗಳಿಗೆ ಲಗ್ಗೆ ಹಾಕುತ್ತಿರೋದು ಕೈಗೆ ನುಂಗಲಾರದ ತುತ್ತು.

ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದ ಅಭ್ಯರ್ಥಿ ಅಶೋಕ ನಾಯ್ಕ ವಿರುದ್ಧ ಬಿಜೆಪಿಯಲ್ಲೇ ಭಾರೀ ವಿರೋಧವಿತ್ತು. ಲಿಂಗಾಯತರು ಸಿಟ್ಟು ಮಾಡಿಕೊಂಡಿದ್ದರು. ಯಡಿಯೂರಪ್ಪ ಸುತ್ತಾಟ ಆರಂಭಿಸಿದ ನಂತರ ಅಶೋಕನಾಯ್ಕನ ಕುದುರೆ ಕುಂಟುವುದನ್ನು ಬಿಟ್ಟು ಓಡ ತೊಡಗಿತು. ಗೆಲ್ಲಬೇಕಾದ ಜೆಡಿಎಸ್‍ನ ಶಾರದ ಪೂರ್ಯನಾಯ್ಕ ಏದುಸಿರು ಬಿಡತೊಡಗಿದ್ದಾರೆ. ಕಾಂಗ್ರೆಸ್‍ನ ಡಾ.ಶ್ರೀನಿವಾಸ್ ಡಮ್ಮಿಯಾಗುವ ಸಾಧ್ಯತೆಯೇ ಹೆಚ್ಚು.

ಸೊರಬದಲ್ಲೂ ಇದೇ ಕತೆ. ಜೆಡಿಎಸ್‍ನ ಮಧು ಬಂಗಾರಪ್ಪರೆದುರು ಅವರ ಸೋದರ ಬಿಜೆಪಿಯ ಕುಮಾರ ಬಂಗಾರಪ್ಪ ಡಮ್ಮಿಯಾಗಿ ಹೋಗುವ ವಾತಾವರಣವಿತ್ತು. ಆದರಿಲ್ಲಿ ಯಡ್ಡಿ ಮ್ಯಾಜಿಕ್ ನಡೆಯತೊಡಗಿದೆ. ಸೋದರರ ನಡುವೆ ನೇರ ಹಣಾಹಣಿ ಇದೆ. ಕುಮಾರ ಬಂಗಾರಪ್ಪ ನಿರೀಕ್ಷೆಗಿಂತ ಹೆಚ್ಚು ಮತ ಪಡೆವ ಸಾಧ್ಯತೆ ನಿಚ್ಚಳವಾಗತೊಡಗಿದೆ. ಅಂದರೆ ಗೆಲುವಿನ ಸಾಧಯತೆಯೇ ಇಲ್ಲವೆಂದು ಭಾವಿಸಲಾಗಿದ್ದ ಸೊರಬ, ಸಾಗರ ಮತ್ತು ಶಿವಮೊಗ್ಗ ಗ್ರಾಮಾಂತರ ಕ್ಷೇತ್ರಗಳಲ್ಲಿ ಯಡ್ಡಿಯ ಛಾಯೆ ಸ್ಪಷ್ಟವಾಗಿ ಗೋಚರವಾಗ ತೊಡಗಿದ್ದು ಬಿಜೆಪಿ ಗೆಲುವಿನ ಆಶಾವಾದ ಮೂಡತೊಡಗಿದೆ.
ಶಿಕಾರಿಪುರದಲ್ಲಿ ಯಡಿಯೂರಪ್ಪರ ಲೀಡ್ ಕಡಿಮೆಯಾಗಲಿದೆ. ಭದ್ರಾವತಿಯಲ್ಲಿ ಕಾಂಗ್ರೆಸ್‍ನ ಸಂಗಮೇಶ್ ಗೆಲ್ಲುವ ಸಾಧ್ಯತೆ ನಿಚ್ಚಳವಾಗಿದೆ. ತೀರ್ಥಹಳ್ಳಿಯಲ್ಲಿ ಬಿಜೆಪಿಯ ಆರಗ ಜ್ಞಾನೇಂದ್ರ ಈ ಬಾರಿಯೂ 3ನೇ ಸ್ಥಾನ ಪಡೆಯುವ ಸಾಧ್ಯತೆ ಇದ್ದು ಕಾಂಗ್ರೆಸ್‍ನ ಕಿಮ್ಮನೆ ರತ್ನಾಕರ್, ಜೆಡಿಎಸ್‍ನ ಆರ್.ಎಂ. ಮಂಜುನಾಥ್ ಗೌಡರ ನಡುವೆ ನೇರ ಹಣಾಹಣಿ ಇದೆ.

ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದಲ್ಲಿ ಈಶ್ವರಪ್ಪ ದುಡ್ಡಿನ ಹೊಳೆ ಹರಿಸುತ್ತಿದ್ದಾರಾದರೂ ಅವರ ಸೋಲು ಕಟ್ಟಿಟ್ಟ ಬುತ್ತಿ. ಚುನಾವಣಾ ತಂತ್ರ ಗೊತ್ತಿಲ್ಲದ ಜೆಡಿಎಸ್‍ನ ನಿರಂಜನ್ ಡಮ್ಮಿಯಾಗುತ್ತಾರೆ ಅಂತ ಭಾವಿಸಿದವರು ಅಚ್ಚರಿ ಪಡುವಷ್ಟು ಸ್ಪರ್ಧೆ ಗಟ್ಟಿಗೊಳ್ಳತೊಡಗಿದೆ. ಕಾಂಗ್ರೆಸ್‍ನ ಪ್ರಸನ್ನಕುಮಾರ್ ಗೆಲುವು ನಿಶ್ಚಿತವಾಗಿದೆ.

ಹೀಗೆ ಭದ್ರಾವತಿ, ತೀರ್ಥಹಳ್ಳಿ, ಶಿವಮೊಗ್ಗದಲ್ಲಿ ಕಾಂಗ್ರೆಸ್ ಗೆಲ್ಲುವ ಎಲ್ಲಾ ಸಾಧ್ಯತೆ ಇದ್ದು, ಶಿಕಾರಿಪುರದಲ್ಲಿ ಯಡಿಯೂರಪ್ಪ ಗೆಲ್ಲಲಿದ್ದಾರೆ. ಉಳಿದಂತೆ ಸೊರಬ, ಸಾಗರ, ಶಿವಮೊಗ್ಗ ಗ್ರಾಮಾಂತರದಲ್ಲಿ ಬಿಜೆಪಿ ಪ್ರಬಲ ಸ್ಪರ್ಧೆ ಒಡ್ಡಲಿದೆ. ಮಧು, ಕಾಗೋಡು ಹಾಗು ಶಾರದ ಪೂರ್ಯ ನಾಯ್ಕರ ಭವಿಷ್ಯ ಡೋಲಾಯಮಾನವಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...

ನೀಟ್‌ ಪ್ರತಿಭಟನೆಯಲ್ಲಿ ಉಮರ್ ಖಾಲಿದ್‌ಗೆ ಬೆಂಬಲ; ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ ಗೋವಾ ಪೊಲೀಸರು

ಗೋವಾದ ಪಣಜಿಯಲ್ಲಿ ನಡೆದ ನೀಟ್-ಯುಜಿ ಪ್ರತಿಭಟನೆಯಲ್ಲಿ ಉಮರ್ ಖಾಲಿದ್ ಪರ ಘೋಷಣೆಗಳನ್ನು ಕೂಗಿದ ಕೆಲವು ವಿದ್ಯಾರ್ಥಿಗಳ ಪ್ರತಿಭಟನೆ ಹಿಂದಿನ ಹಣಕಾಸು ಮತ್ತು ಉದ್ದೇಶದ ಬಗ್ಗೆ ಗೋವಾ ಪೊಲೀಸರು ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು...

ಅಸ್ಸಾಂ ಪ್ರವಾಹದ ಭೀಕರತೆ: 78 ಬಲಿ, 3 ಲಕ್ಷ ಜನರ ಬದುಕು ಸಂಕಷ್ಟಕ್ಕೆ: ವ್ಯವಸ್ಥೆಯ ವೈಫಲ್ಯಕ್ಕೆ ಬೆಲೆ ತೆತ್ತುತ್ತಿರುವ ನಾಗರಿಕರು

ಈಶಾನ್ಯ ಭಾರತದ ಗೇಟ್‌ವೇ ಎಂದೇ ಕರೆಯಲ್ಪಡುವ ಅಸ್ಸಾಂನಲ್ಲಿ ಪ್ರವಾಹದ ಅಟ್ಟಹಾಸ ಮುಂದುವರಿದಿದ್ದು, ಸಾವಿನ ಸಂಖ್ಯೆ 78ಕ್ಕೆ ಏರಿಕೆಯಾಗಿದೆ. ಇತ್ತೀಚಿನ ಅಧಿಕೃತ ವರದಿಗಳ ಪ್ರಕಾರ, ಶಿವಸಾಗರ್ ಜಿಲ್ಲೆಯಲ್ಲಿ ಇಬ್ಬರು ಹಾಗೂ ಗೋಲಾಘಾಟ್‌ನಲ್ಲಿ ಒಬ್ಬರು ನೀರಿನಲ್ಲಿ...

ನೀಟ್ ಪ್ರತಿಭಟನೆಯಲ್ಲಿ ಪೆಲೆಟ್ ಗನ್ ಬಳಕೆ ಆರೋಪ; RAF ಮದ್ದುಗುಂಡುಗಳ ದಾಖಲೆ ಕೇಳಿದ ಸುಪ್ರೀಂ ಕೋರ್ಟ್

ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಯ ಸಂದರ್ಭದಲ್ಲಿ ಜಂತರ್ ಮಂತರ್‌ನಲ್ಲಿ ನಿಯೋಜಿಸಲಾಗಿದ್ದ ಕ್ಷಿಪ್ರ ಕಾರ್ಯ ಪಡೆ (RAF) ಯ ಮದ್ದುಗುಂಡುಗಳ ದಾಖಲೆಯನ್ನು ಸಂರಕ್ಷಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ (ಜುಲೈ...

ಕ್ರಿಸ್ತನಿಗಿಂತ ಮೊದಲೇ ಇಲ್ಲಿದ್ದೇವೆ..ನಮಗೆ ಯಾವುದೇ ದಾಖಲೆಗಳು ಬೇಡ : ಎಸ್‌ಐಆರ್ ತಿರಸ್ಕರಿಸಿದ ಜಾರ್ಖಂಡ್‌ನ ಆದಿವಾಸಿಗಳು

ಜಾರ್ಖಂಡ್‌ನ ಖುಂತಿ ಜಿಲ್ಲೆಯ ದಟ್ಟ ಅರಣ್ಯ ಭಾಗದಲ್ಲಿ ವಾಸಿಸುವ ಮುಂಡಾ ಬುಡಕಟ್ಟು ಸಮುದಾಯದ ಒಂದು ವರ್ಗವು ಚುನಾವಣಾ ಆಯೋಗದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯನ್ನು ತೀವ್ರವಾಗಿ ವಿರೋಧಿಸಿದ್ದು, ಆಧುನಿಕ...