Homeಮುಖಪುಟಶಿವಮೊಗ್ಗದ ಸೋಷಲಿಸ್ಟ್ ಶಿವಣ್ಣ ನಿಧನ

ಶಿವಮೊಗ್ಗದ ಸೋಷಲಿಸ್ಟ್ ಶಿವಣ್ಣ ನಿಧನ

- Advertisement -
- Advertisement -

| ಬಿ.ಚಂದ್ರೇಗೌಡ |

ಶಿವಮೊಗ್ಗದ ಸೋಷಲಿಸ್ಟ್ ಶಿವಣ್ಣ ನಿಧನರಾಗಿದ್ದಾರೆ. ಶಿವಮೊಗ್ಗದಲ್ಲಿ ಜೆಡಿಎಸ್‍ಗೆ ನೆಲೆ ಇಲ್ಲದಿದ್ದರೂ ದೇವೇಗೌಡರು ಆರೇಳು ವರ್ಷ ಅವರನ್ನು ಜೆಡಿಎಸ್ ಅಧ್ಯಕ್ಷರನ್ನಾಗಿ ನೇಮಿಸಿದ್ದಲ್ಲದೆ, ಶ್ರೀಕಾಂತರನ್ನು ಇಲ್ಲಿಗೆ ತಂದು ಜೆಡಿಎಸ್ ನಾಯಕರಾಗುವಂತೆ ಮಾಡಿದ್ದರು. ಶ್ರೀಕಾಂತ್ ದಳದ ಪಾರ್ಟಿ ಕಟ್ಟುವುದರ ಜೊತೆಗೆ ಶಿವಣ್ಣನವರ ಆರೋಗ್ಯದ ಜವಾಬ್ದಾರಿಯನ್ನು ಹೊತ್ತಿದ್ದರು.

ಶಿವಣ್ಣನವರು ಸಮಾಜವಾದಿಗಳು ಉತ್ತುಂಗದಲ್ಲಿದ್ದ ಕಾಲದವರು. ಪಟೇಲರಾದಿಯಾಗಿ ಅಂದಿನ ಘಟಾನುಘಟಿಗಳು ಚರ್ಚಿಸುತ್ತಿದ್ದ ಕಾಲದಲ್ಲಿ ಅವರ ಮಾತುಗಳಿಗೆ ಸಾಕ್ಷಿಯಾಗಿದ್ದವರು. ಆದ್ದರಿಂದ ಅವರನ್ನು ಭೇಟಿಯಾದರೆ ಸಾಕು ಲೋಹಿಯಾ, ಕಿಷನ್ ಪಟ್ನಾಯಕ್, ಪಟೇಲರು ಮತ್ತು ಅಂದಿನ ಕರ್ನಾಟಕದ ಸೋಷಿಲಿಸ್ಟರ ಚರಿತ್ರೆಯೇ ತೆರೆದುಕೊಳ್ಳುತ್ತಿತ್ತು. ಅಲ್ಲದೆ ಲೋಹಿಯಾ ಗೆದ್ದು ಪಾರ್ಲಿಮೆಂಟಿಗೆ ಹೋದಾಗ ಬಂದ ಪತ್ರಿಕಾ ವರದಿಗಳು, ಸಂಪಾದಕೀಯಗಳು, ಅವರ ಬಾಯಲ್ಲೇ ಇದ್ದವು. ಖಾದ್ರಿ ಶಾಮಣ್ಣನ ಸಂಪಾದಕೀಯವಂತೂ ಬಾಯಿಪಾಠವಾಗಿದ್ದವು. ಇದು ರಾಜಕಾರಣದ ಮಾತಾಯಿತು. ಇನ್ನ ಆಧ್ಯಾತ್ಮದ ವಿಷಯಕ್ಕೆ ಬಂದರೆ ಅಕ್ಕನ ವಚನಗಳು ಸಂದರ್ಭೋಚಕವಾಗಿ ಅವರ ಬಾಯಿಂದ ಬರುತ್ತಿದ್ದವು. ಅಲ್ಲದೆ ಬಸವಣ್ಣ, ಅಲ್ಲಮರ ವಚನಗಳೂ ಬರುತ್ತಿದ್ದವು. ಕೇವಲ ಒಂದು ಸಿಕ್ಸ್‍ಟಿಗೆ ಸಮಾಜವಾದದ ಚರ್ಚೆ ಹೊರಬಂದರೆ, ಎರಡು ಸಿಕ್ಸ್‍ಟಿಗೆ ಹನ್ನೆರಡನೇ ಶತಮಾನಕ್ಕೆ ಹೊರಳುತ್ತಿದ್ದರು. ಜಾತ್ಯಾತೀತ ಜನತಾದಳವೆಂಬ ಪಾರ್ಟಿಗೆ ನಿಷ್ಟರಾಗಿದ್ದ ಶಿವಣ್ಣ, ಅದರ ಜೋತಿಷ್ಯ ಯಜ್ಞ ಹೋಮ ಹವನದ ವಿರೋಧಿಯಾಗಿದ್ದರು. ಅದನ್ನೆಲ್ಲಾ ಅವರವರ ವೈಯಕ್ತಿಕ ವಿಷಯಕ್ಕೆ ಬಿಟ್ಟಿದ್ದರು.

ಶಿವಣ್ಣ ಅಜಾತಶತ್ರು, ಎಲ್ಲಾ ಪಾರ್ಟಿಯಲ್ಲೂ ಅವರ ಗೆಳೆಯರಿದ್ದರು. ಅವರಿಗೆ ತುಂಬ ಒಲವಿದ್ದುದು ರೈತ ಸಂಘದ ಕಡೆಗೆ, ಆದ್ದರಿಂದ ಮಣ್ಣಿನ ಮಗ ದೇವೇಗೌಡರ ಪಾರ್ಟಿ ಅಧ್ಯಕ್ಷರಾಗಿದ್ದರು. ಜೆಡಿಎಸ್ ಬಿಜೆಪಿ ಜತೆಗೂಡಿ ಸರಕಾರ ಮಾಡಿದಾಗ ಶಿವಣ್ಣನಿಗೆ ಅದೊಂದು ಅನೈತಿಕ ಸಂಬಂಧದಂತೆ ಕಂಡಿತ್ತು. ಹಾಗಾಗಿ ಎಡೂರಪ್ಪನವರು ಉಪಮುಖ್ಯಮಂತ್ರಿಯಾಗಿ ಶಿವಮೊಗ್ಗಕ್ಕೆ ಬಂದಾಗ, ಅವರು ಜೆಡಿಎಸ್ ಪಾರ್ಟಿ ಆಫೀಸಿಗೆ ಬಂದಾರೆಂದು ಪಾರ್ಟಿ ಆಫೀಸಿನ ಬಾಗಿಲಿಗೆ ಬೀಗ ಜಡಿದು ಪರಾರಿಯಾಗಿದ್ದರು. ಶಿವಣ್ಣ ಮೂಲತಃ ಶಿವಮೊಗ್ಗದವರಲ್ಲ. ಹಾಸನ ಕಡೆಯವರು. ಅಲ್ಲಿಂದ ಬಂದ ವ್ಯಕ್ತಿ ಶಿವಮೊಗ್ಗದಲ್ಲಿ ಬೇರೂರಿದ ಪರಿ ಅಚ್ಚರಿ ಹುಟ್ಟಿಸುವಂತದ್ದು. ಯಾಕೆಂದರೆ ಅವರ ಜಾತಿ ಯಾವುದೆಂಬುದೇ ಹಲವರಿಗೆ ಗೊತ್ತಿಲ್ಲ. ಹೀಗೆ ಜಾತಿ, ವರ್ಗಗಳ ಚೌಕಟ್ಟಿಗೆ ನಿಲುಕದೆ ಎಲ್ಲಾ ಜನರ ವಿಶ್ವಾಸ ಗಳಿಸಿಕೊಂಡಿದ್ದರು. ಬಹಳ ದಿನಗಳಿಂದ ಡಯಾಲಿಸಿಸ್‍ಗೆ ತುತ್ತಾಗಿದ್ದ ಶಿವಣ್ಣನವರನ್ನು ಚೆನ್ನಾಗಿ ನೋಡಿಕೊಂಡವರು ಶ್ರೀಕಾಂತ್ ಎಂದೇ ಹೇಳಬೇಕು. ಯಾಕೊ ದೇವೇಗೌಡರ ಪಾರ್ಟಿ ಅಧ್ಯಕ್ಷರಾದವರಿಗೆ ಆಯಸ್ಸಿಲ್ಲ ಅಂತ ಕಾಣಿಸುತ್ತೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಂಜಾಬ್‌| ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ವೃದ್ಧ

ಪಂಜಾಬ್‌ನ ಬರ್ನಾಲಾ ಜಿಲ್ಲೆಯಲ್ಲಿ, ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ಕಾಯುತ್ತಿದ್ದಾಗ 66 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಅನಿಲ ಕೊರತೆಯಿಂದ ಉಂಟಾಗುತ್ತಿರುವ...

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...

ಹಿಂದೂಯೇತರರಿಗೆ ದೇಗುಲ ಪ್ರವೇಶಕ್ಕೆ ನಿಷೇಧ ಹೇರಿದ ಬದರೀನಾಥ್-ಕೇದಾರನಾಥ ದೇವಾಲಯಗಳ ಸಮಿತಿ

ಮುಂಬರುವ ತೀರ್ಥಯಾತ್ರೆಯ ಋತುವಿನಿಂದ ಜಾರಿಗೆ ಬರುವಂತೆ ಬದರೀನಾಥ್ ಮತ್ತು ಕೇದಾರನಾಥ ದೇವಾಲಯಗಳು ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ 47 ಇತರ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ನಿರ್ಣಯವನ್ನು ಸರ್ವಾನುಮತದಿಂದ ದೇವಾಲಯ ಸಮಿತಿಯು ಅಂಗೀಕರಿಸಿದೆ. ಬಿಕೆಟಿಸಿ ಅಧ್ಯಕ್ಷ...

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...