Homeಮುಖಪುಟಶಿವಮೊಗ್ಗದ ಸೋಷಲಿಸ್ಟ್ ಶಿವಣ್ಣ ನಿಧನ

ಶಿವಮೊಗ್ಗದ ಸೋಷಲಿಸ್ಟ್ ಶಿವಣ್ಣ ನಿಧನ

- Advertisement -
- Advertisement -

| ಬಿ.ಚಂದ್ರೇಗೌಡ |

ಶಿವಮೊಗ್ಗದ ಸೋಷಲಿಸ್ಟ್ ಶಿವಣ್ಣ ನಿಧನರಾಗಿದ್ದಾರೆ. ಶಿವಮೊಗ್ಗದಲ್ಲಿ ಜೆಡಿಎಸ್‍ಗೆ ನೆಲೆ ಇಲ್ಲದಿದ್ದರೂ ದೇವೇಗೌಡರು ಆರೇಳು ವರ್ಷ ಅವರನ್ನು ಜೆಡಿಎಸ್ ಅಧ್ಯಕ್ಷರನ್ನಾಗಿ ನೇಮಿಸಿದ್ದಲ್ಲದೆ, ಶ್ರೀಕಾಂತರನ್ನು ಇಲ್ಲಿಗೆ ತಂದು ಜೆಡಿಎಸ್ ನಾಯಕರಾಗುವಂತೆ ಮಾಡಿದ್ದರು. ಶ್ರೀಕಾಂತ್ ದಳದ ಪಾರ್ಟಿ ಕಟ್ಟುವುದರ ಜೊತೆಗೆ ಶಿವಣ್ಣನವರ ಆರೋಗ್ಯದ ಜವಾಬ್ದಾರಿಯನ್ನು ಹೊತ್ತಿದ್ದರು.

ಶಿವಣ್ಣನವರು ಸಮಾಜವಾದಿಗಳು ಉತ್ತುಂಗದಲ್ಲಿದ್ದ ಕಾಲದವರು. ಪಟೇಲರಾದಿಯಾಗಿ ಅಂದಿನ ಘಟಾನುಘಟಿಗಳು ಚರ್ಚಿಸುತ್ತಿದ್ದ ಕಾಲದಲ್ಲಿ ಅವರ ಮಾತುಗಳಿಗೆ ಸಾಕ್ಷಿಯಾಗಿದ್ದವರು. ಆದ್ದರಿಂದ ಅವರನ್ನು ಭೇಟಿಯಾದರೆ ಸಾಕು ಲೋಹಿಯಾ, ಕಿಷನ್ ಪಟ್ನಾಯಕ್, ಪಟೇಲರು ಮತ್ತು ಅಂದಿನ ಕರ್ನಾಟಕದ ಸೋಷಿಲಿಸ್ಟರ ಚರಿತ್ರೆಯೇ ತೆರೆದುಕೊಳ್ಳುತ್ತಿತ್ತು. ಅಲ್ಲದೆ ಲೋಹಿಯಾ ಗೆದ್ದು ಪಾರ್ಲಿಮೆಂಟಿಗೆ ಹೋದಾಗ ಬಂದ ಪತ್ರಿಕಾ ವರದಿಗಳು, ಸಂಪಾದಕೀಯಗಳು, ಅವರ ಬಾಯಲ್ಲೇ ಇದ್ದವು. ಖಾದ್ರಿ ಶಾಮಣ್ಣನ ಸಂಪಾದಕೀಯವಂತೂ ಬಾಯಿಪಾಠವಾಗಿದ್ದವು. ಇದು ರಾಜಕಾರಣದ ಮಾತಾಯಿತು. ಇನ್ನ ಆಧ್ಯಾತ್ಮದ ವಿಷಯಕ್ಕೆ ಬಂದರೆ ಅಕ್ಕನ ವಚನಗಳು ಸಂದರ್ಭೋಚಕವಾಗಿ ಅವರ ಬಾಯಿಂದ ಬರುತ್ತಿದ್ದವು. ಅಲ್ಲದೆ ಬಸವಣ್ಣ, ಅಲ್ಲಮರ ವಚನಗಳೂ ಬರುತ್ತಿದ್ದವು. ಕೇವಲ ಒಂದು ಸಿಕ್ಸ್‍ಟಿಗೆ ಸಮಾಜವಾದದ ಚರ್ಚೆ ಹೊರಬಂದರೆ, ಎರಡು ಸಿಕ್ಸ್‍ಟಿಗೆ ಹನ್ನೆರಡನೇ ಶತಮಾನಕ್ಕೆ ಹೊರಳುತ್ತಿದ್ದರು. ಜಾತ್ಯಾತೀತ ಜನತಾದಳವೆಂಬ ಪಾರ್ಟಿಗೆ ನಿಷ್ಟರಾಗಿದ್ದ ಶಿವಣ್ಣ, ಅದರ ಜೋತಿಷ್ಯ ಯಜ್ಞ ಹೋಮ ಹವನದ ವಿರೋಧಿಯಾಗಿದ್ದರು. ಅದನ್ನೆಲ್ಲಾ ಅವರವರ ವೈಯಕ್ತಿಕ ವಿಷಯಕ್ಕೆ ಬಿಟ್ಟಿದ್ದರು.

ಶಿವಣ್ಣ ಅಜಾತಶತ್ರು, ಎಲ್ಲಾ ಪಾರ್ಟಿಯಲ್ಲೂ ಅವರ ಗೆಳೆಯರಿದ್ದರು. ಅವರಿಗೆ ತುಂಬ ಒಲವಿದ್ದುದು ರೈತ ಸಂಘದ ಕಡೆಗೆ, ಆದ್ದರಿಂದ ಮಣ್ಣಿನ ಮಗ ದೇವೇಗೌಡರ ಪಾರ್ಟಿ ಅಧ್ಯಕ್ಷರಾಗಿದ್ದರು. ಜೆಡಿಎಸ್ ಬಿಜೆಪಿ ಜತೆಗೂಡಿ ಸರಕಾರ ಮಾಡಿದಾಗ ಶಿವಣ್ಣನಿಗೆ ಅದೊಂದು ಅನೈತಿಕ ಸಂಬಂಧದಂತೆ ಕಂಡಿತ್ತು. ಹಾಗಾಗಿ ಎಡೂರಪ್ಪನವರು ಉಪಮುಖ್ಯಮಂತ್ರಿಯಾಗಿ ಶಿವಮೊಗ್ಗಕ್ಕೆ ಬಂದಾಗ, ಅವರು ಜೆಡಿಎಸ್ ಪಾರ್ಟಿ ಆಫೀಸಿಗೆ ಬಂದಾರೆಂದು ಪಾರ್ಟಿ ಆಫೀಸಿನ ಬಾಗಿಲಿಗೆ ಬೀಗ ಜಡಿದು ಪರಾರಿಯಾಗಿದ್ದರು. ಶಿವಣ್ಣ ಮೂಲತಃ ಶಿವಮೊಗ್ಗದವರಲ್ಲ. ಹಾಸನ ಕಡೆಯವರು. ಅಲ್ಲಿಂದ ಬಂದ ವ್ಯಕ್ತಿ ಶಿವಮೊಗ್ಗದಲ್ಲಿ ಬೇರೂರಿದ ಪರಿ ಅಚ್ಚರಿ ಹುಟ್ಟಿಸುವಂತದ್ದು. ಯಾಕೆಂದರೆ ಅವರ ಜಾತಿ ಯಾವುದೆಂಬುದೇ ಹಲವರಿಗೆ ಗೊತ್ತಿಲ್ಲ. ಹೀಗೆ ಜಾತಿ, ವರ್ಗಗಳ ಚೌಕಟ್ಟಿಗೆ ನಿಲುಕದೆ ಎಲ್ಲಾ ಜನರ ವಿಶ್ವಾಸ ಗಳಿಸಿಕೊಂಡಿದ್ದರು. ಬಹಳ ದಿನಗಳಿಂದ ಡಯಾಲಿಸಿಸ್‍ಗೆ ತುತ್ತಾಗಿದ್ದ ಶಿವಣ್ಣನವರನ್ನು ಚೆನ್ನಾಗಿ ನೋಡಿಕೊಂಡವರು ಶ್ರೀಕಾಂತ್ ಎಂದೇ ಹೇಳಬೇಕು. ಯಾಕೊ ದೇವೇಗೌಡರ ಪಾರ್ಟಿ ಅಧ್ಯಕ್ಷರಾದವರಿಗೆ ಆಯಸ್ಸಿಲ್ಲ ಅಂತ ಕಾಣಿಸುತ್ತೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...