Homeಮುಖಪುಟಶಿವಮೊಗ್ಗದ ಸೋಷಲಿಸ್ಟ್ ಶಿವಣ್ಣ ನಿಧನ

ಶಿವಮೊಗ್ಗದ ಸೋಷಲಿಸ್ಟ್ ಶಿವಣ್ಣ ನಿಧನ

- Advertisement -
- Advertisement -

| ಬಿ.ಚಂದ್ರೇಗೌಡ |

ಶಿವಮೊಗ್ಗದ ಸೋಷಲಿಸ್ಟ್ ಶಿವಣ್ಣ ನಿಧನರಾಗಿದ್ದಾರೆ. ಶಿವಮೊಗ್ಗದಲ್ಲಿ ಜೆಡಿಎಸ್‍ಗೆ ನೆಲೆ ಇಲ್ಲದಿದ್ದರೂ ದೇವೇಗೌಡರು ಆರೇಳು ವರ್ಷ ಅವರನ್ನು ಜೆಡಿಎಸ್ ಅಧ್ಯಕ್ಷರನ್ನಾಗಿ ನೇಮಿಸಿದ್ದಲ್ಲದೆ, ಶ್ರೀಕಾಂತರನ್ನು ಇಲ್ಲಿಗೆ ತಂದು ಜೆಡಿಎಸ್ ನಾಯಕರಾಗುವಂತೆ ಮಾಡಿದ್ದರು. ಶ್ರೀಕಾಂತ್ ದಳದ ಪಾರ್ಟಿ ಕಟ್ಟುವುದರ ಜೊತೆಗೆ ಶಿವಣ್ಣನವರ ಆರೋಗ್ಯದ ಜವಾಬ್ದಾರಿಯನ್ನು ಹೊತ್ತಿದ್ದರು.

ಶಿವಣ್ಣನವರು ಸಮಾಜವಾದಿಗಳು ಉತ್ತುಂಗದಲ್ಲಿದ್ದ ಕಾಲದವರು. ಪಟೇಲರಾದಿಯಾಗಿ ಅಂದಿನ ಘಟಾನುಘಟಿಗಳು ಚರ್ಚಿಸುತ್ತಿದ್ದ ಕಾಲದಲ್ಲಿ ಅವರ ಮಾತುಗಳಿಗೆ ಸಾಕ್ಷಿಯಾಗಿದ್ದವರು. ಆದ್ದರಿಂದ ಅವರನ್ನು ಭೇಟಿಯಾದರೆ ಸಾಕು ಲೋಹಿಯಾ, ಕಿಷನ್ ಪಟ್ನಾಯಕ್, ಪಟೇಲರು ಮತ್ತು ಅಂದಿನ ಕರ್ನಾಟಕದ ಸೋಷಿಲಿಸ್ಟರ ಚರಿತ್ರೆಯೇ ತೆರೆದುಕೊಳ್ಳುತ್ತಿತ್ತು. ಅಲ್ಲದೆ ಲೋಹಿಯಾ ಗೆದ್ದು ಪಾರ್ಲಿಮೆಂಟಿಗೆ ಹೋದಾಗ ಬಂದ ಪತ್ರಿಕಾ ವರದಿಗಳು, ಸಂಪಾದಕೀಯಗಳು, ಅವರ ಬಾಯಲ್ಲೇ ಇದ್ದವು. ಖಾದ್ರಿ ಶಾಮಣ್ಣನ ಸಂಪಾದಕೀಯವಂತೂ ಬಾಯಿಪಾಠವಾಗಿದ್ದವು. ಇದು ರಾಜಕಾರಣದ ಮಾತಾಯಿತು. ಇನ್ನ ಆಧ್ಯಾತ್ಮದ ವಿಷಯಕ್ಕೆ ಬಂದರೆ ಅಕ್ಕನ ವಚನಗಳು ಸಂದರ್ಭೋಚಕವಾಗಿ ಅವರ ಬಾಯಿಂದ ಬರುತ್ತಿದ್ದವು. ಅಲ್ಲದೆ ಬಸವಣ್ಣ, ಅಲ್ಲಮರ ವಚನಗಳೂ ಬರುತ್ತಿದ್ದವು. ಕೇವಲ ಒಂದು ಸಿಕ್ಸ್‍ಟಿಗೆ ಸಮಾಜವಾದದ ಚರ್ಚೆ ಹೊರಬಂದರೆ, ಎರಡು ಸಿಕ್ಸ್‍ಟಿಗೆ ಹನ್ನೆರಡನೇ ಶತಮಾನಕ್ಕೆ ಹೊರಳುತ್ತಿದ್ದರು. ಜಾತ್ಯಾತೀತ ಜನತಾದಳವೆಂಬ ಪಾರ್ಟಿಗೆ ನಿಷ್ಟರಾಗಿದ್ದ ಶಿವಣ್ಣ, ಅದರ ಜೋತಿಷ್ಯ ಯಜ್ಞ ಹೋಮ ಹವನದ ವಿರೋಧಿಯಾಗಿದ್ದರು. ಅದನ್ನೆಲ್ಲಾ ಅವರವರ ವೈಯಕ್ತಿಕ ವಿಷಯಕ್ಕೆ ಬಿಟ್ಟಿದ್ದರು.

ಶಿವಣ್ಣ ಅಜಾತಶತ್ರು, ಎಲ್ಲಾ ಪಾರ್ಟಿಯಲ್ಲೂ ಅವರ ಗೆಳೆಯರಿದ್ದರು. ಅವರಿಗೆ ತುಂಬ ಒಲವಿದ್ದುದು ರೈತ ಸಂಘದ ಕಡೆಗೆ, ಆದ್ದರಿಂದ ಮಣ್ಣಿನ ಮಗ ದೇವೇಗೌಡರ ಪಾರ್ಟಿ ಅಧ್ಯಕ್ಷರಾಗಿದ್ದರು. ಜೆಡಿಎಸ್ ಬಿಜೆಪಿ ಜತೆಗೂಡಿ ಸರಕಾರ ಮಾಡಿದಾಗ ಶಿವಣ್ಣನಿಗೆ ಅದೊಂದು ಅನೈತಿಕ ಸಂಬಂಧದಂತೆ ಕಂಡಿತ್ತು. ಹಾಗಾಗಿ ಎಡೂರಪ್ಪನವರು ಉಪಮುಖ್ಯಮಂತ್ರಿಯಾಗಿ ಶಿವಮೊಗ್ಗಕ್ಕೆ ಬಂದಾಗ, ಅವರು ಜೆಡಿಎಸ್ ಪಾರ್ಟಿ ಆಫೀಸಿಗೆ ಬಂದಾರೆಂದು ಪಾರ್ಟಿ ಆಫೀಸಿನ ಬಾಗಿಲಿಗೆ ಬೀಗ ಜಡಿದು ಪರಾರಿಯಾಗಿದ್ದರು. ಶಿವಣ್ಣ ಮೂಲತಃ ಶಿವಮೊಗ್ಗದವರಲ್ಲ. ಹಾಸನ ಕಡೆಯವರು. ಅಲ್ಲಿಂದ ಬಂದ ವ್ಯಕ್ತಿ ಶಿವಮೊಗ್ಗದಲ್ಲಿ ಬೇರೂರಿದ ಪರಿ ಅಚ್ಚರಿ ಹುಟ್ಟಿಸುವಂತದ್ದು. ಯಾಕೆಂದರೆ ಅವರ ಜಾತಿ ಯಾವುದೆಂಬುದೇ ಹಲವರಿಗೆ ಗೊತ್ತಿಲ್ಲ. ಹೀಗೆ ಜಾತಿ, ವರ್ಗಗಳ ಚೌಕಟ್ಟಿಗೆ ನಿಲುಕದೆ ಎಲ್ಲಾ ಜನರ ವಿಶ್ವಾಸ ಗಳಿಸಿಕೊಂಡಿದ್ದರು. ಬಹಳ ದಿನಗಳಿಂದ ಡಯಾಲಿಸಿಸ್‍ಗೆ ತುತ್ತಾಗಿದ್ದ ಶಿವಣ್ಣನವರನ್ನು ಚೆನ್ನಾಗಿ ನೋಡಿಕೊಂಡವರು ಶ್ರೀಕಾಂತ್ ಎಂದೇ ಹೇಳಬೇಕು. ಯಾಕೊ ದೇವೇಗೌಡರ ಪಾರ್ಟಿ ಅಧ್ಯಕ್ಷರಾದವರಿಗೆ ಆಯಸ್ಸಿಲ್ಲ ಅಂತ ಕಾಣಿಸುತ್ತೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...