Homeರಾಜಕೀಯಶಿವಮೊಗ್ಗದಲ್ಲೊಂದು ಶಂಕರಪ್ಪನ ಸಾಹಿತ್ಯ ಸಮಾರಂಭ

ಶಿವಮೊಗ್ಗದಲ್ಲೊಂದು ಶಂಕರಪ್ಪನ ಸಾಹಿತ್ಯ ಸಮಾರಂಭ

- Advertisement -
- Advertisement -

 ವರದಿಗಾರ

ಶಿವಮೊಗ್ಗದಲ್ಲಿ 13ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಿತು. ಅಲ್ಲಿನ ಕವಿಗೋಷ್ಠೀಯಲ್ಲಿ ಉದಯೋನ್ಮುಖ ಕವಿಯೊಬ್ಬ ಓದಿದ ಕವನ ಹೀಗಿತ್ತು.
‘ಪತ್ರಿಕೆಗಳಲ್ಲಿ ಸಾಹಿತ್ಯ’
ಪ್ರಜಾವಾಣಿ, ಉದಯವಾಣಿ ವಿಜಯ ಕರ್ನಾಟಕ
ವಿಜಯವಾಣಿ ಸಂಯುಕ್ತ ಕರ್ನಾಟಕ
ಪತ್ರಿಕೆಗಳಲ್ಲಿ ಮುಖಪುಟದಲ್ಲಿ ಸುದ್ದಿ
ಎರಡನೇ ಪುಟದಲ್ಲಿ ಸ್ಥಳೀಯ ಸುದ್ದಿ
ಮೂರನೇ ಪುಟದಲ್ಲಿ ಜಿಲ್ಲೆಯ ಸುದ್ದಿ
ನಾಲ್ಕನೇ ಪುಟದಲ್ಲಿ ರಾಜ್ಯದ ಸುದ್ದಿ
ಐದನೇ ಪುಟದಲ್ಲಿ ವಾಚಕರವಾಣಿ
ಆರನೇ ಪುಟದಲ್ಲಿ ದೇಶದ ಸುದ್ದಿ
ಏಳನೇ ಪುಟದಲ್ಲಿ ಕ್ರೀಡೆ ಮತ್ತು
ಕಡೇ ಪುಟದಲ್ಲಿ ಅದೇ ಸುದ್ದಿ
ಜೊತೆಗೆ ಮಹಿಳಾ ಪುಟ ವಾಣಿಜ್ಯ ಪುಟ….
ಹೀಗೆ ಪತ್ರಿಕೆಗಳ ಪುಟ ತಿರುವಿ ಕವನ ಬರೆದುಕೊಂಡು ಬಂದ ಆ ಕವಿ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಿ.ಬಿ. ಶಂಕರಪ್ಪನ ಕೃಪೆಯಿಂದ ಮಾತ್ರ ಕವಿಗೋಷ್ಠಿಗಳಲ್ಲಿ ಓದುವಂತಹ ಕವನ. ನಗು ಕಳೆದುಕೊಂಡ ಸಾಹಿತ್ಯ ಲೋಕದ ಜನ ನಗಬೇಕಾದರೆ ಈ ಶಂಕರಪ್ಪ ಏರ್ಪಡಿಸುವ ಸಾಹಿತ್ಯ ಸಭೆಗೆ ಬಂದು ಕೂತರಾಯ್ತು. ಹೊಟ್ಟೆ ತುಂಬ ನಕ್ಕು ಹೋಗಬಹುದು. ಈ ನಗು ಅವರ ಆಹ್ವಾನ ಪತ್ರಿಕೆ ನೋಡಿದಾಗಲೇ ಶುರುವಾಗುತ್ತದೆ. ಶಿವಮೊಗ್ಗದ ಓಟರ್ ಲಿಸ್ಟಿನಂತೆ ಕಾಣುವ ಆಹ್ವಾನ ಪತ್ರಿಕೆಯಲ್ಲಿ ಶಂಕರಪ್ಪನಿಂದ ಯಾರೂ ತಪ್ಪಿಸಿಕೊಳ್ಳುವಂತಿಲ್ಲ. ಸಮ್ಮೇಳನದಲ್ಲಿ ಉಪಸ್ಥಿತರು ಎಂದು ಅವರು ಪ್ರಿಂಟಾಕಿಸಿದ ಜನ, ಇತ್ತ ಸುಳಿದು ನೋಡುವುದಿಲ್ಲ. ಒಂದು ಇಸಮೂ ತಪ್ಪದಂತೆ ಬರುವವರಾರೆಂದರೆ ಈ ಸಮ್ಮೇಳನದಲ್ಲಿ ಕವನ ಓದುವ ಜನ ಮತ್ತು ಸನ್ಮಾನಿತರು. ಈ ಸನ್ಮಾನಿತರ ಸಂಖ್ಯೆ ಹೇಗಿರುತ್ತದೆಂದರೆ ಅವರೆಲ್ಲಾ ಎದ್ದು ವೇದಿಕೆಗೆ ಹೋದರೆ ಅರ್ಧ ರಂಗಮಂದಿರವೇ ಖಾಲಿ ಬೀಳುತ್ತದೆ. ಇನ್ನುಳಿದ ಜನ ಯಾರೆಂದರೆ ಸನ್ಮಾನಿತರ ಸಂಬಂಧಿಗಳು. ಇಂತಹ ಆಧ್ವಾನದ ಜಾತ್ರೆಗೆ ಸದ್ಯ ಒಳ್ಳೆಯ ವಿದ್ವಾಂಸ ಜಯಪ್ರಕಾಶ ಮಾವಿನಕುಳಿ ಅಧ್ಯಕ್ಷರಾಗಿದ್ದರು. ಇವರ ಸಾಧನೆ ದೊಡ್ಡದಿದೆ. ಆದ್ದರಿಂದ ಅವರ ಭಾಷಣ ಕೂಡ ಸಾಹಿತ್ಯಾಸಕ್ತರನ್ನು ತಟ್ಟುವಂತಿತ್ತು.

ಇನ್ನು ಉದ್ಘಾಟನಾ ಭಾಷಣ ಮಾಡಿದ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಎಸ್.ಜಿ. ಸಿದ್ಧರಾಮಯ್ಯನವರು ಕನ್ನಡ ಭಾಷೆಗೆ ಒದಗಿರುವ ದುರ್ಗತಿಯನ್ನು ಮನಮುಟ್ಟುವಂತೆ ಹೇಳಿದರೆ ಸಮಾರೋಪ ನುಡಿ ಮಾತನಾಡಿದ ಜಿಲ್ಲಾಧಿಕಾರಿ ಕೆ.ಎ.ದಯಾನಂದ್ ಕನ್ನಡ ಭಾಷೆ ನಶಿಸಿಹೋಗುತ್ತಿರುವ ಬಗ್ಗೆ ಯಾವುದೇ ಅನುಮಾನವನ್ನು ಇಟ್ಟುಕೊಳ್ಳಬೇಡಿ, ನಮ್ಮ ಭಾಷೆ ಹೊರಟುಹೋಗುತ್ತೆ ಎಂದು ಹೆದರಿಸಿದರು. ಯಾಕೆಂದರೆ ಅವರು ಕೊಟ್ಟ ಸಾಕ್ಷ್ಯಾಧಾರಗಳು ದಂಗುಬಡಿಸುವಂತಿದ್ದವು. ಅದೇ ಸಮಾರೋಪದಲ್ಲಿ ಮಾತನಾಡಿದ ಡಿ.ಎಚ್.ಶಂಕರಮೂರ್ತಿ ಎಂಬ ಶೆಟ್ಟರು, ಥೇಟ್ ಶೆಟ್ಟರಂತೆಯೇ ಮಾತನಾಡಿದರು. ಕನ್ನಡ ಭಾಷೆ ನಿರ್ಲಕ್ಷ್ಯದ ಬಗ್ಗೆ ಮನಮುಟ್ಟುವಂತೆ ಮಾತನಾಡುವ ಇವರ ಮಗ ಇಂಗ್ಲಿಷ್ ಕಾನ್ವೆಂಟ್ ನಡೆಸುತ್ತಾನೆ. ಬಿ.ಜೆ.ಪಿ.ಗಳು ಶಿವಮೊಗ್ಗದಲ್ಲಿ ಬಂದ್ ಕರೆಕೊಟ್ಟರೆ ಶಂಕರಮೂರ್ತಿ ವ್ಯವಹಾರಗಳು ಬಂದ್ ಆಗುವುದಿಲ್ಲ. ಇಷ್ಟರ ನಡುವೆ ಬಿ.ಜೆ.ಪಿ. ಸಿದ್ಧಾಂತಕ್ಕೆ ಬದ್ಧರಾಗಿ ಬದುಕುತ್ತಿರುವ ಇವರನ್ನು ಕಂಡರೆ ಶಂಕರಪ್ಪನ ಟೀಮಿಗೆ ಎಲ್ಲಿಲ್ಲದ ಅಕ್ಕರೆ. ಅದಕ್ಕೆ ಕ್ಲೀಷೆಯಾಗುವಷ್ಟು ಉಪಮೆ ಬಳಸುತ್ತವೆ.

ಇನ್ನು ಒಂದು ಗೋಷ್ಠಿಗೆ ಸ್ವಾಗತ ಕೋರುವ, ವಂದನಾರ್ಪಣೆ ಮಾಡುವ, ನಿರೂಪಣೆ ಮಾಡುವ ಹಾಗೂ ನಿರ್ವಹಣೆ ಮಾಡುವವರೆಂದು ನಾಲ್ಕು ಜನರಿರುತ್ತಾರೆ. ಇವರು ತಿಂದುಬಿಟ್ಟ ಸಮಯದಲ್ಲಿ ಅತಿಥಿಗಳಿಗೆ ಉಳಿಯುವುದು ಹತ್ತು ನಿಮಿಷಗಳು. ಆದರೂ ಜಗಮೊಂಡರಾದ ಭಾಷಣಕಾರರು ಮೂರನೇ ಚೀಟಿ ಬಂದರೂ ಜಗ್ಗುವುದಿಲ್ಲ. ಹೀಗಾಗಿ ಹನ್ನೆರಡು ಗಂಟೆಗೆ ಆರಂಭವಾಗುವ ಗೋಷ್ಠಿ ಮಧ್ಯಾಹ್ನ ಎರಡು ಗಂಟೆಗೆ ಆರಂಭವಾಗುತ್ತಿತ್ತು. ಗೋಷ್ಠಿಯ ವೇದಿಕೆಯಲ್ಲಿರಬೇಕಾದ ಅತಿಥಿಗಳು ಒಂದೇ ಉಸಿರಿಗೆ ಅನ್ನಸಾರು ಸಾಪಳಿಸಿ ಓಡುತ್ತಿದ್ದರು. ನಿರೂಪಕ, ಊಟ ಮಾಡಿದ ಕೂಡಲೇ ಒಳ ಬಂದು ಕೂರಬೇಕೆಂದು ಎಷ್ಟು ಗೋಗರೆದರೂ ಮೂವತ್ತು ಜನಕ್ಕಿಂತ ಜಾಸ್ತಿಯಿರುತ್ತಿರಲಿಲ್ಲ. ಇದನ್ನು ಗ್ರಹಿಸಿಯೊ ಏನೊ ಶಂಕರಪ್ಪ ಶಾಲೆ ಹುಡುಗರನ್ನು ತರಿಸಿದ್ದರು. ಅವು ಮರಕ್ಕೆ ತುಂಬಿದ ಹಕ್ಕಿಗಳಂತೆ ಕಲರವಿಸುತ್ತಿದ್ದವೇ ಹೊರತು ಯಾರ ಮಾತಿಗೂ ಕಿವಿಗೊಡಲಿಲ್ಲ. ಚೆನ್ನಾಗಿ ಮಾತನಾಡಿದ ಜಯಪ್ರಕಾಶ್ ಮಾವಿನಕುಳಿ ಮಾತಿಗೂ ಕಿವಿಗೊಡಲಿಲ್ಲ. ಯಾಕೆಂದರೆ ಸಾಹಿತ್ಯ ಪರಿಷತ್ ಅಧ್ಯಕ್ಷನೂ ಯಾರ ಮಾತಿಗೂ ಕಿವಿಗೊಡುವುದಿಲ್ಲ. ಜಿಲಾ,್ಲ ತಾಲ್ಲೂಕು ಮತ್ತು ಹೋಬಳಿ ಸಮ್ಮೇಳನಗಳು ಹೀಗೆ ಅಧ್ವಾನವಾಗಿರುವುದಕ್ಕೆ ಕಾರಣ ಈ ಸಂಸ್ಥೆಗಳು ಅಸಾಹಿತ್ಯಿಕ ವ್ಯಕ್ತಿಗಳ ಕೈಗೆ ಸಿಕ್ಕಿ ಹೋಗಿರುವುದೇ ಆಗಿದೆ.

ಈ ಅಸಾಹಿತ್ಯಿಕ ವ್ಯಕ್ತಿಗಳು ರಾಜಕಾರಣಿಗಳೂ ಆಗಿದ್ದಾರೆ. ಶಿವಮೊಗ್ಗದ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಆಹ್ವಾನ ಪತ್ರಿಕೆ ನೋಡಿದರೆ ಎಲ್ಲಾ ರಾಜಕಾರಣಿಗಳ ಪರಿಷೆಯಂತಿದೆ. ಸುದೈವಕ್ಕೆ ಬೆಳಗಾಂ ಅಧಿವೇಶನದ ಕಾರಣಕ್ಕೆ ಕರ್ಣಕಠೋರ ಭಾಷಣದಿಂದ ಜನ ಮುಕ್ತರಾದರು. ಅದೇನೆ ಆಗಲಿ, ಲಂಗುಲಗಾಮಿಲ್ಲದೇ ಹೋಗುತ್ತಿರುವ ಈ ಸಾಹಿತ್ಯ ಸಮ್ಮೇಳನಗಳು ಹೇಗೆ ಜರುಗಬೇಕೆಂಬ ನಿಯಮಗಳು ರೂಪುಗೊಳ್ಳದಿದ್ದರೆ ಇವು ಇನ್ನೂ ಅದ್ವಾನವೆದ್ದು ಹೋಗುತ್ತವೆ. ಅದಷ್ಟೆ ಅಲ್ಲ. ಕೆಲವು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರು ಈಗಾಗಲೇ ಭ್ರಷ್ಟರಾಗಿ ಹೋಗಿದ್ದಾರೆ. ಯರ್ರಿಸ್ವಾಮಿ ಎಂಬ ಜಿಲ್ಲಾಧ್ಯಕ್ಷ ಯಾವ ಕಾರ್ಯಕ್ರಮವನ್ನೂ ಮಾಡದೇ ಬೆಂಗಳೂರಿನ ಚಾಮರಾಜಪೇಟೆ ಸಮೀಪದಲ್ಲೇ ಹದಿನಾಲ್ಕು ಲಕ್ಷದ ಬೋಗಸ್ ಬಿಲ್ ತಯಾರಿಸಿಕೊಟ್ಟು ಕೋರ್ಟು ಮೆಟ್ಟಿಲು ಹತ್ತುವಂತಾಗಿದ್ದನ್ನು ಜಿಲ್ಲಾಧಿಕಾರಿಗಳು ಹೇಳಿದರು. ಮಂಡ್ಯದವನೊಬ್ಬ ಹಣ ಸಂಗ್ರಹಿಸಿಕೊಂಡು ವಿಧಾನಸಭೆ ಚುನಾವಣೆಗೆ ನಿಲ್ಲಲು ತಯಾರಿ ನಡೆಸಿದ್ದ. ನಾಡಿನ ತುಂಬ ಇಂತಹ ಭ್ರಷ್ಟರು ಸಾಹಿತ್ಯ ವೇದಿಕೆ ಆಕ್ರಮಿಸಿಕೊಂಡಿದ್ದಾರೆ. ಈ ಶಂಕರಪ್ಪ ಈ ತರವಲ್ಲದಿದ್ದರೂ ಸ್ವಜಾತಿ ಪ್ರೇಮಿ. ರಾಜಕಾರಣಿಗಳನ್ನ ಕಂಡರೆ ಅತೀವ ಪ್ರೀತಿ. ವಿದ್ವಾಂಸರನ್ನ ಕಂಡರೆ ಅಷ್ಟಕ್ಕಷ್ಟೆ. ಅದೇನೆ ಆದರೂ ಇವರ ವರಸೆಗಳು ಸಾಕು ಎನ್ನಿಸುತ್ತವೆ. ಇವರ ಆಯ್ಕೆಗೆ ಶ್ರಮಿಸಿದ್ದ ಡಾ. ಶ್ರೀಕಂಠ ಕೂಡಿಗೆಯವರು ವೇದಿಕೆಯಲ್ಲೇ ಇವರ ನಡವಳಿಕೆ ಖಂಡಿಸುವಂತಹ ಮಾತನಾಡಿದ್ದನ್ನು ಎಲ್ಲಾ ಸಾಹಿತಿಗಳು ಅನುಸರಿಸಿದರೆ ಈ ಸಾಹಿತ್ಯ ಪರಿಷತ್ ಸುಧಾರಿಸಬಹುದು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...