Homeಕರ್ನಾಟಕಹೆಬ್ಬಾರ್ ಹಿಕಮತ್ತಿನ ಹಕೀಕತ್!!

ಹೆಬ್ಬಾರ್ ಹಿಕಮತ್ತಿನ ಹಕೀಕತ್!!

- Advertisement -
- Advertisement -

| ನಹುಷ |

ಉತ್ತರ ಕನ್ನಡದ ರಾಜಕಾರಣದ ರಂಗು ಬದಲಾಗುತ್ತಿದೆ. ಕಾರಣವಿಷ್ಟೆ ಆಪರೇಷನ್ ಕಮಲಕ್ಕೆ ಬಿಕರಿಗೊಂಡು ರಾಜೀನಾಮೆ ಕೊಟ್ಟಿರುವ ಯಲ್ಲಾಪುರ-ಮುಂಡಗೋಡ ಶಾಸಕ ಶಿವರಾಮ ಹೆಬ್ಬಾರ್ ಒಬ್ಬರೇ ಅಲ್ಲದೆ ಮಿನಿಸ್ಟರ್ ಆರ್.ವಿ.ದೇಶ್‍ಪಾಂಡೆಯೂ ಬಿಜೆಪಿ ಸೆಳೆತಕ್ಕೆ ಸಿಲುಕಿದ್ದಾರೆಂಬ ಸುದ್ದಿ ದೊಡ್ಡ ಚರ್ಚೆಗೀಡಾಗಿ ಹೋಗಿದೆ. ಮಜಾ ಎಂದರೆ, ಕಾಂಗ್ರೆಸಲ್ಲಿದ್ದರೆ ತನ್ನ ಆಸೆಗೆಲ್ಲ ದೇಶಪಾಂಡೆ ಕಲ್ಲು ಹಾಕುತ್ತಾರೆಂಬ ಸಿಟ್ಟಿಂದ ಬಿಜೆಪಿ ಪಾಳೆಯಕ್ಕೆ ಎಂಟ್ರಿ ಹೊಡೆದಿದ್ದ ಹೆಬ್ಬಾರ್ ಅದೇ ಹಿತಶತ್ರು ದೇಶಪಾಂಡೆ ತನ್ನ ಬೆನ್ನಟ್ಟಿ ಬರುತ್ತಿರುವುದು ಕೇಳಿ ಬೆಚ್ಚಿಬಿದ್ದಿದ್ದಾರೆ!!

ಕಾಂಗ್ರೆಸ್‍ನಿಂದಲೇ ಸ್ಪರ್ಧಿಸಿ ಏದುಸಿರು ಬಿಡುತ್ತಲೇ ಗೆಲ್ಲುತ್ತಿದ್ದಂತೆಯೇ ಹೆಬ್ಬಾರ್, ದೇಶಪಾಂಡೆಗೆ ಸೆಡ್ಡು ಹೊಡೆದು ಮಂತ್ರಿಗಿರಿಗೆ ಲಾಬಿ ಮಾಡಿದರು. ಮತ್ತೊಂದೆಡೆ ಬಿಜೆಪಿಯವರಿಂದ ಆಪರೇಷನ್ ಮಾಡಿಸಿಕೊಳ್ಳಲು ಪ್ರಯತ್ನಿಸಿದರು. ಯಡ್ಡಿ ಮಗ ಹೆಬ್ಬಾರ್ ಹೆಂಡತಿಯೊಂದಿಗೆ ಲೇವಾದೇವಿ ವ್ಯವಹಾರಕ್ಕಿಳಿದ ಆಡಿಯೋ ಕೂಡ ಆಗ ಹೊರಬಂದಿತ್ತು. ಹೆಬ್ಬಾರ್ ಪರಿವಾರ ಮಾನ ಹರಾಜಾದರೂ ಇದೇ ಸಾಹಸ ಎಂಬಂತೆ ಬೀಗಿದರು. ಮಂತ್ರಿಗಿರಿಗಾಗಿ ಕಾಂಗ್ರೆಸ್ ಹೈಕಮಾಂಡನ್ನು ಬ್ಲಾಕ್‍ಮೇಲ್ ಮಾಡುತ್ತಲೇ ಇದ್ದರು. ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಉಪಾಧ್ಯಕ್ಷತೆ ಕೊಟ್ಟರೂ ಬೇಡವೆನ್ನಲಿಲ್ಲ ಈ ಆಸೆಬುರುಕ!!

ಕೇವಲ ಒಂದು ಸಾವಿರದ ನಾಲ್ಕುನೂರು ಮತಗಳಂತರದಿಂದ ಬಚಾವಾಗಿರುವ ಹೆಬ್ಬಾರ್‍ಗೆ ಮತ್ತೆ ಅದೇ ಕಾಂಗ್ರೆಸ್‍ನಿಂದ ಗೆಲ್ಲುತ್ತೇನೆಂಬ ಧೈರ್ಯ ಉಳಿದಿಲ್ಲ. ಎಲ್ಲಕ್ಕಿಂತ ಹೆಚ್ಚಾಗಿ ಬಳ್ಳಾರಿಯ ಕಬ್ಬಿಣದ ಅದಿರು ಕದ್ದು ವಿದೇಶಕ್ಕೆ ರಪ್ತು ಮಾಡಿದ ಕೇಸಲ್ಲಿ ಸಿಬಿಐ ವಿಚಾರಣೆ ಎದುರಿಸುತ್ತಿರುವ ಹೆಬ್ಬಾರ್ ಹಾಗೂ ಆತನ ಕುಲೋದ್ಧಾರಕ ವಿವೇಕ್ ಹೆಬ್ಬಾರ್ ಆ ಕುಣಿಕೆಯಿಂದ ಪಾರಾಗಲು ಬಲಾಢ್ಯ ಬಿಜೆಪಿ ಸೇರುವುದು ಅನಿವಾರ್ಯವಾಗಿದೆ. ಒಂದು ಕಾಲದಲ್ಲಿ ಪ್ರಾಥಮಿಕ ಶಿಕ್ಷಣವೂ ಮುಗಿಸಲಾಗದೆ ಲಾರಿ ಡ್ರೈವರಿಕೆ ಮಾಡಿಕೊಂಡಿದ್ದ ಹೆಬ್ಬಾರ್ ಇವತ್ತು ಕೋಟಿ-ಕೋಟಿ ತೂಗುವ ಅದಿರು ಉದ್ಯಮಿಯಾಗಿ, ರಾಜ್ಯ ಸರ್ಕಾರವನ್ನೇ ಉರುಳಿಸುವ ಪ್ರಭಲ ಶಾಸಕ ಸಾಹೇಬನಾಗಿ ಬೆಳೆದಿರುವುದು ಪ್ರಜಾಪ್ರಭುತ್ವದ ದುರಂತವೇ ಸರಿ!

ಹೆಬ್ಬಾರ್‍ಗೆ ಬಿಜೆಪಿ “ಸಂಸ್ಕೃತಿ” ಹೊಸತೇನೂ ಅಲ್ಲ. 1990ರ ದಶಕದ ಅಂತ್ಯದಲ್ಲಿ ಆತ ಜಿಲ್ಲಾ ಬಿಜೆಪಿ ಅಧ್ಯಕ್ಷತೆ ನಿಭಾಯಿಸಿದ್ದ. ಆದರೆ ಬಿಜೆಪಿಯಲ್ಲಿ ಆತನಿಗೆ ಕಾಗೇರಿ ಮಾಣಿ, ಅನಂತ್ಮಾಣಿ ಜತೆ ಏಗಲಾಗಲಿಲ್ಲ. ಸಂಸದ ಅನಂತ್ಮಾಣಿ ಶಿರಸಿಯಲ್ಲಿರುವ ಜಿಲ್ಲಾ ಬಿಜೆಪಿ ಕಚೇರಿಯಲ್ಲೇ ಈ ಹೆಬ್ಬಾರ್‍ಗೆ ಅಂದು ಕೆನ್‍ಕೆನ್ನೆಗೆ ಬಾರಿಸಿದ್ದ. ತಾನು ಬಿಜೆಪಿಯಲ್ಲಿನ್ನೂ ಬಚಾವಾಗಲಾರೆನೆಂದು ಅರಿತ ಹೆಬ್ಬಾರ್ ಕಾಂಗ್ರೆಸ್‍ನ ಪವರ್‍ಫುಲ್ ನಾಯಕಿಯಾಗಿದ್ದ ಮ್ಯಾಗಿಯ ಸೆರಗು ಹಿಡಿದು ಕಾಂಗ್ರೆಸ್‍ಗೆ ನುಸುಳಿದ್ದ. ಬಂದವನೇ ಡಬಲ್‍ಗೇಮ್ ಶುರುಹಚ್ಚಿಕೊಂಡಿದ್ದ. ಹಗಲು ಮ್ಯಾಗಿ ಬಿಡಾರದಲ್ಲಿದ್ದರೆ ರಾತ್ರಿ ದೇಶ್‍ಪಾಂಡೆ ಕ್ಯಾಂಪಿನಲ್ಲಿ ಕಾಣಿಸುತ್ತಿದ್ದ. ಇದರಿಂದ ಕೆರಳಿದ ದೇಶಪಾಂಡೆ ಆತನ ಬಾಲ ಕಟ್ ಮಾಡಲು ಮುಂದಾದರು. ಮ್ಯಾಗಿ ಕಾಂಗ್ರೆಸಲ್ಲಿ ಕಾವು ಕಳಕೊಳ್ಳುತ್ತಿದ್ದಂತೆಯೇ ಹೆಬ್ಬಾರ್ ದೇಶಪಾಂಡೆಗೆ ಆಹಾರವಾಗಿ ಹೋದ!!
ಕಳೆದ ಅಸೆಂಬ್ಲಿ ಇಲೆಕ್ಷನ್‍ನಲ್ಲಿ ಹೆಬ್ಬಾರ್ ಎದುರು ಬಿಜೆಪಿಯಿಂದ ಸ್ಪರ್ಧಿಸಿದ್ದ ವಿ.ಎಸ್.ಪಾಟೀಲ್ ತಲೆ ಕಂಡರೆ ಸಂಸದ ಮಾಣಿಗೆ ಆಗದು. ಹಾಗಾಗಿ ಆತ ಹಳೆ ವೈರತ್ವ ಮರೆತು ಸ್ವ-ಜಾತಿಯ ಹೆಬ್ಬಾರ್‍ಗೆ ಸಹಕರಿಸಿದ್ದ. ಈ ಹವ್ಯಕ ಹಿತಾಸಕ್ತಿಯ ರಾಜಕಾರಣದಲ್ಲಿ ಸ್ವರ್ಣವಲ್ಲಿ ಸ್ವಾಮಿಯ “ಮಂತ್ರಾಕ್ಷತೆ”ಯೂ ಕೆಲಸ ಮಾಡಿತ್ತು.

ರಾಮಕೃಷ್ಣ ಹೆಗಡೆ ಕಾಲದಿಂದ ನಿರಂತರವಾಗಿ ಒಂದಿಲ್ಲೊಂದು ಅಧಿಕಾರ ಅನುಭವಿಸುತ್ತಿರುವ ದೇಶಪಾಂಡೆ ಈಗ ಹಣ್ಣಾಗಿದ್ದಾರೆ. ಈ ಮುದಿ ಕಾಲದಲ್ಲಿ ಎರಡು ಆಸೆ ಆತನಲ್ಲಿದೆ. ಒಂದು ತಾನು ಮುಖ್ಯಮಂತ್ರಿ ಆಗಬೇಕೆಂಬುದು. ಮತ್ತೊಂದು, ತನ್ನ ಸುಪುತ್ರ ಪ್ರಶಾಂತನನ್ನು ಎಂಪಿ ಅಥವಾ ಎಮ್ಮೆಲ್ಲೆ ಮಾಡಬೇಕೆಂಬುದು. ಬಿಜೆಪಿ ಸೇರಿದರೆ ಸಿಎಂ ಆಗುವುದು ಕಷ್ಟ. ಹಾಗೆಯೇ ಕಾಂಗ್ರೆಸಲ್ಲುಳಿದರೆ ಮಗನ ಭವಿಷ್ಯಕ್ಕೆ ಮಾರಕ. ಹೀಗಾಗಿ ದೇಶಪಾಂಡೆ ಎರಡು ದೋಣಿಯ ಮೇಲೆ ಕಾಲಿಟ್ಟು ಹೊಯ್ದಾಡುತ್ತಿದ್ದಾರೆ. ಈಗೀಗ ಕಾಂಗ್ರೆಸಲ್ಲೂ ದೇಶಪಾಂಡೆಗೆ ಅಂಥ ಪ್ರಾಮುಖ್ಯತೆ ಸಿಗುತ್ತಿಲ್ಲ. ಆದರೂ ತಾನೇನಾದರೂ ರಾಜಿ ಅಭ್ಯರ್ಥಿಯಾಗಿ ಸಮ್ಮಿಶ್ರದ ಸಿಎಂ ಆಗಬಹುದೆಂಬ ಯೋಚನೆಯಿಂದ ದೇಶಪಾಂಡೆ ಗಡಿಬಿಡಿಗೆ ಬಿದ್ದಿದ್ದಾರೆ. ದೇವೇಗೌಡರ ಮನೆಗೆ ಹೋಗಿ ಗಂಟೆಗಟ್ಟಲೆ ಮಾತಾಡುತ್ತಿದ್ದಾರೆ. ಅತ್ತ ಕಾಂಗ್ರೆಸ್ ಹೈಕಮಾಂಡ್‍ಗೆ ತನ್ನನ್ನು ಸಿಎಂ ಕ್ಯಾಂಡಿಡೇಟ್ ಮಾಡಿದರೆ ಓಡಿಹೋಗಿರುವ ಶಾಸಕರಲ್ಲಿ ಕೆಲವರನ್ನಾದರೂ ಖರೀದಿಸಿ ತರುತ್ತೇನೆಂದು ಭರವಸೆ ಕೊಡುತ್ತಿದ್ದಾರೆ.
ಈ ನೈಚ್ಯಾನುಸಂಧಾನದಲ್ಲಿ ಸೋತರೆ ದೇಶಪಾಂಡೆಗೆ ಮಗನ ಭವಿಷ್ಯ ಮುಖ್ಯವಾಗುತ್ತಿದೆ. ಅಂದರೆ ಆತ ಬಿಜೆಪಿ ಪಾಲಾಗುವುದು ಪಕ್ಕಾ. ಅಮಿತ್ ಶಾ ಈಚೆಗೆ ಗೋವಾಕ್ಕೆ ಬಂದಾಗ ದೇಶಪಾಂಡೆ ರಹಸ್ಯವಾಗಿ ಸಂಧಿಸಿ ಬಂದಿದ್ದಾರೆ. ಸಮ್ಮಿಶ್ರ ಸರ್ಕಾರ ಪತನವಾಗುತ್ತಲೇ ಆತ ಬಿಜೆಪಿಗೆ ಅಧಿಕೃತವಾಗಿ ಪ್ರವೇಶ ಪಡೆಯುತ್ತಾರೆ. ಯಾವ ಪಕ್ಷ ಅಧಿಕಾರಕ್ಕೆ ಬಂದರೂ ಮಂತ್ರಿಯಾಗುವ ಯೋಗದ ದೇಶಪಾಂಡೆ ಈ ಬಾರಿ ಬಿಜೆಪಿಯಲ್ಲಿ ಮಂತ್ರಿಗಿರಿ ಕೇಳುತ್ತಿಲ್ಲ. ಬದಲಿಗೆ ತನ್ನ ಮಗ ಪ್ರಶಾಂತನಿಗೆ ಎಂಪಿ ಅಥವಾ ಹಳಿಯಾಳದ ಎಮ್ಮೆಲ್ಲೆ ಟಿಕೆಟ್ ಕೇಸರಿ ಪಕ್ಷದಿಂದ ಬಯಸುತ್ತಿದ್ದಾರೆ. ಹಳಿಯಾಳದಲ್ಲಿ ಬಗಲಲ್ಲಿರುವವ ದುಷ್ಮನ್-ಎಮ್ಮೆಲ್ಲೆ ಎಸ್.ಎಲ್.ಘೋಟನೇಕರ್ ತಿರುಗಿ ಬಿದ್ದರೆ ಬಿಜೆಪಿಯಿಂದಲೂ ತನ್ನ ಮಗ ಗೆಲುವು ಕಷ್ಟವೆಂಬ ಲೆಕ್ಕಾಚಾರವೂ ಆತ ಹಾಕಿದ್ದಾರೆ. ಬಹುಸಂಖ್ಯಾತ ಮರಾಠ ಸಮಾಜದ ಘೋಟನೇಕರ್ ತನ್ನ ಮಗನನ್ನು ಹಳಿಯಾಳದ ಭಾವಿ ಎಮ್ಮೆಲ್ಲೆ ಎಂದೇ ದೃಢವಾಗಿ ನಂಬಿದ್ದಾರೆ. ಹೀಗಾಗಿ ದೇಶಪಾಂಡೆ ತನ್ನ ಬೀಗ, ಪ್ರಶಾಂತನಿಗೆ ಹೆಣ್ಣುಕೊಟ್ಟು ಮಾವ ಮುಂಬೈನ ಪ್ರಭಾವಿ ರಾಜಕಾರಣಿ ಪ್ರಫುಲ್ ಪಟೇಲ್ ಬಲವೂ ಸೇರಿಸಿಕೊಂಡು ಮಗನಿಗೆ ಎಂಪಿ ಮಾಡುವ ಯೋಜನೆ ಹಾಕಿಕೊಂಡಿದ್ದಾರೆ.
ದೇಶಪಾಂಡೆ ಬಿಜೆಪಿ ಸೇರಿದರೆ ಏನಾಗುತ್ತದೆ? ಆತನ ಮಗನ ಭವಿಷ್ಯ ಬೆಳಗುತ್ತದೆ. ಶಿವರಾಮ ಹೆಬ್ಬಾರನ ಗ್ರಹಚಾರ ಮತ್ತೆ ಕೆಡುತ್ತದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....