Homeಸಾಮಾಜಿಕಶೂನ್ಯ ಬಂಡವಾಳ-ಶೂನ್ಯ ಸರಕು-ಅಪಾರ ಲಾಭ!

ಶೂನ್ಯ ಬಂಡವಾಳ-ಶೂನ್ಯ ಸರಕು-ಅಪಾರ ಲಾಭ!

- Advertisement -
- Advertisement -

ಮಾನವ ಸಮಾಜದಲ್ಲಿ ಆರ್ಥಿಕ ವ್ಯವಸ್ಥೆ ಬೆಳೆದುಬಂದಂತೆಲ್ಲಾ ಬಂಡವಾಳ ಶಾಹಿ ವ್ಯವಸ್ಥೆ ಬಂತು. ಆಧುನಿಕ ವ್ಯಾಪಾರ ಸಂಸ್ಥೆಯೂ ಬಂತು. ನಾವು ಉದಾಹರಣೆಗೆ ಎಕ್ಸ್ ಎಂಬ ಒಂದು ಸಾರ್ವಜನಿಕ ಬಂಡವಾಳದ ಒಂದು ಕಂಪೆನಿಯನ್ನು ಊಹಿಸಿಕೊಳ್ಳೋಣ. ಅದರಲ್ಲಿ ಸಾವಿರಾರು ಹೂಡಿಕೆದಾರರ ಬಂಡವಾಳ ಇರುತ್ತದೆ. ಒಬ್ಬರಿಗೆ ಇನ್ನೊಬ್ಬರ ಪರಿಚಯ ಇರುವುದಿಲ್ಲ. ಅದಕ್ಕೆ ಅಧ್ಯಕ್ಷರಾಗಿ ಒಂದು ಆಡಳಿತ ಮಂಡಳಿ ಇರುತ್ತದೆ. ಅದರ ಮೇಲಿನ ನಂಬಿಕೆಯಿಂದ ಜನರು ಹಣ ಹೂಡುತ್ತಾರೆ. ಆದರೆ ಅದಕ್ಕೆ ಇರುವುದು ಕಾಲ್ಪನಿಕ ಕಾನೂನು ಬದ್ಧ ಅಸ್ತಿತ್ವ ಮಾತ್ರ ಇರುವುದು ದೈಹಿಕ ಅಸ್ತಿತ್ವ ಇರುವುದಿಲ್ಲ. ನಮ್ಮ ಈ ‘ಎಕ್ಸ್’ ಕಂಪೆನಿ ಕಾರು ಉತ್ಪಾದಿಸುತ್ತದೆ ಎನ್ನೋಣ. ನೀವು ಕೊಂಡ ಕಾರು ಸರಿಯಿಲ್ಲವಾದರೆ ನೀವು ಕಂಪೆನಿಯ ಮೇಲೆ ಕೇಸು ಹಾಕಬಹುದು ಅದರ ಅಧ್ಯಕ್ಷ ಅದಾನಿಯೋ, ಅಂಬಾನಿಯ ಮೇಲಲ್ಲ. ಆದರೆ ಅದಕ್ಕೆ ಕಾನೂನಿನ ಅಸ್ತಿತ್ವ ಮಾತ್ರ ಇರುವುದು!
ಉದಾಹರಣೆಗೆ ಈ ‘ಎಕ್ಸ್’ ಕಂಪೆನಿಯ ಎಲ್ಲಾ ಕಾರುಗಳು, ಕಾರ್ಖಾನೆಗಳು ನಾಶವಾದರೂ ‘ಎಕ್ಸ್’ ಕಂಪೆನಿ ಕಾನೂನು ಬದ್ಧವಾಗಿ ಅಸ್ತಿತ್ವದಲ್ಲಿ ಇರುತ್ತದೆ. ಅದೇ ಹೆಸರಲ್ಲಿ ಮುಂದೆ ಕಾರ್ಖಾನೆ ಸ್ಥಾಪಿಸಿ, ಕಾರುಗಳನ್ನು ಉತ್ಪಾದನೆ ಮಾಡಿ ಮಾರಲು ಸಾಧ್ಯವಿದೆ! ಅದನ್ನು ಸೂಕ್ಷ್ಮವಾಗಿ ಯೋಚಿಸೋಣ. ನಮ್ಮ ದೇವರು ಮತ್ತು ಧರ್ಮಗಳಿಗೂ ಇರುವುದು ‘ಸಾಮೂಹಿಕ ಕಲ್ಪನೆಯ ಅಸ್ತಿತ್ವ’ ಮಾತ್ರ! ಅವುಗಳನ್ನು ಪ್ರತ್ಯಕ್ಷವಾಗಿ ತೋರಿಸಲಾಗದು. ಈ ಸಾಮೂಹಿಕ ಕಾಲ್ಪನಿಕ ಅಸ್ತಿತ್ವ’ವನ್ನೇ ನಮ್ಮ ಜೋಯಿಸರುಗಳು ಬಂಡವಾಳ ಮಾಡಿಕೊಂಡಿದ್ದಾರೆ!
ಕಂಪೆನಿಗೆ ಭೌತಿಕ ಅಸ್ತಿತ್ವ ಇಲ್ಲದಿದ್ದರೂ ಅದರ ಕಾರ್ಖಾನೆಗಳು ಭೌತಿಕ ಉತ್ಪಾದನೆಗಳನ್ನು ತಯಾರಿಸುತ್ತವೆ, ಮಾರುತ್ತವೆ, ಮಾರುಕಟ್ಟೆಯ ಪರಿಸ್ಥಿತಿಯನ್ನು ಆಧರಿಸಿ ಲಾಭ ಮಾಡುತ್ತವೆ; ಇಲ್ಲವೇ ನಷ್ಟ ಭರಿಸುತ್ತವೆ. ಇದು ಆಹಾರ ನಿತ್ಯೋಪಯೋಗಿ ವಸ್ತುಗಳಿಗೆ ಅನ್ವಯಿಸುತ್ತದೆ. ಈಗ ಭೌತಿಕ ಅಸ್ತಿತ್ವ ಇಲ್ಲದ ಸೇವೆಗಳು ಹುಟ್ಟಿಕೊಂಡಿವೆ.
ಆದರೆ ಈ ಪುರೋಹಿತರು ನೋಡಿ-ವರ್ಷಾಂತರಗಳಿಂದ ಭೌತಿಕ ಅಸ್ತಿತ್ವವೇ ಇಲ್ಲದ ಕಾಲ್ಪನಿಕ ಸರಕುಗಳನ್ನು ಮಾರಿ ಲಾಭಗಳಿಸುತ್ತಿದ್ದಾರೆ. ಅದಕ್ಕೆ ಬಂಡವಾಳವನ್ನೂ ಅಂದರೆ ಸಾಮಗ್ರಿಗಳು, ದಕ್ಷಿಣೆ, ಫೀಸು ಇತರ ವೆಚ್ಚಗಳನ್ನು ಭಕ್ತರೇ ಭರಿಸಬೇಕು! ಪ್ರತೀ ಕಾರ್ಖಾನೆಯಲ್ಲಿ ಏನಾದರೂ ಉತ್ಪನ್ನ ಹುಟ್ಟುತ್ತದೆ. ಇವರ ಉತ್ಪನನ್ ಅಸ್ತಿತ್ವದಲ್ಲೇ ಇಲ್ಲದ ಪಾಪ, ಪುಣ್ಯ, ಪರಿಹಾರ, ಶ್ರೇಯಸ್ಸು ಮುಂತಾದ ಕಾಲ್ಪನಿಕ ಸರಕುಗಳೇ! ಇವನ್ನು ಅವರಿಗೆ ತೋರಿಸಲಾಗುವುದಿಲ್ಲ! ನಿಮಗೆ ನೋಡಲು ಆಗುವುದಿಲ್ಲ! ಕೇವಲ ಭ್ರಮಿಸಬಹುದು ಅಷ್ಟೇ!
ಉದಾಹರಣೆಗೆ ಯಾವುದೋ ಜೋಯಿಸರ ಮಾತು ಕೇಳಿ ನೀವು ಪೂಜೆ ಮಾಡಿಸಿದರೆನ್ನಿ. ಎಲ್ಲಾ ಸಾಮಗ್ರಿ, ವೆಚ್ಚ ನೀವೇ ಭರಿಸಬೇಕು. ಉತ್ಪನ್ನ? ನಿಮಗೆ ಏನು ಸಿಕ್ಕಿತು ಎಂಬುದನ್ನು ನೀವು ನೋಡಲು ಸಾಧ್ಯವೆ? ಆದರೆ ಜೋಯಿಸರಿಗೆ ಮಾತ್ರ ಭೌತಿಕವಾಗಿ ‘ಗಂಟು’ ಸಿಗುತ್ತದೆ.
ಈ ಕಾಲ್ಪನಿಕ ಸರಕುಗಳನ್ನು ನಮ್ಮ ಜೋಯಿಸರುಗಳು ಹೇಗೆ ಮಾರ್ಕೆಟ್ ಮಾಡುತ್ತಿದ್ದಾರೆ ನೋಡಿ. ನಮ್ಮ ನಂಬಿಕೆಯೇ ಇದಕ್ಕೆ ಆಧಾರ. ಪ್ರಧಾನಮಂತ್ರಿ ಬೇರೆಬೇರೆ ಖಾತೆಗಳನ್ನು ಬೇರೆಬೇರೆಯವರಿಗೆ ಹಂಚುವಂತೆ ಬೇರೆಬೇರೆ ದೇವರಿಗೆ ಹಂಚಿಬಿಟ್ಟಿದ್ದಾರೆ. ಸೃಷ್ಟಿ, ಪಾಲನೆ, ಲಯ ಒತ್ತಟ್ಟಿಗಿರಲಿ- ಧನ, ವಿದ್ಯೆ, ಸಂತಾನ ಇತ್ಯಾದಿಯಾಗಿ ನಿತ್ಯ ಜೀವನದ ವಿಷಯಗಳಿಗೂ ಒಬ್ಬೊಬ್ಬ ದೇವರು! ಹಣಕ್ಕೆ ಲಕ್ಷ್ಮಿ, ವಿದ್ಯೆಗೆ ಸರಸ್ವತಿ ಹೀಗೆ! ಇವರಲ್ಲಿ ಲಕ್ಷ್ಮಿಗಂತೂ ಹಲವಾರು ಖಾತೆಗಳು. ಧನಲಕ್ಷ್ಮಿ, ಧಾನ್ಯಲಕ್ಷ್ಮಿ, ವಿದ್ಯಾಲಕ್ಷ್ಮೀ, ಗೃಹಲಕ್ಷ್ಮೀ, ಸಂತಾನಲಕ್ಷ್ಮೀ ಮುಂತಾದ ಹೆಸರುಗಳಲ್ಲೇ ಇದು ಸ್ಪಷ್ಟವಾಗುತ್ತದೆ. ಆಸ್ತಿಕರ ಪಾಲಿಗೆ ದೇವರೊಬ್ಬನೆ-ಆತ ಪರಮಾತ್ಮ ಎಂದು ಘೋಷಿಸಿ, ದೇವರನ್ನು ನಿರಾಕಾರ-ನಿರ್ಗುಣ’ ಎಂದು ಸಾರಿದ ಧರ್ಮವೊಂದರಲ್ಲಿ ಲೆಕ್ಕಕ್ಕೆ ಸಿಗದಷ್ಟು ದೇವರನ್ನು ಸೃಷ್ಟಿಸಿ, ಅವರಿಗೆ ತಾವೇ ಒಂದೊಂದು ಕರ್ತವ್ಯವನ್ನು ಹೇರಿ, ಒಬ್ಬೊಬ್ಬರಿಗೆ ಒಂದೊಂದು ರೀತಿಯ ಪೂಜೆಗಳನ್ನು ಆವಿಷ್ಕರಿಸಿದ ಪುರೋಹಿತರಷ್ಟು ಬುದ್ಧಿವಂತರು, ಮಹಾ ವಿಜ್ಞಾನಿಗಳು ಪ್ರಪಂಚದಲ್ಲಿ ಬೇರಾರೂ ಇಲ್ಲ!
ವಿಜ್ಞಾನದ ಆವಿಷ್ಕಾರಗಳು! ‘ವರ್ಚುವಲ್ ವಲ್ರ್ಡ್’! ವಾವ್ ನಾವು, ನಮ್ಮ ಮಕ್ಕಳು ಮೊಬೈಲ್ ಫೋನಿನಲ್ಲಿ, ತಲೆಗೆ ಕಿರೀಟದಂತಹ ಕಿರೀಟ ಹಾಕ್ಕೊಂಡು, ಎಂತೆಂತೆಲ್ಲವನ್ನು ಅನುಭವಿಸಬಹುದು ಈ ಪ್ರಪಂಚವನ್ನೇ ಡ್ರಗ್ ಸೇವಕದಂತೆ ಮರೆಯಬಹುದು. ನಿಜವನ್ನು ಭ್ರಮೆಯಲ್ಲಿ ಕಾಣಬಹುದು. ಕಾರ್ಲ್‍ಮಾಕ್ರ್ಸ್ ಧರ್ಮವನ್ನು ಅಫೀಮು ಎಂದು ಕರೆದಾಗ ಅವನಿಗೆ ಏನಾದರೂ ಈ ರೀತಿ ಮುಂದಾಲೋಚನೆ ಇದ್ದಿರಬಹುದೆ? ಭಾರತದಲ್ಲಿ ಜಾತಿಪಾತಿ-ಚಪಾತಿ ಭಾರತದಲ್ಲಿ ಬಂಡವಾಳ ಇಲ್ಲದೆ, ಅವನ ಕಾಲಕ್ಕೇ ಬೆಳೆದಿರದ ಬಂಡವಾಳ ರಹಿತ ಶೋಷಣೆ ವ್ಯವಸ್ಥೆ ಇಲ್ಲಿ ಆಳವಾಗಿ ಬೇರೂರಿದೆ ಎಂದು ಕಾರ್ಲ್‍ಮಾಕ್ರ್ಸ್‍ಗೆ ಗೊತ್ತಿರಬಹುದೆ? ಹಾಂ! ಇಲ್ಲ!! ಅದಕ್ಕೆ ಹೇಳುವುದು-ಬ್ರಹ್ಮಜ್ಞಾನ-ಬ್ರಾಹ್ಮಣ ಸಂಜಾತರಿಗೆ(ಗೆಳೆಯರು ಕ್ಷಮಿಸಿ) ಮಾತ್ರ ಸಿಗುವಂತದ್ದು! ಅದರಿಂದಲೇ ಅವರು ಅತ್ಯಾಧುನಿಕ ವೈಜ್ಞಾನಿಕ, ಆರ್ಥಿಕ, ಪಾರಮಾರ್ಥಿಕ ಆವಿಷ್ಕಾರಗಳನ್ನು ಮಾಡಿದ್ದಾರೆ! ಅದನ್ನು ಶಿವನ ಸರ್ಜರಿ, ಅಣುಬಾಂಬ್-ಬ್ರಹ್ಮಾಸ್ತ್ರ-ಇತ್ಯಾದಿಯಾಗಿ ಸಾವಿರಾರು ರೀತಿಯಲ್ಲಿ ನಂಬಿದ್ದಾರೆ! ಯಾವುದೇ ರಾಕೆಟ್ ಹಾರಿಸಲು ಫ್ಯುಯೆಲ್-ಇಂಧನ ಬೇಕು. ಬಾಂಬ್ ತಯಾರಿಸಲೂ ಕೆಲವು ಮೂಲವಸ್ತುಗಳು-ಅಣುಬಾಂಬಿಗೆ ಕಾಲ್ಪನಿಕ ದೋಷಗಳೇ ಸಾಕು! ಬಂಡವಾಳ ನಿಮ್ಮದೇ! ಹೂವು-ಗೀವು-ಅದೂ-ಇದು! ನೀವು ಪ್ರಾನ್ಸ್-ಅಮೆರಿಕಾದ ಗುಲಾಮರಾಗಿರಬೇಕಾಗಿಲ್ಲ! ಅವರೇ ನಿಮಗೆ ರಿಡಕ್ಷನ್-ಕಮೀಷನ್ ಕೊಡುತ್ತಾರೆ! ಇಸ್ರೇಲನ್ನು ಮರೆಯದಿರಿ! ಕೇರಳ ಮಂತ್ರವಾದಿಗಳಂತೆ ಅವರೇ ಎಲ್ಲವನ್ನೂ ಮಾಡುತ್ತಾರೆ! ನೀವು ಸೂಟುಹಾಕಿ ಪೂಜೆಗೆ ಕುಳಿತರೆ ಪಡು! ನಾವು ಪೂಜೆಯಿಂದ ಮಳೆ ಬರಿಸಬಲ್ಲೆವು! ವಿನಾಶ ಮಾಡಬಲ್ಲೆವು! ದೇಶವನ್ನು ಬರೇ ಮಂತ್ರ ಯಾಗ ಹೋಮ ಹವನಗಳಿಂದ ನಿವಾರಿಸಬಲ್ಲೆವು! ಹೀಗೆ ಹೇಳುವ ಇವರಿಗೇ ನಮ್ಮ ಎಲ್ಲಾ ರಕ್ಷಣಾ ಬಜೆಟ್ ಕೊಟ್ಟುಬಿಡಿ! ಇವೆಲ್ಲವನ್ನೂ ನಂಬುವ ದೇಶ ರಾಜಕೀಯವಗಿ ಎಷ್ಟು ಪ್ರಬುದ್ಧವಾಗಿರಬಹುದು?
ವಿಜ್ಞಾನಿಗಳೇ ಜನಿವಾರಧಾರಿಗಳಾಗಿ-ಒಂದು ತಾವೇ ಸೃಷ್ಟಿಸಿದ ರಾಕೆಟನ್ನು ಉಡಾಯಿಸುವಾಗ ಒಂದು ಸರಳ ಪ್ರಾರ್ಥನೆ ಅಥವಾ ವಿಶ್ ಬಿಟ್ಟು, ಹೋಮ ಹವನಗಳನ್ನು ಮಾಡುವುದಾದರೆ, ಪುರಾಣಗಳ ಎಲ್ಲಾ ಆಗ್ನೇಯಾಸ್ತ್ರ ಬ್ರಹ್ಮಾಸ್ತ್ರಗಳನ್ನು ಹುಡುಕಲು ಬೊಮ್ಮನ್ ವಿಶ್ವವಿದ್ಯಾನಿಲಯ ತೆರೆಯಬಹುದು! ಸಂಶೋಧನೆಯ ಹಣ ವಿಜ್ಞಾನಿಗಳಿಗೆ ಯಾಕೆ ಹೋಗಬೇಕು? ಅದು ನಮ್ಮ ಜ್ಯೋತಿಷ್ಯದವರ ಪಾಲಲ್ಲವೇ? ಕರ್ನಾಟಕ ಸರಕಾರ ಇದಕ್ಕೆ ಮುಂದಾಗಬೇಕು!
ಎಲ್ಲಾ ಜ್ಯೋತಿಷಿಗಳನ್ನು ಒಟ್ಟು ಸೇರಿಸಿ ಒಂದು ಸವೇಶನ ಮಾಡಿಸಿ! ಭಾಗವಹಿಸಿದವರಿಗೆಲ್ಲಾ ಒಂದೊಂದು ಪಾರ್ಟಿಯ ಸರ್ಟಿಫಿಕೇಟ್ ಕೊಡಿ! ಲೈಸನ್ಸ್ ಅದತ್ಯವಿಲ್ಲ! ರಾಜ್ಯಕ್ಕೆ ದೇಶಕ್ಕೆ ಬೇಕಾದ ಎಲ್ಲಾ ಜ್ಯೋತಿಷ್ಯ ಕೇಳಿಕೊಳ್ಳಿ! ಎದಕ್ಕೆ ಯಡ್ಡಿ,ಚಡ್ಡಿ, ಸಿದ್ದು, ಕುಮ್ಮಿ, ಮೊದ್ದು, ಪಪ್ಪು, ಚಾ ಎಂದೇನೂ ಇಲ್ಲ! ಎಲ್ಲರೂ ಬಂದು ದೇವರ ಸರಕಾರವನ್ನು ‘ಜನರ ಸರಕಾರ’ ಮಾಡಿ!
ಇಷ್ಟೆಲ್ಲಾ ಹೇಳಿದರೂ ಜ್ಯೋತಿಷ್ಯವನ್ನು ನಂಬುವವರು ನಂಬುತ್ತಲೇ ಇರಲಿ! ಸರಕಾರವೇ ಈ ಬರವಣಿಗೆಯ ವಿರುದ್ಧ ನಿಂತು ಪೋಷಿಸುತ್ತಿರುವಾಗ-ಓಟು ಕೊಟ್ಟು ಗೆಲ್ಲಿಸುವ ಜನಸಾಮಾನ್ಯರು ಬದಲಾಗುತ್ತಾರೋ ನನಗೆ ಸಂಶಯ! ಈ ತನಕ ನನ್ನ ಪ್ರವರ ಓದಿದ್ದಕ್ಕೆ ಧನ್ಯವಾದ!
ಮುಂದೆ ‘ನ್ಯಾಯಪಥ’ ಅವಕಾಶ ಕೊಟ್ಟರೆ ಮತ್ತೆ ಭೇಟಿ!

– ನಿಖಿಲ್ ಕೋಲ್ಪೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...