Homeಮುಖಪುಟಶೃಂಗಾರ-ಅಶ್ಲೀಲತೆ; ನಿರ್ಧರಿಸುವವರು ಯಾರು? ಒಟಿಟಿ/ಆನ್‌ಲೈನ್ ವೇದಿಕೆಗಳಲ್ಲಿ ಕಾಮಪ್ರಚೋದಕ ದೃಶ್ಯಗಳು ಹೆಚ್ಚಳವಾಗಿವೆಯೇ?

ಶೃಂಗಾರ-ಅಶ್ಲೀಲತೆ; ನಿರ್ಧರಿಸುವವರು ಯಾರು? ಒಟಿಟಿ/ಆನ್‌ಲೈನ್ ವೇದಿಕೆಗಳಲ್ಲಿ ಕಾಮಪ್ರಚೋದಕ ದೃಶ್ಯಗಳು ಹೆಚ್ಚಳವಾಗಿವೆಯೇ?

- Advertisement -
- Advertisement -

ಅಶ್ಲೀಲ ಚಿತ್ರಗಳನ್ನು ತಯಾರಿಸಿ, ಅವುಗಳನ್ನು ಪ್ರಸಾರ ಮಾಡಿದ ಆರೋಪದಲ್ಲಿ ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಅವರ ಪತಿ, ಉದ್ಯಮಿ ರಾಜ್ ಕುಂದ್ರಾ ಬಂಧನವಾದ ಬಳಿಕ ದೇಶದಲ್ಲಿ ಹೆಚ್ಚಾದ ಚರ್ಚೆಯ ವಿಷಯ ಯಾವುದು ಶೃಂಗಾರ, ಯಾವುದು ಅಶ್ಲೀಲ ಎಂಬುದು. ನನ್ನ ಪತಿ ತಯಾರಿಸಿ ಪ್ರಸಾರ ಮಾಡಿರುವುದು ಶೃಂಗಾರದ ವಿಷಯಗಳನ್ನು ಅಶ್ಲೀಲ ಚಿತ್ರಗಳನ್ನಲ್ಲ ಎಂದು ಶಿಲ್ಪಾ ಶೆಟ್ಟಿ ಹೇಳಿದ್ದರು.

ಇನ್ನು ರಾಜ್ ಕುಂದ್ರಾ ಅವರಿಗೆ ಸಂಬಂಧಿಸಿದ ಆಪ್‌ಗಳಲ್ಲಿ ಇದ್ದ ವಿಡಿಯೋಗಳಲ್ಲಿ ನಟಿಸಿದ್ದ ನಟಿ ಗೆಹನಾ ವಶಿಷ್ಠ್ ಕೂಡ, ’ರಾಜ್ ಕುಂದ್ರಾರಿಗೆ ಸಂಬಂಧಿಸಿದ ಆಪ್ ಹಾಟ್‌ಶಾಟ್ಸ್‌ನಲ್ಲಿನ ವಿಷಯಗಳು ಶೃಂಗಾರಕ್ಕೆ ಸಂಬಂಧಿಸಿದ್ದವು. ಅವು ಅಶ್ಲೀಲ ಚಿತ್ರಗಳಲ್ಲ’ ಎಂದು ಹಲವು ಬಾರಿ ವಾದಿಸಿದ್ದಾರೆ. ಇನ್ನು ಒಂದು ಹೆಜ್ಜೆ ಮುಂದಕ್ಕೆ ಹೋಗಿದ್ದ ನಟಿ, ಸಾಮಾಜಿಕ ಜಾಲತಾಣದಲ್ಲಿ ಬೆತ್ತಲೆಯಾಗಿ ಲೈವ್ ಬಂದು ’ಈಗ ನಾನು ಅಶ್ಲೀಲವಾಗಿ ಕಾಣಿಸುತ್ತಿದ್ದೇನಾ’ ಎಂದು ಪ್ರಶ್ನಿಸಿದ್ದರು.

ರಾಜ್ ಕುಂದ್ರಾ ಅವರ ವಕೀಲರು ಹಾಗೂ ಪ್ರಕರಣದಲ್ಲಿ ಭಾಗಿಯಾಗಿರುವ ಸಹವರ್ತಿಗಳು ಇದುವರೆಗೆ ಹೇಳುತ್ತಾ ಬಂದಿರುವುದೇನೆಂದರೆ ಕುಂದ್ರಾ ಕಂಪೆನಿಗಳು, ಸಹವರ್ತಿಗಳು ಹಾಗೂ ಅವರ ಮೊಬೈಲ್ ಅಪ್ಲಿಕೇಶನ್ ಹಾಟ್‌ಶಾಟ್ಸ್‌ನಲ್ಲಿ ಅಶ್ಲೀಲತೆಯ ಕಂಟೆಂಟ್ ಉತ್ಪಾದನೆಯಲ್ಲಿ ಭಾಗಿಯಾಗಿಲ್ಲ. ಬದಲಿಗೆ ಕಾಮಪ್ರಚೋದಕ, ಶೃಂಗಾರ ಚಿತ್ರಗಳ ನಿರ್ಮಾಣ ಮಾಡಿರುವುದಾಗಿ ಅವರು ಸಮರ್ಥಿಸಿಕೊಂಡಿದ್ದಾರೆ.

ಆದರೆ, ಒಟಿಟಿ ಪ್ಲಾಟ್‌ಫಾರ್ಮ್‌ಗಳಲ್ಲಿನ ವೆಬ್ ಸಿರೀಸ್, ಹಲವು ಆನ್‌ಲೈನ್ ಅಪ್ಲಿಕೇಶನ್‌ಗಳಲ್ಲಿ ಬಿಡುಗಡೆಯಾಗುವ ಚಿತ್ರಗಳು, ವೆಬ್ ಸರಣಿಗಳ ಬಗ್ಗೆ ಯಾರು ಚಕಾರವೆತ್ತುತ್ತಿಲ್ಲ. ಲೈಂಗಿಕ ವಿಚಾರಗಳೇ ತುಂಬಿತುಳುಕುವ ಹಲವು ಆಪ್‌ಗಳು ಭಾರತದಲ್ಲಿವೆ. ಇವುಗಳಲ್ಲಿ ಇರುವ ವಿಷಯ ಅಶ್ಲೀಲವೇ-ಶೃಂಗಾರವೇ ಎಂಬುದನ್ನು ನಿರ್ಧರಿಸುವವರು ಯಾರು? ಇವು ಕಾಮಪ್ರಚೋದಕದ ದೃಶ್ಯಗಳು, ಅಶ್ಲೀಲತೆಯಲ್ಲ ಎಂದು ಈ ಪ್ಲಾಟ್ಫಾರ್ಮ್‌ಗಳು ಸಮರ್ಥಿಸಿಕೊಳ್ಳುತ್ತವೆ.

ALTbalaji ಎನ್ನುವ ಪ್ಲಾಟ್ಫಾರ್ಮ್ ಒಂದರಲ್ಲಿ ಪ್ರಸಾರವಾದ ’ಗಂಧೀ ಬಾತ್’ ಇಂತಹದ್ದೆ ಕಂಟೆಂಟ್ ಹೊತ್ತ ವೆಬ್ ಸಿರೀಸ್. ಇದು ಎಷ್ಟು ಜನಪ್ರಿಯವಾಯಿತೆಂದರೆ ಇದೇ ಹೆಸರಲ್ಲಿ 5 ಸಿರೀಸ್‌ಗಳು ಬಂದವು. ಬೈ ಸೆಕ್ಷುಯಲ್
ಕಥಾಹಂದರ ಹೊಂದಿದ್ದ ಈ ವೆಬ್ ಸಿರೀಸ್‌ನಲ್ಲಿ ನಟಿಸಿದ ಬಳಿಕ ತಮ್ಮ ಅಭಿಮಾನಿಗಳ ಸಂಖ್ಯೆಯು ಹೆಚ್ಚಾಯಿತು ಎಂದು ನಟಿ ಅನ್ವಿಶಿ ಜೈನ್ ಹೇಳಿಕೊಂಡಿದ್ದಾರೆ.

ಗಂಧೀ ಬಾತ್‌ನ ಯಶಸ್ಸು ಇಂತಹ ಪ್ಲಾಟ್ಫಾರ್ಮ್‌ಗಳಲ್ಲಿ ಒಂದು ಹೊಸ ಪ್ರಕಾರವನ್ನೇ ಹುಟ್ಟುಹಾಕಿತು. ಇದರ ಪರಿಣಾಮವಾಗಿ ಜನಪ್ರಿಯ Zee5 Mnn ಕೂಡ ’ವರ್ಜಿನ್ ಭಾಸ್ಕರ್’ ಎಂಬ ವೆಬ್ ಸಿರೀಸ್ ಆರಂಭಿಸಿತ್ತು. Voot ಒಟಿಟಿಯಲ್ಲಿ ’ಫೂ ಸೆ ಫ್ಯಾಂಟಸಿ’ ಎಂಬ ಸಿರೀಸ್ ಪ್ರಾರಂಭವಾಯಿತು. ಇವೆಲ್ಲವೂ ಒಳಗೊಂಡಿದ್ದು ಕಾಮಪ್ರಚೋದಕತೆಯನ್ನೇ. ಅಂದರೆ, ಇದು ಅಶ್ಲೀಲವಲ್ಲ ಎಂಬುದು ಈ ಪ್ಲಾಟ್ಫಾರ್ಮ್‌ಗಳ ವಾದವೂ ಕೂಡ.

ULLU ಪ್ಲಾಟ್ಫಾರ್ಮ್ ಕೂಡ ಇಂತಹದ್ದೆ ಕಂಟೆಂಟ್‌ಅನ್ನು ಹೆಚ್ಚು ಪ್ರಸಾರ ಮಾಡುತ್ತದೆ. ಭೋಜಪುರಿ, ಮರಾಠಿ ಮತ್ತು ಇತರ ಸ್ಥಳೀಯ ಭಾರತೀಯ ಭಾಷೆಗಳಲ್ಲಿ ಹಲವು ವೆಬ್ ಸಿರೀಸ್‌ಗಳನ್ನು ಬಿಡುಗಡೆ ಮಾಡಿದೆ. ’ಪಾಂಚಾಲಿ’, ’ಕಸಕ್’, ’ವುಲ್ಫ್ ಆಫ್ ಬಾಲಿವುಡ್’ ಕಾಮಪ್ರಚೋದಕತೆ ಕಥಾಹಂದರವನ್ನು ಹೊಂದಿರುವ ಧಾರಾವಾಹಿಗಳಾಗಿವೆ.

ಇವುಗಳ ಜನಪ್ರಿಯತೆ ಎಷ್ಟರಮಟ್ಟಿಗೆ ಬೆಳೆಯಿತೆಂದರೆ, ಹಲವಾರು ಮುಖ್ಯವಾಹಿನಿಯ ನಟರು ಕೂಡ ಈ ಬಗೆಯ ಕಾಮಪ್ರಚೋದಕ ಚಿತ್ರಗಳಲ್ಲಿ ನಟಿಸಲು ಆರಂಭಿಸಿದ್ದರು. ಉದಾಹರಣೆಗೆ, ಅಮೆಜಾನ್ ಪ್ರೈಮ್ ವಿಡಿಯೊದ ವೆಬ್ ಸಿರೀಸ್ ’ರಸ್ಬರಿ’ಯಲ್ಲಿ ನಟಿ ಸ್ವರಾ ಭಾಸ್ಕರ್ ನಟಿಸಿದ್ದಾರೆ, ಅಂಶುಮಾನ್ ಝಾ ’ಮಾಸ್ತರಂ’ನಲ್ಲಿ ನಟಿಸಿದ್ದಾರೆ, ನಟಿ ಅನುಪ್ರಿಯಾ ಗೋಯೆಂಕಾ ULLUವಿನಲ್ಲಿ ಬರುವ ’ಪಾಂಚಾಲಿ’ಯಲ್ಲಿ ಪ್ರಮುಖ ಪಾತ್ರ ನಿರ್ವಹಿಸಿದ್ದರು. ಮಿನಿಸ್ಸಾ ಲಂಬಾ ’ಕಸಕ್’ನ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.

ಶೃಂಗಾರದ ವಿಷಯವನ್ನೇ ಪ್ರಸಾರ ಮಾಡುವ ಈ ಆಪ್‌ಗಳ ಹೊರತಾಗಿಯೂ ಅಮೆಜಾನ್, ನೆಟ್‌ಫ್ಲಿಕ್ಸ್, ಹಾಟ್‌ಸ್ಟಾರ್, Zee5ನಂತಹ ಒಟಿಟಿಗಳಲ್ಲಿ ಪ್ರಸಾರವಾಗುವ ವೆಬ್ ಸಿರೀಸ್‌ಗಳಲ್ಲಿಯೂ ಇಂತಹ ವಿಷಯಗಳ ಕಂಟೆಂಟ್ ಹೇರಳವಾಗಿದೆ. ಸೆನ್ಸಾರ್ ಇಲ್ಲದ ದೃಶ್ಯಗಳಿಗೆ ಯಾವುದೇ ಬರವಿಲ್ಲ. ಕಲಾವಿದರು ಕೂಡ ಮೈಚಳಿ ಬಿಟ್ಟು ನಟಿಸುವುದನ್ನು ಈ ವೆಬ್ ಸಿರೀಸ್‌ಗಳಲ್ಲಿ ಕಾಣಬಹುದು. ಅದೆಲ್ಲವೂ ಕಾಮಪ್ರಚೋದಕ ಅಥವಾ ಶೃಂಗಾರದ ಕೆಟಗರಿಗೆ ಬಂದು ನಿಲ್ಲತ್ತವೆ. ಇದನ್ನೆಲ್ಲಾ ವ್ಯಾಖ್ಯಾನಿಸುವ ಒಂದು ಸೂಸ್ತವಾದ ಕಾನೂನು ಇಲ್ಲಿಲ್ಲ.

ಇಂತಹದ್ದೇ ಪ್ರಕರಣದಲ್ಲಿಯೇ ಒಂದು ಬಾರಿ ಜೈಲು ಸೇರಿ ಈಗ ರಾಜ್ ಕುಂದ್ರಾ ಪ್ರಕರಣದಲ್ಲಿ ಮತ್ತೆ ಕೇಸ್ ದಾಖಲಿಸಿಕೊಂಡಿರುವ ಗೆಹನಾ ವಶಿಷ್ಠ್ ನಮ್ಮ ದೇಶದಲ್ಲಿ ಯಾವುದು ಅಶ್ಲೀಲ, ಯಾವುದು ಪೋರ್ನ್, ಯಾವುದು ಕಾಮಪ್ರಚೋದಕ, ಯಾವುದು ಶೃಂಗಾರ ಎಂಬುವುದಕ್ಕೆ ಸರಿಯಾದ ವ್ಯಾಖ್ಯಾನವಿಲ್ಲ. ಇದರ ಬಗ್ಗೆ ಸರಿಯಾಗಿ ನಿಯಮಗಳನ್ನು ಮಾಡದೇ ನಮ್ಮ ಮೇಲೆ ಗೂಬೆ ಕೂರಿಸುವುದು ಸರಿಯಲ್ಲ ಎಂದು ವಾದಿಸಿದ್ದಾರೆ.

ಒಟಿಟಿ ಪ್ಲಾಟ್ಫಾರ್ಮ್‌ಗಳು ಭಾರತದಲ್ಲಿ ಕಠಿಣ ಸೆನ್ಸಾರ್ಶಿಪ್ ನಿಯಮಗಳಿಂದ ಸ್ವಾತಂತ್ರ್ಯವನ್ನು ಆನಂದಿಸುತ್ತಿರುವಾಗ, ಈ ವರ್ಷ ಫೆಬ್ರವರಿಯಲ್ಲಿ ಸರ್ಕಾರವು ಡಿಜಿಟಲ್ ಕಂಟೆಂಟ್ ಕಂಪ್ಲೇಂಟ್ ಕೌನ್ಸಿಲ್‌ಅನ್ನು (DCCC) ಸ್ಥಾಪಿಸಿದೆ. ಮಾರ್ಚ್‌ನಲ್ಲಿ, ಮಾಹಿತಿ ಮತ್ತು ಪ್ರಸಾರ ಸಚಿವಾಲಯವು ಈ ಉದ್ಯಮಕ್ಕೆ ಸ್ವಯಂ ಆಡಳಿತದ ಕೋಡ್-ಆಫ್-ಕಂಟೆಂಟ್‌ಅನ್ನು ಸ್ಥಾಪಿಸಲು ಒಂದು ಅಂತಿಮ ಸೂಚನೆಯನ್ನು ನೀಡಿತು. ಆದರೆ, ಹಲವಾರು ವೇದಿಕೆಗಳು ಇದನ್ನು ಪರಿಗಣಿಸಲು ಸಮಯವನ್ನು ಕೋರಿವೆ.

ಸುಪ್ರೀಂಕೋರ್ಟ್ ವಕೀಲರಾದ ಖುಶ್ಬೂ ಜೈನ್ ಹೇಳುವಂತೆ ಕೇಬಲ್ ಟೆಲಿವಿಷನ್ ಕಾಯ್ದೆ 1995ರ ಪ್ರಕಾರ ಟಿವಿಯಲ್ಲಿ ಅಶ್ಲೀಲ ದೃಶ್ಯಗಳ ಪ್ರಸಾರಕ್ಕೆ ನಿರ್ಬಂಧನೆ ಇದೆ. ಇಂತಹ ಚಿತ್ರಗಳನ್ನು ಇಲ್ಲವೇ ಸಂಬಂಧಿತ ವಿಷಯವನ್ನು ಪ್ರಸಾರ ಮಾಡಿದಲ್ಲಿ ಶಿಕ್ಷೆ ಹಾಗೂ ದಂಡಕ್ಕೆ ಒಳಗಾಗಬೇಕಾಗುತ್ತದೆ ಎಂದು ಜೈನ್ ವಿವರಿಸಿದ್ದಾರೆ.

ಆದರೆ ಆನ್‌ಲೈನ್ ಪೋರ್ಟಲ್‌ಗಳು ಎಗ್ಗಿಲ್ಲದೆ ಇಂತಹ ಚಿತ್ರಗಳನ್ನು ಪ್ರಸಾರ ಮಾಡುತ್ತಿದ್ದು, ಇವುಗಳನ್ನು ನಿಯಂತ್ರಿಸಲು ಅಥವಾ ನಿರ್ಬಂಧಿಸಲು ಯಾವುದೇ ಸೆನ್ಸಾರ್ ಬೋರ್ಡ್‌ಗಳಿಲ್ಲ ಎಂಬುದನ್ನು ತಿಳಿದುಕೊಂಡಿರುವುದರಿಂದಲೇ. ಹಾಗಾಗಿ ಅವುಗಳು ಏನನ್ನು ಬೇಕಾದರೂ ಪ್ರಸಾರ ಮಾಡಬಹುದು ಎಂಬ ಸ್ವಾತಂತ್ರ್ಯ ಹೊಂದಿವೆ ಎಂದು ಜೈನ್ ಅವರನ್ನು ಉಲ್ಲೇಖಿಸಿ ಇಂಡಿಯನ್ ಟೈಮ್ಸ್ ವರದಿ ಮಾಡಿತ್ತು.

ಸದ್ಯ ಕೇಂದ್ರ ಸರ್ಕಾರ ಜೂನ್ 17ರಂದು ಕೇಬಲ್ ಟೆಲಿವಿಷನ್ ಕಾಯ್ದೆ 1995ಕ್ಕೆ ತಿದ್ದುಪಡಿ ತಂದಿದೆ. ಕೇಬಲ್ ಟೆಲಿವಿಷನ್ ನೆಟ್‌ವರ್ಕ್ ನಿಯಮಗಳನ್ನು ಈ ಶಾಸನಾತ್ಮಕ ವ್ಯವಸ್ಥೆ ಒದಗಿಸಲು ತಿದ್ದುಪಡಿ ಮಾಡಲಾಗಿದೆ. ಇದು ಪಾರದರ್ಶಕವಾಗಿದ್ದು, ನಾಗರಿಕರಿಗೆ ಉಪಯುಕ್ತವಾಗಿದೆ. ಅದೇವೇಳೆ, ಪ್ರಸಾರಕರ ಸ್ವಯಂ ನಿಯಂತ್ರಣ ಕಾಯಿದೆಗಳನ್ನು ಕೇಂದ್ರ ಸರ್ಕಾರದಲ್ಲಿ ನೊಂದಾಯಿಸಲಾಗುವುದು ಎಂದು ವಾರ್ತಾ ಮತ್ತು ಪ್ರಸಾರ ಸಚಿವಾಲಯ ಹೇಳಿದೆ.

ದೇಶದಲ್ಲಿ ಅಶ್ಲೀಲ ಚಿತ್ರಗಳನ್ನು ವೀಕ್ಷಿಸುವುದು ಅಪರಾಧವಾಗಿಲ್ಲ. ಆದರೆ, ಅಶ್ಲೀಲ ಚಿತ್ರಗಳ ನಿರ್ಮಾಣ, ಪ್ರಸಾರ ಮಾಡುವುದು ಮತ್ತು ಇತರರೊಂದಿಗೆ ಹಂಚಿಕೊಳ್ಳುವುದು ತಪ್ಪು. ಆಗ ಮಾತ್ರ ವ್ಯಕ್ತಿಯನ್ನು ಬಂಧಿಸಲು ಸಾಧ್ಯವಿದೆ.

ಮಾಹಿತಿ ತಂತ್ರಜ್ಞಾನ ಕಾಯ್ದೆ 2000ದ ಸೆಕ್ಷನ್ 67ಎ ಹೇಳುವಂತೆ ಲೈಂಗಿಕ ಅಭಿವ್ಯಕ್ತಿ ಅಥವಾ
ನಡವಳಿಕೆಯನ್ನು ಹೊಂದಿರುವ ಯಾವುದೇ ವಿಷಯ-ವಸ್ತುವನ್ನು ಪ್ರಕಟಿಸುವುದು, ಪ್ರಸಾರ ಮಾಡುವುದು (ಯಾವುದೇ ಎಲೆಕ್ಟ್ರಾನಿಕ್ ರೂಪದಲ್ಲಿ ಪ್ರಸಾರ ಮಾಡಿದಾಗಿಯೂ) ಐದು ವರ್ಷಗಳ ಜೈಲು ಶಿಕ್ಷೆ ಹಾಗೂ 10 ಲಕ್ಷ ದಂಡವನ್ನು ವಿಧಿಸಲು ಸಾಧ್ಯವಿದೆ. ಹಾಗಾಗಿ ಅಶ್ಲೀಲ ಕಂಟೆಂಟ್ ಮಾರಾಟ ಮಾಡುವಾಗ ಅಥವಾ ವ್ಯಾಪಾರೀಕರಣದಲ್ಲಿ ಸಿಕ್ಕಿಬಿದ್ದರೆ ಜೈಲು ಹಾಗೂ ದಂಡ ಶಿಕ್ಷೆಯ ಸಾಧ್ಯತೆಯಿದೆ. ಆದರೆ, ಯಾವುದು ಅಶ್ಲೀಲ, ಯಾವುದು ಶೃಂಗಾರ ಎಂಬುದನ್ನು ವಿವರಿಸಲು ದೇಶದಲ್ಲಿ ಸರಿಯಾದ ಕಾನೂನುಗಳಿಲ್ಲದಿರುವುದು ಸಮಸ್ಯೆಯನ್ನು ಉಲ್ಬಣಗೊಳಿಸಿದೆ.

2018ರಲ್ಲಿ ಜನಪ್ರಿಯ ವಯಸ್ಕರ ತಾಣವಾದ ಪೋರ್ನ್‌ಹಬ್ ಬಿಡುಗಡೆ ಮಾಡಿದ ಮಾಹಿತಿಯ ಪ್ರಕಾರ, ವಿಶ್ವದಲ್ಲಿ ಅಶ್ಲೀಲ ವಿಷಯಗಳ ಬಳಕೆಯಲ್ಲಿ ಭಾರತ ಮೂರನೇ ಸ್ಥಾನದಲ್ಲಿತ್ತು. ಆದರೆ, 2019ರಲ್ಲಿ ಅಶ್ಲೀಲ ವೆಬ್‌ಸೈಟ್‌ಗಳ ನಿಷೇಧ ಕಾರಣದಿಂದ ಮೂರನೇ ಸ್ಥಾನದಲ್ಲಿದ್ದ ಭಾರತ 15ನೇ ಸ್ಥಾನಕ್ಕೆ ಇಳಿದಿದೆ ಎಂದು ಈ ಸಂಸ್ಥೆ ಹೇಳಿದೆ.

ಕನ್ನಡದಲ್ಲಿ ಇನ್ನು ಒಟಿಟಿ, ಮೊಬೈಲ್ ಆಪ್‌ನಂತಹ ಮಾಧ್ಯಮಗಳು ಎಕ್ಸ್‌ಕ್ಲೂಸಿವ್ ಆಗಿ ಬರದ ಕಾರಣ ಇಂತಹ ವಿಷಯಾಧಾರಿತ ಚಿತ್ರಗಳು ಕಡಿಮೆ ಇವೆ ಎನ್ನಬಹುದು. ಆದರೆ ಡಬಲ್ ಮೀನಿಂಗ್ ಡೈಲಾಗ್‌ಗಳಿರುವ ಸಣ್ಣ ಸಣ್ಣ ಕಿರು ಚಿತ್ರಗಳು ಕನ್ನಡದಲ್ಲೂ ಪ್ರಸಾರವಾಗುತ್ತಿವೆ.

ಸೆಕ್ಸ್ ಕಂಟೆಂಟ್‌ಅನ್ನು ಟಿಆರ್‌ಪಿ, ಹಣ, ಅಭಿಮಾನಿಗಳು, ಆಫರ್‌ಗಳು, ಪ್ಲಾಟ್ಫಾರ್ಮ್‌ಗೆ ಟ್ರಾಫಿಕ್ ಹೆಚ್ಚು ಮಾಡುವ ಸಾಧನವಾಗಿ ಬಳಸಲಾಗುತ್ತಿದೆ. ವೆಬ್ ಸಿರೀಸ್‌ಗಳು, ಬಾಲಿವುಡ್‌ನ ಬಿ ಗ್ರೇಡ್ ಸಿನಿಮಾಗಳಲ್ಲಿ ಮಾತ್ರವಲ್ಲದೆ ಸುದ್ದಿ ವೆಬ್‌ಸೈಟ್‌ಗಳು ಕೂಡ ಇಂತಹ ಲೈಂಗಿಕಾಸಕ್ತಿಯ ವಿಷಯಗಳನ್ನು ನೀಡುತ್ತಿವೆ. ಕನ್ನಡದ ಸುದ್ದಿವಾಹಿನಿಗಳ ವೆಬ್ ಪೋರ್ಟಲ್‌ಗಳು, ಸುದ್ದಿ ಪತ್ರಿಕೆಗಳ ಪೋರ್ಟಲ್‌ಗಳು ಸೇರಿದಂತೆ ಇಂತಹ ವಿಷಯಗಳಿರುವ ಸುದ್ದಿ, ಚಿತ್ರಗಳು ಹೇರಳವಾಗಿ ಕಾಣಸಿಗುತ್ತವೆ. ಸುದ್ದಿ ಓದಲು ಬರುವ ನೋಟಿಫಿಕೇಷನ್‌ಗಿಂತ ರಾತ್ರಿಯ ಹೊತ್ತು ಇಂತಹ ವಿಷಯಗಳ ನೋಟಿಫಿಕೇಷನ್‌ಗಳು ಎಷ್ಟೋ ಮಂದಿಗೆ ಕಿರಿಕಿರಿ ಮಾಡಿದರೆ ಮತ್ತೆ ಕೆಲವರಲ್ಲಿ ಖುಷಿ ನೀಡುತ್ತದೆ.

ಪೂರ್ತಿ ನಗ್ನವಾಗಿ ಕಾಣಿಸಿಕೊಳ್ಳುವುದು ಅಶ್ಲೀಲವಾದರೇ, ದೇಹದ ಮೇಲೆ ತೆಳುವಾದ ಬಟ್ಟೆ ಹಾಕಿ ತೋರಿಸುವುದು ಶೃಂಗಾರ ಹೇಗಾಗುತ್ತದೆ? ಒಟ್ಟಾರೆ, ಯಾವುದು ಅಶ್ಲೀಲ, ಯಾವುದು ಶೃಂಗಾರ, ಯಾವುದು ಕಾಮಪ್ರಚೋದಕ ಎಂಬುದನ್ನು ನಿರ್ಧರಿಸುವವರು ಯಾರು ಎಂಬ ಪ್ರಶ್ನೆ ತಲೆದೋರುತ್ತದೆ. ಒಬ್ಬರ ದೃಷ್ಟಿಯಲ್ಲಿ ಶೃಂಗಾರ ಎನ್ನುವಂತಹದ್ದು ಮತ್ತೊಬ್ಬರ ದೃಷ್ಟಿಯಲ್ಲಿ ಅಶ್ಲೀಲ, ಕಾಮಪ್ರಚೋದಕವು ಆಗಿರಬಹುದು.


ಇದನ್ನೂ ಓದಿ: ಅಶ್ಲೀಲ ಚಿತ್ರ ಪ್ರಕರಣ: ಉದ್ಯಮಿ ರಾಜ್ ಕುಂದ್ರಾಗೆ ಮಧ್ಯಂತರ ಜಾಮೀನು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಟಿಎಂಸಿ ಬೆಂಬಲ

ಮಾರ್ಚ್ 9 ರ ಸೋಮವಾರ ಸಂಸತ್ತಿನ ಬಜೆಟ್ ಅಧಿವೇಶನ ಪುನರಾರಂಭವಾದಾಗ ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ಮಂಡಿಸಲಾಗುವ ಅವಿಶ್ವಾಸ ನಿರ್ಣಯಕ್ಕೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಬೆಂಬಲ ನೀಡಲಿದೆ ಎಂದು ಪಕ್ಷದ ನಾಯಕರು...

ಹೊಸ ರಾಜ್ಯಪಾಲ ರವಿ ಬಿಜೆಪಿ ಕೇಡರ್, ಆದರೆ ಬಂಗಾಳ ಟಫ್ ಟರ್ಫ್ : ಮಮತಾ ಬ್ಯಾನರ್ಜಿ

ನೂತನ ರಾಜ್ಯಪಾಲ ಆರ್.ಎನ್ ರವಿ ಅವರನ್ನು 'ಬಿಜೆಪಿ ಕೇಡರ್' ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಶನಿವಾರ ಲೇವಡಿ ಮಾಡಿದ್ದು, ಮುಂಬರುವ ದಿನಗಳಲ್ಲಿ ರಾಜ್ಯ ಸಚಿವಾಲಯ 'ನಬನ್ನಾ' ಮತ್ತು ರಾಜ್ಯಪಾಲರ ನಿವಾಸ...

ಕರ್ನಾಟಕ ಬಜೆಟ್ 2026| ಶಿಕ್ಷಣ ಕ್ಷೇತ್ರಕ್ಕೆ ಅನುದಾನ ಹಂಚಿಕೆ ನಿರಾಶದಾಯಕ

ಶಿಕ್ಷಣಕ್ಕೆ 47,224 ಕೋಟಿ (ಶೇ.10) ಹಂಚಿಕೆ ಮಾಡಿದ್ದಾರೆ. ಇದು ತುಂಬಾ ಕಡಿಮೆ ಅನುದಾನವಾಗಿದೆ. ವಾಸ್ತವದಲ್ಲಿ ಬಜೆಟ್ ವೆಚ್ಚದ ಶೇ.20-24ರಷ್ಟು ಹಣವನ್ನು ಶಿಕ್ಷಣಕ್ಕೆ ಮೀಸಲಿಡಬೇಕು. ಆದರೆ ಇದು ಸಾಧ್ಯವಾಗುತ್ತಿಲ್ಲ. ಶಿಕ್ಷಣವನ್ನು ಅನುತ್ಪಾದಕ ವಲಯ ಎಂದು...

ಕೇರಳ : ಪ್ರಧಾನಿ ಮೋದಿ ‘ದೇಶದ್ರೋಹಿ’ ಎಂದ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲು

ಪ್ರಧಾನಿ ನರೇಂದ್ರ ಮೋದಿ 'ದೇಶದ್ರೋಹಿ' ಎಂದು ಸಾಮಾಜಿಕ ಮಾಧ್ಯಮದಲ್ಲಿ ಕಾಮೆಂಟ್ ಹಾಕಿದ ಆರೋಪದ ಮೇಲೆ ಕೇರಳದ ಕಣ್ಣೂರಿನ ಶ್ರೀಕಂಡಪುರಂ ಪೊಲೀಸರು ವ್ಯಕ್ತಿಯೊಬ್ಬರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ ಎಂದು ಹಿಂದೂ ಶನಿವಾರ (ಮಾ.7) ವರದಿ...

ಕೋಲ್ಕತ್ತಾ| ಮತದಾರರ ಪಟ್ಟಿಯಿಂದ ಹೆಸರು ಅಳಿಸುವಿಕೆ ವಿರೋಧಿಸಿ ಅಹೋರಾತ್ರಿ ಧರಣಿ ಮುಂದುವರೆಸಿದ ಮಮತಾ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಶನಿವಾರ ಸತತ ಎರಡನೇ ದಿನವಾದ ಶನಿವಾರವೂ ತಮ್ಮ ಪ್ರತಿಭಟನೆಯನ್ನು ಮುಂದುವರೆಸಿದ್ದಾರೆ, ಅವರು ಅಹೋರಾತ್ರಿ ಧರಣಿ ಸ್ಥಳದಲ್ಲಿ ರಾತ್ರಿ ಕಳೆದರು. ಮುಂಬರುವ ವಿಧಾನಸಭಾ ಚುನಾವಣೆಗೆ ಮುಂಚಿತವಾಗಿ "ಬಂಗಾಳದ ಮತದಾರರ...

ಇಂಡೋನೇಷ್ಯಾ | ನಾಲ್ವರು ಪ್ರಮುಖ ಹೋರಾಟಗಾರರು ಖುಲಾಸೆ : ಪ್ರತಿಭಟನೆಯ ಹಕ್ಕಿಗೆ ಹೊಸ ಭರವಸೆ ಎಂದ ಆಮ್ನೆಸ್ಟಿ

2025ರ ಆಗಸ್ಟ್ ಮತ್ತು ಸೆಪ್ಟೆಂಬರ್‌ನಲ್ಲಿ ನಡೆದ ಹಿಂಸಾತ್ಮಕ ವಿದ್ಯಾರ್ಥಿ ಪ್ರತಿಭಟನೆಗಳಿಗೆ ಪ್ರಚೋದನೆ ನೀಡಿದ ಆರೋಪ ಎದುರಿಸುತ್ತಿದ್ದ ನಾಲ್ವರು ಪ್ರಮುಖ ಹೋರಾಟಗಾರರನ್ನು ಇಂಡೋನೇಷ್ಯಾದ ಕೇಂದ್ರ ಜಕಾರ್ತಾ ಜಿಲ್ಲಾ ನ್ಯಾಯಾಲಯವು ಶುಕ್ರವಾರ (ಮಾ.6) ಖುಲಾಸೆಗೊಳಿಸಿದೆ. ದೇಶದಲ್ಲಿ ನಾಗರಿಕ ಸ್ವಾತಂತ್ರ್ಯಕ್ಕೆ...

‘ಆಕ್ರಮಣ ಮಾಡುವ ಉದ್ದೇಶವಿಲ್ಲ..’; ಗಲ್ಫ್ ರಾಷ್ಟ್ರಗಳ ಮೇಲಿನ ದಾಳಿಗೆ ಕ್ಷಮೆಯಾಚಿಸಿದ ಇರಾನ್ ಅಧ್ಯಕ್ಷರು

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ನೆರೆಯ ರಾಷ್ಟ್ರಗಳಿಗೆ ಶನಿವಾರ ಕ್ಷಮೆಯಾಚಿಸಿದ್ದಾರೆ. ಉಲ್ಬಣಗೊಳ್ಳುತ್ತಿರುವ ಪ್ರಾದೇಶಿಕ ಸಂಘರ್ಷಕ್ಕೆ ಸಂಬಂಧಿಸಿದ ಇತ್ತೀಚಿನ ದಾಳಿಗಳಿಗೆ ಟೆಹ್ರಾನ್ ಇತರ ರಾಷ್ಟ್ರಗಳನ್ನು ಆಕ್ರಮಿಸುವ ಉದ್ದೇಶವನ್ನು ಹೊಂದಿಲ್ಲ ಎಂದು ಹೇಳಿದ್ದಾರೆ. ಇರಾನ್ ಸಾರ್ವಜನಿಕರನ್ನು...

ತೈಲ ಆಮದು ವಿಚಾರದಲ್ಲಿ ಅಮೆರಿಕದ ಒಪ್ಪಿಗೆ ಪಡೆಯುವುದು ‘ಅತಿರೇಕದ’ ಸಂಗತಿ: ಪಿಣರಾಯಿ ವಿಜಯನ್

ತೈಲ ಆಮದುಗಳಂತಹ ನಿರ್ಧಾರಗಳಿಗೆ ಭಾರತವು ಅಮೆರಿಕದ ಅನುಮೋದನೆಯನ್ನು ಪಡೆಯುವಂತೆ ಬಿಂಬಿತವಾಗುತ್ತಿರುವುದು 'ಅತಿರೇಕದ' ಸಂಗತಿ ಎಂದು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಶುಕ್ರವಾರ ಹೇಳಿದ್ದಾರೆ. ಭಾರತದ ಸಾರ್ವಭೌಮತ್ವವು ವಿದೇಶಿ ಅನುಮತಿಗೆ ಒಳಪಡುವುದಿಲ್ಲ ಎಂದು ವಿಜಯನ್ ಸಾಮಾಜಿಕ...

ಪತ್ರಕರ್ತನ ಹತ್ಯೆ ಪ್ರಕರಣ : ಡೇರಾ ಮುಖ್ಯಸ್ಥ ರಾಮ್ ರಹೀಂ ಸಿಂಗ್ ಖುಲಾಸೆ

ಪತ್ರಕರ್ತ ಛತ್ರಪತಿ ಹತ್ಯೆ ಪ್ರಕರಣದಲ್ಲಿ ಸಿರ್ಸಾದ ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಂ ಸಿಂಗ್ ಅನ್ನು ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ ಶನಿವಾರ (ಮಾ.7) ಖುಲಾಸೆಗೊಳಿಸಿರುವುದಾಗಿ livelaw.in ಎಂದು ವರದಿ...

ಗೃಹ ಬಳಕೆಯ ಎಲ್‌ಪಿಜಿ ದರ 60 ರೂ. ಹೆಚ್ಚಳ : 11 ತಿಂಗಳಲ್ಲಿ ಎರಡನೇ ಬಾರಿ ಬೆಲೆ ಏರಿಕೆ

ತೈಲ ಮಾರುಕಟ್ಟೆ ಕಂಪನಿಗಳು ಶನಿವಾರ (ಮಾ.7) ದೇಶದಲ್ಲಿ ಗೃಹ ಬಳಕೆಯ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯನ್ನು ಕ್ರಮವಾಗಿ ರೂ. 60 ಮತ್ತು ರೂ. 115 ಹೆಚ್ಚಿಸಿವೆ. ಈ ಹೆಚ್ಚಳದ ನಂತರ ರಾಷ್ಟ್ರ ರಾಜಧಾನಿ...