Homeಅಂಕಣಗಳುಶೇ.10ರಷ್ಟು ಮೀಸಲಾತಿಗೆ ಉದ್ಯೋಗಗಳೆಲ್ಲಿವೆ?

ಶೇ.10ರಷ್ಟು ಮೀಸಲಾತಿಗೆ ಉದ್ಯೋಗಗಳೆಲ್ಲಿವೆ?

- Advertisement -
- Advertisement -

ಅನು: ಶಿವಸುಂದರ್
ಕೃಪೆ: Economic and Political
Weekly, Jan 12, 2019. Vol. 54. No.2 |

ಕೇಂದ್ರ ಸರ್ಕಾರವು ಇತ್ತೀಚೆಗೆ ಘೋಷಿಸಿರುವ ಶೇ.10 ಮೀಸಲಾತಿಯೂ ಒಳಗೊಂಡಂತೆ ಕೈಗೊಂಡಿರುವ ಇತರ ಉದ್ಯೋಗ ರಕ್ಷಣಾ ಕ್ರಮಗಳು 19ನೇ ಶತಮಾನದ ಬಂಗಾಳಿ ದ್ವಿಪದಿಯೊಂದರಲ್ಲಿರುವ ಕಾಲ್ನಡಿಗೆ ಸಾಧನವೊಂದನ್ನು ನೆನಪಿಸುತ್ತದೆ. ಅ ಸಾಧನವು ತನ್ನನ್ನು ತೊಟ್ಟಿರುವ ಹೆಗಲಿಗೆ ಬೆಸೆದುಕೊಂಡು ಮುಂದೆ ಒಂದು ಕ್ಯಾರಟ್ಟನ್ನು ಇಳಿಬಿಟ್ಟಿರುತ್ತದೆ. ಇದರಿಂದಾಗಿ ಅದನ್ನು ಹೊತ್ತುಕೊಂಡಿರುವವರು ಕ್ಯಾರೆಟ್ಟನ್ನು ಪಡೆದುಕೊಳ್ಳುವ ಸಲುವಾಗಿ ಮೈಲುಗಟ್ಟಲೇ ದೂರವನ್ನು ನಿಮಿಷಗಳಲ್ಲಿ ಕ್ರಮಿಸುವಂತೆ ಮಾಡುತ್ತದೆ. ಆದರೆ ಎಷ್ಟೇ ವೇಗವಾಗಿ ನಡೆದರೂ ಆ ಕ್ಯಾರೆಟ್ಟು ಮಾತ್ರ ಆ ಸಾಧನವನ್ನು ಹೊತ್ತುಕೊಂಡವನಿಂದ ಸಮಾನ ದೂರದಲ್ಲೆ ಇರುತ್ತದೆಯೇ ವಿನಃ ಬಾಯಿಗೆಟುಕುವುದಿಲ್ಲ. ಉದಾಹರಣೆಗೆ ಉದ್ಯೋಗಗಳಲ್ಲಿ ಮತ್ತು ಶೈಕ್ಷಣಿಕ ಸಂಸ್ಥೆಗಳಲ್ಲಿ ಆರ್ಥಿಕವಾಗಿ ದುರ್ಬಲವಾಗಿರುವ ಮೇಲ್ಜಾತಿಗಳಿಗೆ ನೀಡಲಾದ ಶೇ.10 ಮೀಸಲಾತಿ ನೀತಿಯನ್ನೇ ಗಮನಿಸಿ. ಅದು ಹುಟ್ಟುಹಾಕಿರುವ ರಾಜಕೀಯ ಕೋಲಾಹಲವನ್ನು ಗಮನಿಸಿದಲ್ಲಿ ಒಂದು ರಾಜಕೀಯ ತಂತ್ರೋಪಾಯವಾಗಿ ಅದರ ಪರಿಣಾಮಕತೆಯನ್ನು ಯಾರೂ ನಿರಾಕರಿಸಲು ಸಾಧ್ಯವಿಲ್ಲ. ಅದೇ ಸಮಯದಲ್ಲಿ ಉದ್ಯೋಗಾವಕಾಶಗಳನ್ನು ಒದಗಿಸಲಾಗದ ಅದರ ಪೆÇಳ್ಳುತನವನ್ನೂ ಸಹ ಯಾರೂ ಅಲ್ಲಗಳೆಯಲು ಸಾಧ್ಯವಿಲ್ಲ. ಯಾವ ರೀತಿಯಲ್ಲಿ ಬಂಗಾಳಿ ದ್ವಿಪದಿಯಲ್ಲಿನ ಬಡಪಾಯಿಯು ಎದುರಿಗಿರುವ ಕ್ಯಾರೆಟ್ಟನ್ನು ಪಡೆದು ತನ್ನ ಹಸಿವನ್ನು ನೀಗಿಸಿಕೊಳ್ಳಲು ಸಾಧ್ಯವಾಗುವುದಿಲ್ಲವೋ ಅದೇ ರೀತಿಯಲ್ಲಿ ಇತ್ತೀಚಿನ ಈ ಶೇ.10 ಕೋಟಾ ಸಹ ಉದ್ಯೋಗವನ್ನು ಒದಗಿಸಲಾರದು.
ಉದ್ಯೋಗಾವಕಾಶಗಳು ಎಲ್ಲಿವೆ? ಸೆಂಟರ್ ಫಾರ್ ಮಾನಿಟರಿಂಗ್ ಇಂಡಿಯನ್ ಎಕಾನಮಿ (ಸಿಎಂಐಇ) ಸಂಸ್ಥೆಯ ಇತ್ತೀಚಿನ ವರದಿಯ ಪ್ರಕಾರ ಭಾರತದ ಉದ್ಯೋಗ ಮಾರುಕಟ್ಟೆಯ ಪರಿಸ್ಥಿತಿ ನಿರಾಶಾದಾಯಕವಾಗಿದೆ; ಮೊದಲನೆಯದಾಗಿ 2018ರ ಡಿಸೆಂಬರ್ ವೇಳೆಗೆ ಭಾರತದ ನಿರುದ್ಯೋಗ ದರವು ಶೇ.7.4ಕ್ಕೇರಿದ್ದು ಕಳೆದ 15 ತಿಂಗಳಲ್ಲೇ ಅತಿ ಹೆಚ್ಚಿನ ಮಟ್ಟವನ್ನು ಮುಟ್ಟಿದೆ; ಎರಡನೆಯದಾಗಿ 2017 ಮತ್ತು 2018ರಲ್ಲಿ ಕೆಲಸ ಕಳೆದುಕೊಂಡ ಸುಮಾರು 1.1 ಕೋಟಿಯಷ್ಟು ಜನರು ಈ ನಿರುದ್ಯೋಗಿ ಪಡೆಯಲ್ಲಿ ಸೇರಿಕೊಂಡಿದ್ದಾರೆ; ಮತ್ತು ಮೂರನೆಯದಾಗಿ ನಿರುದ್ಯೋಗದ ಪ್ರಮಾಣವು ಆರ್ಥಿಕವಾಗಿ ತ್ರಾಣ ರಹಿತವಾಗುತ್ತಿರುವ ಕ್ಷೇತ್ರ ಮತ್ತಿದು ಸಮುದಾಯಗಳಲ್ಲಿ ಹೆಚ್ಚಾಗಿದೆ. ಉದಾಹರಣೆಗೆ ಈಗಾಗಲೇ ಕೃಷಿ ಬಿಕ್ಕಟ್ಟನ್ನು ಎದುರಿಸುತ್ತಿರುವ ಗ್ರಾಮೀಣ ಕ್ಷೇತ್ರದಲ್ಲಿ ಶೇ.82ರಷ್ಟು ಉದ್ಯೋಗಗಳು ನಷ್ಟವಾಗಿದ್ದು, ನಿರುದ್ಯೋಗದ ಶೇ.80ರಷ್ಟು ಹೊರೆ ಮಹಿಳೆಯರ ಮೇಲಿದೆ. ವಿಪರ್ಯಾಸವೆಂದರೆ ಭಾರತೀಯ ಜನತಾ ಪಕ್ಷದ ಹೊಸ “ಅತಂತ್ರರ” ರಾಜಕಾರಣದ ಮುಖ್ಯ ಗಮನವೂ ಇದೇ ಕ್ಷೇತ್ರ ಸಮುದಾಯಗಳ ಮೇಲಿದೆ.
ಸಿಎಂಐಇ ಸಂಸ್ಥೆಯು ತನ್ನ ಈ ಅಂಕಿಅಂಶಗಳು ತಾತ್ಕಾಲಿಕವಾದದ್ದೆಂದು ಹೇಳಿದ್ದರೂ ಅಂತಿಮ ವರದಿಯಲ್ಲು ದೇಶದ ಒಟ್ಟಾರೆ ಪರಿಸ್ಥಿತಿ ಇದಕ್ಕಿಂತ ಹೆಚ್ಚು ಭಿನ್ನವಾಗಿಲ್ಲ. ಸರ್ಕಾರಿ ಕ್ಷೇತ್ರದಲ್ಲಿನ ನೇಮಕಾತಿ ಆಮೆಗತಿಯಲ್ಲಿದೆ; ಅಷ್ಟಲ್ಲದೆ ಭರ್ತಿಯಾಗದೆ ಉಳಿದುಕೊಂಡಿರುವ ಬ್ಯಾಕ್‍ಲಾಗ್ ಹುದ್ದೆಗಳ ಮೂರನೇ ಒಂದು ಭಾಗದಷ್ಟು ಹುದ್ದೆಗಳು “ಮೀಸಲು”ವರ್ಗಕ್ಕೆ ಸೇರಿವೆ; ಅದೇ ಸಮಯದಲ್ಲಿ ಉದ್ಯೋಗಾವಕಾಶಗಳ ಪ್ರಮುಖ ಮೂಲವಾಗಿದ್ದ ಅಸಂಘಟಿತ ಮತ್ತು ಅನೌಪಚಾರಿಕ ಕ್ಷೇತ್ರಗಳು ನೋಟು ರದ್ಧತಿ ಮತ್ತು ಜಿಎಸ್‍ಟಿಯೆಂಬ ಅವಳಿ ಸರ್ಜಿಕಲ್ ದಾಳಿಯಿಂದ ಇನ್ನೂ ಚೇತರಿಸಿಕೊಂಡಿಲ್ಲ. ಇಂಥಾ ಸಂದರ್ಭದಲ್ಲಿ ಮೀಸಲಾತಿಯು ಶೇ. 50ರ ಮಿತಿ ಮೀರಬಾರದೆಂಬ ಸುಪ್ರೀಂ ಕೋರ್ಟಿನ ನಿರ್ದೇಶನಗಳನ್ನು ಉಲ್ಲಂಘಿಸಿ ಕೇಂದ್ರ ಸರ್ಕಾರವು ಘೋಷಿಸಿರುವ ಶೇ.10ರ ಮೀಸಲಾತಿಯು ಬಿಜೆಪಿಗೆ ತನ್ನ ಚುನಾವಣಾ ಮಿತ್ರರನ್ನು ಹೆಚ್ಚಿಸಿಕೊಳ್ಳಲು ಸಹಾಯವಾಗಬಹುದು. ಹಾಗೆಯೇ ಹಿಂದಿ ಹೃದಯಭಾಗದಲ್ಲಿ ನಡೆದ 2018ರ ಶಾಸನಾಸಭಾ ಚುನಾವಣೆಗಳಲ್ಲಿ ತಾನು ಕಳೆದುಕೊಂಡ “ದುರ್ಬಲ” ಮತದಾರರ ನಡುವೆ ತನ್ನ ಬಗ್ಗೆ ಒಂದಷ್ಟು ಸದಭಿಪ್ರಾಯವನ್ನು ಗಳಿಸಿಕೊಳ್ಳಬಹುದು. ಆದರೆ ವಾಸ್ತವದಲ್ಲಿ ಅದು ಅತಂತ್ರ ಮತ್ತು ನಿತ್ರಾಣ ಮತದಾರರ ಸಂಖ್ಯೆಯನ್ನು ಮತ್ತಷ್ಟು ಹೆಚ್ಚಿಸಲಿದೆ. ಮೀಸಲಾತಿಯಿಂದ ಹೊರಗುಳಿದ ಅರ್ಧಕ್ಕಿಂತ ಕಡಿಮೆ ಉದ್ಯೋಗಗಳಿಗಾಗಿ ಎಷ್ಟೋ ಪಟ್ಟು ಅಧಿಕ ಉದ್ಯೋಗಾಕಾಂಕ್ಷಿಗಳು ಸ್ಪರ್ಧಿಸುತ್ತಿದ್ದು ಮೀಸಲಾತಿಯ ಫಲಾನುಭವಿಗಳಿಗೆ ಅದರಿಂದ ಯಾವ ಲಾಭವೂ ಸಿಗುವುದಿಲ್ಲ.
ಇಂದಿನ ರಾಜಕೀಯ ಪರಿಭಾಷೆಗಳಲ್ಲಿ ಹೆಚ್ಚು ಬಳಕೆಯಾಗುವ “ಯುವಕರ ಆಶೋತ್ತರಗಳು” ಎಂಬ ಶಬ್ಧದ ಬಗೆಗೆ ರಾಜಕಾರಣಿಗಳಲ್ಲಿ ಅರೆಮನಸ್ಸಿನ ತಿಳವಳಿಕೆಯಿದೆ. ಮತ್ತದು ಉದ್ಯೋಗಾವಕಾಶಗಳ ಹೆಸರಲ್ಲಿ ಒಂದಷ್ಟು ಪಕೋಡಾಗಳನ್ನು ಎಸೆದರೆ, ಅಥವಾ ಒಂದಷ್ಟು ಹೀನಾಯ ಉದ್ಯೋಗವನ್ನು ನೀಡಿದರೆ ಯುವಜನರ ಬೆಂಬಲ ಪಡೆಯಬಹುದೆಂಬ ಸಂವೇದನಾ ರಹಿತ ಗ್ರಹಿಕೆಗಳಿವೆ. ಉದ್ಯೋಗ ಮಾರುಕಟ್ಟೆಯಲ್ಲಿ ಯುವಜನರ ಸಕ್ರಿಯ ಮತ್ತು ಸ್ವಕೀಯ ಪಾತ್ರವನ್ನು ಉದ್ದೇಶಪೂರ್ವಕವಾಗಿ ನಿರಾಕರಿಸುವ ಮೂಲಕ ವಾಸ್ತವದಲ್ಲಿರುವ ಅರೆಉದ್ಯೋಗದ ಸಮಸ್ಯೆಯ ಬಗ್ಗೆ ಕುರುಡು ಪ್ರದರ್ಶಿಸುತ್ತಿದೆ.
ಅಂತರರಾಷ್ಟ್ರೀಯ ಕಾರ್ಮಿಕ ಸಂಘಟನೆ (ಐಎಲ್‍ಒ)ಯು 2018ರಲ್ಲಿ ಹೊರತಂದಿರುವ “ವರ್ಲ್ಡ್ ಎಂಪ್ಲಾಯ್‍ಮೆಂಟ್ ಅಂಡ್ ಸೋಷಿಯಲ್ ಔಟ್‍ಲುಕ್” (ಜಾಗತಿಕ ಉದ್ಯೋಗ ಮತ್ತು ಸಾಮಾಜಿಕ ದರ್ಶನ) ವರದಿಯು ಭಾರತದ ಶೇ.80ರಷ್ಟು ಉದ್ಯೋಗಗಳನ್ನು ಅಭದ್ರವೆಂದು ಪರಿಗಣಿಸಿದೆ. ಅದರಲ್ಲಿ ಕೇವಲ ಶೇ.20 ಭಾಗದಷ್ಟು ಉದ್ಯೋಗಿಗಳು ಮಾತ್ರ ನಿಯಮಿತವಾಗಿ ಸಂಬಳ ಪಡೆಯುವ ಉದ್ಯೋಗಿಗಳಾಗಿದ್ದು ಇನ್ನುಳಿದ ಶೇ.40ರಷ್ಟು ಉದ್ಯೋಗಿಗಳು ಕಡಿಮೆ ಸಂಬಳಕ್ಕೆ ಕೆಲಸ ಮಾಡುತ್ತಿದ್ದೇವೆಂಬ ಅಭಿಪ್ರಾಯವನ್ನೇ ಹೊಂದಿದ್ದಾರೆ. 2018ರಲ್ಲಿ ಅಜೀಂ ಪ್ರೇಂಜಿ ವಿಶ್ವವಿದ್ಯಾಲಯವು ಹೊರತಂದಿರುವ “ಸ್ಟೇಟ್ ಆಫ್ ವರ್ಕಿಂಗ್ ಇನ್ ಇಂಡಿಯಾ” (ಭಾರತದ ಕೆಲಸ ಮಾಡುವ ಪರಿಸ್ಥಿತಿ) ವರದಿಯು ಸೌಲಭ್ಯರಹಿತ ಕೆಲಸಗಾರರ ತುಲನಾತ್ಮಕ ವರದಿಯನ್ನು ನೀಡಿದ್ದು ಅಸಂಘಟಿತ ಕ್ಷೇತ್ರದಲ್ಲಿನ ಕಡಿಮೆ ವೇತನದ ಸಮಸ್ಯೆ ಹೇಳತೀರದಾಗಿದ್ದರೂ ಸಂಘಟಿತ ಕ್ಷೇತ್ರದಲ್ಲೂ ಸಹ ಆ ಸಮಸ್ಯೆ ಮುಂದುವರೆದಿದೆ ಎಂಬ ಸಂಗತಿಯನ್ನು ಹೊರಹಾಕಿದೆ. ಶೇ.3ರಷ್ಟು ಹಣದುಬ್ಬರದ ಏರಿಕೆಯ ಲೆಕ್ಕಾಚಾರಕ್ಕೆ ತಕ್ಕಂತೆ ಕೂಲಿ ದರವನ್ನು ಹೊಂದಾಣಿಕೆ ಮಾಡಿ ನೋಡಿದಾಗಲೂ, 2015ರಲ್ಲಿ ವಿಶೇಷವಾಗಿ ಸರ್ಕಾರೇತರ ಕ್ಷೇತ್ರಗಳಲ್ಲಿ ಕೆಲಸ ಮಾಡುತ್ತಿರುವ ಶೇ.82ರಷ್ಟು ಪುರುಷರೂ ಮತ್ತು ಶೇ.92ರಷ್ಟು ಮಹಿಳೆಯರು ಏಳನೇ ವೇತನ ಅಯೋಗ ನಿಗದಿಗೊಳಿಸಿದ ಕನಿಷ್ಟ ವೇತನಕ್ಕಿಂತ ಶೇ.40ರಷ್ಟು ಕಡಿಮೆ ವೇತನವನ್ನು ಪಡೆಯುತ್ತಿದ್ದರು. ಅದೆರ ಜೊತೆಜೊತೆಗೆ ಕಾರ್ಮಿಕ ಉತ್ಪಾದಕತೆಗೂ ಮತ್ತು ವೇತನಕ್ಕೂ ಇರುವ ಅಂತರ ಹೆಚ್ಚಾಗುತ್ತಲೇ ಇದೆ. ಉದಾಹರಣೆಗೆ ಕಳೆದ ಮೂರು ದಶಕಗಳಲ್ಲಿ ಸಂಘಟಿತ ಉತ್ಪಾದಕ ಕ್ಷೇತ್ರದಲ್ಲಿನ ಕಾರ್ಮಿಕ ಉತ್ಪಾದಕತೆಯು ಆರು ಪಟ್ಟು ಹೆಚ್ಚಾಗಿದ್ದರೆ ಕೂಲಿ ದರವು ಮಾತ್ರ ಕೇವಲ ಒಂದೂವರೆ ಪಟ್ಟು ಮಾತ್ರ ಹೆಚ್ಚಾಗಿದೆ.
ಈ ಎಲ್ಲಾ ಸಾಕ್ಷ್ಯಗಳನ್ನು ಮುಂದಿಟ್ಟುಕೊಂಡು ಭಾರತದಲ್ಲಿನ ಹಾಲಿ ನಿರುದ್ಯೋಗವು ಅದರಲ್ಲೂ ಯುವಜನರ ನಿರುದ್ಯೋಗದ ಪ್ರಮಾಣವು “ಭಾವಿ” ಪ್ರಮಾಣವೇ ಹೊರತು “ಹಾಲಿ”ಯಲ್ಲವೆಂದು ಕೆಲವರು ವಾದಿಸಬಹುದು. ಅಂದರೆ, ಈಗ ಹಾಲಿ ಇರುವ ಉದ್ಯೋಗಾವಕಾಶಗಳು ತಮ್ಮ ಆಶೋತ್ತರಗಳಿಗೆ ಪೂರಕವಾದ ವೇತನ ಮತ್ತು ಸೌಲಭ್ಯಗಳನ್ನು ನೀಡುವುದಿಲ್ಲ ಎಂದು ಭಾವಿಸುತ್ತಿರುವುದರಿಂದ ಯುವಜನರು ಉದ್ಯೋಗ ಅರಸುತ್ತಿಲ್ಲ ಎಂಬುದು ಆ ವಾದದ ಸಾರಾಂಶ. ಹೀಗೆ, ನಿಗದಿತ ವೇತನವಿರುವ ಅದರಲ್ಲೂ ಸರ್ಕಾರಿ ಉದ್ಯೋಗಗಳಿಗಾಗಿ ಯುವಜನರು ತೋರುವ ಆದ್ಯತೆಯೇ ನಿರುದ್ಯೋಗಕ್ಕೆ ಕಾರಣವೆಂದು ಹೇಳುತ್ತಾ ನಿರುದ್ಯೋಗದ ಹೊಣೆಗಾರಿಕೆಯನ್ನು ನಿರುದ್ಯೋಗಿಗಳ ಹೆಗಲಿಗೇ ವರ್ಗಾಯಿಸಿಬಿಡಬಹುದು. ಆದರೆ ಈ ವಾದದಿಂದ ವಾಸ್ತವದಲ್ಲಿರುವ ನಿರುದ್ಯೋಗ, ಅರೆ ಉದ್ಯೋಗ ಅಥವಾ ಭಾವಿ ನಿರುದ್ಯೋಗಗಳಿಗೂ ಮತ್ತು ಉದ್ಯೋಗ ಸೃಷ್ಟಿಯಾಗದಿರುವುದಕ್ಕೂ ಇರುವ ಬಲವಾದ ಸಂಬಂಧಗಳನ್ನು ತಳ್ಳಿಹಾಕಲು ಸಾಧ್ಯವಿಲ್ಲ. ಅಲ್ಲದೆ ಆರ್ಥಿಕ ಅಭಿವೃದ್ಧಿಗೂ ಮತ್ತು ಉದ್ಯೋಗ ಸೃಷ್ಟಿಗೂ ಇರುವ ಸಂಬಂಧಗಳನ್ನು ದುರ್ಬಲಗೊಳಿಸುತ್ತಿರುವ ರಾಚನಿಕ ಕಾರಣಗಳನ್ನು ಗುರುತಿಸುವ ಮತ್ತು ಅದನ್ನು ನಿವಾರಿಸುವ ಹೊಣೆಗಾರಿಕೆ ಸರ್ಕಾರದ್ದೇ ಆಗಿದೆ. ಅದರ ಜೊತೆಜೊತೆಗೆ ಈಗಾಗಲೇ ನಿತ್ರಾಣಗೊಂಡು ಜರ್ಝರಿತವಾಗಿರುವ ಉದ್ಯೋಗ ಮಾರುಕಟ್ಟೆಯಲ್ಲಿ ಮೀಸಲಾತಿಯನ್ನು, ಅಂದರೆ ಅತ್ಯಂತ ಅತಂತ್ರತೆಯ ಅಂಚಿನಲ್ಲಿರುವ ವ್ಯಕ್ತಿಯನ್ನು ರಕ್ಷಿಸುವ ಕ್ರಮವನ್ನು, ಹೆಚ್ಚಿಸುತ್ತಿರುವ ಕ್ರಮದ ಹಿಂದಿರುವ ಸರ್ಕಾರದ ಸೋಗಲಾಡಿತನವನ್ನೂ ಯಾರೂ ಅಲ್ಲಗಳೆಯಲು ಸಾಧ್ಯವಿಲ್ಲ್ಲ.
ಹೆಚ್ಚೆಚ್ಚು ವಿದ್ಯಾಭ್ಯಾಸವನ್ನು ಪಡೆದವರ ನಡುವೆ ಇರುವ ಅತಿ ಹೆಚ್ಚು ನಿರುದ್ಯೋಗ ದರಕ್ಕೆ ಅವರÀ ಆಯ್ಕೆ ಮತ್ತು ಆದ್ಯತೆಗಳೇ ಕಾರಣ ಎಂದು ಸರ್ಕಾರವು ವಿವರಿಸಿ ಕೈತೊಳೆದುಕೊಳ್ಳುವ ಪ್ರಯತ್ನ ಮಾಡುತ್ತದೆ. ಅದೇನೇ ಇದ್ದರೂ ಅವರ ಆಯ್ಕೆಗಳು ನಿರ್ದಿಷ್ಟ ಪಥವನ್ನೇ ಅವಲಂಬಿಸುವಂತೆ ಮಾಡಿರುವ ಹೊಣೆಗಾರಿಕೆಯಿಂದ ಸರ್ಕಾರವು ನುಣುಚಿಕೊಳ್ಳಲು ಸಾಧ್ಯವಿಲ್ಲ. ಸರ್ಕಾರವು ಮತದಾರರಿಗೆ ನೀಡುª ಮೀಸಲಾತಿಯಂಥ ಹುಸಿ ರಕ್ಷಣಾ ಕ್ರಮಗಳು ಭ್ರಮ ನಿರಸನಗಳನ್ನು ಹುಟ್ಟುಹಾಕುತ್ತದೆ. ಆದರೆ ಅದು ವ್ಯಗ್ರವಾಗದಂತೆ ನೋಡಿಕೊಳ್ಳಲು ಕೂಡಲೇ ದೊಡ್ಡ ದೊಡ್ಡ ಭರವಸೆಗಳನ್ನು ಘೋಷಿಸಲಾಗುತ್ತದೆ ಆದರೆ ಅದರೊಟ್ಟಿಗೆ ಜನರ ಅಭದ್ರತೆಯನ್ನು ಹೆಚ್ಚಿಸುವ ನೀತಿಗಳ ಬೆದರಿಕೆಯನ್ನೂ ಒಡ್ಡಲಾಗುತ್ತದೆ. ಇದು ಮತ್ತಷ್ಟು ಹುಸಿ ಭರವಸೆಗಳ ಘೋಷಣೆಗೆ ಜನರನ್ನು ಬಲಿ ಮಾಡುವ ರಾಜಕೀಯ ವಿಷಚಕ್ರಕ್ಕೆ ದೂಡುತ್ತದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...