Homeಮುಖಪುಟ"ಶೌಚಾಲಯಗಳನ್ನು ಸ್ವಚ್ಚಗೊಳಿಸಲು ನಾನು ಸಂಸದೆಯಾಗಿ ಆಯ್ಕೆಯಾಗಿಲ್ಲ" : ಪ್ರಗ್ಯಾ ಠಾಕೂರ್

“ಶೌಚಾಲಯಗಳನ್ನು ಸ್ವಚ್ಚಗೊಳಿಸಲು ನಾನು ಸಂಸದೆಯಾಗಿ ಆಯ್ಕೆಯಾಗಿಲ್ಲ” : ಪ್ರಗ್ಯಾ ಠಾಕೂರ್

- Advertisement -
- Advertisement -

ಮಧ್ಯಪ್ರದೇಶದಿಂದ ಮೊದಲ ಬಾರಿಗೆ ಬಿಜೆಪಿ ಸಂಸತ್ ಸದಸ್ಯೆಯಾಗಿ ಆಯ್ಕೆಯಾಗಿರುವ ಪ್ರಗ್ಯಾ ಸಿಂಗ್ ಠಾಕೂರ್ ಅವರು “ಚರಂಡಿಗಳು ಮತ್ತು ಶೌಚಾಲಯಗಳನ್ನು ಸ್ವಚ್ಚಗೊಳಿಸಲು ಆಯ್ಕೆಯಾಗಿಲ್ಲ” ಎಂದು ಪಕ್ಷದ ಕಾರ್ಯಕರ್ತರಿಗೆ ಖಾರವಾಗಿ ತಿಳಿಸಿದ್ದಾರೆ. ಇದು ಸೊಕ್ಕಿನ ಮತ್ತು ಪ್ರಧಾನಿ ನರೇಂದ್ರ ಮೋದಿಯವರ “ಸ್ವಚ್ಚ ಭಾರತ್ ಅಭಿಯಾನ್”ಕ್ಕೆ ವಿರುದ್ಧವಾದ ಹೇಳಿಕೆಯೆಂದು ಅನೇಕರು ಅಭಿಪ್ರಾಯಪಟ್ಟಿದ್ದಾರೆ.

ಭೋಪಾಲ್‌ನ ಸಂಸತ್ ವ್ಯಾಪ್ತಿಗೆ ಬರುವ ಸೆಹೋರ್‌ನಲ್ಲಿ ಬಿಜೆಪಿ ಕಾರ್ಯಕರ್ತರೊಂದಿಗೆ ಮಾತನಾಡಿದ ಪ್ರಗ್ಯಾ ಠಾಕೂರ್, “ನಿಮ್ಮ ಚರಂಡಿಗಳನ್ನು ಸ್ವಚ್ಚಗೊಳಿಸಲು ನಾವು ಆಯ್ಕೆಯಾಗಿಲ್ಲ, ದಯವಿಟ್ಟು ಅರ್ಥಮಾಡಿಕೊಳ್ಳಿ. ಸಂಸತ್ ನಲ್ಲಿ  ಕೆಲಸ ಮಾಡುತ್ತೇನೆ ಮತ್ತು  ಇದಕ್ಕಾಗಿ ನಾನು ಆಯ್ಕೆಯಾಗಿದ್ದೇನೆ, ನಾನು ಪ್ರಾಮಾಣಿಕವಾಗಿ ಕೆಲಸ ಮಾಡುತ್ತೇನೆ, ಮೊದಲೇ ಹೇಳಿದ್ದೇನೆ ಮತ್ತು ಅದನ್ನು ಮತ್ತೆ ಹೇಳುತ್ತೇನೆ.” ಎಂದಿದ್ದಾರೆ.

“ಕ್ಷೇತ್ರದ ಒಟ್ಟಾರೆ ಅಭಿವೃದ್ಧಿಗೆ ಸ್ಥಳೀಯ ಶಾಸಕರು (ಶಾಸಕರು) ಮತ್ತು ಪುರಸಭೆಯ ಕೌನ್ಸಿಲರ್‌ಗಳು ಸೇರಿದಂತೆ ಸ್ಥಳೀಯ ಸಾರ್ವಜನಿಕ ಪ್ರತಿನಿಧಿಗಳೊಂದಿಗೆ ಸಮನ್ವಯದಿಂದ ಕೆಲಸ ಮಾಡುವುದು ಸಂಸತ್ ಸದಸ್ಯರ ಕರ್ತವ್ಯ. ಪ್ರತಿನಿತ್ಯ ನನಗೆ ಫೋನ್ ಮಾಡಿ ಸಮಸ್ಯೆ ಹೇಳುವ ಬದಲು ನಿಮ್ಮ ಸ್ಥಳೀಯ ಸಮಸ್ಯೆಗಳನ್ನು, ಸ್ಥಳೀಯ ಪ್ರತಿನಿಧಿಗಳ ಮೂಲಕ ಕೆಲಸ ಮಾಡಿಸಿ ಕೊಳ್ಳಿ” ಎಂದು ಪ್ರಗ್ಯಾ ಠಾಕೂರ್ ಪಕ್ಷದ ಕಾರ್ಯಕರ್ತರಿಗೆ ತಿಳಿಸಿದರು.

49 ವರ್ಷದ ಬಿಜೆಪಿ ಕಾರ್ಯಕರ್ತರೊಬ್ಬರು ತಮ್ಮ ಪ್ರದೇಶದಲ್ಲಿ ನೈರ್ಮಲ್ಯ ಮತ್ತು ಸ್ವಚ್ಚತೆಯ ಕೊರತೆಯ ಬಗ್ಗೆ ಪದೇ ಪದೇ ದೂರು ನೀಡಿದ್ದಕ್ಕಾಗಿ ಈ ರೀತಿ ಪ್ರಗ್ಯಾ ಪ್ರತ್ಯುತ್ತರ ನೀಡಿದ್ದಾರೆ ಎನ್ನಲಾಗಿದೆ.

ಈ ಹಿಂದೆಯೂ ಲೋಕಸಭಾ ಚುನಾವಣೆಗೆ ಪ್ರಚಾರ ಮಾಡುವಾಗ, 2008 ರ ಮಾಲೆಗಾಂವ್ ಸ್ಫೋಟದ ಆರೋಪಿ ಪ್ರಗ್ಯಾ, ಮಹಾತ್ಮ ಗಾಂಧಿಯವರ ಹಂತಕ ನಾಥುರಾಮ್ ಗೋಡ್ಸೆಯನ್ನು ದೇಶಭಕ್ತ ಎಂದು ಬಣ್ಣಿಸುವಂತಹ ವಿವಾದಾತ್ಮಕ ಹೇಳಿಕೆಗಳನ್ನು ನೀಡಿದ್ದರು. ಅವರ ಹೇಳಿಕೆಗಳು ಪಿಎಂ ಮೋದಿಯನ್ನು ಕೆರಳಿಸಿದ್ದವು. ಆಗ ಅವರು ಗಾಂಧಿಯನ್ನು ಕೊಂದ ವ್ಯಕ್ತಿಯನ್ನು”ಎಂದಿಗೂ ಕ್ಷಮಿಸಲು ಸಾಧ್ಯವಿಲ್ಲ” ಎಂದು ಹೇಳಿದ್ದರು.

ಪ್ರಗ್ಯಾ ಠಾಕೂರ್ ಅವರ ಇತ್ತೀಚಿನ ಹೇಳಿಕೆಯನ್ನು ವಿರೋಧ ಪಕ್ಷಗಳು ತೀವ್ರವಾಗಿ ಟೀಕಿಸಿವೆ. ಕಾಂಗ್ರೆಸ್ ಮುಖಂಡ ತಾರಿಕ್ ಅನ್ವರ್ “ಅವರ ಮಾತುಗಳು ಸ್ವಚ್ಚ ಭಾರತ್ ಅಭಿಯಾನದ ಬಗ್ಗೆ ಅವರಿಗಿರುವ ಅಸಡ್ಡೆಯನ್ನು ತೋರಿಸುತ್ತಿದೆ. ಪ್ರಧಾನಿ ಮೋದಿ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಅವರು ಒತ್ತಾಯಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...