Homeಕರ್ನಾಟಕಕನ್ನಡ ನೆಲದ ಸಮಾನತೆಯ ಚಳುವಳಿಯನ್ನು ಜನಸಾಮಾನ್ಯರ ಬಳಿಗೆ ಕೊಂಡೊಯ್ಯುವ ಮಹದಾಶಯ "ಮತ್ತೆ ಕಲ್ಯಾಣ"

ಕನ್ನಡ ನೆಲದ ಸಮಾನತೆಯ ಚಳುವಳಿಯನ್ನು ಜನಸಾಮಾನ್ಯರ ಬಳಿಗೆ ಕೊಂಡೊಯ್ಯುವ ಮಹದಾಶಯ “ಮತ್ತೆ ಕಲ್ಯಾಣ”

ಮತ್ತೆ ಕಲ್ಯಾಣ ಎಂಬ ಹೆಸರಿನಲ್ಲಿ ನಡೆಯುತ್ತಿರುವ ಈ ಅಭಿಯಾನದ ಆಶಯ ಪರಿವರ್ತನಶೀಲವಾದುದಾಗಿದೆ. ಕಲ್ಯಾಣದಲ್ಲಿ ನಡೆದ ಶರಣ ಪರಂಪರೆಯ ಹೋರಾಟವನ್ನು ಪರಿಚಯಿಸುವ ಮೂಲಕ ಶರಣರು ಆಶಿಸಿದ ಸಮಾಜವನ್ನು ಪರಿಚಯಿಸುವ ಕೆಲಸವಾಗಲಿ

- Advertisement -
- Advertisement -

| ಅನಿಲ್‍ಕುಮಾರ್ ಚಿಕ್ಕದಾಳವಟ್ಟ |

ಸಾಣೇಹಳ್ಳಿಯ ಶ್ರೀ ಪಂಡಿತಾರಾಧ್ಯ ಸ್ವಾಮೀಜಿಯವರ ನೇತೃತ್ವದಲ್ಲಿ ಆರಂಭವಾಗುತ್ತಿರುವ “ಮತ್ತೆ ಕಲ್ಯಾಣ” ಕಾರ್ಯಕ್ರಮವು ಎಲ್ಲರಲ್ಲಿ ಕುತೂಹಲ ಮೂಡಿಸಿದೆ. ಈ ಬಗ್ಗೆ ತುಮಕೂರಿನ ಅನಿಲ್‍ಕುಮಾರ್ ಚಿಕ್ಕದಾಳವಟ್ಟ ಬರೆದಿದ್ದಾರೆ.

ಹನ್ನೆರಡನೆಯ ಶತಮಾನದ ಕರ್ನಾಟಕದ ವಿದ್ಯಮಾನವನ್ನು ನೆನೆಸಿಕೊಂಡರೆ ಇತಿಹಾಸ ಗೊತ್ತಿರುವ ಪ್ರತಿಯೊಬ್ಬರು ರೋಮಾಂಚಿತರಾಗುತ್ತಾರೆ. ಅಂದು ನಡೆದ ಶರಣ ಚಳುವಳಿಯು ಇಡೀ ಜಗತ್ತೇ ಪಾಠ ಕಲಿಯುವಂತಹ ಆಂಶಗಳನ್ನು ಒಳಗೊಂಡಿದೆ. ಜಾತಿಯ ಆಧಾರದಲ್ಲಿ ತೋರುತ್ತಿದ್ದ ತಾರತಮ್ಯದ ವಿರುದ್ಧ ಶರಣರು ಸಿಡಿದೆದ್ದು ಪ್ರತಿಯೊಂದು ಕಾಯಕ ಮಾಡುವವರು ಸಮಾನ ಘನತೆ, ಗೌರವ ಉಳ್ಳವರೆಂದು ಸಾರಿದರು. ಸಮಾಜದಲ್ಲಿನ ಜಾತಿ ತಾರತಮ್ಯ ಲಿಂಗತಾರತಮ್ಯದಂತಹ ಅನಿಷ್ಟಗಳನ್ನು ತೊಲಗಿಸಲು ಚಿಂತನೆಗಳನ್ನು ನಡೆಸಿದರು. ಪ್ರತಿಯೊಂದು ಜಾತಿ, ವರ್ಗದ ಜನ ಒಂದು ಕಡೆ ಕೂತು ಅವರ ಅನುಭವಕ್ಕೆ ಬಂದ ವಿಚಾರಗಳನ್ನು ವಚನಗಳ ರೂಪದಲ್ಲಿ ಹೇಳಿ ಚರ್ಚಿಸಲಾರಂಭಿಸಿದರು. ಅವರು ಪ್ರತಿಪಾದಿಸಿದ ಸಮಾನತೆಯ ಆಶಯಗಳು ಅಂದಿನ ಸಮಾಜದಲ್ಲಿ ತಲ್ಲಣವುಂಟು ಮಾಡಿ ಪರಿವರ್ತನೆಗೆ ಕಾರಣವಾದವು.

ಇಂದು ಇದನ್ನು ಮುಂದುವರೆಸಬೇಕಾದ ನಾಡಿನ ಜನರು ಮೌಢ್ಯಗಳ ದಾಸರಾಗಿರುವುದು ಈ ಕಾಲದ ವ್ಯಂಗ್ಯವಾಗಿದೆ. ಆದರೂ ಮರುಭೂಮಿಯಲ್ಲಿ ಓಯಸಿಸ್‍ನಂತೆ ನಮ್ಮ ರಾಜ್ಯದಲ್ಲಿ ಹಲವು ಪ್ರಗತಿಪರ ಮಠಗಳು ಇಂದಿಗೂ ಸಕಾರಾತ್ಮಕವಾಗಿ ಕ್ರಿಯಾಶೀಲವಾಗಿದೆ. ಅಂತಹ ಮಠಗಳಲ್ಲಿ ಒಂದಾದ ಸಾಣೇಹಳ್ಳಿ ಮಠದ ಗುರುಗಳಾದ ಪಂಡಿತಾರಾಧ್ಯ ಸ್ವಾಮೀಜಿಯವರು ಸಮಾನ ಮನಸ್ಕ ಚಿಂತಕರು, ವಿವಿಧ ಮಠದ ಸ್ವಾಮೀಜಿಗಳು, ಹೋರಾಟಗಾರರು, ಯುವಜನರನ್ನು ಒಳಗೊಂಡು “ಮತ್ತೆ ಕಲ್ಯಾಣ” ಎಂಬ ಅಭಿಯಾನ ಆರಂಭಿಸುತ್ತಿದ್ದಾರೆ. ಅದರ ಮೂಲಕ ಜನಸಾಮಾನ್ಯರು ಮತ್ತು ಮುಖ್ಯವಾಗಿ ವಿದ್ಯಾರ್ಥಿ ಯುವಜನರ ಬಳಿಗೆ ಬಸವಾದಿ ಶಿವಶರಣರ ಆಶಯಗಳನ್ನು ತೆಗೆದುಕೊಂಡು ಹೋಗುವ ನಿಟ್ಟಿನಲ್ಲಿ ಪ್ರಯತ್ನಗಳನ್ನು ಶುರು ಮಾಡಿದ್ದಾರೆ.

ಮೇ 19ರಂದು ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಎಚ್.ಎಸ್.ದೊರೆಸ್ವಾಮಿಯವರ ಅಧ್ಯಕ್ಷತೆಯಲ್ಲಿ ಬೆಂಗಳೂರಿನ ಬಸವಸಮಿತಿಯ ಸಭಾಂಗಣದಲ್ಲಿ ಮತ್ತೆ ಕಲ್ಯಾಣ ಅಭಿಯಾನದ ಕುರಿತು ಚಿಂತಕರು, ಜನಪರ ಹೋರಾಟಗಾರರು, ರಂಗಕರ್ಮಿಗಳು, ಸಂಘಟಕರ, “ಮತ್ತೆ ಕಲ್ಯಾಣ”ದ ಸಂಯೋಜಕರನ್ನೊಳಗೊಂಡ ರಾಜ್ಯಮಟ್ಟದ ಸಭೆಯೊಂದು ನಡೆಯಿತು.

ಸದ್ಯಕ್ಕೆ ಇದು ಒಂದು ತಿಂಗಳ ಕಾರ್ಯಕ್ರಮವಾಗಿ ಶುರುವಾಗಲಿದ್ದು, ಮುಂದೆ ನಿರಂತರ ಅರಿವಿನ ಮತ್ತು ಪರಿವರ್ತನೆಯ ಚಳುವಳಿಯಾಗಿ ರೂಪುಗೊಳ್ಳುವ ಭರವಸೆ ಕಾಣಿಸುತ್ತಿದೆ. ಸಾಣೇಹಳ್ಳಿ ಮಠವು ಪ್ರಗತಿಪರವಾದಂತಹ ಹಲವು ವಿಚಾರಗಳಿಗೆ ಗಮನಸೆಳೆದಿದೆ. ಪ್ರಮುಖವಾಗಿ ರಂಗಭೂಮಿಗಾಗಿ ಒಂದು ಶಾಲೆಯನ್ನು ಸ್ಥಾಪಿಸಿ, ಅದಕ್ಕೆ ಪೂರಕವಾದ ವಾತಾವರಣ ಕಲ್ಪಿಸಿ ನಡೆಸುತ್ತಿರುವುದು ಮಠದ ವೈಚಾರಿಕ ಒಲವನ್ನು ತೋರುತ್ತದೆ. ಪ್ರತಿವರ್ಷ ಮಠದಿಂದ ಶಿವಸಂಚಾರದ ಹೆಸರಿನಲ್ಲಿ ರಾಜ್ಯಾದ್ಯಂತ ಮೂರುನಾಟಕಗಳ ತಿರುಗಾಟ ನಡೆಯುತ್ತದೆ. ಈ ಎಲ್ಲಾ ಚಟುವಟಿಕೆಗಳಿಗೆ ಮಾರ್ಗದರ್ಶಕರಾಗಿರುವ ಪಂಡಿತಾರಾಧ್ಯ ಸ್ವಾಮೀಜಿಯವರುರೀ ಆಂದೋಲನದಲ್ಲಿ ಸಕ್ರಿಯವಾಗಿರುವುದು ಸಾಕಷ್ಟು ಜನ ಚಿಂತಕರ ಉತ್ಸಾಹವನ್ನು ಹೆಚ್ಚಿಸಿದೆ

ವೀರಮಾತೆ ಅಕ್ಕನಾಗಮ್ಮನವರ ಐಕ್ಯ ಸ್ಥಳವಾದ ಚಿಕ್ಕಮಗಳೂರು ಜಿಲ್ಲೆ ತರೀಕೆರೆಯಿಂದ ಆರಂಭವಾಗುವ ಆಂದೋಲನವು, ಆಗಸ್ಟ್ 29ರಂದು ಬೀದರ್ ಜಿಲ್ಲೆಯ ಬಸವಕಲ್ಯಾಣದಲ್ಲಿ ಮುಕ್ತಾಯವಾಗಲಿದೆ. ಈಗಾಗಲೇ ಹಲವಾರು ಜಿಲ್ಲೆಗಳಲ್ಲಿ ಈ ಕುರಿತು ಪೂರ್ವಭಾವಿ ಸಭೆಗಳನ್ನು ನಡೆಸಲು ಸಿದ್ಧತೆ ನಡೆಯುತ್ತಿದೆ. ಪ್ರತಿಜಿಲ್ಲೆಯಲ್ಲೂ ಮತ್ತೆಕಲ್ಯಾಣದ ಕಾರ್ಯಕ್ರಮಗಳು ನಡೆಯಲಿದೆ. ಈ ಆಂದೋಲನಕ್ಕೆ ಪೂರಕವಾಗಿ ಒಂದು ಸಕ್ರಿಯ ತಂಡ ಸಾಮಾಜಿಕ ಜಾಲತಾಣದಲ್ಲಿ ಕೆಲಸ ಮಾಡುತ್ತಿದ್ದು ಮತ್ತೆ ಕಲ್ಯಾಣದ ಪರಿಕಲ್ಪನೆ ಪರಿಚಯಸಿದ ರೀತಿ ಹಿರಿಯರ ಮೆಚ್ಚುಗೆ ಗಳಿಸಿದೆ.

ಒಟ್ಟಾರೆ ಮತ್ತೆ ಕಲ್ಯಾಣ ಎಂಬ ಹೆಸರಿನಲ್ಲಿ ನಡೆಯುತ್ತಿರುವ ಈ ಅಭಿಯಾನದ ಆಶಯ ಪರಿವರ್ತನಶೀಲವಾದುದಾಗಿದೆ. ಕಲ್ಯಾಣದಲ್ಲಿ ನಡೆದ ಶರಣ ಪರಂಪರೆಯ ಹೋರಾಟವನ್ನು ಪರಿಚಯಿಸುವ ಮೂಲಕ ಶರಣರು ಆಶಿಸಿದ ಸಮಾಜವನ್ನು ಪರಿಚಯಿಸುವ ಕೆಲಸವಾಗಲಿ. ನುಡಿದಂತೆ ನಡೆದ ಶರಣರ ಜೀವನದ ಮೂಲಭೂತ ವಿಚಾರಗಳನ್ನು ಯುವಜನರಲ್ಲಿ ಬಿತ್ತುವ ಮೂಲಕ ಪರಸ್ಪರ ದ್ವೇಷಿಸುವ ಮನಸ್ಥಿತಿಯನ್ನು ಹೋಗಲಾಡಿಸಲಿ. ಪರಸ್ಪರ ಪ್ರೀತಿಸುವ ಪ್ರತಿಯೊಬ್ಬರ ಬದುಕನ್ನು ಗೌರವಿಸುವ ಶರಣರ ಚಿಂತನೆಗಳನ್ನು ಬೆಳೆಸುವಂತಾಗಲಿ. ಈ ಆಂದೋಲನವು ಯಶಸ್ವಿಗೊಂಡರೆ ನಮ್ಮದೇ ನೆಲದಲ್ಲಿ ಹುಟ್ಟಿದ ಚಳವಳಿಯನ್ನು ಸಮಕಾಲೀನಗೊಳಿಸುವ ಅಪರೂಪದ ಪ್ರಯೋಗವಾಗಿ ಎಲ್ಲರಿಗೂ ಮಾದರಿಯಾಗಲಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...