Homeಕರ್ನಾಟಕಕನ್ನಡ ನೆಲದ ಸಮಾನತೆಯ ಚಳುವಳಿಯನ್ನು ಜನಸಾಮಾನ್ಯರ ಬಳಿಗೆ ಕೊಂಡೊಯ್ಯುವ ಮಹದಾಶಯ "ಮತ್ತೆ ಕಲ್ಯಾಣ"

ಕನ್ನಡ ನೆಲದ ಸಮಾನತೆಯ ಚಳುವಳಿಯನ್ನು ಜನಸಾಮಾನ್ಯರ ಬಳಿಗೆ ಕೊಂಡೊಯ್ಯುವ ಮಹದಾಶಯ “ಮತ್ತೆ ಕಲ್ಯಾಣ”

ಮತ್ತೆ ಕಲ್ಯಾಣ ಎಂಬ ಹೆಸರಿನಲ್ಲಿ ನಡೆಯುತ್ತಿರುವ ಈ ಅಭಿಯಾನದ ಆಶಯ ಪರಿವರ್ತನಶೀಲವಾದುದಾಗಿದೆ. ಕಲ್ಯಾಣದಲ್ಲಿ ನಡೆದ ಶರಣ ಪರಂಪರೆಯ ಹೋರಾಟವನ್ನು ಪರಿಚಯಿಸುವ ಮೂಲಕ ಶರಣರು ಆಶಿಸಿದ ಸಮಾಜವನ್ನು ಪರಿಚಯಿಸುವ ಕೆಲಸವಾಗಲಿ

- Advertisement -
- Advertisement -

| ಅನಿಲ್‍ಕುಮಾರ್ ಚಿಕ್ಕದಾಳವಟ್ಟ |

ಸಾಣೇಹಳ್ಳಿಯ ಶ್ರೀ ಪಂಡಿತಾರಾಧ್ಯ ಸ್ವಾಮೀಜಿಯವರ ನೇತೃತ್ವದಲ್ಲಿ ಆರಂಭವಾಗುತ್ತಿರುವ “ಮತ್ತೆ ಕಲ್ಯಾಣ” ಕಾರ್ಯಕ್ರಮವು ಎಲ್ಲರಲ್ಲಿ ಕುತೂಹಲ ಮೂಡಿಸಿದೆ. ಈ ಬಗ್ಗೆ ತುಮಕೂರಿನ ಅನಿಲ್‍ಕುಮಾರ್ ಚಿಕ್ಕದಾಳವಟ್ಟ ಬರೆದಿದ್ದಾರೆ.

ಹನ್ನೆರಡನೆಯ ಶತಮಾನದ ಕರ್ನಾಟಕದ ವಿದ್ಯಮಾನವನ್ನು ನೆನೆಸಿಕೊಂಡರೆ ಇತಿಹಾಸ ಗೊತ್ತಿರುವ ಪ್ರತಿಯೊಬ್ಬರು ರೋಮಾಂಚಿತರಾಗುತ್ತಾರೆ. ಅಂದು ನಡೆದ ಶರಣ ಚಳುವಳಿಯು ಇಡೀ ಜಗತ್ತೇ ಪಾಠ ಕಲಿಯುವಂತಹ ಆಂಶಗಳನ್ನು ಒಳಗೊಂಡಿದೆ. ಜಾತಿಯ ಆಧಾರದಲ್ಲಿ ತೋರುತ್ತಿದ್ದ ತಾರತಮ್ಯದ ವಿರುದ್ಧ ಶರಣರು ಸಿಡಿದೆದ್ದು ಪ್ರತಿಯೊಂದು ಕಾಯಕ ಮಾಡುವವರು ಸಮಾನ ಘನತೆ, ಗೌರವ ಉಳ್ಳವರೆಂದು ಸಾರಿದರು. ಸಮಾಜದಲ್ಲಿನ ಜಾತಿ ತಾರತಮ್ಯ ಲಿಂಗತಾರತಮ್ಯದಂತಹ ಅನಿಷ್ಟಗಳನ್ನು ತೊಲಗಿಸಲು ಚಿಂತನೆಗಳನ್ನು ನಡೆಸಿದರು. ಪ್ರತಿಯೊಂದು ಜಾತಿ, ವರ್ಗದ ಜನ ಒಂದು ಕಡೆ ಕೂತು ಅವರ ಅನುಭವಕ್ಕೆ ಬಂದ ವಿಚಾರಗಳನ್ನು ವಚನಗಳ ರೂಪದಲ್ಲಿ ಹೇಳಿ ಚರ್ಚಿಸಲಾರಂಭಿಸಿದರು. ಅವರು ಪ್ರತಿಪಾದಿಸಿದ ಸಮಾನತೆಯ ಆಶಯಗಳು ಅಂದಿನ ಸಮಾಜದಲ್ಲಿ ತಲ್ಲಣವುಂಟು ಮಾಡಿ ಪರಿವರ್ತನೆಗೆ ಕಾರಣವಾದವು.

ಇಂದು ಇದನ್ನು ಮುಂದುವರೆಸಬೇಕಾದ ನಾಡಿನ ಜನರು ಮೌಢ್ಯಗಳ ದಾಸರಾಗಿರುವುದು ಈ ಕಾಲದ ವ್ಯಂಗ್ಯವಾಗಿದೆ. ಆದರೂ ಮರುಭೂಮಿಯಲ್ಲಿ ಓಯಸಿಸ್‍ನಂತೆ ನಮ್ಮ ರಾಜ್ಯದಲ್ಲಿ ಹಲವು ಪ್ರಗತಿಪರ ಮಠಗಳು ಇಂದಿಗೂ ಸಕಾರಾತ್ಮಕವಾಗಿ ಕ್ರಿಯಾಶೀಲವಾಗಿದೆ. ಅಂತಹ ಮಠಗಳಲ್ಲಿ ಒಂದಾದ ಸಾಣೇಹಳ್ಳಿ ಮಠದ ಗುರುಗಳಾದ ಪಂಡಿತಾರಾಧ್ಯ ಸ್ವಾಮೀಜಿಯವರು ಸಮಾನ ಮನಸ್ಕ ಚಿಂತಕರು, ವಿವಿಧ ಮಠದ ಸ್ವಾಮೀಜಿಗಳು, ಹೋರಾಟಗಾರರು, ಯುವಜನರನ್ನು ಒಳಗೊಂಡು “ಮತ್ತೆ ಕಲ್ಯಾಣ” ಎಂಬ ಅಭಿಯಾನ ಆರಂಭಿಸುತ್ತಿದ್ದಾರೆ. ಅದರ ಮೂಲಕ ಜನಸಾಮಾನ್ಯರು ಮತ್ತು ಮುಖ್ಯವಾಗಿ ವಿದ್ಯಾರ್ಥಿ ಯುವಜನರ ಬಳಿಗೆ ಬಸವಾದಿ ಶಿವಶರಣರ ಆಶಯಗಳನ್ನು ತೆಗೆದುಕೊಂಡು ಹೋಗುವ ನಿಟ್ಟಿನಲ್ಲಿ ಪ್ರಯತ್ನಗಳನ್ನು ಶುರು ಮಾಡಿದ್ದಾರೆ.

ಮೇ 19ರಂದು ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಎಚ್.ಎಸ್.ದೊರೆಸ್ವಾಮಿಯವರ ಅಧ್ಯಕ್ಷತೆಯಲ್ಲಿ ಬೆಂಗಳೂರಿನ ಬಸವಸಮಿತಿಯ ಸಭಾಂಗಣದಲ್ಲಿ ಮತ್ತೆ ಕಲ್ಯಾಣ ಅಭಿಯಾನದ ಕುರಿತು ಚಿಂತಕರು, ಜನಪರ ಹೋರಾಟಗಾರರು, ರಂಗಕರ್ಮಿಗಳು, ಸಂಘಟಕರ, “ಮತ್ತೆ ಕಲ್ಯಾಣ”ದ ಸಂಯೋಜಕರನ್ನೊಳಗೊಂಡ ರಾಜ್ಯಮಟ್ಟದ ಸಭೆಯೊಂದು ನಡೆಯಿತು.

ಸದ್ಯಕ್ಕೆ ಇದು ಒಂದು ತಿಂಗಳ ಕಾರ್ಯಕ್ರಮವಾಗಿ ಶುರುವಾಗಲಿದ್ದು, ಮುಂದೆ ನಿರಂತರ ಅರಿವಿನ ಮತ್ತು ಪರಿವರ್ತನೆಯ ಚಳುವಳಿಯಾಗಿ ರೂಪುಗೊಳ್ಳುವ ಭರವಸೆ ಕಾಣಿಸುತ್ತಿದೆ. ಸಾಣೇಹಳ್ಳಿ ಮಠವು ಪ್ರಗತಿಪರವಾದಂತಹ ಹಲವು ವಿಚಾರಗಳಿಗೆ ಗಮನಸೆಳೆದಿದೆ. ಪ್ರಮುಖವಾಗಿ ರಂಗಭೂಮಿಗಾಗಿ ಒಂದು ಶಾಲೆಯನ್ನು ಸ್ಥಾಪಿಸಿ, ಅದಕ್ಕೆ ಪೂರಕವಾದ ವಾತಾವರಣ ಕಲ್ಪಿಸಿ ನಡೆಸುತ್ತಿರುವುದು ಮಠದ ವೈಚಾರಿಕ ಒಲವನ್ನು ತೋರುತ್ತದೆ. ಪ್ರತಿವರ್ಷ ಮಠದಿಂದ ಶಿವಸಂಚಾರದ ಹೆಸರಿನಲ್ಲಿ ರಾಜ್ಯಾದ್ಯಂತ ಮೂರುನಾಟಕಗಳ ತಿರುಗಾಟ ನಡೆಯುತ್ತದೆ. ಈ ಎಲ್ಲಾ ಚಟುವಟಿಕೆಗಳಿಗೆ ಮಾರ್ಗದರ್ಶಕರಾಗಿರುವ ಪಂಡಿತಾರಾಧ್ಯ ಸ್ವಾಮೀಜಿಯವರುರೀ ಆಂದೋಲನದಲ್ಲಿ ಸಕ್ರಿಯವಾಗಿರುವುದು ಸಾಕಷ್ಟು ಜನ ಚಿಂತಕರ ಉತ್ಸಾಹವನ್ನು ಹೆಚ್ಚಿಸಿದೆ

ವೀರಮಾತೆ ಅಕ್ಕನಾಗಮ್ಮನವರ ಐಕ್ಯ ಸ್ಥಳವಾದ ಚಿಕ್ಕಮಗಳೂರು ಜಿಲ್ಲೆ ತರೀಕೆರೆಯಿಂದ ಆರಂಭವಾಗುವ ಆಂದೋಲನವು, ಆಗಸ್ಟ್ 29ರಂದು ಬೀದರ್ ಜಿಲ್ಲೆಯ ಬಸವಕಲ್ಯಾಣದಲ್ಲಿ ಮುಕ್ತಾಯವಾಗಲಿದೆ. ಈಗಾಗಲೇ ಹಲವಾರು ಜಿಲ್ಲೆಗಳಲ್ಲಿ ಈ ಕುರಿತು ಪೂರ್ವಭಾವಿ ಸಭೆಗಳನ್ನು ನಡೆಸಲು ಸಿದ್ಧತೆ ನಡೆಯುತ್ತಿದೆ. ಪ್ರತಿಜಿಲ್ಲೆಯಲ್ಲೂ ಮತ್ತೆಕಲ್ಯಾಣದ ಕಾರ್ಯಕ್ರಮಗಳು ನಡೆಯಲಿದೆ. ಈ ಆಂದೋಲನಕ್ಕೆ ಪೂರಕವಾಗಿ ಒಂದು ಸಕ್ರಿಯ ತಂಡ ಸಾಮಾಜಿಕ ಜಾಲತಾಣದಲ್ಲಿ ಕೆಲಸ ಮಾಡುತ್ತಿದ್ದು ಮತ್ತೆ ಕಲ್ಯಾಣದ ಪರಿಕಲ್ಪನೆ ಪರಿಚಯಸಿದ ರೀತಿ ಹಿರಿಯರ ಮೆಚ್ಚುಗೆ ಗಳಿಸಿದೆ.

ಒಟ್ಟಾರೆ ಮತ್ತೆ ಕಲ್ಯಾಣ ಎಂಬ ಹೆಸರಿನಲ್ಲಿ ನಡೆಯುತ್ತಿರುವ ಈ ಅಭಿಯಾನದ ಆಶಯ ಪರಿವರ್ತನಶೀಲವಾದುದಾಗಿದೆ. ಕಲ್ಯಾಣದಲ್ಲಿ ನಡೆದ ಶರಣ ಪರಂಪರೆಯ ಹೋರಾಟವನ್ನು ಪರಿಚಯಿಸುವ ಮೂಲಕ ಶರಣರು ಆಶಿಸಿದ ಸಮಾಜವನ್ನು ಪರಿಚಯಿಸುವ ಕೆಲಸವಾಗಲಿ. ನುಡಿದಂತೆ ನಡೆದ ಶರಣರ ಜೀವನದ ಮೂಲಭೂತ ವಿಚಾರಗಳನ್ನು ಯುವಜನರಲ್ಲಿ ಬಿತ್ತುವ ಮೂಲಕ ಪರಸ್ಪರ ದ್ವೇಷಿಸುವ ಮನಸ್ಥಿತಿಯನ್ನು ಹೋಗಲಾಡಿಸಲಿ. ಪರಸ್ಪರ ಪ್ರೀತಿಸುವ ಪ್ರತಿಯೊಬ್ಬರ ಬದುಕನ್ನು ಗೌರವಿಸುವ ಶರಣರ ಚಿಂತನೆಗಳನ್ನು ಬೆಳೆಸುವಂತಾಗಲಿ. ಈ ಆಂದೋಲನವು ಯಶಸ್ವಿಗೊಂಡರೆ ನಮ್ಮದೇ ನೆಲದಲ್ಲಿ ಹುಟ್ಟಿದ ಚಳವಳಿಯನ್ನು ಸಮಕಾಲೀನಗೊಳಿಸುವ ಅಪರೂಪದ ಪ್ರಯೋಗವಾಗಿ ಎಲ್ಲರಿಗೂ ಮಾದರಿಯಾಗಲಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...