Homeಕರ್ನಾಟಕಕನ್ನಡ ನೆಲದ ಸಮಾನತೆಯ ಚಳುವಳಿಯನ್ನು ಜನಸಾಮಾನ್ಯರ ಬಳಿಗೆ ಕೊಂಡೊಯ್ಯುವ ಮಹದಾಶಯ "ಮತ್ತೆ ಕಲ್ಯಾಣ"

ಕನ್ನಡ ನೆಲದ ಸಮಾನತೆಯ ಚಳುವಳಿಯನ್ನು ಜನಸಾಮಾನ್ಯರ ಬಳಿಗೆ ಕೊಂಡೊಯ್ಯುವ ಮಹದಾಶಯ “ಮತ್ತೆ ಕಲ್ಯಾಣ”

ಮತ್ತೆ ಕಲ್ಯಾಣ ಎಂಬ ಹೆಸರಿನಲ್ಲಿ ನಡೆಯುತ್ತಿರುವ ಈ ಅಭಿಯಾನದ ಆಶಯ ಪರಿವರ್ತನಶೀಲವಾದುದಾಗಿದೆ. ಕಲ್ಯಾಣದಲ್ಲಿ ನಡೆದ ಶರಣ ಪರಂಪರೆಯ ಹೋರಾಟವನ್ನು ಪರಿಚಯಿಸುವ ಮೂಲಕ ಶರಣರು ಆಶಿಸಿದ ಸಮಾಜವನ್ನು ಪರಿಚಯಿಸುವ ಕೆಲಸವಾಗಲಿ

- Advertisement -
- Advertisement -

| ಅನಿಲ್‍ಕುಮಾರ್ ಚಿಕ್ಕದಾಳವಟ್ಟ |

ಸಾಣೇಹಳ್ಳಿಯ ಶ್ರೀ ಪಂಡಿತಾರಾಧ್ಯ ಸ್ವಾಮೀಜಿಯವರ ನೇತೃತ್ವದಲ್ಲಿ ಆರಂಭವಾಗುತ್ತಿರುವ “ಮತ್ತೆ ಕಲ್ಯಾಣ” ಕಾರ್ಯಕ್ರಮವು ಎಲ್ಲರಲ್ಲಿ ಕುತೂಹಲ ಮೂಡಿಸಿದೆ. ಈ ಬಗ್ಗೆ ತುಮಕೂರಿನ ಅನಿಲ್‍ಕುಮಾರ್ ಚಿಕ್ಕದಾಳವಟ್ಟ ಬರೆದಿದ್ದಾರೆ.

ಹನ್ನೆರಡನೆಯ ಶತಮಾನದ ಕರ್ನಾಟಕದ ವಿದ್ಯಮಾನವನ್ನು ನೆನೆಸಿಕೊಂಡರೆ ಇತಿಹಾಸ ಗೊತ್ತಿರುವ ಪ್ರತಿಯೊಬ್ಬರು ರೋಮಾಂಚಿತರಾಗುತ್ತಾರೆ. ಅಂದು ನಡೆದ ಶರಣ ಚಳುವಳಿಯು ಇಡೀ ಜಗತ್ತೇ ಪಾಠ ಕಲಿಯುವಂತಹ ಆಂಶಗಳನ್ನು ಒಳಗೊಂಡಿದೆ. ಜಾತಿಯ ಆಧಾರದಲ್ಲಿ ತೋರುತ್ತಿದ್ದ ತಾರತಮ್ಯದ ವಿರುದ್ಧ ಶರಣರು ಸಿಡಿದೆದ್ದು ಪ್ರತಿಯೊಂದು ಕಾಯಕ ಮಾಡುವವರು ಸಮಾನ ಘನತೆ, ಗೌರವ ಉಳ್ಳವರೆಂದು ಸಾರಿದರು. ಸಮಾಜದಲ್ಲಿನ ಜಾತಿ ತಾರತಮ್ಯ ಲಿಂಗತಾರತಮ್ಯದಂತಹ ಅನಿಷ್ಟಗಳನ್ನು ತೊಲಗಿಸಲು ಚಿಂತನೆಗಳನ್ನು ನಡೆಸಿದರು. ಪ್ರತಿಯೊಂದು ಜಾತಿ, ವರ್ಗದ ಜನ ಒಂದು ಕಡೆ ಕೂತು ಅವರ ಅನುಭವಕ್ಕೆ ಬಂದ ವಿಚಾರಗಳನ್ನು ವಚನಗಳ ರೂಪದಲ್ಲಿ ಹೇಳಿ ಚರ್ಚಿಸಲಾರಂಭಿಸಿದರು. ಅವರು ಪ್ರತಿಪಾದಿಸಿದ ಸಮಾನತೆಯ ಆಶಯಗಳು ಅಂದಿನ ಸಮಾಜದಲ್ಲಿ ತಲ್ಲಣವುಂಟು ಮಾಡಿ ಪರಿವರ್ತನೆಗೆ ಕಾರಣವಾದವು.

ಇಂದು ಇದನ್ನು ಮುಂದುವರೆಸಬೇಕಾದ ನಾಡಿನ ಜನರು ಮೌಢ್ಯಗಳ ದಾಸರಾಗಿರುವುದು ಈ ಕಾಲದ ವ್ಯಂಗ್ಯವಾಗಿದೆ. ಆದರೂ ಮರುಭೂಮಿಯಲ್ಲಿ ಓಯಸಿಸ್‍ನಂತೆ ನಮ್ಮ ರಾಜ್ಯದಲ್ಲಿ ಹಲವು ಪ್ರಗತಿಪರ ಮಠಗಳು ಇಂದಿಗೂ ಸಕಾರಾತ್ಮಕವಾಗಿ ಕ್ರಿಯಾಶೀಲವಾಗಿದೆ. ಅಂತಹ ಮಠಗಳಲ್ಲಿ ಒಂದಾದ ಸಾಣೇಹಳ್ಳಿ ಮಠದ ಗುರುಗಳಾದ ಪಂಡಿತಾರಾಧ್ಯ ಸ್ವಾಮೀಜಿಯವರು ಸಮಾನ ಮನಸ್ಕ ಚಿಂತಕರು, ವಿವಿಧ ಮಠದ ಸ್ವಾಮೀಜಿಗಳು, ಹೋರಾಟಗಾರರು, ಯುವಜನರನ್ನು ಒಳಗೊಂಡು “ಮತ್ತೆ ಕಲ್ಯಾಣ” ಎಂಬ ಅಭಿಯಾನ ಆರಂಭಿಸುತ್ತಿದ್ದಾರೆ. ಅದರ ಮೂಲಕ ಜನಸಾಮಾನ್ಯರು ಮತ್ತು ಮುಖ್ಯವಾಗಿ ವಿದ್ಯಾರ್ಥಿ ಯುವಜನರ ಬಳಿಗೆ ಬಸವಾದಿ ಶಿವಶರಣರ ಆಶಯಗಳನ್ನು ತೆಗೆದುಕೊಂಡು ಹೋಗುವ ನಿಟ್ಟಿನಲ್ಲಿ ಪ್ರಯತ್ನಗಳನ್ನು ಶುರು ಮಾಡಿದ್ದಾರೆ.

ಮೇ 19ರಂದು ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಎಚ್.ಎಸ್.ದೊರೆಸ್ವಾಮಿಯವರ ಅಧ್ಯಕ್ಷತೆಯಲ್ಲಿ ಬೆಂಗಳೂರಿನ ಬಸವಸಮಿತಿಯ ಸಭಾಂಗಣದಲ್ಲಿ ಮತ್ತೆ ಕಲ್ಯಾಣ ಅಭಿಯಾನದ ಕುರಿತು ಚಿಂತಕರು, ಜನಪರ ಹೋರಾಟಗಾರರು, ರಂಗಕರ್ಮಿಗಳು, ಸಂಘಟಕರ, “ಮತ್ತೆ ಕಲ್ಯಾಣ”ದ ಸಂಯೋಜಕರನ್ನೊಳಗೊಂಡ ರಾಜ್ಯಮಟ್ಟದ ಸಭೆಯೊಂದು ನಡೆಯಿತು.

ಸದ್ಯಕ್ಕೆ ಇದು ಒಂದು ತಿಂಗಳ ಕಾರ್ಯಕ್ರಮವಾಗಿ ಶುರುವಾಗಲಿದ್ದು, ಮುಂದೆ ನಿರಂತರ ಅರಿವಿನ ಮತ್ತು ಪರಿವರ್ತನೆಯ ಚಳುವಳಿಯಾಗಿ ರೂಪುಗೊಳ್ಳುವ ಭರವಸೆ ಕಾಣಿಸುತ್ತಿದೆ. ಸಾಣೇಹಳ್ಳಿ ಮಠವು ಪ್ರಗತಿಪರವಾದಂತಹ ಹಲವು ವಿಚಾರಗಳಿಗೆ ಗಮನಸೆಳೆದಿದೆ. ಪ್ರಮುಖವಾಗಿ ರಂಗಭೂಮಿಗಾಗಿ ಒಂದು ಶಾಲೆಯನ್ನು ಸ್ಥಾಪಿಸಿ, ಅದಕ್ಕೆ ಪೂರಕವಾದ ವಾತಾವರಣ ಕಲ್ಪಿಸಿ ನಡೆಸುತ್ತಿರುವುದು ಮಠದ ವೈಚಾರಿಕ ಒಲವನ್ನು ತೋರುತ್ತದೆ. ಪ್ರತಿವರ್ಷ ಮಠದಿಂದ ಶಿವಸಂಚಾರದ ಹೆಸರಿನಲ್ಲಿ ರಾಜ್ಯಾದ್ಯಂತ ಮೂರುನಾಟಕಗಳ ತಿರುಗಾಟ ನಡೆಯುತ್ತದೆ. ಈ ಎಲ್ಲಾ ಚಟುವಟಿಕೆಗಳಿಗೆ ಮಾರ್ಗದರ್ಶಕರಾಗಿರುವ ಪಂಡಿತಾರಾಧ್ಯ ಸ್ವಾಮೀಜಿಯವರುರೀ ಆಂದೋಲನದಲ್ಲಿ ಸಕ್ರಿಯವಾಗಿರುವುದು ಸಾಕಷ್ಟು ಜನ ಚಿಂತಕರ ಉತ್ಸಾಹವನ್ನು ಹೆಚ್ಚಿಸಿದೆ

ವೀರಮಾತೆ ಅಕ್ಕನಾಗಮ್ಮನವರ ಐಕ್ಯ ಸ್ಥಳವಾದ ಚಿಕ್ಕಮಗಳೂರು ಜಿಲ್ಲೆ ತರೀಕೆರೆಯಿಂದ ಆರಂಭವಾಗುವ ಆಂದೋಲನವು, ಆಗಸ್ಟ್ 29ರಂದು ಬೀದರ್ ಜಿಲ್ಲೆಯ ಬಸವಕಲ್ಯಾಣದಲ್ಲಿ ಮುಕ್ತಾಯವಾಗಲಿದೆ. ಈಗಾಗಲೇ ಹಲವಾರು ಜಿಲ್ಲೆಗಳಲ್ಲಿ ಈ ಕುರಿತು ಪೂರ್ವಭಾವಿ ಸಭೆಗಳನ್ನು ನಡೆಸಲು ಸಿದ್ಧತೆ ನಡೆಯುತ್ತಿದೆ. ಪ್ರತಿಜಿಲ್ಲೆಯಲ್ಲೂ ಮತ್ತೆಕಲ್ಯಾಣದ ಕಾರ್ಯಕ್ರಮಗಳು ನಡೆಯಲಿದೆ. ಈ ಆಂದೋಲನಕ್ಕೆ ಪೂರಕವಾಗಿ ಒಂದು ಸಕ್ರಿಯ ತಂಡ ಸಾಮಾಜಿಕ ಜಾಲತಾಣದಲ್ಲಿ ಕೆಲಸ ಮಾಡುತ್ತಿದ್ದು ಮತ್ತೆ ಕಲ್ಯಾಣದ ಪರಿಕಲ್ಪನೆ ಪರಿಚಯಸಿದ ರೀತಿ ಹಿರಿಯರ ಮೆಚ್ಚುಗೆ ಗಳಿಸಿದೆ.

ಒಟ್ಟಾರೆ ಮತ್ತೆ ಕಲ್ಯಾಣ ಎಂಬ ಹೆಸರಿನಲ್ಲಿ ನಡೆಯುತ್ತಿರುವ ಈ ಅಭಿಯಾನದ ಆಶಯ ಪರಿವರ್ತನಶೀಲವಾದುದಾಗಿದೆ. ಕಲ್ಯಾಣದಲ್ಲಿ ನಡೆದ ಶರಣ ಪರಂಪರೆಯ ಹೋರಾಟವನ್ನು ಪರಿಚಯಿಸುವ ಮೂಲಕ ಶರಣರು ಆಶಿಸಿದ ಸಮಾಜವನ್ನು ಪರಿಚಯಿಸುವ ಕೆಲಸವಾಗಲಿ. ನುಡಿದಂತೆ ನಡೆದ ಶರಣರ ಜೀವನದ ಮೂಲಭೂತ ವಿಚಾರಗಳನ್ನು ಯುವಜನರಲ್ಲಿ ಬಿತ್ತುವ ಮೂಲಕ ಪರಸ್ಪರ ದ್ವೇಷಿಸುವ ಮನಸ್ಥಿತಿಯನ್ನು ಹೋಗಲಾಡಿಸಲಿ. ಪರಸ್ಪರ ಪ್ರೀತಿಸುವ ಪ್ರತಿಯೊಬ್ಬರ ಬದುಕನ್ನು ಗೌರವಿಸುವ ಶರಣರ ಚಿಂತನೆಗಳನ್ನು ಬೆಳೆಸುವಂತಾಗಲಿ. ಈ ಆಂದೋಲನವು ಯಶಸ್ವಿಗೊಂಡರೆ ನಮ್ಮದೇ ನೆಲದಲ್ಲಿ ಹುಟ್ಟಿದ ಚಳವಳಿಯನ್ನು ಸಮಕಾಲೀನಗೊಳಿಸುವ ಅಪರೂಪದ ಪ್ರಯೋಗವಾಗಿ ಎಲ್ಲರಿಗೂ ಮಾದರಿಯಾಗಲಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...