Homeಅಂಕಣಗಳುಸಂಪಾದಕೀಯ: ಕಿಸಾನ್ ಮುಕ್ತಿ ಮಾರ್ಚ್ ಆಂದೋಲನದ ಪಾಠಗಳು

ಸಂಪಾದಕೀಯ: ಕಿಸಾನ್ ಮುಕ್ತಿ ಮಾರ್ಚ್ ಆಂದೋಲನದ ಪಾಠಗಳು

- Advertisement -
- Advertisement -

ನವೆಂಬರ್ 30ರಂದು ದೆಹಲಿಯಲ್ಲಿ ನಡೆಯಲಿರುವ ರೈತ ಹೋರಾಟದ ಕುರಿತು ಕಳೆದ ವಾರವೇ ಪತ್ರಿಕೆಯಲ್ಲಿ ಕಾದಂಬಿನಿಯವರು ಬರೆದಿದ್ದರು. ಅದೀಗ ಮುಗಿದಿದೆ. ಆ ಹೋರಾಟ ನಡೆಯಲು 4-5 ದಿನಗಳಿರುವವರೆಗೂ ಏನೂ ಮಾತಾಡದಿದ್ದ ದೊಡ್ಡ ಮಾಧ್ಯಮಗಳೂ ತಿರುಗಿ ನೋಡುವಂತೆ, ಇದು ದೇಶದೆಲ್ಲೆಡೆ ಸದ್ದು ಮಾಡಿದೆ. ನಮ್ಮ ಪತ್ರಿಕಾ ತಂಡವೂ ಇದರ ಬಗ್ಗೆ ಕುತೂಹಲದಿಂದ ಎದುರು ನೋಡುತ್ತಿತ್ತು ಮತ್ತು ನಮ್ಮ ಬಳಗದ ಹಲವರು ಖುದ್ದಾಗಿ ಭಾಗವಹಿಸಿದ್ದರು. ಅವರಿಂದ ನೇರವಾಗಿ ತಿಳಿದುಕೊಂಡ ಕೆಲವು ಅಂಶಗಳು ಆಸಕ್ತಿದಾಯಕವಾಗಿವೆ. ದೊಡ್ಡ ಹೋರಾಟಗಳಿಲ್ಲ ಎಂಬ ಭಾವನೆ ಸ್ಥಿರಗೊಂಡಿರುವ ಸಂದರ್ಭದಲ್ಲಿ ಈ ಪ್ರಯೋಗವು ಕೆಲವು ಸಂಗತಿಗಳನ್ನು ಮತ್ತೊಮ್ಮೆ ಸಾಬೀತುಪಡಿಸಿದೆ. ಆ ಕಾಲಕ್ಕೆ ತಕ್ಕುನಾದ ರೀತಿಯಲ್ಲಿ ಕಟ್ಟುವ ಹೋರಾಟದಿಂದ ಇರುವ ಸ್ಥಗಿತ ಪರಿಸ್ಥಿತಿಯಲ್ಲಿ ಬದಲಾವಣೆ ತರಲು ಸಾಧ್ಯ ಎಂಬುದು ಬಹಳ ಮುಖ್ಯವಾದ ಸಂಗತಿ.

ಹಲವರ ಅನಿಸಿಕೆಗಳಿಗೆ ವಿರುದ್ಧ ರೀತಿಯಲ್ಲಿ, ಈ ದೆಹಲಿ ಹೋರಾಟವು ಇದ್ದಕ್ಕಿದ್ದಂತೆ ಆರಂಭವಾದ ಒಂದು ದಿನದ ಪ್ರತಿಭಟನೆಯಲ್ಲ. ಅದು ಸುಮಾರು ಒಂದೂವರೆ ವರ್ಷಗಳ ಪ್ರಕ್ರಿಯೆ. ಅದರಲ್ಲೂ ಮಧ್ಯಪ್ರದೇಶದ ಮಂಡಸೂರಿನಲ್ಲಿ ಆದ ಗೋಲೀಬಾರ್ ಸಂದರ್ಭದಲ್ಲಿ ಅಲ್ಲಿಗೆ ಹೋಗಿ ಭೇಟಿಯಿತ್ತು ಹೋರಾಟದಲ್ಲಿ ಭಾಗಿಯಾದ ಸಂಘಟನೆಗಳು ಸಂಕಲ್ಪ ತೊಟ್ಟಂದಿನಿಂದ ಇದು ಆರಂಭವಾಯಿತು. ಅಲ್ಲಿಂದ ಇಲ್ಲಿಯವರೆಗೆ ಅತ್ಯಂತ ವ್ಯವಸ್ಥಿತವಾದ ರೀತಿಯಲ್ಲಿ ಹಂತ ಹಂತವಾಗಿ ಬೆಳೆದು ಬಂದ ಈ ಆಂದೋಲನದ ಕುರಿತು ಯಾರೂ ಬೆರಳು ಮಾಡಿ ತೋರಿಸಲಾಗದಂತೆ ಗಟ್ಟಿ ನೆಲೆಯಲ್ಲಿ ಅದನ್ನು ಕಟ್ಟಲಾಯಿತು.

ಸ್ವರಾಜ್ ಅಭಿಯಾನದ ಭಾಗವಾಗಿರುವ ಜೈಕಿಸಾನ್ ಆಂದೋಲನದವರು ಈ ಪ್ರಕ್ರಿಯೆಯನ್ನು ಆರಂಭಿಸಿದರಾದರೂ, ಬಹುಬೇಗನೇ ಸುಮಾರು ನೂರಕ್ಕೂ ಹೆಚ್ಚು ರೈತ ಸಂಘಟನೆಗಳು ಒಟ್ಟಾದವು. ಸಮಿತಿಗಳು ರಚನೆಯಾಗುವ ಹೊತ್ತಿಗೆ ಅದರ ಸಂಖ್ಯೆ 175 ಮುಟ್ಟಿತ್ತು. ಅಂತಿಮವಾಗಿ ಸುಮಾರು 200 ಸಂಘಟನೆಗಳು ಜೊತೆಯಾಗಿದ್ದವು. ಸಾಂಪ್ರದಾಯಿಕ ರೈತ ಸಂಘಟನೆಗಳಲ್ಲದೇ, ಎಡಪಕ್ಷಗಳ ಜೊತೆಗಿರುವ ರೈತ, ಕೃಷಿಕಾರ್ಮಿಕ ಸಂಘಟನೆಗಳೂ ಇದರ ಭಾಗವಾದವು.

ರೈತರ ನೂರಾರು ಸಮಸ್ಯೆಗಳ ಕೇಂದ್ರದಲ್ಲಿರುವ ಎರಡು ಅಂಶಗಳನ್ನು ಪಟ್ಟಿ ಮಾಡಲಾಯಿತು. ಇದುವರೆಗಿನ ಬಿಕ್ಕಟ್ಟಿನ ಕಾರಣದಿಂದ ಸಂಚಯಿತವಾಗಿರುವ ಸಾಲಮನ್ನಾ, ಮುಂದೆ ಸಾಲ ಮಾಡದಂತಹ, ಲಾಭ ಕಾಣಲು ಸಾಧ್ಯವಾಗುವಂತೆ ಎಲ್ಲಾ ಬೆಳೆಗಳಿಗೂ ಲಾಭದಾಯಕವಾದ ಬೆಲೆ ಖಾತರಿ. ಇದನ್ನು ಮೇಲ್ನೋಟದ ಘೋಷಣೆಯಾಗಿಯಷ್ಟೇ ಅಲ್ಲದೇ, ಕಾಯ್ದೆ ಬದ್ಧವಾಗಿ ಇವು ಸರಿಯಾಗಿ ಜಾರಿಗೊಳ್ಳಲು ಋಣ ಮುಕ್ತ ಕಾಯ್ದೆ ಮತ್ತು ಸ್ವಾಮಿನಾಥನ್ ಆಯೋಗದ ಶಿಫಾರಸ್ಸಾಗಿರುವ ಸಿ 2 + 50% ಬೆಲೆಗಿಂತ ಕಡಿಮೆ ಮಾರಾಟವಾಗದಂತೆ ತಡೆದು ಬೆಂಬಲ ಬೆಲೆಯನ್ನು ಖಾತರಿಗೊಳಿಸುವ ಕಾಯ್ದೆ ಜಾರಿಗೆ ಬರಬೇಕೆಂಬುದು ಪ್ರಮುಖ ಒತ್ತಾಯವಾಗಿತ್ತು.

ಇದಕ್ಕಾಗಿ ತಜ್ಞರ ತಂಡಗಳು ರೂಪುಗೊಂಡವು ಮತ್ತು ಅವರು ಆ ಕಾಯ್ದೆಯ ಕರಡುಗಳನ್ನೂ ರೂಪಿಸಿಕೊಟ್ಟರು. ಈ ಹೊತ್ತಿಗೆ ಇದರ ಸಕ್ರಿಯ ಸಹಭಾಗಿಗಳಾಗಿದ್ದ ಮಹಾರಾಷ್ಟ್ರದ ರೈತ ಸಂಘಟನೆಯ ನಾಯಕ ಮತ್ತು ಲೋಕಸಭಾ ಸದಸ್ಯ ರಾಜುಶೆಟ್ಟಿ ಮತ್ತು ಸಿಪಿಎಂನ ರಾಜ್ಯಸಭಾ ಸದಸ್ಯ ರಾಜೇಶ್ ಅವರುಗಳು ತಮ್ಮ ಸದನಗಳ ಮುಖ್ಯಸ್ಥರಿಗೆ ಖಾಸಗಿ ಮಸೂದೆಗಳಾಗಿ ಇವನ್ನು ಸಲ್ಲಿಸಿಯೂ ಬಿಟ್ಟರು. ಆದರೆ, ಮೋದಿ ಸರ್ಕಾರವು ಈ ಸಾರಿ ಬಜೆಟ್‌ನಲ್ಲಿ ಉತ್ಪಾದನಾ ವೆಚ್ಚದ ಮೇಲೆ 50­%ನಷ್ಟು ಲಾಭದಾಯಕ ಬೆಲೆಯನ್ನು ಖಾತರಿಗೊಳಿಸುವುದಾಗಿ ಬುರುಡೆ ಬಿಟ್ಟಿದ್ದರು. ಸ್ವರಾಜ್ ಅಭಿಯಾನವು ಇದನ್ನೊಂದು ಸವಾಲಾಗಿ ಸ್ವೀಕರಿಸಿ, ಈಗಾಗಲೇ ಘೋಷಿಸಲಾಗಿರುವ ಕನಿಷ್ಠ ಬೆಂಬಲ ಬೆಲೆಯೂ ಹೇಗೆ ನೂರಕ್ಕೆ 95 ಎಪಿಎಂಸಿ ಮಂಡಿಗಳಲ್ಲಿ ಲಭ್ಯವಿಲ್ಲ ಎಂಬುದನ್ನು ತನಿಖೆ/ಸಮೀಕ್ಷೆಯ ಮೂಲಕ ಸಾಬೀತುಪಡಿಸಿತು.

ಹಾಗೆಯೇ ರೈತರು ಮತ್ತು ಕೃಷಿಯ ವಿಚಾರದಲ್ಲಿ ಮೋದಿ ಸರ್ಕಾರ ಹೇಳಿದ್ದೇನು, ಮಾಡಿದ್ದೇನು ಎಂಬುದನ್ನು ದಾಖಲೆಗಳೊಂದಿಗೆ ವಿವರಿಸುವ ಪುಸ್ತಕವನ್ನು ತಂದರು. ದೀರ್ಘವಾಗಿ ಓದಲು ಸಾಧ್ಯವಾಗದವರಿಗೆ ಜೇಬಿನಲ್ಲಿಟ್ಟುಕೊಳ್ಳಬಹುದಾದ ಪುಸ್ತಕವನ್ನೂ ಹೊರತಂದರು.

ಎಡಪಕ್ಷಗಳು ಮತ್ತು ರೈತ ಸಂಘಟನೆಗಳು ಈ ರೀತಿಯಲ್ಲಿ ಒಂದಾಗಿ ಕೆಲಸ ಮಾಡಿ ಒಂದು ತಕ್ಷಣದ ಗುರಿ ಮುಟ್ಟಲು ದುಡಿದ ಉದಾಹರಣೆಗಳು ಹೆಚ್ಚಿಲ್ಲ. ಆದರೆ, ಈ ಸಾರಿ ಅದು ಸಾಧ್ಯವಾಯಿತು. ಮಹಾರಾಷ್ಟ್ರ, ರಾಜಸ್ತಾನ, ಉತ್ತರಖಂಡ್‌ಗಳಲ್ಲಿ ಭಾರೀ ಬೃಹತ್ ಪ್ರಮಾಣದ ಕಾಲ್ನಡಿಗೆಗಳನ್ನು ಆಯೋಜಿಸಿದ್ದ ಎಡಪಕ್ಷಗಳು ಈ ಸಮಿತಿಯ ಜೊತೆಗೂ ಸಕ್ರಿಯವಾಗಿ ಕೆಲಸ ಮಾಡಿದವು. ವಿಜು ಕೃಷ್ಣನ್‌ರಂತಹ ಯುವ ನಾಯಕರು ಅದರ ನಾಯಕತ್ವ ವಹಿಸಿದ್ದರಿಂದಾಗಿಯೂ ಇದು ಸಾಧ್ಯವಾಗಿರಬಹುದು. ಆದರೆ, ಸಾಧ್ಯವಾಗಿದ್ದು ವಾಸ್ತವ.

ವಿವಿಧ ಧಾರೆಗಳ ಕನಿಷ್ಠ 25 ಸಂಘಟನೆಗಳನ್ನೂ ಒಂದೆಡೆ ಸೇರಿಸಿ ನಿರಂತರವಾಗಿ ಕೆಲಸ ಮಾಡುವುದು ಸುಲಭವಲ್ಲವೆಂಬುದು ಅದರಲ್ಲಿ ತೊಡಗಿಕೊಂಡಿರುವ ಯಾರಿಗೇ ಆಗಲಿ ಗೊತ್ತಿರುತ್ತದೆ. ಅಂತಹ ಕಷ್ಟದ ಕೆಲಸವನ್ನು ಸಾಧ್ಯವಾಗಿಸಿಕೊಂಡ ಎಲ್ಲರೂ ಅಭಿನಂದನಾರ್ಹರು. ಹಾಗೆಂದು ಇದರಲ್ಲಿ ಸಮಸ್ಯೆಗಳಿರುವುದಿಲ್ಲವೆಂದೇನಲ್ಲ. ನೂರೆಂಟು ಬಗೆಯ ಕಿತ್ತಾಟಗಳು ಇದರಲ್ಲಿ ಸಹಜವಾಗಿಯೇ ಇರುತ್ತವೆ. ಅವೆಲ್ಲವನ್ನೂ ಹೊರಗೆ ಬರದೇ ನಿಭಾಯಿಸಿದ ಜಾಣ್ಮೆಗೆ ‘ಅಖಿಲ ಭಾರತ ರೈತ ಹೋರಾಟ ಸಮನ್ವಯ ಸಮಿತಿ’ಯ ನಾಯಕತ್ವವನ್ನು ಅಭಿನಂದಿಸಲೇಬೇಕು.

ರೈತರ ಹೋರಾಟಕ್ಕೆ ಇತರ ಸಮುದಾಯಗಳ ಬೆಂಬಲವನ್ನು ಸಂಘಟಿಸಿದ್ದು ಇನ್ನೊಂದು ಜಾಣ್ಮೆಯ ನಡೆ. ಕರ್ನಾಟಕದಲ್ಲೂ ಸಿಪಿಎಂ ಪಕ್ಷದ ಮುತುವರ್ಜಿಯಿಂದ ಅದು ನಡೆದದ್ದನ್ನು ಎಲ್ಲರೂ ಗಮನಿಸಿರಬಹುದು. ದೆಹಲಿಯಲ್ಲಿ ನೇಷನ್ ಫಾರ್ ಫಾiರ‍್ಸ್, ಡಿಯು ಫಾರ್ ಫಾರ್ಮರ್ಸ್, ವಕೀಲರು, ಪತ್ರಕರ್ತರು, ವೈದ್ಯರು ಇತ್ಯಾದಿ ಪ್ರಯತ್ನಗಳು ನಡೆದವು. ಇಷ್ಟೇ ಪ್ರಮುಖವಾಗಿ ಮಾಡಿದ ಮತ್ತೊಂದು ಪ್ರಯತ್ನವೆಂದರೆ, ಕೇವಲ ಆಡಳಿತ ಪಕ್ಷವನ್ನು ಗುರಿ ಮಾಡಿದ್ದಲ್ಲದೇ, ವಿರೋಧ ಪಕ್ಷಗಳ ಸಭೆ ಕರೆದು ಅವರ ನಿಲುವನ್ನು ಸ್ಪಷ್ಟಮಾಡಲು ಆಗ್ರಹಿಸಲಾಯಿತು. ಅಂತಿಮವಾಗಿ ಅವರುಗಳು ನ.೩೦ರಂದು ಬಂದು ವೇದಿಕೆಯ ಮೇಲೆಯೇ ತಮ್ಮ ನಿಲುವನ್ನು ಬಹಿರಂಗಪಡಿಸಬೇಕಾಯಿತು.

ವಿರೋಧ ಪಕ್ಷಗಳ ನಾಯಕರುಗಳು ರೈತರ ಪ್ರಮುಖ ಹಕ್ಕೊತ್ತಾಯಗಳ ಮೇಲೆ ಕೇಂದ್ರೀಕರಿಸದೇ ಮೋದಿ ಸರ್ಕಾರವನ್ನು ಬಯ್ಯುವುದರಲ್ಲೇ ಕಾಲ ಕಳೆದರು ಮತ್ತು ಇದು ರೈತ ಸಂಘಟನೆಗಳು ಶ್ರಮದಿಂದ ಸಂಘಟಿಸಿದ ಘನತೆಯುಳ್ಳ ಹೋರಾಟವೆಂಬುದನ್ನು ಮರೆತು, ತಮ್ಮ ‘ಮಹಾಘಟಬಂಧನ್’ ರ‍್ಯಾಲಿಯೇನೋ ಎಂಬಂತೆ ಕೈ ಮೇಲೆತ್ತಿ ಹಿಡಿದು ನಿಂತರು! ಇವೇ ಪಕ್ಷಗಳು (ಶರದ್‌ಪವಾರ್‌ರಂತಹ ವ್ಯಕ್ತಿ ವೇದಿಕೆಯ ಮೇಲೆ ರೈತ ಪರವಾಗಿ ಮಾತಾಡುವುದನ್ನು ನೋಡುವುದು ಕಷ್ಟವಾಗುತ್ತಿತ್ತು) ತಮ್ಮ ಅವಧಿಯಲ್ಲಾದ ಸಮಸ್ಯೆಗಳ ಕುರಿತ ಕನಿಷ್ಠ ಆತ್ಮಾವಲೋಕನವನ್ನೂ ಮಾಡಿಕೊಳ್ಳಲಿಲ್ಲ. ಯುಪಿಎ ಅವಧಿಯಲ್ಲಿ ಸಾಲಮನ್ನಾ ಮಾಡಿದುದರ ಕುರಿತು ರಾಹುಲ್‌ಗಾಂಧಿ ಮಾತನಾಡಿದರಾದರೂ, ಸ್ವಾಮಿನಾಥನ್ ಆಯೋಗದ ಶಿಫಾರಸ್ಸನ್ನು ತಾವೇಕೆ ಜಾರಿ ಮಾಡಲಿಲ್ಲ ಎಂಬುದರ ಕುರಿತು ಹೇಳಲಿಲ್ಲ.

ಇಂತಹ ಕೆಲವು ಸಂಗತಿಗಳ ಹೊರತಾಗಿ ದೆಹಲಿಯ ರೈತ ಹೋರಾಟವು ಈ ಸಂದರ್ಭದ ಅತ್ಯಂತ ಮಹತ್ವದ ವಿದ್ಯಮಾನಗಳಲ್ಲೊಂದಾಗಿದೆ. ಇದರ ಆಧಾರದ ಮೇಲೆಯೇ ದೇಶಾದ್ಯಂತ ರೈತರು ಮತ ಚಲಾಯಿಸುತ್ತಾರೆಂದೇನೂ ಹೇಳಲಾಗದು. ಆದರೆ, ಮೋದಿ ಸರ್ಕಾರದ ಅತ್ಯಂತ ಕರಾಳ ರೈತವಿರೋಧಿ ನೀತಿಗಳನ್ನು ದೇಶದ ರೈತರು ಒಪ್ಪಿಲ್ಲವೆಂದು ಈ ಹೋರಾಟವು ದೇಶಕ್ಕೆ ತೋರಿಸಿತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...