Homeಅಂಕಣಗಳುಸಂಪಾದಕೀಯ

ಸಂಪಾದಕೀಯ

- Advertisement -
- Advertisement -

ಕವಿದ ಕತ್ತಲ ನಡುವೆ ಬೆಳಕಿನ ಭರವಸೆಗಳು

ಸಂಪಾದಕೀಯ ತಂಡದ ಪರವಾಗಿ
@ ದೊಡ್ಡಿಪಾಳ್ಯ ನರಸಿಂಹಮೂರ್ತಿ

ಹಸುಗೂಸು ಆಸಿಫಾಳ ಮೇಲೆ ನಡೆದ ಆ ಕ್ರೌರ್ಯ ಕಲ್ಲುಹೃದಯಗಳನ್ನೂ ಕಲಕಿಬಿಟ್ಟಿದೆ. ಸೂಕ್ಷ್ಮಸಂವೇದನೆಯ ಅದೆಷ್ಟೋ ಮಂದಿ ಈ ಆಘಾತದ ವಿವರ ಕೇಳಿ ಮಂಕುಬಡಿದವರಂತಾಗಿದ್ದಾರೆ. ಆಸಿಫಾಳ ಪ್ರಸ್ತಾಪ ಬಂದಾಕ್ಷಣ ತೀವ್ರ ವ್ಯಾಕುಲತೆಗೆ ಜಾರುವವರಿದ್ದಾರೆ. ‘ಪ್ಲೀಸ್, ಆ ವಿಷ್ಯ ನಿಲ್ಸಿ, ಮತ್ತೆ ನೆನಪಿಸಬೇಡಿ’ ಎಂದು ಮರೆಯಲೆತ್ನಿಸುವವರೂ ಇದ್ದಾರೆ. ಹೌದು, ಇವೆಲ್ಲಾ ಮನುಷ್ಯರ ಸಹಜ ಪ್ರತಿಕ್ರಿಯೆಗಳು.

ಆದರೆ ಪಾತಕಿಗಳ ಪರವಾಗಿ ನಿಂತು ಆ ಮುಗ್ದ ಕೂಸಿನ ಮೇಲೆ ನಡೆದ ಕ್ರೌರ್ಯವನ್ನು ಮುಚ್ಚಿಹಾಕಲು ಹರಸಾಹಸಪಟ್ಟ ಕಥುವಾದ ಪೊಲೀಸರೂ ಮನುಷ್ಯರೇ ತಾನೆ? ಭಾರತ್ ಮಾತಾ ಕಿ ಜೈ ಘೋಷಣೆಯ ಅಬ್ಬರದಡಿ ನ್ಯಾಯದ ಕೂಗನ್ನು ಮುಚ್ಚಿಹಾಕಲು ಹೆಣಗುತ್ತಿರುವವರು, ತ್ರಿವರ್ಣದ್ವಜವನ್ನು ಪಟಪಟಿಸಿ ಅದರಡಿಯಲ್ಲಿ ಪಾತಕಿಗಳಿಗೆ ರಕ್ಷಣೆ ಒದಗಿಸಿದ್ದವರಿಗೂ ಕೂಡ ಮನುಷ್ಯ ರೂಪವೇ ಇತ್ತಲ್ಲಾ? ಅತ್ಯಾಚಾರಿ, ಕೊಲೆಗಡುಕರ ಪರವಾಗಿ ಭಾರೀ ರ್ಯಾಲಿ ಏರ್ಪಡಿಸಿದ ಸಂಘಿ ಕೂಟದ ‘ಹಿಂದೂ ಏಕತಾ ಮಂಚ್’ನವರ ಅಸಲಿಯತ್ತಾದರೂ ಏನು? ‘ಯಾರೊಬ್ಬರನ್ನೂ ಅರೆಸ್ಟ್ ಮಾಡುವಂತಿಲ್ಲ’ ಎಂದು ಬಿಜೆಪಿಯ ಕೈಗಾರಿಕಾ ಸಚಿವ ಚಂದ್ರಪ್ರಕಾಶ್ ಗಂಗ ಈ ಬಹಿರಂಗ ರ್ಯಾಲಿಗಳಲ್ಲೇ ಧಮಕಿ ಹಾಕುತ್ತಾನೆಂದರೆ ಅಲ್ಲಿ ಎಂಥಾ ವ್ಯವಸ್ಥೆ ಇರಬಹುದು? ‘ಒಬ್ಬ ಹುಡುಗಿಯಷ್ಟೇ ಸತ್ತಿರೋದು, ಇನ್ನೂ ಬಹಳ ಹೆಣ್ಣುಮಕ್ಕಳು ನಮ್ಮ ಮುಂದೆಯೇ ಇದ್ದಾರೆ’ ಎಂದು ಉಗ್ರಹಿಂದುತ್ವದ ಭಾಷಣ ಮಾಡಿ ಘೋರಪಾತಕಗಳಿಗೆ ಬಹಿರಂಗ ಪ್ರಚೋದನೆ ನೀಡಿದ ಲಾಲ್‍ಸಿಂಗ್ ಆ ರಾಜ್ಯದ ಅರಣ್ಯ ಸಚಿವನೆಂದರೆ ನಂಬುವುದಾದರೂ ಹೇಗೆ?

ಕಥುವಾ ಮತ್ತು ಉನ್ನಾವೊಗಳಲ್ಲಿ ಪಾತಕಿಗಳು, ಪೊಲೀಸರು ಮತ್ತು ಸರ್ಕಾರ ಎಲ್ಲರೂ ಒಂದೇ ಗ್ಯಾಂಗಿನ ಸದಸ್ಯರೆಂಬಂತೆ ವರ್ತಿಸಿದ್ದಾರೆ. ಇಷ್ಟು ಸಾಲದು ಎಂಬಂತೆ ಕೋಮುವ್ಯಾಧಿ ವೈರಸ್ ಹರಡುತ್ತಿರುವ ಶಕ್ತಿಗಳು ಈ ಪಾತಕಗಳಿಗೆ ಸಾಮಾಜಿಕ ಬೆಂಬಲ ಕೂಡಿಸುವ ಪಾಪದಲ್ಲಿ ತೊಡಗಿವೆ. ದೇಶಾದ್ಯಂತ ಈ ಜಾಲ ವೇಗವಾಗಿ ವಿಸ್ತರಿಸುತ್ತಿದೆ. ಹೀಗೇ ಮುಂದುವರೆದರೆ ಮನುಷ್ಯತ್ವಕ್ಕೆ ಉಳಿಗಾಲವಿದೆಯೆ? ನಮ್ಮ ಪ್ರಜಾತಂತ್ರಕ್ಕೆ ಭವಿಷ್ಯವಿದೆಯೆ ಎಂಬ ಆತಂಕ ಕಾಡುತ್ತದೆ. ನಾವು ಸಿನಿಕತೆಗೆ ಜಾರುವುದು ಇಂಥ ಸನ್ನಿವೇಶಗಳಲ್ಲೇ.

ಕೋರ್ಟ್ ಆವರಣದಲ್ಲಿ ದೀಪಿಕಾ ಸಿಂಗ್

ಇಂಥಾ ಕರಾಳ ಸನ್ನಿವೇಶದಲ್ಲೂ ಆಸಿಫಾಳ ಪೋಷಕರ ಪರ ನ್ಯಾಯಾಲಯದಲ್ಲಿ ದೃಡವಾಗಿ ಹೋರಾಡಿದ ಯುವ ವಕೀಲೆ ದೀಪಿಕಾ ಸಿಂಗ್ ರಜಾವತ್ ನಮಗೆ ಭರವಸೆಯ ಬೆಳಕಾಗಿ ಕಾಣುತ್ತಾರೆ. ಈ ಕೇಸು ಕೈಗೆತ್ತಿಕೊಂಡಿದ್ದಕ್ಕಾಗಿ ಸೋದರಿ ದೀಪಿಕಾರನ್ನು ಹಿಂದೂವಿರೋಧಿಯೆಂದು ಆರೋಪಿಸಿ ಹಿಂದೂ ಏಕತಾ ಮಂಚ್ ಗದ್ದಲವೆಬ್ಬಿಸಿತು. ಅವರ ಓಡಾಟಕ್ಕೇ ಆತಂಕ ಒಡ್ಡಲಾಯ್ತು. ಅತ್ಯಾಚಾರ ಮಾಡಿ ಕೊಲ್ಲುವ ಬೆದರಿಕೆಗಳೂ ಬಂದವು.

ದೀಪಿಕಾಗೆ ಸೂಕ್ತ ಭದ್ರತೆ ಒದಗಿಸುವಂತೆ ರಾಜ್ಯಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನಿರ್ದೇಶನ ಕೊಟ್ಟಿದೆಯೆಂದರೆ ಆಕೆ ಎದುರಿಸುತ್ತಿರುವ ಪರಿಸ್ಥಿತಿಯನ್ನು ಯಾರಾದರೂ ಗ್ರಹಿಸಬಹುದು. ‘ಆಸಿಫಾ ನನ್ನ ಮಗಳು, ಆಕೆಯ ಪರವಾಗಿ ನನ್ನ ಉಸಿರಿರುವವರೆಗೂ ಹೋರಾಡುತ್ತೇನೆ’ ಎಂದ ದೀಪಿಕಾ ನಮ್ಮ ಭರವಸೆ.

ಈ ಪ್ರಕರಣದಲ್ಲಿ ಪಾತಕಿಗಳನ್ನು ಪತ್ತೆಹಚ್ಚಿ, ಕಂಬಿಗಳ ಹಿಂದೆ ಕಳಿಸುವಲ್ಲಿ ಬಹುಮುಖ್ಯಪಾತ್ರ ವಹಿಸಿದವರು ಎಸ್‍ಐಟಿಯ ಡಿವೈಎಸ್‍ಪಿ ಶ್ವೇತಾಂಬರಿ ಶರ್ಮ. ಅವರ ಮಾತುಗಳನ್ನೇ ಕೇಳೋಣ.

“ಬಹುತೇಕ ಆರೋಪಿಗಳು ಬ್ರಾಹ್ಮಣರೇ ಆಗಿದ್ದುದರಿಂದ ಅವರು ತಮ್ಮ ಸರ್‍ನೇಮ್‍ಗಳನ್ನು ಒತ್ತಿ ಒತ್ತಿ ಹೇಳುತ್ತಿದ್ದರು. ನಾವೂ ನೀವೂ ಒಂದೇ ಜಾತಿಯವರು, ಒಂದೇ ಧರ್ಮದವರು. ಆದ್ದರಿಂದ ಆ ಮುಸ್ಲಿಂ ಹುಡುಗಿಯ ರೇಪ್ & ಮರ್ಡರ್ ಕೇಸಿನಿಂದ ತಮ್ಮನ್ನು ತಪ್ಪಿಸಬೇಕೆಂದು ನಾನಾ ವಿಧಾನದಲ್ಲಿ ಪ್ರಭಾವ ಬೀರಲು ಯತ್ನಿಸಿದರು. ಪೊಲೀಸ್ ಅಧಿಕಾರಿಯಾಗಿರುವ ನನಗೆ ಯಾವುದೇ ಧರ್ಮವಿಲ್ಲ, ನಾನು ತೊಟ್ಟಿರುವ ಸಮವಸ್ತ್ರವೇ ನನ್ನ ಧರ್ಮ ಎಂದು ಅವರಿಗೆ ಹೇಳಿ ಕಳಿಸಿದೆ.”

ರಮೇಶ ಕುಮಾರ್ ಜಲ್ಲಾ

ಈ ತನಿಖೆಯ ಮೇಲ್ವಿಚಾರಣಾಧಿಕಾರಿ ಎಸ್‍ಪಿ ರಮೇಶ್ ಕುಮಾರ್ ಜಲ್ಲಾ ಅತಿ ಸೂಕ್ಷ್ಮ ಕೇಸುಗಳನ್ನು ನಿಭಾಯಿಸಿದ ಅನುಭವಿ. ಅವರು ಆಸಿಫಾ ಕೇಸನ್ನು ಎಷ್ಟು ಮನಸ್ಸಿಗೆ ಹಚ್ಚಿಕೊಂಡಿದ್ದರೆಂದರೆ ‘ಎರಡು ತಿಂಗಳು ಹಗಲಿರುಳು ಶ್ರಮಿಸಿದ ನಂತರ ಅಂತಿಮವಾಗಿ ಚಾರ್ಜ್‍ಶೀಟ್ ದಾಖಲಿಸಲು ಸಾಧ್ಯವಾಯ್ತು. ನಂತರವಷ್ಟೇ ಕಣ್ತುಂಬಾ ನಿದ್ದೆ ಮಾಡಿದ್ದು’ ಎಂದು ವಿವರಿಸುತ್ತಾರೆ. ಶಿಸ್ತಿನ ಈ ಅಧಿಕಾರಿ ನುಸುಳುಕೋರರ ವಿರುದ್ಧದ ಹೋರಾಟದಲ್ಲಿ ಖ್ಯಾತಿ ಪಡೆದಿರುವವರು.

ಮಾನವೀಯತೆ ಹಾಗೂ ಕಾನೂನು ಆಡಳಿತದ ಪರವಾಗಿ ದಿಟ್ಟವಾಗಿ ನಿಂತ ಇಂಥಾ ಮಹಾನ್‍ವ್ಯಕ್ತಿಗಳ ಪ್ರಯತ್ನದಿಂದಲೇ ನಮ್ಮ ಸಮಾಜ ಇಷ್ಟಾದರೂ ಸಹ್ಯವಾಗಿ ಉಳಿದುಕೊಂಡಿದೆ. ಈ ದಿಟ್ಟ ದನಿಗಳಿಗೆ ಈಗ ದೇಶದಾದ್ಯಂತ ಕೋಟ್ಯಾಂತರ ಜನರು ಮಾರ್ದನಿಯಾಗಿದ್ದಾರೆ. ಮಾನವೀಯ ಭವಿಷ್ಯದ ಕನಸಿಗೆ ಮತ್ತಷ್ಟು ಕಸುವು ತುಂಬುತ್ತಿದ್ದಾರೆ.

ಕೊನೆಯದಾಗಿ, ಇನ್ಸ್‍ಟಾಗ್ರಾಮ್ ಮೂಲಕ ಪ್ರಧಾನಿ ಮೋದಿಗೆ ಪತ್ರ ಬರೆದ ಒಬ್ಬ ಮೋದಿ ಅಭಿಮಾನಿಯ ಮಾತನ್ನು ಕೇಳೋಣ.
“ಮಾನ್ಯ ಪ್ರಧಾನಿಯವರೆ,
ತಾವು ರಾತ್ರೋರಾತ್ರಿ ಕರೆನ್ಸಿ ನೋಟು ಬದಲಾಯಿಸಿಬಿಟ್ಟಿರಿ.
ರಾತ್ರೋರಾತ್ರಿ ತೆರಿಗೆ ವ್ಯವಸ್ಥೆಯನ್ನು ಬದಲಾಯಿಸಿಬಿಟ್ಟಿರಿ.
ರಾತ್ರೋರಾತ್ರಿ ಸರ್ಕಾರಗಳನ್ನೂ ಬದಲಾಯಿಬಿಡುತ್ತಿದ್ದೀರಿ.
ನೀವೀಗ ಈ ಅತ್ಯಾಚಾರದ ಸಂಸ್ಕøತಿಯನ್ನು ಬದಲಾಯಿಸದಿದ್ದರೆ, ಅತ್ಯಾಚಾರಿಗಳಿಗೆ ಶಿಕ್ಷೆಯಾಗುವಂತೆ ಮಾಡದಿದ್ದರೆ, ಆಗ ನಾನು ನನ್ನ ಓಟನ್ನು ರಾತ್ರೋರಾತ್ರಿ ಬದಲಿಸಬಲ್ಲೆ. 2019 ಬಹಳ ದೂರವೇನಿಲ್ಲ.”

ತಾವು ಬೆಂಬಲಿಸುವ ಬಿಜೆಪಿ ಪಕ್ಷದ ಮುಖಂಡರೇ ಘೋರ ಕೃತ್ಯಗಳಲ್ಲಿ ತೊಡಗಿದಾಗ, ಅದನ್ನು ಖಂಡಿಸಿ ಮಾನವೀಯತೆಯ ಪರವಾಗಿ ನಿಂತ ಸಹಸ್ರ ಸಹಸ್ರ ಮನುಷ್ಯರಿದ್ದಾರೆ. ಭವಿಷ್ಯದಲ್ಲಿ ಭರವಸೆ ಇಡೋಣ. ದನಿಗೂಡಿಸೋಣ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...