Homeಕರ್ನಾಟಕಸದನದಲ್ಲಿ ಮಿಂಚಿದ ಬಸವ ಪ್ರಣೀತ ಶಾಸಕ ನಾರಾಯಣರಾವ್

ಸದನದಲ್ಲಿ ಮಿಂಚಿದ ಬಸವ ಪ್ರಣೀತ ಶಾಸಕ ನಾರಾಯಣರಾವ್

- Advertisement -
- Advertisement -

ಬಸವ ಪ್ರಣೀತ ಲಿಂಗಾಯತನಾದ ಶಾಸಕ ನಾರಾಯಣರಾವ್

ಬಸವ ಕಲ್ಯಾಣದ ಶಾಸರ ಬಿ.ನಾರಾಯಣರಾವ್ ನಿನ್ನೆ ದಿನ ವಿಧಾನಸೌಧದಲ್ಲಿ ಆಡಿದ ಮನಪೂರ್ವಕವಾದ ಮಾತುಗಳಿಗೆ ಎಲ್ಲಿಲ್ಲದ ಪ್ರಶಂಸೆಯ ಸುರಿಮಳೆ ನಡೆದಿದೆ. ಮೂಲತಃ ಶರಣರ ಅಂಬಿಗರ ಚೌಡಯ್ಯನವರ ಚಾಟಿ ಏಟು, ಒಳ ಹೊಡೆತಗಳು ಅವರ ಮಾತುಗಳಲ್ಲಿ ನಾವು ಧಾರಾಳವಾಗಿ ಕಾಣಬಹುದು. ಶಾಸಕ ಬಿ.ನಾರಾಯಣರಾವ್ ಬಸವಕಲ್ಯಾಣದ ಜನತೆಯೆ ಬಲ್ಲಂತೆ ಸಾದಾ ಸೀದಾ ಜೀವನ ನಿರ್ವಹಿಸುವ, ನಿಗರ್ವಿ ಶಾಸಕ. ಯಾರಾದರೂ ಮಾತಾಡಿಸಬಹುದಾಗಿ, ಮತ್ತಾರಾದರೂ ತಕರಾರು ತೆಗೆಯಬಹುದಾದ ಸರಳತೆಯನ್ನು ಮೈಗೂಡಿಸಿಕೊಂಡವರು.

ಶರಣರ ವಿಚಾರಗಳೆ ಹಾಗೆ. ಒಂದು ಒಂದು ಸಲ ಅವುಗಳ ಸಮೀಪಕ್ಕೆ ಬರಬೇಕು ಅಷ್ಟೇ : ಅನಂತರ ಅವರಿಗೆ ಅರಿವಿಲ್ಲದೆ ಅವರೊಳಗೆ ಚಿಂತನೆ, ಸಾಮಾಜಿಕ ಕಾಳಜಿ, ನಿಜವಾದ ಧಾರ್ಮಿಕ ಪ್ರಜ್ಞೆಗಳು ಹುಟ್ಟಿಕೊಳ್ಳಲು ಆರಂಭವಾಗುತ್ತವೆ. ನಮಗೆ ಗೊತ್ತಿಲ್ಲದೆ ಪ್ರತಿಭಟಿಸುವ ಮನಸ್ಸು, ವಸ್ತು ಸ್ಥಿತಿಯನ್ನು ಅವಲೋಕಿಸಿ ಸೂಕ್ತ ಸಮಯದಲ್ಲಿ ಸರಿಯಾದ ಮಾತನಾಡುವ ಕಸುವು ತಂತಾನೆ ಉಂಟಾಗುತ್ತದೆ.

ಕುಂಡಲಿ ಬಂದು ಕೀಡಿಯನು ಕುಂಡಲಿಯ ಮಾಡಿತ್ತಯ್ಯಾ

ಅಗ್ನಿ ಬಂದು ಕಾಷ್ಠವ ಅಗ್ನಿಯ ಮಾಡಿತ್ತಯ್ಯಾ

ಮಹೇಶ ಬಂದು ಭಕ್ತನ ಮಹೇಶನ ಮಾಡಿ

ಗಮನಿಸಿದನಯ್ಯಾ ಕಪಿಸಿದ್ಧ ಮಲ್ಲಿಕಾರ್ಜುನಾ

ಎಂಬಂತೆ ಒಂದೆ ಒಂದು ಸಲ ಶರಣರ ವಿಚಾರಧಾರೆಯತ್ತ ಇಣುಕಿ ನೋಡಿದರೂ ಸಾಕು. ಖಂಡಿತವಾಗಿ ಕೀಡೆ ಕುಂಡಲಿಯಾಗುತ್ತದೆ. ಬೆಂಕಿ ಕಟ್ಟಿಗೆಯ ಸಮೀಪ ಬಂದು ಕಟ್ಟಿಗೆಯನ್ನು ಹೇಗೆ ಬೆಂಕಿ ಮಾಡಬಲ್ಲುದೋ ಹಾಗೆ. ಮಹೇಶ ಬಂದು ಭಕ್ತನ ಮಹೇಶ ಸ್ಥಲಕ್ಕೆ ಕರೆದುಕೊಂಡು ಹೋಗುವಂತೆ ಎಂಬ ಸೊನ್ನಲಾಪುರದ ಶರಣ ಸಿದ್ಧರಾಮಯ್ಯನ ಮಾತಿನಲ್ಲಿ ಬಹುದೊಡ್ಡ ಇತಿಹಾಸವಿದೆ.

ಬಸವರಾಜ ಪಾಟೀಲ ಅಷ್ಟೂರೆ, ಖೂಬಾ ಅವರ ನಡುವೆ ಗೆದ್ದು ಬರುವುದು ಅಷ್ಟು ಸುಲಭದ ಮಾತಲ್ಲ. ಶಾಸಕ ನಾರಾಣಯರಾವ್ ರಾಜಕೀಯ ಘಟಾನು ಘಟಿಗಳ ನಡುವೆಯೂ ಗೆದ್ದು ಬರುವ ಛಾತಿಯನ್ನು ಇಟ್ಟುಕೊಳ್ಳಲು ಸಾಧ್ಯವಾದುದು ಅವರ ಬದ್ಧತೆಗೆ. ಜನ ಸಾಮಾನ್ಯನೊಂದಿಗೆ ಬೆರೆತು ಅವರೊಳಗೆ ಒಂದಾಗುವ ಕ್ರಿಯೆಗೆ. ಬಹುತೇಕ ರಾಜಕಾರಣಿಗಳಿಗೆ ವಿಚಾರವೆಂಬುದು ಇರುವುದಿಲ್ಲ. ಆ ವಿಚಾರಗಳನ್ನು ಅವರಲ್ಲಿ ದೀಪ ಹಚ್ಚಿ ಹುಡುಕಬೇಕು. ಆದರೆ ಈ ನಾರಾಯಣರಾವ್ ಮಾತ್ರ ಬಸವಾದಿ ಶಿವಶರಣರ ವಿಚಾರಗಳನ್ನು ಅರಿತುಕೊಂಡು ಅವುಗಳನ್ನು ಆಚರಿಸುವತ್ತ ಆಸಕ್ತಿ ತೋರಿಸಿದ್ದಾರೆ.

ಹೀಗಾಗಿಯೇ ವಿಧಾನಸೌಧದಲ್ಲಿ ಎಲ್ಲಾ ಸದಸ್ಯರಿಗೂ ಅರಿವು ಮೂಡಿಸುವ ಅನುಭಾವದ ಮಾತುಗಳನ್ನು ಹೇಳಿದ್ದಾರೆ. ಜಗತ್ತಿಗೆ ಮೊಟ್ಟ ಮೊದಲು ಪ್ರಜಾಪ್ರಭುತ್ವದ ಆಡಳಿತ ತಂದದ್ದು ಬ್ರಿಟನ್ ದೇಶ ಅಲ್ಲ, ನಮ್ಮ ರಾಜ್ಯದ ಬಸವ ಕಲ್ಯಾಣ ಎಂಬುದುನ್ನು ಅವರು ಒತ್ತಿ ಒತ್ತಿ ಹೇಳಿದ್ದಾರೆ. ತನ್ನ ರಾಜ್ಯದಲ್ಲಿ ಯಾರೂ ಹಸಿವಿನಿಂದ ಕಂಗಾಲಾಗಿ ಸಾಯಬಾರದು ಎಂದು ಅರಿತುಕೊಂಡ ಬಸವಣ್ಣನವರು ದಾಸೋಹ ಪರಿಕಲ್ಪನೆಯನ್ನು ಜಾರಿಗೆ ತಂದರು ಎಂದು ನೆನಪಿಸಿಕೊಂಡಿದ್ದಾರೆ. ಜಾತಿ ಮತ ಪಂಥವೆನ್ನದೆ, ಗಂಡು ಹೆಣ್ಣು ಎಂಬ ತರತಮಭಾವನೆ ಇಟ್ಟುಕೊಳ್ಳದೆ ಅಂದು ಕಲ್ಯಾಣದಲ್ಲಿ ಬಸವಣ್ಣ ಅನುಭವ ಮಂಟಪ ಕಟ್ಟಿದರು. ಈ ಅನುಭವ ಮಂಟಪವನ್ನು ಮತ್ತೆ ಪುನರ್ ನಿರ್ಮಿಸುವ ಮೂಲಕ ಜನ ಸಾಮಾನ್ಯರಿಗೆ ಪ್ರೇರಣೆ ಒದಗಿಸುವುದು ಸರಕಾರದ ಕರ್ತವ್ಯ ಎಂದು ನಾರಾಯಣರಾವ್ ಒತ್ತಿ ಹೇಳಿದರು.

ಜೊತೆಗೆ ಇಂದಿನ ರಾಜಕೀಯ ತೀರಾ ಬಗ್ಗಡಗೊಂಡು ಹೋಗಿದೆ. ಕೋಟಿ ಕೋಟಿಗಳನ್ನು ಖರ್ಚು ಮಾಡಿ ಗೆದ್ದು ಬರುವ ಸ್ಥಿತಿ ನಿರ್ಮಾಣವಾಗಿದೆ. ಶ್ರೀಸಾಮಾನ್ಯ ಹೀಗೆ ಗೆದ್ದು ಬರಲು ಸಾಧ್ಯವೆ ? ಎಂಬ ಆತ್ಮಾವಲೋಕನದ ನುಡಿಗಳನ್ನು ಆಡುವ ಮೂಲಕ ವಿಧಾನಸಭೆಯ ಸದಸ್ಯರ ಮನವನ್ನು ಅಲ್ಲಾಡಿಸಿಬಿಟ್ಟಿದ್ದಾರೆ.

ಬಸವಣ್ಣನವರ ಬಗೆಗೆ ಮಾತಾಡುವುದೆ ಒಂದು ಸಾಹಸ ಎಂದು ಜಾತಿ ಲಿಂಗಾಯತರು ಅವಲತ್ತುಕೊಳ್ಳುವ ಈ ಸಂದರ್ಭದಲ್ಲಿ ನಿಜವಾದ ಬಸವ ಪ್ರಣೀತ ಲಿಂಗಾಯತನಾದ ನಾರಾಣರಾವ್ ಮಾತಾಡುವುದು ಹೆಚ್ಚು ಸೂಕ್ತವಾಗಿದೆ. ಇದಲ್ಲದೆ ಇತಿಹಾಸದ ಪುಟಗಳನ್ನು ತೆಗೆದು ನೋಡಿದಾಗಲೂ ಸಹ ಬಸವಾದಿ ಶರಣರ ಕುರಿತು, ಅವರ ವಚನಗಳ ಕುರಿತು ಆಸಕ್ತಿ ತಳೆದವರು ಅನ್ಯ ಮತದವರು. ಹರ್ಡೇಕರ ಮಂಜಪ್ಪ, ಫ.ಗು. ಹಳಕಟ್ಟಿ, ಅನಕೃ, ಆರ್.ಆರ್.ದಿವಾಕರ್, ಎಂ.ಆರ್.ಶ್ರೀನಿವಾಸ ಮೂರ್ತಿ ಮೊದಲಾದವರು ಆಸಕ್ತಿ ತಳೆದರೆಂದೆ ನಮಗಿಂದು ವಚನ ಸಾಹಿತ್ಯವೆಂಬ ಸಕಲ ಜೀವಪ್ರೇಮದ, ವಿಶ್ವ ಹೃದಯಿಯಾದ ವಚನ ಸಾಹಿತ್ಯ ದಕ್ಕಿದೆ.

ನಾರಾಯಣರಾವ್‍ರ ಕೌಟುಂಬಿಕ ಕಲಹಗಳೇನೇ ಇದ್ದರೂ ಸಾಮಾಜಿಕವಾಗಿ ಅವರ ಬದ್ಧತೆ, ವೈಚಾರಿಕ ನಿಲುವುಗಳನ್ನು ಕರ್ನಾಟಕದ ಜನತೆ ಭರವಸೆಯಿಂದ ನೋಡುತ್ತಿದೆ.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. Basavaraj patil ashture alla. Basavaraj patil attur. Dr Basavaraj patil ashtur ennuva mattobba BJP leader. In last assembly election he (ashture) contested from Bidar (south) constituency on BJP ticket. Attur is ex minister.

  2. Basavaraj patil ashture alla. Basavaraj patil attur. Dr Basavaraj patil ashtur ennuva mattobba BJP leader. In last assembly election he (ashture) contested from Bidar (south) constituency on BJP ticket. Attur is ex minister.

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...