Homeಅಂಕಣಗಳುಸನಾತನ ಸಂಸ್ಥೆಯೋ? ಸೈತಾನ ಪಡೆಯೋ??

ಸನಾತನ ಸಂಸ್ಥೆಯೋ? ಸೈತಾನ ಪಡೆಯೋ??

- Advertisement -
- Advertisement -

ಆಧ್ಯಾತ್ಮಿಕ ಚಿಂತನೆಗಳನ್ನು ಬೆಳೆಸುವ ಉದ್ದೇಶದಿಂದ ಸಭೆ, ಸಮಾರಂಭ, ಅಧ್ಯಯನ ಶಿಬಿರ, ಉಪನ್ಯಾಸ ಮುಂತಾದ ಕಾರ್ಯಕ್ರಮಗಳನ್ನು ನಡೆಸುವ ‘ಸನಾತನ ಸಂಸ್ಥೆ’ ಬಾಂಬ್ ಸ್ಫೋಟಿಸುವ, ಕೊಲೆಗಳನ್ನು ನಡೆಸುವ ಹೀನ ಕೃತ್ಯದಲ್ಲಿ ತೊಡಗಿಕೊಂಡಿದೆಯೆಂದರೆ ಯಾರೂ ನಂಬುವುದಿಲ್ಲ. ಯಾಕೆಂದರೆ ಅದರ ಹೆಸರನ್ನು ಕೇಳಿದರೆ ಇದೊಂದು ಹರಿಕಥಾ ಪ್ರಸಂಗಗಳನ್ನು ನಡೆಸುತ್ತಾ, ರಾಮ ಭಜನೆ ಮಾಡುತ್ತಾ ಕಾಲಕ್ಷೇಪ ಮಾಡುವ ಸಂಸ್ಥೆಯೆಂದೇ ಅನಿಸುತ್ತದೆ. ಆದರೆ ಗೋವಾದಲ್ಲಿ ತನ್ನ ಹೆಡ್‍ಕ್ವಾರ್ಟರ್ ಹೊಂದಿದ್ದು ಇಡೀ ದೇಶದಲ್ಲಿ, ನೂರಾರು ಶಾಖೆಗಳನ್ನು ಹಾಗೂ ಜಾಲವನ್ನು ಹೊಂದಿರುವ ಈ ಸಂಸ್ಥೆಯ ಇತಿಹಾಸದ ಕೆದಕಿದರೆ ಭಾರೀ ರಕ್ತಸಿಕ್ತ ಹೀನ ಚರಿತ್ರೆಯೇ ಅಡಗಿದೆ.
ಕೆಲವೊಂದು ಘಟನಾವಳಿಗಳನ್ನು ನೋಡೋಣ.
2009ರ ಅಕ್ಟೋಬರ್ 16ರಂದು ಗೋವಾದ ಮಾರ್ಗೊ ಪಟ್ಟಣದಲ್ಲಿ ಭೀಕರ ಸ್ಫೋಟವೊಂದು ಸಂಭವಿಸಿ ಇಬ್ಬರು ಮೃತಪಟ್ಟಿದ್ದರು. ತನಿಖೆ ನಡೆಸುತ್ತಿದ್ದ ಪೊಲೀಸರಿಗೆ ಆಶ್ಚರ್ಯ ಕಾದಿತ್ತು. ಮೃತಪಟ್ಟ ಆ ಇಬ್ಬರು ಆಗಂತುಕರು ಅಂದು ನಡೆಯಲಿದ್ದ ಉತ್ಸವದಲ್ಲಿ ಬಾಂಬ್ ಸ್ಪೋಟಗೊಳಿಸಲು ಸ್ಕೂಟರ್‍ನಲ್ಲಿ ಸಾಗಿಸುತ್ತಿದ್ದರು ವೇಳೆಯಲ್ಲಿ ಆಕಸ್ಮಿಕವಾಗಿ ಬಾಂಬ್ ಸ್ಫೊಟಗೊಂಡು ತಾವೇ ಬಲಿಯಾಗಿದ್ದರು. ಮೃತಪಟ್ಟ ಮಲ್ಗೊಂಡ ಪಾಟೀಲ್ ಮತ್ತು ಯೋಗೇಶ್ ನಾಯಕ್ ಎಂಬ ಈ ಇಬ್ಬರು ಯುವಕರು ಸನಾತನ ಸಂಸ್ಥೆಯ ಸದಸ್ಯರಾಗಿದ್ದರು. ತನಿಖೆ ಮುಂದುವರೆದಂತೆ ಈ ಸ್ಫೋಟಕ್ಕೆ ಸಂಬಂಧಿಸಿದಂತೆ ವಿನಾಯಕ ಪಾಟೀಲ್ ಮತ್ತು ವಿನಯ್ ತಾಲೇಕರ್ ಎಂಬ ಮತ್ತಿಬ್ಬರು ಸದಸ್ಯರನ್ನು ಬಂಧಿಸಲಾಯ್ತು. ಇವರು ರಾಮನಾಥಿಯಲ್ಲಿರುವ ಆಶ್ರಮವೊಂದರ ಮೂಲಕ ಸನಾತನ ಸಂಸ್ಥೆಯ ಸಂಬಂಧ ಹೊಂದಿದ್ದರು. ಈ ಪ್ರಕರಣದಲ್ಲಿ ಬಂದಿತನಾದ ಮತ್ತೊಬ್ಬ ಆರೋಪಿ 20 ವರ್ಷ ವಯಸ್ಸಿನ ಧನಂಜಯ್ ಅಷ್ಟೇಕರ್, ಈಚಲಕಾರಂಜಿಯಲ್ಲಿರುವ ಇಂಜಿನಿಯರಿಂಗ್ ಕಾಲೇಜು ವಿದ್ಯಾರ್ಥಿಯಾಗಿದ್ದ. ಸ್ಫೋಟ ಸಂಭವಿಸಿದ ಸ್ಥಳದಲ್ಲಿ ಉತ್ಸವವೊಂದು ನಡೆಯಲಿದ್ದು ಸಾವಿರಾರು ಜನರು ಭಾಗವಹಿಸಲಿದ್ದರು. ಬಾಂಬ್ ಸ್ಪೋಟಿಸಿ, ಈ ಸ್ಫೋಟಕ್ಕೆ ಮುಸ್ಲಿಮರು ಕಾರಣವೆಂದು ಆರೋಪಿಸಿ, ನಂತರ ಕೋಮು ಗಲಭೆಗಳನ್ನು ನಡೆಸುವ ಯೋಜನೆ ತಯಾರಾಗಿತ್ತು. ಅದಕ್ಕಾಗಿ ದೆಹಲಿಯ ಖಾನ್ ಮಾರ್ಕೆಟ್ ಎಂಬ ಹೆಸರು ಮುದ್ರಿತವಾಗಿರುವ ಒಂದು ಬ್ಯಾಗ್ ಮತ್ತು ಅದರಲ್ಲಿ ಮುಸ್ಲಿಮರು ಬಳಸುವ ಸುಗಂಧ ದ್ರವ್ಯದ ಒಂದು ಬಾಟಲ್, ಸಂಪೂರ್ಣ ಉರ್ದು ಅಕ್ಷರಗಳಲ್ಲಿ ಪ್ರಿಂಟ್ ಆಗಿರುವ ಬಾಸ್ಮತಿ ಅಕ್ಕಿಯ ಒಂದು ಖಾಲಿ ಚೀಲ ಮುಂತಾದ ವಸ್ತುಗಳನ್ನು ಸ್ಪೋಟದ ಸ್ಥಳದಲ್ಲಿ ಬಿಟ್ಟು ಹೋಗಲಿಕ್ಕೆಂದು ತಂದಿದ್ದರು. ಕಾರಣ ಸ್ಪಷ್ಟವಿತ್ತು. ಸಹಜವಾಗಿ ಇದು ಮುಸ್ಲಿಮರ ಕೃತ್ಯ ಎಂದು ಮಾಧ್ಯಮಗಳ ಮೂಲಕ ಬಿಂಬಿಸುವುದು ಮತ್ತು ಕೋಮು ಗಲಭೆ ಸೃಷ್ಟಿಸುವುದು. ಆದರೆ ಅವರ ದುರಾದೃಷ್ಟ. ತಾವೇ ಬಲಿಯಾಗಿ ಹೋಗಿದ್ದರು.
2008ರಲ್ಲಿ ನಡೆದ ಬಾಂಬ್ ಬ್ಲಾಸ್ಟ್‍ನಲ್ಲಿ ಕೆಲವು ಸಾಧಕರು ಅರೆಸ್ಟ್ ಆಗಿದ್ದರು. ನವಿಮುಂಬೈ ಮತ್ತು ಥಾಣೆಗಳಲ್ಲಿ ‘ಅಮ್ಹಿ ಪಚ್‍ಪುಟೆ’ ಎಂಬ ನಾಟಕ ಪ್ರದರ್ಶನವಿತ್ತು. ಈ ನಾಟಕ ಹಿಂದೂಗಳ ಭಾವನೆಗಳಿಗೆ ದಕ್ಕೆಯಾಗುತ್ತಿದೆಯೆಂದು ಸನಾತನ ಸಂಸ್ಥೆ ಹುಯಿಲೆಬ್ಬಿಸಿತ್ತು. ನಂತರ ಈ ನಾಟಕ ಪ್ರದರ್ಶನ ನಡೆಯುತ್ತಿದ್ದ ಆಡಿಟೋರಿಯಂಗಳಲ್ಲಿ ಬಾಂಬ್‍ಗಳನ್ನು ಸ್ಫೋಟಿಸಲಾಯಿತು.
‘ಜೋಧಾ ಅಕ್ಬರ್’ ಹಿಂದಿ ಸಿನಿಮಾದಲ್ಲಿ ಹಿಂದೂ ಮಹಿಳೆಯನ್ನು ಕೆಟ್ಟದಾಗಿ ಚಿತ್ರಿಸಲಾಗಿದೆಯೆಂದು ಸನಾತನ ಸಂಸ್ಥೆ ಬೊಬ್ಬೆ ಹಾಕಿತ್ತು. ಪನ್ವೇಲ್‍ನಲ್ಲಿರುವ ಥಿಯೇಟರ್‍ನಲ್ಲಿ ಈ ಸಿನಿಮಾ ಪ್ರದರ್ಶನ ನಡೆಯುತ್ತಿದ್ದ ಸಂದರ್ಭದಲ್ಲೇ ಬಾಂಬ್ ಸ್ಫೋಟಿಸಿತ್ತು.
ಈ ಸ್ಫೋಟಗಳಿಗೆ ಸಂಬಂಧಿಸಿ ಬಂಧನಕ್ಕೊಳಗಾಗಿದ್ದ ವಿಕ್ರಮ್ ಭಾವೆ ಮತ್ತು ರಮೇಶ್ ಗಡ್ಕರಿ ಎಂಬ ಇಬ್ಬರು ಇಬ್ಬರು ಸನಾತನಿಗಳಿಗೆ ನ್ಯಾಯಾಲಯ ಹತ್ತು ವರ್ಷ ಜೈಲು ವಾಸದ ಶಿಕ್ಷೆ ವಿಧಿಸಿತ್ತು. ನಂತರದ ದಿನಗಳಲ್ಲಿ ಬಾಂಬೆ ಹೈಕೋರ್ಟ್ ಈ ಶಿಕ್ಷೆಯನ್ನು ರದ್ದುಪಡಿಸಿ, ಜಾಮೀನು ಮುಂಜೂರು ಮಾಡಿದೆ. ಬಾಂಬ್ ಸ್ಫೋಟದಲ್ಲಿ ಶಿಕ್ಷೆಗೊಳಗಾದವರಿಗೂ ತನಗೂ ಯಾವುದೇ ಸಂಬಂಧವಿಲ್ಲ ಎಂಬ ಮಾಮೂಲಿ ರಾಗವನ್ನು ಸಂಸ್ಥೆ ಹಾಡುತ್ತಲೇ ಬಂದಿದೆ.
ಮಹಾರಾಷ್ಟ್ರದಲ್ಲಿ 2013ರಲ್ಲಿ ನರೇಂದ್ರ ದಾಬೋಲ್ಕರ್ ಎಂಬ ವಿಚಾರವಾದಿಯೊಬ್ಬರ ಕೊಲೆಯಾಯಿತು. ಕೊಲೆಯಾದ ಸುದ್ದಿ ಹೊರಬೀಳುತ್ತಿದ್ದಂತೆಯೇ ಸನಾತನ ಸಂಸ್ಥೆಯ ಒಂದು ಅಂಗ ಸಂಸ್ಥೆ ‘ಹಿಂದೂ ಜನಜಾಗೃತಿ ಸಮಿತಿ’ ತನ್ನ ವೆಬ್‍ಸೈಟ್‍ನಲ್ಲಿ ದಾಬೋಲ್ಕರ್ ಫೋಟೋ ಅಪ್‍ಲೋಡ್ ಮಾಡಿ, ಮುಖದ ಮೇಲೆ ಘಿ ಮಾರ್ಕ್ ಹಾಕಿ ಪ್ರಕಟಿಸಿದರು. ಈ ಬಗ್ಗೆ ಎಲ್ಲೆಡೆ ಟೀಕೆಗಳು ಕೇಳಿಬಂದವು. ಪೂನಾ ಪೊಲೀಸರ ಸೈಬರ್ ಕ್ರೈಮ್ ಇಲಾಖೆಯವರು ಆ ಫೊಟೋ ಡಿಲೀಟ್ ಮಾಡುವಂತೆ ಸನಾತನ ಸಂಸ್ಥೆಗೆ ಸೂಚಿಸಿದರು. ಅಷ್ಟೇ, ಪೊಲೀಸರು ಕೈತೊಳೆದುಕೊಂಡರು.
ವಾಸ್ತವದಲ್ಲಿ, ನರೇಂದ್ರ ದಾಬೋಲ್ಕರ್ ಮೇಲೆ ಸನಾತನ ಸಂಸ್ಥೆ ನಿರಂತರ ದಾಳಿಗಳನ್ನು ನಡೆಸುತ್ತಲೇ ಬಂದಿತ್ತು. ಅವರ ಸಾರ್ವಜನಿಕ ಸಭೆಗಳಲ್ಲಿ ಗದ್ದಲವೆಬ್ಬಿಸುವುದು ಮಾಮೂಲಿಯಾಗಿ ಹೋಗಿತ್ತು. ಅವರನ್ನು ‘ಹಿಂದೂ ದ್ರೋಹಿ’ ಎಂದು ಘೋಷಿಸಿ ತನ್ನ ವೆಬ್‍ಸೈಟ್ ಮತ್ತಿತರ ಪ್ರಕಟಣೆಗಳಲ್ಲಿ ಘೋಷಿಸಲಾಗಿತ್ತು. ಹೀಗೆ ಬಹಿರಂಗ ಪ್ರಕಟಣೆ ಬಂದ ನಂತರ ಅನಾಮಧೇಯರಿಂದ ಬೆದರಿಕೆ ಕರೆಗಳು ಮಾಮೂಲಿಯಾಗಿ ಹೋದವು. ಅವರ ಕೊಲೆಯಾಗುವ ಮುನ್ನ ಬಂದ ಬೆದರಿಕೆ ಕರೆ ಈ ಸನಾತನ ಸಂಸ್ಥೆ ಹಾಗೂ ಅದರ ಹಿಂದಿರುವ ಇತರೆ ಶಕ್ತಿಗಳ ಚಾರಿತ್ರಿಕ ಪಾತ್ರವನ್ನು ಬಟಾಬಯಲು ಮಾಡುತ್ತದೆ. “ಗಾಂಧಿಯನ್ನು ನೆನಪಿಸಿಕೋ, ನಾವು ಅವನಿಗೆ ಏನು ಮಾಡಿದ್ದೀವೋ ಅದೇ ಕತೆ ನಿಂಗೂ ಕಾದಿದೆ” ಎಂಬ ಬೆದರಿಕೆಯನ್ನು ಅನಾಮಧೇಯರು ಹಾಕಿದ್ದರು. ಕೆಲವೊಮ್ಮೆ ಬೆದರಿಕೆಗಳು ಬಹಿರಂಗ ಸಭೆಗಳಲ್ಲಿ ಪಾಲ್ಗೊಳ್ಳುತ್ತಿದ್ದ ಸಂದರ್ಭದಲ್ಲೇ ಬಂದಿದ್ದವು. ಅಂದರೆ ಕೊಲೆಪಾತಕಿಗಳಿಗೆ ಯಾವುದೇ ಕಾನೂನಿನ ಭಯವೂ ಇದ್ದಂತಿರಲಿಲ್ಲ.
ದಾಬೋಲ್ಕರ್ ಹತ್ಯೆಯಾದ ದಿನ ಅವರ ವೆಬ್‍ಸೈಟ್‍ನ ಮುಖಪುಟದಲ್ಲಿ ಜಯಂತ್ ಅಠಾವಳೆ ಹೀಗೆ ಬರೆದಿದ್ದರು. “ಹುಟ್ಟು ಮತ್ತು ಸಾವುಗಳು ಮೊದಲೇ ನಿರ್ಧರಿತವಾಗಿರುತ್ತವೆ ಹಾಗೂ ಪ್ರತಿಯೊಬ್ಬರೂ ಅವರವರ ಕರ್ಮಕ್ಕೆ ತಕ್ಕಂತಹ ಫಲಗಳನ್ನು ಪಡೆದೇ ಪಡೆಯುತ್ತಾರೆ. ಕಾಯಿಲೆ ಬಿದ್ದು ಹಾಸಿಗೆ ಹಿಡಿದು ನರಳಿ ಸಾಯುವುದರ ಬದಲು, ಯಾವುದೋ ಶಸ್ತ್ರ ಚಿಕಿತ್ಸೆಗೆ ಒಳಗಾಗಿ ಸಾಯುವುದರ ಬದಲಿಗೆ ದಾಬೋಲ್ಕರ್ ಅವರಿಗೆ ಪರಮಾತ್ಮ ಒಳ್ಳೆಯ ಸಾವನ್ನೇ ಕೊಟ್ಟಿದ್ದಾನೆ.”
ಮಹಾರಾಷ್ಟ್ರದ ಕಮ್ಯುನಿಸ್ಟ್ ಮುಖಂಡ ಗೋವಿಂದ್ ಪನ್ಸಾರೆ ಕೊಲೆ ಕೇಸಿನಲ್ಲಿ ಸನಾತನ ಸಂಸ್ಥೆಯ ಸಮೀರ್ ಗಾಯಕ್‍ವಾಡ್ ಅರೆಸ್ಟ್ ಎಂಬುವವನನ್ನು ಅರೆಸ್ಟ್ ಮಾಡಲಾಗಿದೆ. ಆತನ ಮೂಲಕ ಈ ಸಂಸ್ಥೆಯ ಮತ್ತಷ್ಟು ಪಾತಕ ಕೃತ್ಯಗಳು ಹೊರಬಿದ್ದಿವೆ.
ಅಫಿಷಿಯಲ್ ಲಿಂಕ್ಸ್
ಈ ಸಂಸ್ಥೆಗೆ ಮತ್ತೊಂದು ಅಪಾಯಕಾರಿ ಆಯಾಮವೂ ಇದೆ. ಗೋವಾದ ಪಿಡಬ್ಲ್ಯುಡಿ ಮಂತ್ರಿ ಸುದಿನ್ ಧವಳಿಕರ್‍ನ ಹೆಂಡತಿ ಜ್ಯೋತಿ ಧವಳಿಕರ್ ಸನಾತನ ಸಂಸ್ಥೆಯ ಸಕ್ರಿಯ ಕಾರ್ಯಕರ್ತೆ. ಸನಾತನ ಸಂಸ್ಥೆಯ ಕ್ರಿಮಿನಲ್ ಚಟುವಟಿಕೆಗಳ ಹಿನ್ನೆಲೆಯಲ್ಲಿ ಪೊಲೀಸರು ಈ ಮಂತ್ರಿಯನ್ನು ವಿಚಾರಣೆ ನಡೆಸಿದ್ದರು. ಆದರೆ ತನಿಖೆ ಅಲ್ಲಿಂದ ಮುಂದಕ್ಕೆ ಸಾಗಲಿಲ್ಲ.
ಈ ಸಂಸ್ಥೆ ನಡೆಸುವ ‘ಸನಾತನ ಪ್ರಭಾತ್. ಎಂಬ ಪತ್ರಿಕೆಯನ್ನು ನಡೆಸುತ್ತಿದೆ. ಅದರಲ್ಲಿ ವಿಚಾರವಾದಿಗಳ ವಿರುದ್ಧ ಲೇಖನಗಳು ಪ್ರಕಟವಾಗುತ್ತವೆ. ವಿಚಾರವಾದಿಗಳನ್ನು ‘ದ್ರೋಹಿಗಳು’ ಎಂದು ಘೋಷಿಸಿ, ಅದರ ಅನುಯಾಯಿಗಳನ್ನು ಎತ್ತಿಕಟ್ಟುವ ಬರಹಗಳೂ ಆಗಿಂದಾಗ್ಗೆ ಪ್ರಕಟವಾಗುತ್ತವೆ. ಸದರಿ ಪತ್ರಿಕೆಗೆ ಸರ್ಕಾರಿ ಜಾಹಿರಾತುಗಳೂ ಕೂಡ ಬಿಡುಗಡೆಯಾಗಿವೆ! ವಾರ್ತಾ ಮತ್ತು ಪ್ರಚಾರ ಇಲಾಖೆಯ ಅಡ್ವೈಸರ್ ಆಗಿರುವ ವಿಷ್ಣು ವಾಘ್ ಅವರೇ ಹೇಳುವ ಪ್ರಕಾರ “ಈ ಪತ್ರಿಕೆಯ ಬರಹಗಳು ಸಮಾಜವನ್ನು ಒಡೆಯುವ ಸರಕನ್ನು ಒಳಗೊಂಡಿರುತ್ತವೆ, ಇವು ಟೆರರಿಸ್ಟ್‍ಗಳನ್ನು ಸೃಷ್ಟಿಮಾಡುವ ಸಾಧ್ಯತೆ ಇದೆ”.
ಮಾಲೆಗಾಂವ್ ಸ್ಫೋಟ ಪ್ರಕರಣದಲ್ಲಿ ಮಿಲಿಟರಿ ಅಧಿಕಾರಿ ಕರ್ನಲ್ ಪುರೋಹಿತ್‍ನೇ ಮಾಸ್ಟರ್ ಮೈಂಡ್ ಆಗಿದ್ದ ಎಂಬ ಸುದ್ದಿ ಈಗ ಹಳೆಯದು. ಅದೇ ರೀತಿಯಲ್ಲೇ ಈ ಸಂಸ್ಥೆಯೊಂದಿಗೆ ಹಲವು ಮಿಲಿಟರಿ ಅಧಿಕಾರಿಗಳೂ ಸಂಬಂಧ ಹೊಂದಿರುವ ಸುದ್ದಿಗಳು ಬಯಲಾಗಿವೆ. ಇಂಡಿಯನ್ ನೇವಿಯ ಮಾಜಿ ಅಧಿಕಾರಿ ಸಿಯಾನ್ ಮೈಕೆಲ್ ಕ್ಲಾರ್ಕ್ ಸನಾತನದ ಸಕ್ರಿಯ ಕಾರ್ಯಕರ್ತನಾಗಿದ್ದು, ರಾಮನಾಥಿ ಆಶ್ರಮದ ವಾಸಿಯಾಗಿದ್ದ. 2006ರಲ್ಲಿ ಈತ ಆಶ್ರಮವಾಸಿಯಾಗಿರುವಾಗಲೇ ಅಸ್ಟ್ರೇಲಿಯಾ ದೇಶದ ಪೌರತ್ವ ಪಡೆದುಕೊಂಡಿದ್ದ! ಆದರೆ ಇದೇ ಅವಧಿಯಲ್ಲಿ ಗೋವಾದಲ್ಲಿ ನಡೆದ ಭಜರಂಗದಳ, ವಿಶ್ವ ಹಿಂದೂ ಪರಿಷದ್ ಮತ್ತು ಆರೆಸ್ಸೆಸ್ ಸಂಘಟನೆಗಳ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ. ಈ ಸಂಘಟನೆಗಳ ಪರಸ್ಪರ ಸಂಬಂಧವೇನು ಎಂಬುದಕ್ಕೆ ಇದೊಂದು ಪುರಾವೆಯಷ್ಟೆ.
ಸನಾತನ ಸಂಸ್ಥೆಯ ಸ್ಥಾಪಕ ಜಯಂತ್ ಬಾಲಾಜಿ ಅಠಾವಳೆ ಮೂಲತಃ ತರಬೇತುಗೊಂಡ ಹಿಪ್ನೋ ಥೆರಾಪಿಸ್ಟ್. ಬಹಳಷ್ಟು ವರ್ಷ ಬ್ರಿಟನ್‍ನಲ್ಲಿದ್ದುಕೊಂಡು ಹಿಪ್ನೋ ಥೆರಪಿಸ್ಟ್ ಆಗಿ ಪ್ರಾಕ್ಟೀಸ್ ಮಾಡ್ತಾ ಇದ್ದರು. ಹಿಪ್ನೋ ಥೆರಪಿಯಲ್ಲಿ ಭಾರೀ ಸಂಶೋಧನೆ ಮಾಡಿರುವ ಈತ ‘ಆದ್ಯಾತ್ಮ’ ಕಾರ್ಯದಲ್ಲಿ ತೊಡಗಿಸಿಕೊಳ್ಳಲಿಕ್ಕಾಗಿ ಭಾರತಕ್ಕೆ ವಾಪಸ್ ಬಂದ. ತನ್ನನ್ನು ಅವತಾರ ಪುರುಷ ಎಂಬಂತೆ ಪ್ರಚಾರ ಮಾಡಿಕೊಂಡ. ‘ಅಧ್ಯಾತ್ಮಿಕ ವಿಶ್ವವಿದ್ಯಾಲಯ’ ಎಂದು ಕರೆಯಲಾಗುವ ಸನಾತನ ಸಂಸ್ಥೆ ಸ್ಥಾಪಿಸಿದ್ದಾನೆ. ಆತನ ಕೆಲವು ಫೋಟೋಗಳು ನಾಲಿಗೆಯಲ್ಲಿ ಓಂ ಗುರುತಿನ ಮಚ್ಚೆ ಇರುವಂತೆ, ಉಗುರುಗಳಲ್ಲಿ ಓಂ ಎಂಬ ಬಿಳಿ ಮಚ್ಚೆ ಮೂಡಿರುವಂತೆ ಫೋಟೋಶಾಪ್ ಮಾಡಿ, ಭಕ್ತಾದಿಗಳನ್ನು ಮರುಳು ಮಾಡುವ ಕೆಲಸವೂ ನಡೆದಿದೆ.
ಈ ಇಡೀ ಸಂಸ್ಥೆಯ ಸ್ಥಾಪನೆ ಹಾಗೂ ಅದರ ವಿಸ್ತಾರವಾದ ಜಾಲದ ಹಿಂದೆ ಇದೇ ಸಂಘ ಪರಿವಾರದ ಶಕ್ತಿಗಳು ಕೆಲಸ ಮಾಡುತ್ತಿವೆ ಎಂಬುದಕ್ಕೆ ಸಾಕಷ್ಟು ಸಾಕ್ಷ್ಠಧಾರಗಳಿವೆ. ಆದರೆ ಸರ್ಕಾರಗಳು ಕುರುಡಾಗಿರುವಾಗ ಯಾರೇನು ಮಾಡಲು ಸಾಧ್ಯ?
ಸನಾತನಿಗಳು ತಮ್ಮ ಚಟುವಟಿಕೆಯನ್ನು ವಿವಿಧ ದೇಶಗಳಿಗೂ ವಿಸ್ತರಿಸಿದ್ದಾರೆ. ಗೌರಿ ಲಂಕೇಶ್ ಕೊಲೆ ಕೇಸಿನೊಂದಿಗೆ ಸಂಬಂಧ ಹೊಂದಿರುವ ಐವರಲ್ಲಿ ನಾಲ್ಕು ಮಂದಿ ದೇಶದಿಂದ ಹೊರಗಿದ್ದಾರೆಂಬ ಸುದ್ದಿಯನ್ನು ಇಂಡಿಯನ್ ಎಕ್ಸ್‍ಪ್ರೆಸ್ ವರದಿ ಮಾಡಿತ್ತು. ಅವರಲ್ಲಿ ನಮ್ಮ ಬೆಳಗಾವಿ ಮೂಲದ ರುದ್ರ ಪಾಟೀಲ್, ಮಂಗಳೂರು ಮೂಲದ ಜಯಪ್ರಕಾಶ್ ಕೂಡ ಇದ್ದಾರೆ. ಇವರ ಮೇಲೆ ರೆಡ್ ಕಾರ್ನರ್ ನೋಟೀಸ್ ಕೂಡ ಜಾರಿಯಲ್ಲಿದೆ.
ಸರ್ಬಿಯಾ ದೇಶದ ಕತೆ ಕೇಳಿ. ಇಲ್ಲಿ ‘ಮಾನವನ ಆದ್ಯಾತ್ಮಿಕ ಉನ್ನತಿ’ಯ ಹೆಸರಿನಲ್ಲಿ ಚಟುವಟಿಕೆ ನಡೆಸುತ್ತಿದ್ದ ಈ ಗುಂಪನ್ನು ನಿಷೇಧಿಸಲಾಗಿದೆ. “ಸನಾತನ ಸಂಸ್ಥೆ ಮಾನವ ಹಕ್ಕುಗಳ ವಿರೋಧಿಯಾಗಿರುವ, ವ್ಯಕ್ತಿಗತ ಆಯ್ಕೆಯ ಸ್ವಾತಂತ್ರ್ಯಕ್ಕೆ ಮತ್ತು ವಾಕ್ ಸ್ವಾತಂತ್ರ್ಯಕ್ಕೆ ಅಡ್ಡಿಯುಂಟು ಮಾಡುತ್ತಿರುವ ಸಂಘಟನೆ. ಈ ಸಂಸ್ಥೆ ಮಾನಸಿಕ ಹಾಗೂ ಸಾಮಾಜಿಕ ಸಮತೋಲನವನ್ನು ಹಾಳು ಮಾಡುತ್ತಿರುವ ಹಾಗೂ ವ್ಯಕ್ತಿಗಳ ಸುರಕ್ಷತೆಗೆ ಮತ್ತು ಸರ್ಕಾರದ ಭದ್ರತೆಗೆ ಅತ್ಯಂತ ಅಪಾಯಕಾರಿಯಾಗಿದೆ, ಮಾನವೀಯತೆಯ ಮುಸುಕಿನಲ್ಲಿ ಸನಾತನ ಸಂಸ್ಥೆ ಟೆರರಿಸಂಅನ್ನು ಬೆಳೆಸುತ್ತಿದೆ” ಎಂದು ಅಲ್ಲಿನ ಸರ್ಕಾರ ವಿವರಣೆ ನೀಡಿದೆ.
ಭಾರತ ದೇಶ ಪಾಠ ಕಲಿಯುವುದು ಯಾವಾಗ?

– ದೊಡ್ಡಿಪಾಳ್ಯ ನರಸಿಂಹಮೂರ್ತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...

ಜಿರಳೆ ಜನತಾ ಪಕ್ಷದ ಖಾತೆಗೆ ನಿರ್ಬಂಧ; ದೆಹಲಿ ಹೈಕೋರ್ಟ್‌ನಿಂದ ಕೇಂದ್ರ-ಎಕ್ಸ್‌ಗೆ ನೋಟಿಸ್

ಜಿರಳೆ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ತಮ್ಮ ಸಾಮಾಜಿಕ ಮಾಧ್ಯಮ ಖಾತೆಗಳನ್ನು ನಿರ್ಬಂಧಿಸಿದ್ದನ್ನು ಪ್ರಶ್ನಿಸಿ ಅರ್ಜಿ ಸಲ್ಲಿಸಿದ್ದು, ದೆಹಲಿ ಹೈಕೋರ್ಟ್ (ಮೇ 29) ಕೇಂದ್ರ ಸರ್ಕಾರ ಮತ್ತು ಸಾಮಾಜಿಕ...

“ದಲಿತ ಮುಖ್ಯಮಂತ್ರಿ” ಅರ್ಹರು ಯಾರಿಲ್ಲಿ?

ಸದ್ಯ ಕರ್ನಾಟಕದಲ್ಲಿ ಮುಖ್ಯಮಂತ್ರಿಗಳ ಬದಲಾವಣೆಗೆ ವೇದಿಕೆ ಸಜ್ಜುಗೊಂಡಿದೆ. ಸುಧೀರ್ಘಾವಧಿ ಮುಖ್ಯಮಂತ್ರಿಯಾಗಿ ಅಧಿಕಾರ ನಡೆಸಿದ ಅಹಿಂದ ರಾಜಕಾರಣದ ಕುರಿತು ಮಾತಾಡುತ್ತಿದ್ದ, ಸಮಾಜವಾದಿ ಹಿನ್ನೆಲೆಯ ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಡಿ.ಕೆ. ಶಿವಕುಮಾರ್‌ ಮುಖ್ಯಮಂತ್ರಿಯಾಗಿ...

‘ನಾನು ಪ್ರೀತಿ-ವಿಶ್ವಾಸಗಳಿಗೆ ತಲೆಬಾಗುವವನೇ ಹೊರತು ಒತ್ತಡ-ಪ್ರಭಾವಗಳಿಗೆ ಒಳಗಾಗುವವನಲ್ಲ’: ವಿದಾಯ ಭಾಷಣದಲ್ಲಿ ಸಿದ್ದರಾಮಯ್ಯ

ಹೈಕಮಾಂಡ್ ಯಾವಾಗ ಸೂಚಿಸುತ್ತದೆಯೋ ಆಗ ರಾಜೀನಾಮೆ ಕೊಡುತ್ತೇನೆ ಎಂದು ಹೇಳಿದ್ದ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ 2026 ಮೇ 28 ರಂದು ಹೈಕಮಾಂಡ್ ಸೂಚನೆ ಮೇರೆಗೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಮೂಲಕ...