Homeಅಂಕಣಗಳುಸಮಾಜ ಬದಲಾವಣೆಯಲ್ಲಿ ಯುವಜನರ ಪಾತ್ರ

ಸಮಾಜ ಬದಲಾವಣೆಯಲ್ಲಿ ಯುವಜನರ ಪಾತ್ರ

- Advertisement -
ನಮ್ಮ  ಸಮಾಜ ನಿಂತ ನೀರಿನಂತೆ ಗಬ್ಬು ಹೊಡೆಯುತ್ತಿದೆ. ವಿಷಪೂರಿತವಾಗಿದೆ. ಅನೇಕ ಸಾಮಾಜಿಕ ಕಾಯಿಲೆಗಳ ಆವಾಸಸ್ಥಾನವಾಗಿದೆ. ಸ್ವಾತಂತ್ರ್ಯ ಬಂದು 70ವರ್ಷಗಳೇ ಆದರೂ ಬಡವರು ಬಡವರಾಗಿಯೇ ಉಳಿದಿದ್ದಾರೆ. ಕೆಲವೇ ಶ್ರೀಮಂತರು ಸಹಸ್ರಾರು ಕೋಟಿಗಳ ಒಡೆಯರಾಗುತ್ತಿದ್ದಾರೆ. ಪಕ್ಷ ರಾಜಕೀಯ ಹೊಲಸಾಗಿದೆ. ವಿದ್ಯೆ ಮಾರಾಟದ ವಸ್ತುವಾಗಿದೆ. ಶಾಸಕರು, ಮಂತ್ರಿಗಳಿಂದ ಮೊದಲುಗೊಂಡು ಪಂಚಾಯ್ತಿ ಸದಸ್ಯರವರೆಗೆ ದುರ್ಲಾಭಕ್ಕೋಸ್ಕರ ವಿದ್ಯಾಸಂಸ್ಥೆಗಳನ್ನು ನಡೆಸುತ್ತಿದ್ದಾರೆ. ಮಠಾಧಿಪತಿಗಳೂ ಈ ಸ್ಪರ್ಧೆಯಲ್ಲಿದ್ದಾರೆ.
ಇದನ್ನೆಲ್ಲ ಮೂಕಪ್ರೇಕ್ಷಕರಂತೆ ನಮ್ಮ ಯುವಕರು ನೋಡಿಕೊಂಡು ಕುಳಿತಿದ್ದಾರೆ. ನಮ್ಮದು ಪ್ರಜಾರಾಜ್ಯ, ಪ್ರಜೆಗಳೇ ನಮ್ಮ ದೇಶದ ಪ್ರಭುಗಳು ಎಂದು ನಮ್ಮ ರಾಜ್ಯಾಂಗ ಹೇಳುತ್ತದೆ. ಆದರೆ ನಾವು ಮಾತ್ರ ಆಡಳಿತಕ್ಕೂ ನಮಗೂ ಸಂಬಂಧವಿಲ್ಲವೇನೋ ಎಂಬಂತೆ ಹೊಣೆಗೇಡಿಗಳಾಗಿ ನಡೆದುಕೊಳ್ಳುತ್ತಿದ್ದೇವೆ. ಇಂಥಾ ಮನೋಭಾವ ಯುವಕರಿಗೆ ತರವಲ್ಲ. ಗಾಢನಿದ್ರೆಯಲ್ಲಿರುವ ಯುವಕರು ಮೈಕೊಡವಿಕೊಂಡು ಏಳಬೇಕು. ದೇಶದ ಸಮಸ್ಯೆಗಳನ್ನೆಲ್ಲ ಒಂದೊಂದಾಗಿ ಬಗೆಹರಿಸಬೇಕು. ಅದಕ್ಕೆ ಮೊದಲು ನಾವು ದೇಶದ ಇಂದಿನ ಪರಿಸ್ಥಿತಿಯನ್ನು ಅರ್ಥಮಾಡಿಕೊಳ್ಳಬೇಕು. ಸಮಸ್ಯೆಗೆ ಪರಿಹಾರ ಕಂಡುಕೊಂಡು ಬದಲಾವಣೆಗೆ ಸಂಘಟಿತರಾಗಿ ಹೋರಾಡಬೇಕು. ಯುವಕರು ನಮ್ಮ ಆಶಾಕಿರಣ, ನಮ್ಮ ಮುಂದೆ ಇರುವ ಪ್ರಮುಖ ಸಮಸ್ಯೆಗಳಿವು :-
1. ಪ್ರಜಾಪ್ರಭುತ್ವಕ್ಕೆ ಕುತ್ತು ಬಂದಿದೆ.
2. ನಮ್ಮ ಮೂಲಭೂತ ಸಮಸ್ಯೆಗಳಾದ ಬಡತನ, ನಿರುದ್ಯೋಗ, ಭ್ರಷ್ಟಾಚಾರ, ಆಡಳಿತದ ದುರ್ಬಳಕೆ ಇವುಗಳಿಗೆ ಪರಿಹಾರ ಕಂಡುಹಿಡಿದುಕೊಳ್ಳಬೇಕಿದೆ.
3. ಲೋಕಸಭೆ, ಶಾಸನಸಭೆಗಳು ಜನರ ಸಮಸ್ಯೆಗಳನ್ನು ಚರ್ಚಿಸಿ ಬಗೆಹರಿಸುವುದುದನ್ನು ಬಿಟ್ಟು ಜಗಳ, ಗದ್ದಲ, ವಾಕ್‍ಔಟ್, ದೊಂಬಿ, ಗಲಾಟೆ ಇವುಗಳಲ್ಲೇ ಕಾಲಕಳೆದು, ಚರ್ಚೆಯಿಲ್ಲದೆ ಮಸೂದೆಗಳು ಪಾಸಾಗುತ್ತಿವೆ.
4. ಹಣ, ಜಾತಿ, ಧರ್ಮ, ತೋಳ್ಬಲ ಇರುವವರು ನಮ್ಮ ಪ್ರತಿನಿಧಿಗಳಾಗಿ ಆಯ್ಕೆಯಾಗುತ್ತಿದ್ದಾರೆ.
ಇಂತಹ ಅನೇಕ ಸಮಸ್ಯೆಗಳು ನಮ್ಮನ್ನು ಕಾಡುತ್ತಿವೆ. ಮೊದಲು ಈ ಸಮಸ್ಯೆಗಳನ್ನು ಬಗೆ ಹರಿಸಲು ಯುವಕರು ತೊಡಗಬೇಕು.
ನಮ್ಮ ಸಮಾಜವನ್ನು ನಾವು ಸತ್ಯ ಮತ್ತು ಅಹಿಂಸೆಯ ಆಧಾರದ ಮೇಲೆ ಕಟ್ಟಬೇಕು. ಯುವಕರಿಗೆ ಕೋಪತಾಪಗಳಿರಬಾರದು. ಹೋರಾಟ ಮಾಡುವಾಗ ಯುವಕರು ಥರ್ಮಾಮೀಟರ್‍ನಂತೆ ಇರಬೇಕು. ಥರ್ಮಾಮೀಟರ್‍ಗೆ ಜ್ವರ ಬರಬಾರದು. ಅದಕ್ಕೆ ಜ್ವರ ಬಂದರೆ ಅದು ಇತರರ ಜ್ವರವನ್ನು ಕಂಡುಹಿಡಿಯುವುದಾದರೂ ಹೇಗೆ? ಶ್ರೀ ಕೃಷ್ಣ ಭಗವದ್ಗೀತೆಯಲ್ಲಿ ಹೇಳುತ್ತಾನೆ, ಯುದ್ಧಸ್ಯವಿಗತ ಜ್ವರ: ಎಂದು ತಲೆ ಬಿಸಿಮಾಡಿಕೊಳ್ಳದೆ, ಶಾಂತಿಚಿತ್ತದಿಂದ ಯುದ್ಧದಲ್ಲಿ ತೊಡಗಿಕೊ ಎಂಬುದು ಇದರರ್ಥ.
ನಾವು ಹೋರಾಡಬೇಕಾಗಿರುವುದು ಸರ್ವರಿಗೂ ಸುಖ ಸಂತೋಷ ಸಿಗಲೆಂದು. ಅಂದರೆ ಜನರಲ್ಲಿ ಹಸಿವು, ಬಡತನ, ಅಜ್ಞಾನ, ಅಸಮಾನತೆ ಇವು ಇರಬಾರದು. ಅಹಿಂಸಾ ಹೋರಾಟದ ಮೂಲಕ ಈ ಬದಲಾವಣೆಯನ್ನು ಸಮಾಜದಲ್ಲಿ ತರಬೇಕು. ಈಗ ಯಾವ ರಾಜಕೀಯ ಪಕ್ಷಕ್ಕೂ ಸಿದ್ಧಾಂತಗಳೇ ಇಲ್ಲ. ಇಂಥಾ ಸನ್ನಿವೇಶದ ದುರ್ಲಾಭ ಮಾಡಿಕೊಳ್ಳಲು ಭಾರತೀಯ ಜನತಾ ಪಕ್ಷ ‘ಹಿಂದೂರಾಷ್ಟ್ರ ನಿರ್ಮಾಣ’ ಎಂಬ ಡೋಂಗಿ ರಾಷ್ಟ್ರವಾದವೊಂದನ್ನು ಮುಂದೆ ತರುತ್ತಿದೆ. ಅದು ಅತ್ಯಂತ ಅಪಾಯಕಾರಿ. ಸಮಾಜದಲ್ಲಿ ಮೌಲ್ಯಗಳ ಅಧಃಪತನವೇ ಇಂದಿನ ನಮ್ಮ ಈ ಅಧೋಗತಿಗೆ ಕಾರಣ. ಮಾನವೀಯ ಮೌಲ್ಯಗಳಾದ ಸೋದರತ್ವ, ಸಮಾನತೆಗಳ ಆಧಾರದ ಮೇಲೆ ನಮ್ಮ ಸಮಾಜ ರೂಪಿತವಾಗಬೇಕು. ಜಾತಿ, ಧರ್ಮಗಳನ್ನು ರಾಜಕೀಯಕ್ಕೆ ಬೆರೆಸಬಾರದು. ಆದರೆ ಈಗ ಕ್ರಿಮಿನಲ್‍ಗಳು ಎಲ್ಲಾ ರಾಜಕೀಯ ಪಕ್ಷಗಳಿಂದಲೂ ಆರಿಸಿ ಬರುತ್ತಿದ್ದಾರೆ. ಈ ಸಾರಿ ಚುನಾವಣೆಯಲ್ಲಿ ಬಿಜೆಪಿಯಿಂದ 27, ಜನತಾದಳದಿಂದ 23, ಕಾಂಗ್ರೆಸ್ಸಿನಿಂದ 15 ಕ್ರಿಮಿನಲ್ ಹಿನ್ನೆಲೆಯವರು ಆರಿಸಿ ಬಂದಿದ್ದಾರೆ. ಮತದಾರರಿಗೆ ಇಂತಹವರನ್ನು ಆಯ್ಕೆ ಮಾಡಬೇಡಿ, ಇಂಥವರಿಗೆ ಮತ ಹಾಕಬೇಡಿ ಎಂದು ಗಟ್ಟಿದನಿಯಲ್ಲಿ ಹೇಳುವವರು ಬೇಕಾಗಿದ್ದಾರೆ.
ಯುವಕರ ಇತ್ತೀಚಿನ ಸಾಧನೆ ಕುರಿತು ಎರಡು ನಿದರ್ಶನಗಳನ್ನು ಕೊಡುತ್ತೇನೆ. ಅಸ್ಸಾಂನಲ್ಲಿ ವಿದ್ಯಾರ್ಥಿಗಳು ಸಂಘಟನೆ ಮಾಡಿಕೊಂಡರು. ಆಗ ಅಸ್ಸಾಂನಲ್ಲಿ ಅಧಿಕಾರಿಗಳಾಗಿದ್ದವರೆಲ್ಲ ಬಂಗಾಳಿಗಳು. ‘ಅಸ್ಸಾಂ ಅಸ್ಸಾಮಿಯರಿಗೆ’ ಎಂಬ ಚಳವಳಿ ಆರಂಭಿಸಿದರು. ಅಸ್ಸಾಂ ಗಣತಂತ್ರ ಪರಿಷತ್ ಎಂಬ ಸಂಸ್ಥೆ ಸ್ಥಾಪಿಸಿದರು. ಹೋರಾಟದಲ್ಲಿ ಭಾಗವಹಿಸಿದ್ದಕ್ಕಾಗಿ ಲಾಠಿಚಾರ್ಜ್ ನಡೆದವು, ಅರೆಸ್ಟು, ಜೈಲುವಾಸಗಳಾದವು. ಆದರೆ ವಿದ್ಯಾರ್ಥಿ ಹೋರಾಟಗಾರರು ಶಾಂತಿಯುತವಾಗಿ ಚಳವಳಿ ಮುಂದುವರೆಸಿದರು. ಚಳುವಳಿಯ ನಾಯಕರು ಬಂದ್ ಘೋಷಣೆ ಮಾಡಿದರು. ಬಂದ್ ಯಶಸ್ವಿಯಾಯಿತು. ಪೊಲೀಸ್ ಕಫ್ರ್ಯೂ ಹಾಕಿದರು. ಜನರು ಯಾರೂ ಮನೆಬಿಟ್ಟು ಹೊರಬರಲೇ ಇಲ್ಲ. ಸರ್ಕಾರಿ ಕೆಲಸವೆಲ್ಲ ಸ್ಥಗಿತವಾಯಿತು. ಮುಂದೆ ವಿಧಾನಸಭೆಗೆ ಚುನಾವಣೆ ಘೋಷಣೆಯಾಯಿತು. ಚುನಾವಣೆ ನಡೆಸುವ ಅಧಿಕಾರಿಗಳನ್ನು ಇಂದಿರಾಗಾಂಧಿ ದೆಹಲಿಯಿಂದಲೇ ಕಳುಹಿಸಿದರು. ವಿದಾರ್ಥಿ ನಾಯಕರು ಚುನಾವಣೆಯನ್ನು ಬಹಿಷ್ಕರಿಸಲು ಅಸ್ಸಾಮಿಯರಿಗೆ ಕರೆಕೊಟ್ಟರು. ಚುನಾವಣೆ ನಡೆದೇ ನಡೆಯಿತು. ಶೇ.10ರಷ್ಟು ಮತದಾನ ಆಯಿತು. ಆದರೂ ಎಣಿಕೆ ನಡೆಯಿತು. ಕಾಂಗ್ರೆಸ್‍ಗೆ ಬಹುಮತ ಬಂತು ಎಂದು ಚುನಾವಣಾ ಆಯೋಗ ಘೋಷಣೆ ಮಾಡಿತು. ಆದರೆ ಆ ಸರ್ಕಾರ ಬಹಳ ಕಾಲ ನಡೆಯಲಿಲ್ಲ. ಮತ್ತೆ ಚುನಾವಣೆ ಘೋಷಣೆಯಾಯಿತು. ‘ಅಸ್ಸಾಂ ಗಣ ಪರಿಷತ್’ ಪರವಾಗಿ ಅಭ್ಯರ್ಥಿಗಳನ್ನು ನಿಲ್ಲಿಸಲಾಯಿತು. ಅವರು ಬಹುಮತ ಗಳಿಸಿದರು. ಅಧಿಕಾರ ಅವರ ಕೈಗೆ ಹೋಯಿತು. ಯುವಕರು ಸಂಘಟಿತರಾಗಿ ಜನತೆಯ ಹಿತಕ್ಕಾಗಿ ದುಡಿದರೆ, ಅವರೂ ಅಧಿಕಾರಕ್ಕೆ ಬರಬಹುದು ಎಂಬುದಕ್ಕೆ ಇದು ಒಂದು ಉದಾಹರಣೆ.
ಬಿಹಾರದಲ್ಲಿ ಜಯಪ್ರಕಾಶ್ ನಾರಾಯಣ್‍ರವರ ನೇತೃತ್ವದಲ್ಲಿ ಸರ್ಕಾರದ ಭ್ರಷ್ಟಾಚಾರದ ವಿರುದ್ಧವಾಗಿ ದೀರ್ಘಕಾಲದ ಚಳುವಳಿ ನಡೆಯಿತು. ಸರ್ಕಾರ ನಡೆಸುವವರು ಭ್ರಷ್ಟರಾಗಿರುವುದರಿಂದ ರಾಜೀನಾಮೆ ಕೊಟ್ಟು ಹೋಗಬೇಕು ಎಂದು ಘೋಷಿಸುತ್ತಾ ಒಂದು ಲಕ್ಷ ಸಹಿಮಾಡಿದ ಸಹಿಸಂಗ್ರಹದ ಕಡತಗಳನ್ನು ಲಾರಿಯಲ್ಲಿಟ್ಟುಕೊಂಡು ವಿದ್ಯಾರ್ಥಿಗಳು ಮೆರವಣಿಗೆ ಹೊರಟರು. ಜಯಪ್ರಕಾಶರ ತಲೆಗೇ ಪೊಲೀಸರು ಲಾಠಿಯಿಂದ ಹೊಡೆದರು. ವಿದ್ಯಾರ್ಥಿಗಳ ದಸ್ತಗಿರಿ ಆಯಿತು. ಮುಂದಿನ ಚುನಾವಣೆಯಲ್ಲಿ ಮುಖ್ಯಮಂತ್ರಿಗಳು ಸೋತರು.
ಯುವಕರು ಮನಸ್ಸು ಮಾಡಿದರೆ ಭ್ರಷ್ಟಾಚಾರ ತಪ್ಪಿಸಬಹುದು. ಆಡಳಿತ ನಡೆಸುವ ಭ್ರಷ್ಟ ಸರ್ಕಾರವನ್ನು ಕಿತ್ತೆಸೆಯಬಹುದು ಎಂಬುದಕ್ಕೆ ಯುವಕರ ಈ ಎರಡು ಹೋರಾಟಗಳು ಉದಾಹರಣೆ.
ಸಮಾಜ ಪೂರ್ತಿ ಕೆಟ್ಟುಹೋಗಿದೆ. ಸರ್ಕಾರ ನಡೆಸುವವರು ಭ್ರಷ್ಟರಾಗಿದ್ದಾರೆ, ಸರ್ಕಾರಿ ಅಧಿಕಾರಿಗಳು ಲಂಚಕೋರರು; ಇವನ್ನೆಲ್ಲ ನೋಡಿಕೊಂಡು ಮೂಕಪ್ರೇಕ್ಷರಂತೆ ಕುಳಿತಿದ್ದಾರೆ ಯುವಜನತೆ. ಈ ಮನೋಭಾವ ತ್ಯಜಿಸಿ ಕ್ರಾಂತಿಯನ್ನು ತರಬೇಕೆಂದು ಯುವಕರು ಮನಸ್ಸು ಮಾಡಬೇಕು. ಕ್ರಾಂತಿ ಎಂದರೆ ರಕ್ತಕ್ರಾಂತಿ ಎಂದು ಯುವಕರು ಭಾವಿಸುತ್ತಾರೆ. ಕ್ರಾಂತಿ ಎಂದರೆ ಸಮಾಜದ ಸಂಪೂರ್ಣ ಬದಲಾವಣೆ. ಈ ಕ್ರಾಂತಿಯನ್ನು ಯುವಕರು ಜನರ ತಲೆಯಲ್ಲಿ ಕ್ರಾಂತಿಯ ಬೀಜಗಳನ್ನು ಬಿತ್ತುವ ಮೂಲಕ ಸಾಧಿಸಬೇಕು. ಕ್ರಾಂತಿಯ ಬೀಜ ಎಲ್ಲರ ತಲೆಯಲ್ಲಿ ಸ್ಫೋಟವಾಗಬೇಕು. ಇದನ್ನು ವಿಚಾರಕ್ರಾಂತಿ ಎಂದು ಹೇಳುತ್ತಾರೆ. ಅಂತಹ ವಿಚಾರಕ್ರಾಂತಿ ಯುವಕರ ಮನಸ್ಸಿನಲ್ಲಿ ಮೂಡಬೇಕು. ಯುವಕರು ಕ್ರಾಂತಿವಾಹಕರಾಗಿ ಜನಜಾಗೃತಿಯ ಕೆಲಸದಲ್ಲಿ ತೊಡಗಿಸಿಕೊಂಡಲ್ಲಿ ಜನಜಾಗೃತಿಯ ಮೂಲಕ ಸಾಮಾಜಿಕ ಕ್ರಾಂತಿ ಸಾಧಿಸಬಹುದು; ಹೊಸ ಮೌಲ್ಯಗಳಿರುವ ನವಸಮಾಜವನ್ನು ಸೃಷ್ಟಿ ಮಾಡಬಹುದು.
                             – ಹೆಚ್.ಎಸ್.ದೊರೆಸ್ವಾಮಿ
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೂತುಕುಡಿ ಸಾತನ್‌ಕುಳಂ ತಂದೆ-ಮಗನ ಕಸ್ಟಡಿ ಸಾವು ಪ್ರಕರಣ : ಅಪರಾಧಿಗಳಾದ ಎಲ್ಲಾ 9 ಪೊಲೀಸರಿಗೆ ಮರಣದಂಡನೆ ವಿಧಿಸಿದ ನ್ಯಾಯಾಲಯ

ತಮಿಳುನಾಡಿನ ತೂತುಕುಡಿ ಜಿಲ್ಲೆಯ ಸಾತನ್‌ಕುಳಂ ಪೊಲೀಸ್ ಠಾಣೆಯಲ್ಲಿ ಕೋವಿಡ್-19 ಲಾಕ್‌ಡೌನ್ ಸಮಯದಲ್ಲಿ ಸಂಭವಿಸಿದ, ವ್ಯಾಪಾರಿ ಪಿ. ಜಯರಾಜ್ (58) ಮತ್ತು ಅವರ ಮಗ ಜೆ. ಬೆನಿಕ್ಸ್ (31) ಅವರ ಕಸ್ಟಡಿ ಸಾವು ಪ್ರಕರಣದ...

ದಾವಣಗೆರೆ ದಕ್ಷಿಣ ಉಪ-ಸಮರ: ಶಾಮನೂರು ಸಾಮ್ರಾಜ್ಯದಲ್ಲಿ ಅಹಿಂದ ಬಂಡಾಯ!

ತುಂಗಭದ್ರಾ ನದಿ ಪರ‍್ವಕ್ಕೆ ಎತ್ತರದ ಪ್ರದೇಶದಲ್ಲಿರುವ ದಾವಣಗೆರೆ ಮಧ್ಯ ಕರ್ನಾಟಕದ ಪ್ರಮುಖ ವಾಣಿಜ್ಯ ನಗರಿ. ಬೆಣ್ಣೆ ದೋಸೆಯ ಘಮಲಿನ ದಾವಣಗೆರೆಯ ರಾಜಕಾರಣ ಮಾತ್ರ ಮಿರ್ಚಿ-ಮಂಡಕ್ಕಿಯ ಖಡಕ್ ಖಾರಾ ಕುರುಕುಲಿನಂತೆ! ದಾವಣಗೆರೆ ಮತ್ತದರ ಸುತಮುತ್ತಲಿನ...

‘Dr. Nimo Yadav’, ‘Nehr Who’ ಎಕ್ಸ್‌ ಖಾತೆಗಳನ್ನು ತಕ್ಷಣ ಮರುಸ್ಥಾಪಿಸಲು ದೆಹಲಿ ಹೈಕೋರ್ಟ್ ಆದೇಶ

'Dr. Nimo Yadav' ಮತ್ತು 'Nehr Who' ಎಂಬ ಎರಡು ಪರೋಡಿ ಎಕ್ಸ್‌ ಖಾತೆಗಳನ್ನು ತಕ್ಷಣ ಮರು ಸ್ಥಾಪಿಸುವಂತೆ ದೆಹಲಿ ಹೈಕೋರ್ಟ್ ಸೋಮವಾರ (ಏ.6) ಎಕ್ಸ್ ಸಂಸ್ಥೆಗೆ (X Corp) ಆದೇಶಿಸಿದೆ. 'Dr....

ಬಂಗಾಳ| ಮತದಾರರ ಪಟ್ಟಿಯಿಂದ ಹೆಸರು ತೆಗೆದ ಬಳಿಕ ಸಾವಿಗೆ ಶರಣಾದ ಮುಸ್ಲಿಂ ವ್ಯಕ್ತಿ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ನಂತರ ಪಶ್ಚಿಮ ಬಂಗಾಳದಲ್ಲಿ ಮತದಾರರ ಪಟ್ಟಿಯಿಂದ ತನ್ನ ಹೆಸರನ್ನು ತೆಗೆದುಹಾಕಿದ್ದರಿಂದ ಮನನೊಂದ ಮುಸ್ಲಿಂ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಮೃತನನ್ನು ಬಿರ್ಭುಮ್...

‘ಯೋಜನೆಯು ಕೇರಳಕ್ಕೆ ಜೀವನಾಡಿಯಾಗಲಿದೆ’: ವಯನಾಡ್ ಸುರಂಗ ಮಾರ್ಗ ವಿರುದ್ದದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಕೇರಳದ ಕೋಝಿಕ್ಕೋಡ್-ವಯನಾಡ್ ಸುರಂಗ ಮಾರ್ಗ ನಿರ್ಮಾಣಕ್ಕೆ ನೀಡಲಾದ ಪರಿಸರ ಅನುಮತಿ (ಇಸಿ) ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ (ಏ.6) ವಜಾಗೊಳಿಸಿದೆ. ಸುರಂಗ ನಿರ್ಮಾಣದ ಸಮಯದಲ್ಲಿ ಪರಿಸರ ಅನುಮತಿಯ ಷರತ್ತುಗಳ ಉಲ್ಲಂಘನೆಯಾದರೆ, ಅರ್ಜಿದಾರರು...

651 ಕೋಟಿ ರೂ. ಮೌಲ್ಯದ ನಗದು, ಮದ್ಯ, ಮಾದಕ ವಸ್ತು ವಶಪಡಿಸಿಕೊಂಡ ಚುನಾವಣಾ ಆಯೋಗ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದಲ್ಲಿ ನಡೆಯುತ್ತಿರುವ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಅಧಿಕಾರಿಗಳು 651.51 ಕೋಟಿ ರೂ.ಗೂ ಹೆಚ್ಚು ಮೌಲ್ಯದ ನಗದು, ಮದ್ಯ, ಮಾದಕ ವಸ್ತುಗಳು ಮತ್ತು ಇತರ ಉಚಿತ ವಸ್ತುಗಳನ್ನು...

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ಬಾಲಕಿಯನ್ನು ಸರಪಳಿಯಿಂದ ಕಟ್ಟಿ ಥಳಿಸಿದ ಮಾಜಿ ಸೇನಾಧಿಕಾರಿ

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ನಾಲ್ಕು ವರ್ಷದ ಬಾಲಕಿಯನ್ನು ನಿವೃತ್ತ ಸೇನಾಧಿಕಾರಿಯೊಬ್ಬರು ಸರಪಳಿಯಿಂದ ಕಟ್ಟಿಹಾಕಿ ಕ್ರೂರವಾಗಿ ಥಳಿಸಿರುವ ಆಘಾತಕಾರಿ ಘಟನೆ ಹಿಮಾಚಲ ಪ್ರದೇಶದ ಉನಾ ಜಿಲ್ಲೆಯ ಬೆಹಡಾಲ ಗ್ರಾಮದಲ್ಲಿ ನಡೆದಿದೆ. ಬಾಲಕಿಯು ನಿವೃತ್ತ ಸೇನಾಧಿಕಾರಿಯ ತೋಟದ...

ಆಂಧ್ರ ವಿಧಾನಸಭಾ ಸ್ಪೀಕರ್ ಅಯ್ಯಣ್ಣ ಪಾತ್ರುಡು ಅವರಿಂದ ದಲಿತ ವ್ಯಕ್ತಿಗೆ ಕಪಾಳಮೋಕ್ಷ: ವೈಎಸ್‌ಆರ್‌ಸಿಪಿ ವಾಗ್ದಾಳಿ

ಏಪ್ರಿಲ್ 3 ರ ಗುರುವಾರ ನರಸಿಪಟ್ಟಣದಲ್ಲಿ ದಲಿತ ವ್ಯಕ್ತಿಯೊಬ್ಬರಿಗೆ ಕಪಾಳಮೋಕ್ಷ ಮಾಡಿದ್ದಕ್ಕಾಗಿ ಆಂಧ್ರಪ್ರದೇಶ ವಿಧಾನಸಭಾ ಸ್ಪೀಕರ್ ಮತ್ತು ತೆಲುಗು ದೇಶಂ ಪಕ್ಷದ (ಟಿಡಿಪಿ) ನಾಯಕ ಅಯ್ಯಣ್ಣ ಪಾತ್ರುಡು ಅವರ ವಿರುದ್ಧ ವೈಎಸ್‌ಆರ್ ಕಾಂಗ್ರೆಸ್...

ಪ. ಬಂಗಾಳ | ಬಿಜೆಪಿ ಪ್ರಚಾರ ಸಾಮಗ್ರಿ ಸಜ್ಜುಗೊಳಿಸಿದ ವಿಡಿಯೋ ವೈರಲ್ : ಚುನಾವಣಾ ಕರ್ತವ್ಯದಲ್ಲಿದ್ದ ಅಧಿಕಾರಿ ಅಮಾನತು

ಬಿಜೆಪಿ ಪ್ರಚಾರ ಸಾಮಗ್ರಿಗಳನ್ನು ತಯಾರಿಸಲು ಸಹಾಯ ಮಾಡಿದ ಆರೋಪದ ಮೇಲೆ ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯ ಪಾಣಿಹಟಿ ವಿಧಾನಸಭಾ ಕ್ಷೇತ್ರದ ಅಧಿಕಾರಿಯೊಬ್ಬರನ್ನು ಚುನಾವಣಾ ಆಯೋಗ ಅಮಾನತುಗೊಳಿಸಿದೆ ಎಂದು ದಿ ಇಂಡಿಯನ್...

ಮುಸ್ಲಿಮರ ವಿರುದ್ಧ ದ್ವೇಷ ಕಾರುವ ಅಸ್ಸಾಂ ಸಿಎಂ ಪತ್ನಿ ಬಳಿ 2 ಮುಸ್ಲಿಂ ದೇಶಗಳ ಪಾಸ್‌ಪೋರ್ಟ್ ಇದೆ : ಕಾಂಗ್ರೆಸ್ ಆರೋಪ

ಮತದಾನಕ್ಕೆ ಇನ್ನೇನು ಮೂರು ದಿನಗಳು ಬಾಕಿ ಇರುವಾಗ, ಅಸ್ಸಾಂನಲ್ಲಿ ಕಾಂಗ್ರೆಸ್‌-ಬಿಜೆಪಿ ನಡುವೆ ವೈಯಕ್ತಿಕ ವಿಚಾರಗಳ ಕುರಿತ ವಾಗ್ಯುದ್ಧ ತಾರಕಕ್ಕೇರಿದೆ. ಸಿಎಂ ಹಿಮಂತ ಬಿಸ್ವಾ ಶರ್ಮಾ ಮತ್ತು ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ...