Homeಅಂಕಣಗಳುಸಮಾಜ ಬದಲಾವಣೆಯಲ್ಲಿ ಯುವಜನರ ಪಾತ್ರ

ಸಮಾಜ ಬದಲಾವಣೆಯಲ್ಲಿ ಯುವಜನರ ಪಾತ್ರ

- Advertisement -
ನಮ್ಮ  ಸಮಾಜ ನಿಂತ ನೀರಿನಂತೆ ಗಬ್ಬು ಹೊಡೆಯುತ್ತಿದೆ. ವಿಷಪೂರಿತವಾಗಿದೆ. ಅನೇಕ ಸಾಮಾಜಿಕ ಕಾಯಿಲೆಗಳ ಆವಾಸಸ್ಥಾನವಾಗಿದೆ. ಸ್ವಾತಂತ್ರ್ಯ ಬಂದು 70ವರ್ಷಗಳೇ ಆದರೂ ಬಡವರು ಬಡವರಾಗಿಯೇ ಉಳಿದಿದ್ದಾರೆ. ಕೆಲವೇ ಶ್ರೀಮಂತರು ಸಹಸ್ರಾರು ಕೋಟಿಗಳ ಒಡೆಯರಾಗುತ್ತಿದ್ದಾರೆ. ಪಕ್ಷ ರಾಜಕೀಯ ಹೊಲಸಾಗಿದೆ. ವಿದ್ಯೆ ಮಾರಾಟದ ವಸ್ತುವಾಗಿದೆ. ಶಾಸಕರು, ಮಂತ್ರಿಗಳಿಂದ ಮೊದಲುಗೊಂಡು ಪಂಚಾಯ್ತಿ ಸದಸ್ಯರವರೆಗೆ ದುರ್ಲಾಭಕ್ಕೋಸ್ಕರ ವಿದ್ಯಾಸಂಸ್ಥೆಗಳನ್ನು ನಡೆಸುತ್ತಿದ್ದಾರೆ. ಮಠಾಧಿಪತಿಗಳೂ ಈ ಸ್ಪರ್ಧೆಯಲ್ಲಿದ್ದಾರೆ.
ಇದನ್ನೆಲ್ಲ ಮೂಕಪ್ರೇಕ್ಷಕರಂತೆ ನಮ್ಮ ಯುವಕರು ನೋಡಿಕೊಂಡು ಕುಳಿತಿದ್ದಾರೆ. ನಮ್ಮದು ಪ್ರಜಾರಾಜ್ಯ, ಪ್ರಜೆಗಳೇ ನಮ್ಮ ದೇಶದ ಪ್ರಭುಗಳು ಎಂದು ನಮ್ಮ ರಾಜ್ಯಾಂಗ ಹೇಳುತ್ತದೆ. ಆದರೆ ನಾವು ಮಾತ್ರ ಆಡಳಿತಕ್ಕೂ ನಮಗೂ ಸಂಬಂಧವಿಲ್ಲವೇನೋ ಎಂಬಂತೆ ಹೊಣೆಗೇಡಿಗಳಾಗಿ ನಡೆದುಕೊಳ್ಳುತ್ತಿದ್ದೇವೆ. ಇಂಥಾ ಮನೋಭಾವ ಯುವಕರಿಗೆ ತರವಲ್ಲ. ಗಾಢನಿದ್ರೆಯಲ್ಲಿರುವ ಯುವಕರು ಮೈಕೊಡವಿಕೊಂಡು ಏಳಬೇಕು. ದೇಶದ ಸಮಸ್ಯೆಗಳನ್ನೆಲ್ಲ ಒಂದೊಂದಾಗಿ ಬಗೆಹರಿಸಬೇಕು. ಅದಕ್ಕೆ ಮೊದಲು ನಾವು ದೇಶದ ಇಂದಿನ ಪರಿಸ್ಥಿತಿಯನ್ನು ಅರ್ಥಮಾಡಿಕೊಳ್ಳಬೇಕು. ಸಮಸ್ಯೆಗೆ ಪರಿಹಾರ ಕಂಡುಕೊಂಡು ಬದಲಾವಣೆಗೆ ಸಂಘಟಿತರಾಗಿ ಹೋರಾಡಬೇಕು. ಯುವಕರು ನಮ್ಮ ಆಶಾಕಿರಣ, ನಮ್ಮ ಮುಂದೆ ಇರುವ ಪ್ರಮುಖ ಸಮಸ್ಯೆಗಳಿವು :-
1. ಪ್ರಜಾಪ್ರಭುತ್ವಕ್ಕೆ ಕುತ್ತು ಬಂದಿದೆ.
2. ನಮ್ಮ ಮೂಲಭೂತ ಸಮಸ್ಯೆಗಳಾದ ಬಡತನ, ನಿರುದ್ಯೋಗ, ಭ್ರಷ್ಟಾಚಾರ, ಆಡಳಿತದ ದುರ್ಬಳಕೆ ಇವುಗಳಿಗೆ ಪರಿಹಾರ ಕಂಡುಹಿಡಿದುಕೊಳ್ಳಬೇಕಿದೆ.
3. ಲೋಕಸಭೆ, ಶಾಸನಸಭೆಗಳು ಜನರ ಸಮಸ್ಯೆಗಳನ್ನು ಚರ್ಚಿಸಿ ಬಗೆಹರಿಸುವುದುದನ್ನು ಬಿಟ್ಟು ಜಗಳ, ಗದ್ದಲ, ವಾಕ್‍ಔಟ್, ದೊಂಬಿ, ಗಲಾಟೆ ಇವುಗಳಲ್ಲೇ ಕಾಲಕಳೆದು, ಚರ್ಚೆಯಿಲ್ಲದೆ ಮಸೂದೆಗಳು ಪಾಸಾಗುತ್ತಿವೆ.
4. ಹಣ, ಜಾತಿ, ಧರ್ಮ, ತೋಳ್ಬಲ ಇರುವವರು ನಮ್ಮ ಪ್ರತಿನಿಧಿಗಳಾಗಿ ಆಯ್ಕೆಯಾಗುತ್ತಿದ್ದಾರೆ.
ಇಂತಹ ಅನೇಕ ಸಮಸ್ಯೆಗಳು ನಮ್ಮನ್ನು ಕಾಡುತ್ತಿವೆ. ಮೊದಲು ಈ ಸಮಸ್ಯೆಗಳನ್ನು ಬಗೆ ಹರಿಸಲು ಯುವಕರು ತೊಡಗಬೇಕು.
ನಮ್ಮ ಸಮಾಜವನ್ನು ನಾವು ಸತ್ಯ ಮತ್ತು ಅಹಿಂಸೆಯ ಆಧಾರದ ಮೇಲೆ ಕಟ್ಟಬೇಕು. ಯುವಕರಿಗೆ ಕೋಪತಾಪಗಳಿರಬಾರದು. ಹೋರಾಟ ಮಾಡುವಾಗ ಯುವಕರು ಥರ್ಮಾಮೀಟರ್‍ನಂತೆ ಇರಬೇಕು. ಥರ್ಮಾಮೀಟರ್‍ಗೆ ಜ್ವರ ಬರಬಾರದು. ಅದಕ್ಕೆ ಜ್ವರ ಬಂದರೆ ಅದು ಇತರರ ಜ್ವರವನ್ನು ಕಂಡುಹಿಡಿಯುವುದಾದರೂ ಹೇಗೆ? ಶ್ರೀ ಕೃಷ್ಣ ಭಗವದ್ಗೀತೆಯಲ್ಲಿ ಹೇಳುತ್ತಾನೆ, ಯುದ್ಧಸ್ಯವಿಗತ ಜ್ವರ: ಎಂದು ತಲೆ ಬಿಸಿಮಾಡಿಕೊಳ್ಳದೆ, ಶಾಂತಿಚಿತ್ತದಿಂದ ಯುದ್ಧದಲ್ಲಿ ತೊಡಗಿಕೊ ಎಂಬುದು ಇದರರ್ಥ.
ನಾವು ಹೋರಾಡಬೇಕಾಗಿರುವುದು ಸರ್ವರಿಗೂ ಸುಖ ಸಂತೋಷ ಸಿಗಲೆಂದು. ಅಂದರೆ ಜನರಲ್ಲಿ ಹಸಿವು, ಬಡತನ, ಅಜ್ಞಾನ, ಅಸಮಾನತೆ ಇವು ಇರಬಾರದು. ಅಹಿಂಸಾ ಹೋರಾಟದ ಮೂಲಕ ಈ ಬದಲಾವಣೆಯನ್ನು ಸಮಾಜದಲ್ಲಿ ತರಬೇಕು. ಈಗ ಯಾವ ರಾಜಕೀಯ ಪಕ್ಷಕ್ಕೂ ಸಿದ್ಧಾಂತಗಳೇ ಇಲ್ಲ. ಇಂಥಾ ಸನ್ನಿವೇಶದ ದುರ್ಲಾಭ ಮಾಡಿಕೊಳ್ಳಲು ಭಾರತೀಯ ಜನತಾ ಪಕ್ಷ ‘ಹಿಂದೂರಾಷ್ಟ್ರ ನಿರ್ಮಾಣ’ ಎಂಬ ಡೋಂಗಿ ರಾಷ್ಟ್ರವಾದವೊಂದನ್ನು ಮುಂದೆ ತರುತ್ತಿದೆ. ಅದು ಅತ್ಯಂತ ಅಪಾಯಕಾರಿ. ಸಮಾಜದಲ್ಲಿ ಮೌಲ್ಯಗಳ ಅಧಃಪತನವೇ ಇಂದಿನ ನಮ್ಮ ಈ ಅಧೋಗತಿಗೆ ಕಾರಣ. ಮಾನವೀಯ ಮೌಲ್ಯಗಳಾದ ಸೋದರತ್ವ, ಸಮಾನತೆಗಳ ಆಧಾರದ ಮೇಲೆ ನಮ್ಮ ಸಮಾಜ ರೂಪಿತವಾಗಬೇಕು. ಜಾತಿ, ಧರ್ಮಗಳನ್ನು ರಾಜಕೀಯಕ್ಕೆ ಬೆರೆಸಬಾರದು. ಆದರೆ ಈಗ ಕ್ರಿಮಿನಲ್‍ಗಳು ಎಲ್ಲಾ ರಾಜಕೀಯ ಪಕ್ಷಗಳಿಂದಲೂ ಆರಿಸಿ ಬರುತ್ತಿದ್ದಾರೆ. ಈ ಸಾರಿ ಚುನಾವಣೆಯಲ್ಲಿ ಬಿಜೆಪಿಯಿಂದ 27, ಜನತಾದಳದಿಂದ 23, ಕಾಂಗ್ರೆಸ್ಸಿನಿಂದ 15 ಕ್ರಿಮಿನಲ್ ಹಿನ್ನೆಲೆಯವರು ಆರಿಸಿ ಬಂದಿದ್ದಾರೆ. ಮತದಾರರಿಗೆ ಇಂತಹವರನ್ನು ಆಯ್ಕೆ ಮಾಡಬೇಡಿ, ಇಂಥವರಿಗೆ ಮತ ಹಾಕಬೇಡಿ ಎಂದು ಗಟ್ಟಿದನಿಯಲ್ಲಿ ಹೇಳುವವರು ಬೇಕಾಗಿದ್ದಾರೆ.
ಯುವಕರ ಇತ್ತೀಚಿನ ಸಾಧನೆ ಕುರಿತು ಎರಡು ನಿದರ್ಶನಗಳನ್ನು ಕೊಡುತ್ತೇನೆ. ಅಸ್ಸಾಂನಲ್ಲಿ ವಿದ್ಯಾರ್ಥಿಗಳು ಸಂಘಟನೆ ಮಾಡಿಕೊಂಡರು. ಆಗ ಅಸ್ಸಾಂನಲ್ಲಿ ಅಧಿಕಾರಿಗಳಾಗಿದ್ದವರೆಲ್ಲ ಬಂಗಾಳಿಗಳು. ‘ಅಸ್ಸಾಂ ಅಸ್ಸಾಮಿಯರಿಗೆ’ ಎಂಬ ಚಳವಳಿ ಆರಂಭಿಸಿದರು. ಅಸ್ಸಾಂ ಗಣತಂತ್ರ ಪರಿಷತ್ ಎಂಬ ಸಂಸ್ಥೆ ಸ್ಥಾಪಿಸಿದರು. ಹೋರಾಟದಲ್ಲಿ ಭಾಗವಹಿಸಿದ್ದಕ್ಕಾಗಿ ಲಾಠಿಚಾರ್ಜ್ ನಡೆದವು, ಅರೆಸ್ಟು, ಜೈಲುವಾಸಗಳಾದವು. ಆದರೆ ವಿದ್ಯಾರ್ಥಿ ಹೋರಾಟಗಾರರು ಶಾಂತಿಯುತವಾಗಿ ಚಳವಳಿ ಮುಂದುವರೆಸಿದರು. ಚಳುವಳಿಯ ನಾಯಕರು ಬಂದ್ ಘೋಷಣೆ ಮಾಡಿದರು. ಬಂದ್ ಯಶಸ್ವಿಯಾಯಿತು. ಪೊಲೀಸ್ ಕಫ್ರ್ಯೂ ಹಾಕಿದರು. ಜನರು ಯಾರೂ ಮನೆಬಿಟ್ಟು ಹೊರಬರಲೇ ಇಲ್ಲ. ಸರ್ಕಾರಿ ಕೆಲಸವೆಲ್ಲ ಸ್ಥಗಿತವಾಯಿತು. ಮುಂದೆ ವಿಧಾನಸಭೆಗೆ ಚುನಾವಣೆ ಘೋಷಣೆಯಾಯಿತು. ಚುನಾವಣೆ ನಡೆಸುವ ಅಧಿಕಾರಿಗಳನ್ನು ಇಂದಿರಾಗಾಂಧಿ ದೆಹಲಿಯಿಂದಲೇ ಕಳುಹಿಸಿದರು. ವಿದಾರ್ಥಿ ನಾಯಕರು ಚುನಾವಣೆಯನ್ನು ಬಹಿಷ್ಕರಿಸಲು ಅಸ್ಸಾಮಿಯರಿಗೆ ಕರೆಕೊಟ್ಟರು. ಚುನಾವಣೆ ನಡೆದೇ ನಡೆಯಿತು. ಶೇ.10ರಷ್ಟು ಮತದಾನ ಆಯಿತು. ಆದರೂ ಎಣಿಕೆ ನಡೆಯಿತು. ಕಾಂಗ್ರೆಸ್‍ಗೆ ಬಹುಮತ ಬಂತು ಎಂದು ಚುನಾವಣಾ ಆಯೋಗ ಘೋಷಣೆ ಮಾಡಿತು. ಆದರೆ ಆ ಸರ್ಕಾರ ಬಹಳ ಕಾಲ ನಡೆಯಲಿಲ್ಲ. ಮತ್ತೆ ಚುನಾವಣೆ ಘೋಷಣೆಯಾಯಿತು. ‘ಅಸ್ಸಾಂ ಗಣ ಪರಿಷತ್’ ಪರವಾಗಿ ಅಭ್ಯರ್ಥಿಗಳನ್ನು ನಿಲ್ಲಿಸಲಾಯಿತು. ಅವರು ಬಹುಮತ ಗಳಿಸಿದರು. ಅಧಿಕಾರ ಅವರ ಕೈಗೆ ಹೋಯಿತು. ಯುವಕರು ಸಂಘಟಿತರಾಗಿ ಜನತೆಯ ಹಿತಕ್ಕಾಗಿ ದುಡಿದರೆ, ಅವರೂ ಅಧಿಕಾರಕ್ಕೆ ಬರಬಹುದು ಎಂಬುದಕ್ಕೆ ಇದು ಒಂದು ಉದಾಹರಣೆ.
ಬಿಹಾರದಲ್ಲಿ ಜಯಪ್ರಕಾಶ್ ನಾರಾಯಣ್‍ರವರ ನೇತೃತ್ವದಲ್ಲಿ ಸರ್ಕಾರದ ಭ್ರಷ್ಟಾಚಾರದ ವಿರುದ್ಧವಾಗಿ ದೀರ್ಘಕಾಲದ ಚಳುವಳಿ ನಡೆಯಿತು. ಸರ್ಕಾರ ನಡೆಸುವವರು ಭ್ರಷ್ಟರಾಗಿರುವುದರಿಂದ ರಾಜೀನಾಮೆ ಕೊಟ್ಟು ಹೋಗಬೇಕು ಎಂದು ಘೋಷಿಸುತ್ತಾ ಒಂದು ಲಕ್ಷ ಸಹಿಮಾಡಿದ ಸಹಿಸಂಗ್ರಹದ ಕಡತಗಳನ್ನು ಲಾರಿಯಲ್ಲಿಟ್ಟುಕೊಂಡು ವಿದ್ಯಾರ್ಥಿಗಳು ಮೆರವಣಿಗೆ ಹೊರಟರು. ಜಯಪ್ರಕಾಶರ ತಲೆಗೇ ಪೊಲೀಸರು ಲಾಠಿಯಿಂದ ಹೊಡೆದರು. ವಿದ್ಯಾರ್ಥಿಗಳ ದಸ್ತಗಿರಿ ಆಯಿತು. ಮುಂದಿನ ಚುನಾವಣೆಯಲ್ಲಿ ಮುಖ್ಯಮಂತ್ರಿಗಳು ಸೋತರು.
ಯುವಕರು ಮನಸ್ಸು ಮಾಡಿದರೆ ಭ್ರಷ್ಟಾಚಾರ ತಪ್ಪಿಸಬಹುದು. ಆಡಳಿತ ನಡೆಸುವ ಭ್ರಷ್ಟ ಸರ್ಕಾರವನ್ನು ಕಿತ್ತೆಸೆಯಬಹುದು ಎಂಬುದಕ್ಕೆ ಯುವಕರ ಈ ಎರಡು ಹೋರಾಟಗಳು ಉದಾಹರಣೆ.
ಸಮಾಜ ಪೂರ್ತಿ ಕೆಟ್ಟುಹೋಗಿದೆ. ಸರ್ಕಾರ ನಡೆಸುವವರು ಭ್ರಷ್ಟರಾಗಿದ್ದಾರೆ, ಸರ್ಕಾರಿ ಅಧಿಕಾರಿಗಳು ಲಂಚಕೋರರು; ಇವನ್ನೆಲ್ಲ ನೋಡಿಕೊಂಡು ಮೂಕಪ್ರೇಕ್ಷರಂತೆ ಕುಳಿತಿದ್ದಾರೆ ಯುವಜನತೆ. ಈ ಮನೋಭಾವ ತ್ಯಜಿಸಿ ಕ್ರಾಂತಿಯನ್ನು ತರಬೇಕೆಂದು ಯುವಕರು ಮನಸ್ಸು ಮಾಡಬೇಕು. ಕ್ರಾಂತಿ ಎಂದರೆ ರಕ್ತಕ್ರಾಂತಿ ಎಂದು ಯುವಕರು ಭಾವಿಸುತ್ತಾರೆ. ಕ್ರಾಂತಿ ಎಂದರೆ ಸಮಾಜದ ಸಂಪೂರ್ಣ ಬದಲಾವಣೆ. ಈ ಕ್ರಾಂತಿಯನ್ನು ಯುವಕರು ಜನರ ತಲೆಯಲ್ಲಿ ಕ್ರಾಂತಿಯ ಬೀಜಗಳನ್ನು ಬಿತ್ತುವ ಮೂಲಕ ಸಾಧಿಸಬೇಕು. ಕ್ರಾಂತಿಯ ಬೀಜ ಎಲ್ಲರ ತಲೆಯಲ್ಲಿ ಸ್ಫೋಟವಾಗಬೇಕು. ಇದನ್ನು ವಿಚಾರಕ್ರಾಂತಿ ಎಂದು ಹೇಳುತ್ತಾರೆ. ಅಂತಹ ವಿಚಾರಕ್ರಾಂತಿ ಯುವಕರ ಮನಸ್ಸಿನಲ್ಲಿ ಮೂಡಬೇಕು. ಯುವಕರು ಕ್ರಾಂತಿವಾಹಕರಾಗಿ ಜನಜಾಗೃತಿಯ ಕೆಲಸದಲ್ಲಿ ತೊಡಗಿಸಿಕೊಂಡಲ್ಲಿ ಜನಜಾಗೃತಿಯ ಮೂಲಕ ಸಾಮಾಜಿಕ ಕ್ರಾಂತಿ ಸಾಧಿಸಬಹುದು; ಹೊಸ ಮೌಲ್ಯಗಳಿರುವ ನವಸಮಾಜವನ್ನು ಸೃಷ್ಟಿ ಮಾಡಬಹುದು.
                             – ಹೆಚ್.ಎಸ್.ದೊರೆಸ್ವಾಮಿ
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...