Homeಅಂಕಣಗಳುಸಮಾಜ ಬದಲಾವಣೆಯಲ್ಲಿ ಯುವಜನರ ಪಾತ್ರ

ಸಮಾಜ ಬದಲಾವಣೆಯಲ್ಲಿ ಯುವಜನರ ಪಾತ್ರ

- Advertisement -
ನಮ್ಮ  ಸಮಾಜ ನಿಂತ ನೀರಿನಂತೆ ಗಬ್ಬು ಹೊಡೆಯುತ್ತಿದೆ. ವಿಷಪೂರಿತವಾಗಿದೆ. ಅನೇಕ ಸಾಮಾಜಿಕ ಕಾಯಿಲೆಗಳ ಆವಾಸಸ್ಥಾನವಾಗಿದೆ. ಸ್ವಾತಂತ್ರ್ಯ ಬಂದು 70ವರ್ಷಗಳೇ ಆದರೂ ಬಡವರು ಬಡವರಾಗಿಯೇ ಉಳಿದಿದ್ದಾರೆ. ಕೆಲವೇ ಶ್ರೀಮಂತರು ಸಹಸ್ರಾರು ಕೋಟಿಗಳ ಒಡೆಯರಾಗುತ್ತಿದ್ದಾರೆ. ಪಕ್ಷ ರಾಜಕೀಯ ಹೊಲಸಾಗಿದೆ. ವಿದ್ಯೆ ಮಾರಾಟದ ವಸ್ತುವಾಗಿದೆ. ಶಾಸಕರು, ಮಂತ್ರಿಗಳಿಂದ ಮೊದಲುಗೊಂಡು ಪಂಚಾಯ್ತಿ ಸದಸ್ಯರವರೆಗೆ ದುರ್ಲಾಭಕ್ಕೋಸ್ಕರ ವಿದ್ಯಾಸಂಸ್ಥೆಗಳನ್ನು ನಡೆಸುತ್ತಿದ್ದಾರೆ. ಮಠಾಧಿಪತಿಗಳೂ ಈ ಸ್ಪರ್ಧೆಯಲ್ಲಿದ್ದಾರೆ.
ಇದನ್ನೆಲ್ಲ ಮೂಕಪ್ರೇಕ್ಷಕರಂತೆ ನಮ್ಮ ಯುವಕರು ನೋಡಿಕೊಂಡು ಕುಳಿತಿದ್ದಾರೆ. ನಮ್ಮದು ಪ್ರಜಾರಾಜ್ಯ, ಪ್ರಜೆಗಳೇ ನಮ್ಮ ದೇಶದ ಪ್ರಭುಗಳು ಎಂದು ನಮ್ಮ ರಾಜ್ಯಾಂಗ ಹೇಳುತ್ತದೆ. ಆದರೆ ನಾವು ಮಾತ್ರ ಆಡಳಿತಕ್ಕೂ ನಮಗೂ ಸಂಬಂಧವಿಲ್ಲವೇನೋ ಎಂಬಂತೆ ಹೊಣೆಗೇಡಿಗಳಾಗಿ ನಡೆದುಕೊಳ್ಳುತ್ತಿದ್ದೇವೆ. ಇಂಥಾ ಮನೋಭಾವ ಯುವಕರಿಗೆ ತರವಲ್ಲ. ಗಾಢನಿದ್ರೆಯಲ್ಲಿರುವ ಯುವಕರು ಮೈಕೊಡವಿಕೊಂಡು ಏಳಬೇಕು. ದೇಶದ ಸಮಸ್ಯೆಗಳನ್ನೆಲ್ಲ ಒಂದೊಂದಾಗಿ ಬಗೆಹರಿಸಬೇಕು. ಅದಕ್ಕೆ ಮೊದಲು ನಾವು ದೇಶದ ಇಂದಿನ ಪರಿಸ್ಥಿತಿಯನ್ನು ಅರ್ಥಮಾಡಿಕೊಳ್ಳಬೇಕು. ಸಮಸ್ಯೆಗೆ ಪರಿಹಾರ ಕಂಡುಕೊಂಡು ಬದಲಾವಣೆಗೆ ಸಂಘಟಿತರಾಗಿ ಹೋರಾಡಬೇಕು. ಯುವಕರು ನಮ್ಮ ಆಶಾಕಿರಣ, ನಮ್ಮ ಮುಂದೆ ಇರುವ ಪ್ರಮುಖ ಸಮಸ್ಯೆಗಳಿವು :-
1. ಪ್ರಜಾಪ್ರಭುತ್ವಕ್ಕೆ ಕುತ್ತು ಬಂದಿದೆ.
2. ನಮ್ಮ ಮೂಲಭೂತ ಸಮಸ್ಯೆಗಳಾದ ಬಡತನ, ನಿರುದ್ಯೋಗ, ಭ್ರಷ್ಟಾಚಾರ, ಆಡಳಿತದ ದುರ್ಬಳಕೆ ಇವುಗಳಿಗೆ ಪರಿಹಾರ ಕಂಡುಹಿಡಿದುಕೊಳ್ಳಬೇಕಿದೆ.
3. ಲೋಕಸಭೆ, ಶಾಸನಸಭೆಗಳು ಜನರ ಸಮಸ್ಯೆಗಳನ್ನು ಚರ್ಚಿಸಿ ಬಗೆಹರಿಸುವುದುದನ್ನು ಬಿಟ್ಟು ಜಗಳ, ಗದ್ದಲ, ವಾಕ್‍ಔಟ್, ದೊಂಬಿ, ಗಲಾಟೆ ಇವುಗಳಲ್ಲೇ ಕಾಲಕಳೆದು, ಚರ್ಚೆಯಿಲ್ಲದೆ ಮಸೂದೆಗಳು ಪಾಸಾಗುತ್ತಿವೆ.
4. ಹಣ, ಜಾತಿ, ಧರ್ಮ, ತೋಳ್ಬಲ ಇರುವವರು ನಮ್ಮ ಪ್ರತಿನಿಧಿಗಳಾಗಿ ಆಯ್ಕೆಯಾಗುತ್ತಿದ್ದಾರೆ.
ಇಂತಹ ಅನೇಕ ಸಮಸ್ಯೆಗಳು ನಮ್ಮನ್ನು ಕಾಡುತ್ತಿವೆ. ಮೊದಲು ಈ ಸಮಸ್ಯೆಗಳನ್ನು ಬಗೆ ಹರಿಸಲು ಯುವಕರು ತೊಡಗಬೇಕು.
ನಮ್ಮ ಸಮಾಜವನ್ನು ನಾವು ಸತ್ಯ ಮತ್ತು ಅಹಿಂಸೆಯ ಆಧಾರದ ಮೇಲೆ ಕಟ್ಟಬೇಕು. ಯುವಕರಿಗೆ ಕೋಪತಾಪಗಳಿರಬಾರದು. ಹೋರಾಟ ಮಾಡುವಾಗ ಯುವಕರು ಥರ್ಮಾಮೀಟರ್‍ನಂತೆ ಇರಬೇಕು. ಥರ್ಮಾಮೀಟರ್‍ಗೆ ಜ್ವರ ಬರಬಾರದು. ಅದಕ್ಕೆ ಜ್ವರ ಬಂದರೆ ಅದು ಇತರರ ಜ್ವರವನ್ನು ಕಂಡುಹಿಡಿಯುವುದಾದರೂ ಹೇಗೆ? ಶ್ರೀ ಕೃಷ್ಣ ಭಗವದ್ಗೀತೆಯಲ್ಲಿ ಹೇಳುತ್ತಾನೆ, ಯುದ್ಧಸ್ಯವಿಗತ ಜ್ವರ: ಎಂದು ತಲೆ ಬಿಸಿಮಾಡಿಕೊಳ್ಳದೆ, ಶಾಂತಿಚಿತ್ತದಿಂದ ಯುದ್ಧದಲ್ಲಿ ತೊಡಗಿಕೊ ಎಂಬುದು ಇದರರ್ಥ.
ನಾವು ಹೋರಾಡಬೇಕಾಗಿರುವುದು ಸರ್ವರಿಗೂ ಸುಖ ಸಂತೋಷ ಸಿಗಲೆಂದು. ಅಂದರೆ ಜನರಲ್ಲಿ ಹಸಿವು, ಬಡತನ, ಅಜ್ಞಾನ, ಅಸಮಾನತೆ ಇವು ಇರಬಾರದು. ಅಹಿಂಸಾ ಹೋರಾಟದ ಮೂಲಕ ಈ ಬದಲಾವಣೆಯನ್ನು ಸಮಾಜದಲ್ಲಿ ತರಬೇಕು. ಈಗ ಯಾವ ರಾಜಕೀಯ ಪಕ್ಷಕ್ಕೂ ಸಿದ್ಧಾಂತಗಳೇ ಇಲ್ಲ. ಇಂಥಾ ಸನ್ನಿವೇಶದ ದುರ್ಲಾಭ ಮಾಡಿಕೊಳ್ಳಲು ಭಾರತೀಯ ಜನತಾ ಪಕ್ಷ ‘ಹಿಂದೂರಾಷ್ಟ್ರ ನಿರ್ಮಾಣ’ ಎಂಬ ಡೋಂಗಿ ರಾಷ್ಟ್ರವಾದವೊಂದನ್ನು ಮುಂದೆ ತರುತ್ತಿದೆ. ಅದು ಅತ್ಯಂತ ಅಪಾಯಕಾರಿ. ಸಮಾಜದಲ್ಲಿ ಮೌಲ್ಯಗಳ ಅಧಃಪತನವೇ ಇಂದಿನ ನಮ್ಮ ಈ ಅಧೋಗತಿಗೆ ಕಾರಣ. ಮಾನವೀಯ ಮೌಲ್ಯಗಳಾದ ಸೋದರತ್ವ, ಸಮಾನತೆಗಳ ಆಧಾರದ ಮೇಲೆ ನಮ್ಮ ಸಮಾಜ ರೂಪಿತವಾಗಬೇಕು. ಜಾತಿ, ಧರ್ಮಗಳನ್ನು ರಾಜಕೀಯಕ್ಕೆ ಬೆರೆಸಬಾರದು. ಆದರೆ ಈಗ ಕ್ರಿಮಿನಲ್‍ಗಳು ಎಲ್ಲಾ ರಾಜಕೀಯ ಪಕ್ಷಗಳಿಂದಲೂ ಆರಿಸಿ ಬರುತ್ತಿದ್ದಾರೆ. ಈ ಸಾರಿ ಚುನಾವಣೆಯಲ್ಲಿ ಬಿಜೆಪಿಯಿಂದ 27, ಜನತಾದಳದಿಂದ 23, ಕಾಂಗ್ರೆಸ್ಸಿನಿಂದ 15 ಕ್ರಿಮಿನಲ್ ಹಿನ್ನೆಲೆಯವರು ಆರಿಸಿ ಬಂದಿದ್ದಾರೆ. ಮತದಾರರಿಗೆ ಇಂತಹವರನ್ನು ಆಯ್ಕೆ ಮಾಡಬೇಡಿ, ಇಂಥವರಿಗೆ ಮತ ಹಾಕಬೇಡಿ ಎಂದು ಗಟ್ಟಿದನಿಯಲ್ಲಿ ಹೇಳುವವರು ಬೇಕಾಗಿದ್ದಾರೆ.
ಯುವಕರ ಇತ್ತೀಚಿನ ಸಾಧನೆ ಕುರಿತು ಎರಡು ನಿದರ್ಶನಗಳನ್ನು ಕೊಡುತ್ತೇನೆ. ಅಸ್ಸಾಂನಲ್ಲಿ ವಿದ್ಯಾರ್ಥಿಗಳು ಸಂಘಟನೆ ಮಾಡಿಕೊಂಡರು. ಆಗ ಅಸ್ಸಾಂನಲ್ಲಿ ಅಧಿಕಾರಿಗಳಾಗಿದ್ದವರೆಲ್ಲ ಬಂಗಾಳಿಗಳು. ‘ಅಸ್ಸಾಂ ಅಸ್ಸಾಮಿಯರಿಗೆ’ ಎಂಬ ಚಳವಳಿ ಆರಂಭಿಸಿದರು. ಅಸ್ಸಾಂ ಗಣತಂತ್ರ ಪರಿಷತ್ ಎಂಬ ಸಂಸ್ಥೆ ಸ್ಥಾಪಿಸಿದರು. ಹೋರಾಟದಲ್ಲಿ ಭಾಗವಹಿಸಿದ್ದಕ್ಕಾಗಿ ಲಾಠಿಚಾರ್ಜ್ ನಡೆದವು, ಅರೆಸ್ಟು, ಜೈಲುವಾಸಗಳಾದವು. ಆದರೆ ವಿದ್ಯಾರ್ಥಿ ಹೋರಾಟಗಾರರು ಶಾಂತಿಯುತವಾಗಿ ಚಳವಳಿ ಮುಂದುವರೆಸಿದರು. ಚಳುವಳಿಯ ನಾಯಕರು ಬಂದ್ ಘೋಷಣೆ ಮಾಡಿದರು. ಬಂದ್ ಯಶಸ್ವಿಯಾಯಿತು. ಪೊಲೀಸ್ ಕಫ್ರ್ಯೂ ಹಾಕಿದರು. ಜನರು ಯಾರೂ ಮನೆಬಿಟ್ಟು ಹೊರಬರಲೇ ಇಲ್ಲ. ಸರ್ಕಾರಿ ಕೆಲಸವೆಲ್ಲ ಸ್ಥಗಿತವಾಯಿತು. ಮುಂದೆ ವಿಧಾನಸಭೆಗೆ ಚುನಾವಣೆ ಘೋಷಣೆಯಾಯಿತು. ಚುನಾವಣೆ ನಡೆಸುವ ಅಧಿಕಾರಿಗಳನ್ನು ಇಂದಿರಾಗಾಂಧಿ ದೆಹಲಿಯಿಂದಲೇ ಕಳುಹಿಸಿದರು. ವಿದಾರ್ಥಿ ನಾಯಕರು ಚುನಾವಣೆಯನ್ನು ಬಹಿಷ್ಕರಿಸಲು ಅಸ್ಸಾಮಿಯರಿಗೆ ಕರೆಕೊಟ್ಟರು. ಚುನಾವಣೆ ನಡೆದೇ ನಡೆಯಿತು. ಶೇ.10ರಷ್ಟು ಮತದಾನ ಆಯಿತು. ಆದರೂ ಎಣಿಕೆ ನಡೆಯಿತು. ಕಾಂಗ್ರೆಸ್‍ಗೆ ಬಹುಮತ ಬಂತು ಎಂದು ಚುನಾವಣಾ ಆಯೋಗ ಘೋಷಣೆ ಮಾಡಿತು. ಆದರೆ ಆ ಸರ್ಕಾರ ಬಹಳ ಕಾಲ ನಡೆಯಲಿಲ್ಲ. ಮತ್ತೆ ಚುನಾವಣೆ ಘೋಷಣೆಯಾಯಿತು. ‘ಅಸ್ಸಾಂ ಗಣ ಪರಿಷತ್’ ಪರವಾಗಿ ಅಭ್ಯರ್ಥಿಗಳನ್ನು ನಿಲ್ಲಿಸಲಾಯಿತು. ಅವರು ಬಹುಮತ ಗಳಿಸಿದರು. ಅಧಿಕಾರ ಅವರ ಕೈಗೆ ಹೋಯಿತು. ಯುವಕರು ಸಂಘಟಿತರಾಗಿ ಜನತೆಯ ಹಿತಕ್ಕಾಗಿ ದುಡಿದರೆ, ಅವರೂ ಅಧಿಕಾರಕ್ಕೆ ಬರಬಹುದು ಎಂಬುದಕ್ಕೆ ಇದು ಒಂದು ಉದಾಹರಣೆ.
ಬಿಹಾರದಲ್ಲಿ ಜಯಪ್ರಕಾಶ್ ನಾರಾಯಣ್‍ರವರ ನೇತೃತ್ವದಲ್ಲಿ ಸರ್ಕಾರದ ಭ್ರಷ್ಟಾಚಾರದ ವಿರುದ್ಧವಾಗಿ ದೀರ್ಘಕಾಲದ ಚಳುವಳಿ ನಡೆಯಿತು. ಸರ್ಕಾರ ನಡೆಸುವವರು ಭ್ರಷ್ಟರಾಗಿರುವುದರಿಂದ ರಾಜೀನಾಮೆ ಕೊಟ್ಟು ಹೋಗಬೇಕು ಎಂದು ಘೋಷಿಸುತ್ತಾ ಒಂದು ಲಕ್ಷ ಸಹಿಮಾಡಿದ ಸಹಿಸಂಗ್ರಹದ ಕಡತಗಳನ್ನು ಲಾರಿಯಲ್ಲಿಟ್ಟುಕೊಂಡು ವಿದ್ಯಾರ್ಥಿಗಳು ಮೆರವಣಿಗೆ ಹೊರಟರು. ಜಯಪ್ರಕಾಶರ ತಲೆಗೇ ಪೊಲೀಸರು ಲಾಠಿಯಿಂದ ಹೊಡೆದರು. ವಿದ್ಯಾರ್ಥಿಗಳ ದಸ್ತಗಿರಿ ಆಯಿತು. ಮುಂದಿನ ಚುನಾವಣೆಯಲ್ಲಿ ಮುಖ್ಯಮಂತ್ರಿಗಳು ಸೋತರು.
ಯುವಕರು ಮನಸ್ಸು ಮಾಡಿದರೆ ಭ್ರಷ್ಟಾಚಾರ ತಪ್ಪಿಸಬಹುದು. ಆಡಳಿತ ನಡೆಸುವ ಭ್ರಷ್ಟ ಸರ್ಕಾರವನ್ನು ಕಿತ್ತೆಸೆಯಬಹುದು ಎಂಬುದಕ್ಕೆ ಯುವಕರ ಈ ಎರಡು ಹೋರಾಟಗಳು ಉದಾಹರಣೆ.
ಸಮಾಜ ಪೂರ್ತಿ ಕೆಟ್ಟುಹೋಗಿದೆ. ಸರ್ಕಾರ ನಡೆಸುವವರು ಭ್ರಷ್ಟರಾಗಿದ್ದಾರೆ, ಸರ್ಕಾರಿ ಅಧಿಕಾರಿಗಳು ಲಂಚಕೋರರು; ಇವನ್ನೆಲ್ಲ ನೋಡಿಕೊಂಡು ಮೂಕಪ್ರೇಕ್ಷರಂತೆ ಕುಳಿತಿದ್ದಾರೆ ಯುವಜನತೆ. ಈ ಮನೋಭಾವ ತ್ಯಜಿಸಿ ಕ್ರಾಂತಿಯನ್ನು ತರಬೇಕೆಂದು ಯುವಕರು ಮನಸ್ಸು ಮಾಡಬೇಕು. ಕ್ರಾಂತಿ ಎಂದರೆ ರಕ್ತಕ್ರಾಂತಿ ಎಂದು ಯುವಕರು ಭಾವಿಸುತ್ತಾರೆ. ಕ್ರಾಂತಿ ಎಂದರೆ ಸಮಾಜದ ಸಂಪೂರ್ಣ ಬದಲಾವಣೆ. ಈ ಕ್ರಾಂತಿಯನ್ನು ಯುವಕರು ಜನರ ತಲೆಯಲ್ಲಿ ಕ್ರಾಂತಿಯ ಬೀಜಗಳನ್ನು ಬಿತ್ತುವ ಮೂಲಕ ಸಾಧಿಸಬೇಕು. ಕ್ರಾಂತಿಯ ಬೀಜ ಎಲ್ಲರ ತಲೆಯಲ್ಲಿ ಸ್ಫೋಟವಾಗಬೇಕು. ಇದನ್ನು ವಿಚಾರಕ್ರಾಂತಿ ಎಂದು ಹೇಳುತ್ತಾರೆ. ಅಂತಹ ವಿಚಾರಕ್ರಾಂತಿ ಯುವಕರ ಮನಸ್ಸಿನಲ್ಲಿ ಮೂಡಬೇಕು. ಯುವಕರು ಕ್ರಾಂತಿವಾಹಕರಾಗಿ ಜನಜಾಗೃತಿಯ ಕೆಲಸದಲ್ಲಿ ತೊಡಗಿಸಿಕೊಂಡಲ್ಲಿ ಜನಜಾಗೃತಿಯ ಮೂಲಕ ಸಾಮಾಜಿಕ ಕ್ರಾಂತಿ ಸಾಧಿಸಬಹುದು; ಹೊಸ ಮೌಲ್ಯಗಳಿರುವ ನವಸಮಾಜವನ್ನು ಸೃಷ್ಟಿ ಮಾಡಬಹುದು.
                             – ಹೆಚ್.ಎಸ್.ದೊರೆಸ್ವಾಮಿ
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ: ಮಮತಾ ಸರ್ಕಾರ ಜಾರಿ ಮಾಡಿದ್ದ OBC ಮೀಸಲಾತಿಯನ್ನು ಕಿತ್ತೆಸೆದ ಸುವೇಂದು ನೇತೃತ್ವದ ಬಿಜೆಪಿ ಸರ್ಕಾರ

ಪಶ್ಚಿಮ ಬಂಗಾಳದ ಒಬಿಸಿ (ಇತರ ಹಿಂದುಳಿದ ವರ್ಗಗಳು) ಪಟ್ಟಿಯಲ್ಲಿದ್ದ ಮುಸ್ಲಿಂ ಸಮುದಾಯಗಳನ್ನು ಕೈಬಿಡುವ ಮೂಲಕ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರವು ಭಾರಿ ರಾಜಕೀಯ ಸಂಚಲನ ಸೃಷ್ಟಿಸಿದೆ. ಈ ಹಿಂದೆ...

ಸಾಮಾಜಿಕ ಹೋರಾಟಗಾರ ‘ಫರಿದುಲ್ ಇಸ್ಲಾಂ’ರನ್ನು ಸುಳ್ಳು ಪ್ರಕರಣದಲ್ಲಿ ಬಂಧಿಸಿದ ಕೋಲ್ಕತ್ತಾ ಪೊಲೀಸರು

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು ಇನ್ನು ಹತ್ತು ದಿನಗಳು ಕಳೆಯುವಷ್ಟರಲ್ಲೇ, ಸರ್ಕಾರದ ಆಡಳಿತವನ್ನು ಪ್ರಶ್ನಿಸುವವರ ಹಾಗೂ ಹೋರಾಟಗಾರರ ಧ್ವನಿಯನ್ನು ಹತ್ತಿಕ್ಕುವ ಕೆಲಸ ಆರಂಭವಾಗಿದೆ ಎಂಬ...

ಉಪ್ಪಿನಂಗಡಿ: ಸೂರ್ಯ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯ, ಚಿಕಿತ್ಸೆಗೆಂದು ತೆರಳಿ ಶವವಾಗಿ ಮರಳಿದ ಬೀದಿಬದಿ ವ್ಯಾಪಾರಿ!

ಖಾಸಗಿ ಆಸ್ಪತ್ರೆಗಳ ಹಣದ ದಾಹ ಮತ್ತು ವೈದ್ಯಕೀಯ ಸಿಬ್ಬಂದಿಯ ಘೋರ ನಿರ್ಲಕ್ಷ್ಯಕ್ಕೆ ಮತ್ತೊಂದು ಬಡ ಜೀವ ಬಲಿಯಾಗಿದೆ. ಉಪ್ಪಿನಂಗಡಿಯ ಸೂರ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದ ಮೊಹಮ್ಮದ್ ಶರೀಫ್ (35) ಎಂಬ ಬೀದಿ ಬದಿ...

ಬಿಸಿಲಿನ ಬೆಂಕಿಗೆ ‘ಎಲ್ ನಿನೊ’ ತುಪ್ಪ: 2026ರ ಮುಂಗಾರು ಕಥೆ ಏನು?

ದೇಶಾದ್ಯಂತ ತಾಪಮಾನ ದಿನೇ ದಿನೇ ಏರುತ್ತಿದ್ದು, ಭೀಕರ ಶಾಖದ ಅಲೆಗಳಿಗೆ (Heatwaves) ಜನ ತತ್ತರಿಸಿ ಹೋಗಿದ್ದಾರೆ. ಈ ಹೊತ್ತಿನಲ್ಲಿ ಎಲ್ಲರ ಕಣ್ಣುಗಳು ಸಾವಿರಾರು ಕಿಲೋಮೀಟರ್ ದೂರದ ಪೆಸಿಫಿಕ್ ಮಹಾಸಾಗರದಲ್ಲಿ ಸಂಭವಿಸುತ್ತಿರುವ ಹವಾಮಾನ ಬದಲಾವಣೆಯ...

ಸುಮಾರು 1 ಲಕ್ಷ ಶಾಲೆಗಳಲ್ಲಿ ಬಾಲಕಿಯರಿಗೆ ಶೌಚಾಲಯವಿಲ್ಲ, 61,000 ಶಾಲೆಗಳಲ್ಲಿ ಕ್ರಿಯಾತ್ಮಕ ಶೌಚಾಲಯಗಳಿಲ್ಲ: ನೀತಿ ಆಯೋಗ

ಶಿಕ್ಷಣವು ಒಂದು ದೇಶದ ಅಭಿವೃದ್ಧಿಯ ಬೆನ್ನೆಲುಬು ಅಂತಲೇ ಹೇಳಲಾಗುತ್ತದೆ. ಆದರೆ, ಭಾರತದ ಶಾಲಾ ಶಿಕ್ಷಣದ ಮೂಲಭೂತ ಸೌಕರ್ಯಗಳು ಮತ್ತು ವ್ಯವಸ್ಥೆಯ ಕುರಿತಾಗಿ ನೀತಿ ಆಯೋಗ ಹಾಗೂ ಯುಡಿಐಎಸ್ಇ+ (UDISE+ 2024–25) ಇತ್ತೀಚೆಗೆ ಬಿಡುಗಡೆ...

CJI ಹೇಳಿಕೆಯಿಂದ ರಾತ್ರೋರಾತ್ರಿ ಹುಟ್ಟಿಕೊಂಡ ‘ಕಾಕ್‌ರೋಚ್ ಜನತಾ ಪಾರ್ಟಿ’

ಒಂದು ರಾಜಕೀಯ ಪಕ್ಷವನ್ನು ಕಟ್ಟಿ, ಅದಕ್ಕೊಂದು ರೂಪ ಕೊಡಲು ಎಷ್ಟು ಸಮಯ ಬೇಕಾಗಬಹುದು? ಕೇವಲ 48 ಗಂಟೆಗಳು! ಹೌದು, ಕಳೆದ ಭಾನುವಾರ ನೀವು ಸಾಮಾಜಿಕ ಜಾಲತಾಣಗಳಲ್ಲಿ ಸ್ವಲ್ಪ ಸಮಯ ಕಳೆದಿದ್ದರೆ ನಿಮಗಿದು ಖಂಡಿತ...

ಬೆಂಗಳೂರು: ಗಂಗಸಂದ್ರ ದಲಿತರ ಭೂಮಿ ಕಿತ್ತುಕೊಳ್ಳಲು ಮುಗಿಬಿದ್ದ ಅರಣ್ಯ ಇಲಾಖೆ: ಮಿತಿಮೀರಿದ ಅಧಿಕಾರಿಗಳ ದರ್ಪ

ಕೆಂಗೇರಿ ಬಳಿಯ ಗಂಗಸಂದ್ರ ಗ್ರಾಮದಲ್ಲಿನ ದಲಿತರ ಭೂಮಿಯನ್ನು ಅರಣ್ಯ ಭೂಮಿಯೆಂದು ಅರಣ್ಯ ಇಲಾಖೆಯ ವಶಕ್ಕೆ ಪಡೆಯಲು ಅಧಿಕಾರಿಗಳು ಮುಂದಾಗಿದ್ದಾರೆ. 2026 ಮೇ 19ರ, ಮಂಗಳವಾರ  ಬೆಳ್ಳಂಬೆಳಗ್ಗೆಯೇ ಅಧಿಕಾರಿಗಳ ದರ್ಪ ತಾರಕಕ್ಕೇರಿದೆ. ದಲಿತ ನಿವಾಸಿಗಳ...

ಜನಾಂಗೀಯ ದ್ವೇಷ: ಅಮೆರಿಕಾದ ಸ್ಯಾನ್ ಡಿಯಾಗೋ ಮಸೀದಿ ಸಂಕೀರ್ಣದಲ್ಲಿ ಗುಂಡಿನ ದಾಳಿ: ಮೂವರು ಸಾವು

ಸ್ಯಾನ್ ಡಿಯಾಗೋ: ಅಮೆರಿಕದ ಸ್ಯಾನ್ ಡಿಯಾಗೋ ನಗರದ ಇಸ್ಲಾಮಿಕ್ ಸೆಂಟರ್ ಆಫ್ ಸ್ಯಾನ್ ಡಿಯಾಗೋ (ICSD) ಮಸೀದಿ ಸಂಕೀರ್ಣದಲ್ಲಿ ಸೋಮವಾರ ನಡೆದ ಗುಂಡಿನ ದಾಳಿಯಲ್ಲಿ ಮೂವರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಈ ಘಟನೆಯನ್ನು ಸಂಭಾವ್ಯ...

ರಸ್ತೆಗಳಲ್ಲಿ ಮುಕ್ತವಾಗಿ ಓಡಾಡುವುದು ಜನರ ಹಕ್ಕು: ಬೀದಿ ನಾಯಿಗಳ ದಯಾಮರಣಕ್ಕೂ ಸುಪ್ರೀಂ ಅಸ್ತು

ಸುಪ್ರೀಂ ಕೋರ್ಟ್ ಇಂದು (ಮೇ 19, ಮಂಗಳವಾರ) ಬೀದಿ ನಾಯಿಗಳ ನಿಯಂತ್ರಣ ಮತ್ತು ನಿರ್ವಹಣೆಗೆ ಸಂಬಂಧಿಸಿದ ಎಲ್ಲಾ ಅರ್ಜಿಗಳನ್ನು ವಜಾಗೊಳಿಸಿ ಮಹತ್ವದ ತೀರ್ಪು ನೀಡಿದೆ. ಸಾರ್ವಜನಿಕ ಸ್ಥಳಗಳಲ್ಲಿ ಬೀದಿ ನಾಯಿಗಳ ದಾಳಿಯಿಂದಾಗಿ ಸಾರ್ವಜನಿಕರು...

ಹರಿಯಾಣದ ಕಾರ್ಮಿಕ ನಾಯಕ ಅಜಿತ್ ಸಿಂಗ್ ಬಂಧನ ‘ಅಕ್ರಮ’ ಎಂದ ಕೋರ್ಟ್; ಜಾಮೀನು ಮಂಜೂರು

ಬೆಲ್ಸೋನಿಕಾ ಆಟೋ ಕಾಂಪೊನೆಂಟ್ ಇಂಡಿಯಾ ಎಂಪ್ಲಾಯೀಸ್ ಯೂನಿಯನ್‌ನ ಪ್ರಧಾನ ಕಾರ್ಯದರ್ಶಿ ಅಜಿತ್ ಸಿಂಗ್ ಅವರಿಗೆ ಗುರುಗ್ರಾಮ್ ಜಿಲ್ಲಾ ನ್ಯಾಯಾಲಯವು (ಮೇ 18) ಜಾಮೀನು ನೀಡಿದೆ. ಅವರು ಮಾನೇಸರ್ ಕೈಗಾರಿಕಾ ಪ್ರದೇಶದಲ್ಲಿ ಕಾರ್ಮಿಕರ ಪ್ರತಿಭಟನೆಗಳ...