Homeಅಂಕಣಗಳುಸರ್ವಾಧಿಕಾರದ ಕೆಲವು ಗುಣಲಕ್ಷಣಗಳು!

ಸರ್ವಾಧಿಕಾರದ ಕೆಲವು ಗುಣಲಕ್ಷಣಗಳು!

- Advertisement -
- Advertisement -

ನಿಖಿಲ್ ಕೊಲ್ಫೆ |

ಪೊಳ್ಳು ರಾಷ್ಟ್ರೀಯತೆ ಮತ್ತು ಜನಪ್ರೀತಿಯಿಲ್ಲದ ಭೂಪಟ ಪ್ರೇಮ ಸರ್ವಾಧಿಕಾರದ ಒಂದು ಮುಖ್ಯ ಲಕ್ಷಣ. ಆಸ್ಟ್ರಿಯನ್ ಸಂಜಾತ ಅಡಾಲ್ಫ್ ಹಿಟ್ಲರ್ ಜರ್ಮನ್ ರಾಷ್ಟ್ರೀಯತೆ ಹೆಸರಿನಲ್ಲಿ ಜರ್ಮನಿಯಲ್ಲಿ ಅಧಿಕಾರ ಹಿಡಿದ. ಅವನ ಜರ್ಮನ್ ರಾಷ್ಟ್ರೀಯತೆಯಲ್ಲಿ ಯಹೂದಿಗಳಿಗೆ, ಜಿಪ್ಸಿಗಳಿಗೆ, ಪೋಲಿಷ್ ಸಂಜಾತರಿಗೆ, ಕರಿಯರು, ಮಿಶ್ರ ರಕ್ತದವರಿಗೆ ಸ್ಥಾನವಿರಲಿಲ್ಲ! ಶುದ್ಧರಕ್ತದವರೆಂದು ಅವನು ಭಾವಿಸಿದ್ದ ಅರ್ಯನ್ ಜನಾಂಗದವರಿಗೆ ಮಾತ್ರ ಸ್ಥಾನವಿತ್ತು.
ಅತ ಸುಳ್ಳು ದೇಶಪ್ರೇಮದ ಬೊಂಬಡ ಬಜಾಯಿಸಿದಾಗ ಎಲ್ಲರೂ ಅದಕ್ಕೆ ತಲೆದೂಗಿಸಿದರು. ಎಲ್ಲರೂ ದೇಶಕ್ಕಾಗಿ ಅದನ್ನು ತ್ಯಾಗ ಮಾಡಬೇಕು, ಇದನ್ನು ತ್ಯಾಗ ಮಾಡಬೇಕು ಎಂದು ಹೇಳಿದ. ಕೊನೆಗೆ ಜನರು ತಮ್ಮ ಸ್ವಾತಂತ್ರ್ಯವನ್ನು ತ್ಯಾಗ ಮಾಡಬೇಕಾಯಿತು.
ತನ್ನ ವಿಚಾರಗಳಿಗೆ ತಲೆಬಾಗುವವರು ಮಾತ್ರ. ದೇಶಪ್ರೇಮಿಗಳು, ಉಳಿದವರೆಲ್ಲ ದೇಶದ್ರೋಹಿಗಳೆಂದು ಆತನ ಭ್ರಮೆ. ಜನರನ್ನು ಪೋಲೆಂಡ್ ಸಹಿತ ನೆರೆಯ ದೇಶಗಳ ಮೇಲೆ ಎತ್ತಿಕಟ್ಟಿ ಆಕ್ರಮಣ ಮಾಡಿ ಜರ್ಮನಿಯನ್ನು ಭೂಪಟದಲ್ಲಿ ವಿಸ್ತರಿಸಿದ. ಅದರೆ, ಜನರದ್ದು ನಾಯಿಪಾಡಾಯಿತು.
ಇದೀಗ ಭಾರತದಲ್ಲಿ ದೇಶಪ್ರೇಮದ ಮತ್ತು ರಾಷ್ಟ್ರೀಯತೆಯ ಮಾತಾಗುತ್ತಿದೆ. ಈ ರಾಷ್ಟ್ರೀಯತೆಯಲ್ಲಿ ಮತೀಯ ಅಲ್ಪಸಂಖ್ಯಾತರಿಗೆ, ಹಿಂದುಳಿದವರಿಗೆ, ದಲಿತರಿಗೆ ಯಾವ ಸ್ಥಾನವಿದೆ? ರಾಷ್ಟ್ರೀಯತೆಯ ಹೆಸರಲ್ಲಿ ಮೇಲ್ಜಾತಿ ಪ್ರಾಬಲ್ಯ ಒಪ್ಪಿಕೊಳ್ಳಬೇಕೆ?
ನಮ್ಮಲ್ಲಿಯೂ ದೇಶಕ್ಕಾಗಿ ತ್ಯಾಗ ಮಾಡಿ, ಸಬ್ಸಿಡಿ ತ್ಯಾಗಮಾಡಿ ಇತ್ಯಾದಿ ಹೇಳಲಾಗುತ್ತದೆ. ಗಗನಕ್ಕೇರಿದ ತೈಲ, ಅನಿಲ ಬೆಲೆಯೂ ದೇಶಕ್ಕಾಗಿ ಮಾಡುವ ತ್ಯಾಗವಂತೆ!
ಇಲ್ಲಿ ಕೂಡಾ ಪಾಕಿಸ್ತಾನ, ಬಾಂಗ್ಲ, ನೇಪಾಳ, ಶ್ರೀಲಂಕಾ, ಬರ್ಮಾ ಒಳಗೊಂಡಂತಹ ಅಖಂಡ ಭಾರತದ ಸಾಮ್ರಾಜ್ಯಶಾಹಿ ಕಲ್ಪನೆಗೆ ನೀರುಣಿಸಿ ಬೆಳೆಸುವವರು ಇನ್ನೂ ಇದ್ದಾರೆ. ಭೂಪಟ ಮತ್ತು ಜನಪ್ರೇಮದ ವ್ಯತ್ಯಾಸವನ್ನು, ನಿಜವಾದ ದೇಶಪ್ರೇಮವನ್ನು ಸರ್ವಾಧಿಕಾರಿ ಪ್ರವೃತ್ತಿಯು ಎಂದಿಗೂ ತಿಳಿದುಕೊಳ್ಳಲಾರದು.
ಗಿಲೀಟಿನ ಸುಳ್ಳು ಪ್ರಚಾರ ಸರ್ವಾಧಿಕಾರದ ಮುಖ್ಯ ಲಕ್ಷಣಗಳಲ್ಲಿ ಇನ್ನೊಂದು. ನಾಜಿ ಜರ್ಮನಿಯಲ್ಲಿ ಗೊಬೆಲ್ಸ್ ಅದರ ರೂವಾರಿಯಾಗಿದ್ದ. ಒಂದು ಸುಳ್ಳನ್ನು ಸಾವಿರ ಸಲ ಹೇಳಿದರೆ ಅದು ಸತ್ಯವಾಗುತ್ತದೆ ಎಂಬುದು ಅವನ ನಿಲುವಾಗಿತ್ತು. ಅಪಪ್ರಚಾರವು ಅವರ ಪ್ರಚಾರದ ಇನ್ನೊಂದು ಮುಖ.
ಇಂದು ಮಾಧ್ಯಮಗಳಲ್ಲಿ, ಸಾಮಾಜಿಕ ತಾಣಗಳಲ್ಲಿ ಹಸಿಹಸಿ ಸುಳ್ಳುಗಳನ್ನು ಉತ್ಪಾದಿಸುವ ಕಾರ್ಖಾನೆಗಳೇ ನಡೆಯುತ್ತಿವೆ. ಅವುಗಳನ್ನು ಕಾಸಿಗಾಗಿ ಶೇರ್ ಮಾಡುವವರ ಪಡೆಗಳಿವೆ. ವಿದ್ವೇಷದ, ಅವಹೇಳನೆಯ ವೈಯುಕ್ತಿಕ ನಿಂದನೆಯ, ಅಶ್ಲೀಲವಾದ ಬೆದರಿಕೆಯ ಸಂದೇಶಗಳು ಸ್ವಯಂಘೋಷಿತ ಸಂಸ್ಕೃತಿಯ ರಕ್ಷಕರಿಂದ ಬರುತ್ತಿರುವುದು ಬರೇ ಕಾಕತಾಳೀಯ. ಅಗಿರಲಾರದು!
ಗಾಂಧಿ ಪದತಲದಲ್ಲಿ ಯುವಕ ಮೋದಿ, ಭೋಸರ ಪಕ್ಕದಲ್ಲಿ ವಂದನೆ ಸ್ವೀಕರಿಸುತ್ತಿರುವ ಮೋದಿ, ಭಗತ್ ಸಿಂಗ್‍ಗೆ ಜೈಲಿನಲ್ಲಿ ಮನೆಯೂಟ ನೀಡುತ್ತಿರುವ ಮೋದಿ ಇತ್ಯಾದಿಯಾಗಿ ನಾಜಿಗಳೇ ನಾಚುವಂತಹ ಫೊಟೋಷಾಪ್ ಸುಳ್ಳುಗಳನ್ನು ಹರಿದುಬಿಡಲಾಗುತ್ತದೆ. 1950ರಲ್ಲಿ ಅತ ಹುಟ್ಟಿದಾಗ ಅವರೆಲ್ಲಾ ಮಣ್ಣಲ್ಲಿ ಲೀನವಾಗಿಹೋಗಿದ್ದರೆಂಬ ಸ್ಪಷ್ಟ ಸತ್ಯವೂ ಗೋಚರವಾಗದ ಮುಗ್ಧ ಜನರು ಅವುಗಳನ್ನು ನಂಬುತ್ತಾರೆ. ಇದುವೇ ಗೋಬೆಲ್ಸ್ ತಂತ್ರ.
ಪ್ರಧಾನಿಯವರ ಸೆಲ್ಫಿಗಳಲ್ಲಿ ವ್ಯಕ್ತವಾಗುವ ಸೆಲ್ಫ್ ಮೋಹ ಗಾಬರಿ ಹುಟ್ಟಿಸುತ್ತದೆ. ಅವರು ಲಕ್ಷಾಂತರ ಟ್ವೀಟ್‍ಗಳಿಗೆ ಸ್ವತಃ ಪ್ರತಿಕ್ರಿಯಿಸುತ್ತಾರೆಂದು ನಂಬುವ ಮೂರ್ಖರೂ ಇದ್ದಾರೆ. ಇದು ಸಾಧ್ಯವೆ, ಮತ್ತೆ ಅವರು ಕೆಲಸ ಮಾಡುವುದು ಯಾವಾಗ, ಅವರ ಗಡಿಯಾರದಲ್ಲಿ ದಿನಕ್ಕೆ 48 ಗಂಟೆಗಳಿವೆಯೇ ಎಂದು ಯಾರೂ ಪ್ರಶ್ನೆ ಮಾಡಲು ಹೋಗುವುದಿಲ್ಲ. ಇಂತಹ ಕುರುಡು ನಂಬಿಕೆ, ವ್ಯಕ್ತಿ ವೈಭವೀಕರಣವೇ ಸರ್ವಾಧಿಕಾರಕ್ಕೆ ಮೆಟ್ಟಿಲು.
ಎಲ್ಲಾ ಸರ್ವಾಧಿಕಾರಿಗಳು ಹಿಂದಿನ ಆಡಳಿತವನ್ನು ದೂರಿ ಅಭಿವೃದ್ಧಿಯ ಮಂತ್ರವನ್ನು ಜಪಿಸಿದ್ದಾರೆ. ಹಿಟ್ಲರ್ ಮತ್ತು ಇಟಲಿಯ ಸರ್ವಾಧಿಕಾರಿ ಬೆನಿಟೊ ಮುಸೊಲಿನಿಯಂತವರೂ ಹಿಂದೆ ಬಿದ್ದಿರಲಿಲ್ಲ. ತಮ್ಮ ತಮ್ಮ ದೇಶಗಳನ್ನು ಸಮೃದ್ಧಿಯ ಶಿಖರಕ್ಕೆ ಕೊಂಡೊಯ್ಯುವ ಭರವಸೆ ನೀಡಿ ವಿನಾಶದ ಪಾತಾಳಕ್ಕೆ ತಳ್ಳಿದರು. ಜನಕೇಂದ್ರಿತವಲ್ಲದ ಮತ್ತು ಮಿಲಿಟರಿ ಯಂತ್ರವನ್ನು ಬಲಪಡಿಸುವ ಕೈಗಾರಿಕೀಕರಣ ಅದಾಗಿತ್ತು. ಹೊಸ ರೀತಿಯ ಬಂದೂಕುಗಳು, ಫಿರಂಗಿಗಳು, ಟ್ಯಾಂಕ್‍ಗಳು, ಯುದ್ಧ ವಿಮಾನಗಳು, ಹಡಗುಗಳು, ಜಲಾಂರ್ಗಾಮಿಗಳು, ಸೋನಾರ್, ರಾಡಾರ್ ತಂತ್ರಜ್ಞಾನಗಳು ಅಭಿವೃದ್ಧಿ ಹೊಂದಿ ವಿನಾಶದ ಸಲಕರಣೆಗಳು ಭಾರೀ ಪ್ರಮಾಣದಲ್ಲಿ ನಿರ್ಮಾಣವಾದವು. ಇಂದು ಮಧ್ಯಮ ವರ್ಗದ, ಅದರಲ್ಲೂ ಯುವಕರ ನೆಚ್ಚಿನ ಶೋಕಿಗಳಾಗಿರುವ ಮೋಟಾರ್ ಬೈಕ್ ನಿರ್ಮಾಣವಾದದ್ದು ಜರ್ಮನಿಯಲ್ಲಿ! ಸ್ಕೂಟರ್ ನಿರ್ಮಾಣವಾದದ್ದು ಇಟಲಿಯಲ್ಲಿ! ಅದೂ ಯುದ್ಧದ ಉದ್ದೇಶಕ್ಕಾಗಿ.
ನಮ್ಮಲ್ಲಿಯೂ ಯುದ್ಧಾಸ್ತ್ರಗಳ ಖಾಸಗಿ ನಿರ್ಮಾಣಕ್ಕೆ ಚಾಲನೆ ದೊರಕಿದೆ. ರಾಫೆಲ್ ಯುದ್ಧ ವಿಮಾನಗಳ ನಿರ್ಮಾಣ ಗುತ್ತಿಗೆ ಸಾರ್ವಜನಿಕ ವಲಯದ ಅನುಭವಿ ಹಿಂದೂಸ್ತಾನ್ ಏರೋನ್ಯಾಟಿಕ್ಸ್ ಲಿಮಿಟೆಡ್‍ಗೆ ಸಿಗದೇ ಅನುಭವವೇ ಇಲ್ಲದ ಅಂಬಾನಿಯ ಹೊಸ ಕಂಪೆನಿಯ ಪಾಲಾಗಿದೆ. ಡ್ರೋನ್ ನಿರ್ಮಾಣದ ಗುತ್ತಿಗೆಯದ್ದೂ ಅದೇ ಕತೆ! ಅಂಬಾನಿ, ಅದಾನಿ ಮುಂತಾದ ಆಗರ್ಭ ಶ್ರೀಮಂತರ ಬೃಹತ್ ಉದ್ದಿಮೆಗಳಿಗೆ ಲಾಭ ಮಾಡಿಕೊಡುವುದರಿಂದ ಸಾಮಾನ್ಯ ಜನರ ಅಭಿವೃದ್ಧಿ ಅಗುವುದು ಹೇಗೆ? ಬಂಡವಾಳ ಹೂಡಿಕೆಯ ಲಾಭ ಕೇವಲ ಉದ್ದಿಮೆಗಳಿಗೆ, ರಾಜಕೀಯ ಪಕ್ಷಗಳ ನಿಧಿಗೆ, ರಾಜಕಾರಣಿಗಳ ಜೇಬಿಗೆ ತಲುಪಿದರೆ ಸಾಕೆ? ರಕ್ಷಣಾ ವಲಯದಂತಹ ಸೂಕ್ಷ್ಮ ಕ್ಷೇತ್ರಗಳನ್ನೂ ಖಾಸಗಿ ಬಂಡವಾಳಗಾರರಿಗೆ ಬಿಟ್ಟುಕೊಡುತ್ತಿರುವುದು ಅಪಾಯಕಾರಿ ನಡೆ. ವಿಕೇಂದ್ರೀಕೃತವಾದ ಜನಪರ ಅಭಿವೃದ್ಧಿಗೆ ತಿಲಾಂಜಲಿ ಬಿಟ್ಟು, ದೊಡ್ಡ ಕೈಗಾರಿಕೆಗಳಿಗೆ ಭೂಮಿ ಒದಗಿಸಿಕೊಡುವ ರಿಯಲ್ ಎಸ್ಟೇಟ್ ದಂಧೆಗೆ ಇಳಿದು, ಅದಕ್ಕೆ ಅನುಕೂಲಕರವಾದ ರೈತವಿರೋಧಿ ಭೂಸ್ವಾಧೀನ ಕಾಯಿದೆಯನ್ನು ದುರ್ಬಳಕೆ ಮಾಡಲಾಗುತ್ತಿದೆ ಎಂಬುದು ಅಪಾಯದ ಗಂಟೆಯನ್ನು ಮೊಳಗಿಸುತ್ತಿದೆಯೆ?
ಜನಾಂಗ ಜನಾಂಗಗಳನ್ನೇ ನಿರ್ನಾಮ ಮಾಡಿದ ಸರ್ವಾಧಿಕಾರಗಳೆಲ್ಲವೂ ಮೊದಲಿಗೆ ಎಲ್ಲರನ್ನು ಜೊತೆಗೊಯ್ಯುವ ಮಾತಾಡಿವೆ!
ಲಕ್ಷಾಂತರ ಯಹೂದಿಗಳನ್ನು ಯಾತನಾ ಶಿಬಿರಗಳಿಗೆ ತಳ್ಳಿ ಅಮಾನವೀಯವಾಗಿ ಮುಗಿಸಿದ ಹಿಟ್ಲರ್‍ಗೆ ಆರಂಭದಲ್ಲಿ ಬ್ಯಾಂಕಿಂಗ್ ಕ್ಷೇತ್ರದಲ್ಲಿ ಹಿಡಿತಹೊಂದಿದ್ದ ಯಹೂದಿಗಳು ಬೇಕಾಗಿದ್ದರು. ಅವನು ಅದಕ್ಕಾಗಿ ಅವರನ್ನು ಓಲೈಸಿದ್ದ ಕೂಡಾ. ಅತನ ಸರಕಾರ ಅವರಿಂದ ಬೇಕಾಬಿಟ್ಟಿ ಸಾಲ ಎತ್ತಿದ್ದ. ನಂತರ ಕೈಯೆತ್ತಿ ಅವರ ವಿರುದ್ಧ ಮುಗಿಬಿದ್ದಿದ್ದ.
ನಮ್ಮಲ್ಲಿಯೂ ಇಂತಹ ಮಾತುಗಳು ಕೇಳಿಬರುತ್ತಿವೆ. ಅದರೆ, ವ್ಯವಸ್ಥಿತವಾಗಿ ಸಂಕುಚಿತವಾದ, ಗಂಭೀರವಾದ ದಾಳಿಗಳು ನಿರಂತರವಾಗಿ ಬುದ್ಧಿಜೀವಿಗಳ ಮೇಲೆ, ದಲಿತರು, ಅಲ್ಪಸಂಖ್ಯಾತರ ಮೇಲೆ ನಡೆದುಕೊಂಡುಬಂದಿವೆ. ದನ ಸಾಗಾಟ, ಕಾಲಮೇಲೆ ಕಾಲುಹಾಕಿದ್ದು, ಕುದುರೆಯ ಮೇಲೆ ಕುಳಿತದ್ದು ಮುಂತಾದ ಕ್ಷುಲ್ಲಕ ಕಾರಣಗಳಿಗೆ ಮಾತ್ರವಲ್ಲ, ಕಾರಣವೇ ಇಲ್ಲದೇ ದಾಳಿಗಳು, ಕೊಲೆಗಳು, ಅತ್ಯಾಚಾರಗಳು ನಡೆದಿವೆ. ಜೊತೆಗೆ ಪ್ರತೀಕಾರ ಕೃತ್ಯಗಳೂ ಕೆಲವೊಮ್ಮೆ ನಡೆದಿವೆ. ತಾವು ಸಂತರೆಂದು ಹೇಳಿಕೊಳ್ಳುವವರು, ಸಂಸದರು ಕೂಡಾ ಕೊಚ್ಚಿ, ಕೊಲ್ಲಿ, ಬೆಂಕಿಹಚ್ಚಿ, ತಲೆಕಡಿಯಿರಿ, ದೇಶದಿಂದ ಓಡಿಸಿ ಇತ್ಯಾದಿ ಪ್ರಚೋದನಾತ್ಮಕ ಭಾಷೆಯಲ್ಲಿ ಎಗ್ಗಿಲ್ಲದೇ ಮಾತನಾಡುತ್ತಿದ್ದಾರೆ. ಎಲ್ಲರನ್ನೂ ಜೊತೆಗೊಯ್ಯುತ್ತೇವೆ ಎಂದು ಹೇಳುವವರು ಮಾತ್ರ ಇವುಗಳನ್ನು ಖಂಡಿಸದೇ, ಕ್ರಮ ಕೈಗೊಳ್ಳದೆ ಮೌನ ಅನುಮತಿ ನೀಡುತ್ತಿರುವಂತಿದೆ.
ಇದಲ್ಲದೇ ಸಂವಿಧಾನವನ್ನು ಬದಲಾಯಿಸುವ ಮಾತೂ ಕೇಳಿಬರುತ್ತಿದೆ. ಈ ಎಲ್ಲಾ ವಿಷಯಗಳನ್ನು ಮುಂದೆ ವಿವರವಾಗಿ ಚರ್ಚಿಸೋಣ. ಇದು ಕೇವಲ ಪರಿಚಯ ಮಾತ್ರ. ಭಾರತದಂತಹ ವೈವಿಧ್ಯಮಯ ವಿಶಾಲ ಜನಭರಿತ ದೇಶದಲ್ಲಿ ಸರ್ವಾಧಿಕಾರ ತರುವುದು ಸುಲಭದ ಕೆಲಸವೇನಲ್ಲ! ಹಿಂದೆ ಇಂದಿರಾಗಾಂಧಿಯವರ ಕಾಲದಲ್ಲಿ ಇಂತಹ ಪ್ರಯತ್ನ ನಡೆದಿತ್ತು ಮತ್ತು ಅದನ್ನು ಜನತೆಯ ಹೋರಾಟ ವಿಫಲಗೊಳಿಸಿತು ಎಂಬುದನ್ನು
ಮರೆಯದಿರೋಣ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....