Homeಅಂಕಣಗಳುಸರ್ವಾಧಿಕಾರದ ಕೆಲವು ಗುಣಲಕ್ಷಣಗಳು!

ಸರ್ವಾಧಿಕಾರದ ಕೆಲವು ಗುಣಲಕ್ಷಣಗಳು!

- Advertisement -
- Advertisement -

ನಿಖಿಲ್ ಕೊಲ್ಫೆ |
ಪ್ರಪಂಚದ ಆಗಿಹೋದ ಮತ್ತು ಈಗಿರುವ ಬಹುತೇಕ ಎಲ್ಲಾ ಸರ್ವಾಧಿಕಾರಿಗಳ ವೈಯಕ್ತಿಕ ಸ್ವಭಾವ ಹಾಗೂ ಗುಣಲಕ್ಷಣಗಳಲ್ಲಿ ಅನೇಕ ಸಾಮ್ಯಗಳಿವೆ. ಅವುಗಳಲ್ಲಿ ಮುಖ್ಯವಾದದ್ದೆಂದರೆ ನಾರ್ಸಿಸಿಸಮ್ ಅಂದರೆ ತಮ್ಮನ್ನೇ ತಾವು ಮೋಹಿಸುವ ಪ್ರವೃತ್ತಿ. ಗ್ರೀಕ್ ಪುರಾಣದಲ್ಲಿ ಬರುವ ನಾರ್ಸಿಸಸ್ ಒಬ್ಬ ಬೇಟೆಗಾರ. ಸುಂದರನಾಗಿದ್ದ ಆತ ಒಂದು ತಿಳಿಯಾದ ಕೊಳದಲ್ಲಿ ತನ್ನ ಮುಖವನ್ನು ನೋಡಿ ಪ್ರತಿಬಿಂಬದಲ್ಲಿ ಮೋಹಗೊಳ್ಳುತ್ತಾನೆ. ಸರ್ವಾಧಿಕಾರಿಗಳು ಅದೇ ರೀತಿ ವರ್ತಿಸುತ್ತಾರೆ.
ತಮ್ಮನ್ನು ತಾವು ಧೀರರು, ಬಲಶಾಲಿಗಳು, ಬುದ್ಧಿವಂತರು ಎಂದು ಬಿಂಬಿಸಲು ಬಯಸುತ್ತಾರೆ. ಇಡೀ ಪ್ರಪಂಚದಲ್ಲಿ ತಾನೇ ಅತ್ಯಂತ ಮುಖ್ಯ ವ್ಯಕ್ತಿ; ಅದು ತಮ್ಮ ಸುತ್ತಲೇ ತಿರುಗುತ್ತದೆ ಎಂಬ ಭ್ರಮೆ ಅವರಲ್ಲಿರುತ್ತದೆ. ಅವರು ಮಿಲಿಟರಿ ಸಮವಸ್ತ್ರ, ಅತ್ಯುತ್ತಮ ಸೂಟುಬೂಟು ಧರಿಸುತ್ತಾರೆ. ಸರಳತೆ ಅವರಲ್ಲಿಲ್ಲ!
ಇದಕ್ಕೆ ಹಲವಾರು ಉದಾಹರಣೆಗಳನ್ನು ಕೊಡಬಹುದು. ಅವರು ಯಾವತ್ತೂ ಎತ್ತರದ ವೇದಿಕೆಗಳಲ್ಲಿ ಇರುತ್ತಾರೆ. ಹಿಂದೆ ಅವರದ್ದೇ ಭಾರೀ ಚಿತ್ರಗಳಿರುತ್ತವೆ. ಮಾಧ್ಯಮಗಳಲ್ಲಿ ಅವರದ್ದೇ ವ್ಯಕ್ತಿಕೇಂದ್ರಿತ ಪ್ರಚಾರ ಇರುತ್ತದೆ. ಇರಾಕಿನಲ್ಲಿ ಸದ್ದಾಂ ಹುಸೇನ್ ಅಧಿಕಾರದಲ್ಲಿ ಇದ್ದಾಗ ಎಲ್ಲೆಲ್ಲೂ, ಸಾರ್ವಜನಿಕ ಸ್ಥಳಗಳಲ್ಲಿ ಅತನ ಪ್ರತಿಮೆಗಳು, ಭಾವಚಿತ್ರಗಳು, ಕಟೌಟುಗಳು ರಾರಾಜಿಸುತ್ತಿದ್ದವು. ದಿನಪತ್ರಿಕೆಗಳಲ್ಲಿ ಪ್ರತೀದಿನ ಮುಖಪುಟದಲ್ಲಿ ಆತನ ಫೋಟೋ ಕಡ್ಡಾಯ. ಟಿವಿ ರೇಡಿಯೋಗಳಲ್ಲಿ ಮೊದಲ ಸುದ್ದಿ ಅತನದ್ದೇ ಅಗಿರಬೇಕು. ಹಿಟ್ಲರ್ ಕೂಡಾ ಇದಕ್ಕೆ ಹೊರತಲ್ಲ!
ಕೆಲವು ಅಧ್ಯಯನಗಳ ಪ್ರಕಾರ ಸಾಮಾನ್ಯವಾಗಿ ಸರ್ವಾಧಿಕಾರಿಗಳು ವರ್ಚಸ್ವಿಗಳೂ, ಆತ್ಮವಿಶ್ವಾಸ ಹೊಂದಿರುವವರೂ ಆಗಿರುತ್ತಾರೆ. ಅವರು ಹಿಟ್ಲರ್‍ನಂತೆ ಉತ್ತಮ ಭಾಷಣಕಾರರಾಗಿರುತ್ತಾರೆ. ಅದರೆ, ಅವರ ಭಾಷಣಗಳಲ್ಲಿ ಹುರುಳಿರುವುದಿಲ್ಲ! ಅಡಿದ್ದನ್ನೇ ಭಾವನಾತ್ಮಕವಾಗಿ ಆಡಿ ಜನರನ್ನು ಉದ್ರೇಕಿಸುವಂತಿರುತ್ತವೆ. ಘೋಷಣೆಗಳೇ ಅವರ ಬಂಡವಾಳ. ಯಾವಾಗಲೂ ಭಾವನಾತ್ಮಕ ವಿಷಯಗಳನ್ನೇ ಕೆಣಕುತ್ತಾರೆ. ಸರ್ವಾಧಿಕಾರಿಗಳು ಸುಳ್ಳುಹೇಳುವುದರಲ್ಲಿ ನಿಷ್ಣಾತರಾಗಿರುತ್ತಾರೆ.
ಅವರು ಹೆಚ್ಚಾಗಿ ಉಗಾಂಡದ ಇದಿ ಅಮೀನನಂತೆ ಕ್ರೂರಿಗಳಾಗಿರುತ್ತಾರೆ. ಭಾವನಾತ್ಮಕ ಮಾತುಗಳನ್ನೇ ಆಡಿದರೂ ಅವರು ಮಾತ್ರ ಭಾವನಾತ್ಕಕವಾಗಿರುವುದಿಲ್ಲ. ಅವರು ಧೈರ್ಯಶಾಲಿಗಳ ಪೋಸು ಕೊಟ್ಟರೂ, ಕೆಲವರು ನಿಜವಾಗಿಯೂ ಧೈರ್ಯಶಾಲಿಗಳಾಗಿಯೇ ಇದ್ದರೂ, ಇನ್ನು ಕೆಲವರು ಸ್ವಭಾವತಃ ಪುಕ್ಕಲುಗಳಾಗಿರುತ್ತಾರೆ. ಯಾರಾದರೂ ತಮ್ಮನ್ನು ಕೊಲ್ಲಬಹುದು, ತಾನು ಅಧಿಕಾರ ಕಳೆದುಕೊಳ್ಳಬಹುದು ಎಂಬ ಭಯ ಅವರನ್ನು ಕಾಡುತ್ತಿರುತ್ತದೆ. ಅದಕ್ಕಾಗಿ ಸ್ವಲ್ಪ ಸಂಶಯ ಬಂದರೂ ವಿರೋಧಿಗಳನ್ನು ದಮನಿಸುತ್ತಾರೆ. ಲಿಬಿಯಾದ ಸರ್ವಾಧಿಕಾರಿಯಾಗಿದ್ದ ಮುಹಮ್ಮದ್ ಗಡ್ಡಾಫಿ ಹೆಚ್ಚಾಗಿ ರಾಜಧಾನಿ ಟ್ರಿಪೋಲಿಯಲ್ಲಿ ವಾಸವಿರದೆ, ಮರುಭೂಮಿಗಳ ಗುಪ್ತಸ್ಥಳಗಳ ಟೆಂಟ್ ಕ್ಯಾಂಪ್‍ಗಳಲ್ಲಿ ವಾಸವಿದ್ದುದನ್ನು ಗಮನಿಸಬಹುದು.
ಸರ್ವಾಧಿಕಾರಿಗಳು ಆರಂಭದಲ್ಲಿ ಜನಪ್ರಿಯರೇ ಆಗಿರುತ್ತಾರೆ. ಹಿಂದಿನ ಆಡಳಿತಗಳ ವೈಫಲ್ಯಗಳಿಂದ ಅಸಮಾಧಾನ ಹೊಂದಿದ ಜನರು ಭವಿಷ್ಯದ ಆಶಾವಾದದಿಂದ ಇಂತವರನ್ನು ಬೆಂಬಲಿಸುತ್ತಾರೆ. ಅವರಾದರೋ ಹಿಂದಿನವರನ್ನು ನಿರಂತರ ದೂರುತ್ತಾ, ಎಲ್ಲದಕ್ಕೂ ಹಿಂದಿನವರೇ ಕಾರಣ ಎಂದು ನಂಬಿಸುತ್ತಾರೆ. ಇರಾಕಿನ ಸದ್ದಾಂ ಹುಸೇನ್ ಕೇವಲ ಸೇನೆಯ ಜನರಲ್ ಅಗಿದ್ದಾತ. 1979ರಲ್ಲಿ ಅಧ್ಯಕ್ಷ ಮಹಮ್ಮದ್ ಹಸನ್ ಅಲ್ ಬಖ್ರ್ ನಿಧನ ಹೊಂದಿದಾಗ ಜನರಲ್ಲಿ ಅಸಮಾಧಾನವಿತ್ತು. ಅದನ್ನೇ ಬಂಡವಾಳ ಮಾಡಿಕೊಂಡು ಸದ್ದಾಂ ಆದ್ಯಕ್ಷನಾದಾಗ, ಬಾತ್ ಪಕ್ಷ ಆತನನ್ನು ಬೆಂಬಲಿಸಿತ್ತು. ಜನರೂ ಖುಷಿಯನ್ನೇ ಪಟ್ಟಿದ್ದರು. ಅದಕ್ಕೆ ಅನುಗುಣವಾಗಿ ಸದ್ದಾಂ ಹಲವು ಸುಧಾರಣಾ ಕ್ರಮಗಳನ್ನು ಕೈಗೊಂಡದ್ದೂ ಹೌದು.
ಹಿಟ್ಲರ್ ಕೂಡಾ ನೇರವಾಗಿ ಅಧಿಕಾರ ಕಸಿದುಕೊಂಡು ಸರ್ವಾಧಿಕಾರಿಯಾದವನಲ್ಲ. ಚುನಾವಣೆಯಲ್ಲಿ ಅವನ ಪಕ್ಷ ಎರಡನೇ ಸ್ಥಾನ ಗಳಿಸಿತ್ತು. ಆತನನ್ನು ಅಧ್ಯಕ್ಷ ಪೌಲ್ ವೊನ್ ಲಿಂಡೆನ್‍ಬರ್ಗ್ ಅವರು ಚಾನ್ಸಲರ್ ಆಗಿ ನೇಮಿಸಿದ್ದರು. ನಂತರ ಆತ ಅಧ್ಯಕ್ಷ ಮತ್ತು ಚಾನ್ಸಲರ್ ಎರಡೂ ಅಧಿಕಾರ ಇರುವ ಫ್ಯುರರ್ ಎಂದು ಘೋಷಿಸಿಕೊಂಡಾಗ ಬಹುತೇಕ ಜರ್ಮನರು ಅತ ವಿಶ್ವಗುರು ಆಗುವನೆಂದೇ ನಂಬಿ ಬೆಂಬಲಿಸಿದ್ದರು. ಯಾಕೆಂದರೆ, ಮೊದಲ ಮಹಾಯುದ್ಧದ ಸೋಲಿನಿಂದ ತತ್ತರಿಸಿತ್ತು. ಅರ್ಥಿಕತೆ ಹದಗೆಟ್ಟಿತ್ತು. ನಿರುದ್ಯೋಗ ತಾಂಡವವಾಡುತ್ತಿತ್ತು.
ಎಲ್ಲಾ ಸರ್ವಾಧಿಕಾರಿಗಳು ತಮಗೆ ಯಾವುದೇ ವಿರೋಧ ಇರಬಾರದೆಂದು ಬಯಸುತ್ತಾರೆ. ಪ್ರಜಾಸತ್ತಾತ್ಮಕ ಮೌಲ್ಯಗಳಲ್ಲಿ ಅವರಿಗೆ ನಂಬಿಕೆಯೇ ಇರುವುದಿಲ್ಲ. ಸಂಸತ್ತಿನಂತಹ ಯಾವುದೇ ಚುನಾಯಿತ ನಿಯಂತ್ರಕ ಸಂಸ್ಥೆಯನ್ನು ಅವರು ಕಡೆಗಣಿಸುತ್ತಾರೆ. ಅಂತಹ ಸಂಸ್ಥೆಗಳಲ್ಲಿ ತಮ್ಮ ಭಟ್ಟಂಗಿಗಳೇ ಆಯಕಟ್ಟಿನ ಸ್ಥಾನಗಳಲ್ಲಿ ಇರುವಂತೆ ನೋಡಿಕೊಳ್ಳುತ್ತಾರೆ. ಹಿಟ್ಲರ್ ಕೂಡಾ ಜರ್ಮನ್ ಸಂಸತ್ತನ್ನು ವಿಸರ್ಜಿಸಿದ್ದ. ತನ್ನ ಸುತ್ತ ಗೊಬೆಲ್ಸ್, ಹಿಮ್ಲರ್ ಮುಂತಾದ ಭಟ್ಟಂಗಿಗಳನ್ನು ಇಟ್ಟುಕೊಂಡಿದ್ದ.
ಒಂದು ಸರಕಾರ ನಡೆಯಲು ಹಲವಾರು ಸಂಸ್ಥೆಗಳು ಇರಲೇಬೇಕಾಗುತ್ತದೆ. ಬ್ಯಾಂಕಿಂಗ್, ಕೈಗಾರಿಕೆ, ಕೃಷಿ, ಅರೋಗ್ಯ, ಗೃಹ, ರಕ್ಷಣೆ ಹೀಗೆ ಆಡಳಿತ ಯಂತ್ರವನ್ನು ಮುನ್ನಡೆಸಲು ಅಧಿಕಾರಶಾಹಿ ಇದ್ದೇ ಇರುತ್ತದೆ. ಹೆಸರಿಗಾದರೂ ಚುನಾವಣೆಗಳು ನಡೆಯಬೇಕು. ಕೆಲವು ದೇಶಗಳಲ್ಲಿ ನಕಲಿ ಚುನಾವಣೆಗಳೇ ನಡೆಯುತ್ತವೆ. ಈ ಹೊತ್ತಿನಲ್ಲಿ ಯುಎಸ್‍ಎಯಲ್ಲಿ ಭಾರತದ ರಾಯಭಾರಿಯಾಗಿದ್ದ ಹಿರಿಯ ರಾಜತಾಂತ್ರಿಕ ಅಬಿದ್ ಹುಸೇನ್ ಅವರು ಕೆಲವರ್ಷಗಳ ಹಿಂದೆ ಸಮಾರಂಭವೊಂದರಲ್ಲಿ ಆಫ್ರಿಕಾದ ದೇಶವೊಂದರಲ್ಲಿ ನಡೆಯುವ ಚುನಾವಣೆಗಳ ಕುರಿತು ಉದಾಹರಣೆಯಾಗಿ ಹೇಳಿದ ಜೋಕೊಂದು ನೆನಪಿಗೆ ಬರುತ್ತದೆ.
ಒಬ್ಬ ವ್ಯಕ್ತಿ ಅಧ್ಯಕ್ಷರ ವಿರುದ್ಧವಾಗಿ ಮತ ಚಲಾಯಿಸಿ ಮನೆಗೆ ಬರುತ್ತಾನೆ. ಹೆಂಡತಿ ಕೇಳಿದಾಗ ತಾನು ವಿರುದ್ಧ ಮತ ಚಲಾಯಿಸಿದ ವಿಷಯ ಹೇಳುತ್ತಾನೆ. ಆಕೆ ಕಂಗಾಲಾಗುತ್ತಾಳೆ. “ನಿಮಗೆ ಬುದ್ದಿ ಇಲ್ಲವೆ?! ನೀವು ವಿರುದ್ಧ ಮತ ಚಲಾಯಿಸಿದ್ದು, ಸರಕಾರಕ್ಕೆ ಗೊತ್ತಾಗುತ್ತದೆ. ನಾಳೆ ನೀವು ಕೆಲಸ ಕಳಕೊಳ್ಳಬಹುದು. ಜೈಲಿಗೂ ಹೋಗಬಹುದು. ನಮ್ಮ ಮಗನಿಗೆ ಆಡಳಿತ ಪಕ್ಷದ ಗೂಂಡಾಗಳು ಹೊಡೆಯಬಹುದು. ಮಗಳನ್ನು ಅತ್ಯಾಚಾರ ಮಾಡಲೂಬಹುದು. ಈಗಲೇ ಹೋಗಿ ಮತ ಬದಲಿಸಿ ಬನ್ನಿ!” ಎಂದು ಅಂಗಲಾಚುತ್ತಾಳೆ. ಅತನಿಗೆ ಸರಿಯೆನಿಸಿ ಮತಗಟ್ಟೆಗೆ ದೌಡಾಯಿಸಿ ಅಧಿಕಾರಿಗಳಲ್ಲಿ ಹೇಳುತ್ತಾನೆ- “ಸ್ವಾಮಿ ನಾನು ತಪ್ಪಾಗಿ ಅಧ್ಯಕ್ಷರ ವಿರುದ್ಧ ಮತ ಚಲಾಯಿಸಿದ್ದೇನೆ. ಅದನ್ನು ಅವರ ಪರವಾಗಿ ಸರಿಪಡಿಸಬೇಕು”. ಅಗ ಅಧಿಕಾರಿಗಳು ಹೇಳುತ್ತಾರೆ- “ ನಿನಗೇನೂ ಭಯ ಬೇಡ. ನಾವು ಈಗಾಗಲೇ ನಿನ್ನ ಮತವನ್ನು ಅಧ್ಯಕ್ಷರ ಪರ ತಿದ್ದಿ ಆಗಿದೆ!” ನಮ್ಮಲ್ಲೂ ಇಲೆಕ್ಟ್ರಾನಿಕ್ ಮತಯಂತ್ರದ ಬಗ್ಗೆ ಹಲವರಿಗೆ ಆತಂಕ ಇರುವುದು ಯಾಕೆ ಎಂದು ಅರ್ಥವಾಯಿತೆ!?
ಈ ಕಾರಣದಿಂದಾಗಿ ಸರ್ವಾಧಿಕಾರಿಗಳು ಯಾವತ್ತೂ ಅಯಕಟ್ಟಿನ ಸ್ಥಾನಗಳಲ್ಲಿ ತಮ್ಮವರನ್ನೇ ನೇಮಿಸಲು ಯತ್ನಿಸುತ್ತಾರೆ. ಅವರು ಭಟ್ಟಂಗಿಗಳು, ಎದುರಾಡದ ಕೈಗೊಂಬೆಗಳೇ ಅಗಿರುತ್ತಾರೆ. ಎದುರಾಡಿದರೆ ರಾಜೀನಾಮೆ ಕೊಡಬೇಕಾದೀತು! ಈ ಕಾರಣದಿಂದಲೇ ಸರ್ವಾಧಿಕಾರಿಯ ತಪ್ಪನ್ನು ಯಾರೂ ಬೆಟ್ಟುಮಾಡಲು ಹೋಗುವುದಿಲ್ಲ- ತನ್ನ ತಪ್ಪುಗಳನ್ನು ತಿಳಿದುಕೊಳ್ಳದ ಆತ ದೇಶವನ್ನೇ ವಿನಾಶಕ್ಕೆ ತಳ್ಳಿ ತಾನೂ ನಾಶವಾಗುವ ತನಕ!
ಸರ್ವಾಧಿಕಾರದಲ್ಲಿ ನ್ಯಾಯಾಂಗ ವ್ಯವಸ್ಥೆಯ ಅಧಿಕಾರಗಳನ್ನು ಮೊಟಕುಗೊಳಿಸಲಾಗುತ್ತದೆ. ನ್ಯಾಯಾಧೀಶ ಹುದ್ದೆಗಳಿಗೂ ಕೈಗೊಂಬೆಗಳನ್ನೇ ಹಿಂಬಾಗಿಲಿನಿಂದ ನುಸುಳಿಸುವ ಪ್ರಯತ್ನಗಳು ನಡೆಯುತ್ತವೆ. ತೀರ್ಪುಗಳು ವಿವಾದಾತ್ಮಕವಾಗಿ ಇದ್ದರೂ ಪ್ರಶ್ನಿಸುವಂತಿಲ್ಲ. ತೀರ್ಪುಗಳು ಪ್ರತಿಕೂಲವಾಗಿದ್ದಾಗ ನ್ಯಾಯಾಲಯಗಳನ್ನೇ ಧಿಕ್ಕರಿಸುವ, ಅಷ್ಟೇ ಏಕೆ ಸಂವಿಧಾನಗಳನ್ನೇ, ಧಿಕ್ಕರಿಸುವ ಪ್ರವೃತ್ತಿ ಅಧಿಕಾರಸ್ಥರ ಕೃಪಾಕಟಾಕ್ಷದಿಂದಲೇ ಬೆಳೆಯುತ್ತದೆ.
ಇನ್ನೊಂದು ಪ್ರವೃತ್ತಿ ಎಂದರೆ, ಸೇನೆ ಮತ್ತು ಪೊಲೀಸ್ ವ್ಯವಸ್ಥೆಯಲ್ಲಿ ಹಸ್ತಕ್ಷೇಪ. ಯಾವುದೇ ಸರ್ವಾಧಿಕಾರ ಅವುಗಳನ್ನು ನಿಯಂತ್ರಿಸದೇ ಉಳಿಯುವುದು ಕಷ್ಟ. ಒಂದು ದೇಶಕ್ಕಾಗಿ ಹೋರಾಡಬೇಕಾದ ಸೇನೆಯು ಒಬ್ಬ ವ್ಯಕ್ತಿ ಅಥವಾ ಸರಕಾರಕ್ಕಾಗಿ ಹೋರಾಡುತ್ತಿದೆ ಎಂಬಂತೆ ಬಿಂಬಿಸುವುದು! ಸೈನ್ಯದ ಸಾಧನೆಗಳನ್ನು ತನ್ನ ಸಾಧನೆ ಎಂದು ಕೊಚ್ಚಿಕೊಳ್ಳುವುದು!
ಕಳೆದ ಸಂಚಿಕೆಗಳಲ್ಲಿ ಮತ್ತು ಇಲ್ಲಿ ಕೇವಲ ಪರಿಚಯಾತ್ಮಕವಾಗಿ ವಿವರಿಸಲಾದ ಗುಣಲಕ್ಷಣಗಳನ್ನು ಮುಂದೆ ಒಂದೊಂದಾಗಿ ಸೂಕ್ಷ್ಮವಾಗಿ ಮತ್ತು ಉದಾಹರಣೆ ಸಹಿತ ಪರಿಶೀಲಿಸುವ ಮೊದಲು ಮತ್ತಷ್ಟು ಗುಣ ಲಕ್ಷಣಗಳನ್ನು ಮುಂದಿನ ಸಂಚಿಕೆಯಲ್ಲಿ ನೋಡೋಣ.
ಅದೇ ಹೊತ್ತಿಗೆ ಈ ಗುಣಲಕ್ಷಣಗಳು ನಮ್ಮಲ್ಲಿಯೂ ಕಾಣುತ್ತಿವೆಯೇ ಎಂಬುದನ್ನು ಓದುಗರು ಪರಿಶೀಲಿಸಬೇಕು. ಒಂದುವೇಳೆ ಅದು ಹೌದಾದಲ್ಲಿ ನಾವು ತಕ್ಷಣ ಎಚ್ಚರಗೊಳ್ಳಬೇಕಾದ ಅಗತ್ಯವಿದೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಕ್ಕಳಿಗೆ ಆರ್‌ಎಸ್‌ಎಸ್‌ ತರಬೇತಿ ನೀಡುವುದನ್ನು ಟೀಕಿಸಿ ವಿಡಿಯೋ ಹಂಚಿಕೆ : ಯುವಕನನ್ನು ವಶಕ್ಕೆ ಪಡೆದ ಪೊಲೀಸರು!

ರಾಜಸ್ಥಾನದ ಜುಂಜುನು ಜಿಲ್ಲೆಯ ನವೀನ್ ಚೌಧರಿ ಎಂಬ 25 ವರ್ಷದ ಯುವಕ, ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್‌) ಕುರಿತು ಸಾಮಾಜಿಕ ಜಾಲತಾಣ ಇನ್‌ಸ್ಟಾಗ್ರಾಮ್‌ನಲ್ಲಿ ವಿಡಿಯೋವೊಂದನ್ನು ಹಂಚಿಕೊಂಡಿದ್ದರು. 'ಜುಂಜುನು ಎಕ್ಸ್‌ಪ್ರೆಸ್' ಎಂಬ ಇನ್‌ಸ್ಟಾಗ್ರಾಮ್ ಪೇಜ್‌ನಲ್ಲಿ...

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...