Homeಅಂಕಣಗಳುಸಾಣೆಹಳ್ಳಿ ಶ್ರೀಗಳು ಸರಿಯಾದವರಿಗೆ ಪ್ರಶಸ್ತಿ ಕೊಡಿ ಎಂದರಲ್ಲಾ..

ಸಾಣೆಹಳ್ಳಿ ಶ್ರೀಗಳು ಸರಿಯಾದವರಿಗೆ ಪ್ರಶಸ್ತಿ ಕೊಡಿ ಎಂದರಲ್ಲಾ..

- Advertisement -
- Advertisement -

| ಯಾಹೂ |

ಹಾದರಕ್ಕೆ ಹುಟ್ಟಿದವರು ಯಾರಿಗೂ ಬೇಡವಾಗಿ ಅನಾಥಾಶ್ರಮ ಸೇರುವಂತೆ, ಅಡ್ನಾಡಿ ಕುಮಾರಣ್ಣನ ಕೊಟ್ಟಿಗೆಯಿಂದ ಕುಲಗೇಡಿ ಎಡೂರಪ್ಪನ ದೊಡ್ಡಿ ಸೇರಿದ್ದ ಅನರ್ಹ ಶಾಸಕರು ಈಗ ಎಡೂರಪ್ಪನಿಗೂ ಬೇಡವಾಗಿದ್ದಾರಂತಲ್ಲಾ. ಬಿಜೆಪಿ ಹುಟ್ಟಿದ ಕಾಲದಿಂದಲೂ ಅವುಗಳ ಹುಟ್ಟುಗುಣವೇನೆಂದರೆ, ನಂಬಿಸಿ ಮೋಸ ಮಾಡುವುದು. ನಿಮ್ಮ ಆಸ್ತಿ ನೋಡಿ ಹತ್ತಿರ ಬರುತ್ತವೆ. ಅದು ಖಾಲಿಯಾಗುತ್ತಿದ್ದಂತೆ ಜಾಗ ಖಾಲಿ ಮಾಡುತ್ತವೆ. ನಿಮ್ಮ ಖ್ಯಾತಿಯನ್ನು ನೋಡಿ ಹತ್ತಿರ ಬರುತ್ತವೆ. ಅಪಖ್ಯಾತಿ ಅಂಟಿಸಿ ಮಾಯವಾಗುತ್ತವೆ. ನಿಮ್ಮ ತುಂಬಿದ ಜೇಬನ್ನು ಗ್ರಹಿಸಿ ಜೊತೆಯಾಗುತ್ತವೆ. ಖಾಲಿ ಜೇಬಾದ ಕೂಡಲೇ ಮಾತು ಬಿಡುತ್ತವೆ. ಹಾದರ ಮಾಡುತ್ತವೆ ಪಾತಿವ್ರತ್ಯ ಬೋಧಿಸುತ್ತವೆ. ಭ್ರಷ್ಟ ಕೆಲಸ ಮಾಡುತ್ತಲೇ ಪ್ರಾಮಾಣಿಕತೆ ಬೋಧಿಸುತ್ತವೆ. ಪಾರ್ಟಿ ನಿಷ್ಠೆ ಬೋಧಿಸುತ್ತವೆ. ಬೇರೆ ಪಾರ್ಟಿಯಿಂದ ಬಾಡಿಗಳನ್ನ ಯಾಮಾರಿಸುತ್ತವೆ. ಈಗ ಸಂದಿಗ್ಧಕ್ಕೆ ಸಿಕ್ಕ ಇಂತಹ ಬಾಡಿಗಳು ಎಡೂರಪ್ಪನ ಮಾತಿಂದ ಯಕ್ಕ ಎದ್ದು ಹೋಗಲಿವೆಯಂತಲ್ಲಾ. ಎಡೂರಪ್ಪನ ಅಂತಹ ಮಾತೇನು ಎಂದರೆ, ಅನರ್ಹ ಶಾಸಕರಿಗೂ ನಮಗೂ ಯಾವ ಸಂಬಂಧವೂ ಇಲ್ಲ. ಅವರು ಎಲ್ಲಿಗಾದರೂ ಹೋಗಲಿ. ಯಾವ ಪಕ್ಷವನ್ನಾದರೂ ಸೇರಲಿ ಎಂಬುದಾಗಿದೆಯಲ್ಲ. ನಂಬಿಕೆದ್ರೋಹವೆಂದರೆ ಇದೇ ಅಲ್ಲವೆ, ಥೂತ್ತೇರಿ.

ಬಿಜೆಪಿಗಳ ಆಮಿಷ ಮತ್ತು ಕುತಂತ್ರಗಳಿಗೆ ಬಗ್ಗದ ಡಿ.ಕೆ. ಶಿವಕುಮಾರ್ ಇಡಿ ಟ್ರೀಟ್‌ಮೆಂಟುಗಳಿಗೆ ಒಳಗಾಗಿ ಜೈಲುವಾಸ ಅನುಭವಿಸಿ ಬಂದಾಗ ವಿಮಾನ ನಿಲ್ದಾಣದಿಂದ ಹೊರಬರುತ್ತಿದ್ದಂತೆ ಸಿಕ್ಕ ಭವ್ಯ ಸ್ವಾಗತ ನೋಡಿದ ಬಿಜೆಪಿಗಳು ಅಪರಾಧ ಮಾಡಿಬಂದವರನ್ನು ಹೀಗೆ ಸ್ವಾಗತಿಸುವುದೆ ಎಂದು ಉದ್ಘಾರ ತೆಗೆದವಲ್ಲಾ. ತಮ್ಮನ್ನು ತಾವು ಎಂದೂ ಬಗ್ಗಿ ನೋಡಿಕೊಳ್ಳದ ಚೆಡ್ಡಿಗಳು ತಮ್ಮವರು ಮಾಡಿದ ಎಲ್ಲ ಅಪರಾಧಗಳ ಸಮಯದಲ್ಲಿ ಪಟಾಕಿ ಹೊಡೆದು ಸಂಭ್ರಮಿಸಿವೆ. ಕೊಲೆಗಾರರು ಬಿಡುಗಡೆಯಾದಾಗ, ವಿಜಯೋತ್ಸವ ಆಚರಿಸಿವೆ. ಗಾಂಧಿ ಕೊಂದವನಿಗೆ ಗುಡಿ ಕಟ್ಟಲು ಹೊರಟಿವೆ. ಇದೆಲ್ಲಕ್ಕಿಂತಲೂ ಮುಖ್ಯವಾಗಿ ಜೈಲಿಗೆ ಹೋಗಿ ಬಂದ ಎಡೂರಪ್ಪನನ್ನು ಕಂಡ ಕೂಡಲೇ ಲಾಗಾ ಹೊಡೆದಿದ್ದವು. ಆಗ ಮನೆಗೆ ಬಂದ ಎಡೂರಪ್ಪನನ್ನ ನೋಡಿದ ಅವರ ಮೊಮ್ಮಗಳು ’ತಾತ ಜೈಲಿಂದ ಬಂತು ತಾತ ಜೈಲಿಂದ ಬಂತು’ ಎಂದು ಕೂಗಿಕೊಂಡಿತ್ತು. ಸಂಬಂಧಿಕರು ಸುಮ್ಮನಿರಿಸಲು ಯತ್ನಿಸಿದರೂ ಮಗು ಮುಗಿಲು ಮುಟ್ಟುವಂತೆ ಕೂಗುತ್ತ ಸಂಭ್ರಮಿಸಿತಂತಲ್ಲಾ ಥೂತ್ತೇರಿ.

ರಾಜ್ಯೋತ್ಸವದಂದು ಕೊಡಮಾಡುವ ಪ್ರಶಸ್ತಿಗಳನ್ನು ಫಲಾನುಭವಿಗಳು ಪಡೆದಾಗಿದೆ. ಇನ್ನೇನಿದ್ದರೂ ಸರಕಾರದ ಚೆಕ್ಕುಗಳು ಕ್ಯಾಷಾಗಬೇಕಷ್ಟೆ. ಇಂತಿರುವಾಗ ಸಾಣೇಹಳ್ಳಿಯ ಪಂಡಿತಾರಾಧ್ಯ ಶ್ರೀಗಳು ಪ್ರಶಸ್ತಿಗಳನ್ನ ಕೊಡುವಾಗ ವ್ಯಕ್ತಿಯ ನೈತಿಕ ಜೀವನ ಅಳೆದುಕೊಡಬೇಕೆಂದು ಹೇಳಿದ್ದಾರಲ್ಲಾ. ಈ ಮಾತಿನ ಜಾಡನ್ನ ಹಿಡಿದು ನೋಡಿದಾಗ, ಸಿದ್ಧರಾಮಯ್ಯನವರ ಸರಕಾರ ನೇಮಿಸಿದ ನಾಗಮೋಹನದಾಸ್ ರಚಿಸಿ ಕೊಟ್ಟ ಗೈಡ್‌ಲೈನಿನ ಗಡಿ ಮೀರಿದಂತೆ ಕಾಣುತ್ತಿದೆಯಲ್ಲಾ. ಇದಕ್ಕೆ ಸಾಕ್ಷಾಧಾರವಾಗಿ, ಆಯ್ಕೆ ಕಮಿಟಿಯಲ್ಲಿದ್ದ ನಿರುಪಮಾ ಎಂಬುವವರು ನಾನು ಹಗಲುರಾತ್ರಿ ಎಡೂರಪ್ಪನ ಮನೆಗೂ ಸಿ.ಟಿ. ರವಿ ಮನೆಗೂ ಓಡಾಡಿ ಐದು ಜನರಿಗೆ ಪ್ರಶಸ್ತಿ ಕೊಡಿಸಿದೆ ಎಂದಿದ್ದಾರಲ್ಲಾ. ನಿಜಕ್ಕೂ ಇದೊಂದು ಧೀರೋದಾತ್ತ ಸಾಹಸ. ಮುಖ್ಯಮಂತ್ರಿ, ಸಂಸ್ಕೃತಿ ಸಚಿವ ಹಾಗೂ ರಾಜ್ಯೋತ್ಸವ ಪ್ರಶಸ್ತಿ ಆಯ್ಕೆ ಕಮಿಟಿ ಮೀರಿ ಐದು ಜನರಿಗೆ ಪ್ರಶಸ್ತಿ ಕೊಡಿಸಿದ ನಿರುಪಮಾ ಖಂಡಿತ ನಿರುಪಯುಕ್ತ ಮಹಿಳೆಯಲ್ಲ. ಮುಂದಿನ ವರ್ಷ ಪ್ರಶಸ್ತಿ ಬೇಕಾದವರು ನಿರುಪಮಾನನ್ನು ಹಿಡಿದು ನಿಯತ್ತಿನಿಂದ ನೋಡಿಕೊಂಡರೆ, ನಿಮಗೂ ಪ್ರಶಸ್ತಿ ಗ್ಯಾರಂಟಿ ಎಂದು ಫಲಾನುಭವಿಗಳು ಹೇಳಿಲ್ಲವಂತಲ್ಲಾ, ಥೂತ್ತೇರಿ.

ತನಗೇನೇ ಇನ್ನೂ ರಾಜ್ಯೋತ್ಸವ ಪ್ರಶಸ್ತಿ ಕೊಟ್ಟಿಲ್ಲ ಎಂದು ಪ್ರತಿಭಟಿಸಿದ ಸತ್ಯನಾರಾಯಣ ಎಂಬ ಆಸಾಮಿ, ಸರಕಾರಕ್ಕೆ ತರಾಟೆ ತೆಗೆದುಕೊಂಡಿದ್ದಲ್ಲದೆ, ಕೋರ್ಟಿಗೂ ಹೋಗಿದ್ದರಲ್ಲಾ. ಆ ಕಾರಣವಾಗಿ ನಾಗಮೋಹನ ದಾಸ್ ಕಮಿಟಿ ನೇಮಕವಾಗಿ ಪ್ರಶಸ್ತಿ ಸಂಖ್ಯೆ ರಾಜ್ಯೋತ್ಸವ ವರ್ಷದ ಸಂಖ್ಯೆಗೆ ಇಳಿದಿದ್ದು ಮತ್ತು ಅರವತ್ತು ವರ್ಷ ತುಂಬಿರಬೇಕೆಂಬ ನಿಯಮ ಬಂದಿದ್ದು. ಇದಿಲ್ಲದಿದ್ದರೆ, ಈ ಬಿಜೆಪಿಗಳು ಪ್ರತಿ ಜಿಲ್ಲೆಯ ಕನಿಷ್ಟ ಹತ್ತು ಚಡ್ಡಿಗಳಿಗೆ ಪ್ರಶಸ್ತಿ ಕೊಟ್ಟು ಗಬ್ಬೆಬ್ಬಿಸುತ್ತಿದ್ದರು. ಕಳೆದ ಬಾರಿ ಪ್ರಶಸ್ತಿ ವಿಜೇತರ ಪಟ್ಟಿ ತರಿಸಿಕೊಂಡ ಡಿ.ಕೆ. ಶಿವಕುಮಾರ್, ಅತ್ಯಂತ ಯೋಗ್ಯರಾದ ಹತ್ತು ಜನರನ್ನು ತೆಗೆದು ಬಿಸಾಡಿ, ತನ್ನ ಕಡೆಯ ಹತ್ತು ಹೆಸರನ್ನ ಸೇರಿಸಿ ಪ್ರಕಟಿಸಿದ್ದರು. ಇದರಲ್ಲಿ ರಸ್ತೆ ಮಾಡಿದವರು, ಡಿಕೆಶಿಗೆ ಪಾಠ ಹೇಳಿದವರು ಇದ್ದರು. ಈಗ ಸಿ.ಟಿ. ರವಿ ಇನ್ನೂ ಮುಂದೆಹೋಗಿ ತನಗೆ ಹೊಟೇಲಿನಲ್ಲಿ ರೂಮು ಕೊಟ್ಟವನಿಗೊಂದು ಪ್ರಶಸ್ತಿ ಕೊಟ್ಟಿದ್ದಾನಂತಲ್ಲ. ಮುಂದಿನ ವರ್ಷ ರವಿ ಹೆಂಡತಿಯನ್ನು ತುಂಬಾ ಸಮಾರಂಭಗಳಿಗೆ ಅತಿಥಿಯಾಗಿ ಕರೆದವನನ್ನು ಕರೆದು ರಾಜ್ಯೋತ್ಸವ ಪ್ರಶಸ್ತಿ ಕೊಡುವುದು ಗ್ಯಾರಂಟಿ ಎಂದು ಚಿಕ್ಕಮಗಳೂರು ಜನ ಚಿಕ್ಕದಾಗಿ ಬಾಯಿ ತೆರೆದು ದೊಡ್ಡದಾಗಿ ನಕ್ಕರಂತಲ್ಲಾ, ಥೂತ್ತೇರಿ.

ಹಾಗೆ ನೋಡಿದರೆ ಸಾಣೆಹಳ್ಳಿ ಶ್ರೀಗಳು ಹೇಳಿದ್ದಕ್ಕೆ ಸಾಕ್ಷಾಧಾರಗಳು ದಾವಣಗೆರೆ ಜಿಲ್ಲೆಯಲ್ಲೇ ಸಿಗುತ್ತದಂತಲ್ಲಾ. ದಾವಣಗೆರೆ ಜಿಲ್ಲೆಯ ಚನ್ನಪ್ಪನವರಿಗೆ ಈ ಬಾರಿಯ ರಾಜ್ಯೋತ್ಸವ ಪ್ರಶಸ್ತಿ ಲಭ್ಯವಾಗಿದೆ. ಸದಾ ಸಮಾಜ ಸೇವೆಗಾಗಿ ದುಡಿಯುವ ಚನ್ನಪ್ಪನವರಿಗೆ ರಾಜ್ಯೋತ್ಸವ ಪ್ರಶಸ್ತಿ ಎಂದೊ ಹುಡುಕಿಕೊಂಡು ಬರಬೇಕಿತ್ತು. ಈ ಚೆನ್ನಪ್ಪನವರ ಸಮಾಜ ಸೇವೆಯಲ್ಲಿ ಪ್ರಶಸ್ತಿಗೆ ಯೋಗ್ಯವಾದ ಸಾಧನೆಯಾವುದೆಂದರೆ, ಯಾರದ್ದೊ ಮನೆಯಲ್ಲಿ ಸಂತಾನಭಾಗ್ಯವಿಲ್ಲ. ಆಗ ಹೋರಿ ಕರುವಿನಂತೆ ಓಡಾಡುತ್ತಿದ್ದ ಚನ್ನಪ್ಪನನ್ನು ಕರೆದ ಅಜ್ಜಿ ’ಚನ್ನಪ್ಪ ನನ್ನ ಮೊಮ್ಮಗಳಿಗೆ ಮಗು ಇಲ್ಲ ಕಣಪ್ಪ. ಅದರ ಹೊಟ್ಟೇಲಿ ಯಂತದಾರ ಹುಳ ನೋಡಿ ಸಾಯಬೇಕು ಅನ್ನಿಸಿದೆ. ಮಾಡಿಕೊಡಪ್ಪ’ ಎಂದಿತಂತೆ. ಕರಗಿಹೋದ ಚನ್ನಪ್ಪ ನಮ್ಮ ಎಸ್ಸೆಲ್ ಭೈರಪ್ಪ ಹೇಳಿದಂತಹ ನಿಯೋಗ ಸಾಧನೆಯಿಂದ ಅಜ್ಜಿ ಮನೆ ವಂಶ ಬೆಳೆಸಿದರಂತೆ. ಇದನ್ನು ನಾವು ಚನ್ನಪ್ಪನವರ ಆತ್ಮಕತೆಯಿಂದ ತೆಗೆದು ದಾಖಲಿಸುತ್ತಿದ್ದೇವೆಯೇ ಹೊರತು, ನಮ್ಮ ಕಿಡಿಗೇಡಿತನದಿಂದಲ್ಲ. ಅಂತೂ ಚಡ್ಡಿಗಳು ಹಂಚುವ ಪ್ರಶಸ್ತಿಗಳು ಚೆಡ್ಡಿ ಸಮಸ್ಯೆಯನ್ನು ಪರಿಗಣಿಸುತ್ತಿವೆಯಲ್ಲಾ, ಥೂತ್ತೇರಿ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...