Homeಅಂಕಣಗಳುಸಾಣೆಹಳ್ಳಿ ಶ್ರೀಗಳು ಸರಿಯಾದವರಿಗೆ ಪ್ರಶಸ್ತಿ ಕೊಡಿ ಎಂದರಲ್ಲಾ..

ಸಾಣೆಹಳ್ಳಿ ಶ್ರೀಗಳು ಸರಿಯಾದವರಿಗೆ ಪ್ರಶಸ್ತಿ ಕೊಡಿ ಎಂದರಲ್ಲಾ..

- Advertisement -
- Advertisement -

| ಯಾಹೂ |

ಹಾದರಕ್ಕೆ ಹುಟ್ಟಿದವರು ಯಾರಿಗೂ ಬೇಡವಾಗಿ ಅನಾಥಾಶ್ರಮ ಸೇರುವಂತೆ, ಅಡ್ನಾಡಿ ಕುಮಾರಣ್ಣನ ಕೊಟ್ಟಿಗೆಯಿಂದ ಕುಲಗೇಡಿ ಎಡೂರಪ್ಪನ ದೊಡ್ಡಿ ಸೇರಿದ್ದ ಅನರ್ಹ ಶಾಸಕರು ಈಗ ಎಡೂರಪ್ಪನಿಗೂ ಬೇಡವಾಗಿದ್ದಾರಂತಲ್ಲಾ. ಬಿಜೆಪಿ ಹುಟ್ಟಿದ ಕಾಲದಿಂದಲೂ ಅವುಗಳ ಹುಟ್ಟುಗುಣವೇನೆಂದರೆ, ನಂಬಿಸಿ ಮೋಸ ಮಾಡುವುದು. ನಿಮ್ಮ ಆಸ್ತಿ ನೋಡಿ ಹತ್ತಿರ ಬರುತ್ತವೆ. ಅದು ಖಾಲಿಯಾಗುತ್ತಿದ್ದಂತೆ ಜಾಗ ಖಾಲಿ ಮಾಡುತ್ತವೆ. ನಿಮ್ಮ ಖ್ಯಾತಿಯನ್ನು ನೋಡಿ ಹತ್ತಿರ ಬರುತ್ತವೆ. ಅಪಖ್ಯಾತಿ ಅಂಟಿಸಿ ಮಾಯವಾಗುತ್ತವೆ. ನಿಮ್ಮ ತುಂಬಿದ ಜೇಬನ್ನು ಗ್ರಹಿಸಿ ಜೊತೆಯಾಗುತ್ತವೆ. ಖಾಲಿ ಜೇಬಾದ ಕೂಡಲೇ ಮಾತು ಬಿಡುತ್ತವೆ. ಹಾದರ ಮಾಡುತ್ತವೆ ಪಾತಿವ್ರತ್ಯ ಬೋಧಿಸುತ್ತವೆ. ಭ್ರಷ್ಟ ಕೆಲಸ ಮಾಡುತ್ತಲೇ ಪ್ರಾಮಾಣಿಕತೆ ಬೋಧಿಸುತ್ತವೆ. ಪಾರ್ಟಿ ನಿಷ್ಠೆ ಬೋಧಿಸುತ್ತವೆ. ಬೇರೆ ಪಾರ್ಟಿಯಿಂದ ಬಾಡಿಗಳನ್ನ ಯಾಮಾರಿಸುತ್ತವೆ. ಈಗ ಸಂದಿಗ್ಧಕ್ಕೆ ಸಿಕ್ಕ ಇಂತಹ ಬಾಡಿಗಳು ಎಡೂರಪ್ಪನ ಮಾತಿಂದ ಯಕ್ಕ ಎದ್ದು ಹೋಗಲಿವೆಯಂತಲ್ಲಾ. ಎಡೂರಪ್ಪನ ಅಂತಹ ಮಾತೇನು ಎಂದರೆ, ಅನರ್ಹ ಶಾಸಕರಿಗೂ ನಮಗೂ ಯಾವ ಸಂಬಂಧವೂ ಇಲ್ಲ. ಅವರು ಎಲ್ಲಿಗಾದರೂ ಹೋಗಲಿ. ಯಾವ ಪಕ್ಷವನ್ನಾದರೂ ಸೇರಲಿ ಎಂಬುದಾಗಿದೆಯಲ್ಲ. ನಂಬಿಕೆದ್ರೋಹವೆಂದರೆ ಇದೇ ಅಲ್ಲವೆ, ಥೂತ್ತೇರಿ.

ಬಿಜೆಪಿಗಳ ಆಮಿಷ ಮತ್ತು ಕುತಂತ್ರಗಳಿಗೆ ಬಗ್ಗದ ಡಿ.ಕೆ. ಶಿವಕುಮಾರ್ ಇಡಿ ಟ್ರೀಟ್‌ಮೆಂಟುಗಳಿಗೆ ಒಳಗಾಗಿ ಜೈಲುವಾಸ ಅನುಭವಿಸಿ ಬಂದಾಗ ವಿಮಾನ ನಿಲ್ದಾಣದಿಂದ ಹೊರಬರುತ್ತಿದ್ದಂತೆ ಸಿಕ್ಕ ಭವ್ಯ ಸ್ವಾಗತ ನೋಡಿದ ಬಿಜೆಪಿಗಳು ಅಪರಾಧ ಮಾಡಿಬಂದವರನ್ನು ಹೀಗೆ ಸ್ವಾಗತಿಸುವುದೆ ಎಂದು ಉದ್ಘಾರ ತೆಗೆದವಲ್ಲಾ. ತಮ್ಮನ್ನು ತಾವು ಎಂದೂ ಬಗ್ಗಿ ನೋಡಿಕೊಳ್ಳದ ಚೆಡ್ಡಿಗಳು ತಮ್ಮವರು ಮಾಡಿದ ಎಲ್ಲ ಅಪರಾಧಗಳ ಸಮಯದಲ್ಲಿ ಪಟಾಕಿ ಹೊಡೆದು ಸಂಭ್ರಮಿಸಿವೆ. ಕೊಲೆಗಾರರು ಬಿಡುಗಡೆಯಾದಾಗ, ವಿಜಯೋತ್ಸವ ಆಚರಿಸಿವೆ. ಗಾಂಧಿ ಕೊಂದವನಿಗೆ ಗುಡಿ ಕಟ್ಟಲು ಹೊರಟಿವೆ. ಇದೆಲ್ಲಕ್ಕಿಂತಲೂ ಮುಖ್ಯವಾಗಿ ಜೈಲಿಗೆ ಹೋಗಿ ಬಂದ ಎಡೂರಪ್ಪನನ್ನು ಕಂಡ ಕೂಡಲೇ ಲಾಗಾ ಹೊಡೆದಿದ್ದವು. ಆಗ ಮನೆಗೆ ಬಂದ ಎಡೂರಪ್ಪನನ್ನ ನೋಡಿದ ಅವರ ಮೊಮ್ಮಗಳು ’ತಾತ ಜೈಲಿಂದ ಬಂತು ತಾತ ಜೈಲಿಂದ ಬಂತು’ ಎಂದು ಕೂಗಿಕೊಂಡಿತ್ತು. ಸಂಬಂಧಿಕರು ಸುಮ್ಮನಿರಿಸಲು ಯತ್ನಿಸಿದರೂ ಮಗು ಮುಗಿಲು ಮುಟ್ಟುವಂತೆ ಕೂಗುತ್ತ ಸಂಭ್ರಮಿಸಿತಂತಲ್ಲಾ ಥೂತ್ತೇರಿ.

ರಾಜ್ಯೋತ್ಸವದಂದು ಕೊಡಮಾಡುವ ಪ್ರಶಸ್ತಿಗಳನ್ನು ಫಲಾನುಭವಿಗಳು ಪಡೆದಾಗಿದೆ. ಇನ್ನೇನಿದ್ದರೂ ಸರಕಾರದ ಚೆಕ್ಕುಗಳು ಕ್ಯಾಷಾಗಬೇಕಷ್ಟೆ. ಇಂತಿರುವಾಗ ಸಾಣೇಹಳ್ಳಿಯ ಪಂಡಿತಾರಾಧ್ಯ ಶ್ರೀಗಳು ಪ್ರಶಸ್ತಿಗಳನ್ನ ಕೊಡುವಾಗ ವ್ಯಕ್ತಿಯ ನೈತಿಕ ಜೀವನ ಅಳೆದುಕೊಡಬೇಕೆಂದು ಹೇಳಿದ್ದಾರಲ್ಲಾ. ಈ ಮಾತಿನ ಜಾಡನ್ನ ಹಿಡಿದು ನೋಡಿದಾಗ, ಸಿದ್ಧರಾಮಯ್ಯನವರ ಸರಕಾರ ನೇಮಿಸಿದ ನಾಗಮೋಹನದಾಸ್ ರಚಿಸಿ ಕೊಟ್ಟ ಗೈಡ್‌ಲೈನಿನ ಗಡಿ ಮೀರಿದಂತೆ ಕಾಣುತ್ತಿದೆಯಲ್ಲಾ. ಇದಕ್ಕೆ ಸಾಕ್ಷಾಧಾರವಾಗಿ, ಆಯ್ಕೆ ಕಮಿಟಿಯಲ್ಲಿದ್ದ ನಿರುಪಮಾ ಎಂಬುವವರು ನಾನು ಹಗಲುರಾತ್ರಿ ಎಡೂರಪ್ಪನ ಮನೆಗೂ ಸಿ.ಟಿ. ರವಿ ಮನೆಗೂ ಓಡಾಡಿ ಐದು ಜನರಿಗೆ ಪ್ರಶಸ್ತಿ ಕೊಡಿಸಿದೆ ಎಂದಿದ್ದಾರಲ್ಲಾ. ನಿಜಕ್ಕೂ ಇದೊಂದು ಧೀರೋದಾತ್ತ ಸಾಹಸ. ಮುಖ್ಯಮಂತ್ರಿ, ಸಂಸ್ಕೃತಿ ಸಚಿವ ಹಾಗೂ ರಾಜ್ಯೋತ್ಸವ ಪ್ರಶಸ್ತಿ ಆಯ್ಕೆ ಕಮಿಟಿ ಮೀರಿ ಐದು ಜನರಿಗೆ ಪ್ರಶಸ್ತಿ ಕೊಡಿಸಿದ ನಿರುಪಮಾ ಖಂಡಿತ ನಿರುಪಯುಕ್ತ ಮಹಿಳೆಯಲ್ಲ. ಮುಂದಿನ ವರ್ಷ ಪ್ರಶಸ್ತಿ ಬೇಕಾದವರು ನಿರುಪಮಾನನ್ನು ಹಿಡಿದು ನಿಯತ್ತಿನಿಂದ ನೋಡಿಕೊಂಡರೆ, ನಿಮಗೂ ಪ್ರಶಸ್ತಿ ಗ್ಯಾರಂಟಿ ಎಂದು ಫಲಾನುಭವಿಗಳು ಹೇಳಿಲ್ಲವಂತಲ್ಲಾ, ಥೂತ್ತೇರಿ.

ತನಗೇನೇ ಇನ್ನೂ ರಾಜ್ಯೋತ್ಸವ ಪ್ರಶಸ್ತಿ ಕೊಟ್ಟಿಲ್ಲ ಎಂದು ಪ್ರತಿಭಟಿಸಿದ ಸತ್ಯನಾರಾಯಣ ಎಂಬ ಆಸಾಮಿ, ಸರಕಾರಕ್ಕೆ ತರಾಟೆ ತೆಗೆದುಕೊಂಡಿದ್ದಲ್ಲದೆ, ಕೋರ್ಟಿಗೂ ಹೋಗಿದ್ದರಲ್ಲಾ. ಆ ಕಾರಣವಾಗಿ ನಾಗಮೋಹನ ದಾಸ್ ಕಮಿಟಿ ನೇಮಕವಾಗಿ ಪ್ರಶಸ್ತಿ ಸಂಖ್ಯೆ ರಾಜ್ಯೋತ್ಸವ ವರ್ಷದ ಸಂಖ್ಯೆಗೆ ಇಳಿದಿದ್ದು ಮತ್ತು ಅರವತ್ತು ವರ್ಷ ತುಂಬಿರಬೇಕೆಂಬ ನಿಯಮ ಬಂದಿದ್ದು. ಇದಿಲ್ಲದಿದ್ದರೆ, ಈ ಬಿಜೆಪಿಗಳು ಪ್ರತಿ ಜಿಲ್ಲೆಯ ಕನಿಷ್ಟ ಹತ್ತು ಚಡ್ಡಿಗಳಿಗೆ ಪ್ರಶಸ್ತಿ ಕೊಟ್ಟು ಗಬ್ಬೆಬ್ಬಿಸುತ್ತಿದ್ದರು. ಕಳೆದ ಬಾರಿ ಪ್ರಶಸ್ತಿ ವಿಜೇತರ ಪಟ್ಟಿ ತರಿಸಿಕೊಂಡ ಡಿ.ಕೆ. ಶಿವಕುಮಾರ್, ಅತ್ಯಂತ ಯೋಗ್ಯರಾದ ಹತ್ತು ಜನರನ್ನು ತೆಗೆದು ಬಿಸಾಡಿ, ತನ್ನ ಕಡೆಯ ಹತ್ತು ಹೆಸರನ್ನ ಸೇರಿಸಿ ಪ್ರಕಟಿಸಿದ್ದರು. ಇದರಲ್ಲಿ ರಸ್ತೆ ಮಾಡಿದವರು, ಡಿಕೆಶಿಗೆ ಪಾಠ ಹೇಳಿದವರು ಇದ್ದರು. ಈಗ ಸಿ.ಟಿ. ರವಿ ಇನ್ನೂ ಮುಂದೆಹೋಗಿ ತನಗೆ ಹೊಟೇಲಿನಲ್ಲಿ ರೂಮು ಕೊಟ್ಟವನಿಗೊಂದು ಪ್ರಶಸ್ತಿ ಕೊಟ್ಟಿದ್ದಾನಂತಲ್ಲ. ಮುಂದಿನ ವರ್ಷ ರವಿ ಹೆಂಡತಿಯನ್ನು ತುಂಬಾ ಸಮಾರಂಭಗಳಿಗೆ ಅತಿಥಿಯಾಗಿ ಕರೆದವನನ್ನು ಕರೆದು ರಾಜ್ಯೋತ್ಸವ ಪ್ರಶಸ್ತಿ ಕೊಡುವುದು ಗ್ಯಾರಂಟಿ ಎಂದು ಚಿಕ್ಕಮಗಳೂರು ಜನ ಚಿಕ್ಕದಾಗಿ ಬಾಯಿ ತೆರೆದು ದೊಡ್ಡದಾಗಿ ನಕ್ಕರಂತಲ್ಲಾ, ಥೂತ್ತೇರಿ.

ಹಾಗೆ ನೋಡಿದರೆ ಸಾಣೆಹಳ್ಳಿ ಶ್ರೀಗಳು ಹೇಳಿದ್ದಕ್ಕೆ ಸಾಕ್ಷಾಧಾರಗಳು ದಾವಣಗೆರೆ ಜಿಲ್ಲೆಯಲ್ಲೇ ಸಿಗುತ್ತದಂತಲ್ಲಾ. ದಾವಣಗೆರೆ ಜಿಲ್ಲೆಯ ಚನ್ನಪ್ಪನವರಿಗೆ ಈ ಬಾರಿಯ ರಾಜ್ಯೋತ್ಸವ ಪ್ರಶಸ್ತಿ ಲಭ್ಯವಾಗಿದೆ. ಸದಾ ಸಮಾಜ ಸೇವೆಗಾಗಿ ದುಡಿಯುವ ಚನ್ನಪ್ಪನವರಿಗೆ ರಾಜ್ಯೋತ್ಸವ ಪ್ರಶಸ್ತಿ ಎಂದೊ ಹುಡುಕಿಕೊಂಡು ಬರಬೇಕಿತ್ತು. ಈ ಚೆನ್ನಪ್ಪನವರ ಸಮಾಜ ಸೇವೆಯಲ್ಲಿ ಪ್ರಶಸ್ತಿಗೆ ಯೋಗ್ಯವಾದ ಸಾಧನೆಯಾವುದೆಂದರೆ, ಯಾರದ್ದೊ ಮನೆಯಲ್ಲಿ ಸಂತಾನಭಾಗ್ಯವಿಲ್ಲ. ಆಗ ಹೋರಿ ಕರುವಿನಂತೆ ಓಡಾಡುತ್ತಿದ್ದ ಚನ್ನಪ್ಪನನ್ನು ಕರೆದ ಅಜ್ಜಿ ’ಚನ್ನಪ್ಪ ನನ್ನ ಮೊಮ್ಮಗಳಿಗೆ ಮಗು ಇಲ್ಲ ಕಣಪ್ಪ. ಅದರ ಹೊಟ್ಟೇಲಿ ಯಂತದಾರ ಹುಳ ನೋಡಿ ಸಾಯಬೇಕು ಅನ್ನಿಸಿದೆ. ಮಾಡಿಕೊಡಪ್ಪ’ ಎಂದಿತಂತೆ. ಕರಗಿಹೋದ ಚನ್ನಪ್ಪ ನಮ್ಮ ಎಸ್ಸೆಲ್ ಭೈರಪ್ಪ ಹೇಳಿದಂತಹ ನಿಯೋಗ ಸಾಧನೆಯಿಂದ ಅಜ್ಜಿ ಮನೆ ವಂಶ ಬೆಳೆಸಿದರಂತೆ. ಇದನ್ನು ನಾವು ಚನ್ನಪ್ಪನವರ ಆತ್ಮಕತೆಯಿಂದ ತೆಗೆದು ದಾಖಲಿಸುತ್ತಿದ್ದೇವೆಯೇ ಹೊರತು, ನಮ್ಮ ಕಿಡಿಗೇಡಿತನದಿಂದಲ್ಲ. ಅಂತೂ ಚಡ್ಡಿಗಳು ಹಂಚುವ ಪ್ರಶಸ್ತಿಗಳು ಚೆಡ್ಡಿ ಸಮಸ್ಯೆಯನ್ನು ಪರಿಗಣಿಸುತ್ತಿವೆಯಲ್ಲಾ, ಥೂತ್ತೇರಿ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಪ್‌ಸ್ಟೀನ್‌ ಫೈಲ್ಸ್ ಜನಾಕ್ರೋಶ : ಎಐ ಶೃಂಗಸಭೆಯಿಂದ ದೂರ ಉಳಿದ ಬಿಲ್‌ ಗೇಟ್ಸ್‌

ಎಪ್‌ಸ್ಟೀನ್‌ ಫೈಲ್ಸ್‌ ಮುಂದಿಟ್ಟುಕೊಂಡು ಜನರು ತೀವ್ರ ವಿರೋಧ ವ್ಯಕ್ತಪಡಿಸಿದ ಬೆನ್ನಲ್ಲೇ, 'ಇಂಡಿಯಾ ಎಐ ಇಂಪ್ಯಾಕ್ಟ್ ಶೃಂಗಸಭೆ'ಯಿಂದ ಮೈಕ್ರೋಸಾಫ್ಟ್‌ ಸಹ-ಸಂಸ್ಥಾಪಕ ಬಿಲ್ ಗೇಟ್ಸ್ ದೂರ ಉಳಿದಿದ್ದಾರೆ. ಈ ಕುರಿತು ಗೇಟ್ಸ್ ಫೌಂಡೇಶನ್ ಇಂಡಿಯಾ ಗುರುವಾರ...

ಬೆಂಗಳೂರಿನಲ್ಲಿ ರಂಜಾನ್ ಆಹಾರ ಮೇಳ ನಡೆಸದಂತೆ ಹೋಟೆಲ್‌ಗಳಿಗೆ ಎಚ್ಚರಿಕೆ

ಬೆಂಗಳೂರು: ಫ್ರೇಸರ್ ಟೌನ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿನ ಎಂಎಂ ರಸ್ತೆಯಲ್ಲಿ ರಂಜಾನ್ ಆಹಾರ ಮೇಳ ನಡೆಸದಂತೆ ಹೋಟೆಲ್ ಮಾಲೀಕರಿಗೆ ಸ್ಥಳೀಯ ನಿವಾಸಿಗಳು ಎಚ್ಚರಿಕೆ ನೀಡಿದ್ದಾರೆ. ರಂಜಾನ್ ಆಹಾರ ಮೇಳದಿಂದ ಸಂಚಾರ ದಟ್ಟಣೆ. ಅವ್ಯವಸ್ಥೆಯ ಜೊತೆಗೆ...

‘ದಿ ಕೇರಳ ಸ್ಟೋರಿ-2’ ಚಲನಚಿತ್ರ ಜಾತ್ಯತೀತತೆಗೆ ಬೆದರಿಕೆ: ಮುಖ್ಯಮಂತ್ರಿ ಪಿಣರಾಯಿ ವಿಜಯನ್

'ದಿ ಕೇರಳ ಸ್ಟೋರಿ' ಚಿತ್ರದ ಎರಡನೇ ಭಾಗ ಬಿಡುಗಡೆಯಾಗುತ್ತಿರುವ ಬಗ್ಗೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಕಳವಳ ವ್ಯಕ್ತಪಡಿಸಿದ್ದು, ಇದರ ಮೊದಲ ಭಾಗವು "ರಾಜ್ಯದ ವಿರುದ್ಧ ದ್ವೇಷವನ್ನು ಹರಡುವ ಮತ್ತು ನಮ್ಮ ಜಾತ್ಯತೀತ...

ಬಿಜೆಪಿ ಸೇರಲು ಸಿದ್ದರಾದ ಭೂಪೇನ್ ಬೋರಾ : ಪ್ರಿಯಾಂಕಾ, ಡಿಕೆಶಿ ಸೇರಿದಂತೆ ‘ಕೈ ಟ್ರಬಲ್ ಶೂಟರ್‌ಗಳು’ ಅಸ್ಸಾಂಗೆ ದೌಡು

ರಾಜ್ಯ ಕಾಂಗ್ರೆಸ್‌ ಘಟಕದ ಮಾಜಿ ಅಧ್ಯಕ್ಷ ಭೂಪೇನ್ ಬೋರಾ ಬಿಜೆಪಿಗೆ ಹಾರಲು ಸಿದ್ದರಾಗಿರುವ ನಡುವೆ ಪ್ರಿಯಾಂಕಾ ಗಾಂಧಿ, ಡಿ.ಕೆ ಶಿವಕುಮಾರ್ ಸೇರಿದಂತೆ ಕಾಂಗ್ರೆಸ್‌ನ ಟ್ರಬಲ್ ಶೂಟರ್‌ಗಳ ತಂಡ ಅಸ್ಸಾಂಗೆ ದೌಡಾಯಿಸಿದೆ. ಅಸ್ಸಾಂ ಕಾಂಗ್ರೆಸ್ ಅಭ್ಯರ್ಥಿಗಳ...

ಸರ್ಕಾರದ ಭರವಸೆಗೆ ಮಣಿಯದ ಸಾರಿಗೆ ಸಿಬ್ಬಂದಿ : ಮುಷ್ಕರ ಮುಂದುವರಿಸಲು ನಿರ್ಧಾರ

ಹಿಂಬಾಕಿ ಪಾವತಿ, ವೇತನ ಪರಿಷ್ಕರಣೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ರಾಜ್ಯದ ನಾಲ್ಕು ಸಾರಿಗೆ ನಿಗಮಗಳಾದ ಕೆಎಸ್‌ಆರ್‌ಟಿಸಿ, ಕೆಕೆಆರ್‌ಟಿಸಿ, ಎನ್‌ಡಬ್ಲ್ಯುಕೆಆರ್‌ಟಿಸಿ ಹಾಗೂ ಬಿಎಂಟಿಸಿಯ ನೌಕರರು ಇಂದು (ಫೆ.19) ಮುಷ್ಕರಕ್ಕೆ ಕರೆ ಕೊಟ್ಟಿದ್ದಾರೆ. ನೌಕರರ ಪ್ರತಿಭಟನೆ...

ಬೆಂಗಳೂರಿನ ಅಪಾರ್ಟ್‌ಮೆಂಟ್‌ನಲ್ಲಿ ಪತ್ನಿಯ ಕತ್ತು ಹಿಸುಕಿ ಕೊಂದ ನಿವೃತ್ತ ಇಸ್ರೋ ಉದ್ಯೋಗಿ ಬಂಧನ

ಬೆಂಗಳೂರು: ಆಘಾತಕಾರಿ ಘಟನೆಯೊಂದರಲ್ಲಿ, 72 ವರ್ಷದ ನಿವೃತ್ತ ಇಸ್ರೋ ಉದ್ಯೋಗಿಯೊಬ್ಬರು ವೈಟ್‌ಫೀಲ್ಡ್ ವಿಭಾಗದ ಆವಲಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ತಮ್ಮ ಅಪಾರ್ಟ್‌ಮೆಂಟ್‌ನಲ್ಲಿ ಬುಧವಾರ ಪತ್ನಿಯನ್ನು ಕತ್ತು ಹಿಸುಕಿ ಕೊಂದಿರುವುದಾಗಿ ವರದಿಯಾಗಿದೆ.  ಬೊಮ್ಮನಹಳ್ಳಿಯ ಅಪಾರ್ಟ್‌ಮೆಂಟ್‌ನಲ್ಲಿ ಬೆಳಿಗ್ಗೆ...

ಮಧ್ಯಪ್ರದೇಶದಲ್ಲಿ ಶಾಸಕ ರಾಜಾ ಸಿಂಗ್‌ನಿಂದ ದ್ವೇಷ ಭಾಷಣ; ಪ್ರಚೋದನಕಾರಿ ‘ಶಿರಚ್ಛೇದನ’ ಹೇಳಿಕೆಗೆ ವಿರೋಧ

ತಮ್ಮ ಪ್ರಚೋದನಕಾರಿ ಹೇಳಿಕೆಗಳಿಂದಲೇ ಕುಖ್ಯಾತರಾಗಿರುವ ಹೈದರಾಬಾದ್‌ನ ಗೋಶಮಹಲ್ ಶಾಸಕ ಟಿ ರಾಜಾ ಸಿಂಗ್ ಸಾರ್ವಜನಿಕ ರ‍್ಯಾಲಿಯಲ್ಲಿ ಮತ್ತೊಮ್ಮೆ ಪ್ರಚೋದನಕಾರಿ ಹೇಳಿಕೆಗಳನ್ನು ನೀಡಿದ್ದಾರೆ. ಮಧ್ಯಪ್ರದೇಶದಲ್ಲಿ ಅವರು ಆಡಿದ ಮಾತುಗಳು ವಿವಾದಕ್ಕೆ ಕಾರಣವಾಗಿದೆ. "ಪ್ರತಿಯೊಬ್ಬ ಬಜರಂಗಿಗಳು...

ಪಂಜಾಬ್ ವಿಶ್ವವಿದ್ಯಾಲಯದಲ್ಲಿ ಜಾತಿ ಆಧಾರಿತ ತಾರತಮ್ಯ ಆರೋಪ; ‘ಬಡ್ತಿ ವಿಳಂಬವಾಗಿದೆ..’; ಎಂದ ದಲಿತ ಪ್ರಾಧ್ಯಾಪಕ

ಪಂಜಾಬ್ ವಿಶ್ವವಿದ್ಯಾಲಯದ ದಲಿತ ಸಹಾಯಕ ಪ್ರಾಧ್ಯಾಪಕ ಹರ್‌ಪ್ರೀತ್ ಸಿಂಗ್ ಅವರು ವಿಶ್ವವಿದ್ಯಾಲಯದಲ್ಲಿ ಜಾತಿ ಆಧಾರಿತ ತಾರತಮ್ಯ ಇದೆ ಎಂದು ಸಾರ್ವಜನಿಕವಾಗಿ ಆರೋಪಿಸಿದ್ದಾರೆ. ತನ್ನ ಜಾತಿಯ ಕಾರಣದಿಂದಾಗಿ ಉದ್ದೇಶಪೂರ್ವಕವಾಗಿ ಬಡ್ತಿ ವಿಳಂಬ ಮಾಡಲಾಗಿದೆ...

ಮಹಾರಾಷ್ಟ್ರ: ತಾಯಿ, ಸಹೋದರನ ಕಣ್ಣಿಗೆ ಮೆಣಸಿನ ಪುಡಿ ಎರೆಚಿ ಮದುವೆ ಸಿದ್ಧತೆಯಲ್ಲಿದ್ದ 21 ವರ್ಷದ ಯುವತಿಯ ಅಪಹರಣ

ಮುಂಬೈ: ಆಘಾತಕಾರಿ ಘಟನೆಯೊಂದರಲ್ಲಿ, ಮಹಾರಾಷ್ಟ್ರದ ಪುಣೆ ಜಿಲ್ಲೆಯ ಇಂದಾಪುರ ತಹಸಿಲ್‌ನ ಭಿಗ್ವಾನ್‌ನಲ್ಲಿ 21 ವರ್ಷದ ಯುವತಿಯನ್ನು ಆಕೆಯ ತಾಯಿ ಮತ್ತು ಸಹೋದರನ ಮುಂದೆಯೇ ಇಬ್ಬರು ವ್ಯಕ್ತಿಗಳು ಅಪಹರಿಸಿದ್ದಾರೆ ಎಂದು ಆರೋಪಿಸಲಾಗಿದೆ.ಮದುವೆ ಸಿದ್ಧತೆಯಲ್ಲಿದ್ದ ಯುವತಿ...

KERALA SIR | ಬಿಜೆಪಿ ಮುಖಂಡನ ದೂರು: ಪೌರತ್ವ ಸಾಬೀತುಪಡಿಸುವಂತೆ ಮುಸ್ಲಿಂ ವ್ಯಕ್ತಿಗೆ ನೋಟಿಸ್!

ಬಿಜೆಪಿ ಕಾಸರಗೋಡು ಜಿಲ್ಲಾ ಕಾರ್ಯದರ್ಶಿ ಲೋಕೇಶ್ ನೋಂಡಾ ಎಂಬಾತನ ದೂರಿನ ಮೇರೆಗೆ ಹಿರಿಯ ವಯಸ್ಸಿನ ಮುಸ್ಲಿಂ ವ್ಯಕ್ತಿಯೊಬ್ಬರಿಗೆ ಭಾರತೀಯ ಪೌರತ್ವ ಸಾಬೀತುಪಡಿಸುವಂತೆ ಚುನಾವಣಾ ನೋಂದಣಿ ಅಧಿಕಾರಿ (ಇಆರ್‌ಒ) ನೋಟಿಸ್ ಜಾರಿ ಮಾಡಿದ್ದು, ಆ...